Author: Author AIN

ರೇಣುಕಾಸ್ವಾಮಿ ಎಂಬುವವರ ಕೊಲೆ ಪ್ರಕರಣವೊಂದರ ಸಂಬಂಧಿಸಿದಂತೆ ಈಗಾಗ್ಲೇ ಸ್ಯಾಂಡಲ್‌ವುಡ್‌ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಂಧಿಸಲಾಗಿದೆ. ಈ ಬೆನ್ನಲ್ಲೇ ನಟಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಒಳಸಂಚು ಆರೋಪದ ಮೇಲೆ ನಟಿಯನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣ ಸಂಬಂಧ ಪವಿತ್ರಾ ಗೌಡ ಹಾಗೂ ದರ್ಶನ್‌ ಇಬ್ಬರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಪವಿತ್ರಾ ಗೌಡ ಸೋಶಿಯಲ್ ಮೀಡಿಯಾ ಪೋಸ್ಟ್ ಗೆ ರೇಣುಕಾಸ್ವಾಮಿ ಕೆಟ್ಟದಾಗಿ ಕಾಮೆಂಟ್‌ ಮಾಡಿದ್ದ ಎಂದು ಹೇಳಲಾಗಿತ್ತಿದ್ದು, ಇದೇ ಕಾರಣಕ್ಕೆ ದರ್ಶನ್‌ ಬಾಡಿಗಾರ್ಡ್‌ಗಳು ಬೆದರಿಸಲು ಹೋಗಿ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಇದೆ.

Read More

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಹಾಗೂ ನಟ ಝಹೀರ್ ಇಖ್ಬಾಲ್ ಮದುವೆ ಆಗುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಜೂನ್ 23ರಂದು ಮುಂಬೈನಲ್ಲಿ ವಿವಾಹಕ್ಕೆ ಸಿದ್ದತೆ ನಡೆಯುತ್ತಿದೆ. ಈ ಬಗ್ಗೆ ಸೋನಾಕ್ಷಿ ತಂದೆಗೆ ಅಸಮಾಧಾನ ಇದ್ದಂತೆ ಕಂಡಿದ್ದು, ಮಗಳು ಕರೆದರೆ ಮದುವೆಗೆ ಹೋಗಿ ಆಶೀರ್ವದಿಸಿ ಬರುತ್ತೇನೆ ಎಂದಿದ್ದಾರೆ. ‘ನಾನೀಗ ದೆಹಲಿಯಲ್ಲಿದ್ದೇನೆ. ಚುನಾವಣಾ ಫಲಿತಾಂಶದ ನಂತರ ನಾನು ಇಲ್ಲಿಗೆ ಬಂದೆ. ನನ್ನ ಮಗಳ ಬಗ್ಗೆ, ಅವಳ ಯೋಜನೆಗಳ ಬಗ್ಗೆ ನಾನು ಯಾರೊಂದಿಗೂ ಮಾತನಾಡಿಲ್ಲ. ಅವಳು ಮದುವೆ ಬಗ್ಗೆ ನನಗೆ ಏನನ್ನೂ ಹೇಳಿಲ್ಲ. ಮಾಧ್ಯಮದಲ್ಲಿ ಏನು ವರದಿ ಆಗಿದೆಯೋ ನನಗೂ ಅಷ್ಟೇ ತಿಳಿದಿದೆ. ಅವಳು ನಮಗೆ ಆಮಂತ್ರಣ ನೀಡಿದರೆ ನಾನು ಮತ್ತು ನನ್ನ ಹೆಂಡತಿ ಹೋಗಿ ಆಶೀರ್ವಾದ ಮಾಡುತ್ತೇವೆ. ಅವಳ ಸಂತೋಷವನ್ನು ನಾವು ಬಯಸುತ್ತೇವೆ’ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ. ‘ನಮ್ಮ ಮಗಳ ನಿರ್ಧಾರದ ಬಗ್ಗೆ ನಮಗೆ ನಂಬಿಕೆ ಇದೆ. ಅವಳು ಎಂದಿಗೂ ಸಂವಿಧಾನೇತರ ಅಥವಾ ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಅವಳು ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ…

Read More

ದೊಡ್ಮನೆ ಕುಟುಂಬದ ಕುಡಿಯ ದಾಂಪತ್ಯ ಜೀವನ ಬೀದಿಗೆ ಬಿದ್ದಿದೆ. ಗಂಡ, ಹೆಂಡಿರಿಬ್ಬರು ಒಬ್ಬರ ಮೇಲೊಬ್ಬರಂತೆ ಆರೋಪ ಮಾಡುತ್ತಿದ್ದಾರೆ. ಪತ್ನಿಯಿಂದ ಕಿರುಕುಳ ಆಗುತ್ತಿದೆ ಎಂದು ಯುವ ಆರೋಪಿಸಿದ್ದಾರೆ. ಯುವ ಪರ ವಕೀಲರು ಸುದ್ದಿಗೋಷ್ಠಿ ನಡೆಸಿ ಶ್ರೀದೇವಿ ವಿರುದ್ಧ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಶ್ರೀದೇವಿಗೆ ಅನೈತಿಕ ಸಂಬಂಧವಿದೆ, ರಾಜ್​ಕುಮಾರ್ ಅಕಾಡೆಮಿಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂಬಿತ್ಯಾದಿ ಆರೋಪ ಹೊರಿಸಿದ್ದಾರೆ. ಈ ಆರೋಪಗಳಿಗೆ ಶ್ರೀದೇವಿ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ್ದ ಯುವ ಪರ ವಕೀಲರು, ‘ಶ್ರೀದೇವಿ ಅವರು ಯುವಗೆ ಟಾರ್ಚರ್ ಮಾಡಿದ್ದಾರೆ. ರಾಜ್​ಕುಮಾರ್ ಅಕಾಡೆಮಿಯಿಂದ ಪರ್ಸನಲ್ ಅಕೌಂಟ್​ಗೆ 3 ಕೋಟಿ ರೂಪಾಯಿ ಟ್ರಾನ್ಸಫರ್ ಮಾಡಿಕೊಂಡಿದ್ದಾರೆ. ನಿನ್ನನ್ನು ಬೀದಿಗೆ ತರುತ್ತೇನೆ ಎಂದು ಪತಿಗೆ ಬೆದರಿಸಿದ್ದಾರೆ. ಯುವನ ಬಳಿಕ ಅಮೆರಿಕಕ್ಕೆ ಬರುವಂತೆ ಒತ್ತಾಯ ಮಾಡಿದ್ದರು. ಬಾಯ್​ಫ್ರೆಂಡ್ ಮೂಲಕ ಮಗು ಪಡೆಯೋ ಆಲೋಚನೆಯಲ್ಲಿ ಅವರಿದ್ದರು. ರಾಧಯ್ಯ ಅನ್ನೋದು ಶ್ರೀದೇವಿ ಬಾಯ್​ಫ್ರೆಂಡ್ ಹೆಸರು’ ಎಂದು ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿದ ಶ್ರೀದೇವಿ, ‘ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಂದು ಹೆಣ್ಣಿನ ಚಾರಿತ್ಯದ ಬಗ್ಗೆ…

Read More

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದ್ದು ಸದ್ಯ ಈ ಘಟನೆ ಗಾಂಧಿನಗರದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತರಾಗಿದ್ದು, ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಆಗಾಗ ಶೇರ್ ಮಾಡುತ್ತಿರುತ್ತಾರೆ. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಸದ್ಯ ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ. ಜೂನ್ 9ರಂದು ಘಟನೆ ನಡೆದಿದ್ದು, ಚಿತ್ರದುರ್ಗದಿಂದ ರೇಣುಕಾ ಸ್ವಾಮಿ ಬೆಂಗಳೂರಿಕೆ ಕರೆದುಕೊಂಡು ಬರಲಾಗಿತ್ತು. ವಿನಯ್​ ಎನ್ನುವವರಿಗೆ…

Read More

ಹಿರಿಯ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಅವರ ಪುತ್ರಿ, ನಟಿ ಸೋನಾಕ್ಷಿ ಸಿನ್ಹಾ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸೋನಾಕ್ಷಿ ಬಾಲಿವುಡ್ ನಟ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ. ಸೋನಾಕ್ಷಿ ಹಾಗೂ ಜಹೀರ್ ಪ್ರೀತಿಸುತ್ತಿದ್ದು ಮದುವೆಗೆ ಇಬ್ಬರ ಕುಟುಂಬದ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಸೋನಾಕ್ಷಿ ಹಾಗೂ ಇಕ್ಬಾಲ್ ಜೂನ್ 23ರಂದು ದಾಂಪತ್ಯ ಬದುಕಿಗೆ ಕಾಲಿಡಲಿದ್ದಾರೆ ಎಂದು ಖಚಿತ ಮೂಲಗಳು ಮಾಹಿತಿ ನೀಡಿವೆ. 2019ರಲ್ಲಿ ಬಾಲಿವುಡ್‌ಗೆ ಕಾಲಿಟ್ಟ ಜಹೀರ್ ಇಕ್ಬಾಲ್, ವಯಸ್ಸಿನಲ್ಲೂ ಮತ್ತು ಸಿನಿಮಾರಂಗದಲ್ಲಿನ ಅನುಭವದಲ್ಲೂ ಸೋನಾಕ್ಷಿಗಿಂತ ಚಿಕ್ಕವರು. ‘ನೋಟ್‌ಬುಕ್‌’ ಚಿತ್ರದ ಮೂಲಕ ಬಾಲಿವುಡ್‌ಗೆ ಎಂಟ್ರಿ ನೀಡಿದ್ದ ಜಹೀರ್, ಆನಂತರ 2022ರಲ್ಲಿ ಸೋನಾಕ್ಷಿ ಸಿನ್ಹಾ ಜೊತೆಗೆ ‘ಡಬಲ್‌ ಎಕ್ಸ್ಎಲ್‌’ ಸಿನಿಮಾದಲ್ಲಿ ನಟಿಸಿದರು. ಈ ಚಿತ್ರದಿಂದಲೇ ಸೋನಾಕ್ಷಿ ಮತ್ತು ಜಹೀರ್ ನಡುವೆ ಪ್ರೀತಿ ಹುಟ್ಟಿಕೊಂಡಿತು ಎಂದು ಹೇಳಲಾಗಿದೆ. ಜೂನ್ 23ರಂದು ಮುಂಬೈನಲ್ಲಿ ಸೋನಾಕ್ಷಿ ಸಿನ್ಹಾ ಅವರ ಮದುವೆ ನಡೆಯಲಿದ್ದು, ಬಹಳ ಖಾಸಗಿಯಾಗಿ ಈ ವಿವಾಹ ಸಮಾರಂಭ ಜರುಗಲಿದೆ. ಮದುವೆಗೆ ಎರಡೂ ಕಡೆಯ ಕುಟುಂಬಸ್ಥರು…

Read More

28 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕೆನಡಾದ ಬ್ರಿಟಿಷ್‌ ಕೊಲಂಬಿಯ ಪ್ರಾಂತ್ಯದಲ್ಲಿ ನಡೆದಿದೆ. ಇದೀಗ ಘಟನೆಯ ಕುರಿತು ನಾಲ್ವರನ್ನು ಬಂಧಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ. ಇದು ‘ಉದ್ದೇಶಪೂರ್ವಕ ಕೊಲೆ’ ಎಂದು ಶಂಕಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಮುಂಜಾನೆ ಸರ್‍ರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಯುವರಾಜ್‌ ಗೋಯಲ್‌ ಎಂದು ಗುರುತಿಸಲಾಗಿದೆ. ಯುವರಾಜ್‌ ಅವರು ಕಾರ್‌ ಡೀಲರ್‌ಶಿಪ್‌ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇವರ ಹತ್ಯೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾಗುವ ಮುನ್ನ ಯುವರಾಜ್‌, ಭಾರತದಲ್ಲಿರುವ ತನ್ನ ತಾಯಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದ. ಎಂದಿನಂತೆ ಜಿಮ್‌ ಮುಗಿಸಿ ಮನೆಗೆ ಮರಳುವಾಗ ಕಾರಿನಿಂದ ಇಳಿದ ಕೂಡಲೇ ಹತ್ಯೆ ಮಾಡಲಾಗಿದೆ ಎಂದು ಅವರ ಸಹೋದರ ತಿಳಿಸಿದ್ದಾರೆ.

Read More

ಖೈಬರ್‌ ಪಖ್ತುಂಖ್ವಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಏಳು ಜನ ಯೋಧರು ಮೃತಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಪ್‌, ಭಯೋತ್ಪಾದನೆಯನ್ನು ದೇಶದಿಂದ ನಿರ್ಮೂಲನೆ ಮಾಡುವುದಾಗಿ ತಿಳಿಸಿದ್ದಾರೆ. ಲಕ್ಕಿ ಮರ್ವತ್‌ ಜಿಲ್ಲೆಯ ಸರ್ಬಂದ್‌ ಬಳಿ ಭಾನುವಾರ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದರು. ಆರಂಭದಲ್ಲಿ ಬಾಂಬ್‌ ದಾಳಿ ನಡೆಸಿದ ಉಗ್ರರು ಬಳಿಕ ಗುಂಡಿನ ದಾಳಿ ಆರಂಭಿಸಿದ್ದರು. ಘಟನೆಯಲ್ಲಿ ಕ್ಯಾಪ್ಟನ್‌ ಸೇರಿ 7 ಜನ ಯೋಧರು ಮೃತಪಟ್ಟಿದ್ದರು. ‘ದೇಶದ ಯೋಧರು ಮತ್ತು ನಾಗರಿಕರ ತ್ಯಾಗವನ್ನು ಸಾರ್ಥಕಗೊಳಿಸುವ ಉದ್ದೇಶದಿಂದ ದೇಶದಿಂದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ಪಣ ತೊಟ್ಟಿದ್ದೇವೆ’ ಎಂದು ಶೆಹಬಾಜ್ ಷರೀಪ್‌ ‘ಎಕ್ಸ್‌’ ಖಾತೆಯಲ್ಲಿ ತಿಳಿಸಿದ್ದಾರೆ.

Read More

ಮಾಜಿ ಗಗನಸಖಿ, ನಟಿ ನೂರ್ ಮಾಲಾಬಿಕಾ ದಾಸ್ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಬೈನಲ್ಲಿರುವ ನಟಿಯ ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ ಬರುತ್ತಿದ್ದಂತೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಕ್ಕಪಕ್ಕದ ಮನೆಯವರು ನೀಡಿದ ದೂರನ್ನು ಆಧಾರಿಸಿ ಅಪಾರ್ಟ್ ಮೆಂಟ್ ಗೆ ಬಂದ ಪೊಲೀಸರು ಮೊದಲು ಬಾಗಿಲು ಬಡಿದಿದ್ದಾರೆ.ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬರದಿದ್ದಾಗ ಬಾಗಿಲು ಒಡೆದು ಒಳಹೋಗಿದ್ದಾರೆ. ಈ ವೇಳೆ ನೂರ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಹೊರತೆಗೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ. 2023ರಲ್ಲಿ ಬಿಡುಗಡೆಗೊಂಡಿದ್ದ ‘ದಿ ಟ್ರಯಲ್‘ ವೆಬ್‌ ಸರಣಿಯಲ್ಲಿ ನಟಿ ಕಾಜೋಲ್‌ ಜತೆ ಮಾಲಾಬಿಕಾ ದಾಸ್‌ ನಟಿಸಿದ್ದರು. 31 ವರ್ಷದ ನೂರ್ ಮಾಲಾಬಿಕಾ ದಾಸ್ ಖಿನ್ನತೆಯಿಂದ ಬಳಲುತ್ತಿದ್ದರು. ಈ ಸಂಬಂಧ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಸ್ಸಾಂ ಮೂಲದ ಮಾಲಾಬಿಕಾ ತನ್ನ ವೃತ್ತಿಜೀವನವನ್ನು ಗಗನಸಖಿಯಾಗಿ ಪ್ರಾರಂಭಿಸಿರು. ನಟನೆಯ ಆಸಕ್ತಿಯಿಂದ ಅವರು ಅನೇಕ ವಯಸ್ಕ ಚಿತ್ರಗಳಲ್ಲಿ ನಟಿಸಿದ್ದಾರೆ. ಇನ್ನು…

Read More

ಬಿಗ್ ಬಾಸ್ ನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಚಂದನ್ ಹಾಗೂ ನಿವೇದಿತಾ ಜೋಡಿ ಮದುವೆಯಾದ ನಾಲ್ಕೇ ವರ್ಷಕ್ಕೆ ಡಿವೋರ್ಸ್ ಪಡೆದುಕೊಂಡಿದ್ದಾರೆ. ಈ ಇಬ್ಬರ ಡಿವೋರ್ಸ್ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ನಾನಾ ರೀತಿಯಲ್ಲಿ ವೈರಲ್ ಆಗ್ತಿದೆ. ಇದೀಗ ತಮ್ಮ ವಿಚ್ಛೇದನಕ್ಕೆ ಸಂಬಂಧಿಸಿದಂತೆ ವದಂತಿಗಳನ್ನು ಹರಡುತ್ತಿರುವ ವ್ಯಕ್ತಿಗಳು ಹಾಗೂ ಸಾಮಾಜಿಕ ಮಾಧ್ಯಮಗಳ ವಿರುದ್ಧ ನಟ, ಗಾಯಕ ಚಂದನ್‌ ಶೆಟ್ಟಿ ಹಾಗೂ ಕಿರುತೆರೆ ಕಲಾವಿದೆ ನಿವೇದಿತಾ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಚ್ಛೇದನದ ಬಳಿಕ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದ ಚಂದನ್‌-ನಿವೇದಿತಾ, ‘ನಾವು ಸ್ಪಷ್ಟನೆಗಳನ್ನು ನೀಡಿದ ಬಳಿಕವೂ ವದಂತಿಗಳನ್ನು ಹರಡಿದರೆ ಕಾನೂನಾತ್ಮಕ ಕ್ರಮ ಕೈಗೊಂಡು ಮಾನಹಾನಿ ಪ್ರಕರಣ ದಾಖಲಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ. ‘ಜೂನ್‌ 7ರಂದು ನಮಗೆ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ನೀಡಿದೆ. ಕಾನೂನಿನ ಪ್ರಕಾರ ವಿಚ್ಛೇದನ ಪಡೆದಿದ್ದೇವೆ. ಕೆಲವು ವರ್ಷಗಳಿಂದ ನನ್ನ ಜೀವನ ಶೈಲಿ ಒಂದು ಆಯಾಮದಲ್ಲಿ ಹೋದರೆ, ನಿವೇದಿತಾ ಅವರ ಜೀವನಶೈಲಿ ಇನ್ನೊಂದು ಆಯಾಮದಲ್ಲಿತ್ತು. ನಮ್ಮ ಜೀವನ, ಜೀವನಶೈಲಿ ವ್ಯಾಖ್ಯಾನಗಳು ಹೊಂದಾಣಿಕೆ ಆಗಲೇ ಇಲ್ಲ. ಒಬ್ಬರಿಗೊಬ್ಬರು ಸಮಯ…

Read More

ಮಲವಿಯ ಉಪಾಧ್ಯಕ್ಷ ಸೇರಿ ಇತರ ಒಂಬತ್ತು ಮಂದಿಯನ್ನು ಹೊತ್ತ ಮಿಲಿಟರಿ ವಿಮಾನ ನಾಪತ್ತೆಯಾಗಿದೆ.ಸೋಮವಾರ ಬೆಳಿಗ್ಗೆ ಮಾಲ್ವಾಯಿ ರಾಜಧಾನಿ ಲಿಲೊಂಗ್ವೆಯಿಂದ ಹೊರಟ ನಂತರ ಮಲವಿಯ ರಕ್ಷಣಾ ಪಡೆ ವಿಮಾನವು “ರೇಡಾರ್ನಿಂದ ಕಣ್ಮರೆಯಾಯಿತು” ಎಂದು ದೇಶದ ಅಧ್ಯಕ್ಷರ ಕಚೇರಿಯ ಹೇಳಿಕೆ ತಿಳಿಸಿದೆ. ವಿಮಾನ ಕಣ್ಮರೆಯಾದಾಗಿನಿಂದ ಅದರೊಂದಿಗೆ ಸಂಪರ್ಕ ಸಾಧಿಸಲು ವಾಯುಯಾನ ಅಧಿಕಾರಿಗಳು ಮಾಡಿದ ಎಲ್ಲಾ ಪ್ರಯತ್ನಗಳು ಇಲ್ಲಿಯವರೆಗೆ ವಿಫಲವಾಗಿವೆ ಎಂದು ಮಲವಿಯ ಅಧ್ಯಕ್ಷ ಮತ್ತು ಕ್ಯಾಬಿನೆಟ್ ಕಚೇರಿ ತಿಳಿಸಿದೆ. ವಿಮಾನಯಾನ ತಜ್ಞರು ವಿಮಾನವನ್ನು ಪತ್ತೆಹಚ್ಚಲು ಸಾಧ್ಯವಾಗದ ನಂತರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಮಲವಿ ಉಪಾಧ್ಯಕ್ಷ ಸೌಲೋಸ್ ಕ್ಲಾಸ್ ಚಿಲಿಮಾ (51) ಮತ್ತು ಇತರ ಒಂಬತ್ತು ಅನಾಮಧೇಯ ಜನರು ವಿಮಾನದಲ್ಲಿದ್ದರು. ಸ್ಥಳೀಯ ಕಾಲಮಾನ ಬೆಳಿಗ್ಗೆ 9:17 ರ ಸುಮಾರಿಗೆ ಹೊರಟ ವಿಮಾನವು ಬೆಳಿಗ್ಗೆ 10:02 ಕ್ಕೆ ಮುಜುಜು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಗದಿತ ಲ್ಯಾಂಡಿಂಗ್ ಅನ್ನು ಪೂರೈಸಲು ವಿಫಲವಾಗಿದೆ ಎಂದು ಅಧ್ಯಕ್ಷರ ಕಚೇರಿಯ ಹೇಳಿಕೆ ತಿಳಿಸಿದೆ. ಈ ಘಟನೆಯ ಬಗ್ಗೆ ಮಲವಿ ಅಧ್ಯಕ್ಷ…

Read More