ಡೆನ್ಮಾರ್ಕ್ ಪ್ರಧಾನಿ ಮೆಟೆ ಫ್ರೆಡೆರಿಕ್ಸನ್ ಮೇಲೆ ಹಲ್ಲೆ ನಡೆದಿದ್ದು ಪ್ರಧಾನಿಗೆ ಯಾವುದೇ ಗಾಯವಾಗಿಲ್ಲ. ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋಪನ್ಹ್ಯಾಗನ್ನ ಕಲ್ಟೋರ್ವೆಟ್ ಎಂಬಲ್ಲಿ ಶುಕ್ರವಾರ ಸಂಜೆ ಮೆಟೆ ಫ್ರೆಡೆರಿಕ್ಸನ್ ಮೇಲೆ ಹಲ್ಲೆ ನಡೆಸಲಾಗಿದ್ದು ಘಟನೆಯಿಂದ ಪ್ರಧಾನಿ ತೀವ್ರ ಆಘಾತಗೊಂಡಿದ್ದಾರೆ. ಆರೋಪಿಯನ್ನು ಬಂಧಿಸಿದ್ದು ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ದೊರಕಬಹುದು ಎಂದು ಪ್ರಧಾನಿಯವರ ಕಚೇರಿ ಹೇಳಿಕೆ ನೀಡಿದೆ. ಕೋಪನ್ಹ್ಯಾಗನ್ ವೃತ್ತದ ಬಳಿ ಪ್ರಧಾನಿ ನಿಂತಿದ್ದಾಗ ಅವರ ಎದುರುಗಡೆಯಿಂದ ಬಂದ ವ್ಯಕ್ತಿಯೊಬ್ಬ ಅವರ ಭುಜದ ಮೇಲೆ ಬಲವಾಗಿ ತಳ್ಳಿದಾಗ ಪ್ರಧಾನಿ ಕೆಳಗೆ ಬಿದ್ದರು. ಸುತ್ತಮುತ್ತ ಇದ್ದವರು ಅಲ್ಲಿಗೆ ಬರುತ್ತಿದ್ದಂತೆಯೇ ಆ ವ್ಯಕ್ತಿ ಅಲ್ಲಿಂದ ಪರಾರಿಯಾಗಲು ಪ್ರಯತ್ನಿಸಿದ. ಆದರೆ ಭದ್ರತಾ ಸಿಬಂದಿ ಆತನನ್ನು ಬಂಧಿಸಿ ಕರೆದೊಯ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಯುರೋಪಿಯನ್ ಪಾರ್ಲಿಮೆಂಟ್ ಅಧ್ಯಕ್ಷೆ ರೋಬರ್ಟಾ ಮೆಟ್ಸೋಲಾ, ಯುರೋಪಿಯನ್ ಯೂನಿಯನ್ ಮುಖ್ಯಸ್ಥ ಚಾಲ್ರ್ಸ್ ಮಿಚೆಲ್, ಯುರೋಪಿಯನ್ ಯೂನಿಯನ್ ಕಮಿಷನ್ ಮುಖ್ಯಸ್ಥೆ ಉರ್ಸುಲಾ ವಾನ್ಡರ್ ಹಲ್ಲೆ ಪ್ರಕರಣವನ್ನು ಖಂಡಿಸಿದ್ದಾರೆ. ಯುರೋಪಿಯನ್ ಯೂನಿಯನ್ ಚುನಾವಣೆಯಲ್ಲಿ…
Author: Author AIN
ಬಾಲಿವುಡ್ ನಟಿ ಹಾಗೂ ನೂತನ ಸಂಸದೆ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಈ ಬಗ್ಗೆ ಪರ ವಿರೋದಗಳು ಕೇಳಿ ಬರ್ತಿದೆ. ಘಟನೆಯ ಕುರಿತು ಸಾಕಷ್ಟು ಮಂದಿ ತಮ್ಮ ಅಭಿಪ್ರಾಐ ವ್ಯಕ್ತಪಡಿಸಿದ್ದಾರೆ. ಇದೀಗ ಕಪಾಳಮೋಕ್ಷ ಮಾಡಿದ ಕುಲ್ವಿಂದರ್ ಕೌರ್ ಪರವಾಗಿ ನಿಂತವರ ವಿರುದ್ಧ ಕಂಗನಾ ಕಿಡಿ ಕಾರಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ವಾಗ್ದಾಳಿ ನಡೆಸುತ್ತಿದ್ದಾರೆ. X ನಲ್ಲಿ ಪೋಸ್ಟ್ ಹಂಚಿಕೊಂಡ ಕಂಗನಾ, “ಪ್ರತಿಯೊಬ್ಬ ಅತ್ಯಾಚಾರಿ, ಕೊಲೆಗಾರ ಅಥವಾ ಕಳ್ಳ ಯಾವಾಗಲೂ ಅಪರಾಧ ಮಾಡುವ ಹಿಂದೆ ಬಲವಾದ ಭಾವನಾತ್ಮಕ, ದೈಹಿಕ, ಮಾನಸಿಕ ಅಥವಾ ಆರ್ಥಿಕ ಕಾರಣವನ್ನು ಹೊಂದಿರುತ್ತಾನೆ. ಕಾರಣವಿಲ್ಲದೆ ಯಾರೂ ಯಾವುದೇ ಅಪರಾಧವನ್ನು ಮಾಡುವುದಿಲ್ಲ, ಆದರೂ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಜೈಲಿಗೆ ಹಾಕಲಾಗುತ್ತದೆ” ಎಂದು ಬರೆದಿದ್ದಾರೆ. ‘ನೆನಪಿಡಿ, ಯಾರೊಬ್ಬರ ದೇಹವನ್ನು ಸ್ಪರ್ಶಿಸುವುದು ಮತ್ತು ಅವರ ಮೇಲೆ ಹಲ್ಲೆ ಮಾಡುವುದನ್ನು ನೀವು ಒಪ್ಪಿದರೆ, ನೀವು ಅತ್ಯಾಚಾರ ಅಥವಾ ಕೊಲೆಯನ್ನು ಸಹ ಬೆಂಬಲಿಸಿದಂತೆಯೇ. ನಿಮ್ಮ ಮಾನಸಿಕ…
ನಟಿ, ಸಂಸದೆ ಕಂಗನಾ ರನೌತ್ ಅವರಿಗೆ ಸಿಐಎಸ್ಎಫ್ ಮಹಿಳಾ ಕಾನ್ಸ್ಟೆಬಲ್ ಕಪಾಳಕ್ಕೆ ಹೊಡೆದಿರುವ ಕುರಿತು ಪರ- ವಿರೋಧ ಚರ್ಚೆ ನಡೆಯುತ್ತಿದೆ. ಈ ನಡುವೆ ಆಸ್ಕರ್ ಸಮಾರಂಭದಲ್ಲಿ ನಿರೂಪಕ ಕ್ರಿಸ್ ರಾಕ್ ಅವರಿಗೆ ಹಾಲಿವುಡ್ ನಟ ವಿಲ್ ಸ್ಮಿತ್ ಅವರು ಕಪಾಳಮೋಕ್ಷ ಮಾಡಿದ್ದನ್ನು ಸಮರ್ಥಿಸಿ ಕಂಗನಾ ಅವರು ಮಾಡಿದ್ದ ಹಳೆ ಪೋಸ್ಟ್ ವೈರಲ್ ಆಗಿದೆ. 2022ರ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ವೇದಿಕೆ ಮೇಲೆ ಬಂದ ವಿಲ್ ಸ್ಮಿತ್ ನಿರೂಪಕ ಕ್ರಿಸ್ ರಾಕ್ ಅವರ ಕಪಾಳಕ್ಕೆ ಹೊಡೆದಿದ್ದರು. ತಮ್ಮ ಪತ್ನಿಯ ಬೋಳು ತಲೆಯ ಬಗ್ಗೆ ರಾಕ್ ತಮಾಷೆ ಮಾಡಿದ್ದಕ್ಕೆ ಕೋಪಗೊಂಡ ಸ್ಮಿತ್ ಎಲ್ಲರ ಎದುರೆ ಕೆನ್ನೆಗೆ ಭಾರಿಸಿದ್ದರು. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಪರ-ವಿರೋಧ ಚರ್ಚೆಯನ್ನು ಹುಟ್ಟುಹಾಕಿತ್ತು. ಇದಾದ ಬಳಿಕ ಸ್ಮಿತ್ ಬಹಿರಂಗ ಕ್ಷಮೆಯಾಚಿಸಿದ್ದರು. ವಿಲ್ ಸ್ಮಿತ್ ಕಪಾಳಮೋಕ್ಷ ಮಾಡಿರುವುದನ್ನು ಸಮರ್ಥಿಸಿಕೊಂಡಿದ್ದ ಕಂಗನಾ ರನೌತ್, ಆ ಬಗ್ಗೆ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದರು. ‘ಮೂರ್ಖರ ಗುಂಪನ್ನು ನಗಿಸುವುದಕೋಸ್ಕರ ಒಬ್ಬ…
ಹಮಾಸ್ ಜೊತೆಗಿನ ಯುದ್ಧ ಪ್ರಾರಂಭವಾದ ಬಳಿಕ ಒತ್ತೆಯಾಳುಗಳನ್ನು ರಕ್ಷಿಸಲು ಇಸ್ರೇಲ್ ಅತಿದೊಡ್ಡ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಮಧ್ಯ ಗಾಝಾದಲ್ಲಿ ನಡೆದ ಭೀಕರ ಹೋರಾಟದ ಮಧ್ಯೆ ಅಪಹರಣಕಾರರ ಬಂಧನದಿಂದ ನಾಲ್ವರು ಇಸ್ರೇಲಿಗಳನ್ನು ರಕ್ಷಿಸಲಾಗಿದೆ. ಗಾಜಾದ ಆರೋಗ್ಯ ಸಚಿವಾಲಯದ ಪ್ರಕಾರ, ಒತ್ತೆಯಾಳುಗಳನ್ನು ರಕ್ಷಿಸಿದ ಕೇಂದ್ರ ಗಾಜಾದ ಸ್ಥಳದಲ್ಲಿ ಶನಿವಾರ ನಡೆದ ಭೀಕರ ಹೋರಾಟದಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 210 ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7ರಂದು ಫೆಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್ ದಾಳಿ ನಡೆಸಿ ಈ ವ್ಯಕ್ತಿಗಳನ್ನು ಅಪಹರಿಸಿತ್ತು. ನುಸಿರಾತ್ನಲ್ಲಿ ನಡೆದ ಸಂಕೀರ್ಣ ಕಾರ್ಯಾಚರಣೆಯಲ್ಲಿ ನೋವಾ ಅರ್ಗಮಾನಿ (25), ಅಲ್ಮೋಗ್ ಮಿರ್ (21), ಆಂಡ್ರೆ ಕೊಜ್ಲೋವ್ (27) ಮತ್ತು ಶ್ಲೋಮಿ ಜಿವ್ (40) ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ತಿಳಿಸಿದೆ. ನುಸ್ಸೀರತ್ ನ ಮಧ್ಯಭಾಗದಲ್ಲಿರುವ ಎರಡು ಪ್ರತ್ಯೇಕ ಸ್ಥಳಗಳಿಂದ ಒತ್ತೆಯಾಳುಗಳನ್ನು ರಕ್ಷಿಸಲಾಗಿದೆ ಮತ್ತು ಅವರೆಲ್ಲರೂ ಚೆನ್ನಾಗಿದ್ದಾರೆ ಎಂದು ಅದು ಹೇಳಿದೆ. ರಕ್ಷಿಸಲಾದ ನಾಲ್ವರು ಒತ್ತೆಯಾಳುಗಳನ್ನು ವೈದ್ಯಕೀಯ ಪರೀಕ್ಷೆಗಳಿಗಾಗಿ ಹೆಲಿಕಾಪ್ಟರ್ ಮೂಲಕ ಕರೆದೊಯ್ಯಲಾಯಿತು ಮತ್ತು 246…
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ರ ಮಾಜಿ ಪತ್ನಿ ರೇಣು ದೇಸಾಯಿ ಎರಡನೇ ಮದುವೆಗೆ ರೆಡಿಯಾಗಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. 2009ರಲ್ಲಿ ನಟ ಪವನ್ ಕಲ್ಯಾಣ್ ಅವರನ್ನು ಮದುವೆಯಾಗಿದ್ದ ರೇಣು ದೇಸಾಯಿ 2012ರಲ್ಲಿ ಬೇರೆ ಬೇರೆಯಾದರು. ಇದೀಗ ಪವನ್ ಕಲ್ಯಾಣ್ ರಿಂದ ದೂರವಾದ 12 ವರ್ಷದ ಬಳಿಕ ರೇಣು ದೇಸಾಯಿ ಎರಡನೇ ಮದುವೆ ಆಗುತ್ತಿದ್ದಾರೆ ಎನ್ನಲಾಗಿದೆ. ರವಿ ತೇಜ ನಟನೆಯ ‘ಟೈಗರ್ ನಾಗೇಶ್ವರ್ ರಾವ್’ ಸಿನಿಮಾದಲ್ಲಿ ರೇಣು ನಟಿಸಿದ್ದರು. ಈ ಸಿನಿಮಾದ ಪ್ರಮೋಷನ್ ನಲ್ಲಿ ಭಾಗಿಯಾಗಿದ್ದ ನಟಿ ತಮ್ಮ ವೈಯಕ್ತಿಯಕ ವಿಚಾರದ ಬಗ್ಗೆಯೂ ಮಾತನಾಡಿದ್ದರು. ನನ್ನ ವೈಯಕ್ತಿಕ ಬದುಕಿನ ಬಗ್ಗೆ ಎಲ್ಲರಿಗೂ ವಿವರ ಕೊಡುವ ಅಗತ್ಯವಿಲ್ಲ. ಹಿರಿಯರು ಒಪ್ಪಿಗೆ ಪಡೆದು ಸೂಕ್ತ ವ್ಯಕ್ತಿಯನ್ನು ಮದುವೆಯಾಗಬೇಕು ಎಂದುಕೊಂಡೆ. ಕುಟುಂಬದ ಸ್ನೇಹಿತರ ಒಪ್ಪಿಗೆ ಮೇರೆಗೆ ನಿಶ್ಚಿತಾರ್ಥ ನಡೆಯಿತ್ತು. ನಿಶ್ಚಿತಾರ್ಥದ ಬಳಿಕ ಮಕ್ಕಳಿದ್ದಾರೆ ಅವರಿಗೆ ಬೆಂಬಲವಾಗಿ ಇರಬೇಕು ಎಂದು ನನ್ನ ಫ್ಯಾಮಿಲಿ ಫ್ರೆಂಡ್ಸ್ ಹೇಳಿದ್ದಾರೆ. ನನ್ನ ನಿಶ್ಚಿತಾರ್ಥದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಡಾಲಿ ಧನಂಜಯ ನಟನೆಯ ಕೋಟಿ ಸಿನಿಮಾದ ಮೊದಲ ಟಿಕೇಟನ್ನು ಚಿತ್ರತಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ನೀಡಲಾಗಿದೆ. ಅದ್ಧೂರಿಯಾಗಿ ನಡೆದ ʻಕೋಟಿʼ ಸಿನಿಮಾದ ವಿಶೇಷ ಪ್ರೀ ರಿಲೀಸ್ ಟಿವಿ ಕಾರ್ಯಕ್ರಮಕ್ಕೆ ಸುದೀಪ್ ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು ನೆರೆದಿದ್ದ ಜನರ ರಂಜಿಸಿದರು. ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ʻಕೋಟಿʼಯ ಮೊದಲ ಟಿಕೇಟ್ ನೀಡಿತು. ಚಿತ್ರದ ಹೊಸ ಪೋಸ್ಟರ್ವೊಂದನ್ನು ಬಿಡುಗಡೆ ಮಾಡಿದ ಕಿಚ್ಚ ಸುದೀಪ್, ಧನಂಜಯ್ ಮತ್ತು ನಿರ್ದೇಶಕ ಪರಮ್ ಅವರಿಗೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು. ಈಗಾಗಲೇ ‘ಕೋಟಿ’ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದ್ದು ಭಾರಿ ಮೆಚ್ಚುಗೆ ಗಳಿಸುತ್ತಿದೆ. ಡಾಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು ಹೊಂದಿರುವ…
ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಒಂದೇ ಕಾರಿನಲ್ಲಿ ಒಟ್ಟಿಗೆ ಬಂದು ಅರ್ಜಿ ಸಲ್ಲಿಸಿ ಕೈಕೈ ಹಿಡಿದುಕೊಂಡು ವಾಪಸ್ ಹೊರಟಿದ್ದರು. ಈ ಮಧ್ಯೆ ಇಬ್ಬರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆಯಾಗುತ್ತಿದ್ದು ಈ ಮಧ್ಯೆ ಸೃಜಲ್ ಲೋಕೇಶ್ ಅವರನ್ನು ನೆಟ್ಟಿಗರು ಎಳೆದು ತಂದಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ಜನಪ್ರಿಯರಾಗಿದ್ದ ಈ ಜೋಡಿಯು ಬೇರ್ಪಡುವುದು ಅವರ ಫಾಲೋವರ್ಸ್ಗಳಿಗೆ ಶಾಕ್ ನೀಡಿದೆ. ಇನ್ನು ಚಂದನ್- ನಿವೇದಿತಾ ಡಿವೋರ್ಸ್ ವಿಚಾರದಲ್ಲಿ ಕೆಲವರು ನಟ ಸೃಜನ್ ಲೋಕೇಶ್ ಹೆಸರು ಎಳೆದುತಂದು ಟ್ರೋಲ್ ಮಾಡುತ್ತಿದ್ದಾರೆ. ನಿವೇದಿತಾ ಹುಟ್ಟುಹಬ್ಬದ ದಿನ ಸೃಜನ್ ಲೋಕೇಶ್ ಒಂದು ವಿಡಿಯೊ ಶೇರ್ ಮಾಡಿ ಶುಭ ಕೋರಿದ್ದರು. ಅದರಲ್ಲಿ ನಿವೇದಿತಾ ಜೊತೆಗಿನ ಒಂದಷ್ಟು ಫೋಟೊಗಳನ್ನು ಹಾಕಿದ್ದರು. ಇದಕ್ಕೆ ಮನಬಂದಂತೆ ಕಮೆಂಟ್ ಮಾಡಿದ್ದಾರೆ ನೆಟ್ಟಿಗರು. ಕೆಲವರು ಕಮೆಂಟ್ನಲ್ಲಿ ಇವರ ಡಿವೋರ್ಸ್ಗೆ ಸೃಜನ್ ಲೋಕೇಶ್ ಕಾರಣ ಎನ್ನುತ್ತಿದ್ದಾರೆ. ‘ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ನಿವೇದಿತಾ ಕಾಣಿಸಿಕೊಂಡಿದ್ದರು. ಬಳಿಕ ‘ರಾಜಾ ರಾಣಿ’…
ರಾಮೋಜಿ ಫಿಲ್ಮ್ ಸಿಟಿ ನಿರ್ಮಿಸಿದ ರಾಮೋಜಿ ರಾವ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಆರೋಗ್ಯ ಸಮಸ್ಯೆಯಿಂದ. ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮೋಜಿ ರಾವ್ ಇಂದು ಮುಂಜಾನೆ 4:50ಕ್ಕೆ ಕೊನೆಯುಸಿರೆಳೆದಿದ್ದಾರೆ. ಪಾರ್ಥಿವ ಶರೀರವನ್ನು ರಾಮೋಜಿ ಫಿಲಂ ಸಿಟಿಗೆ ಸ್ಥಳಾಂತರಿಸಲಾಗಿದೆ. ರಾಮೋಜಿ ರಾವ್ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈನಾಡು ಮತ್ತು ರಾಮೋಜಿ ಫಿಲ್ಮ್ ಸಿಟಿಯ ಸಂಸ್ಥಾಪಕ ರಾಮೋಜಿ ರಾವ್ ನಿಧನರಾದರು ಟಾಲಿವುಡ್ ಸಿನಿಮಾ ಇಂಡಸ್ಟ್ರಿಗೆ ತುಂಬಲಾರದ ನಷ್ಟವಾಗಿದೆ. ಜೂನಿಯರ್ ಎನ್ಟಿಆರ್, ಚಿರಂಜೀವಿ, ಮನೋಜ್ ಮಂಚು, ಸುಧೀರ್ ಬಾಬು ಸೇರಿದಂತೆ ಹಲವು ಸೆಲೆಬ್ರಿಟಿಗಳು ರಾಮೋಜಿ ರಾವ್ ನಿಧನಕ್ಕೆ ಸಂತಾಪ ಸೂಚಿಸಿದ್ರು. ಶ್ರೀ ರಾಮೋಜಿ ರಾವ್ ಅವರಂತಹ ದಾರ್ಶನಿಕರು ಮಿಲಿಯನ್ನಲ್ಲಿ ಒಬ್ಬರು. ಉದ್ಯಮಿ ಮತ್ತು ಭಾರತೀಯ ಚಿತ್ರರಂಗದ ದಿಗ್ಗಜ, ಅವರು ನಮ್ಮೊಂದಿಗೆ ಇಲ್ಲ ಎಂಬ ಸುದ್ದಿ ತುಂಬಾ ದುಃಖಕರವಾಗಿದೆ. ‘ನಿನ್ನು ಚೂಡಾನಿ’ ಚಿತ್ರದ ಮೂಲಕ ನಾನು ತೆಲುಗು ಚಿತ್ರರಂಗಕ್ಕೆ ಪರಿಚಯಿಸಿದ ನೆನಪುಗಳನ್ನು ನಾನು ಎಂದಿಗೂ ಮರೆಯುವುದಿಲ್ಲ. ಅವರ ಆತ್ಮಕ್ಕೆ…
ಡಾಲಿ ಧನಂಜಯ್ ಮತ್ತು ಶಿವರಾಜಕುಮಾರ್ ನಟನೆಯ ಉತ್ತರಕಾಂಡ ಸದ್ಯ ಒಂದಲ್ಲ ಒಂದು ಕಾರಣಕ್ಕೆ ಸದಾ ಸದ್ದು ಮಾಡುತ್ತಿರುತ್ತದೆ. ಈಗಾಗ್ಲೆ ಸಾಕಷ್ಟು ಸ್ಟಾರ್ ನಟ, ನಟಿಯರು ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಸದ್ಯ ನಿರ್ಮಾಣ ಹಂತದಲ್ಲಿರುವ ಚಿತ್ರದಲ್ಲಿ ನಟಿ ಭಾವನಾ ಮೆನನ್ ಕೂಡ ನಟಿಸಿದ್ದು ವೀರವ್ವ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಭಾವನಾ ಅವರ ಫಸ್ಟ್ ಲುಕ್ ಔಟ್ ಆಗಿದೆ. ಉತ್ತರಕಾಂಡ ಚಿತ್ರದ ಮೂಲಕ ತಮಿಳು ನಟಿ ಐಶ್ವರ್ಯಾ ರಾಜೇಶ್ ಅವರು ಕನ್ನಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರೊಂದಿಗೆ ನಟಿ ಭಾವನಾ ಮೆನನ್ ಅವರು ನಿರ್ಣಾಯಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆಕ್ಷನ್-ಪ್ಯಾಕ್ಡ್ ಕಮರ್ಷಿಯಲ್ ಎಂಟರ್ಟೈನರ್ ಎಂದು ಬಿಂಬಿತವಾಗಿರುವ ಉತ್ತರಕಾಂಡ ಚಿತ್ರತಂಡ ಇದೀಗ ಭಾವನಾ ಅವರ ಜನ್ಮದಿನದ ಅಂಗವಾಗಿ ಅವರ ಪಾತ್ರವನ್ನು ಪರಿಚಯಿಸಿದ್ದು, ನಟಿ ವೀರವ್ವ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಉಮಾಶ್ರೀ, ದಿಗಂತ್ ಮಂಚಾಲೆ, ಚೈತ್ರ ಜೆ ಆಚಾರ್, ರಂಗಾಯಣ ರಘು, ವಿಜಯ್ ಬಾಬು, ಮತ್ತು ಗೋಪಾಲ ಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರಗಳಲ್ಲಿದ್ದಾರೆ. KRG ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್…
ಆಂಧ್ರ ಪ್ರದೇಶದಲ್ಲಿ ವೈಎಸ್ ಜಗನ್ ರೆಡ್ಡಿ ಸೋಲು ಅನುಭವಿಸಿದ್ದಾರೆ. ಜಗನ್ ಸೋಲು ಅನೇಕರಿಗೆ ಶಾಕಿಂಗ್ ನೀಡಿದೆ. ಪವನ್ ಕಲ್ಯಾಣ್ ಹಾಗೂ ಚಂದ್ರಬಾಬು ನಾಯ್ಡು ಮೈತ್ರಿ ಗೆಲುವು ಕಂಡಿದೆ. ಈಗ ಈ ಬಗ್ಗೆ ಚರ್ಚೆ ಹಾಗೂ ವಿರೋಧ ಶುರುವಾಗಿದೆ. ಇತ್ತೀಚೆಗೆ ಜಗನ್ ಮೋಹನ್ ರೆಡ್ಡಿ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ನಟ ವಿಶಾಲ್ ಭವಿಷ್ಯ ನುಡಿದಿದ್ದರು. ಆದರೆ, ಅದು ನಿಜವಾಗಿಲ್ಲ. ಈ ಕಾರಣಕ್ಕೆ ಅವರು ಸಖತ್ ಟ್ರೋಲ್ ಆಗುತ್ತಿದ್ದಾರೆ. ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಮಾಡಲಾಗುತ್ತಿದೆ. ‘ರತ್ನಂ’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಜಗನ್ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದರು ವಿಶಾಲ್. ‘ಜಗನ್ ಅವರು ಸಾಕಷ್ಟು ವಿಷನ್ ಹೊಂದಿದ್ದಾರೆ. ಅವರಿಗೆ ಜನರ ನಾಡಿಮಿಡಿತ ಗೊತ್ತಿದೆ. ಅವರು ಸಾರ್ವಜನಿಕರ ಸೇವೆಯನ್ನು ಮಾಡಬಹುದು. ಅವರು ಸಿಎಂ ಆಗಿಯೇ ಆಗುತ್ತಾರೆ. ಜೂನ್ 5ಕ್ಕೆ ನಾನು ಈ ಬಗ್ಗೆ ಮಾತನಾಡುತ್ತೇನೆ’ ಎಂದಿದ್ದರು ಜಗನ್. ಆದರೆ ಜಗನ್ ಅವರು ಹೀನಾಯ ಸೋಲು ಕಂಡಿದೆ. ಅವರು ಗೆದ್ದಿದ್ದು ಕೇವಲ 11 ಸ್ಥಾನಗಳನ್ನು ಮಾತ್ರ.…