ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಈ ಬಗ್ಗೆ ಸಾಕಷ್ಟು ಮಂದಿ ಪ್ರತಿಕ್ರಿಯಿಸಿದ್ದು ಮತ್ತಷ್ಟು ಮಂದಿ ಏನು ಮಾತನಾಡಿದ ಸೈಲೆಂಟ್ ಆಗಿದ್ದಾರೆ. ಇದೀಗ ಘಟನೆಯ ಕುರಿತು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಪ್ರತಿಕ್ರಿಯಿಸಿದ್ದು, ಮಗು ತಪ್ಪು ಮಾಡಿದ್ರೆ ತಂದೆ ಎಷ್ಟು ನೋವು ತಿಂತಾನೋ, ನಾನು ಅಷ್ಟೇ ನೋವು ತಿಂತಿದ್ದೀನಿ. ಆ ಮಗು ಕೂಡ ಅಷ್ಟೇ ನೋವು ಅನುಭವಿಸುತ್ತಿರುತ್ತದೆ ಎಂದಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ದರ್ಶನ್ ನನ್ನ ಮಗು ಅಂತ ತಿಳಿದುಕೊಳ್ಳಿ. ಮಗು ತಪ್ಪು ಮಾಡಿದ್ರೆ ತಂದೆ ಎಷ್ಟು ನೋವು ತಿಂತಾನೋ, ನಾನು ಅಷ್ಟೇ ನೋವು ತಿಂತಿದ್ದೀನಿ. ಆ ಮಗು ಕೂಡ ಅಷ್ಟೇ ನೋವು ತಿಂತಿರುತ್ತೆ. ನಾವು ಆತ ಕೊಟ್ಟಿರುವ ಕೊಡುಗೆ ಕಡೆ ಗಮನ ಕೊಡೋಣ ಎಂದು ತಿಳಿಸಿದ್ದಾರೆ. ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಗೆ ಬೀಳೋದು ಬೇಡ. ಕೇರಳ ಚಿತ್ರೋದ್ಯಮ ಹೀಗೇ ಆಗಿತ್ತು. ಅದೀಗ ಉತ್ತುಂಗದಲ್ಲಿದೆ. ಕೆಳಗೆ ಬಿದ್ದು ಮತ್ತೆ ಮೇಲೆ ಎದ್ದಿದೆ. ನಮ್ಮದು…
Author: Author AIN
ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಭಾರತದ ಇಬ್ಬರು ದಿಗ್ಗಜರ ಟಿ20ಐ ಕೆರಿಯರ್ ಅಂತ್ಯವಾದಂತಾಗಿದೆ. ಇದೀಗ ಮತ್ತೋರ್ವ ಸ್ಟಾರ್ ಆಟಗಾರ ಕೂಡ ನಿವೃತ್ತಿ ಘೋಷಿಸುವ ಮೂಲಕ ಅಭಿಮಾನಿಗಳಿಗೆ ಬೇಸರ ಮೂಡಿಸಿದ್ದಾರೆ. ಭಾರತ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದಿದೆ. ಇದರ ಸಂಭ್ರಚಾರಣೆಯಲ್ಲಿದ್ದ ಫ್ಯಾನ್ಸ್ಗೆ ಈಗಾಗಲೇ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಿವೃತ್ತಿ ಘೋಷಿಸುವ ಮೂಲಕ ಶಾಕ್ ನೀಡಿದ್ದರು. ಇದೀಗ ಟೀಂ ಇಂಡಿಯಾದ ಆಲ್ರೌಂಡರ್ ಪ್ಲೇಯರ್ ಆಗಿದ್ದ ರವೀಂದ್ರ ಜಡೇಜಾ ಕೂಡ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿ. ಈ ಗೆಲುವಿನೊಂದಿಗೆ ಟಿ20…
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದ್ದಾರೆ. ಈ ಬೆನ್ನಲ್ಲೇ ಚಿತ್ರರಂಗದ ಪ್ರಸ್ತುತ ಬೆಳವಣಿಗೆಯ ಬಗ್ಗೆ ಜಗ್ಗೇಶ್ ಮಾತನಾಡಿದ್ದಾರೆ. ದರ್ಶನ್ ಪ್ರಕರಣದ ಬಗ್ಗೆ ನೋ ರಿಯಾಕ್ಷನ್ ಎಂದಿದ್ದಾರೆ. ಇಂದು ನಿರ್ಮಾಪಕರ ಸಂಘದ ನೂತನ ಕಟ್ಟಡಕ್ಕೆ ಸಿಎಂ ಸಿದ್ದರಾಮಯ್ಯ ಅದ್ಧೂರಿಯಾಗಿ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಗ್ಗೇಶ್ ಕೂಡ ಭಾಗಿದ್ದರು. ಈ ವೇಳೆ, ಕನ್ನಡ ಚಿತ್ರರಂಗ ಸಂಕಷ್ಟದಲ್ಲಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ಪ್ರಯತ್ನಗಳು ವ್ಯರ್ಥವಾಗುತ್ತಿದೆ. ಚಿತ್ರರಂಗದವರಲ್ಲಿ ಶಿಸ್ತು ಕಮ್ಮಿಯಾಗಿದೆ ಎಂದರು. ಮುಂಚೆ ಎಲ್ಲಾ ಸಿನಿಮಾ ಮಾಡಬೇಕಾದರೆ, ಎಲ್ಲದಕ್ಕೂ ಸಮಯ ತೆಗೆದುಕೊಳ್ಳೋರು. ಬಜೆಟ್ ಲಿಸ್ಟ್ ರೆಡಿ ಮಾಡೋರು. ಈಗ ಹೀಗೆಲ್ಲಾ ಇಲ್ಲ. ಸಿನಿಮಾಗೆ ಭಾಷೆ ಇಲ್ಲದಂಗೆ ಆಗಿದೆ. ಶಿಸ್ತು ಎಲ್ಲಿ ಇರಲ್ವೋ ಅಲ್ಲಿ ಸಕ್ಸಸ್ ಇರಲ್ಲ. ಈಗಲೂ ಸರಿ ಮಾಡಿದ್ರೆ ಸರಿ ಆಗಲಿದೆ ಎಂದು ಜಗ್ಗೇಶ್ ಎಂದರು. ದರ್ಶನ್ ಪ್ರಕರಣದ ಬಗ್ಗೆ ಪ್ರಶ್ನೆ ಕೇಳಿದಾಗ ಯಾರ ಬಗ್ಗೆಯೂ ನಾನು ಮಾತನಾಡಲ್ಲ ಎಂದು ಜಗ್ಗೇಶ್ ಹೇಳಿದ್ದಾರೆ.
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಈ ವೇಳೆ ಕನ್ನಡದಲ್ಲಿ ಒಟಿಟಿ ವೇದಿಕೆ ತರಲು, ಸಂಬಂಧ ಪಟ್ಟವರ ಜೊತೆ ಮಾತನಾಡುತ್ತೇನೆ, ರಾಜ್ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡುತ್ತೇವೆ ಎಂದು ಭರವಸೆ ನೀಡಿದರು. ಉದ್ಘಾಟನೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಿನ್ನೆ ದೆಹಲಿಗೆ ಹೋಗಿದ್ದೆ. ಇವತ್ತು ಈ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಕಡಿಮೆ ಇತ್ತು. ಕನ್ನಡ ಚಿತ್ರರಂಗದ ಮೇಲೆ ನನಗೆ ಅಪಾರ ಗೌರವ ಇದೆ. ಮಿಸ್ ಮಾಡದೇ ಬರಬೇಕು ಎಂದು ಬಂದಿದ್ದೇನೆ. ಕನ್ನಡ ಚಿತ್ರರಂಗದ ಬೆಳವಣಿಗೆಗೆ ಎಷ್ಟು ಸಾಧ್ಯವೋ ಅಷ್ಟು ಸಹಕಾರ ನಮ್ಮಿಂದ ಇರುತ್ತದೆ. ಚಿತ್ರಮಂದಿರಗಳು, ಸಬ್ಸಿಡಿ ಬಗ್ಗೆ ಗಮನ ಹರಿಸಿ ಆರ್ಥಿಕ ನೆರವು ನೀಡುತ್ತೇವೆ. ಜೊತೆಗೆ ಕನ್ನಡದಲ್ಲಿ ಒಟಿಟಿ ವೇದಿಕೆ ತರಲು, ಸಂಬಂಧ ಪಟ್ಟವರ ಜೊತೆ ಮಾತನಾಡುತ್ತೇವೆ. ಡಾ.ರಾಜ್ಕುಮಾರ್ ಕನಸಿನಂತೆ ಖಂಡಿತಾ ಒಂದು ಫಿಲ್ಮ್ ಸಿಟಿ ನಿರ್ಮಾಣ ಮಾಡುತ್ತೇವೆ. ಕನ್ನಡ ಭಾಷೆಯ ಚಿತ್ರಗಳಿಗೆ ಸರ್ಕಾರ ಯಾವಾಗಲೂ ಬೆಂಬಲ ಸೂಚಿಸುತ್ತದೆ. ಫಿಲ್ಸ್ ಸಿಟಿಗೆ ಜಾಗ…
ಭಾರತ ಕ್ರಿಕೆಟ್ ತಂಡ ಐಸಿಸಿ ಟಿ20 ವಿಶ್ವಕಪ್ ಗೆದ್ದಿದ್ದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಬಾರ್ಬಡೋಸ್ನಲ್ಲಿ ನಡೆದ ವಿಶ್ವಕಪ್ ಫೈನಲ್ನಲ್ಲಿ ಸಂಘಟಿತ ಹೋರಾಟ ಮಾಡಿದ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದಿದ್ದು, ಇದು ಭಾರತಕ್ಕೆ ಎರಡನೇ ಟಿ20 ವಿಶ್ವಕಪ್ ಫೈನಲ್ ಗೆಲುವುವಾಗಿದ್ದು, ಒಟ್ಟಾರೆಯಾಗಿ ಇದು ನಾಲ್ಕನೇ ವಿಶ್ವಕಪ್. ಈ ಮಧ್ಯೆ ಭಾರತ ತಂಡ ವಿಶ್ವಕಪ್ ಗೆದ್ದಿದ್ದಕ್ಕೆ ನೆಟ್ಟಿಗರು ನಟ ದರ್ಶನ್ ಗೆ ಧನ್ಯವಾದ ಹೇಳುತ್ತಿದ್ದಾರೆ. ಅರೆ ದರ್ಶನ್ ಗೂ ಟಿ20 ಕಪ್ ಗೆದ್ದಿರುವುದಕ್ಕೂ ಕಾರಣವೂ ಇದೆ. ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಚಿತ್ರಗಳನ್ನು ಹಂಚಿಕೊಂಡು, ಭಾರತ ವಿಶ್ವಕಪ್ ಗೆಲ್ಲಲು ಕಾರಣವಾಗಿದ್ದಕ್ಕೆ ಧನ್ಯವಾದ ಎಂದು ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಏಕೆಂದರೆ ಭಾರತ ಕಳೆದ ಬಾರಿ ವಿಶ್ವಕಪ್ ಗೆದ್ದಿದ್ದು 2011 ರಲ್ಲಿ ಆ ವರ್ಷವೂ ಸಹ ದರ್ಶನ್ ಜೈಲು ಸೇರಿದ್ದರು. ಅದಾದ 13 ವರ್ಷಗಳ ಬಳಿಕ 2024 ರಲ್ಲಿ ದರ್ಶನ್ ಮತ್ತೆ ಜೈಲಿಗೆ ಹೋಗಿದ್ದಾರೆ. ಈ ಬಾರಿ ಭಾರತ ಮತ್ತೆ ವಿಶ್ವಕಪ್ ಗೆದ್ದಿದೆ. ಹಾಗಾಗಿ…
ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರಿಗೆ ಸಾಲಗಾರರಿಂದ ಬೆದರಿಕೆ ಕರೆಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅವರು ಸಿಸಿಬಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಸಾಲಗಾರರು ತಮಗೆ ಕಿರುಕುಳ ಕೊಡುತ್ತಿದ್ದು, ಬೆದರಿಕೆ ಹಾಕಿದ್ದಾರೆ ಎಂದು ಪುಷ್ಕರ್ ಮಲ್ಲಿಕಾರ್ಜುನ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಾಲ ನೀಡಿರುವ ಕೆಲವರು ಮನೆ ಬಳಿ ಗೂಂಡಾಗಳನ್ನು ಕಳಿಸಿ ಗಲಾಟೆ ಮಾಡಿಸಿದ್ದಾರೆ ಎಂದು ಪುಷ್ಕರ್ ಆರೋಪ ಮಾಡಿದ್ದಾರೆ. ಅವರುಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆರಂಭದಲ್ಲಿ ಸತತ ಯಶಸ್ಸು ಕಂಡ ಪುಷ್ಕರ್ ಮಲ್ಲಿಕಾರ್ಜುನ ಇತ್ತೀಚೆಗೆ ಸತತವಾಗಿ ಸೋಲುತ್ತಿದ್ದಾರೆ. ಇತ್ತೀಚೆಗೆ ಅವರ ಸಿನಿಮಾಗಳು ಸದ್ದು ಮಾಡಲು ವಿಫಲವಾಗಿವೆ. ಸಿನಿಮಾಗಳಿಂದ ನಷ್ಟ ಉಂಟಾಗಿ ಪುಷ್ಕರ್ ಮಲ್ಲಿಕಾರ್ಜುನ, ಸಿನಿಮಾ ಮಾಡಲು ಮಾಡಿದ್ದ ಸಾಲ ಮರುಪಾವತಿ ಸರಿಯಾಗಿ ಮಾಡಲಾಗಿಲ್ಲವಾದ್ದರಿಂದ ಸಾಲ ನೀಡಿರುವವರು ಪುಷ್ಕರ್ಗೆ ಸಮಸ್ಯೆ ನೀಡಲು ಆರಂಭಿಸಿದ್ದಾರೆ ಎನ್ನಲಾಗುತ್ತಿದೆ. ಸಿಸಿಬಿ ಪೊಲೀಸರಿಗೆ ಈ ಬಗ್ಗೆ ದೂರು ನೀಡಿರುವ ಪುಷ್ಕರ್ ದೂರಿನಲ್ಲಿ ಉಲ್ಲೇಖಿಸಿರುವಂತೆ, ತಮ್ಮ ಸಂಬಂಧಿ ಆದರ್ಶ್ ಎಂಬುವರ ಬಳಿ ಕಾಲಾಂತರದಲ್ಲಿ ಐದು ಕೋಟಿ ರೂಪಾಯಿ ಸಾಲ…
ಸ್ಟಾರ್ ಲೈನರ್ ಗಗನ ನೌಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಿದ್ದ ಗಗನ ಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಭೂಮಿಗೆ ಮರಳುವ ಬಗ್ಗೆ ಅನಿಶ್ಚಿತತೆ ತಲೆದೋರಿದೆ. ಸ್ಟಾರ್ ಲೈನರ್ ಕಾರ್ಯಾಚರಣೆಯ ಯೋಜನೆಯನ್ನು 45 ದಿನದಿಂದ 90 ದಿನಕ್ಕೆ ವಿಸ್ತರಿಸುವ ಕುರಿತು ನಾಸಾ ಯೋಜಿಸುತ್ತಿದೆ ಎಂದು ನಾಸಾದ ವಾಣಿಜ್ಯ ಸಿಬ್ಬಂದಿ ಕಾರ್ಯಕ್ರಮ ವ್ಯವಸ್ಥಾಪಕ ಸ್ಟೀವ್ ಸ್ಟಿಚ್ ತಿಳಿಸಿದ್ದಾರೆ ಎಂದು CNN ಸುದ್ದಿ ಸಂಸ್ಥೆ ವರದಿ ಮಾಡಿದೆ. ಜೂನ್ ತಿಂಗಳ ಆರಂಭದಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳುವಾಗ ಹೀಲಿಯಂ ಸೋರಿಕೆ ಹಾಗೂ ಥರ್ಸ್ಟರ್ ಸಮಸ್ಯೆಗೆ ಸಿಲುಕಿದ್ದ ಸ್ಟಾರ್ಲೈನರ್ ಗಗನ ನೌಕೆಯು ಗಗನ ಯಾತ್ರಿಗಳಾದ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆ ತರಲಿದೆ ಎಂದು ನಾಸಾದ ಅಧಿಕಾರಿಗಳು ಪುನರುಚ್ಚರಿಸಿದ್ದಾರೆ. ಈ ನಡುವೆ, ಸದ್ಯ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಇತರ ಸಿಬ್ಬಂದಿಗಳೊಂದಿಗೆ ಸಮನ್ವಯ ಸಾಧಿಸಿರುವ ಸುನೀತಾ ವಿಲಿಯಮ್ಸ್ ಹಾಗೂ ಬುಚ್…
ಸಿನಿಮಾಗಳು ಹಿಟ್ ಆದಾಗ ನಿರ್ಮಾಪಕರ ಚಿತ್ರದ ನಿರ್ದೇಶಕ ಅಥವಾ ನಟರಿಗೆ ದುಬಾರಿಯಾದ ಉಡುಗೊರೆಗಳನ್ನು ನೀಡುತ್ತಾರೆ. ಅಂತೆಯೇ ತಮಿಳಿನ ‘ಜೈಲರ್’ ಸಿನಿಮಾ ಬ್ಲಾಕ್ ಬಸ್ಟರ್ ಆದಾಗ ಅದರ ನಿರ್ಮಾಪಕ ಕಲಾನಿಧಿಮಾರನ್, ಸಿನಿಮಾದ ನಾಯಕ ರಜನೀಕಾಂತ್, ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದ್ರನ್, ನಿರ್ದೇಶಕ ನೆಲ್ಸನ್ ದಿಲೀಪ್ಕುಮಾರ್ ಅವರಿಗೆ ಐಶಾರಾಮಿ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದರು. ಇತ್ತೀಚೆಗೆ ‘ಕಾಟೇರ’ ಸಿನಿಮಾ ಗೆದ್ದಾಗಲೂ ಸಹ ಸಿನಿಮಾದ ಕತೆಗಾರರಿಗೆ ಕಾರುಗಳನ್ನು ನೀಡಿ ಸತ್ಕರಿಸಲಾಗಿತ್ತು. ಇದೀಗ ರಾಧಿಕಾ ಕುಮಾರಸ್ವಾಮಿ ನಟಿಸಿರುವ ಸಿನಿಮಾದ ನಿರ್ದೇಶಕರಿಗೆ ಸಿನಿಮಾ ಬಿಡುಗಡೆಗೆ ಮುನ್ನವೇ ದುಬಾರಿ ಕಾರು ನೀಡಿ ಗೌರವಿಸಲಾಗಿದೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸಿರುವ ರಾಧಿಕಾ ಸಹೋದರ ರವಿರಾಜ್ ನಿರ್ಮಾಣದ ಎಂ.ಶಶಿಧರ್ ನಿರ್ದೇಶನ ಮಾಡಿರುವ ‘ಅಜಾಗ್ರತ’ ಸಿನಿಮಾದ ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿದು ಸಿನಿಮಾದ ಮೊದಲ ಪ್ರತಿ ಸಿದ್ದವಾಗಿದೆ. ಸಿನಿಮಾದ ಮೊದಲ ಪ್ರತಿ ನೋಡಿದ ನಿರ್ಮಾಪಕ ರವಿರಾಜ್ಗೆ ಸಿನಿಮಾ ಬಹುವಾಗಿ ಇಷ್ಟವಾಗಿದೆ. ಹಾಗಾಗಿ ನಿರ್ಮಾಪಕ ರವಿರಾಜ್ ಅವರು ಶಶಿಧರ್ ಅವರಿಗೆ ದುಬಾರಿ ಕಾರೊಂದನ್ನು ಉಡುಗೊರೆಯಾಗಿ…
ಸಮರ್ಜಿತ್ ಲಂಕೇಶ್ ಹಾಗೂ ಸಾನ್ಯಾ ಐಯ್ಯರ್ ನಟನೆಯ ಗೌರಿ ಸಿನಿಮಾ ಕೊನೆಗೂ ಬಿಡುಗಡೆಗೆ ಸಜ್ಜಾಗಿದೆ. ಸ್ವಾತಂತ್ರ್ಯಾ ದಿನಾಚರಣೆಗೆ ತೆರೆಗೆ ತರಲು ಚಿತ್ರತಂಡ ರೆಡಿಯಾಗಿದೆ. ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಇವಾಗಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂದು ಚಿತ್ರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಅದರೀಗ ಆ ಕುತುಹಲಕ್ಕೆ ತೆರೆ ಬಿದ್ದಿದೆ. ಇಂದ್ರಜಿತ್ ಲಂಕೇಶ್ ನಿರ್ದೇಶನದ ಅವರ ಪುತ್ರ ಸಮರ್ಜಿತ್ ಮತ್ತು ನಟಿ ಸಾನಿಯಾ ಅಭಿನಯದ ಮೊದಲ ಸಿನಿಮಾವಿದು. ಇಂದಿ ಸಿನಿಮಾ ತಂಡ ಮಾಧ್ಯಮದ ಮುಂದೆ ಹಾಜರಾಗುವ ಮೂಲಕ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಗೌರಿ ಸಿನಿಮಾ ವಿಶೇಷ ದಿನದಂದು ತೆರೆಗೆ ಬರಲಿದೆ ಎಂದು ಹೇಳಿದರು ಯೆಸ್. ‘ಗೌರಿ’ ಸಿನಿಮಾ ಆಗಸ್ಟ್ 15 ಸ್ವಾತಂತ್ರ್ಯಾ ದಿನಾಚರಣೆಗೆ ಅದ್ದೂರಿಯಾಗಿ ರಿಲೀಸ್ ಆಗುತ್ತಿದೆ. ಗೌರಿ ತಂಡ ಇಂದು ಕಾಲೇಜಿನಲ್ಲಿ ಕಾರ್ಯಕ್ರಮ ಮಾಡುವ ಮೂಲಕ ಅದ್ದೂರಿಯಾಗಿ ರಿಲೀಸ್…
ರೈಸಿ ನಿಧನದ ಹಿನ್ನೆಲೆಯಲ್ಲಿ ಇರಾನ್ ನಲ್ಲಿ ಮತ್ತೆ ಅಧ್ಯಕ್ಷೀಯ ಚುನಾವಣೆ ನಡೆಸಲಾಗಿದೆ. ಈ ವೇಳೆ ಆರಂಭಿಕ ಮತದಾನದಲ್ಲಿ ಪ್ರಮುಖ ಅಭ್ಯರ್ಥಿಗಳ ಪೈಕಿ ಯಾರಿಗೂ ನಿರ್ಣಾಯಕ ಗೆಲುವು ಲಭಿಸದೇ ಇರುವುದರಿಂದ ಮೊದಲೆರಡು ಸ್ಥಾನ ಗಳಿಸಿರುವ ಅಭ್ಯರ್ಥಿಗಳ ನಡುವೆ ಮತ್ತೊಮ್ಮೆ ಸ್ಪರ್ಧೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ಶುಕ್ರವಾರ ನಡೆಯಲಿರುವ ಮತದಾನದಲ್ಲಿ ಸುಧಾರಣಾವಾದಿ ಮಸೂದ್ ಪೆಜೆಶ್ಕಿಯಾನ್ ಹಾಗೂ ಸಂಪ್ರದಾಯವಾದಿ ಸಯೀದ್ ಜಲೀಲಿ ಅವರಲ್ಲಿ ಒಬ್ಬರನ್ನು ಜನ ಆಯ್ಕೆ ಮಾಡಬೇಕಿದೆ. ಚುನಾವಣಾ ವಕ್ತಾರರಾದ ಮೊಹ್ಸಿನ್ ಇಸ್ಲಾಮಿ ಅವರು ಶುಕ್ರವಾರ ನಡೆದ ಮತದಾನದ ಫಲಿತಾಂಶವನ್ನು ಘೋಷಣೆ ಮಾಡಿದರು. ಒಟ್ಟು 2 ಕೋಟಿ 45 ಲಕ್ಷ ಮಂದಿ ಮತದಾನ ಮಾಡಿದ್ದು, ಅದರ ಪೈಕಿ ಪೆಜೆಶ್ಕಿಯಾನ್ ಒಂದು ಕೋಟಿ 40 ಲಕ್ಷ ಮತಗಳನ್ನು ಪಡೆದರೆ, ಜಲೀಲಿ ಅವರು 94 ಲಕ್ಷ ಮತಗಳನ್ನು ಪಡೆದರು ಎಂದು ಮೊಹ್ಸಿನ್ ತಿಳಿಸಿದ್ದಾರೆ. ಕಣದಲ್ಲಿದ್ದ ಇತರ ಸ್ಪರ್ಧಿಗಳಾದ ಮೊಹಮ್ಮದ್ ಭಾಘಿರ್ ಖಲೀಬಫ್ 33 ಲಕ್ಷ ಮತಗಳು ಹಾಗೂ ಮುಸ್ತಫಾ ಪೌರ್ಮೊಹಮ್ಮದಿ 2.06 ಲಕ್ಷ ಮತಗಳನ್ನು…