Author: Author AIN

ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದ ಸಕ್ಸಸ್ ಬಳಿಕ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ನಡುವೆ ವಾಗ್ವಾದ ನಡೆಯುತ್ತಲೆ ಇದೆ. ನಟ ದರ್ಶನ್ ಉಮಾಪತಿ ಅವರನ್ನು ಓಪನ್ ಸ್ಟೇಜ್ ಮೇಲೆ ತಗಡು ಎಂದಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದೀಗ ದರ್ಶನ್ ಕೊಲೆ ಕೇಸ್ ನಲ್ಲಿ ವಿಚಾರಣೆ ಎದುರಿಸುತ್ತಿದ್ದು ಇದೀಗ ನಿರ್ಮಾಪಕ ಉಮಾಪತಿ ಗೌಡ ಅವರು ತಮ್ಮ ಸ್ಟೇಟಸ್‌ನಲ್ಲಿ, ಘಟನೆಗೆ ಪ್ರತಿಕ್ರಿಯೆ ಎಂಬಂತೆ ಸ್ಟೇಟಸ್ ಹಾಕಿಕೊಂಡಿದ್ದಾರೆ.  ಈ ಬಗ್ಗೆ ಉಮಾಪತಿ ಗೌಡ ‘ಅವತ್ತು ತಾಳ್ಮೆಯಿಂದ ಇದ್ದಿದ್ದಕ್ಕೆ ಇವತ್ತು ಉತ್ತರ ಸಿಕ್ಕಿದೆ’ ಎಂದು ಬರೆದುಕೊಂಡಿದ್ದರು. ಇದೀಗ ಮತ್ತೊಂದು ಪೋಸ್ಟ್ ಹಾಕಿರುವ ಉಮಾಪತಿ ಗೌಡ ‘ತಾಳ್ಮೆ ಕೆಲವೊಮ್ಮೆ ಶಕ್ತಿ’ಅಂತ ಬರೆದುಕೊಂಡಿದ್ದಾರೆ. ದರ್ಶನ್ ನಟನೆಯ ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಗೌಡ ಇತ್ತೀಚೆಗೆ ಯಶಸ್ಸು ಕಂಡಿದ್ದ ದರ್ಶನ್ ನಟನೆಯ ‘ಕಾಟೇರ’ ಚಿತ್ರದ ಕಥೆಯ ಬಗ್ಗೆ ಮಾತನಾಡಿದ್ದರು. ‘ಕಾಟೇರ ಕತೆ ಕತೆ ನನ್ನದು’ ಎಂದಿದ್ದರು. ‘ತಗಡೆ, ಯಾವಾಗ್ಲೂ ನನ್ ಹತ್ರಾನೆ ಯಾಕೆ ಗುಮ್ಮಿಸ್ಕೋತೀಯಾ’ ಎಂದು ಕಾಟೇರ…

Read More

ರೇಣುಕಾಸ್ವಾಮಿ ಕೊಲೆ ಕೇಸ್ ​ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಹೊಸ ಸುದ್ದಿಗಳು ಹೊರಬೀಳುತ್ತಿದೆ. ಇದೀಗ ದರ್ಶನ್ ಜೊತೆ ಪಾರ್ಟಿ ಮಾಡಿದ್ದ ನಟರಿಗೂ ಸಮಸ್ಯೆ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ನಡೆಯುವುದಕ್ಕೂ ಮುನ್ನ ದರ್ಶನ್ ಜೊತೆ ಸೇರಿ ಕೆಲವರು ಪಾರ್ಟಿ ಮಾಡಿದ್ರು ಎಂದು ವರದಿ ಆಗಿದೆ. ಪಾರ್ಟಿಯಲ್ಲಿ ಯಾರ್ಯಾರು ಇದ್ದರು, ಏನೆಲ್ಲಾ ಚರ್ಚೆ ನಡೆದಿದೆ ಎನ್ನುವ ಬಗ್ಗೆ ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗ್ತಿದೆ. ದರ್ಶನ್​ ಜೊತೆ ಪಾರ್ಟಿಯಲ್ಲಿದ್ದವರಿಗೆ ನೋಟಿಸ್​ ನೀಡಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆಗೂ ಮುನ್ನ ಆರ್ ​ಆರ್​ ನಗರದಲ್ಲಿರುವ ರೆಸ್ಟೋರೆಂಟ್​ ನಲ್ಲಿ ತನ್ನ ಸ್ನೇಹತರು ಹಾಗೂ ಸಹಚರರ ಜೊತೆ ಪಾರ್ಟಿ ಮಾಡಿದ್ದರು ಎನ್ನಲಾಗ್ತಿದೆ. ಈ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಕೂಡ ಇದ್ದರು ಎಂದು ವರದಿ ಆಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆ ಹಾಜರಾಗುವಂತೆ ನಟ ಚಿಕ್ಕಣ್ಣ ಅವರಿಗೂ ನೋಟಿಸ್​…

Read More

ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಈ ವಾರ ಉತ್ತರಕೊರಿಯಾಕ್ಕೆ ಭೇಟಿ ನೀಡಲಿದ್ದಾರೆ. ಇದು ರಷ್ಯಾ ಮತ್ತು ಉತ್ತರ ಕೊರಿಯಾ ನಡುವಿನ ಮೈತ್ರಿಯನ್ನು ಬಲಪಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿದ್ದು 24 ವರ್ಷಗಳ ಬಳಿಕ ಇದು ಮೊದಲ ಭೇಟಿಯಾಗಿದೆ. 24 ವರ್ಷಗಳಲ್ಲಿ ರಷ್ಯಾದ ನಾಯಕರೊಬ್ಬರು ಉತ್ತರ ಕೊರಿಯಾಕ್ಕೆ ನೀಡಿದ ಮೊದಲ ಭೇಟಿ ಇದಾಗಿದ್ದು, ಉಕ್ರೇನ್ ನಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಪರಸ್ಪರ ಬೆಂಬಲವನ್ನು ಬಯಸುತ್ತಿರುವ ಉಭಯ ದೇಶಗಳ ನಡುವಿನ ಮಿಲಿಟರಿ ಸಂಬಂಧಗಳು ಆಳವಾಗುತ್ತಿರುವುದನ್ನು ತೋರಿಸುತ್ತದೆ. ಕ್ರೆಮ್ಲಿನ್ ಸೋಮವಾರ (ಜೂನ್ 17) ಭೇಟಿಯನ್ನು ದೃಢಪಡಿಸಿದೆ. “ಡಿಪಿಆರ್ಕೆ ರಾಜ್ಯ ವ್ಯವಹಾರಗಳ ಅಧ್ಯಕ್ಷ ಕಿಮ್ ಜಾಂಗ್-ಉನ್ ಅವರ ಆಹ್ವಾನದ ಮೇರೆಗೆ, ವ್ಲಾದಿಮಿರ್ ಪುಟಿನ್ ಜೂನ್ 18-19 ರಂದು ಡೆಮಾಕ್ರಟಿಕ್ ಪೀಪಲ್ಸ್ ರಿಪಬ್ಲಿಕ್ ಆಫ್ ಕೊರಿಯಾಕ್ಕೆ ಸ್ನೇಹಪರ ರಾಜ್ಯ ಭೇಟಿ ನೀಡಲಿದ್ದಾರೆ” ಎಂದು ಕ್ರೆಮ್ಲಿನ್ ಹೇಳಿಕೆಯಲ್ಲಿ ತಿಳಿಸಿದೆ. ಉಕ್ರೇನ್ ಯುದ್ಧದಲ್ಲಿ ಬೆಂಬಲಿಸಲು ಉತ್ತರ ಕೊರಿಯಾ ರಷ್ಯಾಕ್ಕೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತದೆ ಎಂಬ ಆತಂಕಗಳಿವೆ, ಆದರೆ ಇದಕ್ಕೆ ಪ್ರತಿಯಾಗಿ ರಷ್ಯಾ ಉತ್ತರ ಕೊರಿಯಾದ ಪರಮಾಣು…

Read More

ಚಾಲೆಂಜಿಂಗ್ ಸ್ಟಾರ್, ಅಭಿಮಾನಿಗಳ ಆರಾಧ್ಯ ದೈವ ದರ್ಶನ್ ಇದೀಗ ಕೊಲೆ ಪ್ರಕರಣದ ಆರೋಪಿ. ಒಂದು ಹೆಣ್ಣಿನ ಕಾರಣಕ್ಕೆ ಅಭಿಮಾನಿಯನ್ನೇ ಕೊಂದ ಆರೋಪ ದರ್ಶನ್ ಮೇಲಿದೆ.ದರ್ಶನ್ ರ ಈ ನಡೆಯನ್ನು ಸಾಕಷ್ಟು ಮಂದಿ ಖಂಡಿಸಿದ್ದಾರೆ. ಸ್ಟಾರ್ ಎಂದ ಮಾತ್ರ ಏನು ಬೇಕಾದ್ರು ಮಾಡಬಹುದು ಎಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಅನ್ನೋದನ್ನ ಪೊಲೀಸರು ತೋರಿಸಿದ್ದಾರೆ. ಇದೀಗ  ‘ಕೆರೆಬೇಟೆ’ ಚಿತ್ರದ ನಟ, ನಿರ್ಮಾಪಕ ಗೌರಿಶಂಕರ್​ ಕೂಡ ಘಟನೆಯ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ಕಾರಣ ಏನೇ ಇರಲಿ, ಆದರೆ ಒಬ್ಬ ಮನುಷ್ಯನನ್ನು ಹೊಡೆದು ಕೊಲ್ಲುವಷ್ಟು ಕ್ರೌರ್ಯವಿದೆ ಎಂದರೆ ಅದು ಎಂಥ ನೀಚ ಮನಸ್ಥಿತಿ ಇರಬಹುದು’ ಎಂದು ಅವರು ಪೋಸ್ಟ್​ ಮಾಡಿದ್ದಾರೆ. ‘ಕೊಲೆಯಾದ ವ್ಯಕ್ತಿ ಕೆಟ್ಟದಾಗಿ ಮೆಸೇಜ್ ಮಾಡಿರೋದು ತಪ್ಪೇ. ಅದಕ್ಕೆ ಬೈದು ಅಥವಾ ಎರಡು ಹೊಡೆತ ಹೊಡೆದು, ಇಲ್ಲವೇ ಪೊಲೀಸ್ ಕಂಪ್ಲೇಂಟ್ ನೀಡಿ ಸರಿಯಾದ ಕ್ರಮ ತೆಗೆದುಕೊಳ್ಳುವಂತಹ ಎಲ್ಲ ಶಕ್ತಿ ಇತ್ತು. ಅದನ್ನ ಬಿಟ್ಟು ಮಾನವೀಯತೆಯೇ ಇಲ್ಲದೇ ಹೊಡೆದು ಹೊಡೆದು ಕೊಲೆ ಮಾಡುತ್ತಾರೆಂದರೆ ಏನ್ ಹೇಳ್ಬೇಕು? ಕೊಲೆಯಾದವನ ಹೆಂಡತಿ…

Read More

ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾದಲ್ಲಿ ನಟಿಸಿದ್ದ ನಟಿ ಅಮಲಾ ಪೌಲ್ ತಮ್ಮ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಂಡಿದ್ದಾರೆ. ನಟಿ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು ತಾಯಿ, ಮಗು ಇಬ್ಬರು ಆರೋಗ್ಯವಾಗಿರೋದಾಗಿ ತಿಳಿಸಿದ್ದಾರೆ. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಮಗುವಿನ ಹೆಸರನ್ನು ತಿಳಿಸಿದ್ದಾರೆ. ‘ಜೂನ್ 11ರಂದು ಜನಿಸಿದ ಪವಾಡ’ ಎಂದು ನಟಿ ಅಡಿಬರಹ ನೀಡಿದ್ದು, ಗಂಡು ಮಗುವಿಗೆ ‘ಇಲೈ’ ಎಂದು ಹೆಸರಿಟ್ಟಿದ್ದಾರೆ. ಇದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಗುವನ್ನು ಮನೆಗೆ ಕರೆತರುವ ವೇಳೆ ಅಮಲಾರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಕೊಚ್ಚಿಯಲ್ಲಿ ಉದ್ಯಮಿ ಜಗತ್ ದೇಸಾಯಿ ಜೊತೆ ಅಮಲಾ ಹಸೆಮಣೆ ಏರಿದ್ದರು. ಹಲವು ವರ್ಷಗಳ ಕಾಲ ಪ್ರೀತಿಸಿ ಬಳಿಕ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು. ಕನ್ನಡದ ‘ಹೆಬ್ಬುಲಿ’ ಸಿನಿಮಾದಲ್ಲಿ ಸುದೀಪ್‌ಗೆ ನಾಯಕಿಯಾಗಿ ಅಮಲಾ ನಟಿಸಿದ್ದರು. ಇತ್ತೀಚೆಗೆ ರಿಲೀಸ್‌ ಆದ ‘ಆಡುಜೀವಿತಂ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದರು. ಅಂದ ಹಾಗೆ ಇದು ಅಮಲಾಗೆ ಎರಡನೇ ಮದುವೆ. ಮೊದಲು ನಿರ್ಮಾಪಕ ವಿಜಯ್ ಜೊತೆ…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ 19 ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ 11 ದಿನಗಳಿಂದ ಖಾಖಿ ಪಡೆ ಸಾಕಷ್ಟು ಮಾಹಿತಿಯನ್ನು ಆರೋಪಿಗಳಿಂದ ಕಲೆ ಹಾಕಿದೆ. ದರ್ಶನ್ ಬಂಧನ ಸಾಕಷ್ಟು ಅಭಿಮಾನಿಗಳ ನಿದ್ದೆ ಕೆಡಿಸಿದೆ. ಘಟನೆಯ ಕುರಿತು ಸಾಕಷ್ಟು ಮಂದಿ ಪ್ರತಿಕ್ರಿಯಿಸಿದ್ದು ದರ್ಶನ್ ಎಂಡ್ ಗ್ಯಾಂಗ್ ಕೃತ್ಯವನ್ನು ಖಂಡಿಸಿದ್ದಾರೆ. ಇದೀಗ ನಟ ಹಾಗೂ ಬಿಗ್ ಬಾಸ್ ಸ್ಪರ್ಧಿ ರಕ್ಷಕ್ ಬುಲೆಟ್ ಪರೋಕ್ಷವಾಗಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ‘ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ’ ಎಂದಿರುವ ರಕ್ಷಕ್ ಅವರ ಬರ್ತ್​ಡೇ ಸೆಲೆಬ್ರೇಷನ್​ಗೆ ಬ್ರೇಕ್ ಹಾಕಿದ್ದಾರೆ. ಜೂನ್ 21 ಅವರ ಜನ್ಮದಿನ. ಅಂದು ಅವರ ಸಿನಿಮಾ ಘೋಷಣೆ ಆಗೋ ಸಾಧ್ಯತೆ ಇದೆ. ಆದರೆ ದರ್ಶನ್ ಬಂಧನದ ಕಾರಣಕ್ಕೆ ರಕ್ಷಕ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡದಿರಲು ನಿರ್ಧರಿಸಿದ್ದಾರೆ. ‘ಎಲ್ಲರಿಗೂ ನಮಸ್ಕಾರ ಹಾಗೂ ಫಾದರ್ಸ್ ಡೇ ಶುಭಾಶಯಗಳು. ಇವತ್ತು ಬೆಳಗ್ಗೆಯಿಂದ ನನ್ನ ತಂದೆಯ ನೆನಪು…

Read More

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 19 ಮಂದಿಯನ್ನು  ಬಂಧಿಸಿರೋ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆಯ ವೇಳೆ ಸಾಷಕ್ಟು ಮಾಹಿತಿಗಳು ಹೊರ ಬೀಳುತ್ತಿದೆ. ಇದೇ ವೇಳೆ ಖಾಕಿ ಪಡೆ ಹಾಸ್ಯ ನಟ ಚಿಕ್ಕಣ್ಣ ಅವರಿಗೂ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದ್ದು ಬಳಿಕ ವಿಚಾರಣೆ ನಡೆಸಿದ್ದಾರೆ. ಸ್ಟೋನಿ ಬ್ರೂಕ್ ಗೆ ಹೋಗಿದ್ದ ಬಗ್ಗೆ ವಿಚಾರಣೆಯ ವೇಳೆ, ನನ್ನನ್ನು ದರ್ಶನ್‌ ಅವರು ಊಟಕ್ಕೆ ಕರೆದಿದ್ದರು. ಹೀಗಾಗಿ ಊಟಕ್ಕೆ ಹೋಗಿದ್ದೇನೆ. ಇದು ಬಿಟ್ಟು ಬೇರೆ ಯಾವುದರ ಬಗ್ಗೆಯೂ ನನಗೆ ಮಾಹಿತಿ ಇಲ್ಲ ಎಂದು ಚಿಕ್ಕಣ್ಣ ಪೊಲೀಸರ ಮುಂದೆ ಹೇಳಿದ್ದಾರೆ. ಊಟ ಮಾಡಿಕೊಂಡು ನಾನು ಅಲ್ಲಿಂದ ಹೊರಟೆ. ಅಲ್ಲಿ ಏನಾಯ್ತು ಅನ್ನೋದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ರೇಣುಕಾಸ್ವಾಮಿ ಬಗ್ಗೆ ಯಾವುದೇ ವಿಚಾರದ ಬಗ್ಗೆ ನನಗೆ ಮಾಹಿತಿ ಇರಲಿಲ್ಲ. ಟಿವಿಗಳಲ್ಲಿ ಬಂದ ಮೇಲೆಯೇ ನಂಗೆ ಈ ವಿಚಾರದ ಬಗ್ಗೆ ಗೊತ್ತಾಯ್ತು. ಹೀಗಾಗಿ ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ. ನಾನು ದರ್ಶನ್…

Read More

ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಪ್ರಕರಣದಲ್ಲಿ ಪೊಲೀಶರು ಸಾಕಷ್ಟು ತನಿಖೆ ನಡೆಸುತ್ತಿದ್ದಾರೆ. ಯಾವುದೇ ಒತ್ತಡಕ್ಕೂ ಮಣಿಯದ ಖಾಕಿ ಪಡೆ ಸಾಕಷ್ಟು ಮಾಹಿತಿಯನ್ನು ಕಲೆ ಹಾಕಿದೆ. ಪ್ರಕರಣದ ಸಂಬಂಧ ಹಾಸ್ಯನಟ ಚಿಕ್ಕಣ್ಣ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಬೆನ್ನಲ್ಲೇ ಇದೀಗ ಮತ್ತೊಬ್ಬ ನಟನಿಗೆ ವಿಚಾರಣೆಯ ಭೀತಿ ಎದುರಾಗಿದೆ. ಹೌದು. ಸ್ಟೋನಿ ಬ್ರೂಕ್ ಪಬ್‍ನಲ್ಲಿ ಚಿಕ್ಕಣ್ಣ ಅಲ್ಲದೇ ಇನ್ನೊಬ್ಬ ನಟನಿದ್ದ ವಿಚಾರ ಪೊಲೀಸರಿಗೆ ಗೊತ್ತಾಗಿದೆ. ಚಿಕ್ಕಣ್ಣ, ದರ್ಶನ್ ಬಿಟ್ಟು ಮತ್ತೊಬ್ಬ ನಟ ಇದ್ದರು. ಪಾರ್ಟಿ ನಂತರ ಚಿಕ್ಕಣ್ಣ ಮತ್ತು ಆ ನಟ ಇಬ್ರೂ ಒಟ್ಟಿಗೆ ತೆರಳಿದ್ದ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ದರ್ಶನ್ ಹಾಗೂ ಚಿಕ್ಕಣ್ಣ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರಂತೆ. ಇದೀಗ ಆ ನಟನಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆ ಇದೆ. ಇದರಿಂದ ಆ ನಟನಿಗೂ ಇದೀಗ ವಿಚಾರಣೆ ಭೀತಿ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸ್ಟೋನಿ ಬ್ರೂಕ್ ಪಬ್‍ನಲ್ಲಿ ಚಿಕ್ಕಣ್ಣ ಇದ್ದರು ಎಂಬ ಮಾಹಿತಿ…

Read More

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ದರ್ಶನ್ ಎಂಡ್ ಗ್ಯಾಂಗ್ ನಿಂದ ಹತ್ಯೆಯಾಗಿ 11 ದಿನ ಕಳೆದಿದ್ದರು ಅವರ ಮೊಬೈಲ್‌ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ ರೇಣಕಾಸ್ವಾಮಿ ಮೊಬೈಲ್‌ ಪತ್ತೆ ಹಚ್ಚಲು ಪೊಲೀಸರು ಆರೋಪಿಯನ್ನು ಮತ್ತೆ ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋಗಿದ್ದು ಈ ವೇಳೆ ಮೊಬೈಲ್ ಗಾಗಿ ಮತ್ತಷ್ಟು ಹುಡುಕಾಟ ನಡೆಸಿದ್ದಾರೆ. ಕೊಲೆ ಪ್ರಕರಣದಲ್ಲಿ ಮೊಬೈಲ್‌ ಪ್ರಮುಖ ಸಾಕ್ಷ್ಯವಾಗುವ ಕಾರಣ ಪೊಲೀಸರು ಎಲ್ಲಾ ಕಡೆ ಆತನ ಮೊಬೈಲ್‌ ಹುಡುಕಾಡಿದ್ದಾರೆ. ಎಲ್ಲಿಯೂ ಮೊಬೈಲ್‌ ಸಿಗದ ಕಾರಣ ಪೊಲೀಸರು ಕೊನೆಯ ಬಾರಿಗೆ ಸಿಗ್ನಲ್‌ ಇದ್ದ ಜಾಗವನ್ನು ಸರ್ಚ್‌ ಮಾಡಿದ್ದಾರೆ. ರಾಜಕಾಲುವೆ ಜಾಗದಲ್ಲೇ ಕೊನೆಯ ಬಾರಿಗೆ ಮೊಬೈಲ್ ಸಿಗ್ನಲ್‌ ತೋರಿಸಿದೆ. ಈ ಕಾರಣಕ್ಕೆ ಈಗ ಆರೋಪಿ ಪ್ರದೂಶ್‌ನನ್ನು ಮತ್ತೆ ಸುಮನಹಳ್ಳಿ ಸತ್ವ ಅಪಾರ್ಟ್‌ಮೆಂಟ್‌ ಮುಂಭಾಗದಲ್ಲಿರುವ ರಾಜಕಾಲುವೆ ಬಳಿ ಕರೆ ತಂದು ಶವ ಎಸೆದ ಜಾಗದತ್ತ ಕರೆತಂದಿದ್ದಾರೆ.  ಪೊಲೀಸರ ಮನವಿಯ ಮೇರೆಗೆ ಪೌರ ಕಾರ್ಮಿಕರು ರಾಜಕಾಲುವೆಗೆ ಇಳಿದು ಮೊಬೈಲ್‌ ಹುಡುಕಾಡಿದ್ದಾರೆ. ಆದರೆ ಮೊಬೈಲ್‌ ಪತ್ತೆಯಾಗದ ಕಾರಣ ಹುಡುಕಾಟ ನಿಲ್ಲಿಸಿದ್ದಾರೆ.…

Read More

ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್  ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಮ್ಯಾಕ್ಸ್ ಸಿನಿಮಾದ ಅಪ್ ಡೇಟ್ ಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ. ಆದರೆ ಇತ್ತೀಚೆಗೆ ಸುದೀಪ್ ಮಾಧ್ಯಮದ ಮುಂದೆ ಬಂದಿರಲಿಲ್ಲ. ಆದರೆ ಇತ್ತೀಚೆಗೆ ಕಾರ್ತಿಕ್ ಮಹೇಶ್ ನಟನೆಯ ‘ರಾಮರಸ’ ಲಾಂಚ್​ಗೆ ಆಗಮಿಸಿದ್ದ ಸುದೀಪ್ ಇದೇ ವೇಳೆ ಮ್ಯಾಕ್ಸ್ ಸಿನಿಮಾದ ಕುರಿತು ಮಾಹಿತಿ ನೀಡಿದ್ದಾರೆ. ‘ವಿಕ್ರಾಂತ್ ರೋಣ’ ಬಳಿಕ ಸುದೀಪ್ ಅವರು ಒಂದು ಬ್ರೇಕ್ ಪಡೆದಿದ್ದರು. ರಾಜಕೀಯ ಪ್ರಚಾರದಲ್ಲೂ ಭಾಗಿ ಆದರು. ಹೀಗಾಗಿ, ಅವರ ಸಿನಿಮಾ ತೆರೆಮೇಲೆ ಬರದೆ ಎರಡು ವರ್ಷಗಳು ಕಳೆದಿವೆ. ಈಗ ಸುದೀಪ್ ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಚಿತ್ರದ ಬಗ್ಗೆ ಅಪ್​ಡೇಟ್ ನೀಡಿದ್ದಾರೆ. ಸಿನಿಮಾ ಆಗಸ್ಟ್​ ವೇಳೆಗೆ ರಿಲೀಸ್ ಆಗಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ‘ಮ್ಯಾಕ್ಸ್’ ಚಿತ್ರದ ಡಬ್ಬಿಂಗ್ ಕೆಲಸ ಪೂರ್ಣಗೊಂಡಿದೆಯಂತೆ. ‘ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಆಗಸ್ಟ್​ನಲ್ಲಿ ಸಿನಿಮಾ ಬರಬಹುದು ಅಂದುಕೊಂಡಿದ್ದೇವೆ’ ಎಂದಿದ್ದಾರೆ ಸುದೀಪ್. ಕೆಲಸ ಸ್ವಲ್ಪ ವಿಳಂಬ ಆದರೂ ಸೆಪ್ಟೆಂಬರ್ ವೇಳೆಗೆ ಚಿತ್ರವನ್ನು ಕಣ್ತುಂಬಿಕೊಳ್ಳಬಹುದು…

Read More