Author: Author AIN

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚೆಗೆ ತಮ್ಮ ಗೆಳೆಯನ ರೆಸ್ಟೋರೆಂಟ್​ನ ಉದ್ಘಾಟನೆಗೆ ಮಂಗಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸುದೀಪ್ ‘ಯಕ್ಷ ಧ್ರುವ ಪಟ್ಲ ಫೌಂಡೇಶನ್​’ ಆಯೋಜಿಸಿದ್ದ ‘ಯಕ್ಷ ಧ್ರುವ ಪಟ್ಲ ಸಂಭ್ರಮ 2024’ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಸುದೀಪ್ ಮಂಗಳೂರಿನ ಬಗ್ಗೆ ಮಾತನಾಡಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ವೇದಿಕೆ ಮೇಲಿದ್ದವರು ನಮ್ಮ ತುಳುನಾಡಿಗೆ ನಮ್ಮ ತುಳುನಾಡಿಗೆ ಎಂದು ನಮ್ಮನ್ನು ಹೊರಗಿನವರನ್ನಾಗಿ ಮಾಡುತ್ತಿದ್ದಾರೆ. ತುಳುನಾಡು ಕರ್ನಾಕಟದಲ್ಲೇ ಇದೆ. ಕರ್ನಾಟಕ ನಮ್ಮ ಹೃದಯದಲ್ಲಿದೆ. ನಾವು ಅರ್ಧ ಈಕಡೆಯವರು ಎಂದು ನಿರೂಪಕರು ಹೇಳಿದರು. ‘ಪ್ರತಿ ಬಾರಿ ಇಲ್ಲಿಗೆ ಕರೆದಾಗ ಬಹಳ ಖುಷಿ ಆಗುತ್ತದೆ. ಈ ಊರಿನ ಬಗ್ಗೆ ಗೊತ್ತಿರೋದು ಎಂದರೆ ಅವರು ಸ್ವಾಭಿಮಾನಿಗಳು. ಬಹಳ ಸುಲಭವಾಗಿ ಯಾರನ್ನೂ ಇಷ್ಟಪಡಲ್ಲ. ಅಂಥಹುದರಲ್ಲಿ ಮನಸ್ಸಲ್ಲಿ ನನಗೆ ಸಣ್ಣ ಜಾಗ ಕೊಟ್ಟಿದ್ದೀರಿ. ಅದು ಪೀಠಕ್ಕಿಂತ ದೊಡ್ಡದು. ನಿಮ್ಮ ಗೌರವ ಸ್ವೀಕರಿಸಿಲ್ಲ ಎಂದುಕೊಳ್ಳಬೇಡಿ. ಅದನ್ನು ಸ್ವೀಕರಿಸಿದ್ರೆ ನಾನು ಅದಕ್ಕಾಗಿಯೇ ಬಂದೆ ಎಂದುಕೊಳ್ಳುತ್ತಾರೆ. ನಾನು ಬಂದಿದ್ದು…

Read More

ನಾಗಿಣಿ ಧಾರವಾಹಿ ಮೂಲಕ ಖ್ಯಾತಿ ಘಳಿಸಿದ ನಟಿ ನಮೃತಾ ಗೌಡ ಬಿಗ್ ಬಾಸ್ ಮನೆಗೆ ಹೋಗಿ ಬಂದ ಬಳಿಕ  ಮತ್ತಷ್ಟು ಖ್ಯಾತಿ ಪಡೆದುಕೊಂಡಿದ್ದಾರೆ. ನಮ್ರತಾ ಗೌಡ ಅವರ ಸ್ವಭಾವ ತುಂಬಾನೇ ಡಿಫರೆಂಟ್. ಅವರು ಎಲ್ಲರ ಜೊತೆಗೂ ಅಷ್ಟಾಗಿ ಬೆರೆಯುವುದಿಲ್ಲ. ಬಿಗ್ ಬಾಸ್ ಮನೆಯಲ್ಲಿದ್ದಷ್ಟು ದಿನವು ಮೈಕಲ್ ಹಾಗೂ ವಿನಯ್ ಜೊತೆ ಮಾತ್ರ ಹೆಚ್ಚು ಅನ್ಯೋನ್ಯವಾಗಿದ್ದರು. ಅವರನ್ನು ಹೆಚ್ಚು ನಂಬುತ್ತಿದ್ದರು. ಉಳಿದವರ ಜೊತೆ ಅವರು ಅಂತರ ಕಾಯ್ದುಕೊಂಡಿದ್ದರು. ನಿಜ ಜೀವನದಲ್ಲೂ ಈಕೆ ಇರೋದೇ ಹೀಗೆ. ಅದಕ್ಕೆ ಇಂಡಸ್ಟ್ರಿಯಲ್ಲಿ ಆದ ಅನುಭವಗಳೇ ಕಾರಣವಂತೆ. ಬಾಲ ನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಮ್ರತಾ ಗೌಡ ನಂತರ ನಾಯಕಿ ಆದರು. ‘ನಾಗಿಣಿ 2’ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯತೆ ಪಡೆದರು. ಬಿಗ್ ಬಾಸ್ ಅವರ ಖ್ಯಾತಿಯನ್ನು ಹೆಚ್ಚಿಸಿದೆ. ಈಗ ನಮ್ರತಾ ಅವರು ಬಣ್ಣದ ಲೋಕದ ಪರಿಸ್ಥಿತಿಗಳ ಬಗ್ಗೆ ಮಾತನಾಡಿದ್ದಾರೆ. ಈ ಇಂಡಸ್ಟ್ರಿಯಲ್ಲಿ ಗೆಳೆಯನರನ್ನು ಮಾಡಿಕೊಳ್ಳುವಂತಿಲ್ಲ ಎಂದು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ನಮ್ರತಾ, ‘ನನ್ನ ಫ್ರೆಂಡ್ಸ್​ ಸರ್ಕಲ್ ತುಂಬಾನೇ ಚಿಕ್ಕದು. ಹಾಯ್ ಬಾಯ್…

Read More

ನಟಿ ದೀಪಿಕಾ ಪಡುಕೋಣೆ ಸದ್ಯ ಅಮ್ಮನಾಗುವ ಖುಷಿಯಲ್ಲಿದ್ದಾರೆ. ಸದ್ಯದಲ್ಲೇ ದೀಪಿಕಾ ಮನೆಗೆ ಹೊಸ ಅತಿಥಿಯ ಆಗಮನವಾಗುತ್ತಿದ್ದು ಆ ಸಂತಸದ ಕ್ಷಣಕ್ಕಾಗಿ ಬ್ಯೂಟಿ ಕಾಯುತ್ತಿದ್ದಾರೆ. ತಾಯಿಯಾಗುತ್ತಿರುವ ದೀಪಿಕಾರನ್ನು ನೋಡಿದ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ನಟಿ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಬ್ಯೂಟಿ ಬ್ರ್ಯಾಂಡ್ 82°E ಗಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಹಳದಿ ಬಣ್ಣದ ಗೌನ್ ಧರಿಸಿದ್ರು. ಈ ವೇಳೆ ನಟ ಧರಿಸಿದ್ದ ಡ್ರೆಸ್ ನ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಹಳದಿ ಡ್ರೆಸ್ ನಲ್ಲಿ ದೀಪಿಕಾ ತುಂಬಾ ಮುದ್ದಾಗಿ ಕಾಣ್ತಿದ್ದಾರೆ ಎಂದು ಫ್ಯಾನ್ಸ್ ಕೂಡ ಕೊಂಡಾಡಿದ್ರು. ಇದೀಗ ನಟಿ ತಾನು ಧರಿಸಿದ್ದ ಗೌನ್ ಅನ್ನು ನಟಿ ಮಾರಾಟಕ್ಕಿಟ್ಟಿದ್ದು, ಸೇಲ್ ಗಿಟ್ಟ ಕೆಲವೇ ಕ್ಷಣಗಳಲ್ಲಿ ಗೌನ್ ಮಾರಾಟವಾಗಿದೆ. ದೀಪಿಕಾ ತನ್ನ ಇನ್ಸ್ಟಾಗ್ರಾಮ್ನಲ್ಲಿ ಗೌನ್ ಅನ್ನು ಮಾರಾಟ ಮಾಡುತ್ತಿರುವುದಾಗಿ ಅನೌನ್ಸ್ ಮಾಡಿದ್ರು. ಕೆಲವೇ ನಿಮಿಷಗಳಲ್ಲಿ ದೀಪಿಕಾ ಗೌನ್ ಮಾರಾಟವಾಗಿದೆ ಎಂದು ಮತ್ತೆ ಘೋಷಿಸಿದ್ರು. ನಟಿ ಧರಿಸಿದ್ದ ಸಿಂಪಲ್ ಗೌನ್ ಅನ್ನು ₹34,000ಕ್ಕೆ ಸೇಲ್ ಆಗಿದೆ. ಗೌನ್…

Read More

ಮಾರ್ಚ್ 13ರಂದು ಕೋಲ್ಕತ್ತಾದಲ್ಲಿ ಹತ್ಯೆಗೀಡಾಗಿರುವ ಬಾಂಗ್ಲಾದೇಶ ಸಂಸದ ಅನ್ವರುಲ್ ಅಝೀಂ ಅನರ್ ಅವರ ಮೃತದೇಹವು ದೊರೆಯದಿದ್ದರೆ, ಬಾಂಗ್ಲಾದೇಶ ಚುನಾವಣಾ ಆಯೋಗವು ಅವರ ಕ್ಷೇತ್ರಕ್ಕೆ ಮರು ಚುನಾವಣೆ ಘೋಷಿಸಲಾಗದ ಸಂದಿಗ್ಧತೆ ಎದುರಾಗಲಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಝೆನೈದಾ-,4 ಪ್ರಾಂತ್ಯದ ಮೂರು ಬಾರಿ ಸಂಸದರಾದ ಅನ್ವರುಲ್ ಅಝೀಂ ಅನರ್, ವೈದ್ಯಕೀಯ ತಪಾಸಣೆಗೆಂದು ಮೇ 12ರಂದು ಢಾಕಾದಿಂದ ಕೋಲ್ಜತ್ತಾಗೆ ತೆರಳಿದ್ದರು. ಮರು ದಿನ ಅವರು ಅಪಾರ್ಟ್‌ಮೆಂಟ್ ಒಂದರಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆದರೆ, ಹಂತಕರು ಅವರ ದೇಹವನ್ನು ತುಂಡುತುಂಡಾಗಿ ಕತ್ತರಿಸಿ, ನಾಲೆಯೊಂದರ ವಿವಿಧ ಭಾಗಗಳಲ್ಲಿ ಎಸೆದಿರುವುದರಿಂದ ಅವರ ಮೃತ ದೇಹವಿನ್ನೂ ಸಂಪೂರ್ಣವಾಗಿ ಪತ್ತೆಯಾಗಿಲ್ಲ. ಒಂದು ವೇಳೆ ಬಾಂಗ್ಲಾದೇಶ ಚುನಾವಣಾ ಆಯೋಗವೇನಾದರೂ ಅವರ ಕ್ಷೇತ್ರಕ್ಕೆ ಮರು ಚುನಾವಣೆ ಘೋಷಿಸಬೇಕಿದ್ದರೆ, ಅವರು ಮೃತಪಟ್ಟಿದ್ದಾರೆ ಎಂದು ಗೃಹ ಸಚಿವಾಲಯವು ಆಯೋಗಕ್ಕೆ ಮಾಹಿತಿ ನೀಡಬೇಕಾಗುತ್ತದೆ. ಅಲ್ಲದೆ, ಯಾವುದೇ ಕ್ಷೇತ್ರ ತೆರವಾದರೆ, ಅಂತಹ ಕ್ಷೇತ್ರಕ್ಕೆ 90 ದಿನಗಳೊಳಗಾಗಿ ಚುನಾವಣೆ ನಡೆಸಬೇಕಾಗುತ್ತದೆ. ಆದರೆ, ಸಂಸದ ಅನ್ವರುಲ್ ಅಝೀಂ ಅನರ್ ಅವರ…

Read More

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತೆ ಮತ್ತೆ ಡೀಪ್‍ ಫೇಕ್‍ಗೆ ಒಳಗಾಗುತ್ತಿದ್ದಾರೆ. ಈಗಾಗಲೇ ಡಿಪ್ ಫೇಕ್‍ ಗೆ ಸಂಬಂಧಿಸಿದಂತೆ ಕೆಲವರನ್ನು ಅರೆಸ್ಟ್ ಮಾಡಿದ್ದರೂ ಬುದ್ದಿ ಕಲಿಯದ ಕಿಡಿಗೇಡಿಗಳು ಮತ್ತೆ ಅದೇ ಕೆಲಸ ಮಾಡಿದ್ದಾರೆ. ಮಾಡೆಲ್ ಕಂ ಕಂಟೆಂಟ್ ಕ್ರಿಯೇಟರ್ ಡೇನಿಯಾಲ ವಿಲ್ಲಾರ್ರಿಯಲ್ ಅವರ ವಿಡಿಯೋಗೆ ರಶ್ಮಿಕಾರ ಮುಖವನ್ನು ಅಂಟಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗಿದೆ. ರಶ್ಮಿಕಾ ಅವರ ಡೀಪ್ ಫೇಕ್ ವಿಡಿಯೋವನ್ನು ಮೂಲತಃ ವೀಡಿಯೊವನ್ನು ಏಪ್ರಿಲ್ 19, 2024 ರಂದು ತನ್ನ Instagram ಪ್ರೊಫೈಲ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಅದೇ ಬಿಕಿನಿಯಲ್ಲಿರುವ ವಿಲ್ಲಾರ್ರಿಯಲ್ ಅವರ ಇತರ ಚಿತ್ರಗಳು ಮತ್ತು ವೀಡಿಯೊಗಳ ಜೊತೆಗೆ ವಿಡಿಯೋದಲ್ಲಿರುವುದು ಮೂಲ ವ್ಯಕ್ತಿಯೇ ಹೊರತು ರಶ್ಮಿಕಾ ಮಂದಣ್ಣ ಅಲ್ಲ ಎನ್ನುವುದು ರಿವೀಲ್ ಆಗಿದೆ. ವಿಡಿಯೋವನ್ನು ಫೇಸ್‌ಬುಕ್ , ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಹಂಚಿಕೊಳ್ಳಲಾಗಿದೆ . ಒಂದು ಪೋಸ್ಟ್ 45,000 ಕ್ಕೂ ಹೆಚ್ಚು ಇಷ್ಟಗಳನ್ನು ಮತ್ತು ಸುಮಾರು 300 ಶೇರ್‌ಗಳನ್ನು ಗಳಿಸಿದೆ. ಡೀಪ್ ಫೇಕ್‍ ಅನ್ನು ಸೀರಿಯಸ್ ಆಗಿ ತೆಗೆದುಕೊಂಡಿದೆ…

Read More

ಅಮೆರಿಕದ ಮಧ್ಯ ಭಾಗದಲ್ಲಿರುವ ಟೆಕ್ಸಾಸ್‌, ಒಕ್ಲಹೋಮಾ ಮತ್ತು ಅರ್ಕಾನ್ಸಸ್‌ನಲ್ಲಿ ತೀವ್ರ ಹವಾಮಾನ ವೈಪರೀತ್ಯ ಉಂಟಾಗಿದೆ. ಪ್ರಬಲವಾದ ಸುಂಟರಗಾಳಿ ಮತ್ತು ಬಿರುಗಾಳಿಯಿಂದಾಗಿ ಕನಿಷ್ಠ 19 ಜನರು ಸಾವಿಗೀಡಾಗಿದ್ದಾರೆ. ಗಾಳಿಯ ರಭಸಕ್ಕೆ ಅನೇಕ ಮನೆಗಳು ಹಾನಿಗೊಳಗಾಗಿದ್ದು, ಬಹುತೇಕ ಕಡೆ ವಿದ್ಯುತ್‌ ಕಡಿತಗೊಂಡಿದೆ. ಟೆಕ್ಸಾಸ್‌ನ ಕೂಕ್‌ ಕೌಂಟಿಯಲ್ಲಿ ಏಳು ಜನ ಮೃತಪಟ್ಟಿದ್ದಾರೆ. ಮೃತರಲ್ಲಿ ಎರಡು ಮತ್ತು ಐದು ವರ್ಷ ವಯಸ್ಸಿನ ಇಬ್ಬರು ಮಕ್ಕಳು ಮತ್ತು ಒಂದೇ ಕುಟುಂಬದ ಮೂವರು ಸೇರಿದ್ದಾರೆ. ನಾಪತ್ತೆಯಾಗಿರುವ ಹಲವರಿಗಾಗಿ ಭಾನುವಾರದಿಂದ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕೂಕ್‌ ಕೌಂಟಿ ಶೆರಿಫ್‌ ರಾಯ್‌ ಸಪ್ಪಿಂಗ್ಟನ್‌ ಕಳವಳ ವ್ಯಕ್ತಪಡಿಸಿದ್ದಾರೆ. ಶನಿವಾರದ ಭೀಕರ ಸುಂಟರಗಾಳಿಯಿಂದಾಗಿ 100 ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡುವುದು ಕಷ್ಟವಾಗಿದೆ. 200ಕ್ಕೂ ಹೆಚ್ಚು ಮನೆಗಳು ಹಾಗೂ ಇತರ ಅನೇಕ ಕಟ್ಟಡಗಳೂ ಹಾನಿಗೊಳಗಾಗಿವೆ ಎಂದು ಟೆಕ್ಸಾಸ್‌ ಗವರ್ನರ್‌ ಗ್ರೆಗ್‌ ಅಬಾಟ್‌ ತಿಳಿಸಿದ್ದಾರೆ. ಡೆಂಟನ್‌ ಕೌಂಟಿಯಲ್ಲಿ ಅನೇಕ ಗಾಯಾಳುಗಳನ್ನು ಹೆಲಿಕಾಪ್ಟರ್‌ ಹಾಗೂ ಆಯಂಬುಲೆನ್ಸ್‌…

Read More

ಸ್ಯಾಂಡಲ್‌ವುಡ್ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಹಾಗೂ ವಿತರಕ ಸ್ವಾಗತ್ ಬಾಬು ನಿಧನರಾಗಿದ್ದಾರೆ. ಮೃತ ಸ್ವಾಗತ ಬಾಬು ಚಂದ್ರಮುಖಿ ಪ್ರಾಣಸಖಿ, ಶ್ರೀರಸ್ತು ಶುಭಮಸ್ತು, ಸ್ಮೈಲ್ ಸೇರಿದಂತೆ ಮತ್ತಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು ಕನ್ನಡ ಚಿತ್ರರಂಗದಲ್ಲಿ ಸುದೀರ್ಘ 35 ವರ್ಷಗಳ ಅನುಭವ ಹೊಂದಿದ್ದರು. ಚಿತ್ರ ನಿರ್ಮಾಣದ‌ ಜೊತೆ ವಿತರಣೆಯಲ್ಲಿಯೂ ಸ್ವಾಗತ್‌ ಬಾಬು ತೊಡಗಿಕೊಂಡಿದ್ದರು. ಸ್ವಾಗತ್ ಬಾಬು ನಿಧನಕ್ಕೆ ಕುಟುಂಬಸ್ಥರು, ಆಪ್ತರು, ಚಿತ್ರರಂಗದವರು ಕಂಬನಿ ಮಿಡಿದಿದ್ದಾರೆ.

Read More

ಮಾಯಿ ಮತ್ತು ದಿವಾನ್‌ನಂತಹ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ ಸೂರ್ಯ ಪ್ರಕಾಶ್ ಹೃದಯಾಘಾತದಿಂದ ನಿಧನರಾದರು. ಈ ಬಗ್ಗೆ ನಟ ಹಾಗೂ ರಾಜಕಾರಣಿ ಆರ್ ಶರತ್ ಕುಮಾರ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, ನಿನ್ನೆಯಷ್ಟೇ ದಿವಾನ್ ನಿರ್ದೇಶಕರ ಜೊತೆ ಮಾತಿಗಿಳಿದಿದ್ದು, ಅವರ ನಿಧನ ತಮಗೆ ತೀವ್ರ ದುಃಖ ತಂದಿದ್ದಾರೆ.  “ಅವರ ನಷ್ಟದಿಂದ ದುಃಖಿತರಾಗಿರುವ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಆಳವಾದ ಸಂತಾಪ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದಿದ್ದಾರೆ. ಶರತ್ ಕುಮಾರ್ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ. 56ನೇ ವಯಸ್ಸಿಗೆ ಸೂರ್ಯ ಪ್ರಕಾಶ್ ಸಾವಿನ ಸುದ್ದಿ ಕೇಳಿ ಸುದ್ದಿ ಕೇಳಿ ಕುಟುಂಬಸ್ಥರು, ಅಭಿಮಾನಿಗಳಿಗೆ ಆಘಾತವಾಗಿದೆ. ಅಂತಿಮ ವಿಧಿವಿದಾನಗಳ ಬಗ್ಗೆ ಇನ್ನಷ್ಟೇ ಹೆಚ್ಚಿನ ವಿವರ ಸಿಗಬೇಕಿದೆ. ಅಂದಹಾಗೆ, ಮಾಯಿ, ಮಣಿಕ್ಕಂ, ದಿವಾನ್, ಭರತಸಿಂಹ ರೆಡ್ಡಿ ಸಿನಿಮಾಗಳನ್ನು ನಿರ್ದೇಶಿಸುವ ಮೂಲಕ ಸೂರ್ಯ ಪ್ರಕಾಶ್ ಖ್ಯಾತಿ ಘಳಿಸಿದ್ದರು.

Read More

ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣ ಮೂಲದ ಯುವತಿ ಮೃತಪಟ್ಟಿರುವ ಘಟನೆ ಅಮೆರಿಕದ ಫ್ಲೋರಿಡಾದಲ್ಲಿ ನಡೆದಿದೆ. ಮೃತರನ್ನು ಯಾದಾದ್ರಿ ಭೋಂಗಿರ್ ಜಿಲ್ಲೆಯ ಯಾದಗರಿಪಲ್ಲಿ ಮೂಲದ ಸೌಮ್ಯಾ ರೆಡ್ಡಿ ಎಂದು ಗುರುತಿಸಲಾಗಿದೆ. ಸೌಮ್ಯಾ ರೆಡ್ಡಿ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಫ್ಲೋರಿಡಾ ಅಟ್ಲಾಂಟಿಕ್ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಿದ್ದ ಸೌಮ್ಯ ಅಲ್ಲೇ ಉದ್ಯೋಗ ಹುಡುಕುತ್ತಿದ್ದರು.  ಭಾನುವಾರ ರಾತ್ರಿ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದು ಸೌಮ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೌಮ್ಯಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಆಕೆಯ ಮೃತದೇಹವನ್ನು ಭಾರತಕ್ಕೆ ತರುವಂತೆ ಆಕೆಯ ಪೋಷಕರಾದ ಕೋಟೇಶ್ವರ ರಾವ್ ಮತ್ತು ಬಾಲಾಮಣಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ತೆಲಂಗಾಣ ಸಚಿವ ಕೋಮಟಿರೆಡ್ಡಿ ವೆಂಕಟ್ ರೆಡ್ಡಿ ಸೌಮ್ಯಾ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಆಕೆಯ ಪಾರ್ಥಿವ ಶರೀರವನ್ನು ಮರಳಿ ತರಲು ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.

Read More

ಕಾರಿನಿಂದ ಏನನ್ನೋ ಕದಿಯಲು ಹೋದವರನ್ನು ಪ್ರಶ್ನೆ ಮಾಡಲು ಮುಂದಾದ ಹಾಲಿವುಡ್ ನಟ ಜಾನಿ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಲಿದ್ದಾರೆ. 37 ವರ್ಷಷದ ಹಾಲಿವುಡ್ ನಟ ಜಾನಿ ವ್ಯಾಕ್ಟರ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮೃತ ವೆಕ್ಟರ್ ಅನೇಕ ಸಿನಿಮಾ ಹಾಗೂ ಟಿವಿ ಕಾರ್ಯಕ್ರಮಗಳಲ್ಲಿ ನಟಿಸಿದ್ದರು. ವೆಕ್ಟರ್ ತಾಯಿ ಕೂಡ ಮಗನ ಸಾವನ್ನು ಖಚಿತಪಡಿಸಿದ್ದಾರೆ. ‘ಜನರಲ್ ಹಾಸ್ಪಿಟಲ್’ ಸಿನಿಮಾದಲ್ಲಿ ವೆಕ್ಟರ್ ನಟಿಸಿದ್ದರು. ಅಮೆರಿಕದ ಲಾಸ್ ಏಂಜಲೀಸ್​ನಲ್ಲಿ ಈ ಘಟನೆ ನಡೆದಿದೆ. ಜಾನಿ ವ್ಯಾಕ್ಟರ್ ಶನಿವಾರ ಬೆಳಿಗ್ಗೆ ತಮ್ಮ ಸ್ನೇಹಿತರೊಂದಿಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಅವರ ಸ್ನೇಹಿತರೊಬ್ಬರ ಗಮನ ನಟನ ಕಾರಿನತ್ತ ಹೋಯಿತು. ಕಾರಿನ ಬಳಿ ಮೂವರು ಅಪರಿಚಿತ ವ್ಯಕ್ತಿಗಳು ಇದ್ದರು. ಅವರು ನಟನ ಕಾರಿನಿಂದ ಏನನ್ನೋ ಕದಿಯಲು ಪ್ರಯತ್ನಿಸುತ್ತಿದ್ದರು. ಇದನ್ನು ಪ್ರಶ್ನೆ ಮಾಡಲು ಹೋದ ಜಾನಿ ಮೇಲೆ ಅವರು ಗುಂಡು ಹಾರಿಸಿದರು. ನಟನ ಮೇಲೆ ಶೂಟ್ ಮಾಡಿದ ಮೂವರು ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಜಾನಿ ಅವರನ್ನು ಆಸ್ಪತ್ರೆಗೆ ದಾಖಲು…

Read More