ಚೀನಾ ಮತ್ತು ಭಾರತದ ಸಂಬಂಧ ಹಳಸಿ ವರ್ಷಗಳೇ ಉರುಳುತ್ತಿವೆ. 4 ವರ್ಷಗಳ ಬಳಿಕ ಭಾರತ-ಚೀನಾ ಮಧ್ಯೆ ನೇರ ವಿಮಾನಯಾನ ಪುನರಾರಂಭಿಸಬೇಕೆಂದು ಚೀನಾ ಬೇಡಿಕೆ ಇಟ್ಟಿದ್ದು ಈ ಬೇಡಿಕೆಯನ್ನು ಭಾರತ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಮೊದಲು ಗಡಿ ವಿವಾದವನ್ನು ಪರಿಹರಿಸಿ ಬಳಿಕ ವಿಮಾನ ಸೇವೆ ಆರಂಭಿಸುವುದಾಗಿ ಹೇಳುವ ಮೂಲಕ ತಿರುಗೇಟು ನೀಡಿದೆ. 2020 ರಲ್ಲಿ ಭಾರತ-ಚೀನಾ ರಾಷ್ಟ್ರಗಳ ನಡುವೆ ಗಡಿ ಘರ್ಷಣೆ ಶುರುವಾಗಿತ್ತು. ವಿವಾದಿತ ಹಿಮಾಲಯದ ಗಡಿಯಲ್ಲಿ ನಡೆದ ಅತಿದೊಡ್ಡ ಮಿಲಿಟರಿ ಮುಖಾಮುಖಿಯಲ್ಲಿ 20 ಭಾರತೀಯ ಮತ್ತು ಕನಿಷ್ಠ ನಾಲ್ಕು ಚೀನೀ ಸೈನಿಕರು ಹತರಾಗಿದ್ದರು. ಆ ಬಳಿಕ ಭಾರತ-ಚೀನಾ ಸಂಬಂಧಗಳು ಉದ್ವಿಗ್ನವಾಗಿವೆ. ಘರ್ಷಣೆಯಲ್ಲಿ ಕೊಲ್ಲಲ್ಪಟ್ಟ ತಮ್ಮ ಸೈನಿಕರ ಸರಿಯಾದ ಸಾವಿನ ಸಂಖ್ಯೆಯನ್ನು ಚೀನಾ ಬಹಿರಂಗಪಡಿಸಿಲ್ಲ ಎಂಬ ಆರೋಪವಿದೆ. ಘರ್ಷಣೆಯ ನಂತರ, ಭಾರತವು ಚೀನಾದ ಕಂಪನಿಗಳಿಗೆ ಹೂಡಿಕೆ ಮಾಡಲು ಕಷ್ಟಕರವಾಗಿದೆ. ಭಾರತವು ನೂರಾರು ಜನಪ್ರಿಯ ಅಪ್ಲಿಕೇಶನ್ಗಳನ್ನು ನಿಷೇಧಿಸಿದೆ. ಪ್ರಯಾಣಿಕರ ಮಾರ್ಗಗಳನ್ನು ಕಡಿತಗೊಳಿಸಿದೆ, ಆದರೂ ನೇರ ಸರಕು ವಿಮಾನಗಳು ಏಷ್ಯಾದ ದೈತ್ಯರ ನಡುವೆ ಇನ್ನೂ ಕಾರ್ಯನಿರ್ವಹಿಸುತ್ತಿವೆ. ನೇರ…
Author: Author AIN
ರ್ಯಾಪರ್ ಚಂದನ್ ಶೆಟ್ಟಿ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ನಿವೇದಿತಾ ಸೋಷಿಯಲ್ ಮೀಡಿಯಾದಲ್ಲಿ ಅಂತರ ಕಾಯ್ದುಕೊಂಡಿದ್ದರು. ಕೆಲ ದಿನಗಳ ಕಾಲ ಸಾಮಾಜಿಕ ಜಾಲಾ ತಾಣದಿಂದ ದೂರವಿದ್ದ ನಟಿ ಇದೀಗ ಹೊಸ ರೀಲ್ಸ್ ಹಂಚಿಕೊಂಡಿದ್ದಾರೆ. ನಗುತ್ತಿರುವ ವಿಡಿಯೋವನ್ನು ನಟಿ ಶೇರ್ ಮಾಡಿದ್ದಾರೆ. 30 ಸಾವಿರಕ್ಕೂ ಅಧಿಕ ಲೈಕ್ಸ್ ಪಡೆದುಕೊಂಡಿದೆ. ಬಗೆ ಬಗೆಯ ಕಾಮೆಂಟ್ಗಳು ಹರಿದು ಬರುತ್ತಿದೆ. ಬಿಗ್ ಬಾಸ್ ಮನೆಯಲ್ಲಿದ್ದ ವೇಳೆ ಪ್ರೀತಿ ಮದುವೆಯಾಗಿದ್ದ ಚಂದನ್ ಹಾಗೂ ನಿವೇದಿತಾ ಮದುವೆಯಾದ ನಾಲ್ಕೇ ವರ್ಷಕ್ಕೆ ಡಿವೋರ್ಸ್ ಪಡೆದುಕೊಂಡಿದ್ದಾರೆ. ಜೂನ್ 7ರಂದು ಕಾನೂನು ಬದ್ಧವಾಗಿ ಪರಸ್ಪರ ಒಪ್ಪಂದದಿಂದ ಸಂಬಂಧ ಕೊನೆಗೊಳಿಸುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಚಂದನ್ ಮತ್ತು ನಿವೇದಿತಾ ಅನೌನ್ಸ್ ಮಾಡಿದ್ದರು. ನಾನು ಮತ್ತು ನಿವೇದಿತಾ ಮದುವೆಯಾಗಿ ನಾಲ್ಕು ವರ್ಷಗಳ ನಂತರ ಕಾನೂನುಬದ್ಧವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಸ್ವಂತ ಸಂತೋಷ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸುವುದು ಮುಖ್ಯ ಎಂದು ಅರ್ಥಮಾಡಿಕೊಳ್ಳುವ ಮೂಲಕ ನಾವು ನಮ್ಮ ಮದುವೆಯನ್ನು ಉತ್ತಮ ರೀತಿಯಲ್ಲಿ ಕೊನೆಗೊಳಿಸುತ್ತಿದ್ದೇವೆ. ಈ ಕಷ್ಟದ ಸಮಯದಲ್ಲಿ ನಾವು…
ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಜೈಲು ಸೇರಿದ್ದಾರೆ. ಸಾಕಷ್ಟು ದಿನಗಳ ವಿಚಾರಣೆ ಬಳಿಕ ಪವಿತ್ರಾ ಕೃತ್ಯದಲ್ಲಿ ಭಾಗಿಯಾಗಿರುವುದು ಕನ್ಪಾರ್ಮ್ ಆದ ಹಿನ್ನೆಲೆಯಲ್ಲಿ ಆಕೆಯನ್ನು ಜೈಲಿಗೆ ಕಳುಹಿಸಲಾಗಿದೆ. ಈ ವೇಳೆ ಜೈಲು ಪಾಲಾದ ಅಮ್ಮನನ್ನು ಕಂಡು ಪವಿತ್ರಾ ಗೌಡ ಮಗಳು ಖುಷಿ ಕಣ್ಣೀರು ಹಾಕಿದ್ದಾಳೆ. ವಿಚಾರಣೆ ನಡೆಸಿದ ನ್ಯಾಯಾಲಯವು ಪವಿತ್ರಾ ಗೌಡ ಸೇರಿ ಹಲವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿದೆ. ಕೋರ್ಟ್ನಲ್ಲಿ ವಿಚಾರಣೆ ಮುಗಿಸಿ ಪೊಲೀಸ್ ವ್ಯಾನ್ ಹತ್ತಿದಾಗ ಅವರನ್ನು ನೋಡಲು ಪುತ್ರಿ ಖುಷಿ ಗೌಡ ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್ ವ್ಯಾನ್ನ ಪಕ್ಕದಲ್ಲಿ ನಿಂತು ಮಾತನಾಡಿದರು. ಕೋರ್ಟ್ ಹೊರಗಡೆ ಪವಿತ್ರಾ ಗೌಡ ತಾಯಿ ಹಾಗೂ ಮಗಳು ಕಾಯುತ್ತಾ ನಿಂತಿದ್ದರು. ಪವಿತ್ರಾ ಗೌಡ ಕೋರ್ಟ್ನಿಂದ ಹೊರ ಬಂದು ಪೊಲೀಸ್ ವ್ಯಾನ್ ಹತ್ತುತ್ತಿದ್ದಂತೆಯೇ ಇಬ್ಬರು ಕೂಡ ಪವಿತ್ರಾ ಗೌಡ…
ಜೂನ್ 21 ರಂದು ಆಗಮದಲ್ಲಿ ಚಂದ್ರ ವಿಶೇಷವಾಗಿ ಗೋಚರಿಸಲಿದ್ದಾನೆ. ಹೌದು, ಜೂನ್ 21ಕ್ಕೆ ಸ್ಟ್ರಾಬೆರಿ ಮೂನ್ ಗೋಚರಿಸಲಿದೆ. ಪೂರ್ಣ ಚಂದಿರ ಆಗಸದಲ್ಲಿ ಕಾಣಿಸಲಿದ್ದು, ಬಣ್ಣದಲ್ಲೂ ಸಾಕಷ್ಟು ಬದಲಾವಣೆ ಕಾಣಿಸಲಿದೆ. ಬೇಸಿಗೆ ಕಾಲದ ಅಂತ್ಯ ಅಂದರೆ ಖಗೋಳ ಬೇಸಿಗೆ ಅಂತ್ಯಗೊಂಡು ಹೊಸ ಕಾಲಮಾನಕ್ಕೆ ಹೊರಳುವ ಈ ದಿನ ಚಂದಿರ ಪೂರ್ಣವಾಗಿ ಗೋಚರಿಸಲಿದೆ. ಆದರೆ ಈ ವೇಳೆ ಚಂದ್ರ ಸ್ಟ್ರಾಬೆರಿ ಬಣ್ಣದಲ್ಲಾಗಲಿ, ಅಥವಾ ಕೆಂಪು, ಪಿಂಕ್ ಬಣ್ಣದಲ್ಲಿ ಗೋಚರಿಸುವುದಿಲ್ಲ. ಈ ವೇಳೆ ಚಂದ್ರ ಸಾಮಾನ್ಯಕ್ಕಿಂತ ತುಸು ಹೆಚ್ಚಾದ ಹಳದಿ ಮಿಶ್ರಿತ ಚಿನ್ನದ ಬಣ್ಣದಲ್ಲಿ ಕಂಗೊಳಿಸಲಿದೆ. ಇದಕ್ಕೆ ಸ್ಟ್ರಾಬೆರಿ ಮೂನ್, ಹಾಟ್ ಮೂನ್ , ಹನಿಮೂನ್, ರೋಸ್ ಮೂನ್ ಎಂದೂ ಕರೆಯುತ್ತಾರೆ. ಉತ್ತರ ಅಮೆರಿಕದಲ್ಲಿ ಸ್ಟ್ರಾಬೆರಿ ಮೂನ್ ಗೋಚರಿಸಿದ ಬಳಿಕ ಸ್ಟ್ರಾಬೆರಿ ಹಣ್ಣಿನ ಬೆಳೆ ಬೆಳೆಯಲು ಆರಂಭಿಸುತ್ತಾರೆ ಎಂದು ಇತಿಹಾಸ ಹೇಳುತ್ತದೆ. ಜೂನ್ ತಿಂಗಳಲ್ಲಿ ಅಂತಿಮ ವಾರದಲ್ಲಿ ಸ್ಟ್ರಾಬೆರಿ ಮೂನ್ ಗೋಚರಿಸಲಿದೆ. ಇಲ್ಲಿಂದ ಬಳಿಕ ಮಳೆ ತೀವ್ರತೆ ಹೆಚ್ಚಾಗಲಿದೆ. ಕೃಷಿ ಚಟುವಟಿಕೆಗಳು ಚುರುಕುಗೊಳ್ಳಲಿದೆ. ಇದೇ ವೇಳೆ…
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನಿತರರ ಪೊಲೀಸ್ ಕಸ್ಟಡಿ ಇಂದು (ಜೂನ್ 20) ಅಂತ್ಯವಾಗಿದ್ದು, ಎಲ್ಲರನ್ನೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯ್ತು. ವಿಚಾರಣೆ ಆಲಿಸಿದ ನ್ಯಾಯಾಧೀಶರು ದರ್ಶನ್ ಸೇರಿದಂತೆ ನಾಲ್ವರನ್ನು ಮತ್ತೆ ಪೊಲೀಸ್ ಕಸ್ಟಡಿಎಗೆ ನೀಡಿದ್ದಾರೆ. ಪವಿತ್ರಾ ಗೌಡ ಸೇರಿ ಇನ್ನುಳಿದ ಆರೋಪಿಗಳನ್ನು ಜೈಲಿಗೆ ಕಳುಹಿಸಿದ್ದಾರೆ. ಜೂನ್ 11 ರಿಂದ ಹತ್ತು ದಿನಗಳ ಕಾಲ ದರ್ಶನ್, ಪವಿತ್ರಾ ಸೇರಿದಂತೆ ಇತರೆ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈಗಾಗಲೇ ಪೊಲೀಸರು ದರ್ಶನ್ ಸೇರಿದಂತೆ ಇತರೆ ಆರೋಪಿಗಳನ್ನು ಬೆಂಗಳೂರು, ಮೈಸೂರು, ಚಿತ್ರದುರ್ಗ ಇನ್ನೂ ಕೆಲವು ಕಡೆ ಕರೆದೊಯ್ದು ಮಹಜರು ಮಾಡಿದ್ದಾರೆ. ಈವರೆಗೆ ಸುಮಾರು 118 ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಲವರ ಹೇಳಿಕೆಗಳನ್ನು ಸಹ ದಾಖಲು ಮಾಡಿಕೊಂಡಿದ್ದಾರೆ. ಆದರೆ ಇನ್ನೂ ವಿಚಾರಣೆ ಮತ್ತು ತನಿಖೆ ನಡೆಸಬೇಕಿರುವ ಕಾರಣ ಕೆಲವರನ್ನು ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಮನವಿ ಸಲ್ಲಿಸಿದ್ದರು. ದರ್ಶನ್, ವಿನಯ್, ಪ್ರದೋಶ್, ನಾಗರಾಜ್, ಲಕ್ಷ್ಮಣ್ ಹಾಗೂ ಧನರಾಜ್ ಅವರುಗಳನ್ನು ಮತ್ತೆ ಪೊಲೀಸ್…
ನಟ ದರ್ಶನ್ ಜೊತೆ ಸುದ್ದಿಯಾಗ್ತಿರೋ ಪವಿತ್ರಾ ಗೌಡರನ್ನು ನೋಡಿದ್ರೆ ಯಾರಾದ್ರು ಈಕೆ ಸೌಂದರ್ಯವತಿ ಅಂತ ಹೇಳದೆ ಇರಲಾರರು. ನಿಜವಾಗಿಯೂ ಪವಿತ್ರಾ ಗೌಡ ಸುರ ಸುಂದರಿಯೇ. ಆದರೆ ಈಕೆ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ಸಂದರ್ಭದಲ್ಲಿ ಹೀಗೆ ಇರಲೇ ಇಲ್ಲ. ನಟಿ ಹಾಗೂ ದರ್ಶನ್ ಗೆಳತಿ ಪವಿತ್ರಾ ಗೌಡ ಸಖತ್ ಸುದ್ದಿಯಲ್ಲಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅವರನ್ನು ಅರೆಸ್ಟ್ ಮಾಡಿ ವಿಚಾರಣೆ ಮಾಡಲಾಗುತ್ತಿದೆ. ದರ್ಶನ್ ಕೂಡ ಈ ಪ್ರಕರಣದಲ್ಲಿ ಸಿಲುಕಿದ್ದಾರೆ. ಇಂದು ಗ್ಲಾಮರ್ ಗೊಂಬೆ ಆಗಿರೋ ಪವಿತ್ರಾ ಮೊದಲು ಈ ರೀತಿ ಇರಲಿಲ್ಲ. ಅವರು ನಟಿಸಿದ ಮೊದಲ ಸಿನಿಮಾ ‘ಅಗಮ್ಯ’. ಹಾರರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿತ್ತು ಈ ಚಿತ್ರದ ಮೂಲಕ ಪವಿತ್ರಾ ಗೌಡ ವೃತ್ತಿ ಜೀವನ ಆರಂಭಿಸಿದರು. ನಿರ್ದೇಶಕ ಉಮೇಶ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದ ಸೆಟ್ನಲ್ಲಿ ಪವಿತ್ರಾ ಗೌಡ ಹೇಗೆ ಕಾಣಿಸುತ್ತಿದ್ದರು ಎನ್ನುವ ಫೋಟೋಗಳು ಸದ್ಯ ಸೋಷಿಯಲ್ ಮೀಡಿಯಾದಲ್ಲಿ…
ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಇಂದು( ಜೂ.20) ಶ್ರೀಲಂಕಾಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ಸಲುವಾಗಿ ಮಾತುಕತೆ ನಡೆಸಲಿದ್ದಾರೆ. ಶ್ರೀಲಂಕಾ ಭೇಟಿ ಕುರಿತು ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ಶ್ರೀಲಂಕಾಕ್ಕೆ ಇದು ಮೊದಲ ಭೇಟಿ’ ಎಂದಿದ್ದಾರೆ. ಕೊಲಂಬೊಗೆ ಆಗಮಿಸಿದ ಜೈಶಂಕರ್ ಅವರನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ತಾರಕ ಬಾಲಸೂರ್ಯ, ಪೂರ್ವ ಪ್ರಾಂತ್ಯದ ಗವರ್ನರ್ ಸೆಂಥಿಲ್ ಥೋಂಡಮಾನ್ ಅವರು ಬರಮಾಡಿಕೊಂಡರು. ಉಭಯ ರಾಷ್ಟ್ರಗಳ ಸಂಪರ್ಕ ಯೋಜನೆಯನ್ನು ಬಲವರ್ಧನೆಗೊಳಿಸುವುದು ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ‘ಜೈಶಂಕರ್ ಅವರ ಶ್ರೀಲಂಕಾ ಪ್ರವಾಸವು ‘ನೆರೆಯವರೇ ಮೊದಲು’ ಎಂಬ ಭಾರತದ ನೀತಿಯ ಭಾಗವಾಗಿದೆ. ಉಭಯರಾಷ್ಟ್ರಗಳ ದ್ವಿಪಕ್ಷೀಯ ಬಾಂಧವ್ಯದ ಪ್ರತೀಕವಾಗಿದೆ. ಭೇಟಿಯ ವೇಳೆ ಜೈಶಂಕರ್ ಅವರು ಹಲವು ವಿಚಾರಗಳ ಕುರಿತಂತೆ ಶ್ರೀಲಂಕಾದ ಉನ್ನತ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಈ ಭೇಟಿಯು ಉಭಯ ರಾಷ್ಟ್ರಗಳ ಸಂಪರ್ಕ ಯೋಜನೆ ಹಾಗೂ ಸಹಕಾರ…
ಕ್ಯಾಲಿಫೋರ್ನಿಯಾದ ಓಕ್ಲ್ಯಾಂಡ್ ನಲ್ಲಿ ಬುಧವಾರ ರಾತ್ರಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ ಓರ್ವ ಮೃತಪಟ್ಟಿದ್ದು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಲೇಕ್ ಮೆರಿಟ್ ನಲ್ಲಿ ಈ ಘಟನೆ ನಡೆದಿದೆ. ಗುಂಡಿನ ದಾಳಿ ಮತ್ತು ಇರಿತದ ಸ್ಥಳದ ದೃಶ್ಯಗಳು ಆನ್ ಲೈನ್ ನಲ್ಲಿ ಕಾಣಿಸಿಕೊಂಡವು. ಹಂಚಿಕೊಂಡ ವೀಡಿಯೊಗಳಲ್ಲಿ, ಸಾಮೂಹಿಕ ಗುಂಡಿನ ದಾಳಿ ನಡೆದ ಬೀದಿಯಲ್ಲಿ ಜನರು ಕಾರುಗಳ ಹಿಂದೆ ಅಡಗಿರುವುದನ್ನು ಕಾಣಬಹುದು. ಗುಂಡಿನ ಶಬ್ದವನ್ನು ಕೇಳಿ ಬಂದಿದೆ. ಪ್ರಸ್ತುತ, ಓಕ್ಲ್ಯಾಂಡ್ನಲ್ಲಿ ಹಲವಾರು ಕಾನೂನು ಜಾರಿ ಅಧಿಕಾರಿಗಳು ಮತ್ತು ತುರ್ತು ಸಿಬ್ಬಂದಿ ಘಟನಾ ಸ್ಥಳದಲ್ಲಿದ್ದಾರೆ. ಗುಂಡು ಹಾರಿಸಿದ ಮತ್ತು ಇರಿತಕ್ಕೊಳಗಾದವರ ನಿಖರ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ. ಘಟನೆಯ ಬಗ್ಗೆ ಅಧಿಕಾರಿಗಳು ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದು ಇದುವರೆಗೂ ಶಂಕಿತನ ಸುಳಿವು ಪತ್ತೆಯಾಗಿಲ್ಲ.
ಕನ್ನಡತಿ, ಬಾಲಿವುಡ್ ಬೆಡಗಿ ನಟಿ ದೀಪಿಕಾ ಪಡುಕೋಣೆ ಅಮ್ಮ ಆಗುತ್ತಿದ್ದಾರೆ.ಹೊಸ ಅತಿಥಿಯನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿ ದೀಪಿಕಾ ಹಾಗೂ ರಣಬೀರ್ ಇದ್ದಾರೆ. ಗರ್ಭಿಣಿಯಾದಾಗಲು ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ದೀಪಿಕಾ ಇದೀಗ ಕಲ್ಕಿ ಸಿನಿಮಾದ ಪ್ರೀರಿಲೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ, ಪ್ರಭಾಸ್, ಬಿಗ್ ಬಿ ಅಮಿತಾಬ್ ಬಚ್ಚನ್ ಸೇರಿದಂತೆ ಹಲವು ಸ್ಟಾರ್ಸ್ ಗಳು ನಟಿಸಿರುವ ಕಲ್ಕಿ 2898 ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಿನ್ನೆ ಮುಂಬೈನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ದೀಪಿಕಾ ಬೇಬಿ ಬಂಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಕೂಡ ಆಗಮಿಸಿದ್ದರು. ದೀಪಿಕಾ ಪಡುಕೋಣೆ ಧರಿಸಿರುವ ಹೈಹೀಲ್ಸ್ ಮತ್ತು ಟೈಟ್ ಡ್ರೆಸ್ ಮೇಲೆ ನೆಟ್ಟಿಗರ ಕಣ್ಣು ಹೋಗಿದೆ. ಗರ್ಭಿಣಿಯಾದವರು ಈ ರೀತಿ ಮಾಡುವುದು ಸರಿಯಲ್ಲ ಎನ್ನುವುದು ಹಲವರು ಹೇಳುತ್ತಿದ್ದಾರೆ. ಅಷ್ಟಕ್ಕೂ ಗರ್ಭಿಣಿಯರು ಹೈ ಹೀಲ್ಸ್ ಧರಿಸಲೇಬಾರದು ಎಂದು ವೈದ್ಯರು ಎಚ್ಚರಿಕೆ ಕೊಡುತ್ತಲೇ ಇರುತ್ತಾರೆ. ಆದರೂ ನಟಿ ಸಿಕ್ಕಾಪಟ್ಟೆ ಹೈ ಹೀಲ್ಸ್ ಧರಿಸಿ ಬಂದಿದ್ದಾರೆ. ಇದು ದೀಪಿಕಾ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.…
ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ದರ್ಶನ್ ಎಂಡ್ ಗ್ಯಾಂಗ್ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕಳೆದ 10 ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿರುವ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರನ್ನು ಇಂದು ನ್ಯಾಯಾಲಕ್ಕೆ ಹಾಜರುಪಡಿಸಲಾಗುವುದು. ಘಟನೆಯ ಕುರಿತು ದರ್ಶನ್ ಪರವಾಗಿ ಅವರ ಅಭಿಮಾನಿಗಳು ಮಾತನಾಡಿದ್ರೆ, ಇನ್ನೂ ಕೆಲವರು ಆಕ್ರೋಶ ಹೊರಹಾಕಿದ್ದಾರೆ. ಇದೀಗ ನಟಿ ಅನುಷಾ ರೈ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನನಗೆ ಅಭಿಮಾನಿಗಳು ವರ್ಷದ 365 ದಿನವೂ ಊಟ ಹಾಕ್ತಾರೆ. ಆದ್ರೆ ನಾನು ಹುಟ್ಟುಹಬ್ಬದ ಒಂದು ದಿನ ಮಾತ್ರ ಅವರಿಗೆ ಊಟ ಹಾಕ್ತೀನಿ ಎಂದವರು ನಟ ದರ್ಶನ್…ಮೈಮೇಲೆ ಆಥರ ನನ್ನ ಹೆಸರನ್ನು ಹಚ್ಚೆ ಹಾಕಿಸಿಕೊಳ್ಳಬೇಡಿ, ಸಿನಿಮಾ ನೋಡಿ ಸಾಕು, ನಿಮ್ಮ ಅಪ್ಪ-ಅಮ್ಮನ ಹೆಸರು ಹಾಕಿಸಿಕೊಳ್ಳಿ ಎನ್ನುತ್ತಾ ತಾವೇ ಎದೆಯ ಮೇಲೆ ‘ನನ್ನ ಸೆಲೆಬ್ರಿಟೀಸ್’ ಎಂದು ಹಚ್ಚೆ ಹಾಕಿಸಿಕೊಂಡ ಅಭಿಮಾನಿಗಳ ದಾಸ ಅವರು… ತಾನು ಕಾರಲ್ಲಿ ಸ್ಪೀಡ್ ಆಗಿ ಹೋಗೊವಾಗ ಹಿಂದೆ ಬರಬೇಡಿ,…