Author: Author AIN

ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಕೆಲ ವರ್ಷಗಳಲ್ಲೇ ನಟಿ ಶ್ರೀಲೀಲಾ ಸ್ಟಾರ್ ಬ್ಯೂಟಿಯಾಗಿ ಮಿಂಚಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಿಗೆ ಬಣ್ಣ ಹಚ್ಚಿದ ನಟಿಗೆ ಇತ್ತೀಚೆಗೆ ಹೇಳಿಕೊಳ್ಳವಂತೆ ಬ್ರೇಕ್ ಸಿಕ್ಕಿಲ್ಲ. ಇದು ಶ್ರೀಲೀಲಾಗೆ ಸಾಕಷ್ಟು ಬೇಸರ ಮೂಡಿಸಿದೆ. ಶ್ರೀಲೀಲಾ ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಿರುವಾಗಲೇ ಅವರಿಗೆ ಪ್ರಭಾಸ್ ಸಿನಿಮಾ ನಿರ್ದೇಶಕ ಹನು ರಾಘವಪುಡಿ ಅವರು ಆಫರ್ ಒಂದನ್ನು ನೀಡಿದ್ದಾರೆ. ನಿರ್ದೇಶಕ ಹನು ರಾಘವಪುಡಿ ಹಾಗೂ ಪ್ರಭಾಸ್ ಒಟ್ಟಾಗಿ ಸೇರಿ ಸಿನಿಮಾ ಮಾಡುತ್ತಿದ್ದಾರೆ. ಆದರೆ, ಈ ಚಿತ್ರಕ್ಕೆ ಇನ್ನೂ ಟೈಟಲ್ ಫೈನಲ್ ಆಗಿಲ್ಲ. ಸದ್ಯ ನಿರ್ದೇಶಕರು ಹೀರೋಯಿನ್ ಹುಡುಕಾಟದಲ್ಲಿ ಇದ್ದಾರೆ ಎನ್ನಲಾಗಿತ್ತು. ಹೀಗಿರುವಾಗಲೇ ಶ್ರೀಲೀಲಾ ಜೊತೆ ಶೂಟ್​ನಲ್ಲಿ ಇರೋ ಫೋಟೋ ವೈರಲ್ ಆಗಿತ್ತು. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆದರು. ಆದರೆ, ಇದು ಜಾಹೀರಾತು ಶೂಟ್​ನ ಫೋಟೋ ಎಂಬುದು ತಿಳಿದು ಬಂದಿದೆ. ಶ್ರೀಲೀಲಾ ಅಮೆರಿಕ ತೆರಳಿದ್ದರು. ಆ ಬಳಿಕ ಅವರು ಭಾರತಕ್ಕೆ ಮರಳಿದರು. ಈ ವೇಳೆ ಅವರು ಜಾಹೀರಾತು ಶೂಟ್​ನಲ್ಲಿ ಭಾಗಿ ಆಗಿದ್ದರು.…

Read More

ಸೀತಾರಾಮಂ ಸಿನಿಮಾದ ಮೂಲಕ ಖ್ಯಾತಿ ಘಳಿಸಿರುವ ನಟಿ ಮೃಣಾಲ್ ಠಾಕೂರ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್‌ಗಿಂತ ದಕ್ಷಿಣ ಭಾರತದ ಸಿನಿಮಾಗಳಲ್ಲೇ ನಟಿ ಹೆಚ್ಚು ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮೃಣಾಲ್ ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಸೀತಾರಾಮಂ, ಹಾಯ್ ನಾನಾ, ಫ್ಯಾಮಿಲಿ ಸ್ಟಾರ್ ಸಿನಿಮಾಗಳ ಬಳಿಕ ಮೃಣಾಲ್ ಕಾಲಿವುಡ್‌ನಲ್ಲಿಯೂ ಮಿಂಚಲು ಸಜ್ಜಾಗಿದ್ದಾರೆ. ತಮಿಳು ನಟ ರಾಘವ್ ಲಾರೆನ್ಸ್ ನಟನೆಯ ಹೊಸ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲು ಮೃಣಾಲ್‌ಗೆ ಚಾನ್ಸ್ ಸಿಕ್ಕಿದೆ. ‘ಕಾಂಚನಾ’ ಸಿನಿಮಾದ ಮುಂದುವರೆದ ಭಾಗದಲ್ಲಿ ಮೃಣಾಲ್ ಕಾಣಿಸಿಕೊಳ್ತಿದ್ದಾರೆ. ‘ಕಾಂಚನಾ-4’ ಸಿನಿಮಾ ಮಾಡಲು ತೆರೆಮರೆಯಲ್ಲಿ ತಯಾರಿ ನಡೆಯುತ್ತಿದೆ. ಹಾರರ್ ಕಥೆಗೆ ಸ್ಕ್ರಿಪ್ಟ್ ಕೂಡ ಸಿದ್ಧವಾಗಿದೆ. ಈಗಾಗಲೇ ಚಿತ್ರತಂಡ ಮೃಣಾಲ್‌ರನ್ನು ಭೇಟಿಯಾಗಿ ಚಿತ್ರದ ಕಥೆ ಹೇಳಿದ್ದು, ನಟಿ ಕೂಡ ಓಕೆ ಎಂದಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಶೂಟಿಂಗ್ ಶುರುವಾಗಲಿದೆ. ಈ ಕುರಿತು ಚಿತ್ರತಂಡದಿಂದ ಅಧಿಕೃತ ಘೋಷಣೆಯೊಂದೆ ಭಾಕಿ ಇದೆ.

Read More

ಸದೃಡ ದೇಹ ಹೊಂದಬೇಕು, ಸದಾ ಫಿಟ್ ಎಂಡ್ ಫೈನ್ ಆಗಿ ಇರಬೇಕು ಎಂಬ ಕಾರಣಕ್ಕೆ ಅನೇಕರ್ ಜಿಮ್ ಗೆ ಹೋಗುತ್ತಾರೆ. ಜೊತೆಗೆ ಪ್ರೋಟೀನ್​​ ಪೌಡರ್​ ಸಹ ಬಳಸುತ್ತಾರೆ. ಆದರೆ ಈ ಪ್ರೋಟೀನ್‌ ಪೌಡರ್‌ ಬಳಸುವ ಮುನ್ನ ಎಚ್ಚರಿಕೆ ವಹಿಸುವುದು ಮುಖ್ಯವಾಗಿದೆ. ICMR ವರದಿಯಲ್ಲಿ ಬೆಚ್ಚಿ ಬೀಳಿಸುವ ವಿಷಯ ಬಹಿರಂಗವಾಗಿದೆ. ಜಿಮ್‌ ಮತ್ತು ಸ್ಫೋರ್ಟ್‌ಗಳಲ್ಲಿ ತೊಡಗಿಕೊಂಡಿರುವ ಯುವಕ-ಯುವತಿಯರು ಪ್ರೋಟೀನ್ ಹೆಸರಿನಲ್ಲಿ ಸ್ಲೋ ಪಾಯಿಸನ್ ಸೇವಿಸುತ್ತಿದ್ದು, ತಮಗೆ ತಾವೇ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ ಅಂತಾ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಶಾಕಿಂಗ್‌ ಸ್ಟೇಟ್ ಮೆಂಟ್ ನೀಡಿದೆ. 13 ವರ್ಷದ ಬಳಿಕ ICMR ಭಾರತೀಯರ ಫುಡ್ ಡಯಟ್ರಿ ಗೈಡ್‌ಲೈನ್ಸ್ ಬಿಡುಗಡೆ ಮಾಡಿದ್ದು, ಪ್ರೋಟಿನ್ ಪೌಡರ್ ಬಳಕೆದಾರರನ್ನು ಅಚ್ಚರಿ ಮೂಡಿಸುವ ಅಂಶಗಳು ಈ ವರದಿಯಲ್ಲಿವೆ. ಅತಿಯಾಗಿ ಪ್ರೋಟಿನ್ ಪೌಡರ್ ಸೇವನೆಯಿಂದ ಜೀವಕ್ಕೆ ಅಪಾಯವಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿದೆ. ಭಾರತದಲ್ಲಿ ಅತಿಹೆಚ್ಚು ಪ್ರೋಟೀನ್ ಪೌಡರ್‌ಗಳು ಮಾರಟವಾಗುತ್ತಿವೆ. ಇದರಲ್ಲಿ ಸಕ್ಕರೆ, ಸೋಡಿಯಂ, ಪೋಟ್ಯಾಷಿಯಂ ಸೇರಿದಂತೆ ಹಲವು ಕೆಮಿಕಲ್ ಅಂಶಗಳು…

Read More

ರಶ್ಮಿಕಾ ಮಂದಣ್ಣ ಹಾಗೂ ರಣವೀರ್ ಕಪೂರ್ ನಟನೆಯ ಅನಿಮಲ್ ಸಿನಿಮಾದಲ್ಲಿ ನಟಿಸಿದ ಬಾಲಿವುಡ್ ನಟಿ ತೃಪ್ತಿ ದಿಮ್ರಿಗೆ ಸಖತ್ ಬೇಡಿಕೆ ಶುರುವಾಗಿದೆ. ತೃಪ್ತಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿದ್ದಾರೆ. ಇದೀಗ ತೃಪ್ತಿ ಮುಂಬೈನಲ್ಲಿ ದುಬಾರಿ ಮನೆಯನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಮುಂಬೈನ ಬಾಂದ್ರಾ ವೆಸ್ಟ್ ಪ್ರದೇಶದ ಕಾರ್ಟರ್ ರಸ್ತೆಯಲ್ಲಿ ತೃಪ್ತಿ ದಿಮ್ರಿ ಐಷಾರಾಮಿ ಬಂಗಲೆಯನ್ನು ಖರೀದಿಸಿದ್ದಾರೆ. ಈ ದುಬಾರಿ ಬಂಗಲೆಯ ಬೆಲೆ 14 ಕೋಟಿ ರೂ. ಮೌಲ್ಯ ಎನ್ನಲಾಗುತ್ತಿದೆ. ಈ ಬಂಗಲೆಯನ್ನು ಒಟ್ಟು 2,226 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದ್ದು ಎರಡು ಅಂತಸ್ಥಿನ ಕಟ್ಟಡ ಎನ್ನಲಾಗುತ್ತಿದೆ. ನಟಿ ಮನೆಗೆ 70 ಲಕ್ಷ ರೂ. ಅಡ್ವಾನ್ಸ್ ಕೂಡ ಪಾವತಿಸಲಾಗಿದೆ. ಮುಬೈನ ಬಾಂದ್ರ ದುಬಾರಿ ಏರಿಯಾಗಳಲ್ಲಿ ಒಂದು. ಈಗಾಗ್ಲೆ ಹಲವು ನಟ, ನಟಿಯರು ಇಲ್ಲಿ ಮನೆ ಖರೀದಿ ಮಾಡಿದ್ದಾರೆ. ಇದೀಗ ತೃಪ್ತಿ ಕೂಡ ಈ ಏರಿಯಾದಲ್ಲಿ ಮನೆ ಖರೀದಿ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಅಂದ ಹಾಗೆ ತೃಪ್ತಿ ಅನಿಮಲ್ ಸಿನಿಮಾದಲ್ಲಿ ಸಣ್ಣ…

Read More

ಬಹುತಾರಾಗಣದ ‘ಕಲ್ಕಿ 2898’ ಸಿನಿಮಾಗಾಗಿ ಅಭಿಮಾನಿಗಳು ತುದಿಗಾಲಲ್ಲಿ ಕಾಯ್ತಿದ್ದಾರೆ.  ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ ಸಿನಿಮಾದಲ್ಲಿ ಪ್ರಭಾಸ್,  ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಬ್ ಬಚ್ಚನ್, ದಿಶಾ ಪಟಾನಿ ಸೇರಿದಂತೆ ಹಲವು ಘಟಾನುಘಟಿ ಕಲಾವಿದೇ ಬಣ್ಣ ಹಚ್ಚಿದ್ದಾರೆ.’ ಕಲ್ಕಿ 2898 AD’ ಸಿನಿಮಾ ಜೂನ್ 27ಕ್ಕೆ ವಿಶ್ವದಾದ್ಯಂತ ತೆರೆಗೆ ಬರಲಿದೆ. ಇದೀಗ ನಟಿ ದೀಪಿಕಾ ಪಡುಕೋಣೆ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು ಪೋಸ್ಟರ್ ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ದೀಪಿಕಾ ಪಡುಕೋಣೆ ಸೂಪರ್‌ಸ್ಟಾರ್ ಪ್ರಭಾಸ್ ಅವರ ‘ಕಲ್ಕಿ 2898 AD’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ ದೀಪಿಕಾ ಸಂಪೂರ್ಣವಾಗಿ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಿರ್ಮಾಪಕರು ‘ಕಲ್ಕಿ 2898 AD’ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದು, ಪೋಸ್ಟರ್ ನೋಡಿದ ನಂತರ ದೀಪಿಕಾ ಪಡುಕೋಣೆ ಪತಿ ರಣವೀರ್ ಸಿಂಗ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ದೀಪಿಕಾ ಪಡುಕೋಣೆ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ ನಲ್ಲಿ ‘ಕಲ್ಕಿ 2898 ಎಡಿ’ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. …

Read More

ಸಿಯೋಲ್ ಗಡಿ ಪ್ರದೇಶಗಳಲ್ಲಿ ಕಸ ಮತ್ತು ಗೊಬ್ಬರ ತುಂಬಿದ ಒಂದು ಸಾವಿರ ಬಲೂನ್‌ಗಳನ್ನು ಹಾರಿಬಿಟ್ಟ ಉತ್ತರ ಕೊರಿಯಾದ ವಿರುದ್ಧ ದಕ್ಷಿಣ ಕೊರಿಯಾ ಪ್ರತೀಕಾರಕ್ಕೆ ಮುಂದಾಗಿದೆ. ತಾನು ಧ್ವನಿವರ್ಧಕಗಳಲ್ಲಿ ಉತ್ತರ ಕೊರಿಯಾ ವಿರೋಧಿ ಪ್ರಚಾರ ಮಾಡುವುದಾಗಿ ಘೋಷಿಸಿದೆ. ಇದರಿಂದ ಉತ್ತರ ಕೊರಿಯಾ ಕೆರಳುವ ಸಾಧ್ಯತೆಯಿದ್ದು, ಅದು ಪ್ರತೀಕಾರದ ಭಾಗವಾಗಿ ಮಿಲಿಟರಿ ಕಾರ್ಯಾಚರಣೆ ಆರಂಭಿಸುವ ಸಂಭವ ಇದೆ. ಎರಡೂ ಬದ್ಧವೈರಿ ದೇಶಗಳ ನಡುವೆ ಇದು ಮನಸ್ತಾಪ ಹೆಚ್ಚಿಸಲಿದ್ದು, ಅಣ್ವಸ್ತ್ರ ಹೊಂದಿರುವ ಉತ್ತರ ಕೊರಿಯಾ ಬಿಕ್ಕಟ್ಟನ್ನು ತೀವ್ರಗೊಳಿಸಬಹುದು ಎನ್ನಲಾಗುತ್ತಿದೆ. ದಕ್ಷಿಣ ಕೊರಿಯಾ ರಾಷ್ಟ್ರೀಯ ಭದ್ರತಾ ನಿರ್ದೇಶಕ ಚಾಂಗ್-ಹೊ-ಜಿನ್ ನೇತೃತ್ವದಲ್ಲಿ ತುರ್ತು ಸಭೆ ನಡೆಸಿದ ನಂತರ ಅಧಿಕಾರಿಗಳು ಧ್ವನಿವರ್ಧಕಗಳ ಮೂಲಕ ಪ್ರಚಾರ ಕಾರ್ಯ ಆರಂಭಿಸಲು ನಿರ್ಧರಿಸಲಾಯಿತು ಎಂದು ಸಿಯೋಲ್‌ನ ಅಧ್ಯಕ್ಷೀಯ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಉತ್ತರ ಕೊರಿಯಾ ನೂರಾರು ಬಲೂನ್‌ಗಳನ್ನು ದಕ್ಷಿಣ ಕೊರಿಯಾದೊಳಗೆ ಹಾರಿಸುವುದನ್ನು ಮುಂದುವರೆಸಿದ್ದು, ಮೇ ತಿಂಗಳಿನಿಂದ ಮೂರನೇ ಬಾರಿಗೆ ಹೀಗೆ ಮಾಡಲಾಗುತ್ತಿದೆ ಎಂದು ದಕ್ಷಿಣ ಕೊರಿಯಾದ ಸೇನೆ ಹೇಳಿದೆ.

Read More

ಪ್ರೀತಿಸಿ ಮದುವೆಯಾಗಿದ್ದು ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆಯಾದ ನಾಲ್ಕವೇ ವರ್ಷಕ್ಕೆ ದೂರ ದೂರವಾಗಿದ್ದಾರೆ. ಈ ಬೆನ್ನಲ್ಲೇ ಜೋಡಿಯ ಬಗ್ಗೆ ಹಲವು ವಿಚಾರಗಳು ಚರ್ಚೆಯಾಗುತ್ತಿದೆ. ಸದ್ಯ ಚಂದನ್ ಶೆಟ್ಟಿಯಿಂದ ನಿವೇದಿತಾ ಗೌಡ ಜೀವನಾಂಶ ಪಡೆದ್ರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಬಗ್ಗೆ ಚಂದನ್ ಅವರ ಲಾಯರ್‌ ಅನಿತಾ ಸ್ಪಷ್ಟನೆ ನೀಡಿದ್ದಾರೆ.  ನಟ ಚಂದನ್ ಶೆಟ್ಟಿ ಮತ್ತು ನಿವೇದಿತಾ ಇಬ್ಬರೂ ವೃತ್ತಿಜೀವನದಲ್ಲಿ ಬಿಜಿಯಾಗಿದ್ದಾರೆ. ಹೀಗಾಗಿ, ಯಾರೂ ಜೀವನಾಂಶ ಕೇಳಿಲ್ಲ. ತುಂಬಾ ಗೌರವಯುತವಾಗಿ ದಾಂಪತ್ಯ ಜೀವನದಿಂದ ಇಬ್ಬರೂ ಹೊರಗೆ ಬಂದಿದ್ದಾರೆ. ಇಬ್ಬರಿಗೂ ಒಬ್ಬರಿಗೊಬ್ಬರ ಮೇಲೆ ತುಂಬಾ ಗೌರವ ಇದೆ ಎಂದು ಮಾಧ್ಯಮಗಳ ಮುಂದೆ ಲಾಯರ್ ಅನಿತಾ ಹೇಳಿದ್ದಾರೆ. ಡಿವೋರ್ಸ್ ಪ್ರಕ್ರಿಯೆ ವೇಳೆ, ಪತಿಯಿಂದ ಪತ್ನಿ ಜೀವನಾಂಶ ಕೇಳುವುದು ಸಾಮಾನ್ಯ. ಆದರೆ, ಪತಿ ಚಂದನ್ ಶೆಟ್ಟಿ ಅವರಿಂದ ನಿವೇದಿತಾ ಗೌಡ ಜೀವನಾಂಶ ಕೇಳಿಲ್ಲ ಎಂದು ಲಾಯರ್ ಅನಿತಾ ಸ್ಪಷ್ಟಪಡಿಸಿದ್ದಾರೆ. ಒಂದು ವರ್ಷದ ಹಿಂದೆಯೇ ವಿಚ್ಛೇದನದ ಬಗ್ಗೆ ನಿವೇದಿತಾ ಮತ್ತು ಚಂದನ್ ಶೆಟ್ಟಿ ತೀರ್ಮಾನ…

Read More

ಬಿಗ್ ಬಾಸ್ ನಲ್ಲಿ ಪ್ರೀತಿಸಿ ಮದುವೆಯಾಗಿದ್ದ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆಯಾದ ನಾಲ್ಕೇ ವರ್ಷಕ್ಕೆ ಡಿವೋರ್ಸ್ ಪಡೆದುಕೊಂಡಿದ್ದಾರೆ. ಈ ಬಗ್ಗೆ ಸಾಕಷ್ಟು ಮಂದಿ ಅಸಮಾಧಾನ ಹೊರ ಹಾಕಿದ್ದಾರ. ಅಂತೆಯೇ ವಿಷಯ ತಿಳಿದ ನಟ ಹಾಗೂ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಇಬ್ಬರನ್ನು ಒಂದು ಮಾಡುವೆ ಅದಿದ್ದರು. ಆದರೆ ಈಗ ಪ್ರಥಮ್ ಆಕ್ರೋಶ ಹೊರ ಹಾಕಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾ ಸಂಸಾರದಲ್ಲಿ ನೀವೇಕೆ ಮೂಗು ತೂರಿಸುತ್ತಿದ್ದೀರಾ? ಎಂದಿದ್ದ ನೆಟ್ಟಿಗರು, ಅವರಿಬ್ಬರ ವಿಚಾರವನ್ನು ತಮ್ಮ ಜನಪ್ರಿಯತೆಗೆ ಸಿನಿಮಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದೀರಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಇದರಿಂದ ಸಿಟ್ಟಾಗಿರುವ ಪ್ರಥಮ್ ಸೋಷಿಯಲ್ ಮೀಡಿಯಾದಲ್ಲಿ ಸಿಟ್ಟಿಗೆದ್ದಿದ್ದಾರೆ. ಚಂದನ್ ಶೆಟ್ಟಿ ನನ್ನ ಮದುವೆಗೆ ಬಂದಿದ್ರು, ಅವ್ರ ವಿಚಾರದಲ್ಲಿ ಸಂಧಾನ ಮಾಡೋಣ ಅಂತ ಶಕ್ತಿಮೀರಿ ಪ್ರಯತ್ನಿಸಿದೆ. ಹಾಳಾದ ಕೆಲವು ಯೂಟ್ಯೂಟ್ ವಿಡಿಯೋ ನಾನ್ ಹೇಳಿದ್ದಕ್ಕೆ ಏನೇನೋ ಶೀರ್ಷಿಕೆ ಹಾಕಿವೆ. ಇಲ್ಲಿಗೆ ನಿಲ್ಲಿಸಿ, ನನಗೂ ಇದಕ್ಕೂ ಇನ್ಮೇಲೆ ಸಂಬಂಧವಿಲ್ಲ, ನಾನು ಯಾವ ಸಂಧಾನಕ್ಕೂ ಹೋಗಲ್ಲ. ಥೂ…

Read More

ಪಾಕಿಸ್ತಾನದಲ್ಲಿ ಈ ವರ್ಷದ ಐದನೇ ಪೋಲಿಯೊ ಪ್ರಕರಣ ದೃಢಪಟ್ಟಿದೆ. ಪೋಲಿಯೊ ಪೀಡಿತ ಮಗುವೊಂದು ಮೃತಪಟ್ಟ ಹದಿನೈದು ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ. ಈ ಸೋಂಕು ನಿರ್ಮೂಲನೆಗೆ ಪಾಕಿಸ್ತಾನ ಸರ್ಕಾರ ನಡೆಸುತ್ತಿರುವ ಪ್ರಯತ್ನಕ್ಕೆ ಈ ಮೂಲಕ ಮತ್ತೊಂದು ಹಿನ್ನಡೆ ಆಗಿದೆ. ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ಎರಡು ವರ್ಷದ ಮಗುವೊಂದು ಮೇ 22 ರಂದು ಮೃತಪಟ್ಟಿತ್ತು. ಪೋಲಿಯೊ ಸೋಂಕಿನಿಂದ ಮಗು ಮೃತಪಟ್ಟಿದೆ ಎಂಬುದು ದೃಢಪಟ್ಟಿರುವುದಾಗಿ ಡಾನ್‌ ದಿನಪತ್ರಿಕೆ ವರದಿ ಮಾಡಿದೆ. ಏಪ್ರಿಲ್‌ 29 ರಂದು ಇದ್ದಕ್ಕಿದ್ದಂತೆ ಮಗುವಿನ ಕಾಲುಗಳ ಶಕ್ತಿ ಕುಂದಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕರಾಚಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಸೋಂಕು ಉಲ್ಬಣಗೊಂಡು ಸೋಂಕು ಕೈಗಳಿಗೂ ಹಬ್ಬಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಕೆಲ ದಿನಗಳ ಬಳಿಕ ಮಗು ಮೃತಪಟ್ಟಿದೆ ಎಂದು ವರದಿಯಾಗಿದೆ. ಪೋಲಿಯೊ ಲಸಿಕೆ ಅಭಿಯಾನದ ಅವಧಿಯಲ್ಲಿ ಮಗು ಲಸಿಕೆ ಪಡೆದುಕೊಂಡಿರಲಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಬಲೂಚಿಸ್ತಾನ ಪ್ರಾಂತ್ಯದಲ್ಲಿ ಈ ವರ್ಷ ನಾಲ್ಕು ಪೋಲಿಯೊ ಪ್ರಕರಣಗಳು ದೃಢಪಟ್ಟಿವೆ. ಜೂನ್‌ 1 ರಂದು ಸಿಂಧ್‌…

Read More

ನರೇಂದ್ರ ಮೋದಿ 3ನೇ ಭಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಮೋದಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಈ ವೇಳೆ ನಟರಾದ ರಜನಿಕಾಂತ್, ಶಾರುಖ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಈ ವೇಳೆ ನಟರಾದ ಶಾರುಖ್ ಖಾನ್ ಹಾಗೂ ಅಕ್ಷಯ್ ಕುಮಾರ್ ತಬ್ಬಿಕೊಂಡಿದ್ದು ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರ ಕಾರ್ಯಕ್ರಮಕ್ಕೆ ಹಲವು ನಟ, ನಟಿಯರಿಗೆ ಆಹ್ವಾನ ನೀಡಲಾಗಿತ್ತು. ಅಂತೆಯೇ ಬಾಲಿವುಡ್ ಸ್ಟಾರ್‌ಗಳಾದ ಶಾರುಖ್ ಖಾನ್, ಅಕ್ಷಯ್ ಕುಮಾರ್, ಕಂಗನಾ ರಣಾವತ್, ಅನುಪಮ್ ಖೇರ್, ವಿಕ್ರಾಂತ್, ಬಾಲಿವುಡ್‌ ನಿರ್ಮಾಪಕ ರಾಜ್‌ಕುಮಾರ್ ಹಿರಾನಿ, ರಜನಿಕಾಂತ್, ಪವನ್ ಕಲ್ಯಾಣ್ ಸೇರಿದಂತೆ ಹಲವರು ಭಾಗಿಯಾಗಿ ಮೋದಿಗೆ ಶುಭ ಹಾರೈಸಿದರು. ಶಾರುಖ್​ ಖಾನ್​ ಅವರು ಮುಖೇಶ್​ ಅಂಬಾನಿ ಮತ್ತು ಅನಂತ್​ ಅಂಬಾನಿ ಅವರ ಜೊತೆ ಆಗಮಿಸಿದರು. ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರವನ್ನು ನೋಡಲು…

Read More