Author: Author AIN

ಬಾಲಿವುಡ್‌ ನಟಿ, ಮಂಡಿ ಕ್ಷೇತ್ರದ ನೂತನ ಸಂಸದೆ ಕಂಗನಾ ರಣಾವತ್‌ಗೆ ಅವರಿಗೆ ದೆಹಲಿ ಏರ್ ಪೋರ್ಟ್ ನಲ್ಲಿ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಮಹಿಳಾ ಸಿಬ್ಬಂದಿ ಕುಲ್ವೀಂದರ್‌ ಕೌರ್‌ ತಾವು ಮಾಡಿದ ಕೆಲಸವನ್ನು ಸಮರ್ಥಿಸಿಕೊಂಡಿದ್ದಾರೆ. ರೈತರ ಪ್ರತಿಭಟನೆ ಬಗ್ಗೆ ಕಂಗನಾ ರನೌತ್ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ನಾನು ಕಪಾಳ ಮೋಕ್ಷ ಮಾಡಿದ್ದೇನೆ. 100 ರೂಪಾಯಿ ಆಸೆಗೆ ರೈತರ ವೇಷದಲ್ಲಿ ಪ್ರತಿಭಟನಾಕಾರರು ಕುಳಿತಿದ್ದಾರೆ ಎಂದು ಕಂಗನಾ ಹೇಳಿದ್ದರು. ಅವರು ಅಲ್ಲಿ ಹೋಗಿ ಕುಳಿತುಕೊಳ್ಳುತ್ತಾರೆಯೇ? ಅವರು ಈ ಹೇಳಿಕೆಯನ್ನು ನೀಡಿದಾಗ ನನ್ನ ತಾಯಿ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ಕುಲ್ವಿಂದರ್ ಕೌರ್ ಹೇಳಿದ್ದಾರೆ. ಕಂಗನಾಗೆ ಕಪಾಳ ಮೋಕ್ಷ ಮಾಡಿದ ಕುಲ್ವೀಂದರ್ ಕೌರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಂಗನಾ ರೈತರನ್ನು ಅಗೌರವಿಸಿದ್ದು ಕೌರ್ ಅವರ ಕೋಪಕ್ಕೆ ಕಾರಣವಾಗಿದೆ. ಸದ್ಯ ಕಂಗನಾ ಚಂಡೀಗಢ ವಿಮಾನ ನಿಲ್ದಾಣದಲ್ಲಿರುವ ಕೆಲ ವೀಡಿಯೋಗಳು ವೈರಲ್‌ ಆಗುತ್ತಿವೆ. ವೀಡಿಯೋದಲ್ಲಿ ಕಂಗನಾ ಅವರು ವಿಮಾನ ನಿಲ್ದಾಣದಲ್ಲಿ ಚೆಕ್-ಇನ್…

Read More

ರಿಯಲ್ ಸ್ಟಾರ್ ಉಪೇಂದ್ರ ತಮ್ಮದೇ ಪ್ರಜಾಕೀಯ ಪಕ್ಷದ ಮೂಲಕ ಉತ್ತಮ ಕೆಲಸ ಮಾಡಲು ಮುಂದಾಗಿದ್ದಾರೆ. ಆದರೆ ನಿರೀಕ್ಷಿಸದ ಮಟ್ಟಿಗೆ ಪ್ರಜಾಕೀಯ ಪಕ್ಷಕ್ಕೆ ಜನಬೆಂಬಲ ಸಿಗುತ್ತಿಲ್ಲ. ಅತ್ತ ಆಂಧ್ರ ಪ್ರದೇಶ ಚುನಾವಣೆಯಲ್ಲಿ ಕೆಲವು ಸೆಲೆಬ್ರಿಟಿಗಳು ಗೆಲುವು ಕಂಡಿದ್ದಾರೆ. ನಟ ಪವನ್ ಕಲ್ಯಾಣ್ ಗೆದ್ದು ಬೀಗಿದ್ದಾರೆ. ಇದೇ ವಿಚಾರವನ್ನು ಇಟ್ಟುಕೊಂಡು ಕೆಲವು ನೆಟ್ಟಿಗರು ಉಪೇಂದ್ರ ಅವರಿಗೆ ಹೋಲಿಗೆ ಮಾಡಿದ್ದಾರೆ. ಈ ಪೋಸ್ಟ್​ ಕುರಿತು ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ‘ಪವನ್​ ಕಲ್ಯಾಣ್​ ಅವರನ್ನು ಗೆಲ್ಲಿಸಲು ತೆಲುಗು ಜನ 14 ವರ್ಷ ತೆಗೆದುಕೊಂಡರು. ಉಪೇಂದ್ರ ಅವರನ್ನು ಗೆಲ್ಲಿಸಲು ಕನ್ನಡಿಗರು ಇನ್ನು ಎಷ್ಟು ವರ್ಷ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ’ ಎಂದು ಟ್ರೋಲ್​ ಪುಟದವರ ಪೋಸ್ಟ್​ ಮಾಡಿದ್ದನ್ನು ಉಪೇಂದ್ರ ಶೇರ್ ಮಾಡಿದ್ದಾರೆ. ಜೊತೆಗೆ ಈ ಪೋಸ್ಟ್ ಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ‘ವಾಹ್ ಮೈ ಡಿಯರ್ ಪ್ರಜಾಪ್ರಭುಗಳೇ ವಾಹ್.. ಉಪೇಂದ್ರ ಸೋಲು ಗೆಲುವು ಬಗ್ಗೆ ತುಂಬಾ ಚಿಂತೆ ಮಾಡ್ತಿದೀರ! ಎಂಥಾ ನಿಸ್ವಾರ್ಥ! ಎಂಥಾ ತ್ಯಾಗ ಮನೋಭಾವ! ನಿಮ್ಮೆಲ್ಲರ ಪಾದಕ್ಕೆ ಅಡ್ ಬಿದ್ದೆ. ಡೋಂಟ್ ವರೀ.…

Read More

ದೆಹಲಿ ವಿಮಾನ ನಿಲ್ದಾಣದಲ್ಲಿ ನಟಿ ಹಾಗೂ ನೂತನ ಸಂಸದೆ ಕಂಗನಾ ರಾಣವತ್ ಅವರಿಗೆ ಮಹಿಳಾ ಸಿಬ್ಬಂದಿ ಕಪಾಳ ಮೋಕ್ಷ ಮಾಡಿದ್ದರು. ಘಟನೆಯ ಬಳಿಕ ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ನಟಿ ನಾನು ಸುರಕ್ಷಿತವಾಗಿದ್ದೇನೆ ಎಂದಿದ್ದಾರೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ ಕುರಿತು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಕಂಗನಾ, ನನಗೆ ಮಾಧ್ಯಮಗಳು ಮತ್ತು ನನ್ನ ಹಿತೈಷಿಗಳಿಂದ ಸಾಕಷ್ಟು ಫೋನ್ ಕರೆಗಳು ಬರುತ್ತಿವೆ. ಮೊದಲನೆಯದಾಗಿ ನಾನು ಸುರಕ್ಷಿತವಾಗಿದ್ದು, ಸಂಪೂರ್ಣವಾಗಿ ಚೆನ್ನಾಗಿದ್ದೇನೆ ಎಂದಿದ್ದಾರೆ. ಇಂದು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಚೆಕ್‌ ಮುಗಿಸಿ ಹೊರ ಬಂದ ತಕ್ಷಣ ಎರಡನೇ ಕ್ಯಾಬಿನ್‌ನಲ್ಲಿದ್ದ ಸಿಐಎಸ್‌ಎಫ್‌ನ ಸೆಕ್ಯುರಿಟಿ ಸಿಬ್ಬಂದಿ ನನ್ನ ಕೆನ್ನೆಗೆ ಹೊಡೆದರು. ಈ ವೇಳೆ ಯಾಕೆ ಹೀಗೆ ಮಾಡಿದೆ ಎಂದು ಆಕೆಯನ್ನು ಪ್ರಶ್ನಿಸಿದಾಗ, ರೈತರ ಪ್ರತಿಭಟನೆಗೆ ನನ್ನ ಬೆಂಬಲವಿದೆ ಎಂದಳು. ಸದ್ಯ ನಾನು ಸುರಕ್ಷಿತವಾಗಿದ್ದೇನೆ ಆದರೆ ಪಂಜಾಬ್‌ನಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಮತ್ತು ಉಗ್ರವಾದದ ಬಗ್ಗೆ ನನಗೆ ಕಾಳಜಿ ಇದೆ ಎಂದು ಕಂಗನಾ ಹೇಳಿದ್ದಾರೆ. ಘಟನೆ ಹಿನ್ನೆಲೆ: ಕಂಗನಾ…

Read More

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದಲ್ಲಿ ಭಾಗಿಯಾಗಿದ್ದ ತೆಲುಗು ನಟಿ ಹೇಮಾ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಬೆನ್ನಲ್ಲೇ ನಟಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ತೆಲುಗು ಕಲಾವಿದರ ಸಂಘದಿಂದ ಹೇಮಾ ಅವರನ್ನು ಕೈ ಬಿಡುವ ಕುರಿತು ಮಾತುಕತೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ವಿಚಾರ ಸುದ್ದಿಯಾಗುತ್ತಿದ್ದಂತೆ ನಟಿ ನಾನಾ ರೀತಿಯಲ್ಲಿ ನಾಟಕ ಶುರು ಮಾಡಿದ್ದರು. ಬೆಂಗಳೂರಿನಲ್ಲಿ ಇದ್ದು ಕೊಂಡೆ ಹೈದರಾಬಾದ್ ನಲ್ಲಿ ಇರೋದಾಗಿ ವಿಡಿಯೋ ಮಾಡಿ ಶೇರ್ ಮಾಡಿದ್ದರು. ಜೊತೆಗೆ ಪೊಲೀಸರನ್ನು ಯಾಮಾರಿಸಲು ನಟಿ ಮುಂದಾಗಿದ್ದಾರೆ. ಆದರೆ ಇದೀಗ ಹೇಮಾ ಪಾರ್ಟಿಯಲ್ಲಿ ಭಾಗಿಯಾಗಿದ್ದು ಕನ್ಪಾರ್ಮ್ ಆಗಿದೆ. ಈ ಮಧ್ಯೆ ತೆಲುಗು ಕಲಾವಿಧರ ಸಂಘದಿಂದ ಹೇಮಾ ಅವರನ್ನು ಅಮಾನತುಗೊಳಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಇತ್ತೀಚೆಗೆ ಮಂಚು ವಿಷ್ಣು ಅವರು, ಹೇಮಾ ಅವರು ತಪ್ಪು ಮಾಡಿದ್ದನ್ನು ಪೊಲೀಸರು ಸಾಬೀತುಪಡಿಸಿದರೆ ಖಂಡಿತಾ ಕಲಾವಿದರ ಸಂಘದಿಂದ ಹೇಮಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಸದ್ಯದ ಮಾಹಿತಿ ಪ್ರಕಾರ, ಹೇಮಾ ಅವರ…

Read More

ಬಾಲಿವುಡ್​ ನಟಿ ಕಂಗನಾ ರಣಾವತ್ ಇದೀಗ ತಾನೆ ಸಂಸದೆಯಾದ ಸಂಸತದಲ್ಲಿದ್ದಾರೆ. ಈ ಮಧ್ಯೆ ನಟಿಯ ಕುರಿತು ಶಾಕಿಂಗ್ ಸುದ್ದಿ ಕೇಳಿ ಬಂದಿದೆ. ಕಂಗನಾ ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ. ಚಂಡಿಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ಕಂಗನಾರ ಕೆನ್ನೆಗೆ ಹೊಡೆದಿದ್ದಾರೆ ಎನ್ನಲಾಗುತ್ತಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಕಂಗನಾ ಜಯ ಸಾಧಿಸಿದ್ದಾರೆ. ಸಂಸದೆ ಆಗಿರುವ ಖುಷಿಯಲ್ಲಿ ಅವರು ದೆಹಲಿಗೆ ಹೊರಟ್ಟಿದ್ದರು. ಈ ವೇಳೆ ಸಿಐಎಸ್​ಎಫ್​ ಸಿಬ್ಬಂದಿಯು ಕಂಗನಾ ರಣಾವತ್​ ಅವರ ಕೆನ್ನೆಗೆ ಹೊಡೆದಿದ್ದಾರೆ. ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್  ಕಂಗನಾ ಕೆನ್ನೇಗೆ ಭಾರಿಸಿದ್ದಾರೆ. ರೈತರ ಆಂದೋಲನಕ್ಕೆ ಸಂಬಂಧಿಸಿದಂತೆ ಕಂಗನಾ ನೀಡಿದ ಹೇಳಿಕೆಯಿಂದ ಕುಲ್ವಿಂದರ್ ಕೌರ್ ಅವರಿಗೆ ನೋವಾಗಿದೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದ ಇಂದು ಆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಕೌರ್ ಅವರು ಬಿಜೆಪಿ ಸಂಸದರಿಗೆ ಕಪಾಳಮೋಕ್ಷ ಮಾಡಿದ್ದಾರೆ. ‌ ಕುಲ್ವಿಂದರ್​ ಕೌರ್​ ಅವರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಘಟನೆಯ ಕುರಿತು ವಿಚಾರಣೆ…

Read More

ಹಿಂದಿ ಟಿವಿ ತಾರೆ ಮೀರಾ ದೋಸ್ತಲೆ ಕಿರುತೆರೆ ನಿರ್ಮಾಪಕರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮೀರಾ 2019ರಲ್ಲಿ ಕೆಲಸ ಮಾಡಿದ್ದ ‘ವಿದ್ಯಾ’ ಧಾರಾವಾಹಿಯ ನಿರ್ಮಾಪಕ ಮಹೇಶ್ ಪಾಂಡೆ ವಿರುದ್ಧ ದೂರು ದಾಖಲಿಸಿದ್ದಾರೆ. ವಿದ್ಯಾ ಧಾರವಾಹಿಯಲ್ಲಿ ಕೆಲಸ ಮಾಡಿಸಿಕೊಂಡು ಸಂಭಾವನೆಯನ್ನು ಪೂರ್ತಿ ನೀಡಿಲ್ಲ. ಪೂರ್ಣ ಪ್ರಮಾಣದ ಹಣ ವಂಚನೆ ಮಾಡಿದ್ದಾರೆಂದು ನಟಿ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ವಿಚಾರಣೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಮೀರಾ ಈ ಹಿಂದೆ ‘ವಿದ್ಯಾ’ ಹೆಸರಿನ ಧಾರಾವಾಹಿಯಲ್ಲಿ ನಟಿಸಿದ್ದರು. ಅವರ ಸಂಭಾವನೆ 8 ಲಕ್ಷ ರೂಪಾಯಿಗಳಾಗಿತ್ತು. ಆದರೆ ನಾಲ್ಕು ಲಕ್ಷ ಮಾತ್ರವೇ ನೀಡಿದ್ದ ನಿರ್ಮಾಪಕ ಮಹೇಶ್ ಪಾಂಡೆ ಬಾಕಿ ಹಣ ನೀಡಿರಲಿಲ್ಲ. ಬಾಕಿ ಹಣ ಕೇಳಿದಾಗ ಸಬೂಬುಗಳನ್ನು ಹೇಳಿದ್ದರು. ತಮ್ಮ ಕರೆಗಳನ್ನು ಸ್ವೀಕರಿಸುವುದನ್ನು ಬಿಟ್ಟಿದ್ದರು. ಹಾಗಾಗಿ ತಾವು ಪೊಲೀಸ್ ಠಾಣೆ ಮೆಟ್ಟಿಲೇರಿರುವುದಾಗಿ ನಟಿ ತಿಳಿಸಿದ್ದಾರೆ. ‘ನಾಲ್ಕು ಲಕ್ಷ ರೂಪಾಯಿ ಮೊತ್ತ ಕೆಲವರಿಗೆ ಚಿಕ್ಕದು ಎನಿಸಬಹುದು ಆದರೆ ನನ್ನ ಕುಟುಂಬವನ್ನು ನಾನೊಬ್ಬಳೆ ಪೋಷಿಸುತ್ತಿದ್ದು, ನಾಲ್ಕು ಲಕ್ಷ ನನಗೆ ದೊಡ್ಡ…

Read More

ನಟಭಯಂಕರ ಡಾಲಿ ಧನಂಜಯ ನಟನೆಯ ಬಹುನಿರೀಕ್ಷಿತ ‘ಕೋಟಿ’ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ಧನಂಜಯ ಕೋಟಿ ಎಂಬ ಓರ್ವ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು‌ ಕೋಟಿ ಸಿನಿಮಾದಲ್ಲಿ ತೋರಿಸಲಾಗಿದೆ. ಪರಮ್ ನಿರ್ದೇಶನ ಕೋಟಿ ಸಿನಿಮಾದ ಹಾಡು ಹಾಗೂ ಟೀಸರ್ ಈಗಾಗಲೇ ಜನರಲ್ಲಿ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಮೂಡುವಂತೆ ಮಾಡಿದೆ. ಇದೀಗ ಬಿಡುಗಡೆ ಆಗಿರುವ ಟ್ರೈಲರ್ ಸಿನಿ ಪ್ರಿಯರಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಸಾಮಾನ್ಯ ವ್ಯಕ್ತಿಯಾಗಿ ಧನಂಜಯ್ ಕಾಣಿಸಿಕೊಂಡಿದ್ದರೆ, ರಮೇಶ್ ಇಂದಿರಾ ನಟೋರಿಯಸ್ ವಿಲನ್ ಪಾತ್ರ, ತಾರಾ ಧನಂಜಯ್ ತಾಯಿಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ನಟ ರಮೇಶ್​ ಇಂದಿರಾ ಅವರು ವಿಲನ್​ ಪಾತ್ರ ಮಾಡಿ ಜನರ ಚಪ್ಪಾಳೆ ಗಿಟ್ಟಿಸಿದ್ದರು. ಈಗ ಅವರು ‘ಕೋಟಿ’ ಸಿನಿಮಾದಲ್ಲೂ ವಿಲನ್​ ಆಗಿದ್ದಾರೆ. ದೀನು ಸಾಹುಕಾರ್…

Read More

ಮಾನವ ಕಳ್ಳಸಾಗಣೆ ಆರೋಪ ಪ್ರಕರಣದ ಸಂಬಂಧ ಪಾಕಿಸ್ತಾನ ಮೂಲದ ಮಾನವ ಹಕ್ಕುಗಳ ಹೋರಾಟಗಾರ ಸರೀಮ್ ಬರ್ನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಸರೀಮ್ ಬರ್ನಿ 5ಕ್ಕೂ ಹೆಚ್ಚು ಮಕ್ಕಳನ್ನು ಕಳ್ಳಸಾಗಣೆ ಮಾಡಿದ ಹಾಗೂ ಅಮೆರಿಕದಲ್ಲಿ ಮಕ್ಕಳನ್ನು ಅಕ್ರಮವಾಗಿ ದತ್ತು ನೀಡುವ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಅಮೆರಿಕ ಸರ್ಕಾರ ಮಾಹಿತಿ ನೀಡಿತ್ತು. ಹೀಗಾಗಿ ಬರ್ನಿ ಅಮೆರಿಕದಿಂದ ಕರಾಚಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಮಾನವ ಕಳ್ಳಸಾಗಣೆ ಕುರಿತು ತನಿಖೆ ನಡೆಸುವ ತನಿಖಾ ಸಂಸ್ಥೆಯು (ಎಫ್‌ಐಎ) ಬಂಧಿಸಿದೆ ಎಂದು ವರದಿಯಾಗಿದೆ. ಶೋಷಿತ ಮಕ್ಕಳ ಪರ ಕಾರ್ಯ ನಿರ್ವಹಿಸುವ ವೆಲ್ಫ್‌ಫೇರ್ ಟ್ರಸ್ಟ್ ಇಂಟರ್‌ನ್ಯಾಷನಲ್ ಎನ್ನುವ ಟ್ರಸ್ಟ್‌ನ ನೇತೃತ್ವವನ್ನು ಸರೀಮ್ ಬರ್ನಿ ವಹಿಸಿದ್ದಾರೆ. ಈ ಟ್ರಸ್ಟ್ ಕಿರುಕುಳ, ಲೈಂಗಿಕ ದೌರ್ಜನ್ಯ, ಮಾನವ ಕಳ್ಳಸಾಗಣೆ, ಮನೆಯಲ್ಲಿ ನಡೆಯುವ ಹಿಂಸಾಚಾರ, ಮಾನವ ಹಕ್ಕುಗಳ ಉಲ್ಲಂಘನೆ ಸೇರಿದಂತೆ ಇನ್ನಿತರ ಘಟನೆಗಳಲ್ಲಿ ದೌರ್ಜನ್ಯಕ್ಕೊಳಗಾಗುವ ಮಕ್ಕಳಿಗೆ ಕಾನೂನು ನೆರವು ನೀಡುತ್ತಿದೆ.

Read More

ಇಂದು ಕೋಟ್ಯಾಂತರ ಜನರ ನಿದ್ದೆ ಕೆಡಿಸಿರುವ ಕ್ಯಾನ್ಸರ್ ಗೆ ಹೊಸ ಔಷಧವೊಂದನ್ನು ಕಂಡುಹಿಡಿಯಲಾಗಿದೆ. ಇದು ಶೇಕಡ ನೂರರಷ್ಟು ಪರಿಣಾಮಕಾರಿ ಎಂದು ವಿಜ್ಞಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೆಂಪರ್ಲಿ ದೋಸ್ಟರಲಿಮ್ಬ್-ಜಿಎಕ್ಸ್‌ಎಲ್ ವೈ ಎಂಬ ಹೆಸರಿನ ಕ್ಯಾನ್ಸರ್ ಗುಣಪಡಿಸುವ ಔಷಧ ಗುದನಾಳದ ಕ್ಯಾನ್ಸರ್ ಹೊಂದಿದ್ದ 42 ರೋಗಿಗಳಿಗೆ ಪರೀಕ್ಷಿಸಲಾಗಿದ್ದು, ಎಲ್ಲರ ಕ್ಯಾನ್ಸರ್ ಗಡ್ಡೆಗಳನ್ನು ಅದು ಯಶಸ್ವಿಯಾಗಿ ತೆಗೆದುಹಾಕಿದೆ ಎನ್ನಲಾಗುತ್ತಿದೆ. ಎರಡನೇ ಹಂತದಲ್ಲಿ ಈ ಔಷಧ ಪ್ರಯೋಗ ಯಶಸ್ವಿಯಾಗಿದ್ದು, ಔಷಧವು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಗುದನಾಳದ ಕ್ಯಾನ್ಸರ್ ಅನ್ನು ಕೊಲೊರೆಕ್ಟಲ್ ಕ್ಯಾನ್ಸರ್ ಎಂದು ಕರೆಯಲಾಗುತ್ತದೆ. ಎರಡನೇ ಹಂತದ ಔಷಧ ಪ್ರಯೋಗದ ಬಳಿಕ ಮೊದಲ 24 ರೋಗಿಗಳಲ್ಲಿ ಉತ್ತಮ ಚೇತರಿಕೆ ಕಂಡು ಬಂದಿದೆ. ಸುಮಾರು ಎರಡು ವರ್ಷದ ಬಳಿಕ ಅವರಲ್ಲಿ ಯಾವುದೇ ಕ್ಯಾನ್ಸರ್ ಲಕ್ಷಣಗಳು ಕಂಡು ಬಂದಿಲ್ಲ. ಮೆಮೋರಿಯಲ್ ಸ್ಲೋನ್ ಕೆಟರಿಂಗ್ ಕ್ಯಾನ್ಸರ್ ಸೆಂಟರ್‌ನ ಆಂಕೊಲಾಜಿಸ್ಟ್ ಡಾ. ಆಂಡ್ರಿಯಾ ಸೆರ್ಸೆಕ್ ಅವರ ಪ್ರಕಾರ Dostarlimab-gxly ಕ್ಯಾನ್ಸರ್ ಔಷಧವು ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡುವಲ್ಲಿ ಉತ್ತಮ ಸಾಮರ್ಥ್ಯವನ್ನು…

Read More

ಟಾಲಿವುಡ್ ಸೂಪರ್ ಸ್ಟಾರ್ ಡಾರ್ಲಿಂಗ್ ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಇದೇ ಜೂನ್ 27ಕ್ಕೆ ರಿಲೀಸ್‌ಗೆ ಸಜ್ಜಾಗಿದೆ. ಕಲ್ಕಿ ಸಿನಿಮಾದಲ್ಲಿ ಬಳಸಲಾಗಿರುವ ಬುಜ್ಜಿ ಹೆಸರಿನ ಕಾರು ಸಿಕ್ಕಾಪಟ್ಟೆ ಫೇಮಸ್ ಆಗಿದೆ. ಇದೀಗ ರಾಕಿಂಗ್ ಸ್ಟಾರ್ ಯಶ್ ಮಕ್ಕಳಾದ ಐರಾ ಹಾಗೂ ಅಥರ್ವ ಅವರಿಗೆ ‘ಕಲ್ಕಿ’ ಚಿತ್ರತಂಡ ಸ್ಪೆಷಲ್ ಗಿಫ್ಟ್ ಬಂದಿದೆ. ಈ ಬಗ್ಗೆ ನಟಿ ರಾಧಿಕಾ ಪಂಡಿತ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಕಲ್ಕಿ ಬುಜ್ಜಿ ಟಾಯ್’ ಅನ್ನು ಯಶ್ ಮಗಳು ಐರಾ ಮತ್ತು ಮಗ ಯರ್ಥವ್‌ಗೆ ಗಿಫ್ಟ್ ಆಗಿ ನೀಡಿದ್ದಾರೆ. ಕಲ್ಕಿ ಸಿನಿಮಾ ತಂಡ ನೀಡಿದ ಗಿಫ್ಟ್ ಫೋಟೋವನ್ನು ನಟಿ ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್ ಮಾಡಿದ್ದಾರೆ. ಫೋಟೋ ಶೇರ್ ಮಾಡಿದ ರಾಧಿಕಾ ಪಂಡಿತ್, ‘ಕಲ್ಕಿ’ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಐರಾ ಮತ್ತು ಯಥರ್ವ್ ಕೂಡ ಒಂದು ಹಾಳೆಯಲ್ಲಿ ಥ್ಯಾಂಕ್ಯೂ ಬುಜ್ಜಿ ಎಂದು ಬರೆದಿದ್ದಾರೆ. ಈ ಫೋಟೋವನ್ನು ನಟಿ ರಾಧಿಕಾ ಶೇರ್ ಮಾಡಿದ್ದಾರೆ. ಕೆಲ…

Read More