Author: Author AIN

ನಾವು ಭಾರತದ ಜೊತೆಗಿದ್ದೇವೆ. ಪಾಕಿಸ್ತಾನ ಯಾವಾಗಲೂ ಉತ್ತಮ ನೆರೆಹೊರೆ ಸಂಬಂಧಗಳನ್ನು ಬಯಸುತ್ತದೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಭಾರತದೊಂದಿಗಿನ ಸಂಬಂಧದ ಬಗ್ಗೆ ತಮ್ಮ ಹಿಂದಿನ ಹೇಳಿಕೆಗಳನ್ನು ಪುನರುಚ್ಚರಿಸಿದರು. ಪಾಕಿಸ್ತಾನವು ಯಾವಾಗಲೂ ಭಾರತದೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಉತ್ಸುಕವಾಗಿದೆ ಎಂದರು. ಭಾರತದೊಂದಿಗಿನ ನಮ್ಮ ಸಂಬಂಧವು ಐತಿಹಾಸಿಕವಾಗಿ ಕಳಪೆಯಾಗಿದೆ. ಆದರೆ ಪಾಕಿಸ್ತಾನವು ಶಾಶ್ವತ ಹಗೆತನವನ್ನು ಬಯಸುವುದಿಲ್ಲ. ಪರಸ್ಪರ ಗೌರವ, ಸಾರ್ವಭೌಮ ಸಮಾನತೆ ಮತ್ತು ದೀರ್ಘಕಾಲದ ಜಮ್ಮು ಮತ್ತು ಕಾಶ್ಮೀರ ವಿವಾದದ ನ್ಯಾಯಯುತ ಮತ್ತು ಶಾಂತಿಯುತ ಪರಿಹಾರದ ಆಧಾರದ ಮೇಲೆ ನಾವು ಭಾರತದೊಂದಿಗೆ ಉತ್ತಮ ನೆರೆಯ ಸಂಬಂಧಗಳನ್ನು ಬಯಸುತ್ತೇವೆ ಎಂದಿದ್ದಾರೆ. ಇದೇ ವೇಳೆ ಎರಡು ಪರಮಾಣು ಸಶಸ್ತ್ರ ನೆರೆಹೊರೆಯವರ ನಡುವಿನ ದ್ವಿಪಕ್ಷೀಯ ಸಂಬಂಧಗಳ ಭವಿಷ್ಯವನ್ನು ಗಂಭೀರವಾಗಿ ಪರಿಗಣಿಸುವಂತೆ ಮೋದಿ ಸರ್ಕಾರಕ್ಕೆ ಕರೆ ನೀಡಿದ್ದಾರೆ.

Read More

ರಾಕಿಂಗ್ ಸ್ಟಾರ್ ಯಶ್ ನಟನೆಯ ಕಿರಾತಕ ಸಿನಿಮಾದಲ್ಲಿ ನಟಿಸಿದ್ದ ನಟಿ ಓವಿಯಾ ಪತ್ತೆ ಇಲ್ಲದಂತಾಗಿದ್ದಾರೆ. ಈಕೆಗೆ ಚಿತ್ರರಂಗದಲ್ಲಿ ಡಿಮ್ಯಾಂಡ್ ಕಮ್ಮಿಯಾಗಿದೆ. ಆದರೆ ತಮ್ಮ ವಿವಾದಿತ ಸ್ಟೇಟ್ ಮೆಂಟ್ ಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಸಂದರ್ಶನವೊಂದರಲ್ಲಿ ಓವಿಯಾ ತಮ್ಮ ರಿಲೇಷನ್‌ಶಿಪ್, ಬ್ರೇಕಪ್ ಬಗ್ಗೆ ಮಾತನಾಡಿದ್ದಾರೆ. ಪ್ರೀತಿಯಲ್ಲಿ ಬಿದ್ದು ಮೋಸ ಹೋಗ್ತಾರೆ. ನಾನು ಕೂಡ ಈ ಮೊದಲು ರಿಲೇಷನ್‌ಶಿಪ್‌ನಲ್ಲಿದ್ದೆ. ಅದ್ಯಾವುದೂ ಕೈಗೂಡಲಿಲ್ಲ. ಕೆಲವರು ಹಣಕ್ಕಾಗಿ ಮೋಸ ಮಾಡುತ್ತಾರೆ. ಇನ್ಮುಂದೆ ಲಿವಿಂಗ್ ಟುಗೆದರ್ ಸಂಬಂಧವನ್ನು ನಾನು ನಂಬುವುದಿಲ್ಲ. ನಿಮಗೆ ಅನಿಸಿದನ್ನು ನೀವು ಮಾಡಿ ಎಂದಿದ್ದಾರೆ. ಪರ್ಸನಲ್ ವಿಚಾರಕ್ಕೆ ನಾವೆಂದೂ ತೊಂದರೆ ಕೊಡಬಾರದು ಎಂದು ಓವಿಯಾ ಹೇಳಿದ್ದಾರೆ. ತಮಿಳಿನ ವಿಜಯ್ ಚಾನೆಲ್‌ನಲ್ಲಿ ಪ್ರಸಾರವಾದ ಬಿಗ್‌ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ಈ ಬಹುಭಾಷಾ ನಟಿ ತಮ್ಮ ಸ್ಪೆಷಲ್ ಮ್ಯಾನರಿಸಂನಿಂದ ಹೆಸರು ಮಾಡಿದ್ದರು. ಅಷ್ಟೇ ಅಲ್ಲ ಸಹ ಸ್ಪರ್ಧಿ ಆರವ್ ಜೊತೆಗಿನ ಸಂಬಂಧದ ಕಾರಣವೂ ಚರ್ಚೆಗೆ ಗ್ರಾಸಿವಾಗಿದ್ದಲ್ಲೇ, ಒಂದು ಸಂದರ್ಭದಲ್ಲಿ ಆತ್ಮಹತ್ಯೆಗೂ ಯತ್ನಿಸಿದ್ದರೆಂಬ ಸುದ್ದಿ ಹರಿದಾಡಿತ್ತು. ಬಿಗ್‌ಬಾಸ್‌ನಲ್ಲಿ ವೀಕ್ಷಕರ…

Read More

ಕನ್ನಡದ ಹುಡುಗಿ ನಟಿ ಶ್ರೀಲೀಲಾಗೆ ಅದೃಷ್ಟ ಒಲಿದ ಹಾಗಿದೆ. ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಬಳಿಕ ಶ್ರೀಲೀಲಾಗೆ ಬಾಲಿವುಡ್ ಬಾಗಿಲು ತೆರೆದಿದೆ. ಸೌತ್‌ನಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿರುವ ಶ್ರೀಲೀಲಾ ಇದೀಗ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಮೊದಲ ಸಿನಿಮಾದಲ್ಲೇ ಸ್ಟಾರ್ ನಟನಿಗೆ ಜೋಡಿಯಾಗುವ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಶ್ರೀಲೀಲಾ ಸೌಂದರ್ಯದ ಜೊತೆಗೆ ನಟನೆ, ಡ್ಯಾನ್ಸ್ ನಲ್ಲೂ ಸೈ ಎನಿಸಿಕೊಂಡಿದ್ದಾರೆ. ಇದೇ ಕಾರಣಕ್ಕೆ ಈಕೆಯ ಹಿಂದೆ ಸ್ಟಾರ್ ನಿರ್ದೇಶಕರು ಬಿದಿದ್ದಾರೆ. ಟಾಲಿವುಡ್ ನಲ್ಲಿ ಸಖತ್ ಬ್ಯುಸಿಯಾಗಿರೋ ಶ್ರೀಲೀಲಾ ಇದೀಗ ಬಾಲಿವುಡ್ ಗೆ ಎಂಟ್ರಿಕೊಡ್ತಿದ್ದಾರೆ. ಸ್ಟಾರ್ ನಟ ವರುಣ್ ಧವನ್ ಜೊತೆ ನಟಿಸಲು ಶ್ರೀಲೀಲಾಗೆ ಆಫರ್ ನೀಡಲಾಗಿದೆ. ಚಿತ್ರದ ಕಥೆ ಕೇಳಿ ಥ್ರಿಲ್ ಆಗಿರೋ ಶ್ರೀಲೀಲಾ ಆಲ್ ಮೋಸ್ಟ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಇದೇ ಚಿತ್ರದಲ್ಲಿ ನಟಿ ಮೃಣಾಲ್ ಠಾಕೂರ್ ಕೂಡ ಕಾಣಿಸಿಕೊಳ್ತಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಇದೊಂದು…

Read More

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಹಾಗೂ ನಟಿ ಝಹೀರ್ ಇಕ್ಬಾಲ್ ಎರಡು ದಿನಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂನ್ 23ರಂದು ಆಪ್ತರ ಸಮ್ಮುಖದಲ್ಲಿ ಸಿಂಪಲ್ ಆಗಿ ಜೋಡಿ ಮದುವೆಯಾಗಿದ್ದಾರೆ. ಈ ಬೆನ್ನಲ್ಲೇ ನಟಿಗೆ ಪತಿ ಝಹೀರ್ ದುಬಾರಿ ಕಾರ್‌ವೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಮದುವೆಯಾದ ಎರಡೇ ದಿನಕ್ಕೆ ಪತ್ನಿ ಸೋನಾಕ್ಷಿಗೆ BMW i7 ಕಾರನ್ನು ಝಹೀರ್ ಉಡುಗೊರೆಯಾಗಿ ನೀಡಿದ್ದಾರೆ. ಈ ಕಾರಿನ ಬೆಲೆ 2 ಕೋಟಿ ರೂ.ಗಿಂತ ಅಧಿಕ ಮೌಲ್ಯದಾಗಿದ್ದು, ಪತಿಯ ಗಿಫ್ಟ್‌ ನೋಡಿ ಸೋನಾಕ್ಷಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸೋನಾಕ್ಷಿ ಹಾಗೂ ಝಹೀರ್ ಇಬ್ಬರೂ ಬೇರೆ ಬೇರೆ ಧರ್ಮವಾಗಿರುವ ಕಾರಣ ಕಾನೂನಾತ್ಮಕವಾಗಿ ವಿವಾಹ ನೋಂದಣಿ ಮಾಡಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ 7 ವರ್ಷಗಳಿಂದ ಪ್ರೀತಿಸುತ್ತಿದ್ದ ಸೋನಾಕ್ಷಿ , ಝಹೀರ್ ಇದೀಗ ಇಬ್ಬರ ಮನೆಯಲ್ಲೂ ಒಪ್ಪಿಗೆ ಪಡೆದು ಸತಿ ಪತಿಗಳಾಗಿದ್ದಾರೆ. “ಏಳು ವರ್ಷಗಳ ಹಿಂದೆ (23.06.2017) ಇದೇ ದಿನ, ನಾವು ಪರಸ್ಪರರ ಕಣ್ಣುಗಳಲ್ಲಿ ಪ್ರೀತಿಯನ್ನು ಅದರ ಶುದ್ಧ ರೂಪದಲ್ಲಿ ನೋಡಿದ್ದೇವೆ…

Read More

ಸದ್ಯ ಬುಜ್ಜಿ ಹೆಸರು ಸಖತ್ ಟ್ರೆಂಡಿಂಗ್ ನಲ್ಲಿದೆ. ಅಂದ ಹಾಗೆ ಇದು ಇಷ್ಟೊಂದು ಸದ್ದು ಮಾಡುತ್ತಿರುವುದಕ್ಕೆ ಕಾರಣ ಡಾರ್ಲಿಂಗ್ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಸೇರಿದಂತೆ ಸಾಕಷ್ಟು ಸ್ಟಾರ್ ನಟರು ನಟಿಸಿರುವ ಕಲ್ಕಿ 2898 AD ಸಿನಿಮಾ. ಡಾರ್ಲಿಂಗ್​ ಪ್ರಭಾಸ್ ನಟನೆಯ ಕಲ್ಕಿ 2898 AD ಪ್ರೇಕ್ಷಕರಲ್ಲಿ ಬಹುನಿರೀಕ್ಷೆ ಹುಟ್ಟು ಹಾಕುತ್ತಿದೆ. ಈಗಾಗಲೇ ಟೀಸರ್ ಹಾಗೂ ಟ್ರೈಲರ್​ ಮೂಲಕ ಗಮನ ಸೆಳೆದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಇದೇ ಜೂನ್ 27ರಂದು ವಿಶ್ವದಾದಂತ್ಯ ರಿಲೀಸ್​ಗೆ ಸಿದ್ಧವಾಗಿದೆ. ಕನ್ನಡ, ‌ತೆಲುಗು, ಹಿಂದಿ, ತಮಿಳು, ಮಲಯಾಳಂ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಕಲ್ಕಿ 2898 AD ಸಿನಿಮಾ ತೆರೆಗೆ ಬರಲಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಲ್ಕಿ 2898 AD ಸಿನಿಮಾದಲ್ಲಿ ಮುಖ್ಯವಾಗಿ ಹೈಲೈಟ್ ಚಿತ್ರದಲ್ಲಿ ಬಳಸಲಾಗಿರುವು ಬುಜ್ಜಿ ಕಾರು. ಈ ಕಾರು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸುದ್ದಿಯಾಗುತ್ತಿದೆ. ಕಲ್ಕಿ 2898 ಎಡಿ ಚಿತ್ರಕ್ಕಾಗಿಯೇ ಈ ಕಾರನ್ನು ವಿಶೇಷವಾಗಿ ನಿರ್ಮಿಸಲಾಗಿದೆ. ಮೂರು ಚಕ್ರವನ್ನು…

Read More

ಅಂಬಾನಿ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ವಿವಾಹ ಪೂರ್ವ ಕಾರ್ಯಕ್ರಮ ಇತ್ತೀಚೆಗೆ ಅದ್ಧೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಆಲಿಯಾ ಭಟ್ ಹಾಗೂ ರಣ್‌ಬೀರ್ ಕಪೂರ್ ಕೂಡ ಭಾಗಿಯಾಗಿದ್ರು. ಇಬ್ಬರೂ ಕಾರ್ಯಕ್ರಮದಲ್ಲಿ ಮಿಂಚಿದ್ದು ಅವುಗಳ ಸುಂದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅನಂತ್ ಅಂಬಾನಿ, ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಮಗಳು ರಾಹಾ ಜೊತೆ ಆಲಿಯಾ ದಂಪತಿ ಹಾಜರಿ ಹಾಕಿದ್ದರು. ಕಪ್ಪು ಪ್ಯಾಂಟ್, ವೈಟ್ ಶರ್ಟ್‌ಗೆ ನೇರಳೆ ಬಣ್ಣದ ಕೋಟ್ ಅನ್ನು ರಣ್‌ಬೀರ್ ಧರಿಸಿದ್ರೆ, ಆಲಿಯಾ ಲೈಟ್ ಬಣ್ಣದ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಇದೀಗ ತಡವಾಗಿ ಕಾರ್ಯಕ್ರಮದ ಫೋಟೋವನ್ನು ನಟಿ ಶೇರ್ ಮಾಡಿದ್ದಾರೆ. ಇನ್ನೂ ಸಿನಿಮಾಗಳ ವಿಚಾರಕ್ಕೆ ಬಂದ್ರೆ ಆಲಿಯಾ ಭಟ್ ಹಾಗೂ ರಣಬೀರ್ ಹಲವು ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿದ್ದಾರೆ. ರಾಮಾಯಣ, ಅನಿಮಲ್ 2 ಸೇರಿದಂತೆ ಹಲವು ಸಿನಿಮಾಗಳು ರಣಬೀರ್ ಕೈಯಲ್ಲಿವೆ. ನಟಿ ಆಲಿಯಾ ಭಟ್ ಮಗಳ ಜೊತೆಗೆ ಸಿನಿಮಾದ ಕೆಲಸಗಳನ್ನು ಮ್ಯಾನೇಜ್ ಮಾಡುತ್ತಿದ್ದಾರೆ. ಮಗಳು ದೊಡ್ಡವಳಾಗುತ್ತಿದ್ದು ಹೆಚ್ಚಿನ ಸಮಯವನ್ನು…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.  ಘಟನೆಯ ಬಳಿಕ ಸಾಕಷ್ಟು ಮಂದಿ ದರ್ಶನ್ ಅವರ ಹಿಂದಿನ ದಿನಗಳ ಮೆಲುಕು ಹಾಕಿದ್ದಾರೆ. ಇದೀಗ ನಿರ್ದೇಶಕ ಓಂ ಪ್ರಕಾಶ್ ರಾವ್ ಕೂಡ ತಾವು ಅಂದು ಆಡಿದ ಮಾತಿನಿಂದ ನನ್ನ ಹಾಗೂ ದರ್ಶನ್ ಸ್ನೇಹ ಕೊನೆಯಾಯ್ತು ಅನ್ನೋದನ್ನ ಹೇಳಿದ್ದಾರೆ. 2004 ರಿಂದ 2011ರವರೆಗೂ ದರ್ಶನ್‌ ಅವರ ಆಪ್ತ ವಲಯದ ಸ್ನೇಹಿತರದಲ್ಲಿ ಗುರುತಿಸಿಕೊಂಡಿದ್ದವರಲ್ಲಿ ಓಂಪ್ರಕಾಸ್‌ ರಾವ್‌ ಕೂಡ ಒಬ್ಬರು, ಕಲಾಸಿಪಾಳ್ಯ ಚಿತ್ರದ ಜೊತೆಗೆ ದರ್ಶನ್‌ ಜೊತೆ ಅಣ್ಣಾವ್ರು, ಅಯ್ಯ, ಮಂಡ್ಯ, ಯೋಧ ಹಾಗೂ ಪ್ರಿನ್ಸ್‌ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಯೋಧ ಹಾಗೂ ಪ್ರಿನ್ಸ್‌ ಚಿತ್ರದಲ್ಲಿ ದರ್ಶನ್‌ಗೆ ಜೋಡಿಯಾಗಿ ನಟಿ ನಿಕಿತಾ ತುಕ್ರಾಲ್‌ ಕಾಣಿಸಿಕೊಂಡಿದ್ದರು. ಆದರೆ ಇವರಿಬ್ಬರ ಸಂಬಂಧದಿಂದ ಈ ಮೊದಲು ದರ್ಶನ್ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ದರ್ಶನ್ ಹಾಗೂ ನಮ್ಮಿಬ್ಬರ ಸಂಬಂಧ ಹಾಳಾಗಲು ಸ್ವತಃ ನಟಿ ನಿಖಿತಾ ತುಕ್ರಾಲ್ ಕಾರಣ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೇಳಿಕೆ ನೀಡಿದ್ದರು. ಇದೀಗ ಈ…

Read More

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಅತ್ತ ಜೈಲು ಸೇರ್ತಿದ್ದಂಗೆ ಇತ್ತ ಅವರನ್ನ ನಂಬಿಕೊಂಡಿರೋ ನಿರ್ಮಾಪಕರು ಫುಲ್ ಟೆಂನ್ಷನ್ ಆಗಿದ್ದಾರೆ. ಈ ಮಧ್ಯೆ ಬಿಗ್ ಬಾಸ್ ಖ್ಯಾತಿಯ ನಟ ವಿನಯ್ ಗೆ ಅದೊಂದು ಚಿಂತೆ ಕಾಡೋಕೆ ಶುರುವಾಗಿದೆಯಂತೆ. ‘ಬಿಗ್ ಬಾಸ್’ ಮನೆಗೆ ಹೋಗಿ ಬಂದ ಬಳಿಕ ವಿನಯ್ ಗೌಡಗೆ ಸಾಕಷ್ಟು ಸಿನಿಮಾಗಳ ಆಫರ್ ಬರ್ತಿವೆಯಂತೆ. ಅದರಲ್ಲಿ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕೂಡ ಒಂದು. ಇದೀಗ ಸಿನಿಮಾ ಕಂಪ್ಲಿಟ್ ಆಗುತ್ತಾ, ಇಲ್ವಾ ಅಂತ ಚಿತ್ರತಂಡ ತಲೆಬಿಸಿ ಮಾಡಿಕೊಂಡಿದೆ. ಇದರ ನಡುವೆ ಡೆವಿಲ್ ಸಿನಿಮಾ ಬಗ್ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ವಿನಯ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಬಿಗ್ ಬಾಸ್‌ನಿಂದ ಬಂದ್ಮೇಲೆ ‘ಡೆವಿಲ್’ ನಾನು ನಟಿಸಿದ ಪ್ರಾಜೆಕ್ಟ್. ‘ಡೆವಿಲ್’ ಡೈರೆಕ್ಟರ್ ಮಿಲನ ಪ್ರಕಾಶ್ ಅವರ ನಿರ್ಮಾಣದ ಧಾರಾವಾಹಿಗಳಲ್ಲಿ ನಾನು ನಟಿಸಿದ್ದೇನೆ. ನನ್ನ ನಟನೆ ಏನು ಅಂತ ಅವರು ನೋಡಿದ್ದರು. ಹಾಗಾಗಿ ನನ್ನ ಕರೆಸಿ ನೆಗೆಟಿವ್ ಶೇಡ್ ಪಾತ್ರ ಇದೆ,…

Read More

ಧರ್ಮದ ಹೆಸರಿನಲ್ಲಿ ಪಾಕಿಸ್ಥಾನದ ಅಲ್ಪಸಂಖ್ಯಾಕರು ಹಿಂಸೆಗೆ ಒಳಗಾಗುತ್ತಿದ್ದಾರೆ. ಅವರನ್ನು ರಕ್ಷಿಸುವಲ್ಲಿ ಸರಕಾರ ವಿಫ‌ಲವಾಗಿದೆ ಎಂದು ಪಾಕಿಸ್ಥಾನದ ರಕ್ಷಣ ಸಚಿವ ಖ್ವಾಜಾ ಆಸಿಫ್ ಕಳವಳ ವ್ಯಕ್ತಪಡಿಸಿದ್ದಾರೆ. ಪಾಕಿಸ್ಥಾನದ ಸಂಸತ್‌ನಲ್ಲಿ ಮಾತನಾಡಿದ ಅವರು, ದಿನೇದಿನೆ ಅಲ್ಪಸಂಖ್ಯಾಕರನ್ನು ಹತ್ಯೆ ಮಾಡಲಾಗುತ್ತಿದೆ. ಮುಸ್ಲಿಂ ಸಮುದಾಯದ ಸಣ್ಣ ಪಂಗಡಗಳೂ ಸೇರಿದಂತೆ ಪಾಕಿಸ್ಥಾನದಲ್ಲಿ ಯಾವುದೇ ಅಲ್ಪಸಂಖ್ಯಾಕರು ಸುರಕ್ಷಿತವಾಗಿಲ್ಲ. ಇದು ದೇಶಕ್ಕೆ ಮಜು ಗರದ ವಿಚಾರ ವಾಗಿದೆ. ಸಂತ್ರಸ್ತರು ಧರ್ಮನಿಂದನೆ ಮಾಡದಿದ್ದರೂ, ಅವರ ಮೇಲೆ ಅಂಥ ಆರೋಪ ಹೊರಿಸಿ ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಕೊಲ್ಲಲಾಗುತ್ತದೆ ಎಂದು ವಿಷಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿರುವ ಅಲ್ಪ ಸಂಖ್ಯಾತರ ರಕ್ಷಣೆಗೆ ಮಸೂದೆ ರೂಪಿಸಬೇಕಿದೆ ಎಂದು ಹೇಳಿದ್ದಾರೆ.

Read More

ದೇಶದಿಂದ ಪರಾರಿಯಾಗಿ ವಿದೇಶದಲ್ಲಿರುವ ಇಬ್ಬರು ವಂಚಕರು ಒಂದೇ ಕಡೆ ಕಾಣಿಸಿಕೊಂಡಿದ್ದಾರೆ. ಐಪಿಎಲ್ ನ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಹಾಗೂ ಸುಸ್ತೀದಾರ ವಿಜಯ್ ಮಲ್ಯ, ಇಬ್ಬರೂ ಒಂದೇ ಸ್ಥಳದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ವಿಜಯ್ ಮಲ್ಯ ಪುತ್ರ ಸಿದ್ದಾರ್ಥ್ ಮಲ್ಯ ಹಾಗೂ ಜಾಸ್ಮಿನ್ ಮದುವೆ ಬ್ರಿಟನ್ ನಲ್ಲಿ ನಡೆದಿದೆ. ಈ ಮದುವೆಯಲ್ಲಿ ವಿಜಯ್ ಮಲ್ಯ ಜೊತೆ ಲಲಿತ್ ಮೋದಿ ಕೂಡ ಕಾಣಿಸಿಕೊಂಡಿದ್ದಾರೆ. ಹರ್ಟ್‌ಫೋರ್ಡ್‌ಶೈರ್‌ನಲ್ಲಿರುವ ವಿಜಯ್ ಮಲ್ಯ ಅವರ ಐಷಾರಾಮಿ ಎಸ್ಟೇಟ್‌ನಲ್ಲಿ ಸಿದ್ಧಾರ್ಥ ಮಲ್ಯ ಮತ್ತು ಜಾಸ್ಮಿನ್ ವಿವಾಹವಾದರು. ಈ ಜೋಡಿ ಈ ಹಿಂದೆ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದರು. ಈ ಬಳಿಕ ಹಿಂದೂ ಸಂಪ್ರದಾಯದಂತೆ ಹಸೆಮಣೆ ಏರಿದ್ದಾರೆ. ವಿಜಯ್ ಮಲ್ಯ 900 ಕೋಟಿಗೂ ಅಧಿಕ ಸಾಲವನ್ನು ಬ್ಯಾಂಕ್ ಗಳಿಗೆ ಪಾವತಿಸದೇ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿ ಭಾರತ ಬಿಟ್ಟು ಪರಾರಿಯಾಗಿದ್ದಾರೆ. ಮತ್ತೊಂದೆಡೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮಾಜಿ ಮುಖ್ಯಸ್ಥ ಲಲಿತ್ ಮೋದಿ ತೆರಿಗೆ ವಂಚನೆ, ಅಕ್ರಮ ಹಣ ವರ್ಗಾವಣೆ ಮತ್ತು ಇತರ…

Read More