Author: Author AIN

2018ರಲ್ಲಿ ನಟಿ ಶ್ರುತಿ ಹರಹರನ್​ ಅವರು, ನಟ ಅರ್ಜುನ್​ ಸರ್ಜಾ ಅವರ ವಿರುದ್ಧ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪ ಮೀ-ಟು ಅಭಿಯಾನದ ಮೂಲಕ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿತ್ತು. ಶ್ರುತಿ ಅವರು ಈ ವಿಷಯವನ್ನು ಹೇಳಿದ ಬಳಿಕ, ಸಿನಿ ಇಂಡಸ್ಟ್ರಿಯಲ್ಲಿ ಅದರಲ್ಲಿಯೂ ಬಾಲಿವುಡ್​ ಇಂಡಸ್ಟ್ರಿಯಲ್ಲಿ ನಟಿಯರು ತಮಗಾಗಿರುವ ದೌರ್ಜನ್ಯದ ಕುರಿತು ಹೇಳಿಕೊಂಡರು. ಸಿನಿಮಾ ಮಾತ್ರವಲ್ಲದೇ ವಿಭಿನ್ನ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಮಹಿಳೆಯರೂ ತಮ್ಮ ಕಾರ್ಯಕ್ಷೇತ್ರಗಳಲ್ಲಿ ತಮಗಾಗಿರುವ, ಆಗುತ್ತಿರುವ ಲೈಂಗಿಕ ದೌರ್ಜನ್ಯಗಳ ಕುರಿತು ಮಾತನಾಡಿದರು. ಮೀ ಟೂ ಅಭಿಯಾನ ಕೆಲ ವರ್ಷ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡಿತು. ಇದೀಗ ಈ ಬಗ್ಗೆ ನಟಿ ಶ್ರುತಿ ಹರಿಹರನ್​ ರ್ಯಾಪಿಡ್​ ರಶ್ಮಿ ಷೋನಲ್ಲಿ ಮಾತನಾಡಿದ್ದಾರೆ. ನಾನು ಹಿಂದಿರುಗಿ ನೋಡಿದಾಗ ಅಂದು ಮಾಡಿರುವುದು ಕಂಡು ತುಂಬಾ ಖುಷಿಯಾಗುತ್ತಿದೆ. ಅವತ್ತು ನಾನು ಹೇಳಿದ ವಿಷಯದಿಂದಲೇ ಇಂದು ಕನ್ನಡ ಇಂಡಸ್ಟ್ರಿಯಲ್ಲಿ ಬದಲಾವಣೆ ಆಗುತ್ತಿದೆ ಎಂದು ಹೇಳಿದ್ದಾರೆ. ಇದು ಕೇವಲ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೇ ಸಿನಿಮಾ ಇಂಡಸ್ಟ್ರಿಯ ಕಥೆಯೂ ಹೌದು. ಇದರ ಬಗ್ಗೆ ಮಾತನಾಡುತ್ತಾ…

Read More

ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗೋದಿಲ್ಲ. ಎನ್ ಡಿಎ ಪಕ್ಷ ಹೆಚ್ಚು ಸ್ಥಾನ ಗಳಿಸಲಿದೆ. ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಸ್ಯಾಂಡಲ್ ವುಡ್ ನಟ ಚೇತನ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಚೇತನ್, 2014-2019ರಲ್ಲಿ ಇದ್ದ ಮೋದಿ ಅಲೆ ಈಗ ಇಲ್ಲ. ಮೋದಿ ಬ್ರ್ಯಾಂಡ್ ಕಡಿಮೆ ಆಗಿರಬಹುದು. ಆದ್ರೇ ಬಿಜೆಪಿಗೆ ದೊಡ್ಡ ಮಟ್ಟದ ಫಲಿತಾಂಶ ಬರಲಿದೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ. ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯದ ನಂತ್ರ ಚುನಾವಣೋತ್ತರ ಸಮೀಕ್ಷೆಗಳ ವರದಿಯನ್ನು ನೋಡಿದ್ರೇ, ಎಲ್ಲಾ ಸಮೀಕ್ಷೆ ಒಂದೇ ರೀತಿಯಲ್ಲಿ ಇದೆ. ಅದರಲ್ಲಿ ಯಾವುದೇ ಗೊಂದಲಗಳಿಲ್ಲ. ಈ ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗುವುದಿಲ್ಲ ಎಂದಿದ್ದಾರೆ. 2004ರ ಸಮೀಕ್ಷೆಯಲ್ಲಿ ದೊಡ್ಡ ಮಟ್ಟದಲ್ಲಿ ಬಿಜೆಪಿಗೆ ಸ್ಥಾನ ಬರಲಿದೆ ಎಂಬುದಾಗಿ ಹೇಳಲಾಗಿತ್ತು. ಅದರಂತೆಯೇ ಆಯ್ತು. ಈಗ ಚುನಾವಣೋತ್ತರ ಸಮೀಕ್ಷೆಯಲ್ಲಿ 2019ರ ಚುನಾವಣೆಗಿಂತ ಹೆಚ್ಚು ಸ್ಥಾನ ಬರಲಿದೆ ಅಂತ ಸಮೀಕ್ಷೆಗಳು ಹೇಳಿದ್ದಾವೆ. ಅದೇ ರೀತಿ ಫಲಿತಾಂಶ ಬರಲಿದೆ ಎಂದರು. ಲೋಕಸಭಾ ಚುನಾವಣೋತ್ತರ ಸಮೀಕ್ಷಾ ವರದಿ ಪ್ರಕಾರ 370ಕ್ಕೂ ಹೆಚ್ಚು ಸ್ಥಾನ…

Read More

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಿರುವ ತೆಲುಗು ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆನೇಕಲ್​​ನ 4ನೇ ಹೆಚ್ಚುವರಿ ಸಿವಿಲ್ ಜೆಎಂಎಫ್​ಸಿ ನ್ಯಾಯಾಲಯದ ಜಡ್ಜ್​ ಸಲ್ಮಾ ಎ.ಎಸ್. ಎದುರು ಹೇಮಾರನ್ನು ಹಾಜರುಪಡಿಸಲಾಗಿತ್ತು. ನಟಿಗೆ ಜೂನ್ 14ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೈದರಾಬಾದ್​ನಿಂದ ಬೆಂಗಳೂರಿಗೆ ಬಂದು ಎಲೆಕ್ಟ್ರಾನಿಕ್​ ಸಿಟಿಯ ಜೆ.ಆರ್​. ಫಾರ್ಮ್​ಹೌಸ್​ನಲ್ಲಿ ರೇವ್​ ಪಾರ್ಟಿ ಮಾಡಿದ ಆರೋಪ ಹೇಮಾ ಅವರ ಮೇಲಿದೆ. ಈ ಪ್ರಕರಣದಲ್ಲಿ ಅವರು ಜೈಲು ಸೇರಿದ್ದಾರೆ. ಇತ್ತೀಚೆಗೆ ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಹೇಮಾ ರಿಪೋರ್ಟ್ ಪಾಸಿಟೀವ್ ಬಂದಿತ್ತು. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ಅನಾರೋಗ್ಯದ ನೆಪ ಹೇಳಿ ವಿಚಾರಣೆಗೆ ಹಾಜರಾಗದೇ ಸಮಯಾವಕಾಶ ಕೇಳಿದ್ದರು. ಹಾಜರಾಗದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು 2ನೇ ನೋಟಿಸ್ ಕೂಡ ನೀಡಿದ್ದರು. ಇದೀಗ ನಟಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಬೆಂಗಳೂರಲ್ಲಿ ಹೇಮಾ ಅವರನ್ನು ಬಂಧಿಸಿದ ಬಳಿಕ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ…

Read More

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಎರಡನೇ ಅವಧಿಯು ಷೇರು ಹೂಡಿಕೆದಾರರಿಗೆ ಸಾಕಷ್ಟು ಲಾಭ ತಂದುಕೊಟ್ಟಿದೆ. ಬೆಂಚ್​ಮಾರ್ಕ್ ಬಿಎಸ್​ಇ ಸೂಚ್ಯಂಕ ಕಳೆದ ಐದು ವರ್ಷಗಳಲ್ಲಿ ಮೇ ತಿಂಗಳವರೆಗೆ 86% ಏರಿಕೆಯಾಗಿದೆ. ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಬಿಎಸ್‌ಇ ಸ್ಮಾಲ್-ಕ್ಯಾಪ್ ಸೂಚ್ಯಂಕಗಳು ಕ್ರಮವಾಗಿ 185% ಮತ್ತು 216% ಏರಿಕೆ ಕಂಡವು. ಇದೇ ಅವಧಿಯಲ್ಲಿ ಕನಿಷ್ಠ 13 ಸ್ಟಾಕ್‌ಗಳು 10,000% ಕ್ಕಿಂತ ಹೆಚ್ಚು ಏರಿಕೆ ಕಂಡವು. 84,604% ರಷ್ಟು ಲಾಭದೊಂದಿಗೆ, ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಈ ಕಂಪನಿಯ ಷೇರುಗಳ ಬೆಲೆ ಮೇ 30, 2019 ರಂದು ರೂ 1.03 ರಿಂದ ಮೇ 31, 2024 ರಂದು ರೂ 872.45 ಕ್ಕೆ ಜಿಗಿದಿದೆ. ಈ ಅವಧಿಯಲ್ಲಿ ಷೇರುಗಳಲ್ಲಿನ ರೂ, 1 ಲಕ್ಷ ಹೂಡಿಕೆಯು ರೂ. 8.47 ಕೋಟಿಗೆ ಏರಿಕೆಯಾಗಿದೆ. ವಾರೀ ರಿನ್ಯೂವಬಲ್ ಟೆಕ್ನಾಲಜೀಸ್ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿದೆ. ಕಳೆದ ಐದು ವರ್ಷಗಳಲ್ಲಿ ಈ ಷೇರು 69,464% ಏರಿಕೆಯಾಗಿ 2,393 ರೂ. ತಲುಪಿದೆ. ಹಜೂರ್ ಮಲ್ಟಿ…

Read More

ಮಾಧ್ಯಮ ಕ್ಷೇತ್ರದ ದಿಗ್ಗಜ ರೂಪರ್ಟ್ ಮರ್ಡೋಕ್ ಅವರು ಶನಿವಾರ ತಮ್ಮ 93ನೇ ವಯಸ್ಸಿನಲ್ಲಿ ತಮಗಿಂತ 25 ವರ್ಷ ಕಿರಿಯರಾದ ನಿವೃತ್ತ ಕಣ ಜೀವಶಾಸ್ತ್ರಜ್ಞೆ 67 ವರ್ಷ ವಯಸ್ಸಿನ ಎಲೆನಾ ಝುಕೋವಾ ಅವರನ್ನು ವಿವಾಹವಾದರು. ಇದು ಮರ್ಡೋಕ್ ಅವರ ಐದನೇ ವಿವಾಹ. ಮೊರಗಾ ಎಂಬ ಕ್ಯಾಲಿಫೋರ್ನಿಯಾ ವೈನ್ ಯಾರ್ಡ್ ಎಸ್ಟೇಟ್ ನಲ್ಲಿ ವಿವಾಹ ನಡೆಯಿತು. ವಿವಾಹದ ಚಿತ್ರಗಳನ್ನು ಮರ್ಡೋಕ್ ಮಾಲೀಕತ್ವದ ಬ್ರಿಟನ್ ಪತ್ರಿಕೆ ‘ದ ಸನ್’ ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ. ನವಜೋಡಿ ಫೋಟೊಗೆ ಫೋಸ್ ನೀಡುತ್ತಾ ನಗುತ್ತಿರುವ ಚಿತ್ರಗಳು ಪ್ರಕಟವಾಗಿವೆ. ಈ ವಿವಾಹ ಸಂಭ್ರಮದಲ್ಲಿ ನ್ಯೂ ಇಂಗ್ಲೆಂಡ್ ಪೇಟ್ರಿಯಾಟ್ಸ್ ಯುಎಸ್ ಫುಟ್ಬಾಲ್ ತಂಡದ ಮಾಲೀಕ ರಾಬರ್ಟ್ ಕ್ರಾಫ್ಟ್ (82) ಮತ್ತು ಅವರ 50 ವರ್ಷ ವಯಸ್ಸಿನ ಪತ್ನಿ ದಾನಾ ಬ್ಲೂಂಬರ್ಗ್ ಪಾಲ್ಗೊಂಡಿದ್ದರು ಎಂದು ವರದಿ ವಿವರಿಸಿದೆ. ಇದಕ್ಕೂ ಮುನ್ನ ಮರ್ಡೋಕ್ ನಾಲ್ಕು ಬಾರಿ ವಿವಾಹವಾಗಿದ್ದು, ಇತ್ತೀಚೆಗೆ ರೋಲಿಂಗ್ ಸ್ಟೋನ್ ಮುಖ್ಯಸ್ಥ ಮೈಕ್ ಜಾಗರ್ ಅವರ ಸುಧೀರ್ಘ ಕಾಲದ ಗೆಳತಿ ಜೆರ್ರಿ ಹಾಲ್ ಅವರನ್ನು ವಿವಾಹವಾಗಿದ್ದರು.…

Read More

ಕಳೆದ ಕೆಲ ದಿನಗಳಿಂದ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಡಿವೋರ್ಸ್ ಕಾರಣಕ್ಕೆ ಸಖತ್ ಸುದ್ದಿಯಾಗ್ತಿದ್ದಾರೆ. ಕಳೆದ ಒಂದು ವಾರದಿಂದ ಎಲ್ಲಿ ನೋಡಿದ್ರು ಈ ಜೋಡಿಯ ವಿಚ್ಚೇದನದ ಸುದ್ದಿಯೇ ಹರಿದಾಡುತ್ತಿದೆ.ಆದರೆ ಇದೀಗ ಏಕಾ ಏಕಿ ನತಾಶಾ ನಡೆ ಇದೆಲ್ಲಾ ಕೇವಲ ಪಬ್ಲಿಸಿಟಿಗಾ ಅನ್ನೋ ಅನುಮಾನ ಹುಟ್ಟುವಂತೆ ಮಾಡಿದೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಡಿವೋರ್ಸ್, ಬ್ರೇಕ್ ಅಪ್ ಆದಾಗ ತಮ್ಮ ಸಂಗಾತಿಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಿಂದ ಡಿಲೀಟ್ ಮಾಡುತ್ತಾರೆ. ಅಂತೆಯೇ ನತಾಶ ಕೂಡ ತಮ್ಮ ಸಾಮಾಜಿಕ ಜಾಲಾ ತಾಣದಿಂದ ಮದುವೆಯ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಅಂತೆಯೇ ನತಾಶಾ ಕೂಡ ತಮ್ಮ ಮದುವೆ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ನತಾಶಾ ಮದುವೆ ಫೋಟೋ ಡಿಲೀಟ್ ಮಾಡಿದಾಗಿನಿಂದಲೇ ಡಿವೋರ್ಸ್ ಬಗ್ಗೆ ಸಾಕಷ್ಟು ಚರ್ಚೆ ಶುರುವಾಯಿತು. ಈ ದಂಪತಿ ಇನ್ನು ಜೊತೆಗಿರುವುದಿಲ್ಲ ಎಂದೇ ಹೇಳಲಾಗಿತ್ತು. ಆದರೆ ಈ ಬಗ್ಗೆ ಇಬ್ಬರು ಯಾವುದೇ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಆದರೆ ಈಗ ನತಾಶಾ ಅವರು ಹಾರ್ದಿಕ್ ಪಾಂಡ್ಯ ಜೊತೆಗಿನ ಮದುವೆ ಫೋಟೋಗಳನ್ನು…

Read More

ಮೆಕ್ಸಿಕೊದಲ್ಲಿ ನಡೆದ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ದಾಖಲಾಗಿದೆ. ಮೊದಲ ಭಾರಿಗೆ ಮಹಿಳೆಯೊಬ್ಬರು ಅಧ್ಯಕ್ಷೆಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ “ಗಣರಾಜ್ಯದ 200 ವರ್ಷಗಳಲ್ಲಿ ಮೊದಲ ಬಾರಿಗೆ, ನಾನು ಮೆಕ್ಸಿಕೊದ ಮೊದಲ ಮಹಿಳಾ ಅಧ್ಯಕ್ಷೆಯಾಗಿದ್ದೇನೆ” ಎಂದು ಶೆನ್ಬಾಮ್ ಖುಷಿ ಹಂಚಿಕೊಂಡಿದ್ದಾರೆ. 61 ವರ್ಷದ ಹವಾಮಾನ ವಿಜ್ಞಾನಿ ಮತ್ತು ಮಾಜಿ ನೀತಿ ನಿರೂಪಕ ಶೇ.58.3ರಿಂದ ಶೇ.60.7ರಷ್ಟು ಮತಗಳನ್ನು ಪಡೆದಿದ್ದಾರೆ ಎಂದು ಅಂಕಿಅಂಶ ಮಾದರಿ ತಿಳಿಸಿದೆ. ವಿರೋಧ ಪಕ್ಷದ ಅಭ್ಯರ್ಥಿ ಕ್ಸೊಚಿಟ್ಲ್ ಗಾಲ್ವೆಜ್ ಶೇ.26.6ರಿಂದ ಶೇ.28.6ರಷ್ಟು ಮತಗಳನ್ನು ಪಡೆದರೆ, ಜಾರ್ಜ್ ಅಲ್ವಾರೆಜ್ ಮೈನೆಜ್ ಶೇ.9.9ರಿಂದ ಶೇ.10.8ರಷ್ಟು ಮತಗಳನ್ನು ಪಡೆದಿದ್ದಾರೆ. ಆಡಳಿತ ಪಕ್ಷದ ಅಭ್ಯರ್ಥಿ ತನ್ನ ರಾಜಕೀಯ ಮಾರ್ಗದರ್ಶಕ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಕಳೆದ ಆರು ವರ್ಷಗಳಲ್ಲಿ ನಿಗದಿಪಡಿಸಿದ ರಾಜಕೀಯ ಹಾದಿಯನ್ನು ಮುಂದುವರಿಸುವ ಬಗ್ಗೆ ಪ್ರಚಾರ ನಡೆಸಿದರು. ಶೆನ್ಬಾಮ್ಗೆ ಗೆಲುವು ಮೆಕ್ಸಿಕೊಗೆ ಒಂದು ಪ್ರಮುಖ ಹೆಜ್ಜೆಯಾಗಿದೆ, ಈ ಚುನಾವಣೆಯು ಶೆನ್ಬಾಮ್ ಅವರನ್ನು ಯುನೈಟೆಡ್ ಸ್ಟೇಟ್ಸ್, ಮೆಕ್ಸಿಕೊ ಅಥವಾ ಕೆನಡಾದಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದ ಮೊದಲ ಮಹಿಳೆಯನ್ನಾಗಿ…

Read More

ಲಿಕ್ವಿಡ್ ಪೆಟ್ರೋಲಿಯಂ ಗ್ಯಾಸ್ ಸಿಲಿಂಡರ್ ತುಂಬುವ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 12 ಮಂದಿ ಸಜೀವ ದಹನವಾಗಿರುವ ಘಟನೆ ಪಾಕಿಸ್ತಾನದ ಹೈದರಾಬಾದ್ ನ ಪ್ರೀತಾಬಾದ್ ಪ್ರದೇಶದಲ್ಲಿ ನಡೆದಿದೆ. ನೀರನ್ಕೋಟ್ ನ ಯುಸಿ -8 ರ ಮೀರ್ ನಬಿ ಬಕ್ಸ್ ಟೌನ್ ರಸ್ತೆಯಲ್ಲಿರುವ ಝಾಚಾ ಬಚಾ ಆಸ್ಪತ್ರೆಯ ನೆಲ ಮಹಡಿಯಲ್ಲಿರುವ ಎಲ್ಪಿಜಿ ಸಿಲಿಂಡರ್ ತುಂಬುವ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ಉದ 11 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಕರಾಚಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಲಿಯಾಖತ್ ಯೂನಿವರ್ಸಿಟಿ ಹಾಸ್ಪಿಟಲ್ ನಲ್ಲಿ ತುರ್ತು ಚಿಕಿತ್ಸೆ ಪಡೆದ ನಂತರ ಕನಿಷ್ಠ 60 ಜನರು, ಮುಖ್ಯವಾಗಿ ಯುವಕರು ದೊಡ್ಡ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಮತ್ತು ಕರಾಚಿಗೆ ಸಾಗಿಸಲಾಗಿದೆ.

Read More

ಪುನೀತ್ ರಾಜ್ ಕುಮಾರ್ ನಟನೆಯ ಮಿಲನಾ ಸಿನಿಮಾದ ಮೂಲಕ ಕನ್ನಡಿಗರಿಗೆ ಪರಿಚಯವಾದ ನಟಿ ಪಾರ್ವತಿ ಮೆನನ್. ಖ್ಯಾತಿ ನಟಿಯಾಗಿ ಗುರುತಿಸಿಕೊಂಡಿರುವ ಪಾರ್ವತಿ ಇದೀಗ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಇದು ಸಹಜವಾಗಿಯೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಪಾರ್ವತಿ ಶೇರ್ ಮಾಡಿರುವ ಫೋಟೋ ನೋಡಿದ ನೆಟ್ಟಿಗರು ನಟಿ ಗುಟ್ಟು ಗುಟ್ಟಾಗಿ ಮದುವೆಯಾದ್ರಾ ಎಂದು ಪ್ರಶ್ನೆ ಮಾಡ್ತಿದ್ದಾರೆ. ಪಾರ್ವತಿ ಮದುವೆಯಾಗಿರುವ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಂದ್ಹಾಗೆ ಇದು ರಿಯಲ್ ಮ್ಯಾರೇಜ್ ಅಲ್ಲವೇ ಅಲ್ಲ. ಇದು ರೀಲ್ ಮದುವೆಯಷ್ಟೇ. ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಪಾರ್ವತಿಗೆ ಈಗ 36 ವರ್ಷ. ಸಾಮಾನ್ಯವಾಗಿ ಏಲ್ಲೇ ಹೋದರೂ ಮೊದಲು ಎದುರಾಗುವ ಪ್ರಶ್ನೆಯೇ ಮದುವೆ ಯಾವಾಗ? ಎಂದೇ ಕೇಳುತ್ತಾರೆ. ಸಿನಿಮಾಗಳಲ್ಲಿ ಬ್ಯುಸಿಯಿರುವ ನಟಿ ದಿಢೀರ್ ಎಂದು ಮದುವೆ ಫೋಟೋ ಹರಿಬಿಟ್ಟಿದಕ್ಕೆ ಫ್ಯಾನ್ಸ್ ದಂಗಾಗಿದ್ದಾರೆ. ‘ಉಲ್ಲೋಜುಕ್ಕು’ ಎಂಬ ಸಿನಿಮಾದಲ್ಲಿ ಪಾರ್ವತಿ ಹಾಗೂ ಪ್ರಶಾಂತ್ ಮುರಳಿ ನಟಿಸುತ್ತಿದ್ದಾರೆ. ಸದ್ಯ ಈ ಚಿತ್ರದ 45 ಸೆಕೆಂಡಿನ ಪ್ರೋಮೋವೊಂದು ರಿಲೀಸ್‌ ಮಾಡಿದ್ದಾರೆ.…

Read More

ಕಳೆದ ಎರಡು ದಿನಗಳ ಹಿಂದೆ ನಟಿ ರವೀನಾ ಟಂಡನ್ ಕಾರು ಅಪಘಾತಕ್ಕೆ ಈಡಾಗಿತ್ತು. ರವೀನಾ ಟಂಡನ್ ಕಾರು ಚಾಲಕ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಮೂವರಿಗೆ ಗಾಯಗೊಳಿಸಿದ್ದ ಎನ್ನಲಾಗಿತ್ತು. ಅಲ್ಲದೆ ನಟಿ ರವೀನಾ ಕೂಡ ಕುಡಿದಿದ್ದು ಈ ವೇಳೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂದೆಲ್ಲಾ ಹೇಳಲಾಗಿತ್ತು. ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ರವೀನಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ ಅಸಲಿ ಸಂಗತಿ ಏನು ಎಂದು ಡಿಸಿಪಿ ರಾಜ್ ತಿಲಕ್ ರೋಷನ್ ತಿಳಿಸಿದ್ದಾರೆ. ರವೀನಾ ಟಂಡನ್ ಕಾರು ಮೂವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಾಯಗಳಾಗಿವೆ ಎಂದು ಹೇಳಲಾಗಿತ್ತು. ನಟಿಯ ವಿರುದ್ಧ ಕಿಡಿಕಾರಿದ್ದರು. ಅವರ ಮೇಲೆ ಹಲ್ಲೆ ಕೂಡ ಮಾಡಲಾಗಿತ್ತು. ಅಸಲಿಗೆ, ಸುಳ್ಳು ದೂರನ್ನು ದೂರುದಾರರು ನೀಡಿರುವ ಬಗ್ಗೆ ಡಿಸಿಪಿ ಸ್ಪಷ್ಟನೆ ನೀಡಿದ್ದಾರೆ. ಅವರ ಕಾರು ಯಾರಿಗೂ ಡಿಕ್ಕಿ ಹೊಡೆದಿಲ್ಲ ಮತ್ತು ರವೀನಾ ಅಂದು ಕುಡಿದಿರಲಿಲ್ಲ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಅಸಲಿ ವಿಚಾರ ಹೊರಬಿದ್ದಿದೆ ಎಂದು ಡಿಸಿಪಿ ಸ್ಪಷ್ಟನೆ ನೀಡಿದ್ದಾರೆ. ರವೀನಾ ಅವರು ಕಾರಿನಲ್ಲಿ ಮನೆಗೆ…

Read More