Author: Author AIN

ಕೆನಡಾದ ಸೀರಿಯಲ್ ಕಿಲ್ಲರ್ ರಾಬರ್ಟ್ ವಿಲ್ಲೀ ಪಿಕ್ಟನ್ ಜೈಲಿನಲ್ಲಿ ನಡೆದ ದಾಳಿಯಲ್ಲಿ ಸಾವಿಗೀಡಾಗಿದ್ದಾನೆ. ದಿ ಕರೆಕ್ಷನಲ್ ಸರ್ವೀಸ್ ಆಫ್ ಕೆನಡಾ 71ರ ಹರೆಯದ ರಾಬರ್ಟ್ ಸಾವನ್ನು ದೃಢಪಡಿಸಿದೆ. 26 ಮಹಿಳೆಯರ ಕೊಲೆಗೆ ಸಂಬಂಧಿಸಿದಂತೆ ರಾಬರ್ಡ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.  2007ರಲ್ಲಿ ಈತನ ಕೃತ್ಯಗಳು ಸಾಭೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿತ್ತು. ಇದೀಗ ಕ್ವಿಬೆಕ್‌ನ ಪೋರ್ಟ್-ಕಾರ್ಟಿಯರ್ ಸಂಸ್ಥೆಯಲ್ಲಿ ದಾಳಿಯಲ್ಲಿ ಆರೋಪಿ ಮೃತಪಟ್ಟಿದ್ದಾನೆ. ವ್ಯಾಂಕೋವರ್‌ನ ಪೋರ್ಟ್ ಕೊಕ್ವಿಟ್ಲಾಮ್‌ನ ಹಂದಿ ಸಾಕಣೆದಾರ ರಾಬರ್ಟ್ ಪಿಕ್ಟನ್​​ನ್ನು, ಎರಡು ದಶಕಗಳ ಕಾಲ ತನಿಖೆಗೆ ಒಳಪಡಿಸಲಾಗಿತ್ತು.  ಹತ್ಯೆಗೀಡಾದವರಲ್ಲಿ ಹೆಚ್ಚಾಗಿ ವೇಶ್ಯೆಯರು ಮತ್ತು ಮಾದಕ ವ್ಯಸನಿಗಳು ಆಗಿದ್ದರು. 1980 ಮತ್ತು 2001 ರ ನಡುವೆ ವ್ಯಾಂಕೋವರ್‌ನ ಡೌನ್‌ಟೌನ್ ಈಸ್ಟ್‌ಸೈಡ್ ನೆರೆಹೊರೆಯಿಂದ ಕಣ್ಮರೆಯಾದ ಸುಮಾರು 70 ಮಹಿಳೆಯರಲ್ಲಿ ಮೋನಾ ವಿಲ್ಸನ್, ಸೆರೆನಾ ಅಬೋಟ್ಸ್‌ವೇ, ಮಾರ್ನಿ ಫ್ರೇ, ಬ್ರೆಂಡಾ ವೋಲ್ಫ್, ಆಂಡ್ರಿಯಾ ಜೋಸ್‌ಬರಿ ಮತ್ತು ಜಾರ್ಜಿನಾ ಪಾಪಿನ್ ಸೇರಿದ್ದಾರೆ. ಈ ಮಹಿಳೆಯರು ರಾಬರ್ಟ್ ಪಿಕ್ಟನ್‌ನ ಕೆಟ್ಟ ತಂತ್ರಗಳಿಗೆ ಬಲಿಯಾದರು. ಅವರಿಗೆ ಹಣ ಮತ್ತು ಮಾದಕ…

Read More

2024ರ ಲೋಕಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಎನ್‌ಡಿಎ ಮೈತ್ರಿಕೂಟ ಸಂಪೂರ್ಣ ಬಹುಮತ ಪಡೆದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿದೇಶಿ ನಾಯಕರು ಅಭಿನಂದಿಸಿದ್ದಾರೆ. ಶ್ರೀಲಂಕಾದ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ, ಶ್ರೀಲಂಕಾದ ಅಧ್ಯಕ್ಷೀಯ ಅಭ್ಯರ್ಥಿ ಶರತ್ ಫೊನ್ಸೆಕಾ, ಮಹಿಂದಾ ರಾಜಪಕ್ಸೆ, ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ನೇಪಾಳದ ಪ್ರಧಾನಿ ಪ್ರಚಂಡ ಮತ್ತು ಭೂತಾನ್‌ನ ಪ್ರಧಾನಿ ಶೆರಿಂಗ್ ತೊಬ್ಗೆ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಐತಿಹಾಸಿಕ ಮೂರನೇ ಅವಧಿಗೆ ನಿಮ್ಮ ಶ್ಲಾಘನೀಯ ವಿಜಯಕ್ಕಾಗಿ ಪ್ರಧಾನಿ ಮೋದಿ ಜಿ ಅವರಿಗೆ ಅಭಿನಂದನೆಗಳು ಎಂದು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್ ತಿಳಿಸಿದ್ದಾರೆ. ವಿಶ್ವದ ಅತಿದೊಡ್ಡ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಐತಿಹಾಸಿಕ ಜಯ ಸಾಧಿಸಿದ ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎಗೆ ಅಭಿನಂದನೆಗಳು ಎಂದು ಭೂತಾನ್ ಪ್ರಧಾನಿ ಶೆರಿಂಗ್ ತೊಬ್ಗೆ ಹೇಳಿದ್ದಾರೆ. ಮೋದಿ ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದ್ದಂತೆ, ನಮ್ಮ ಎರಡು ದೇಶಗಳ ನಡುವಿನ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸಲು ಅವರೊಂದಿಗೆ ನಿಕಟವಾಗಿ…

Read More

2019ರಲ್ಲಿ ತೆರೆಕಂಡ ಉಪ್ಪೇನಾ ಸಿನಿಮಾ ಮೂಲಕ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ನಟಿ ಕೃತಿ ಶೆಟ್ಟಿ ರಾತ್ರೋ ರಾತ್ರಿ ಸಖತ್ ಖ್ಯಾತಿ ಘಳಿಸಿದರು. ಬಳಿಕ ಬ್ಯಾಕ್ ಟು ಬ್ಯಾಕ್ ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಕೃತಿ ಬಣ್ಣ ಹಚ್ಚುತ್ತಿದ್ದಾರೆ. ಆದರೆ ನಟಿಗೆ ಹೇಳಿಕೊಳ್ಳುವ ಮಟ್ಟಿಗೆ ಸಕ್ಸಸ್ ಸಿಕ್ಕಿಲ್ಲ. ಈ ಮಧ್ಯೆ ತಾನು ರಿಲೇಷನ್ ಶಿಪ್ ನಲ್ಲಿದ್ದೇನೆ ಎಂದು ಹೇಳುವ ಮೂಲಕ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದಾಳೆ ನಟಿ ಕೃತಿ ಶೆಟ್ಟಿ. ನಟಿ ಕೃತಿ ಶೆಟ್ಟಿ ‘ಮನಮೆ’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ನಟಿ ನಾನು ರಿಲೇಷನ್‌ಶಿಪ್‌ನಲ್ಲಿದ್ದೇನೆ ಅಂತ ಹೇಳುವ ಮೂಲಕ ಪಡ್ಡೆ ಹುಡುಗರಿಗೆ ಶಾಕ್ ನೀಡಿದ್ದಾಳೆ. ಶ್ರೀರಾಮ್ ಆದಿತ್ಯಾ ನಿರ್ದೇಶನದ ವಿಶ್ವಾ ಪ್ರಸಾದ್ ನಿರ್ಮಾಣದ ಮನಮೆ ಸಿನಿಮಾ ಇದೇ ಜೂನ್7ರಂದು ತೆರೆಗೆ ಬರಲಿದೆ. ಚಿತ್ರದಲ್ಲಿ ಕೃತಿಗೆ ಜೋಡಿಯಾಗಿ ಶರ್ವಾನಂದ್‌ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಪ್ರಚಾರದಲ್ಲಿ ತೊಡಗಿಕೊಂಡಿರುವ ಕೃತಿ ಹಾಗೂ ಶರ್ವಾನಂದ್ ಬ್ಯಾಕ್ ಟು ಬ್ಯಾಕ್ ಸಂದರ್ಶನಗಳನ್ನು ಕೊಡ್ತಿದ್ದಾರೆ. ಸಿನಿಮಾ ಮಾತ್ರವಲ್ಲ…

Read More

ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್ ಬಳಿಕ ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಜಾನ್ವಿ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ಹಿರೋಗಳ ಸಿನಿಮಾದಲ್ಲಿ ನಟಿಸುತ್ತಿರುವ ಜಾನ್ವಿ ಈ ಮಧ್ಯೆ ಬಿಡುವು ಮಾಡಿಕೊಂಡು ಬಾಯ್ ಫ್ರೆಂಡ್ ಜೊತೆ ಇಟಲಿಗೆ ತೆರಳಿದ್ದಾರೆ. ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಪ್ರೀ-ವೆಡ್ಡಿಂಗ್ ಇತ್ತೀಚೆಗೆ ಇಟಲಿಯಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನೇಕ ಬಾಲಿವುಡ್ ತಾರೆಯರು ಭಾಗಿಯಾಗಿದ್ದರು. ಅದರಂತೆ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಸಹ ತಮ್ಮ ಬಾಯ್‌ಫ್ರೆಂಡ್ ಜೊತೆ ತೆರಳಿದ್ದರು. ಅಂಬಾನಿ ಕುಟುಂಬದ ಪ್ರೀವೆಂಡಿಂಗ್ ನಲ್ಲಿ ಭಾಗಿಯಾಗಿದ್ದ ಜಾನ್ವಿ ಕಪೂರ್, ಬಾಯ್‌ಫ್ರೆಂಡ್ ಶಿಖರ್ ಪಹಾರಿಯಾ ಕೈ ಹಿಡಿದು ನಡೆದಿದ್ದಾರೆ. ಬಾಲಿವುಡ್ ಅಂಗಳದಲ್ಲಿ ಜಾಹ್ನವಿ ಕಪೂರ್ ಹಾಗೂ ಶಿಖರ್ ಪಹಾರಿಯಾ ಸುದ್ದಿ ಆಗಾಗ ಮೇನ್ ಸ್ಟ್ರೀಮ್ ಗೆ  ಬರ್ತಾನೆ ಇತ್ತು. ಆದರೆ ಈ ಬಗ್ಗೆ ನಟಿ ಇದುವರೆಗೂ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ ಇತ್ತೀಚೆಗೆ…

Read More

ಕಳೆದ ಮೂರು ನಾಲ್ಕು ದಿನಗಳ ಹಿಂದೆ ನಟಿ ರವೀನಾ ಟಂಡನ್ ಕಾರು ಅಪಘಾತಕ್ಕೆ ಈಡಾಗಿತ್ತು. ರವೀನಾ ಟಂಡನ್ ಕಾರು ಚಾಲಕ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಮೂವರಿಗೆ ಗಾಯಗೊಳಿಸಿದ್ದ ಎನ್ನಲಾಗಿತ್ತು. ಅಲ್ಲದೆ ನಟಿ ರವೀನಾ ಕೂಡ ಕುಡಿದಿದ್ದು ಈ ವೇಳೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂದೆಲ್ಲಾ ಹೇಳಲಾಗಿತ್ತು. ಈ ಬಗ್ಗೆ ನಟಿ ರವಿನಾ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ. ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದ. ಇದರಿಂದ ಅವರ ತಲೆ ಮತ್ತು ಮೂಗಿಗೆ ಗಾಯಗಳಾಗಿದ್ದವು. ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳಿಯರು ಕಾರು ಚಾಲಕನ ಮೇಲೆ ಹಲ್ಲೆ ಮಾಡುವುದಕ್ಕೆ ಮುಂದಾಗಿದ್ದರು. ಕಾರು ಚಾಲಕನ್ನು ಪಾರು ಮಾಡಲು ಬಂದ ನಟಿ, ತನ್ನ ಕಾರಿನಿಂದ ಇಳಿದು ಸಂತ್ರಸ್ತರಿಗೆ ನಿಂದಿಸಿದ್ದಾರೆ ಎನ್ನಲಾಗಿತ್ತು. ಘಟನೆ ನಡೆದು ನಾಲ್ಕು ದಿನಗಳ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ ರವೀನಾ ಟಂಡನ್. ನನ್ನ ಕಾರು ಯಾರಿಗೂ ಡಿಕ್ಕಿ ಹೊಡೆದಿಲ್ಲ. ನಾನು ಕುಡಿದಿರಲಿಲ್ಲ. ನನ್ನ ಡ್ರೈವರ್…

Read More

ನಟ ಸಮಂತಾರಿಂದ ದೂರವಾದ ಬಳಿಕ ನಟ ನಾಗಚೈತನ್ಯ ಶೋಭಿತಾ ಜೊತೆ ಡೇಟಿಂಗ್ ಮಾಡ್ತಿದ್ದಾರೆ. ಈ ಜೋಡಿ ಹಕ್ಕಿಗಳು ಸಾಕಷ್ಟು ಭಾರಿ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದರು. ಇದೀಗ ನಾಗಚೈತನ್ಯ ಮತ್ತೆ ಶೋಭಿತಾ ಜೊತೆ ಯುರೋಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಶೋಭಿತಾ ಅವರನ್ನು ನಾಗಚೈತನ್ಯ ಜೊತೆ ನೋಡಿದ ಅಭಿಮಾನಿಗಳು ಸಂಸಾರ ಹಾಳು ಮಾಡಬೇಡಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. ಸದ್ಯ ನಾಗಚೈತನ್ಯ ಹಾಗೂ ಶೋಭಿತಾ ಯುರೋಪ್ ಗೆ ತೆರಳಿದ್ದಾರೆ. ಯುರೋಪ್ ನ ಬೀದಿಗಳಲ್ಲಿ ಕೈ ಕೈ ಹಿಡಿದು ಸುತ್ತಾಡುತ್ತಿದ್ದಾರೆ. ಯುರೋಪ್‌ನಲ್ಲಿ ಸ್ಟೈಜ್‌ ಶೋ ಅನ್ನು ಇಬ್ಬರೂ ವೀಕ್ಷಿಸುತ್ತಿರುವ ಫೋಟೋ ಈಗ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದನ್ನು ನೋಡಿ ಸಾಕಷ್ಟು ಜನರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡ್ತಿದ್ದಾರೆ. ಕೆಲ ತಿಂಗಳುಗಳ ಹಿಂದೆ ಲಂಡನ್ ರೆಸ್ಟೋರೆಂಟ್‌ವೊಂದರಲ್ಲಿ ಇಬ್ಬರೂ ಜೊತೆಯಾಗಿದ್ದ ಫೋಟೋ ವೈರಲ್ ಆಗಿತ್ತು. ಆದರೆ ಇದು ಎಡಿಟ್ ಆಗಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಆಗಿದೆ ಎಂದು ಹೇಳಲಾಯ್ತು. ಫೇಕ್ ಫೋಟೋ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಇದೀಗ…

Read More

ತೆಲುಗು ಚಿತ್ರರಂಗದವರ, ರಾಜಕಾರಣಿಗಳ ಭವಿಷ್ಯ ಹೇಳಿ ಸಾಕಷ್ಟು ಖ್ಯಾತಿ ಘಳಿಸಿರುವ ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ ಕೈ ಮುಗಿದು ಕ್ಷಮೆ ಕೇಳಿದ್ದಾರೆ. ಇನ್ನುಮುಂದೆ ಸಿನಿಮಾ ನಟರ ಖಾಸಗಿ ವಿಷಯಗಳ ಬಗ್ಗೆ ಭವಿಷ್ಯ ನುಡಿಯುವುದಿಲ್ಲ ಎಂದಿದ್ದಾರೆ. ಅಷ್ಟಕ್ಕೂ ವೇಣು ಸ್ವಾಮಿ ಹೀಗೆ ಹೇಳಲು ಕಾರಣವೇನು ಗೊತ್ತಾ? ವೇಣು ಸ್ವಾಮಿ, ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ ಜಗನ್ ಅವ​ರ ಪಕ್ಷ ಮತ್ತೆ ಗೆಲ್ಲುತ್ತದೆ. ಜಗನ್ ಮತ್ತೆ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಆದರೆ ಅವರ ಭವಿಷ್ಯ ಸುಳ್ಳಾಗಿದೆ. ಜಗನ್​ಅವರ ವೈಸಿಪಿ ಪಕ್ಷ ಹೀನಾಯ ಸೋಲು ಕಂಡಿದ್ದು ಟಿಡಿಪಿ ಪಕ್ಷ ಭಾರಿ ವಿಜಯ ಸಾಧಿಸಿದೆ. ಈ ಬಗ್ಗೆ ವಿಡಿಯೋ ಮೂಲಕ ಮಾತನಾಡಿರುವ ವೇಣು ಸ್ವಾಮಿ, ‘ನರೇಂದ್ರ ಮೋದಿ ಪ್ರಭಾವ ಗತ್ತುತ್ತದೆ ಎಂದಿದ್ದೆ. ಜಗನ್ ಮತ್ತೆ ಗೆಲ್ಲುತ್ತಾರೆ ಎಂದಿದ್ದೆ. ನನಗೆ ಇರುವ ವಿದ್ವತ್, ನಾನು ಕಲಿತ ವಿದ್ಯೆಗಳ ಆಧಾರದಲ್ಲಿ ಈ ಭವಿಷ್ಯವನ್ನು ನಾನು ನುಡಿದಿದ್ದೆ. ನನ್ನ ಭವಿಷ್ಯದಲ್ಲಿ ಮೊದಲನೆಯದು ನಿಜವಾಗಿದೆ. ಮೋದಿಯವರ ಫ್ರಭಾವ ತಗ್ಗಿರುವುದು ಫಲಿತಾಂಶದಿಂದ…

Read More

2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕುತೂಹಲ ಕೆರಳಿಸಿದ ಕ್ಷೇತ್ರಗಳಲ್ಲಿ ಶಿವಮೊಗ್ಗ ಕೂಡ ಒಂದು. ಕನ್ನಡ ಚಿತ್ರರಂಗದ ದೊಡ್ಮನೆ ಸೊಸೆ, ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಎರಡನೇ ಬಾರಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದರು. ಆದರೆ ಈ ಭಾರಿಯೂ ಜನ ಗೀತಾ ಅವರ ಕೈಹಿಡಿಯಲಿಲ್ಲ. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಜಯಭೇರಿ ಭಾರಿಸಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಶಿವರಾಜ್ ಕುಮಾರ್ ಸೋಶಿಯಲ್​ ಮೀಡಿಯಾ ಮೂಲಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ‘ಧನ್ಯವಾದಗಳು… ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ ನಿಮ್ಮೂಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತಾ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು’ ಎಂದು ಶಿವರಾಜ್​ಕುಮಾರ್​ ಪೋಸ್ಟ್​ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್​. ಈಶ್ವರಪ್ಪ, ಜಿಜೆಪಿಯಿಂದ…

Read More

2024ರ ಲೋಕಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಎನ್‌ಡಿಎ ಬಹುಮತ ಪಡೆದರೂ ಇಂಡಿಯಾ ಒಕ್ಕೂಟದ ಅತ್ಯುತ್ತಮ ಸಾಧನೆ ಮಾಡಿದೆ. ಈ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಮಾಡಿರುವ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಹಂಕಾರ ಪಂಕ್ಚರ್ ಮಾಡಿದ್ದಕ್ಕೆ ಧನ್ಯವಾದಗಳು ಎಂದು ನಟ ಬರೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುವ ಪ್ರಶಾಂತ್​ ರಾಜ್​ ವಿಡಿಯೋವೊಂದನ್ನು ಶೇರ್​ ಮಾಡಿಕೊಂಡಿದ್ದಾರೆ. 400 ಸೀಟ್​ ದಾಟಲು (ಚಾರ್​ ಸೌ ಪಾರ್​) ಬಿಜೆಪಿಗೆ ಸಾಧ್ಯವಾಗಿಲ್ಲ ಎಂದು ವ್ಯಂಗ್ಯವಾಡಿರುವುದು ಈ ವಿಡಿಯೋದಲ್ಲಿದೆ. ಅದರ ಜೊತೆಗೆ ಪ್ರಕಾಶ್​ ರಾಜ್​ ಅವರು ದೇಶದ ಜನರಿಗೆ ಚುನಾವಣಾ ಫಲಿತಾಂಶದ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆ ತಿಳಿಸಿದ್ದಾರೆ. ಚಕ್ರವರ್ತಿ ಬೆತ್ತಲಾಗಿದ್ದಾನೆ. ಅವನು ಈಗ ಅನಿವಾರ್ಯವಾಗಿ ಬೇರೊಬ್ಬನ ಬೆಂಬಲದೊಂದಿಗೆ ಮುನ್ನಡೆಯಬೇಕಿದೆ ಎಂದು ಪ್ರಕಾಶ್ ರಾಜ್ ಬರೆದುಕೊಂಡಿದ್ದಾರೆ. ಇಂಡಿಯಾ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ಅಹಂಕಾರ ಪಂಕ್ಚರ್ ಮಾಡಿ ಅವರ ಸ್ಥಾನ ತೋರಿಸಿದ್ದಕ್ಕೆ ಥ್ಯಾಂಕ್ಯೂ ಎಂದಿದ್ದಾರೆ. ನಾನು ನಮ್ಮ ದೇಶಕ್ಕಾಗಿ ಚೆನ್ನಾಗಿ ಹೋರಾಡುತ್ತಿದ್ದೇವೆ. ನಾವು ಹೀಗೆ…

Read More

2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕುತೂಹಲ ಕೆರಳಿಸಿದ ಕ್ಷೇತ್ರಗಳಲ್ಲಿ ಶಿವಮೊಗ್ಗ ಕೂಡ ಒಂದು. ಕನ್ನಡ ಚಿತ್ರರಂಗದ ದೊಡ್ಮನೆ ಸೊಸೆ, ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಎರಡನೇ ಬಾರಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದರು. ಆದರೆ ಈ ಭಾರಿಯೂ ಜನ ಗೀತಾ ಕೈಹಿಡಿಯಲಿಲ್ಲ. ಗೀತಾ ಶಿವರಾಜ್‌ಕುಮಾರ್ ಸಹೋದರ ಮಧು ಬಂಗಾರಪ್ಪ ಶಿಕ್ಷಣ ಸಚಿವರಾಗಿದ್ದಾರೆ. ಹಾಗೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ಗೀತಾ ಶಿವರಾಜ್‌ಕುಮಾರ್‌ಗೆ ಅತೀ ಹೆಚ್ವು ಬೆಂಬಲ ಸಿಕ್ಕಿತ್ತು. ಈ ಕಾರಣಕ್ಕೆ ಶಿವಮೊಗ್ಗ ಕ್ಷೇತ್ರದ ಮತದಾರರು ಈ ಬಾರಿ ದೊಡ್ಮನೆ ಸೊಸೆಯನ್ನು ಗೆಲ್ಲಿಸಬಹುದೆಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ನಿರೀಕ್ಷೆ ಹುಸಿಯಾಗಿದೆ. ಗೀತಾ ಸೋಲು ಕಂಡಿದ್ದಾರೆ. ನಟ ಶಿವರಾಜ್‌ಕುಮಾರ್ ಪತ್ನಿಯ ಪರ ಜೋರಾಗಿಯೇ ಪ್ರಚಾರ ಮಾಡಿದ್ದರು. ಜೊತೆಗೆ ದುನಿಯಾ ವಿಜಯ್ ಕೂಡ ಪ್ರಚಾರದಲ್ಲಿ ಭಾಗಿಯಾಗಿದ್ದರು. ಇಷ್ಟೆಲ್ಲ ಬೆಂಬಲದ ಹೊರತಾಗಿಯೂ, ಅಣ್ಣಾವ್ರ ಮನೆಯ ಮೊದಲ ಸೊಸೆ ಎರಡನೇ ಬಾರಿ ಸೋಲು ಕಾಣುವಂತಾಯ್ತು. ಯಡಿಯೂರಪ್ಪ ಪುತ್ರ ಬಿ ವೈ ರಾಘವೇಂದ್ರ ವಿರುದ್ಧ ಸ್ಪರ್ಧಿಸಿದ್ದ…

Read More