Author: Author AIN

ಇತ್ತೀಚೆಗೆ ಮೋದಿ ಅಮೆರಿಕಾ ಪ್ರವಾಸ ಕೈಗೊಂಡಿದ್ದು ಈ ವೇಳೆ ಟೆಸ್ಲಾ ಅಧ್ಯಕ್ಷ ಎಲೋನ್‌ ಮಸ್ಕ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದೀಗ ಭಾರತದಲ್ಲಿ ಟೆಸ್ಲಾ ವಿದ್ಯುತ್‌ಚಾಲಿತ ಕಾರು ತಯಾರಿಕಾ ಘಟಕ ಸ್ಥಾಪನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅಪಸ್ವರ ಎತ್ತಿದ್ದು, ‘ಇದು ತುಂಬಾ ಅನ್ಯಾಯ’ ಎಂದಿದ್ದಾರೆ. ಭಾರತ ವಿಧಿಸುವ ಸುಂಕಗಳನ್ನು ತಪ್ಪಿಸಲು ಭಾರತದಲ್ಲಿ ಟೆಸ್ಲಾ ಘಟಕ ನಿರ್ಮಿಸುವ ಇವಿ ತಯಾರಕರ ಯಾವುದೇ ಸಂಭಾವ್ಯ ಯೋಜನೆಗಳು ‘ತುಂಬಾ ಅನ್ಯಾಯ’ ಎಂದು ಟ್ರಂಪ್ ಹೇಳಿದ್ದಾರೆ.  ‘ವಿಶ್ವದ ಎಲ್ಲಾ ರಾಷ್ಟ್ರಗಳೂ ಅಮೆರಿಕದಿಂದ ಪ್ರಯೋಜನ ಪಡೆಯುತ್ತಿವೆ. ಆದರೂ ನಮ್ಮ ಸರಕುಗಳ ಮೇಲೆ ದುಬಾರಿ ಸುಂಕ ವಿಧಿಸಲಾಗುತ್ತಿದೆ. ಭಾರತ ಕೂಡ ಇದರಿಂದ ಹೊರತಾಗಿಲ್ಲ. ಹೆಚ್ಚು ಸುಂಕ ವಿಧಿಸುವ ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪಿಸಿ ಕಾರುಗಳನ್ನು ಮಾರಾಟ ಮಾಡಲು ಸಾಧ್ಯವೇ’ ಎಂದು ಟ್ರಂಪ್‌ ಫಾಕ್ಸ್‌ ನ್ಯೂಸ್‌ಗೆ ಎಲಾನ್‌ ಮಸ್ಕ್‌ ಜೊತೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಭಾರತ ಅತಿಹೆಚ್ಚು ಪ್ರಮಾಣದಲ್ಲಿ ಸುಂಕ ವಿಧಿಸುತ್ತಿದೆ. ಹೀಗಾಗಿ, ನಾವು ಕೂಡ ಪ್ರತಿಯಾಗಿ ಅಷ್ಟೇ ಸುಂಕವನ್ನು ವಿಧಿಸುತ್ತೇವೆ…

Read More

ಬೆಂಗಳೂರು: ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಕ್ಕೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಬಾರಿಯ ಎಸ್‌ಎಸ್‌ಎಲ್‌ಸಿ  ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸಿ ಎಂದು ಸರ್ಕಾರಕ್ಕೆ ಖಾಸಗಿ ಶಾಲೆಗಳು ಒತ್ತಾಯ ಮಾಡಿವೆ. ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಖಾಸಗಿ ಶಾಲೆಗಳ ಒಕ್ಕೂಟ ಕನಿಷ್ಠ 35 ಅಂಕಗಳ ಬದಲಾಗಿ ಈ ವರ್ಷದಿಂದಲೇ ಪಾಸ್‌ ಮಾನದಂಡವನ್ನು 33 ಅಂಕಗಳಿಗೆ ಬದಲಾವಣೆ ಮಾಡುವಂತೆ ಒತ್ತಾಯಿಸಿದೆ. https://ainlivenews.com/just-eat-papaya-on-an-empty-stomach-and-sugar-indigestion-and-acidity-problems-will-disappear/ ಸಿಬಿಎಸ್‌ಸಿ, ಐಸಿಎಸ್‌ಸಿ ಪಠ್ಯಕ್ರಮದಲ್ಲಿ ಪಾಸ್ ಅಂಕ 33 ಇದೆ. ಇದೇ ಮಾದರಿಯಲ್ಲಿ ರಾಜ್ಯ ಪಠ್ಯಕ್ರಮ ಮತ್ತು ಕನ್ನಡ ಮಾಧ್ಯಮ ಶಾಲೆಗಳಲ್ಲಿ 33 ಅಂಕಗಳಿಗೆ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು ಎಂದು ಹೇಳಿದೆ. ಈಗಾಗಲೇ 33 ಅಂಕದ ಮಾದರಿ ಜಾರಿಗೆ ಶಿಕ್ಷಣ ಇಲಾಖೆಯ ಜೊತೆ ಖಾಸಗಿ ಶಾಲೆಗಳು ಸಭೆ ಮಾಡಿದ್ದವು. ಆದರೆ ಈವರೆಗೂ ಶಿಕ್ಷಣ ಇಲಾಖೆ ಈ ಪ್ರಸ್ತಾಪವನ್ನು ಪರಿಗಣನೆ ಮಾಡಿರಲಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಮನವಿ ಮಾಡಿದೆ.…

Read More

ಬೆಂಗಳೂರು: ನನ್ನ ಬಗ್ಗೆ ಮಾತನಾಡಿದರೆ ನಾನೇ ಉತ್ತರ ಕೊಡುತ್ತೇನೆ ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈಗ ಪಕ್ಷದಲ್ಲಿ ಕೆಲಸ ಇದೆ. ಪ್ರತಿ ದಿನ ಇದರ ಬಗ್ಗೆಯೇ ಮಾತನಾಡಲು ಆಗಲ್ಲ. ನನ್ನ ಬಗ್ಗೆ ಮಾತನಾಡಿದರೆ ನಾನೇ ಉತ್ತರ ಕೊಡುತ್ತೇನೆ ಎಂದರು. https://ainlivenews.com/just-eat-papaya-on-an-empty-stomach-and-sugar-indigestion-and-acidity-problems-will-disappear/ ಬಸನಗೌಡ ಪಾಟೀಲ್ ಯತ್ನಾಳ್ ಏಕವಚನ ಬಳಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹಿರಿಯರು ಇದ್ದಾರೆ. ಏಕವಚನದಲ್ಲಿ ಮಾತನಾಡಿದ್ದಾರೋ, ಇನ್ನೊಂದು ಭಾಷೆಯಲ್ಲಿ ಮಾತನಾಡಿದ್ದಾರೋ ತಲೆ ಕೆಡಿಸಿಕೊಳ್ಳಲ್ಲ. ನಮಗೆ ಪಕ್ಷದಲ್ಲಿ ಕೆಲಸ ಮಾಡಲು ಸಾಕಷ್ಟು ಇದೆ ಎಂದು ಹೇಳಿದರು. 

Read More

ಧಾರವಾಡ : ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅದನ್ನು ಸಂಪೂರ್ಣವಾಗಿ ತೊಲಗಿಸಲು ಪ್ರತಿ ವರ್ಷ ಫೆ.೨೦ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಲಾಗುತ್ತದೆ ಎಂದು ಹಿರಿಯ ನ್ಯಾಯಾಧೀಶರಾದ ರವೀಂದ್ರ ಹೋನಲೆ ಹೇಳಿದರು. ಪಟ್ಟಣದ ನೌಕರರ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಹಾಗೂ ತಾಲೂಕ ಸಮಾಜ ಕಲ್ಯಾಣ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನ ಮತ್ತು ಅಸ್ಪೃಶ್ಯತಾ ನಿವಾರಣ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಭಾರತದಲ್ಲಿ ಸಾಮಾಜಿಕ ನ್ಯಾಯ ಎಂಬ ಕಲ್ಪನೆ ಮತ್ತು ಹೋರಾಟ ಬಾಬಾಸಾಹೇಬ ಅಂಬೇಡ್ಕರ್ ಅವರಿಂದ ಆರಂಭವಾಯಿತು ಎಂದು ಹೇಳಿದರೂ ಅದು ರಾಜಕೀಯ ಮತ್ತು ಕಾನೂನಾತ್ಮಕ ನೆಲೆಯಲ್ಲಿ ನಡೆದಂತಹದು. ಆದರೆ, ೧೨ನೇ ಶತಮಾನದಲ್ಲಿಯೇ ಬಸವೇಶ್ವರರು ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗಾಗಿ ಕ್ರಾಂತಿಯನ್ನೇ ಮಾಡಿದರು ಎಂದರು. ನ್ಯಾಯಾಧೀಶರಾದ ಗಣೇಶ್ ಎನ್ ಮಾತನಾಡಿ ಅಸ್ಪೃಶ್ಯತೆ ಆಚರಣೆ ಕಾನೂನುಬಾಹಿರ ಹಾಗೂ ಸಂವಿಧಾನ ವಿರೋಧಿ ಕೃತ್ಯ. ಕಾನೂನು ರೀತಿಯಿಂದ ಶಿಕ್ಷಾರ್ಹ ಅಪರಾಧ.…

Read More

ಮಂಡ್ಯ : ಯುವಕನಿಗೆ ಚಾಕುವಿನಿಂದ ಇರಿದ ಮೂವರನ್ನ ಜನರೇ ಹಿಡಿದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮಂಡ್ಯದ ನಾಗಮಂಗಲದ ಸಾಮ್ಕಳ್ಳಿ ಗ್ರಾಮದಲ್ಲಿ ನಡೆದಿದೆ. ಬಚ್ಚಿಕೊಪ್ಪಲು ಗ್ರಾಮದ ಕುಮಾರ್ ಎಂಬ ಯುವಕನಿಗೆ ಇರಿಯಲಾಗಿದೆ. ಈ ಕೃತ್ಯ ಎಸಗಿದ ಪಾಂಡವಪುರದ ಕಾಳೇನಹಳ್ಳಿಯ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಕಂಬಕ್ಕೆ ಕಟ್ಟಿ, ಥಳಿಸಿದ್ದಾರೆ. https://www.youtube.com/watch?v=IKnpGlEhocg ಮೃತ ಕುಮಾರ್‌ ಮತ್ತು ಹಲ್ಲೆ ನಡೆಸಿದ್ದ ಎಲ್ಲರೂ ಸಹ ಗೂಡ್ಸ್ ಆಟೋ ಚಾಲಕರಾಗಿದ್ದು, ಗೂಡ್ಸ್ ಆಟೋ ಓವರ್‌ ಟೇಕ್ ಮಾಡಿದ ವಿಚಾರಕ್ಕೆ ಜಗಳವುಂಟಾಗಿದೆ. ಈ ವೆಳೇ ಕುಮಾರ್‌ ಗೆ ಚಾಕುವಿನಿಂದ ಇರಿಯಲಾಗಿದೆ. ನಾಲ್ಕೈದು ಕಡೆ ಚುಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕುಮಾರ್ರನ್ನು ಬಿಜಿಎಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕುಮಾರ್‌ ಸಾವನ್ನಪ್ಪಿದ್ದಾನೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಲಕ್ನೋ: ಪ್ರಯಾಗ್‌ ರಾಜ್‌ ಮಹಾಕುಂಭಕ್ಕೆ ತೆರಳಿದ್ದ ಬೀದರ್‌ ಮೂಲದ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಕಾಶಿ ಬಳಿ ಅಘತಾತ ಸಂಭವಿಸಿದ್ದು, ಬೀದರ್‌ನ ಆರು ಮಂದಿ ಸಾವನ್ನಪ್ಪಿದ್ದಾರೆ.  ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಲಾರಿ ಮತ್ತು ಕ್ರೂಸರ್‌ ನಡುವೆ ಡಿಕ್ಕಿಯಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದು, ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. https://www.youtube.com/watch?v=IKnpGlEhocg ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌ (43) ನೀಲಮ್ಮ (60) ಸೇರಿದಂತೆ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಲಾಡಗೇರಿಯ 12 ಮಂದಿ ಒಂದೇ ಗಾಡಿಯಲ್ಲಿ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

Read More

ಬೆಂಗಳೂರು: ಬೆಂಗಳೂರನ್ನು ರಾತ್ರೋರಾತ್ರಿ ಬದಲಾಯಿಸುವುದು ಅಸಾಧ್ಯ. ದೇವರೇ ಬಂದರೂ ಅದು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ‘ಬೆಂಗಳೂರು ಅನ್ನು ರಾತ್ರೋರಾತ್ರಿ ಬದಲಾಯಿಸುವುದು ಅಸಾಧ್ಯ. ದೇವರೇ ಬಂದರೂ ಅದು ಸಾಧ್ಯವಿಲ್ಲ. ನಾವು ಸರಿಯಾದ ಯೋಜನೆಗಳನ್ನು ರೂಪಿಸಿದರೆ ಮತ್ತು ಅವುಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಿದರೆ, ರೂಪಾಂತರವನ್ನು ಸಾಧಿಸಬಹುದು ಎಂದರು. ನಮ್ಮ ರಸ್ತೆ ಕೈಪಿಡಿ ಮೂಲಕ ಅನೇಕ ಸಲಹೆ- ಸೂಚನೆಗಳನ್ನು ಪಡೆಯಬಹುದಾಗಿದೆ. ರಸ್ತೆ ಬದಿಯಲ್ಲಿಎಲ್ಲಿಸಸಿಗಳನ್ನು ನೆಡಬೇಕು, https://ainlivenews.com/just-eat-papaya-on-an-empty-stomach-and-sugar-indigestion-and-acidity-problems-will-disappear/ ವಿದ್ಯುತ್‌ ಕಂಬಗಳು ಎಲ್ಲಿರಬೇಕು, ಮುಖ್ಯ ರಸ್ತೆಗಳು ಹಾಗೂ ವಾರ್ಡ್‌ ರಸ್ತೆಗಳು ಹೇಗಿರಬೇಕು, ಪಾದಚಾರಿ ಮಾರ್ಗಗಳನ್ನು ನಿರ್ಮಾಣ ಮಾಡುವ ಬಗೆ, ರಸ್ತೆಯಲ್ಲಿ ಸಂಚರಿಸುವಾಗ ಶಿಸ್ತು ಪಾಲಿಸುವುದು ಹೇಗೆ, ಬಸ್‌ ನಿಲ್ದಾಣಗಳ ವಿನ್ಯಾಸ, ಮೆಟ್ರೊ ಪಿಲ್ಲರ್‌ಗಳು, ವೃತ್ತಗಳ ಸೌಂದರ್ಯೀಕರಣಕ್ಕೆ ಸಂಬಂಧಿಸಿದ ಹೊಸ ಆಲೋಚನೆಗಳು ಕೈಪಿಡಿಯಲ್ಲಿವೆ  ಎಂದು ಹೇಳಿದ್ದಾರೆ.

Read More

ಢಾಕಾ: ಕಳೆದ ವರ್ಷ ಶೇಖ್ ಹಸೀನಾ ಅವರ ಸರಕಾರದ ಪದಚ್ಯುತಿಗೆ ಮೂಲ ಕಾರಣವಾಗಿದ್ದ ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳು ಇದೀಗ ಬಾಂಗ್ಲಾದಲ್ಲಿ ಹೊಸ ರಾಜಕೀಯ ಪಕ್ಷದ ಸ್ಥಾಪನೆಗೆ ಮುಂದಾಗಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಬಾಂಗ್ಲಾದೇಶದಲ್ಲಿ ಮುಂದಿನ ವರ್ಷದ ಮಧ್ಯಭಾಗದಲ್ಲಿ ನಡೆಯುವುದೆಂದು ನಿರೀಕ್ಷಿಸಲಾಗಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷವು (ಬಿಎನ್‍ಪಿ) ಹಾಲಿ ಮಧ್ಯಂತರ ಸರಕಾರದ ಬೆಂಬಲದಿಂದ ಅಧಿಕಾರ ಪಡೆಯುವ ಉತ್ಸಾಹದಲ್ಲಿದೆ. ಇದಕ್ಕೆ ಪೂರಕವಾಗಿ ಹಸೀನಾ ಸರಕಾರದ ಪದಚ್ಯುತಿಗೆ ಕಾರಣವಾಗಿದ್ದ ವಿದ್ಯಾರ್ಥಿ ಸಂಘಟನೆಯ ಬೆಂಬಲ ಪಡೆಯಲು ಬಿಎನ್‍ಪಿ ನಿರ್ಧರಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿಯಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿ ಪ್ರಮುಖರು ಕೂಡಾ ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆಗೆ ನಿರ್ಧರಿಸಿದ್ದು ಬಿಎನ್‍ಪಿಯ ವಿದ್ಯಾರ್ಥಿ ಸಂಘಟನೆಯ ಕೆಂಗಣ್ಣಿಗೆ ಕಾರಣವಾಗಿತ್ತು. ಇದರಿಂದ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ವಿವಿ ಕ್ಯಾಂಪಸ್‍ನಲ್ಲಿ ನಡೆದ ಹಿಂಸಾಚಾರಕ್ಕೆ ವಿದ್ಯಾರ್ಥಿಗಳ ಎರಡು ಗುಂಪಿನ ನಡುವಿನ ವೈಮನಸ್ಯ ಹಾಗೂ ರಾಜಕೀಯ ಮೇಲಾಟ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಬಾಂಗ್ಲಾದೇಶದ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಗುಂಪಿನ…

Read More

ವಾಷಿಂಗ್ಟನ್‌: ಅಮೆರಿಕದ ತನಿಖಾ ಸಂಸ್ಥೆ ಫೆಡರಲ್‌ ಬ್ಯುರೋ ಆಫ್‌ ಇನ್‌ವೆಸ್ಟಿಗೇಷನ್ ನಿರ್ದೇಶಕರಾಗಿ ಭಾರತ ಮೂಲದ ಕಾಶ್‌ ಪಟೇಲ್‌ ನೇಮಕಗೊಂಡಿದ್ದಾರೆ. ಎಫ್‌ಬಿಐನ 9ನೇ ನಿರ್ದೇಶಕರಾಗಿ ಕಾಶ್‌ ಪಟೇಲ್‌ ಅವರನ್ನು ನೇಮಕಗೊಳಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆದೇಶಕ್ಕೆ ಸಹಿ ಹಾಕಿದ್ದು, ಈ ಮಾಹಿತಿಯನ್ನು‌ ಶ್ವೇತಭವನದ ಅಧಿಕಾರಿ ಡಾನ್ ಸ್ಕ್ಯಾವಿನೋ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೆಡರಲ್‌ ಬ್ಯುರೋ ಆಫ್‌ ಇನ್‌ವೆಸ್ಟಿಗೇಷನ್ ನಿರ್ದೇಶಕರಾಗಿ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಕಾಶ್‌ ಪಟೇಲ್‌, ಟ್ರಂಪ್‌ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ. ಎಫ್‌ಬಿಐನ 9ನೇ ನಿರ್ದೇಶಕನಾಗಿದ್ದಕ್ಕೆ ನನಗೆ ಗೌರವವಿದೆ. ನಿಮ್ಮ ಅಚಲವಾದ ವಿಶ್ವಾಸ ಮತ್ತು ಬೆಂಬಲಕ್ಕಾಗಿ‌ ಟ್ರಂಪ್‌ ಹಾಗೂ ಅಟಾರ್ನಿ ಜನರಲ್ ಬೋಂಡಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಮುಂದುವರಿದು.. ಎಫ್‌ಬಿಐ ಒಂದು ಪರಂಪರೆಯನ್ನು ಹೊಂದಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ನಮ್ಮ ನ್ಯಾಯ ವ್ಯವಸ್ಥೆಯು ಸಾರ್ವಜನಿಕ ನಂಬಿಕೆಯನ್ನು ಕಳೆದುಕೊಂಡಿದೆ, ಈ ಬೆಳವಣಿಗೆ ಇಂದೇ ಕೊನೆಗೊಳ್ಳಬೇಕು. ಅಮೆರಿಕನ್ನರು ಹೆಮ್ಮೆ ಪಡುವಂತೆ ಎಫ್‌ಬಿಐ ಅನ್ನು ಮರುನಿರ್ಮಾಣ ಮಾಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದು…

Read More

ಚಿತ್ರದುರ್ಗ: ಮಹಿಳೆಯೊಬ್ಬರು ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿ. ಕಿವಿಯೋಲೆಯನ್ನು ಕಿತ್ತುಕೊಂಡೊಂಡು  ಪರಾರಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಹೆಗ್ಗೆರೆ ಗ್ರಾಮದ ಮಹಿಳೆ ಅಂಬಿಕಾ ತಮ್ಮ ತೋಟದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಮಹಿಳೆಯ ತಲೆ ಹಿಂಬದಿಗೆ ಹೊಡೆದು ಮಹಿಳೆಯ ಕಿವಿಯಲ್ಲಿದ್ದ ಓಲೆಗಳನ್ನು ದೋಚಿ ಪರಾರಿಯಾಗಿದ್ದಾನೆ. https://www.youtube.com/watch?v=PYVBgMRCmdM ಗಾಯಗೊಂಡ ಮಹಿಳೆಗೆ ತುಮಕೂರು ಜಿಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯೂರು  ಡಿವೈಎಸ್ಪಿ ಟಿಬಿ ರಾಜಣ್ಣ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಟಿ.ಬಿ.ರಾಜಣ್ಣ  ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More