ಪಾಕಿಸ್ತಾನವು ಹೊಸದಾಗಿ ಜಾರಿಗೆ ತರಲು ಉದ್ದೇಶಿಸಿರುವ ಭಯೋತ್ಪಾದನಾ ನಿಗ್ರಹ ಯೋಜನೆಯಾದ ‘ಅಜಮ್-ಇ-ಇಶ್ತೆಕಾಮ್’ ಯಶಸ್ಸಿಗಾಗಿ ಸಣ್ಣ ಮತ್ತು ಅತ್ಯಾಧುನಿಕ ಶಸ್ತಾಸ್ತ್ರಗಳನ್ನು ಪೂರೈಸಬೇಕು ಎಂದು ಪಾಕಿಸ್ತಾನದ ರಾಯಭಾರಿ ಮಸೂದ್ ಖಾನ್ ಅಮೆರಿಕಕ್ಕೆ ಮನವಿ ಮಾಡಿದ್ದಾರೆ. ‘ದೇಶದಲ್ಲಿನ ಉಗ್ರರ ಜಾಲವನ್ನು ನಿಷ್ಕ್ರಿಯಗೊಳಿಸಲು ಪಾಕಿಸ್ತಾನವು ‘ಅಜಮ್-ಇ-ಇಶ್ತೆಕಾಮ್’ ಕಾರ್ಯಾಚರಣೆ ಆರಂಭಿಸಿದ್ದು, ಅದಕ್ಕಾಗಿ ನಮಗೆ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಸಂವಹನ ಸಾಧನಗಳ ಅಗತ್ಯವಿದೆ’ ಎಂದು ಖಾನ್ ಹೇಳಿದ್ದಾಗಿ ‘ಡಾನ್’ ಪತ್ರಿಕೆ ವರದಿ ಮಾಡಿದೆ. ವಾಷಿಂಗ್ಟನ್ನ ವಿಲ್ಸನ್ ಸೆಂಟರ್ನಲ್ಲಿ ಕಳೆದ ವಾರ ನಡೆದ ಅಮೆರಿಕದ ನೀತಿ ನಿರೂಪಕರು, ವಿದ್ವಾಂಸರು, ಬೇಹುಗಾರರು ಮತ್ತು ಕಾರ್ಪೊರೇಟ್ ಮುಖಂಡರ ಸಭೆಯಲ್ಲಿ ಅವರು ಈ ಮನವಿ ಮಾಡಿದ್ದಾರೆ.
Author: Author AIN
ಆಗ್ನೇಯ ಉಕ್ರೇನ್ ನಗರ ಜಪೊರಿಝಿಯಾ ಹೊರಭಾಗದಲ್ಲಿರುವ ವಿಲ್ನಿಯನ್ಸ್ಕ್ ಪಟ್ಟಣದ ಮೇಲೆ ದಾಳಿ ನಡೆಸಿದ ಉಸ್ಸಿಯಾ ಪಡೆಗಳು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರನ್ನು ಕೊಂದು ಕನಿಷ್ಠ 10 ಜನರನ್ನು ಗಾಯಗೊಳಿಸಿವೆ ಎಂದು ಪ್ರಾದೇಶಿಕ ಗವರ್ನರ್ ಮಾಹಿತಿ ನೀಡಿದ್ದಾರೆ. ಇಂದು ಶತ್ರುಗಳು ನಾಗರಿಕರ ವಿರುದ್ಧ ಮತ್ತೊಂದು ಭಯಾನಕ ಭಯೋತ್ಪಾದಕ ಕೃತ್ಯವನ್ನು ನಡೆಸಿದ್ದಾರೆ” ಎಂದು ಜಪೊರಿಝಿಯಾ ಗವರ್ನರ್ ಇವಾನ್ ಫೆಡೋರೊವ್ ಟೆಲಿಗ್ರಾಮ್ ಮೆಸೇಜಿಂಗ್ ಆಕ್ಟ್ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ. ಈ ದಾಳಿಯು “ಕೆಲಸವಿಲ್ಲದ ದಿನವಾದ ಮಧ್ಯದಲ್ಲಿ, ಪಟ್ಟಣ ಕೇಂದ್ರದಲ್ಲಿ ಸಂಭವಿಸಿದೆ, ಅಲ್ಲಿ ಜನರು ವಿಶ್ರಾಂತಿ ಪಡೆಯುತ್ತಿದ್ದರು, ಅಲ್ಲಿ ಮಿಲಿಟರಿ ಗುರಿಗಳಿಲ್ಲ” ಎಂದು ಫೆಡೋರೊವ್ ಹೇಳಿದರು. ದಾಳಿಯಲ್ಲಿ ಮೂಲಸೌಕರ್ಯ, ಅಂಗಡಿ ಮತ್ತು ವಸತಿ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅವರು ಹೇಳಿದರು. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವರ್ಷಾಂತ್ಯ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣ ರಂಗೇರಲಾರಂಭಿಸಿದೆ. ಶುಕ್ರವಾರ ಸಿಎನ್ಎನ್ ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮದಲ್ಲಿ ರಿಪಬ್ಲಿಕ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಪ್ರಶ್ನೆಗಳಿಗೆ ಉತ್ತರಿಸಲು ಹಾಲಿ ಅಧ್ಯಕ್ಷ, ಡೆಮಾಕ್ರಟಿಕ್ ಅಭ್ಯರ್ಥಿ ಜೋ ಬೈಡೆನ್ ತಡವರಿಸಿದ ಬೆನ್ನಲ್ಲೇ ಅವರ ಬದಲು ಬೇರೆ ಅಭ್ಯರ್ಥಿ ಕಣಕ್ಕೆ ಇಳಿಸುವ ಚಿಂತನೆಗಳು ನಡೆದಿವೆ ಎನ್ನಲಾಗಿದೆ. ಟ್ರಂಪ್ ವಿರುದ್ಧ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಪತ್ನಿ ಮಿಶೆಲ್ ಒಬಾಮಾ ಅಧ್ಯಕ್ಷೀಯ ಅಭ್ಯರ್ಥಿಯಾಗುವ ಸಾಧ್ಯತೆಯಿದೆ ಎಂದು ಸಂಸದ ಟೆಡ್ ಕ್ರೂಜ್ ಸುಳಿವು ನೀಡಿದ್ದಾರೆ. ಚರ್ಚೆ ವೇಳೆ ಟ್ರಂಪ್ ವಾಗ್ಧಾಳಿಗೆ ಸೂಕ್ತ ಉತ್ತರ ನೀಡುವಲ್ಲಿ ಬೈಡೆನ್ ವಿಫಲವಾಗಿದ್ದು, ಡೆಮಾಕ್ರಾಟ್ಗಳ ಅಸಮಾಧಾನಕ್ಕೆ ಕಾರಣವಾಗಿದೆ. ರಿಪಬ್ಲಿಕನ್ನರೂ “ಮೊದಲು ನಿಮ್ಮ ಅಭ್ಯರ್ಥಿಬದಲಿಸಿ’ ಎಂದು ಸವಾಲು ಹಾಕು ತ್ತಿದ್ದಾರೆ. ಇದರ ಬೆನ್ನಲ್ಲೇ ಬೈಡೆನ್ರನ್ನು ಬದಲಾಯಿಸುವುದಿದ್ದರೆ ಅವರ ಸ್ಥಾನಕ್ಕೆ ಮಿಶೆಲ್ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬೈಡೆನ್ ಸೋಲುಂಡರೂ ಅವರ ಬೆನ್ನಿಗೆ ನಿಂತಿರುವ ಮಾಜಿ ಅಧ್ಯಕ್ಷ ಒಬಾಮಾ, “ಚರ್ಚೆ ವೇಳೆ ಕೆಲವೊಮ್ಮೆ ಹಿನ್ನಡೆ ಸಹಜ’ ಎಂದಿದ್ದಾರೆ.
ಪಟಾಕಿ ಗೋದಾಮಿನಲ್ಲಿ ಪ್ರಬಲ ಸ್ಫೋಟಗೊಂಡ ಪರಿಣಾಮ ಐದು ಮಂದಿ ಸಾವನ್ನಪ್ಪಿದ್ದು 20ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಫಿಲಿಪೈನ್ಸ್ನ ಜಂಬೊಂಗಾ ನಗರದಲ್ಲಿ ನಡೆದಿದೆ, ಸ್ಫೋಟವು ಗೋದಾಮಿನ ಬಳಿಯ ಮನೆಗಳು ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಸ್ಥಳಕ್ಕೆ ಧಾವಿಸಿದ ಜಂಬೊಂಗಾ ಮೇಯರ್ ಜಾನ್ ದಲಿಪೆ ಸುದ್ದಿಗಾರರೊಂದಿಗೆ ಮಾತನಾಡಿದ್ದರು ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ಸ್ಫೋಟದಿಂದ 20 ಜನರು ಗಾಯಗೊಂಡಿದ್ದು ಅವರನ್ನು ರಕ್ಷಣಾ ಸಿಬ್ಬಂದಿ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ ಎಂದಿದ್ದಾರೆ. ಗಾಯಗೊಂಡವರಲ್ಲಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಸ್ಫೋಟದಲ್ಲಿ ಮೃತಪಟ್ಟವರಲ್ಲಿ ಒಂದು ಮಗುವೂ ಸೇರಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿಶಾಮಕ ದಳದವರು ಮತ್ತು ಪೊಲೀಸರು ಸ್ಫೋಟದ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ.
ಮಲಯಾಳಂ ಸ್ಟಾರ್ ನಟ ಫಹಾದ್ ಫಾಸಿಲ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆಯ ಜೊತೆಗೆ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಫಹಾದ್ ವಿರುದ್ಧ ಇದೀಗ ದೂರು ದಾಖಲಾಗಿದೆ. ಇತ್ತೀಚೆಗೆ ಫಹಾದ್ ನಿರ್ಮಾಣದ ‘ಪೇಯ್ನ್ಕಿಲಿ’ ಚಿತ್ರದ ಚಿತ್ರೀಕರಣ ಕೇರಳದ ಆಸ್ಪತ್ರೆಯಲ್ಲಿ ನಡೆದಿತ್ತು. ಆದರೆ ಚಿತ್ರತಂಡ ಅಲ್ಲಿದ್ದವರಿಗೆ ತೊಂದರೆ ಕೊಟ್ಟ ಕಾರಣ ಮಾನವ ಹಕ್ಕುಗಳ ಆಯೋಗ ಫಹಾದ್ ವಿರುದ್ಧ ದೂರು ದಾಖಲಿಸಿಕೊಂಡಿದೆ. ಎರ್ನಾಕುಲಂನ ಅಂಗಮಾಲಿ ತಾಲೂಕು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಪೇಯ್ನ್ಕಿಲಿ’ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಆಗ ರೋಗಿಗಳಿಗೆ ತೊಂದರೆಯಾಗಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ಶುಕ್ರವಾರ ಕ್ರಮ ಕೈಗೊಂಡಿದೆ. ವರದಿಗಳ ಆಧಾರದ ಮೇಲೆ ಸ್ವಯಂ ಪ್ರಕರಣವನ್ನು ದಾಖಲಿಸಿಕೊಂಡ ಆಯೋಗದ ಸದಸ್ಯೆ ವಿ ಕೆ ಬೀನಾಕುಮಾರಿ, ಏಳು ದಿನಗಳಲ್ಲಿ ವಿವರಣೆ ವರದಿಯನ್ನು ಸಲ್ಲಿಸುವಂತೆ ಎರ್ನಾಕುಲಂ ಜಿಲ್ಲಾ ವೈದ್ಯಾಧಿಕಾರಿ ಮತ್ತು ಅಂಗಮಾಲಿ ತಾಲೂಕು ಆಸ್ಪತ್ರೆ ಅಧೀಕ್ಷಕರಿಗೆ ಸೂಚಿಸಿದರು. ಎರ್ನಾಕುಲಂ ಸ್ಥಳೀಯ ಮಾಧ್ಯಮ ವರದಿಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಚಿತ್ರೀಕರಣದ ವೇಳೆ…
ಕಿಚ್ಚ ಸುದೀಪ್ ನಟನೆಯ ಮಾಣಿಕ್ಯ ಸಿನಿಮಾದಲ್ಲಿ ನಟಿಸಿದ್ದ ನಟಿ ವರಲಕ್ಷ್ಮಿ ಮದುವೆ ಸಂಭ್ರಮದಲ್ಲಿದ್ದಾರೆ. ಇನ್ನೆನ್ನೂ ಕೆಲವೇ ದಿನಗಳಲ್ಲಿ ನಟಿ ಹಸೆಮಣೆ ಏರಲಿದ್ದು ಮದುವೆಯ ಆಮಂತ್ರಣಗಳನ್ನು ನೀಡುವುದಲ್ಲಿ ವರಲಕ್ಷ್ಮಿ ಬ್ಯುಸಿಯಾಗಿದ್ದಾರೆ. ಸದ್ಯ ನಟಿ ತಮ್ಮ ಭಾವಿ ಪತಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮದುವೆಯ ಆಮಂತ್ರಣ ಪತ್ರಿಕೆಯನ್ನು ನೀಡಿದ್ದಾರೆ. ʻʻನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ ಅವರನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಿಸಿದೆವು. ಅವರನ್ನು ಆಹ್ವಾನಿಸಿದ್ದು ನಮ್ಮ ಭಾಗ್ಯ. ನಿಮ್ಮ ಬ್ಯುಸಿ ಶೆಡ್ಯೂಲ್ನ ಹೊರತಾಗಿಯೂ ನಮ್ಮೊಂದಿಗೆ ಸಮಯ ಕಳೆದಿದ್ದೀರಿ. ನಿಜವಾಗಿಯೂ ಗೌರವ ಇದುʼʼಎಂದು ಬರೆದುಕೊಂಡಿದ್ದಾರೆ. ಈ ಮೊದಲು ರಜನಿಕಾಂತ್, ಅವರ ಪತ್ನಿ ಲತಾ ಮತ್ತು ಮಗಳು ಐಶ್ವರ್ಯಾ ರಜನಿಕಾಂತ್ ಅವರನ್ನು ಭೇಟಿಯಾಗಿ ಮದುವೆಗೆ ಆಮಂತ್ರಿಸಿದ್ದರು. ವರಲಕ್ಷ್ಮಿ ಶರತ್ಕುಮಾರ್ ಜತೆ ತಂದೆ ಶರತ್ಕುಮಾರ್, ತಾಯಿ ಮತ್ತು ಸಹೋದರಿ ಸೇರಿ ಇಡೀ ಕುಟುಂಬವೇ ಜೊತೆಗೆ ಇತ್ತು. ನಟಿ ವರಲಕ್ಷ್ಮಿ ಶರತ್ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್ ಆಗಿದ್ದರು.…
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ 20 ದಿನಗಳಾಗಿವೆ. ಅತ್ತ ದರ್ಶನ್ ಜೈಲಿನಲ್ಲಿ ಚಡಪಡಿಸುತ್ತಿದ್ದರೆ ಇತ್ತ ಹೊರಗೆ ಅವರ ಪತ್ನಿ, ಪತಿಯನ್ನು ಹೇಗಾದರೂ ಜೈಲಿನಿಂದ ಹೊರತರುವ ಪ್ರಯತ್ನದಲ್ಲಿದ್ದಾರೆ. ಹೀಗಿರುವಾಗ ಪತ್ನಿ ವಿಜಯಲಕ್ಷ್ಮಿ ಅವರ ಮನಸ್ಥಿತಿ ಹೇಗಿದೆ? ಎಂಬುದನ್ನು ವಿಜಯಲಕ್ಷ್ಮಿಯವರ ಬಹುಕಾಲದ ಗೆಳತಿ ಗಾಯಕಿ ಶಮಿತಾ ಮಲನಾಡ್ ಹೇಳಿದ್ದಾರೆ. ‘ನಾನು, ವಿಜಯಲಕ್ಷ್ಮಿ ಬಹು ಕಾಲದಿಂದಲೂ ಗೆಳತಿಯರು. ಇಬ್ಬರು ಒಟ್ಟಿಗೆ ಟಿವಿ ಆಂಕರಿಂಗ್ ಮಾಡುತ್ತಿದ್ದೆವು. ವಿಜಯಲಕ್ಷ್ಮಿ ನಾನು ನೋಡಿದ ಅತ್ಯಂತ ಧೈರ್ಯವಂತ, ದಿಟ್ಟ ಮಹಿಳೆ. ಅಷ್ಟು ಧೈರ್ಯವಂತ, ಸಹಿಷ್ಣು ಮಹಿಳೆಯನ್ನು ನಾನಂತೂ ನನ್ನ ಜೀವನದಲ್ಲಿ ನೋಡಿಲ್ಲ. ಈ ಘಟನೆ ಆದಾಗ ನನಗೆ ಬಹಳ ಶಾಕ್ ಆಗಿತ್ತು. ವಿಜಯಲಕ್ಷ್ಮಿಯ ಸ್ಥಿತಿ ನೆನಪಿಸಿಕೊಂಡು ಬಹಳ ದುಃಖ ಪಟ್ಟಿದ್ದೆ. ಘಟನೆ ಬಳಿಕ ಹೋಗಿ ಭೇಟಿ ಸಹ ಆದೆ’ ಎಂದಿದ್ದಾರೆ. ‘ವಿಜಯಲಕ್ಷ್ಮಿ ಧೈರ್ಯವಾಗಿದ್ದಾರೆ. ದರ್ಶನ್ ತಪ್ಪು ಮಾಡಿಲ್ಲ ಎಂಬ ಖಾತ್ರಿ ಅವರಿಗಿದೆ. ದರ್ಶನ್ ಖಂಡಿತ ಹೊರಗೆ ಬರುತ್ತಾರೆ ಆತಂಕ ಪಡಬೇಡಿ ಎಂದು ನಮಗೇ ಅವರು ಧೈರ್ಯ ಹೇಳಿದ್ದಾರೆ.…
ಪ್ರಭಾಸ್ ನಟನೆಯ ಬಾಹುಬಲಿ ಸಿನಿಮಾದಲ್ಲಿ ಕಟ್ಟಪ್ಪನ ಪಾತ್ರದಲ್ಲಿ ನಟಿಸಿದ್ದ ಸತ್ಯರಾಜ್ ಅವರನ್ನು ಯಾರು ತಾನೆ ಮರೆಯೋಕೆ ಸಾಧ್ಯ. ಒಂದು ಕಾಲದಲ್ಲಿ ಹೀರೋ ಆಗಿ ಸದ್ಯ ಸೌತ್ ಸಿನಿ ಇಂಡಸ್ಟ್ರಿಯಲ್ಲಿ ಸಾಕಷ್ಟು ಡಿಮ್ಯಾಂಡ್ ಕ್ರಿಯೇಟ್ ಮಾಡ್ತಿರೋ ಸತ್ಯರಾಜ್ ಮಗಳು ಯಾವ ನಟಿಗೂ ಕಮ್ಮಿ ಇಲ್ಲ. ಸದ್ಯ ಸತ್ಯರಾಜ್ ಮಗಳ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಈಕೆಗೆ ನಟಿಯಾಗುವ ಎಲ್ಲ ಲಕ್ಷಣಗಳಿದ್ರು ಈಕೆ ಮಾತ್ರ ಸಿನಿಮಾ ರಂಗದಿಂದ ಸಖತ್ ದೂರವಿದ್ದಾರೆ. ಸತ್ಯರಾಜ್ ಮಗಳು ನೋಡಲು ಥೇಟ್ ತಂದೆಯಂತೆಯೇ ಕಾಣುತ್ತಾರೆ. ಸದ್ಯ ಸತ್ಯರಾಜ್ ಮಗಳ ಫೋಟೋ ನೋಡಿದ ನೆಟ್ಟಿಗರು ಯಾಕೆ ಸಿನಿಮಾದಲ್ಲಿ ಇದುವರೆಗೂ ನಟಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ಆದಷ್ಟು ಬೇಗ ಚಿತ್ರರಂಗಕ್ಕೆ ಎಂಟ್ರಿಕೊಡಿ ಎಂದು ಮನವಿ ಮಾಡಿದ್ದಾರೆ. ಸಿನಿಮಾ ಜಗತ್ತೇ ಇರಲಿ ದಿವ್ಯಾ ಸತ್ಯರಾಜ್ ಅವರ ಕುಟುಂಬ ಸರಳ ಮತ್ತು ಸರಳವಾಗಿದೆ. ಒಬ್ಬ ಮಗ ಮತ್ತು ಮಗಳಿದ್ದು, ಮಗಳು ದಿವ್ಯಾ ಸತ್ಯರಾಜ್ ನ್ಯೂಟ್ರಿಷಿಯನಿಸ್ಟ್ ಆಗಿದ್ದಾರೆ. ಈಕೆ ಆನ್ಲೈನ್ನಲ್ಲಿ ತನ್ನ ಫಾಲೋವರ್ಸ್ಗಳಿಗೆ ಜೀವನಶೈಲಿ…
ಹಿಂದಿ ಕಿರುತೆರೆಯ ಖ್ಯಾತ ನಟಿ ಹಿನಾ ಖಾನ್ ಅವರು ಸ್ತನ್ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ. ಈ ರೋಗ ಮೂರನೇ ಹಂತದಲ್ಲಿದ್ದು ಈ ಬಗ್ಗೆ ಹಿನಾ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಹಿನಾ ಖಾನ್ ‘ಯೇ ರಿಷ್ತಾ ಕ್ಯಾ ಕೆಹ್ಲಾತಾ ಹೇ’, ‘ಕೌಸಟಿ ಜಿಂದಗಿ ಕೇ 2’ ಧಾರಾವಾಹಿಗಳಲ್ಲಿ ನಟಿಸಿ ಖ್ಯಾತಿ ಘಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹಿನಾ ಖಾನ್ ಅವರು ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. ‘ನಾನು ಒಂದು ಪ್ರಮುಖ ಸುದ್ದಿ ಹಂಚಿಕೊಳ್ಳಬೇಕು. ನನಗೆ ಮೂರನೇ ಸ್ಟೇಜ್ನ ಸ್ತನ ಕ್ಯಾನ್ಸರ್ ಇದೆ’ ಎಂದು ಹಿನಾ ಖಾನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ನಾನು ಚೆನ್ನಾಗಿಯೇ ಇದ್ದೇನೆ. ನಾನು ಗಟ್ಟಿ ಇದ್ದೇನೆ. ಈ ರೋಗದಿಂದ ಹೊರ ಬರಲು ಪ್ರಯತ್ನಿಸುತ್ತಿದ್ದೇನೆ. ನನಗೆ ಚಿಕಿತ್ಸೆ ಕೊಡಿಸುವ ಕೆಲಸ ಶುರುವಾಗಿದೆ. ಮತ್ತಷ್ಟು ಗಟ್ಟಿಯಾಗಿ ಬರಲು ಏನೆಲ್ಲ ಬೇಕೋ ಅದೆಲ್ಲವನ್ನೂ ಮಾಡುತ್ತೇನೆ’ ಎಂದಿದ್ದಾರೆ. ‘ನನಗೆ ಗೌರವ ಹಾಗೂ ಖಾಸಗಿತನವನ್ನು ನೀಡಿ. ನೀವು ನೀಡಿರುವ ಪ್ರೀತಿ ಹಾಗೂ ಆಶೀರ್ವಾದವನ್ನು ನಾನು ಪ್ರಶಂಶಿಸುತ್ತೇನೆ’ ಎಂದು…
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲಲು ಸೇರಿದ್ದಾರೆ. ದರ್ಶನ್ ವಿರುದ್ಧ ಗಂಭೀರ ಆರೋಪವಿದ್ದು ಸದ್ಯಕ್ಕಂತೂ ಜಾಮೀನು ಸಿಗೋದು ಅನುಮಾನ ಎನ್ನಲಾಗುತ್ತಿದೆ. ಈ ಮಧ್ಯೆ ಈ ವರ್ಷ ಅಪಾಯ ಇದೆ ಅನ್ನೋದು ದರ್ಶನ್ಗೆ ಮೊದಲೇ ಗೊತ್ತಿತ್ತಾ ಎನ್ನುವ ಪ್ರಶ್ನೆ ಕಾಡುತ್ತಿದೆ. ಎರಡು ತಿಂಗಳ ಹಿಂದೆ ನಟ ದರ್ಶನ್ ಸುದರ್ಶನ ಹೋಮ ಮಾಡಿಸಿದ್ದರು. ನಕಾರಾತ್ಮಕ ಅಂಶಗಳನ್ನು ನಾಶಮಾಡಲು, ಶತ್ರುಗಳ ಮೇಲೆ ವಿಜಯ ಪ್ರಾಪ್ತಿಗೆ ಅಥವಾ ಮಾಟ-ಮಂತ್ರ ಮಾಡಿಸಿರೋ ಅನುಮಾನ ಇದ್ದರೆ ಈ ಹೋಮ ಮಾಡಿಸಲಾಗುತ್ತದೆ. ದರ್ಶನ್ ಕೂಡ ಇದೇ ಹೋಮ ಮಾಡಿಸಿದ್ದರು ಎನ್ನಲಾಗಿದೆ. ಅರೆಸ್ಟ್ ಆಗುವುದಕ್ಕೂ ಮುನ್ನ ಅವರು ಮನೆಯನ್ನು ಹೊಸದಾಗಿ ರಿನೋವೇಷನ್ ಮಾಡಿದ್ದರು. ಹೀಗಾಗಿ, ಅವರು ವಿಶೇಷ ಪೂಜೆ ಇಟ್ಟುಕೊಂಡಿದ್ದರು. ಈ ಕಾರಣದಿಂದಲೇ ವಿಜಯಲಕ್ಷ್ಮಿ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಕೊಲೆ ನಡೆದ ಬಳಿಕ ದರ್ಶನ್ ಪೂಜೆಯಲ್ಲಿ ಭಾಗಿ ಆಗಿದ್ದರು. ಸಿನಿಮಾಗಳಲ್ಲಿ ಆ್ಯಕ್ಷನ್ ದೃಶ್ಯಗಳನ್ನು ಇಡದಂತೆ ಮಿಲನಾ ಪ್ರಕಾಶ್ಗೆ ದರ್ಶನ್ ಆಪ್ತರು ಹೇಳಿದ್ದರಂತೆ. ಜಾಗ್ರತೆ ವಹಿಸಿದರೂ ದರ್ಶನ್ಗೆ ಪೆಟ್ಟಾಗಿತ್ತು.…