ಕೇರಳದ ಕಾಸರಗೋಡಿನ ಕಾಡಿನಲ್ಲಿ ಅಪರೂಪದ ವಿಸ್ಮಯವೊಂದು ಪತ್ತೆಯಾಗಿದೆ. ರಾತ್ರಿಯಲ್ಲಿ ರೇಡಿಯಂನಂತೆ ಹೊಳೆಯುವ ಜೈವಿಕವಾಗಿ ಪ್ರಕಾಶಿಸಲ್ಪಡುವ ಅಣಬೆಗಳನ್ನು ಕಾಸರಗೋಡಿನ ದಟ್ಟ ಕಾಡುಗಳಲ್ಲಿ ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. ನೈಸರ್ಗಿಕವಾಗಿ ಹೊಳೆಯಲ್ಪಡುವ ಅತೀ ಅಪರೂಪದ ಅಣಬೆಯನ್ನು ಸಂಶೋಧಕರು ಪತ್ತೆ ಮಾಡಿದ್ದು, ರಾತ್ರಿಯ ದಟ್ಟ ಕತ್ತಲಲ್ಲಿ ಇದು ರೇಡಿಯಂನಂತೆ ಹಸಿರು ಬಣ್ಣದಲ್ಲಿ ಕಂಗೊಳಿಸುತ್ತದೆ. ಇದು ವಿಜ್ಞಾನ ಲೋಕಕ್ಕೆ ವಿಸ್ಮಯ ಉಂಟು ಮಾಡಿದೆ. ‘ಫಿಲೋಬೊಲೆಟಸ್ ಮ್ಯಾನಿಪುಲಾರಿಸ್’ ಎಂದು ಕರೆಯಲ್ಪಡುವ ಈ ಆಕರ್ಷಕ ಅಣಬೆಗಳು ಜೀವರಾಸಾಯನಿಕ ಪ್ರಕ್ರಿಯೆಯ ಮೂಲಕ ತಮ್ಮದೇ ಆದ ಬೆಳಕನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿವೆ. ಕೇರಳ ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಕಾಸರಗೋಡು ವಿಭಾಗ ಮತ್ತು ಮಶ್ರೂಮ್ಸ್ ಆಫ್ ಇಂಡಿಯಾ ಕಮ್ಯುನಿಟಿ ಜಂಟಿಯಾಗಿ ಕೇರಳದ ರಾಣಿಪುರಂ ಅರಣ್ಯದಲ್ಲಿ ಮೈಕ್ರೋ ಫಂಗಲ್ ಸಮೀಕ್ಷೆ ನಡೆಸಿದ ವೇಳೆ ಈ ಅಣಬೆಗಳು ಪತ್ತೆಯಾಗಿವೆ. ವಿಜ್ಞಾನಿಗಳು ಮತ್ತು ಸಂಶೋಧಕರನ್ನು ಒಳಗೊಂಡ ಈ ಸಮೀಕ್ಷಾ ತಂಡದಲ್ಲಿ ಕಾಸರಗೋಡು ವಿಭಾಗೀಯ ಅರಣ್ಯಾಧಿಕಾರಿ ಕೆ.ಅಶ್ರಫ್, ಡಾ.ಜಿನು ಮುರಳೀಧರನ್, ಡಾ.ಸಂತೋಷ್ ಕುಮಾರ್ ಕೂಕಲ್, ಕೆ.ಎಂ.ಅನೂಪ್, ಸಚಿನ್ ಪೈ ಮತ್ತು…
Author: Author AIN
ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿ ಇಂಡಸ್ಟ್ರಿಗೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ ಯಾರು ಊಹಿಸಿರದ ಮಟ್ಟಿಗೆ ಬೆಳೆಯುತ್ತಿದ್ದಾರೆ. ರಾತ್ರೋ ರಾತ್ರಿ ನ್ಯಾಷನಲ್ ಕ್ರಶ್ ಎನಿಸಿಕೊಂಡ ನಟಿ ಇದೀಗ ಬಹುಭಾಷಾ ನಟಿಯಾಗಿ ಬ್ಯುಸಿಯಾಗಿದ್ದಾರೆ. ಕನ್ನಡದ ಬಳಿಕ ಟಾಲಿವುಡ್ ನಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಯಾವುದೇ ಸ್ಟಾರ್ ನಟನಾದ್ರು ತಮ್ಮ ಚಿತ್ರಕ್ಕೆ ರಶ್ಮಿಕಾನೇ ನಾಯಕಿಯಾಗ್ಬೇಕು ಅಂತ ಹಠ ಹಿಡಿಯುವ ಮಟ್ಟಿಗೆ ರಶ್ಮಿಕಾ ಹವಾ ಕ್ರಿಯೇಟ್ ಮಾಡಿದ್ದಾರೆ. ಇಂಡಸ್ಟ್ರಿಗೆ ಎಂಟ್ರಿಕೊಟ್ಟ ಕೆಲವೇ ಕೆಲವು ವರ್ಷಗಳಲ್ಲಿ ರಶ್ಮಿಕಾ ಸ್ಟಾರ್ ನಟಿಯರನ್ನೇ ಹಿಂದಿಕ್ಕುವ ಮಟ್ಟಿಗೆ ಬೆಳೆದು ಬಿಟ್ಟಿದ್ದಾರೆ. ಕಳೆದ 20 ವರ್ಷಗಳಿಂದ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮದೇ ಹವಾ ಕ್ರಿಯೇಟ್ ಮಾಡಿಕೊಂಡು ಬಂದಿರುವ ನಟಿ ತ್ರಿಷಾ ಹಾಗೂ ನಯನತಾರಾರನ್ನೇ ರಶ್ಮಿಕಾ ಹಿಂದಿಕ್ಕಿದ್ದಾರೆ. ನಟಿಯರು ಹೆಚ್ಚು ಜನಪ್ರಿಯರಾದಷ್ಟೂ ಅವರ ಸಂಭಾವನೆ ಹೆಚ್ಚಾಗುತ್ತದೆ, ಅದರ ಪ್ರಕಾರ ನಯನತಾರಾ ಮತ್ತು ತ್ರಿಶಾ ಇಬ್ಬರೂ ಇಲ್ಲಿಯವರೆಗೆ ಪ್ರತಿ ಚಿತ್ರಕ್ಕೆ 10 ರಿಂದ 12 ಕೋಟಿ ರೂ. ಸಂಭಾವನೆ…
ಕುವೈತ್ ನ ದಕ್ಷಿಣ ಅಹ್ಮದಿ ಗವರ್ನರೇಟ್ನಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ 46 ಭಾರತೀಯರು ಸೇರಿದಂತೆ 50 ಜನರು ಮೃತಪಟ್ಟಿದ್ದರು. ಈ ಅಗ್ನಿ ದುರಂತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ಕುವೈತ್ ಸರ್ಕಾರ ತಲಾ 15,000 ಡಾಲರ್ ಪರಿಹಾರ ನೀಡಲು ಮುಂದಾಗಿದೆ. ಕುವೈತ್ ಅಧಿಕಾರಿಗಳ ಪ್ರಕಾರ, ಜುಲೈ 12 ರಂದು ಮಂಗಾಫ್ ನಗರದ ಏಳು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಬೃಹತ್ ಅಗ್ನಿ ಅವಘಡವು ಕಟ್ಟಡದ ನೆಲ ಮಹಡಿಯಲ್ಲಿರುವ ಭದ್ರತಾ ಸಿಬ್ಬಂದಿ ಕೋಣೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾಯಿತು. ಈ ಕಟ್ಟಡವು 196 ವಲಸೆ ಕಾರ್ಮಿಕರಿಗೆ ನೆಲೆಯಾಗಿತ್ತು, ಬೆಂಕಿ ದುರಂತದಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು ಭಾರತೀಯರಾಗಿದ್ದಾರೆ. ಕುವೈತ್ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆದೇಶದ ಮೇರೆಗೆ, ಸಂತ್ರಸ್ತರ ಕುಟುಂಬಗಳು ತಲಾ 15,000 ಡಾಲರ್ (ಅಂದಾಜು 12.5 ಲಕ್ಷ ರೂಪಾಯಿ) ಪರಿಹಾರವನ್ನು ನೀಡಲಾಗುವುದು ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸರ್ಕಾರಿ ಮೂಲಗಳು ಪರಿಹಾರ ಪಾವತಿಗಳನ್ನು ಪ್ರಕ್ರಿಯೆಗೊಳಿಸಿ ಸಂತ್ರಸ್ತರ ರಾಯಭಾರ ಕಚೇರಿಗಳಿಗೆ…
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ನ ಹತ್ಯೆಯಾಗಿ ಒಂದು ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಕೆನಡಾ ತನ್ನ ಹೌಸ್ ಆಫ್ ಕಾಮನ್ಸ್ನಲ್ಲಿ ಮೌನಾಚರಣೆ ನಡೆಸುವ ಮೂಲಕ ಉಗ್ರನಿಗೆ ಗೌರವ ಸಲ್ಲಿಸಿದೆ. ಈ ಮೂಲಕ ಕೆನಡ ಮತ್ತೆ ತನ್ನ ಉದ್ದಟತನ ಪ್ರದರ್ಶಿಸಿದೆ. ಕೆನಡಾ ಸಂಸತ್ತಿನ ನಡೆಗೆ ಭಾರತ ಖಡಕ್ ಪ್ರತಿಕ್ರಿಯೆ ನೀಡಿದೆ. ವ್ಯಾಂಕೋವರ್ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್, 1985ರಲ್ಲಿ ಏರ್ ಇಂಡಿಯಾ ಕನಿಷ್ಕಾ ವಿಮಾನದಲ್ಲಿ ಖಲಿಸ್ತಾನಿ ಉಗ್ರರು ಬಾಂಬ್ ದಾಳಿ ನಡೆಸಿದ್ದರಿಂದ ಬಲಿಯಾಗಿದ್ದ 329 ಸಂತ್ರಸ್ತರಿಗೆ ಗೌರವ ಸಲ್ಲಿಸಲು ಅವರ ಸ್ಮರಣಾರ್ಥ ಸೇವೆ ನಡೆಸುವುದಾಗಿ ಘೋಷಿಸಿದೆ. ಕೆನಡಾ ಹರ್ದೀಪ್ ಸಿಂಗ್ಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರತಿಯಾಗಿ ವ್ಯಾಂಕೋವರ್ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ 1985ರಲ್ಲಿ ಏರ್ ಇಂಡಿಯಾ ಕಾನಿಷ್ಕಾ ವಿಮಾನದ ಮೇಲೆ ಖಲಿಸ್ತಾನಿ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ 329 ಜನರನ್ನು ಸ್ಮರಿಸಲು ತೀರ್ಮಾನಿಸಿದೆ. ಭಾನುವಾರ ಸಂಜೆ 6:30ಕ್ಕೆ ಸ್ಟಾನ್ಲಿ ಪಾರ್ಕ್ನ ಸೆಪರ್ಲಿ ಆಟದ ಮೈದಾನದಲ್ಲಿ ಮೌನಾಚರಣೆ ನಡೆಸಲು ಭಾರತ ತೀರ್ಮಾನಿಸಿದೆ. ಭಯೋತ್ಪಾದನೆಯ ಪಿಡುಗನ್ನು ಎದುರಿಸುವಲ್ಲಿ ಭಾರತವು…
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಹಲವಾರು ದೇಶಗಳಲ್ಲಿ ಹಾಗೂ ಯುಎಸ್ ನ ಅನೇಕ ಕಡೆ ಕಾಣಿಸಿಕೊಂಡ ನಿಗೂಢ ಏಕಶಿಲೆಗಳು ಮತ್ತೆ ಕಾಣಿಸಿಕೊಂಡಿದೆ. ವಾರಾಂತ್ಯದಲ್ಲಿ, ಯುಎಸ್ ನಗರ ಲಾಸ್ ವೇಗಾಸ್ ಬಳಿ ಮತ್ತೊಂದು ಪ್ರತಿಬಿಂಬಿತ ರಚನೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 10 ಅಡಿ ಎತ್ತರದ, ಟೋಬ್ಲೆರೋನ್ ಆಕಾರದ ಉಕ್ಕಿನ ಏಕಶಿಲೆಯ ಇದೇ ರೀತಿಯ ಆವೃತ್ತಿಗಳು ಯುಎಸ್ ರಾಜ್ಯಗಳಾದ ಉತಾಹ್, ನ್ಯೂ ಮೆಕ್ಸಿಕೊ ಮತ್ತು ಕ್ಯಾಲಿಫೋರ್ನಿಯಾ, ಹಾಗೆಯೇ ಯುನೈಟೆಡ್ ಕಿಂಗ್ಡಮ್ ಮತ್ತು ರೊಮೇನಿಯಾದಲ್ಲಿ 2020 ರಲ್ಲಿ ಕಂಡುಬಂದಿವೆ. ಈ ಬಾರಿ, ಲಾಸ್ ವೇಗಾಸ್ ನ ಉತ್ತರಕ್ಕೆ 64 ಕಿಲೋಮೀಟರ್ ದೂರದಲ್ಲಿರುವ ಗ್ಯಾಸ್ ಪೀಕ್ನಲ್ಲಿ ಪ್ರತಿಫಲನ ಲೋಹದ ಸ್ಥಾಪನೆ ಕಂಡುಬಂದಿದೆ. ಏಲಿಯನ್ ಆರ್ಟ್ ಅಥವಾ ಪ್ರಾಪಂಚಿಕ ಸ್ಟಂಟ್? ವೇಲ್ಸ್ ನಲ್ಲಿ ನಿಗೂಢ ಟೋಬ್ಲೆರೋನ್ ಆಕಾರದ ಏಕಶಿಲೆ ಕಾಣಿಸಿಕೊಂಡಿದ್ದು, ಸ್ಥಳೀಯರನ್ನು ಗೊಂದಲಕ್ಕೀಡು ಮಾಡಿದೆ ಏಕಶಿಲೆಯ ಆವಿಷ್ಕಾರದ ಸುದ್ದಿಯನ್ನು ಲಾಸ್ ವೇಗಾಸ್ ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆ (ಎಲ್ವಿಎಂಪಿಡಿ) ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ. ಜನರು ಪಾದಯಾತ್ರೆಗೆ ಹೋದಾಗ ಹವಾಮಾನಕ್ಕೆ…
ಮೆಗಾಸ್ಟಾರ್ ಚಿರಂಜೀವಿ ಅವರ ಮಾಜಿ ಅಳಿಯ ಶಿರೀಶ್ ಭಾರಧ್ವಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತ ಶಿರೀಶ್ ಚಿರಂಜೀವಿಯ ಪುತ್ರಿ ಶ್ರಿಜಾ ಕೊನೆಡೆಲಾ ಅವರನ್ನು ವಿವಾಹವಾಗಿದ್ದರು. ಅಸಲಿಗೆ ಈ ವಿವಾಹಕ್ಕೆ ಚಿರಂಜೀವಿ ಅವರ ತೀವ್ರ ವಿರೋಧವಿತ್ತು, ಹಾಗಾಗಿ ಕುಟುಂಬಕ್ಕೆ ತಿಳಿಸದೆ ಶಿರೀಶ್ ಹಾಗೂ ಶ್ರೀಜಾ ವಿವಾಹವಾಗಿದ್ದರು. ಬಳಿಕ ಇಬ್ಬರು ವಿಚ್ಚೇದನ ಪಡೆದು ದೂರದೂರವಾಗಿದ್ದು. ಇಂದು (ಜೂನ್ 19) ಬೆಳಿಗ್ಗೆ ಶಿರೀಶ್ ಮೃತಪಟ್ಟಿದ್ದಾರೆ. ಶಿರೀಶ್ ಕಳೆದ ಕೆಲವು ತಿಂಗಳಿನಿಂದಲ ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರಂತೆ. ಆದರೆ ಅವರು ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿರೀಶ್ ಹಾಗೂ ಶ್ರೀಜಾ ಕುಟುಂಬದವರನ್ನು ಎದುರು ಹಾಕಿಕೊಂಡು ವಿವಾಹವಾಗಿದ್ದು ಭಾರಿ ವಿವಾದ ಎಬ್ಬಿಸಿತ್ತು. ಆ ಸಮಯದಲ್ಲಿ ಪವನ್ ಕಲ್ಯಾಣ್ ಸೇರಿದಂತೆ ಕೆಲವರಿಂದ ತಮಗೆ ಬೆದರಿಕೆ ಇರುವುದಾಗಿ ಶ್ರೀಜಾ ದೂರು ಸಹ ದಾಖಲಿಸಿದ್ದರು. ಶ್ರೀಜಾ ಹಾಗೂ ಶಿರೀಶ್ ವಿವಾಹದ ಹಿಂದೆ ರಾಜಕೀಯ ಒತ್ತಡವೂ ಇತ್ತು ಎನ್ನಲಾಗಿತ್ತು. ಪವನ್ ಕಲ್ಯಾಣ್ ಸಹ ಮಾಧ್ಯಮಗಳಲ್ಲಿ ಮಾತನಾಡಿ, ‘ತಾನು ಬಂದೂಕನ್ನು ಪೊಲೀಸರಿಗೆ ಒಪ್ಪಿಸಿಬಿಟ್ಟಿದ್ದೇನೆ, ನೀನು…
ಅನ್ನು ಕಪೂರ್ ನಟನೆಯ ‘ಹಮಾರೆ ಬಾರಹ್’ ಚಿತ್ರಕ್ಕೆ ಮುಸ್ಲಿಂ ಸಮುದಾಯದಿಂದ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಬಿಡುಗಡೆಗೆ ತಡೆ ನೀಡಲಾಗಿತ್ತು. ಇದೀಗ ಚಿತ್ರದಲ್ಲಿ ಕುರಾನ್ ಅಥವಾ ಮುಸ್ಲಿಂ ಸಮುದಾಯಕ್ಕೆ ವಿರುದ್ಧವಾದ ಯಾವುದೇ ಆಕ್ಷೇಪಾರ್ಹದದ್ದು ಇಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಹಮಾರೆ ಬಾರಹ್ ಚಿತ್ರ ವಾಸ್ತವವಾಗಿ ಮಹಿಳೆಯರ ಉನ್ನತಿಯ ಉದ್ದೇಶ ಹೊಂದಿದೆ. ಭಾರತೀಯ ಸಾರ್ವಜನಿಕರು “ಮೋಸಗಾರರಲ್ಲ ಅಥವಾ ಮೂರ್ಖರಲ್ಲ” ಎಂದು ಹೇಳಿದೆ ಎಂದು ಹೈಕೋರ್ಟ್ ಪ್ರತಿಪಾದಿಸಿದೆ. ಚಿತ್ರದ ಮೊದಲ ಟ್ರೇಲರ್ ಆಕ್ಷೇಪಾರ್ಹವಾಗಿತ್ತು. ಆದರೆ ಅದನ್ನು ತೆಗೆದುಹಾಕಲಾಗಿದೆ ಮತ್ತು ಅಂತಹ ಎಲ್ಲಾ ಆಕ್ಷೇಪಾರ್ಹ ದೃಶ್ಯಗಳನ್ನು ಚಲನಚಿತ್ರದಿಂದ ಡಿಲೀಟ್ ಮಾಡಲಾಗಿದೆ ಎಂದು ನ್ಯಾಯಮೂರ್ತಿಗಳಾದ ಬಿಪಿ ಕೊಲಬಾವಾಲ್ಲಾ ಮತ್ತು ಫಿರ್ದೋಶ್ ಪೂನಿವಾಲಾ ಅವರ ವಿಭಾಗೀಯ ಪೀಠ ಹೇಳಿದೆ. ಇದು ವಾಸ್ತವವಾಗಿ “ಚಿಂತನಾತ್ಮಕ ಚಲನಚಿತ್ರ” ಎಂದು ನ್ಯಾಯಾಲಯ ಪರಿಗಣಿಸಿದ್ದು, ಪ್ರೇಕ್ಷಕರು ತಮ್ಮ ಜ್ಞಾನವನ್ನು ಮನೆಯಲ್ಲಿ ಇರಿಸಿಕೊಳ್ಳಲು ನಿರೀಕ್ಷಿಸುವ ರೀತಿಯಲ್ಲಿ ಇಲ್ಲ. ಕೇವಲ ಚಿತ್ರ ವೀಕ್ಷಿಸಿ ಆನಂದಿಸಿ ಎಂದು ಹೇಳಿತು. “ಈ ಸಿನಿಮಾ ವಾಸ್ತವವಾಗಿ ಮಹಿಳೆಯರ ಉನ್ನತಿಗಾಗಿಯೇ ಇದೆ. ಚಿತ್ರದಲ್ಲಿ…
ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನವರು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಸಾಕಷ್ಟು ಮಾಹಿತಿಗಳು ಬಯಲಾಗುತ್ತಿದ್ದು ಘಟನೆಯ ಕುರಿತು ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಹೇಳಿಕೆ ನೀಡಿದ್ದು ದರ್ಶನ್ ಎಂಡ್ ಗ್ಯಾಂಗ್ ನಿಂದ ಅಂದು ನಾನು ಬದುಕಿ ಬಂದಿದ್ದೆ ಹೆಚ್ಚು ಎಂದಿದ್ದಾರೆ. ಮೈಸೂರಿನ ಹೋಟೆಲ್ನಲ್ಲಿ ನನ್ನ ಮೇಲೂ ಹಲ್ಲೆಗೆ ದರ್ಶನ್ ಮತ್ತು ಗ್ಯಾಂಗ್ ಸ್ಕೆಚ್ ಹಾಕಿತ್ತು. ಹೋಟೆಲ್ನಲ್ಲಿ ಹಲ್ಲೆಗೆ ಬೇಕಾದ ಆಯುಧಗಳು ತಂದಿರಿಸಲಾಗಿತ್ತು. ನನ್ನನ್ನು ಹೊಡೆಯುವ ಯೋಜನೆ ಆ ದಿನ ಹಾಕಿಕೊಂಡಿದ್ದರು. ಅಂದು ನಾನು ಬದುಕಿ ಬಂದಿದ್ದೇ ಹೆಚ್ಚು ಎಂದು ಶಾಕಿಂಗ್ ಸ್ಟೇಟ್ ಮೆಂಟ್ ನೀಡಿದ್ದಾರೆ. ಮೈಸೂರಿನ ಸೋಷಿಯಲ್ಸ್ಗೆ ನನ್ನನ್ನು ಕರೆಸಿಕೊಂಡು ಅವರು ಆಡದ ಮಾತುಗಳಿಲ್ಲ. ನನ್ನೆದುರಿಗೆ ಟೇಬಲ್ ಮೇಲೆ ಆಯುಧಗಳನ್ನು ಇಟ್ಟಿದ್ದರು. ಅಂದು ನಾನು ಬದುಕಿ ಬಂದಿದ್ದೇ ಹೆಚ್ಚು. ‘ರಾಬರ್ಟ್’ ಸಿನಿಮಾದ ಚಿತ್ರೀಕರಣದ ವೇಳೆಯೂ ಕೆಲವು ಬಾರಿ ಕೆಲವೊರೊಟ್ಟಿಗೆ ದರ್ಶನ್ ಒರಟಾಗಿ…
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ರನ್ನು ಬಂಧಿಸಿರೋ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ದಿನ ದರ್ಶನ್ ಧರಿಸಿದ್ದ ಶೂಗಳು ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ. ವಿಚಾರಣೆ ವೇಳೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮೀ ಅವರ ಮನೆಯಲ್ಲಿ ದರ್ಶನ್ ಶೂಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪಟ್ಟಣಗೆರೆಯ ಶೆಡ್ನಲ್ಲಿ ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದಿದ್ದರು. ಬಳಿಕ ದರ್ಶನ್ ಶೆಡ್ನಿಂದ ನೇರವಾಗಿ ರಾಜರಾಜೇಶ್ವರಿನಗರದಲ್ಲಿರುವ ತನ್ನ ಮನೆಗೆ ತೆರಳಿ ಬಟ್ಟೆ ಹಾಗೂ ಶೂಗಳನ್ನು ಬದಲಿಸಿ ಸ್ನಾನ ಮಾಡಿಕೊಂಡು ಮೈಸೂರಿಗೆ ತೆರಳಿದ್ದರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಮನೆಯ ಕೆಲಸಗಾರ ಆ ಶೂಗಳನ್ನು ಹೊಸಕೆರೆಯಹಳ್ಳಿಯ ವಿಜಯಲಕ್ಷ್ಮೀ ಅವರ ಮನೆಗೆ ತೆಗೆದುಕೊಂಡು ಹೋಗಿ ಇರಿಸಿದ್ದ. ಪೊಲೀಸರು ಸ್ಥಳ ಮಹಜರು ವೇಳೆ ರಾಜರಾಜೇಶ್ವರಿನಗರದ ದರ್ಶನ್ ಮನೆಯಲ್ಲಿ ಕೊಲೆ ದಿನ ದರ್ಶನ್ ಧರಿಸಿದ್ದ ಬಟ್ಟೆಗಳನ್ನು ಜಪ್ತಿ ಮಾಡಿದ್ದರು. ಆದರೇ, ಶೂಗಳು ಮಾತ್ರ ಸಿಕ್ಕಿರಲಿಲ್ಲ. ಈ ಬಗ್ಗೆ…
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಆರೋಪದಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ದರ್ಶನ್ ಪರವಾಗಿ ವಾದ ಮಾಡುತ್ತಿರುವ ವಕೀಲರು ತಮ್ಮ ಕಕ್ಷಿದಾರ ಅಪರಾಧ ಮಾಡಿಲ್ಲ ಎಂದು ಸಾಕಷ್ಟು ಭಾರಿ ಹೇಳಿದ್ದಾರೆ. ಇದೀಗ ಈ ಬಗ್ಗೆ ಆಕ್ರೋಶ ಹೊರ ಹಾಕಿರುವ ಬಾರ್ ಕೌನ್ಸಿಲ್ ಮಾಜಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ದರ್ಶನ್ ಪರ ವಕೀಲರು ಲಾಯರ್ ಆಗಲು ಅನ್ಫಿಟ್ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದರ್ಶನ್ ಪರ ವಕೀಲರಿಗೆ ನಿನ್ನ ಕಕ್ಷಿದಾರರನ್ನ ಕೋರ್ಟಿನಲ್ಲಿ ಡಿಫೆಂಡ್ ಮಾಡ್ಕೋ… ಪಬ್ಲಿಕ್ ನಲ್ಲಿ ಅಲ್ಲ. ದರ್ಶನ್ ಪರ ವಕೀಲರು ಮಾಧ್ಯಮಗಳ ಮುಂದೆ ಮಾತನಾಡುವಾಗ ಅವರು ಅಪರಾಧ ಮಾಡಿಲ್ಲ ಅಂತ 100 ಸಲ ಹೇಳ್ತಾನೆ. ಆತ ಲಾಯರ್ ಆಗಲು ಅನ್ ಫಿಟ್. ಬಾರ್ ಕೌನ್ಸಿಲ್ನಿಂದ ಅವನಿಗೆ ನೋಟೀಸ್ ಕೊಡುಸ್ತೀನಿ. ಅವರು ತಪ್ಪು ಮಾಡಿಲ್ಲ, ಪೊಲೀಸರ ತನಿಖೆ ಸರಿ ಇಲ್ಲ ಅಂತ ಬೀದಿಯಲ್ಲಿ ಹೇಳ್ತಾರಾ?…