Author: Author AIN

ಈ ಬಾರಿ ನಾವು ಗೆದ್ದರೆ ಪಾಕ್‌ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಸೇರಿಸಲಾಗುವುದು ಎಂಬ ಬಿಜೆಪಿ ಭರವಸೆಗಳ ನಡುವೆಯೇ ಆಜಾದ್‌ ಕಾಶ್ಮೀರ ವಿದೇಶಿ ಸರಹದ್ದು ಎಂದು ಪಾಕಿಸ್ತಾನ ಸರ್ಕಾರ, ಇಸ್ಲಾಮಾಬಾದ್‌ ಹೈಕೋರ್ಟ್‌ಗೆ ಅಚ್ಚರಿಯ ಮಾಹಿತಿ ನೀಡಿದೆ. ಕಾಶ್ಮೀರಿ ಕವಿ ಅಹ್ಮದ್ ಫರ್ಹಾದ್‌ ಶಾ ನಿಗೂಢ ನಾಪತ್ತೆ ಹಿನ್ನೆಲೆಯಲ್ಲಿ ಅವರ ಪತ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್‌ಗೆ ಮಾಹಿತಿ ನೀಡಿದ ಪಾಕಿಸ್ತಾನದ ಹೆಚ್ಚುವರಿ ಅಟಾರ್ನಿ ಜನರಲ್‌, ‘ಆಜಾದ್‌ ಕಾಶ್ಮೀರದಲ್ಲಿ ಅಹ್ಮದ್‌ ಶಾ ಇರುವ ಕಾರಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸಾಧ್ಯವಿಲ್ಲ. ಅದು ವಿದೇಶಿ ಸರಹದ್ದು. ಅಲ್ಲಿಗೆ ಪ್ರತ್ಯೇಕ ಸಂವಿಧಾನ, ನ್ಯಾಯಾಲಯಗಳಿವೆ. ಅಲ್ಲಿನ ಕೋರ್ಟ್‌ಗಳು ನೀಡಿದ ತೀರ್ಪನ್ನು ವಿದೇಶಿ ನ್ಯಾಯಾಲಯದ ತೀರ್ಪುಗಳ ರೀತಿ ಪರಿಗಣಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು. ಈ ವೇಳೆ ನ್ಯಾ. ಕಯಾನಿ ಅವರು, ‘ಅದು ವಿದೇಶಿ ನೆಲವೆಂದಾದಲ್ಲಿ ಪಾಕಿಸ್ತಾನ ಸೇನೆ ಆ ಪ್ರದೇಶಕ್ಕೆ ಪ್ರವೇಶ ಮಾಡಿದ್ದು ಹೇಗೆ’ ಎಂದು ಪ್ರಶ್ನಿಸಿದರು. ಪಾಕ್‌ ಆಕ್ರಮಿತ ಕಾಶ್ಮೀರ ಭಾರತದ್ದೇ ಭೂಭಾಗವಾಗಿದ್ದು, ಅದನ್ನು ಭಾರತ ಸರ್ಕಾರ…

Read More

ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮೂರನೇ ಬಾರಿಗೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ್ದಾರೆ. ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಬೋಯಿಂಗ್‌ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಶನಿವಾರ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 10 ಗಂಟೆಗೆ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಪ್ರಯಾಣ ಬೆಳೆಸಿದ್ದಾರೆ. ಕಳೆದ ತಿಂಗಳ 7 ರಂದೇ ಸುನೀತಾ ಅಂತರಿಕ್ಷ ಪ್ರಯಾಣ ಕೈಗೊಳ್ಳಬೇಕಿತ್ತು. ಆದರೆ ತಾಂತ್ರಿಕ ದೋಷದ ಕಾರಣದಿಂದ ಮುಂದೂಡಲಾಗಿತ್ತು. ವಿಲಿಯಮ್ಸ್ ಹೊರತಾಗಿ ಬುಚ್‌ ವಿಲ್ಮೋರ್‌ ಕೂಡ ಅಂತರಿಕ್ಷಕ್ಕೆ ಪ್ರಯಾಣ ಕೈಗೊಳ್ಳಲಿದ್ದಾರೆ. ಸುನಿತಾ ಮತ್ತು ವಿಲ್ಮೋರ್ ಒಂದು ವಾರ ಬಾಹ್ಯಾಕಾಶದಲ್ಲಿಯೇ ಇರಲಿದ್ದಾರೆ. ಸುನೀತಾ ವಿಲಿಯಮ್ಸ್, ಮಹಿಳೆಯೊಬ್ಬರು ಅತಿ ಹೆಚ್ಚು ಬಾಹ್ಯಾಕಾಶ ನಡಿಗೆ ಮಾಡಿದ  ದಾಖಲೆಯನ್ನು ಹೊಂದಿದ್ದಾರೆ. ಅವರು ಯುನೈಟೆಡ್ ಸ್ಟೇಟ್ಸ್ ನೌಕಾಪಡೆಯ ಅಧಿಕಾರಿಯೂ ಆಗಿದ್ದಾರೆ ಮತ್ತು ಬಾಹ್ಯಾಕಾಶ ಯಾತ್ರೆ 14 ಮತ್ತು  15 ರ ಭಾಗವಾಗಿದ್ದರು. ಸುನೀತಾ ವಿಲಿಯಮ್ಸ್ ಸಾಧನೆಗಾಗಿ ಪದ್ಮಭೂಷಣ ಪ್ರಶಸ್ತಿಯನ್ನೂ ಪಡೆದಿದ್ದಾರೆ.

Read More

ನಟ ಸಿದ್ದಾರ್ಥ್ ಹಾಗೂ ನಟಿ ಅದಿತಿ ರಾವ್ ಹೈದರಿ ಇತ್ತೀಚೆಗೆ ತಮ್ಮ ಎಂಗೇಜ್ ಮೆಂಟ್ ವಿಚಾರವನ್ನು ಅಧಿಕೃತವಾಗಿ ಅನೌನ್ಸ್ ಮಾಡಿದ್ದಾರೆ. ಸದ್ಯದಲ್ಲೇ ಈ ಜೋಡಿ ಹಕ್ಕಿಗಳು ಹಸೆ ಮಣೆ ಏರಲಿದ್ದು ಈ ಮಧ್ಯೆ ಇಬ್ಬರು ಇಟಲಿಗೆ ಹಾರಿದ್ದಾರೆ. ಸಿದ್ಧಾರ್ಥ್ ಜೊತೆಗಿರುವ ರೊಮ್ಯಾಂಟಿಕ್ ಫೋಟೋವನ್ನು ನಟಿ ಅದಿತಿ ಶೇರ್ ಮಾಡಿದ್ದಾರೆ. ಸಾಕಷ್ಟು ಸಮಯದಿಂದ ಇಬ್ಬರ ಡೇಟಿಂಗ್ ಬಗ್ಗೆ ಭಾರೀ ಸುದ್ದಿಯಾಗಿತ್ತು. ಆದರೆ ಇಬ್ಬರೂ ಈ ಬಗ್ಗೆ ಪ್ರತಿಕ್ರಿಯೆ ನೀಡದೇ ಸೈಲೆಂಟ್ ಆಗಿದ್ದರು. ಅದ್ಯಾವಾಗ ಈ ಜೋಡಿ ಬಗ್ಗೆ ಎಂಗೇಜ್‌ಮೆಂಟ್ ಬಗ್ಗೆ ಸುದ್ದಿ ವೈರಲ್ ಆಯ್ತೋ ಆಗ ನಿಶ್ಚಿತಾರ್ಥ ಆಗಿರುವ ಬಗ್ಗೆ ಅಧಿಕೃತ ಘೋಷಣೆ ಮಾಡುವ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ನೀಡಿದ್ದರು. ಈಗ ಮದುವೆಗೂ ಮುನ್ನ ಸಿದ್ಧಾರ್ಥ್ ಮತ್ತು ಅದಿತಿ ಜೋಡಿ ಇಟಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇಬ್ಬರೂ ಜಾಲಿಯಾಗಿ ಟ್ರಿಪ್‌ ಎಂಜಾಯ್ ಮಾಡ್ತಿದ್ದಾರೆ. ಇಟಲಿಯಲ್ಲಿ ಸುಂದರ ಜಾಗಗಳಿಗೆ ಸಿದ್ಧಾರ್ಥ್ ಜೋಡಿ ಭೇಟಿ ನೀಡಿದ್ದಾರೆ. ಇಬ್ಬರೂ ವೆಕೇಷನ್ ಮೂಡ್‌ಗೆ ಜಾರಿದ್ದಾರೆ. ಇಬ್ಬರ ರೊಮ್ಯಾಂಟಿಕ್ ಫೋಟೋಗಳನ್ನು ಸೋಷಿಯಲ್…

Read More

ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಹಿಮಾಲಯಕ್ಕೆ ಭೇಟಿ ಕೊಟ್ಟ ಬೆನ್ನಲ್ಲೇ ಇದೀಗ ಉತ್ತರಾಖಂಡದ ಪವಿತ್ರ ಸ್ಥಳಗಳಾದ ಕೇದಾರನಾಥ, ಬದ್ರಿನಾಥ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.  ಕೇದಾರನಾಥ ಮತ್ತು ಬದ್ರಿನಾಥ ದೇವಾಲಯಕ್ಕೆ ಭೇಟಿ ನೀಡಿದ ತಲೈವ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಕೆಲ ಕಾಲ ಸಮಯ ಕಳೆದಿದ್ದಾರೆ. ಈ ವೇಳೆ, ರಜನಿಕಾಂತ್‌ ಅವರನ್ನು ಉತ್ತರಾಖಂಡ ಪೊಲೀಸ್ ಅಧಿಕಾರಿಯೊಬ್ಬರು ವಿಶೇಷವಾಗಿ ಸ್ವಾಗತಿಸಿದ್ದಾರೆ. ಸದ್ಯ ರಜನಿಕಾಂತ್ ‘ವೆಟ್ಟೈಯಾನ್’ ಸಿನಿಮಾದ ಶೂಟಿಂಗ್ ಮುಗಿಸಿಕೊಂಡಿದ್ದಾರೆ. ಸದ್ಯದಲ್ಲೇ ‘ಜೈಲರ್ ಪಾರ್ಟ್ 2’ ಚಿತ್ರತಂಡಕ್ಕೆ ನಟ ಸಾಥ್‌ ನೀಡಲಿದ್ದಾರೆ. ಶ್ರೀಬದರಿನಾಥ್ ದರ್ಶನಕ್ಕಾಗಿ ದೇವಭೂಮಿಗೆ ಆಗಮಿಸಿದ ರಜನಿಕಾಂತ್ ಜಿ ಅವರಿಗೆ ಸ್ವಾಗತ ಮತ್ತು ಅಭಿನಂದನೆಗಳು ಎಂದು ಪೋಲಿಸರು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ಶ್ರೀ ಬದರಿನಾಥ್ ಧಾಮದ ದರ್ಶನದಿಂದ ಪುಳಕಿತನಾಗಿದ್ದೇನೆ ಎಂದು ರಜನಿಕಾಂತ್ ತಿಳಿಸಿದ್ದಾರೆ.

Read More

ನಟ ಕಮಲ್ ಹಾಸನ್ ಪುತ್ರಿ ನಟಿ ಶ್ರುತಿ ಹಾಸನ್ ಇತ್ತೀಚೆಗೆ ಬಹುಕಾಲದ ಗೆಳೆಯ ಶಾಂತನು ಜೊತೆಗಿನ ಸಂಬಂಧಕ್ಕೆ ಅಂತ್ಯ ಹಾಡಿದ್ದಾರೆ. ತಮ್ಮ ಖಾಸಗಿ ಬದುಕಿನ ವಿಚಾರವಾಗಿ ಸಿಕ್ಕಾಪಟ್ಟೆ ಸುದ್ದಿಯಾದ ಬೆನ್ನಲ್ಲೇ ಇದೀಗ ನಟಿ ತಮಗಿರುವ ಆರೋಗ್ಯ ಸಮಸ್ಯೆ ಬಗ್ಗೆ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ತನಗೆ ಪಿಸಿಓಎಸ್ ಸಮಸ್ಯೆ ಇದೆ ವಿಷಯವನ್ನು ನಟಿ ತಿಳಿಸಿದ್ದಾರೆ. ಮೊದಲ ಪಿರಿಯಡ್ ಆದಾಗಲೇ ದೊಡ್ಡ ಹೆಣಗಾಟವಾಗಿತ್ತು. ಈಗಲೂ ಆ ನೋವನ್ನು ಭರಿಸುತ್ತಿದ್ದೇನೆ ಎಂದಿದ್ದಾರೆ. ಈ ಪಿರಿಯಡ್ ಸಮಯದಲ್ಲಿ ಯಾವುದೇ ಕೆಲಸವನ್ನು ಸರಿಯಾಗಿ ಮಾಡಲಾಗುವುದಿಲ್ಲ. ಇದರಿಂದಾಗಿ ನಾನು ಸಾಕಷ್ಟು ದೊಡ್ಡ ದೊಡ್ಡ ಆಫರ್‌ಗಳನ್ನು ಕಳೆದುಕೊಂಡಿದ್ದೇನೆ. ಆದರೆ ಕೆಲವು ನಿರ್ಮಾಪಕರು ಕೋಟಿಗಟ್ಟಲೆ ಖರ್ಚು ಮಾಡಿ ಶೂಟಿಂಗ್ ಮಾಡುತ್ತಿರುವಾಗ ನಿಮ್ಮ ಆರೋಗ್ಯ ಸಮಸ್ಯೆಯಿಂದ ಮುಂದೂಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು. ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ (ಪಿಸಿಓಎಸ್) ಮಹಿಳೆಯರಲ್ಲಿ ಪಿರಿಯಡ್ ವೇಳೆ ಭಾರೀ ರಕ್ತಸ್ರಾವವನ್ನು ಉಂಟುಮಾಡುತ್ತದೆ. ಅಲ್ಲದೇ ಈ ಕಾಯಿಲೆ ಇರುವವರಲ್ಲಿ ಅನೇಕರಿಗೆ ಮಕ್ಕಳೂ ಸಹ ಆಗುವುದಿಲ್ಲ ಎಂದು ತಮ್ಮ ಆರೋಗ್ಯ ಸಮಸ್ಯೆಯ ಬಗ್ಗೆ ನಟಿ…

Read More

ಬಾಲಿವುಡ್ ನಟಿ ರವೀನಾ ಟಂಡನ್ ಕುಡಿದ ಮತ್ತಿನಲ್ಲಿ ಮೂವರ ಮೇಲೆ ಹಲ್ಲೆ ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಇದರಿಂದ ರೊಚ್ಚಿಗೆದ್ದ ಸ್ಥಳೀಯರು ನಟಿ ರವೀನಾರನ್ನು ಸುತ್ತುವರೆದು ಪ್ರತಿಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶನಿವಾರ ತಡರಾತ್ರಿ ಮುಂಬೈನ ಬಾಂದ್ರಾ ಉಪನಗರದಲ್ಲಿ ಘಟನೆ ನಡೆದಿದೆ. ಪ್ರಾಥಮಿಕ ವರದಿಯ ಪ್ರಕಾರ, ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಕಾರು ಚಾಲಕ ನಿರ್ಲಕ್ಷ್ಯದಿಂದ ವಾಹನ  ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಪ್ರಶ್ನಿಸಲು ಮುಂದಾದ ಜನರಿಗೆ ಕುಡಿದ ಮತ್ತಿನಲ್ಲಿದ್ದ ರವೀನಾ ಟಂಡನ್ ಕಾರಿನಿಂದ ಇಳಿದು ಬಂದು ಅಪಘಾತ ಸಂತ್ರಸ್ತರನ್ನು ನಿಂದಿಸಿ ಅವರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆ ವಿಡಿಯೋದಲ್ಲಿ ಕಾಣಿಸುವಂತೆ  ಸ್ಥಳೀಯರು ಬಾಲಿವುಡ್ ನಟಿಯನ್ನು ಸುತ್ತುವರಿದು ಪೊಲೀಸರಿಗೆ ಕರೆ ಮಾಡುವುದನ್ನು ಕಾಣಬಹುದು. ‘ನೀವು ರಾತ್ರಿಯನ್ನು…

Read More

ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಸಂದೇಶ್ ನಾಗರಾಜ್ ಇದೀಗ ಕಿಚ್ಚ ಸುದೀಪ್ ಜೊತೆ ಕೈಜೋಡಿಸಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ ಶಿವರಾಜ್ ಕುಮಾರ್ ನಟಿಸಿದ್ದ ‘ಘೋಸ್ಟ್‌’ ಸಿನಿಮಾವನ್ನು ಸಹ ಸಂದೇಶ್ ನಾಗರಾಜ್ ನಿರ್ಮಾಣ ಮಾಡಿದ್ದರು. ಇದೀಗ ಇದೇ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಮತ್ತೊಂದು ಬಿಗ್‌ ಸಿನಿಮಾವನ್ನು ಕೈಗೆತ್ತಿಕೊಂಡಿದೆ. ಸಂದೇಶ್‌ ನಾಗರಾಜ್‌ ಅರ್ಪಿಸುವ ಸಂದೇಶ್‌ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ಎನ್‌ ಸಂದೇಶ್‌ ನಿರ್ಮಾಣದಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಮಾಡುವುದು ಅಧಿಕೃತವಾಗಿದೆ. ಸಂದೇಶ್‌ ನಾಗರಾಜ್ ಮತ್ತು ಎನ್ ಸಂದೇಶ್‌ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿ, ಸಿನಿಮಾದ ಬಗ್ಗೆ ಚರ್ಚೆ ನಡೆಸಿದ್ದಾರೆ. ಸುದೀಪ್ ಸಹ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದು, ಇದು ದೊಡ್ಡ ಬಜೆಟ್​ನ ಸಿನಿಮಾ ಎನ್ನಲಾಗುತ್ತಿದೆ. ಕಿಚ್ಚ ಸುದೀಪ್ ನಟಿಸಿರುವ ‘ಮ್ಯಾಕ್ಸ್’ ಸಿನಿಮಾ ಬಹುತೇಕ ರೆಡಿಯಾಗಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಾಕಿ ಇವೆ. ‘ಮ್ಯಾಕ್ಸ್’ ಸಿನಿಮಾದ ಬಿಡುಗಡೆ ಬಳಿಕ, ಸಂದೇಶ್ ನಾಗರಾಜ್ ನಿರ್ಮಾಣದ ಸಿನಿಮಾ ಪ್ರಾರಂಭವಾಗಲಿದೆ. ಸಂದೇಶ್ ಪ್ರೊಡಕ್ಷನ್​ನಲ್ಲಿ ಕಿಚ್ಚ ಸುದೀಪ್ ನಟಿಸಲಿರುವ…

Read More

ಕಳೆದ ಕೆಲ ದಿನಗಳಿಂದ ಬಾಲಿವುಡ್ ಕಪಲ್ಸ್ ಮಲೈಕಾ ಅರೋರಾ ಹಾಗೂ ಅರ್ಜುನ್ ಕಪೂರ್ ದೇ ಸುದ್ದಿ. ಡೇಟಿಂಗ್ ಆರಂಭದಲ್ಲಿ ವಯಸ್ಸಿನ ಕಾರಣದಿಂದ ತೀವ್ರ ತೀಕೆಗೆ ಗುರಿಯಾಗಿದ್ದ ಜೋಡಿ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಹೋದಲ್ಲಿ ಬಂದಲ್ಲೆಲ್ಲಾ ಕೈ ಕೈ ಹಿಡಿದು ಸುತ್ತಾಡಿದ್ದರು. ಇದೀಗ ಇಬ್ಬರೂ ಪರಸ್ಪರ ದೂರಾಗುತ್ತಿದ್ದಾರೆ. ಅರ್ಜುನ್ ಕಪೂರ್ ಹಾಗೂ ಮಲೈಕಾ ಅರೋರಾ ಕಳೆದ ಆರು ವರ್ಷಗಳಿಂದ ಪ್ರೀತಿಯಲ್ಲಿದ್ದರು. 2018 ರಲ್ಲಿ ಮೊದಲ ಬಾರಿಗೆ ಇವರಿಬ್ಬರ ಹೆಸರು ಒಟ್ಟಿಗೆ ಕೇಳಿ ಬಂದಿತ್ತು. ಮಲೈಕಾರ 45 ನೇ ವರ್ಷದ ಹುಟ್ಟುಹಬ್ಬದಲ್ಲಿ ತಾವಿಬ್ಬರೂ ಪ್ರೀತಿಯಲ್ಲಿದ್ದು, ಇನ್ನುಮುಂದೆ ಸಹಬಾಳ್ವೆ ಮಾಡುವುದಾಗಿ ಘೋಷಿಸಿದ್ದರು. ಈ ಆರು ವರ್ಷಗಳಲ್ಲಿ ಪ್ರೀತಿಯಿಂದಲೇ ಇದ್ದ ಈ ಜೋಡಿ ಈಗ ಕೆಲವು ಕಾರಣಗಳಿಂದಾಗಿ ಪರಸ್ಪರ ದೂರಾಗುತ್ತಿದ್ದಾರೆ. ಈ ಬಗ್ಗೆ ಕೆಲ ಬಾಲಿವುಡ್ ಮಾಧ್ಯಮಗಳು ವರದಿ ಮಾಡಿದ್ದು, ಈ ಜೋಡಿ ಪರಸ್ಪರ ಗೌರವದಿಂದಲೇ ದೂರಾಗುತ್ತಿದ್ದಾರೆ. ತಮ್ಮ ಬ್ರೇಕ್ ಅಪ್ ಬಗ್ಗೆ ಮೌನದಿಂದಿದ್ದು ಪರಸ್ಪರರ ಪರ ಅಥವಾ ವಿರುದ್ಧ ಯಾವುದೇ ಹೇಳಿಕೆಗಳನ್ನು ನೀಡದಿರಲು ನಿರ್ಧರಿಸಿದ್ದಾರೆ. ಇಬ್ಬರೂ…

Read More

ಅಜಯ್ ದೇವಗನ್ ನಟನೆಯ ಮೈದಾನ್ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಸಾಕಷ್ಟು ಸದ್ದು ಮಾಡಿತ್ತು. ಫುಟ್‌ಬಾಲ್ ಕೋಚ್ ಸೈಯದ್ ಅಬ್ದುಲ್ ರಹೀಮ್ ಜೀವನದ ಕಥೆಯನ್ನು ಈ ಸಿನಿಮಾದ ಮೂಲಕ ಹೇಳಿದ್ದರು. ಇದೀಗ ಮತ್ತೊಂದು ಬಯೋಪಿಕ್ ಗೆ ಬಣ್ಣ ಹಚ್ಚಲು ಅಜಯ್ ದೇವಗನ್ ರೆಡಿಯಾಗಿದ್ದಾರೆ. ಭಾರತದ ಖ್ಯಾತ ಕ್ರಿಕೆಟಿಗ ಪಾಲ್ವಂಕರ್ ಬಾಲೂ ಅವರ ಜೀವನ ಚರಿತ್ರೆಯನ್ನು ಸಿನಿಮಾ ಮಾಡಲು ತಯಾರಿ ನಡೆಯುತ್ತಿದೆ. ನಿರ್ಮಾಪಕಿ ಪ್ರೀತಿ ಸಿನ್ಹಾ ಕ್ರಿಕೆಟಿಗ ಪಾಲ್ವಂಕರ್ ಬಾಲೂ ಬಯೋಪಿಕ್ ಅನ್ನು ಸಿನಿಮಾ ಮಾಡೋದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ. ಪಾಲ್ವಂಕರ್ ಬಾಲೂ ಪಾತ್ರವನ್ನು ಖ್ಯಾತ ನಟ ಅಜಯ್ ದೇವಗನ್ ನಟಿಸುತ್ತಾರೆ ಎಂದು ತಿಳಿಸಿದ್ದಾರೆ. ಈ ಚಿತ್ರವನ್ನು ತಿಗ್‌ಮಂಶು ದುಲಿಯಾ ನಿರ್ದೇಶನ ಮಾಡಲಿದ್ದಾರೆ. ರಾಮಚಂದ್ರ ಗುಹಾ ಬರೆದ ‘ಎ ಕಾರ್ನರ್ ಆಫ್ ಎ ಫಾರೆನ್ ಫೀಲ್ಡ್’ ಪುಸ್ತಕ ಆಧರಿಸಿ ಈ ಚಿತ್ರವನ್ನು ಮಾಡಲಾಗುತ್ತಿದೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಲಿದೆ.

Read More

ಕನ್ನಡದ  ಹುಡುಗಿ ನಟಿ ಶ್ರೀಲೀಲಾ ಟಾಲಿವುಡ್ ನಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಸಾಲು ಸಾಲು ಸಿನಿಮಾಗಳು ಮಕಾಡೆ ಮಲಗಿದ ಬಳಿಕ ನಟಿ ಕೊಂಚ ಮಟ್ಟಿಗೆ ಸೈಲೆಂಟ್ ಆಗಿದ್ದರು, ಇದೀಗ ಮತ್ತೆ ಸ್ಟಾರ್ ನಟನಿಗೆ ಜೋಡಿಯಾಗುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ‘ಪೆಳ್ಳಿ ಸಂದಡಿ’ ಚಿತ್ರದಿಂದ ತೆಲುಗಿನಲ್ಲಿ ಸಿನಿಮಾ ಕೆರಿಯರ್ ಶುರು ಮಾಡಿದ ಶ್ರೀಲೀಲಾ. ‘ಧಮಾಕ’ (Dhamaka) ಚಿತ್ರದ ಮೂಲಕ ಸಕ್ಸಸ್ ಕಂಡರು. ರವಿತೇಜ (Raviteja) ಮತ್ತು ಕಿಸ್ ನಟಿಯ ಜೋಡಿ ಅಭಿಮಾನಿಗಳಿಗೆ ಹಿಡಿಸಿತ್ತು. ಈಗ ಇದೇ ಜೋಡಿ 2ನೇ ಬಾರಿ ಒಂದಾಗುತ್ತಿದ್ದಾರೆ. ಹೊಸ ಸಿನಿಮಾಗಾಗಿ ರವಿತೇಜ ಜೊತೆ ನಟಿ ಕೈಜೋಡಿಸಿದ್ದಾರೆ. ಗೋಪಿಚಂದ್ ಮಲಿನೇನಿ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಶ್ರೀಲೀಲಾ ಕೂಡ ಕಥೆ ಕೇಳಿ ಓಕೆ ಎಂದಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಶೂಟಿಂಗ್ ಶುರುವಾಗಲಿದೆ. ಗುಂಟೂರು ಖಾರಂ ಸಿನಿಮಾ ಬಳಿಕ ನಟಿ ಓದಿನತ್ತ ಗಮನ ನೀಡಿದ್ದರು. ಈಗ ಕೆಲ ಸಮಯದ ಬಳಿಕ ಮತ್ತೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಈಗಲಾದರೂ ಅದೃಷ್ಟ ಶ್ರೀಲೀಲಾ…

Read More