Author: Author AIN

ಬೇಹುಗಾರಿಕೆ ಆರೋಪದ ಮೇಲೆ 2020ರಲ್ಲಿ ಗಿಲ್ಗಿಟ್ – ಬಾಲ್ಟಿಸ್ತಾನ್ ನಿಂದ ಬಂಧಿಸಲ್ಪಟ್ಟ ಇಬ್ಬರು ಭಾರತೀಯ ಪ್ರಜೆಗಳಿಗೆ ಪಾಕಿಸ್ತಾನವು ಭಾರತದ ರಾಜತಾಂತ್ರಿಕರೊಂದಿಗೆ ಭೇಟಿ ಮಾಡುವ ಅವಕಾಶ ನೀಡಿದೆ. ಭಾರತೀಯ ರಾಜತಾಂತ್ರಿಕರು ಮತ್ತು ಭಾರತೀಯ ಪ್ರಜೆಗಳ ನಡುವೆ ಸೋಮವಾರ ಮೊದಲ ಬಾರಿಗೆ ಭೇಟಿ ನಡೆಯಿತು ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ವಿದೇಶಾಂಗ ಕಚೇರಿ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲವಾದರೂ, ಮೂಲಗಳು ಈ ಬೆಳವಣಿಗೆಯನ್ನು ದೃಢಪಡಿಸಿವೆ. ಇಬ್ಬರು ಭಾರತೀಯ ಪ್ರಜೆಗಳನ್ನು ಫಿರೋಜ್ ಅಹ್ಮದ್ ಲೋನ್ ಮತ್ತು ನೂರ್ ಮುಹಮ್ಮದ್ ವಾನಿ ಎಂದು ಗುರುತಿಸಲಾಗಿದ್ದು, ಇವರು ಕಾಶ್ಮೀರದ ಗುರೆಜ್ ಪ್ರದೇಶಕ್ಕೆ ಸೇರಿದವರು ಎಂದು ಮೂಲಗಳು ಹೇಳಿವೆ. ಇಬ್ಬರೂ ಭಾರತೀಯರನ್ನು ಇತ್ತೀಚೆಗೆ ಗಿಲ್ಗಿಟ್ – ಬಾಲ್ಟಿಸ್ತಾನ್ ಜೈಲಿನಿಂದ ರಾವಲ್ಪಿಂಡಿಯ ಅಡಿಯಾಲಾ ಜೈಲಿಗೆ ಸ್ಥಳಾಂತರಿಸಲಾಗಿದೆ. ಇಸ್ಲಾಮಾಬಾದ್​ನಲ್ಲಿರುವ ಭಾರತೀಯ ಹೈಕಮಿಷನ್ (ಐಎಚ್​ಸಿ) ನ ಮೂವರು ಸದಸ್ಯರ ನಿಯೋಗವು ಅಡಿಯಾಲಾ ಜೈಲಿನಲ್ಲಿ ಇಬ್ಬರು ಕೈದಿಗಳನ್ನು ಭೇಟಿ ಮಾಡಿದೆ ಮತ್ತು ಈ ಸಂದರ್ಭದಲ್ಲಿ ಆಂತರಿಕ ಸಚಿವಾಲಯದ ಅಧಿಕಾರಿಗಳು ಸಹ ಉಪಸ್ಥಿತರಿದ್ದರು ಎಂದು ಹೇಳಿವೆ.…

Read More

ಇಸ್ರೇಲ್​ ಗಡಿಯಲ್ಲಿನ ವಸತಿ ಪ್ರದೇಶದ ಮೇಲೆ ಹಮಾಸ್ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಬಗ್ಗೆ ಹಮಾಸ್ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ. ಸ್ವಯಂಚಾಲಿತ ಬಂದೂಕುಗಳನ್ನು ಹೊಂದಿರುವ ಮೂವರು ವ್ಯಕ್ತಿಗಳು ವೆಸ್ಟ್​ ಬ್ಯಾಂಕ್ ಕಡೆಯಿಂದ ಇಸ್ರೇಲಿ ವಸತಿ ಪ್ರದೇಶದ ಮೇಲೆ ಹಲವು ಸುತ್ತು ಗುಂಡು ಹಾರಿಸುತ್ತಿರುವುದು ವಿಡಿಯೋದಲ್ಲಿ ಕಾಣಿಸಿದೆ. ಹಮಾಸ್​ನಿಂದ ದಾಳಿಗೊಳಗಾದ ಇಸ್ರೇಲ್ ಮತ್ತು ವೆಸ್ಟ್​ ಬ್ಯಾಂಕ್​ ಪ್ರತ್ಯೇಕಿಸುವ ತಡೆಗೋಡೆಯ ಬಳಿ ಇರುವ ಬ್ಯಾಟ್ ಹೆಫರ್ ಎಂಬ ಹಳ್ಳಿಯಲ್ಲಿ ಯಾವುದೇ ಸಾವು – ನೋವುಗಳು ಸಂಭವಿಸಿಲ್ಲ ಎಂದು ಇಸ್ರೇಲ್​ನ ಆರ್ಮಿ ರೇಡಿಯೋ ವರದಿ ಮಾಡಿದೆ. ಹಮಾಸ್ ಹೆಡ್ ಬ್ಯಾಂಡ್ ಧರಿಸಿರುವ ದಾಳಿಕೋರರು ವೆಸ್ಟ್​ ಬ್ಯಾಂಕ್​ನ ಪ್ಯಾಲೆಸ್ಟೈನ್ ನಗರ ತುಲ್ಕರ್ಮ್​​​​ನ ನಿರಾಶ್ರಿತರ ಶಿಬಿರಗಳ ನಿವಾಸಿಗಳು ಎನ್ನಲಾಗಿದೆ. ಇಸ್ರೇಲಿ ಸೇನೆಯು ತುಲ್ಕರ್ಮ್ ಮತ್ತು ವೆಸ್ಟ್​ ಬ್ಯಾಂಕ್​ನ ಇತರ ಪ್ಯಾಲೆಸ್ಟೈನ್ ಪಟ್ಟಣಗಳು ಮತ್ತು ನಗರಗಳ ಮೇಲೆ ಪದೇ ಪದೆ ದಾಳಿ ನಡೆಸುತ್ತಿರುವ ಮಧ್ಯೆ ಹಮಾಸ್ ಉಗ್ರರು ಮತ್ತೊಮ್ಮೆ ಇಸ್ರೇಲ್ ಪ್ರದೇಶದ ಮೇಲೆ ದಾಳಿ ಮಾಡಿದ್ದಾರೆ. ದಕ್ಷಿಣ…

Read More

ಅಮಿತಾಭ್ ಬಚ್ಚನ ಕುಟುಂಬದ ಸುದ್ದಿ ಆಗಾಗ ಐಶ್ವರ್ಯಾ ಕಾರಣದಿಂದ ಸದ್ದು ಮಾಡುತ್ತಲೆ ಇರುತ್ತದೆ. ಇತ್ತೀಚೆಗೆ ಐಶ್ವರ್ಯಾ ಹಾಗೂ ನವ್ಯಾ ಮಧ್ಯೆ ಎಲ್ಲವು ಸರಿ ಎನ್ನಲಾಗಿತ್ತು. ಇದೀಗ ಅಮಿತಾಭ್ ಬಚ್ಚನ್ ಹಾಗೂ ಅವರ ಸೊಸೆ ಐಶ್ವರ್ಯಾ ರೈ ಬಚ್ಚನ್ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಸುದ್ದಿ ಕೇಳಿ ಬಂದಿದೆ. ಈ ಕಾರಣಕ್ಕೆ ಅಭಿಷೇಕ್ ಹಾಗೂ ಐಶ್ವರ್ಯಾ ವಿಚ್ಛೇದನ ಪಡೆಯುತ್ತಾರೆ ಎನ್ನಲಾಗಿತ್ತು. ಆದರೆ, ಕುಟುಂಬದವರು ಹಲವು ಬಾರಿ ಒಟ್ಟಾಗಿ ಕಾಣಿಸಿಕೊಂಡ ಬಳಿಕ ಈ ಸುದ್ದಿ ತಣ್ಣಗಾಯಿತು. ಈಗ ಮತ್ತೆ ಇದೇ ಚರ್ಚೆ ಶುರುವಾಗಿದೆ. ಇದಕ್ಕೆ ಕಾರಣವಾಗಿತ್ತು ಅಮಿತಾಭ್ ಅವರ ಪೋಸ್ಟ್. 2005ರಲ್ಲಿ ರಿಲೀಸ್ ಆದ ಬಂಟಿ ಔಟ್ ಬಬ್ಲಿ ಸಿನಿಮಾದಲ್ಲಿ ‘ಕಜರಾ ರೇ..’ ಸಾಂಗ್ ಸೂಪರ್ ಹಿಟ್ ಆಗಿತ್ತು. ಇದರಲ್ಲಿ ಅಭಿಷೇಕ್ ಬಚ್ಚನ್, ಅಮಿತಾಭ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಇದ್ದರು. ಈ ಹಾಡಿನಲ್ಲಿ ಸಾಕಷ್ಟು ಎನರ್ಜಿಯೊಂದಿಗೆ ಮೂವರು ಡ್ಯಾನ್ಸ್ ಮಾಡಿದ್ದರು. ಈ ಚಿತ್ರ ಬಿಡುಗಡೆ ಆಗಿ 19 ವರ್ಷ ಕಳೆದ ಹಿನ್ನೆಲೆಯಲ್ಲಿ ಫ್ಯಾನ್ಸ್…

Read More

ಪ್ರೀತಿಸಿ ಮದುವೆಯಾಗಿದ್ದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಡಿವೋರ್ಸ್ ಗೆ ಮುಂದಾಗಿದ್ದಾರೆ. ಹಾರ್ದಿಕ್ ನ ಪ್ರೀತಿಸೋ ಮೊದಲು ನತಾಶಾ ಕಿರುತೆರೆ ನಟ ಅಲಿ ಗೂನಿ ಜೊತೆ ಡೇಟ್​​ ಮಾಡುತ್ತಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇವರ ನಡುವಿನ ಬ್ರೇಕಪ್ ಬಳಿಕ ನತಾಶಾಗೆ ಹಾರ್ದಿಕ್ ಸಿಕ್ಕರು. ಮೊದಲು ಪ್ರೀತಿಸುತ್ತಿದ್ದ ಇವರು ನಂತರ ಎಂಗೇಜ್​ಮೆಂಟ್ ಮಾಡಿಕೊಂಡರು. ಮಗು ಪಡೆದ ಬಳಿಕ ಮದುವೆ ಆದರು. ಈಗ ಇವರು ಬೇರೆ ಆಗೋ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಹಾರ್ದಿಕ್ ಜೊತೆ ಡೇಟ್ ಮಾಡುತ್ತಿರುವಾಗಲೇ ನತಾಶಾ ಅವರು ಮಾಜಿ ಬಾಯ್​ಫ್ರೆಂಡ್ ಅಲಿ ಅವರನ್ನು ಭೇಟಿ ಮಾಡುತ್ತಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನತಾಶಾ ಹಾಗೂ ಅಲಿ ಇಬ್ಬರೂ ‘ನಚ್ ಬಲಿಯೇ ಸೀಸನ್ 9’ ರಿಯಾಲಿಟಿ ಶೋಗೆ ಒಟ್ಟಾಗಿ ಬಂದಿದ್ದರು. ಈ ರಿಯಾಲಿಟಿ ಶೋ ನಡೆದಿದ್ದು 2018ರಲ್ಲಿ. ಈ ವಿಡಿಯೋದಲ್ಲಿ ಜಡ್ಜ್​ ಅಹ್ಮದ್ ಖಾನ್ ಅವರು ಅಲಿ ಹಾಗೂ ನತಾಶಾಗೆ ಪ್ರಶ್ನೆ ಮಾಡಿದ್ದಾರೆ. ‘ನೀವು ರಿಲೇಶನ್​ಶಿಪ್​ನಲ್ಲಿದ್ದು…

Read More

ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಬ್ಯಾಕ್ ಟು ಬ್ಯಾಕ್ ತಮ್ಮ ನಯಾ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿದ್ದಾರೆ. ಸದ್ಯ ನಟಿ ಹಂಚಿಕೊಂಡಿರುವ ಹೊಸ ಫೋಟೋಗಳಲ್ಲಿ ನಾಚಿ ನಿರಾಗಿದ್ದಾರೆ. ನಟಿಯ ಫೋಟೋಗಳು ಸಾಮಾಜಿಕ ಜಾಲಾ ತಾಣಾದಲ್ಲಿ ವೈರಲ್ ಆಗಿದ್ದು ರಾಗಿಣಿ ಸೌಂದರ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಡಾನ್ಸರ್ ಕಿಶನ್ ಬಿಳಗಲಿ ಜೊತೆ ಮಳೆಯಲ್ಲಿ ಮೈ ಚಳಿ ಬಿಟ್ಟು ಸ್ಟೆಪ್ ಹಾಕಿದ್ದ ರಾಗಿಣಿ ದ್ವಿವೇದಿ ದೀಗ ಹೊಸ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ರೆಡ್ ಹಾರ್ಟ್ ಎಮೋಜಿ ಹಾಕಿರುವ ರಾಗಿಣಿ ಕೆಂಪಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ. ಡಾನ್ಸರ್ ಕಿಶನ್‌ ಬಿಳಗಲಿ ಜೊತೆ ಕೆಂಪು ಬಣ್ಣದ ತುಂಡುಡುಗೆ ತೊಟ್ಟು ಮಳೆಯಲ್ಲಿ ರಾಗಿಣಿ ಹಾಕಿದ ಒಂದೊಂದು ಹೆಜ್ಜೆಯೂ ಪಡ್ಡೆ ಹುಡುಗರ ಹೃದಯದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿತ್ತು. ಕಿಶನ್ ಬಿಳಗಲಿಗೆ ನೀನೇ ಅದೃಷ್ಟವಂತಪ್ಪ ಎಂದು ಕಾಮೆಂಟ್ ಮಾಡಿದ್ದರು. ಕೆಲ ದಿನಗಳ ಹಿಂದೆ…

Read More

ಕಳೆದ ವಾರ ಸಿಂಗಾಪುರ ಏರ್‌ಲೈನ್ಸ್ ವಿಮಾನವು ಕೇವಲ 4.6 ಸೆಕೆಂಡ್‌ಗಳಲ್ಲಿ 178 ಅಡಿ ಕುಸಿತ ಕಂಡಿದ್ದಕ್ಕೆ ಗುರುತ್ವಾಕರ್ಷಣಾ ಶಕ್ತಿಯಲ್ಲಿನ ತ್ವರಿತ ಬದಲಾವಣೆಯೇ ಇದಕ್ಕೆ ಕಾರಣ ಎಂದು ಪ್ರಾಥಮಿಕ ತನಿಖಾ ವರದಿ ತಿಳಿಸಿದೆ. ಸಾರಿಗೆ ಸುರಕ್ಷತಾ ತನಿಖಾ ಸಂಸ್ಥೆಯು (ಟಿಎಸ್‌ಐಬಿ) ಈ ಕುರಿತ ವರದಿಯನ್ನು ಬಿಡುಗಡೆ ಮಾಡಿದೆ. ಮೇ 21ರಂದು, ಲಂಡನ್‌ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ಎಸ್‌ಕ್ಯೂ321 ವಿಮಾನವು ಮ್ಯಾನ್ಮಾರ್‌ನ ಐರಾವಡ್ಡಿ ಜಲಾನಯನ ಪ್ರದೇಶದಲ್ಲಿ ಟರ್ಬ್ಯುಲೆನ್ಸ್‌ನಿಂದಾಗಿ (ಗಾಳಿಯ ವೇಗದಲ್ಲಿ ಆಗುವ ಬದಲಾವಣೆಯಿಂದ ಉಂಟಾಗುವ ಕ್ಷೋಭೆ) ಹಠಾತ್ ಕುಸಿತ ಕಂಡಿತ್ತು. ಈ ವಿಮಾನದಲ್ಲಿ 211 ಪ್ರಯಾಣಿಕರು ಮತ್ತು 18 ಸಿಬ್ಬಂದಿ ಇದ್ದರು. ಘಟನೆಯ ನಂತರ ವಿಮಾನವನ್ನು ಬ್ಯಾಂಕಾಕ್‌ನ ಸುವರ್ಣಭೂಮಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಎಸ್‌ಕ್ಯೂ321 ವಿಮಾನದಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಯ ವೈದ್ಯಕೀಯ ವೆಚ್ಚ ಮತ್ತು ಅವರಿಗೆ ಅಗತ್ಯವಿರುವ ಯಾವುದೇ ಹೆಚ್ಚುವರಿ ಸಹಾಯವನ್ನು ಮಾಡುವುದಾಗಿ ಏರ್‌ಲೈನ್ ಸಂಸ್ಥೆಯು ತಿಳಿಸಿದೆ. ಈ ವಿಮಾನದಲ್ಲಿ ಮೂವರು ಭಾರತೀಯ ಪ್ರಜೆಗಳು ಪ್ರಯಾಣಿಸುತ್ತಿದ್ದರು.

Read More

ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಅವರ ಸೇವೆ, ಸಾಧನೆ ಹಾಗೂ ಅವರ ಮೇಲಿದ್ದ ಜನರ ಪ್ರೀತಿಯನ್ನು ಚಿರಸ್ಥಾಯಿಯಾಗಿ ಉಳಿಸುವ ನಿಟ್ಟಿನಲ್ಲಿ ಡಾ. ಅಂಬರೀಶ್ ಫೌಂಡೇಷನ್ ಆರಂಭಿಸಲಾಗಿದ್ದು, ವಿದ್ಯಾರ್ಥಿಗಳನ್ನು ದತ್ತು ಪಡೆದು ಶಿಕ್ಷಣ ಕೊಡಿಸಲಾಗುವುದು. ಜೊತೆಗೆ ಇತರೆ ಸಾಮಾಜಿಕ ಸೇವೆಗಳನ್ನೂ ಮಾಡಲಾಗುವುದು ಎಂದು ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಯಾವತ್ತೂ ಒಬ್ಬ ವ್ಯಕ್ತಿಗೆ ಅಧಿಕಾರ ಶಾಶ್ವತ ಅಲ್ಲ, ಜನರ ಪ್ರೀತಿ ಶಾಶ್ವತ. ಎಲ್ಲ ಮನೆಯಲ್ಲಿ ಮಕ್ಕಳು ಜನಿಸೋದು ಸಾಮಾನ್ಯ. ಆದರೆ, ಉತ್ತಮ ವ್ಯಕ್ತಿತ್ವ ಇರುವ ಮಕ್ಕಳು ಜನಿಸಿವುದು ಅಪರೂಪ. ಅಂಬರೀಶ್ ಅದನ್ನ ಪಡೆದುಕೊಂಡು ಬಂದವರು. ನನಗಿಂತ ಮಂಡ್ಯ ಜಿಲ್ಲೆಯ ಜನರಿಗೆ ಅವರ ಬಗ್ಗೆ ಗೊತ್ತಿದೆ. ಡಾ.ಅಂಬರೀಶ್ ಫೌಂಡೇಶನ್ ಸ್ಥಾಪನೆ ಮಾಡಿದ್ದೇವೆ. ಅವರ ಸಾಧನೆಗಳನ್ನ ಮುಂದುವರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮಂಡ್ಯ ಜಿಲ್ಲೆಯ ಸಂಸದೆಯಾಗಿರುವುದು ದೊಡ್ಡದಲ್ಲ, ಜಿಲ್ಲೆಯ ಸೊಸೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ. ಈ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ…

Read More

ಪ್ರಿಯಾ ವಾರಿಯರ್ ನಟನೆಯ ಒರು ಅಡಾರ್ ಲವ್ ಸೇರಿದಂತೆ ಇನ್ನೂ ಕೆಲವು ಹಿಟ್ ಸಿನಿಮಾಗಳನ್ನು ನೀಡಿರುವ ಮಲಯಾಳಂ ನಿರ್ದೇಶಕ ಒಮರ್ ಲುಲು ವಿರುದ್ಧ ನಟಿಯೊಬ್ಬರು ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಎರ್ನಾಕುಲಂ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಯುವನಟಿ, ನಿರ್ದೇಶಕ ಒಮರ್ ವಿರುದ್ಧ ದೂರು ನೀಡಿದ್ದು, ಎಫ್​ಐಆರ್ ದಾಖಲಾಗಿದೆ. ಪ್ರಕರಣವನ್ನು ಇದೀಗ ನಿಡುಂಬಸ್ಸೇರಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ನಿರ್ದೇಶಕರ  ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ನನ್ನ ವಿರುದ್ಧ ಹಲವು ಬಾರಿ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಮಾಡಲಾಗಿದೆ ಎಂದು ಯುವನಟಿ ನಿರ್ದೇಶಕ ಒಮರ್ ವಿರುದ್ಧ ಆರೋಪ ಮಾಡಿದ್ದಾರೆ. ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವ ನಿರ್ದೇಶಕ ಒಮರ್ ಲುಲು, ‘ಇದು ಬ್ಲಾಕ್ ಮೇಲ್ ಮಾಡುವ ತಂತ್ರವಷ್ಟೆ. ಆರೋಪ ಮಾಡಿ ನನ್ನ ಘನತೆ ಹಾಳು ಮಾಡುವ ಹಾಗೂ ನನ್ನಿಂದ ಹಣ ವಸೂಲಿ ಮಾಡುವುದು ಆ ನಟಿಯ ಉದ್ದೇಶ. ನನ್ನ ಈ ಹಿಂದಿನ…

Read More

ಸ್ಯಾಂಡಲ್‌ವುಡ್ ನಿರ್ಮಾಪಕರ ನಡುವೆ ಗೋವಾದಲ್ಲಿ ಗಲಾಟೆ ನಡೆದಿದೆ. ಟೂರ್‌ಗೆ ಹೋಗಿದ್ದ ಕೆಲವು ನಿರ್ಮಾಪಕರಲ್ಲಿ ನಡೆದ ಗಲಾಟೆ ಹಲ್ಲೆ ಮಾಡೋ ಹಂತಕ್ಕೆ ತಲುಪಿತ್ತು. ಎಂಜಾಯ್ ಮಾಡೋಕೆ ಗೋವಾಗೆ ಹೋದವ್ರು ಅಲ್ಲಿ ಹೊಡೆದಾಡಿಕೊಂಡಿದ್ದಾರೆ. ಎರಡು ದಿನಗಳ ಕಾಲ ಗೋವಾಗೆ ತೆರಳಿದ್ದ ನಿರ್ಮಾಪಕರು ಅಲ್ಲಿ ಪಾರ್ಟಿ ಮಾಡಿ, ಆ ವೇಳೆ ರಂಪಾಟ ಮಾಡಿಕೊಂಡಿದ್ದಾರೆ. ನಿರ್ಮಾಪಕರಲ್ಲಿ ಒಬ್ಬರಾದ ಎ ಗಣೇಶ್ ತಲೆಗೆ ಪೆಟ್ಟು ಬಿದ್ದಿದೆ. ಹೀಗಾಗಿ ‘ಬಸ್‌’ನಲ್ಲಿ ತೆರಳಿದ್ದ ಗಣೇಶ್ ಹಾಗು ಮಂಜುನಾಥ್ ಗಲಾಟೆ ನಂತ್ರ ‘ಫ್ಲೈಟ್’ನಲ್ಲಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ನಿರ್ಮಾಪಕ ಎ ಗಣೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇರೆ ಕಡೆ ಗಲಾಟೆ ನಡೆದರೆ ಅದನ್ನು ಫಿಲಂ ಚೇಂಬರ್‌ ಗಮನಕ್ಕೆ ತಂದು ಬಗೆಹರಿಸಲಾಗುತ್ತಿತ್ತು.  ಸಿನಿ 90 ಕಾರ್ಯಕ್ರಮದ ಕುರಿತು ಚರ್ಚೆ ಮಾಡೋಕೆ ಪ್ರೋಗ್ರಾಂ ಹೇಗೆ ಮಾಡ್ಬೇಕು ಅನ್ನೋ ಬಗ್ಗೆ ಚರ್ಚೆ ಮಾಡೋಕೆ ಗೋವಾಗೆ ಹೋಗಿದ್ವಿ. ಸತೀಶ್ ಆರ್ಯ ಹಾಗೂ ರಥಾವರ ಮಂಜು ನಡುವೆ ಗಲಾಟೆ ಶುರುವಾಯ್ತು. ಅವ್ರನ್ನ ಬಿಡಿಸೋಕೆ ಅಂತ ನಾನು ಹೋಗಿದ್ದು ಸತೀಶ್…

Read More

ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಚರ್ಚೆ ಮಾಡುವುದಕ್ಕೆಂದು ಗೋವಾಗೆ ತೆರಳಿದ್ದು ನಿರ್ಮಾಪಕರು ಗಲಾಟೆ ಮಾಡಿಕೊಂಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಹಾಗೂ ನಿರ್ದೇಶಕರ ಸಂಘದ ಪದಾಧಿಕಾರಿಗಳು ಗೋವಾ ಪ್ರವಾಸ ಬೆಳೆಸಿದ್ದು ಈ ವೇಳೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಗೋವಾದ ಹಿಬೀಸ್ ರೆಸಾರ್ಟ್ ನಲ್ಲಿ ಚರ್ಚೆ ನಡೆಯುವಾಗ ಮಾತಿಗೆ ಮಾತು ಬೆಳೆದು ಸಣ್ಣದಾಗಿ ಗಲಾಟೆ ಶುರುವಾಗಿದೆ. ಬಳಿಕ ಗಲಾಟೆ ಕೈ ಕೈ ಮಿಲಾಯಿಸುವ ಹಂತ ತಲುಪಿದೆ. ನಿರ್ಮಾಪಕರಾದ ರಥಾವರ ಮಂಜುನಾಥ್, ಎ.ಗಣೇಶ್ ಹಾಗೂ ಸತೀಶ್ ಆರ್ಯ  ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಲ್ಲಿ ಮುಕ್ತಾವಾಗಿದೆ. ಗಲಾಟೆಯ ನಂತರ ಸತೀಶ್ ಆರ್ಯ, ಎ.ಗಣೇಶ್ ಹಾಗೂ ರಥಾವರ ಮಂಜುನಾಥ್ ಅವರನ್ನು ಬೆಂಗಳೂರಿಗೆ ವಾಪಸ್ಸು ಕಳುಹಿಸಲಾಗಿದೆಯಂತೆ. ಗೋವಾ ಟ್ರಿಪ್‌ಗೆ ಹೋದ ನಿಯೋಗದ ಸದಸ್ಯರು, ಪದಾಧಿಕಾರಿಗಳು ಬಳಿಕ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಎನ್.ಎಂ.ಸುರೇಶ್, ಉಮೇಶ್  ಬಣಕಾರ್, ಆಸ್ಕರ್ ಕೃಷ್ಣ, ಭಾಮಾ ಹರೀಶ್, ಭಾಮಾ ಗಿರೀಶ್, ಟೇಸಿ ವೆಂಕಟೇಶ್, ಸತೀಶ್ ಆರ್ಯ, ರಥಾವರ ಮಂಜುನಾಥ್, ಎ.ಗಣೇಶ್ ಸೇರಿ ಮುಂತಾದವರು ಗೋವಾ ಪ್ರವಾಸಕ್ಕೆ ತೆರಳಿದ್ದರು.

Read More