Author: Author AIN

ಅಮೆರಿಕ ಅಧ್ಯಕ್ಷ ಜೋ ಬೈಡನ್ & ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಾತಿನ ಚಕಮಕಿ ನಡೆದಿದೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಇನ್ನೇನು ಕೆಲ ದಿನಗಳು ಬಾಕಿ ಇರುವಾಗಲೇ ಇಬ್ಬರೂ ವಾಕ್ ಸಮರ ಶುರು ಮಾಡಿದ್ದಾರೆ. ಅಂದಹಾಗೆ ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಮಯದಲ್ಲಿ, ಅಭ್ಯರ್ಥಿಗಳನ್ನು ಟಿವಿ ಪರದೆ ಮುಂದೆ ನಿಲ್ಲಿಸಿ ಮುಖಾಮುಖಿ ಚರ್ಚೆಗೆ ಬಿಡುವುದು ಸಂಪ್ರದಾಯ. ಅದೇ ರೀತಿ ಇದೀಗ ಅಮೆರಿಕ ಅಧ್ಯಕ್ಷ ಬೈಡನ್ & ಟ್ರಂಪ್ ನಡುವೆ ಮಾತಿನ ಫೈಟಿಂಗ್ ನಡೆದಿದ್ದು, ಇಬ್ಬರ ಮಾತುಕತೆ ಫುಲ್ ವೈರಲ್ ಆಗುತ್ತಿದೆ. 2ನೇ ಬಾರಿ ಅಧ್ಯಕ್ಷರಾಗಿ ಆಯ್ಕೆ ಆಗುವ ಹುಮ್ಮಸ್ಸು ಹೊಂದಿರುವ ಡೊನಾಲ್ಡ್ ಟ್ರಂಪ್ ಇದೀಗ ಬೈಡನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೋ ಬೈಡನ್ ಡೆಮಾಕ್ರಟಿಕ್ ಪಕ್ಷದಿಂದ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿ ಆಗಿ ಕಣಕ್ಕಿಳಿದರೆ ಮತ್ತೊಂದು ಕಡೆ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಡೊನಾಲ್ಡ್ ಟ್ರಂಪ್ ಅಖಾಡಕ್ಕೆ ಇಳಿದಿದ್ದಾರೆ. ಇಬ್ಬರ ನಡುವೆ ಭರ್ಜರಿ ಮಾತಿನ ಮಹಾಯುದ್ಧ ನಡೆಯುತ್ತಿದೆ. ಇದೀಗ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ…

Read More

ಹಣಕಾಸು ಅಕ್ರಮ ವರ್ಗಾವಣೆ ಮತ್ತು ಉಗ್ರರಿಗೆ ಆರ್ಥಿಕ ನೆರವು ನಿಗ್ರಹದಲ್ಲಿ ಭಾರತದ ಸಾಧನೆ ಗಮನಾರ್ಹವಾದದ್ದು ಎಂದು ಅಂತಾರಾಷ್ಟ್ರೀಯ ಹಣಕಾಸು ಕಾರ್ಯಪಡೆ ಮೆಚ್ಚುಗೆ ಸೂಚಿಸಿದೆ. ಸಿಂಗಾಪುರದಲ್ಲಿ ನಡೆದ ಎಫ್‌ಎಟಿಎಫ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಉಗ್ರ ಸಂಘಟನೆಗಳಿಗೆ ಹಣದ ಹರಿವು ತಡೆಯುವ ನಿಟ್ಟಿನಲ್ಲಿ ಭಾರತ ಸರಕಾರ ಕೈಗೊಂಡಿರುವ ಕ್ರಮಗಳು ಉತ್ತಮ ಫ‌ಲಿತಾಂಶ ನೀಡುತ್ತಿವೆ. 1 ವರ್ಷ ಕಾಲ ಭಾರತ ಸರಕಾರ ರೂಪಿಸಿದ ಕ್ರಮಗಳನ್ನು ಪರಿಶೀಲನೆಗೆ ಒಳಪಡಿಸಿದ ಬಳಿಕ ಈ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ ಎಂದು ಕಾರ್ಯಪಡೆ ಹೇಳಿದೆ. ಆದರೆ ಹಣಕಾಸು ಅಕ್ರಮ ಮತ್ತು ಉಗ್ರರಿಗೆ ವಿತ್ತೀಯ ನೆರವು ನೀಡುವ ಪ್ರಕರಣಗಳಿಗೆ ಸಂಬಂಧಿಸಿದ ವಿಚಾರಣೆ ಇನ್ನೂ ವೇಗ ಪಡೆದುಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಉಗ್ರರನ್ನು ಮಟ್ಟ ಹಾಕಲು ಕೇಂದ್ರ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಹಣಕಾಸು ಗುಪ್ತಚರ ಸಂಸ್ಥೆಗಳ ಮೂಲಕ ಉಗ್ರರಿಗೆ ವಿತ್ತೀಯ ನೆರವು ನೀಡುವ ವ್ಯವಸ್ಥೆಗಳನ್ನು ಭಾರತ ಮಟ್ಟ ಹಾಕಿದೆ ಎಂದು ಕಾರ್ಯಪಡೆ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ವಿದೇಶಾಂಗ ಇಲಾಖೆ, “ಎಫ್‌ಎಟಿಎಫ್ ವರದಿಯು…

Read More

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಅಲ್ಲಿನ ಊಟ ಸೇರುತ್ತಿಲ್ಲ. ಹೊರಗಿದ್ದ ವೇಳೆ ಹೆಚ್ಚಾಗಿ ಮಾಂಸಾಹಾರವನ್ನೇ ಸೇವಿಸುತ್ತಿದ್ದ ದಾಸನಿಗೆ ಜೈಲಿನಲ್ಲಿ ನೀಡುವ ಅನ್ನ, ತರಕಾರಿ ಸಾರು ಸೇರುತ್ತಿಲ್ಲ. ಇದರಿಂದ ಬೇಸರಗೊಂಡಿದ್ದ ದರ್ಶನ್ ಗೆ ಶುಕ್ರವಾರ (ಜೂನ್‌ 28) ರಾತ್ರಿ ಚಿಕನ್‌ ಸಾಂಬಾರ್‌, ಮುದ್ದೆ ಹಾಗೂ ಅನ್ನವನ್ನು ನೀಡಲಾಗಿದೆ. ಜೈಲಿನ ಅನ್ನ-ಸಾಂಬಾರ್‌ ತಿಂದು ಬಸವಳಿದಿದ್ದ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌ ನೀಡಿರುವುದು ತುಸು ಸಮಾಧಾನ ತಂದಿದೆ. ಮುದ್ದೆ, ಚಿಕನ್‌ ಸಾಂಬಾರ್‌ ಸೇವಿಸಿದ ದರ್ಶನ್‌ ತಡವಾಗಿ ನಿದ್ದೆಗೆ ಜಾರಿದ್ದಾರೆ. ಶನಿವಾರ (ಜೂನ್‌ 29) ಬೆಳಗ್ಗೆ 6 ಗಂಟೆಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ. ಇದರ ಮಧ್ಯೆಯೇ, ನಟ…

Read More

ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ ಬಳಿಕ 17 ಮಂದಿ ಜೈಲು ಸೇರಿದ್ದಾರೆ. ಇಷ್ಟು ದಿನಗಳ ಕಾಲ ಯಾರು ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಶರಣಾಗಿದ್ದ 17ನೇ ಆರೋಪಿ ನಿಖಿಲ್ ನಾಯಕ್ ಜಾಮೀನಿಗೆ ಅರ್ಜಿ ಹಾಕಿದ್ದಾನೆ. ರೇಣುಕಾಸ್ವಾಮಿ ಕೊಲೆಯ 17 ಆರೋಪಿಗಳ ಪೈಕಿ ನಿಖಿಲ್‌ ನಾಯಕ್‌ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್‌ನ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಬನ್ನೇರುಘಟ್ಟ ರಸ್ತೆ ಕೆಂಬತ್ತಹಳ್ಳಿ ನಿವಾಸಿ ನಿಖಿಲ್ ನಾಯಕ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ರೇಣುಕಾಸ್ವಾಮಿ ಕೊಲೆ ಬಳಿಕ ಪಟ್ಟಣಗೆರೆ ಶೆಡ್‌ನಿಂದ ಮೃತದೇಹವನ್ನು ಸಾಗಿಸಿದ್ದ ಆರೋಪ ಈತನ ಮೇಲಿದೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ಅದರಲ್ಲಿ ನಿಖಿಲ್‌ ನಾಯಕ್‌ ಸೇರಿ ರವಿಶಂಕರ್, ಕಾರ್ತಿಕ್, ಕೇಶವ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದರು. ಕೊಲೆ…

Read More

ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ದರ್ಶನ್ ಎಂಡ್ ಗ್ಯಾಂಗ್ ಸದಸ್ಯರು ಭರ್ಬರವಾಗಿ ಹತ್ಯೆ ಮಾಡಿದ್ದಾರೆ. ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಪೊಲೀಸರು ಸಾಕಷ್ಟು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಇನ್ನೂ ದರ್ಶನ್ ಜೈಲು ಸೇರಿ ವಾರ ಕಳೆದಿದ್ದು ಜೈಲಿನಲ್ಲಿ ಒಂಟಿತನ ಅನುಭವಿಸುತ್ತಿದ್ದಾರೆ. ಈ ಮಧ್ಯೆ ದಾಸನಿಗೆ ತಮ್ಮ ಹಾಗೂ ತಾಯಿಯ ನೆನಪು ಆಗುತ್ತಿದೆಯಂತೆ. ವಾರದಲ್ಲಿ ಎರಡು ಬಾರಿ ದರ್ಶನ್‌ ಅವರನ್ನು ಮಾತನಾಡಿಸಲು ಪೊಲೀಸರು ಅವಕಾಶ ನೀಡಿದ್ದಾರೆ. ಈಗಾಗಲೇ ದರ್ಶನ್ ಪತ್ನಿ ಮತ್ತು ಪುತ್ರ ಅವರನ್ನು ನೋಡಿಕೊಂಡು ಹೋಗಿದ್ದಾರೆ. ಇದಾದ ನಂತರ ದರ್ಶನ್ ಬೇರೆ ಯಾರನ್ನೂ ನೋಡಲು ಮನಸ್ಸು ಮಾಡ್ತಿಲ್ಲ. ಆದರೆ ತಾಯಿ,ತಮ್ಮ ಬಂದರೆ ಮಾತ್ರ ಅವಕಾಶ ನೀಡಿ ಎಂದು ಜೈಲು ಅಧಿಕಾರಿಗಳ ಬಳಿ ಕೇಳಿಕೊಂಡಿದ್ದಾರಂತೆ. ದರ್ಶನ್ ಈ ಪ್ರಕರಣಕ್ಕೂ ಮುನ್ನ ತಾಯಿ ಮತ್ತು ತಮ್ಮನಿಂದ ಅಂತರ ಕಾಯ್ದುಕೊಂಡಿದ್ದರು ಎನ್ನಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿದ್ದಾಗ , ತಾಯಿ ಮೀನಾ ಆಗಲಿ, ತಮ್ಮ ದಿನಕರ್ ಆಗಲಿ ದರ್ಶನ್ ನೋಡಲು…

Read More

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಕಳೆದ ಐದು ದಿನಗಳ ಹಿಂದಷ್ಟೇ ಪ್ರೇಮಿ ಜಹೀರ್ ಇಕ್ಬಾಲ್ ಅವರನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ ಹೊಸತರಲ್ಲೇ ನಟಿ ತಮ್ಮ ಪತಿಯ ಜೊತೆ ಆಸ್ಪತ್ರೆಯೊಂದರ ಹೊರಗೆ ಕಾಣಿಸಿಕೊಂಡಿದ್ದು ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.ಸೋನಾಕ್ಷಿ ಗರ್ಭಿಣಿಯೇ ಎಂಬ ಸಂಶಯ ನೆಟ್ಟಿಗರಲ್ಲಿ ಶುರುವಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಯ ಹೊರಗೆ ನಟಿ ಸೋನಾಕ್ಷಿ ಅವರು ತಮ್ಮ ಪತಿ ಜಹೀರ್ ಅವರ ಜೊತೆ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ವೇಳೆ ಕೆಲವರು ಅವರನ್ನು ಪೋಟೊಗಳಲ್ಲಿ ಸೆರೆ ಹಿಡಿದಿದ್ದಾರೆ. ದಂಪತಿ ಪೋಟೊಗಳಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಕಂಡುಬಂದಿದೆ. ಈ ವಿಡಿಯೊ ಹಾಗೂ ಪೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು, ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿಯೇ ಎಂಬ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಈ ಹಿಂದೆ ಬಾಲಿವುಡ್ ನಟಿಯರಾದ ಆಲಿಯಾ ಭಟ್, ಸ್ವರಾ ಭಾಸ್ಕರ್ ಅವರು ತಮ್ಮ ಮದುವೆಯಾದ ಕೆಲವೇ ದಿನಗಳಲ್ಲಿ ತಾವು ಗರ್ಭಿಣಿ ಎಂದು ಘೋಷಣೆ ಮಾಡಿದ್ದರು, ಹೀಗಾಗಿ ಈ ಸುದ್ದಿ ಹರಿದಾಡಿದೆ. ಸದ್ಯದಲ್ಲೇ ಸೋನಾಕ್ಷಿ ಕೂಡ ಗರ್ಭಿಣಿ ಎಂದು…

Read More

ಮಾಲ್ಡೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝು ಅವರ ಮೇಲೆ ‘ಮಾಟಮಂತ್ರ’ ಮಾಡದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಾಲ್ಡೀವ್ಸ್ ಸಚಿವರೊಬ್ಬರನ್ನ ಬಂಧಿಸಲಾಗಿದೆ. ಮಾಲ್ಡೀವ್ಸ್’ನ ಪರಿಸರ, ಹವಾಮಾನ ಬದಲಾವಣೆ ಮತ್ತು ಇಂಧನ ಸಚಿವ ಫಾತಿಮತ್ ಶಮ್ನಾಜ್ ಅಲಿ ಸಲೀಮ್ ಮತ್ತು ಇತರ ಇಬ್ಬರನ್ನ ರಾಜಧಾನಿ ಮಾಲೆಯಿಂದ ಭಾನುವಾರ ಬಂಧಿಸಲಾಗಿದೆ ಎಂದು ಮಾಲ್ಡೀವ್ಸ್ ಪೊಲೀಸರು ಮಾಹಿತಿ ನೀಡಿದ್ದಾರೆ. ತನಿಖೆ ಬಾಕಿ ಇರುವ ಕಾರಣ ಶಮ್ನಾಜ್ ಅವರನ್ನ ಒಂದು ವಾರ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. “ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು ಅವರ ಮೇಲೆ ಮಾಟಮಂತ್ರ ಮಾಡಿದ್ದಕ್ಕಾಗಿ ಶಮ್ನಾಜ್ ಅವರನ್ನ ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Read More

ಇರಾನ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದ ಅಮೀರ್‌ ಹೊಸೇನ್ ಘಜೀಜಾದೇ ಹಾಶಿಮಿ ಅವರು ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಮಾಧ್ಯಮ ವರದಿ ಮಾಡಿದೆ. 53 ವರ್ಷದ ಅಮೀರ್‌ ಹೊಸೇನ್ ಘಜೀಜಾದೇ ಹಾಶಿಮಿ ಅವರು ಇಬ್ರಾಹಿಂ ರೈಸಿ ಅವರ ಆಡಳಿತದಲ್ಲಿ ಉಪಾಧ್ಯಕ್ಷರುಗಳಲ್ಲಿ ಒಬ್ಬರಾಗಿದ್ದರು. 2021ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು ಸುಮಾರು 10 ಲಕ್ಷ ಮತಗಳೊಂದಿಗೆ ಕೊನೆಯ ಸ್ಥಾನ ಗಳಿಸಿದ್ದರು. ಇರಾನ್ ಅಧ್ಯಕ್ಷರ ಚುನಾವಣೆಯಲ್ಲಿ ಇದುವರೆಗೂ ಆರು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು. ಇದೀಗ ಹಾಶಿಮಿ ಅವರು ಹಿಂದೆ ಸರಿದಿರುವುದರಿಂದ ಕಣದಲ್ಲಿ ಐವರು ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ. ಇರಾನ್ ಅಧ್ಯಕ್ಷರಾಗಿದ್ದ ಇಬ್ರಾಹಿಂ ರೈಸಿ ಅವರು ಮೇ ತಿಂಗಳಲ್ಲಿ ನಡೆದಿದ್ದ ಹೆಲಿಕಾಪ್ಟರ್‌ ಅಪಘಾತದಲ್ಲಿ ಮೃತಪಟ್ಟಿದ್ದರು.

Read More

ಕಳೆದ ಕೆಲ ದಿನಗಳಿಂದ ಹೊಸ ತೆರಿಗೆ ಹಾಗೂ ವಿವಾದಾತ್ಮಕ ಹಣಕಾಸು ಮಸೂದೆ ವಿರೋಧಿಸಿ ಕಿನ್ಯಾದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಏಕಾಏಕಿ ಪ್ರತಿಭಟನಾಕಾರರು ಸಂಸತ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಯಲ್ಲಿ 22 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದರು. ಕೊನೆಗೂ ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಸರ್ಕಾರ ತೆರಿಗೆ ಹೆಚ್ಚಳ ಯೋಜನೆ ಸ್ಥಗಿತಗೊಳಿಸಿದೆ. ದೇಶಾದ್ಯಂತ ನಡೆದ ವ್ಯಾಪಕ ಪ್ರತಿಭಟನೆಯ ಹಿನ್ನೆಲೆಯಲ್ಲಿ ವಿವಾದಾತ್ಮಕ ತೆರಿಗೆ ಹೆಚ್ಚಳ ಮಸೂದೆಯನ್ನು ವಾಪಾಸು ಪಡೆಯುವುದಾಗಿ ಕೆನ್ಯಾದ ಅಧ್ಯಕ್ಷ ವಿಲಿಯಂ ರೂಟೊ ಹೇಳಿದ್ದಾರೆ. ತೆರಿಗೆ ಹೆಚ್ಚಳ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸಂಸತ್‍ಗೆ ಬೆಂಕಿ ಹಚ್ಚಲಾಗಿತ್ತು. ಬುಧವಾರ ದೇಶವನ್ನುದ್ದೇಶಿಸಿ ಮಾತನಾಡಿದ ರೂಟೊ `ಕಿನ್ಯಾ ಜನತೆಗೆ ಈ ಮಸೂದೆ ಒಪ್ಪಿಗೆಯಿಲ್ಲ ಎಂಬುದು ಸ್ಪಷ್ಟವಾಗಿದೆ. ಇದನ್ನು ನಾನು ಒಪ್ಪಿಕೊಂಡಿದ್ದು ಮಸೂದೆಗೆ ಸಹಿ ಹಾಕುವುದಿಲ್ಲ ಮತ್ತು ಅದು ಈಗ ಕಾನೂನಿನ ರೂಪ ಪಡೆಯುವುದಿಲ್ಲ. ಮಸೂದೆಯ ಬಗ್ಗೆ ಯುವಜನತೆಯೊಂದಿಗೆ ಸಂವಾದ ನಡೆಸಲಾಗುವುದು ‘ ಎಂದು ಹೇಳಿದ್ದಾರೆ. ತೆರಿಗೆ ಹೆಚ್ಚಳ ಮಸೂದೆ ವಿರೋಧಿಸಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಕನಿಷ್ಟ 22…

Read More

ಭೂಮಿಗೆ ಗೋಚರಿಸದ ಚಂದಿರನ ಮತ್ತೊಂದು ಬದಿಯಿಂದ 2 ಕೇಜಿ ಕಲ್ಲು ಹಾಗೂ ಮಣ್ಣನ್ನು ಹೊತ್ತು ಚೀನಾದ ಚಾಂಗ್‌-6 ಚಂದ್ರಯಾನ ನೌಕೆ ಯಶಸ್ವಿಯಾಗಿ ಭೂಮಿಗೆ ಬಂದಿಳಿದಿದೆ. ಈವರೆಗೂ ಹೆಚ್ಚು ಸಂಶೋಧನೆಯಾಗದ ಚಂದಿರನ ಮತ್ತೊಂದು ಬದಿಯಿಂದ ಮಾದರಿಗಳನ್ನು ಸಂಗ್ರಹಿಸಿ ತರುವ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೊದಲ ದೇಶ ಎಂಬ ಹಿರಿಮೆಗೆ ಚೀನಾ ಪಾತ್ರವಾಗಿದೆ. ಉತ್ತರ ಚೀನಾದ ಮಂಗೋಲಿಯಾ ಸ್ವಾಯತ್ತ ಪ್ರದೇಶದಲ್ಲಿರುವ ನಿಗದಿತ ಪ್ರದೇಶದಲ್ಲಿ ಮಧ್ಯಾಹ್ನ 2.07 (ಬೀಜಿಂಗ್‌ ಸಮಯ) ಚೀನಾದ ಚಾಂಗ್‌-6 ನೌಕೆ ಬಂದಿಳಿದಿದೆ. ಈ ಯಾನ ಯಶಸ್ವಿಯಾಗಿದೆ ಎಂದು ಚೀನಾದ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ (ಸಿಎನ್‌ಎಸ್‌ಎ) ಘೋಷಣೆ ಮಾಡಿದ್ದು, ವಿಜ್ಞಾನಿಗಳನ್ನು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅಭಿನಂದಿಸಿದ್ದಾರೆ. 2023ರ ಆಗಸ್ಟ್‌ನಲ್ಲಿ ಭಾರತ ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ ನೌಕೆ-3 ಇಳಿಸಿತ್ತು. ಆದರೆ ಚೀನಾ ಚಂದಿರನ ಮತ್ತೊಂದು ಬದಿಯಲ್ಲಿ ನೌಕೆ ಇಳಿಸಿರುವ ಏಕೈಕ ದೇಶವಾಗಿದೆ. 2019ರಲ್ಲೂ ಆ ದೇಶ ಇದೇ ಸಾಧನೆ ಮಾಡಿತ್ತು. ಭೂಮಿಗೆ ಗೋಚರವಾಗುವ ಚಂದಿರನ ಭಾಗಕ್ಕೆ ಹೋಲಿಸಿದರೆ, ಮತ್ತೊಂದು…

Read More