ಬಾಲಿವುಡ್ ನ ಖ್ಯಾತ ನಟ ನವಾಜುದ್ದೀಣ್ ಸಿದ್ದಿಖಿ ಖಾಸಗಿ ಜೀವನ ಇತ್ತೀಚೆಗೆ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೆ ಇದೆ. ಇತ್ತೀಚೆಗೆ ಸಿದ್ದಿಕಿ ವಿರುದ್ಧಿ ಆತನ ಪತ್ನಿ ಕಿಡಿ ಕಾರಿದ್ದರು. ಇದಿಗ ನವಾಜುದ್ಧೀನ್ ಸಿದ್ಧಿಖಿ ಅವರ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ನವಾಜುದ್ಧೀನ್ ಸಿದ್ಧಿಖಿ ಅವರ ಅಣ್ಣ ಅಯಾಜುದ್ಧೀನ್ ವಿರುದ್ಧ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೋಸ ಮಾಡಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ಅಯಾಜುದ್ಧೀನ್ ಸಿದ್ಧಿಖಿಯನ್ನು ಉತ್ತರ ಪ್ರದೇಶದ ಮುಝಫರ್ನಗರ ಜಿಲ್ಲೆಯ ಬುಧಾನಾ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಅಯಾಜುದ್ಧೀನ್, ಸ್ಥಳೀಯ ನ್ಯಾಯಾಲಯಕ್ಕೆ, ನಕಲಿ ಜಿಲ್ಲಾಧಿಕಾರಿಗಳ ಆದೇಶದ ಪ್ರತಿಯೊಂದನ್ನು ನೀಡಿದ್ದಾರೆ ಎನ್ನಲಾಗಿದೆ. ಅಯಾಜುದ್ಧೀನ್ ಹಾಗೂ ಇಕ್ಬಾಲ್ ಎಂಬುವರ ನಡುವೆ ಜಮೀನು ಕುರಿತಾದಂತೆ ವ್ಯಾಜ್ಯ ಬಹಳ ಸಮಯದಿಂದಲೂ ನಡೆಯುತ್ತಿದ್ದು, ಇತ್ತೀಚೆಗೆ ಜಿಲ್ಲಾಧಿಕಾರಿಗಳು ಜಮೀನಿನ ಕುರಿತಾಗಿ ಮಾಡಿದ್ದಾರೆ ಎನ್ನಲಾದ ಆದೇಶವೊಂದನ್ನು ನವಾಜುದ್ಧೀನ್ ಸಹೋದರ ಅಯಾಜುದ್ಧೀನ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆದರೆ ಇದು ನಕಲಿ ಎನ್ನಲಾಗುತ್ತಿದ್ದು, ಇದೇ ಕಾರಣಕ್ಕೆ ಪೊಲೀಸರು ಅಯಾಜುದ್ಧೀನ್ ಅನ್ನು ಬಂಧಿಸಿ, ವಿಚಾರಣೆಗೆ…
Author: Author AIN
ವೈದ್ಯೋ ನಾರಾಯಣ ಹರಿ ಎನ್ನುತ್ತಾರೆ. ವೈದ್ಯಕೀಯ ಲೋಕದಲ್ಲಿ ಅಸಾಧ್ಯ ಎಂಬುದೇ ಇಲ್ಲ. ಕೆಲವೊಮ್ಮೆ ಸಾಯುವ ಹಂತಕ್ಕೆ ಹೋದ ಮನುಷ್ಯನು ವೈದ್ಯರಿಂದ ಬದುಕಿ ಬರುತ್ತಾರೆ. ವೈಜ್ಞಾನಿಕ ಯುಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಹೊಸ ಹೊಸ ಆವಿಷ್ಕಾರಗಳು ನಡೆಯುತ್ತಲೇ ಇರುತ್ತವೆ. ಇದೀಗ ಅಂಥದ್ದೊಂದು ಆವಿಷ್ಕಾರದ ಮೂಲಕ ಬೆಂಗಳೂರಿನ ಆಸ್ಟರ್ ಆರ್ವಿ ಆಸ್ಪತ್ರೆ ಸಿಬ್ಬಂದಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಆಸ್ಟರ್ ಆರ್ವಿ ಆಸ್ಪತ್ರೆ ವೈದ್ಯರು ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯ ಮೂಲಕ ಗರ್ಭಾಶಯದಿಂದ 4.005 ಕೆಜಿ ಫೈಬ್ರಾಯ್ಡ್ ಗೆಡ್ಡೆ ತೆಗೆದುಹಾಕುವ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ದಾಖಲೆ ಸೃಷ್ಟಿಸಿದ್ದಾರೆ. ಆಸ್ಟರ್ ಆರ್ವಿ ಆಸ್ಪತ್ರೆಯ ಲ್ಯಾಪ್ರೋಸ್ಕೋಪಿಕ್ ಸರ್ಜನ್ ಡಾ. ಸುನಿಲ್ ಈಶ್ವರ್ ಮತ್ತು ಅವರ ತಂಡ 42 ವರ್ಷದ ಮಹಿಳೆಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದೆ. ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಗೆ ಯಾವುದೇ ರೀತಿಯ ಬಾಹ್ಯ ರೋಗಲಕ್ಷಣಗಳು ಇರಲಿಲ್ಲ. ಆದರೆ ಅವರ ದೇಹದೊಂದಿಗೆ ಗಡ್ಡೆ ಬೆಳವಣಿಗೆಯಾಗುತ್ತಲೇ ಇತ್ತು. ಇದು ಅವರ ಗರ್ಭಾಶಯದ ವ್ಯವಸ್ಥೆಗೆ ತೊಂದರೆ ಮಾಡಿದ್ದಲ್ಲ, ಆರೋಗ್ಯಕ್ಕೆ ಅಪಾಯ ಒಡ್ಡಿತ್ತು. ಯಾವುದೇ ಆರೋಗ್ಯ…
ಮೊಬೈಲ್ ಕಿತ್ತುಕೊಂಡರು ಎಂಬ ಕಾರಣಕ್ಕೆ ಕೋಪಗೊಂಡ ಬಾಲಕ ಪೋಷಕರು ಹಾಗೂ ಅಕ್ಕನನ್ನು ಗುಂಡಿಕ್ಕಿ ಹತ್ಯೆ ಮಾಡಿ ವಾರಗಳ ಕಾಲ ಮೃತದೇಹಗಳ ಜೊತೆ ಕಾಲ ಕಳೆದಿರುವ ಘಟನೆ ಸಾವೊ ಪಾಲೊದಲ್ಲಿ ನಡೆದಿದೆ. ವಾರಗಳ ಬಳಿಕ ಪೊಲೀಸರಿಗೆ ಕರೆ ಮಾಡಿದ ಬಾಲಕ ತಪ್ಪೊಪ್ಪಿಕೊಂಡಿದ್ದಾನೆ. ಮಕ್ಕಳಿಬ್ಬರು ಮೊಬೈಲ್ಗಾಗಿ ಜಗಳವಾಡುತ್ತಿದ್ದರು ಆಗ ಪೋಷಕರು ಮೊಬೈಲ್ನ್ನು ಕಿತ್ತುಕೊಂಡಿದ್ದಕ್ಕೆ ಕೋಪಗೊಂಡ ಬಾಲಕ ಪೋಷಕರು ಹಾಗೂ ಸಹೋದರಿಯನ್ನು ಹತ್ಯೆ ಮಾಡಿದ್ದಾನೆ. ಮುನ್ಸಿಪಲ್ ಪೊಲೀಸ್ ಆಗಿದ್ದ ತಂದೆಯ ಸರ್ವೀಸ್ ಗನ್ ಹಿಡಿದು ಮನಬಂದಂತೆ ಗುಂಡು ಹಾರಿಸಿದ್ದಾಗಿ ಆತನೇ ತಿಳಿಸಿದ್ದಾನೆ. ಸಹೋದರಿಯ ಮುಖಕ್ಕೂ ಗುಂಡು ಹಾರಿಸಿದ್ದಾನೆ, ಹಲವು ಗಂಟೆಗಳ ಬಳಿಕ ತಾಯಿ ಮನೆಗೆ ಬಂದಾಗ ಅದೇ ರಿವಾಲ್ವರ್ನಿಂದ ಆಕೆಯನ್ನೂ ಕೊಂದಿದ್ದಾನೆ. ಆತನಿಗೆ ಮಾನಸಿಕ ಸಮಸ್ಯೆ ಏನಾದರೂ ಇತ್ತೇ ಎಂಬುದನ್ನು ಕಂಡುಹಿಡಿಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕ ಯಾರೊಂದಿಗಾದರೂ ಮಾತನಾಡಿದ್ದಾನೆಯೇ ಯಾರಾದರೂ ಈ ಹತ್ಯೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಬಾಲಕನನ್ನು ಆತನನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ.
ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಎಲಿಮಿನೇಟರ್-1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದರೆ ಬಿಕಿನಿ ಫೋಟೋ ಪೋಸ್ಟ್ ಮಾಡುತ್ತೇನೆ ಎಂದು ಹೇಳಿದ್ದ ಹಾಟ್ ಬ್ಯೂಟಿ ಹನಿ ರೋಸ್ ಈಗ ಒಡೆದ ಹೃದಯದ ಎಮೋಜಿ ಹಾಕುವ ಮೂಲಕ ಪಡ್ಡೆ ಹುಡುಗರ ಕನಸಿಗೆ ತಣ್ಣೀರೆರಚಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಹನಿ ರೋಸ್, ಆರ್ಸಿಬಿ ಗೆದ್ದರೆ ನಾನು ಪಂದ್ಯದ ನಂತರ ನನ್ನ ಬಿಕಿನಿ ಚಿತ್ರವನ್ನು ಪೋಸ್ಟ್ ಮಾಡುತ್ತೇನೆ. ʻAAARRRRR CEEEEE BEEEEE!!!!!!!!ʼ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದರು. ಆರ್ಸಿಬಿ ಪಂದ್ಯದ ಸೋಲಿನ ಬಳಿಕ ʻಆರ್ಸಿಬಿ ಎಂಬ ಹೆಸರಿನೊಂದಿಗೆʼ ಮೂರು ಒಡೆದ ಹೃದಯದ ಎಮೋಜಿಯನ್ನು ನಟಿ ಹಂಚಿಕೊಂಡಿದ್ದಾರೆ. ನಟಿಯ ಪೋಸ್ಟ್ಗೆ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ʻಸದ್ಯ ಆ ದೇವರು ನಮ್ಮನ್ನು ಬದುಕಿಸಿದ ಅಂತ ಕಾಮೆಂಟ್ ಮಾಡಿದ್ರೆ, ಇನ್ನೂ ಕೆಲವರು ಒಂದೇ ಒಂದು ಫೋಟೋವನ್ನಾದರೂ ಪೋಸ್ಟ್ ಅಂತ ಕೇಳಿಕೊಂಡಿದ್ದಾರೆ. ನಟಿ ಹನಿ ರೋಸ್ ಸಿನಿಮಾಗಳಿಗಿಂತ ಹೆಚ್ಚಾಗಿ ತಮ್ಮ ಹಾಟ್ ಹಾಟ್…
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಡೆವಿಲ್ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಸಿನಿಮಾ ಯಾವಾಗ ಕಣ್ಮುಂಬಿಕೊಳ್ಳುತ್ತೇವೆ ಎಂದು ಅಭಿಮಾನಿಗಳು ಕಾಯ್ತಿದ್ದಾರೆ. ಇದೀಗ ಡೆವಿಲ್ ಸಿನಿಮಾದ ಬಗ್ಗೆ ದರ್ಶನ್ ಬಿಗ್ ಅಪ್ ಡೇಟ್ ನೀಡಿದ್ದಾರೆ. ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ. ‘ಡೆವಿಲ್’ ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ ಮತ್ತು ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ ಎಂದು ಎಕ್ಸ್ನಲ್ಲಿ ದರ್ಶನ್ ಮಾಹಿತಿ ನೀಡಿದ್ದಾರೆ. ದರ್ಶನ್ ನಟನೆಯ ಡೆವಿಲ್ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದೆ. ವಾಮನ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ತುಳುನಾಡ ಕುವರಿ ರಚನಾ ರೈ ಡೆವಿಲ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ವಿಚಾರವನ್ನು ಕಳೆದ ವಾರ ಚಿತ್ರತಂಡ ಅನೌನ್ಸ್ ಮಾಡಿದ್ದರು. ಈ ಹಿಂದೆ ಇವರು ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬಂದ ‘ವಾಮನ’ ಚಿತ್ರಕ್ಕೆ ನಾಯಕಿಯಾಗಿದ್ದರು. ಜೊತೆಗೆ ತುಳು ಸಿನಿಮಾವೊಂದರಲ್ಲಿ ರಚನಾ ಬಣ್ಣ ಹಚ್ಚಿದ್ದರು. ಬ್ಯಾಡ್ಮಿಂಟನ್ ಪ್ಲೇಯರ್ ಆಗಿರುವ ಈ ತುಳುನಾಡ…
ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ಸೋಷಿಯಲ್ ಮೀಡಿಯಾಗಳ ಬಳಕೆ ಮಕ್ಕಳ ಮಾನಸಿಕ ಆರೋಗ್ಯಕ್ಕೆ ಹಾನಿಕಾರವಾಗಿದೆ. ಹೀಗಾಗಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಖಾತೆಗಳ ನೋಂದಣಿಯನ್ನು ನಿಷೇಧಿಸಬೇಕು ಎಂದು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಹೇಳಿದ್ದಾರೆ. ಮಕ್ಕಳು ಆನ್ಲೈನ್ ಬಳಕೆಯಿಂದ ಸಾಮಾಜಿಕ ಒತ್ತಡಗಳಿಗೆ ಒಳಗಾಗುತ್ತಾರೆ. ಇದರಿಂದ ಮಕ್ಕಳನ್ನು ನಿಯಂತ್ರಿಸಿದರೆ ಬೆಳೆವಣಿಗೆಗೆ ಹೆಚ್ಚುವರಿ ಸಮಯವನ್ನು ನೀಡಿದಂತಾಗುತ್ತದೆ. ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ತೆರೆಯಲು ಕನಿಷ್ಠ ವಯಸ್ಸನ್ನು 13 ರಿಂದ 16ಕ್ಕೆ ಹೆಚ್ಚಿಸುಬೇಕೆಂಬ ತಿಳಿಸಿದ್ದಾರೆ. ನಮ್ಮ ಕಿರಿಯ ಆಸ್ಟ್ರೇಲಿಯನ್ನರು ಕ್ರೀಡೆಗೆ ಹೆಚ್ಚು ಸಮಯವನ್ನು ಮೀಸಲಿಡಬೇಕು. ಸಾಮಾನ್ಯ ರೀತಿಯಲ್ಲಿ ಪರಸ್ಪರ ಮಾತು, ಚರ್ಚೆಯಲ್ಲಿ ತೊಡಬೇಕು ಹಾಗೂ ಆನ್ಲೈನ್ನಲ್ಲಿ ಕಡಿಮೆ ಸಮಯವನ್ನು ಕಳೆಯಬೇಕು. ಇದಕ್ಕಾಗಿ ಉತ್ತಮ ಮಾರ್ಗವೆಂದರೆ ಸಾಮಾಜಿಕ ಮಾಧ್ಯಮಗಳ ನಿರ್ಬಂಧ ಎಂದು ಎಫ್ಎಂ ರೇಡಿಯೊಗೆ ತಿಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಕೆಟ್ಟ ಸಂದೇಶಗಳು, ಹೇಳಿಕೆಗಳು ವಯಸ್ಕರಿಗೆ ಹಾನಿ ಮಾಡುತ್ತದೆ. ಇದು ಮಕ್ಕಳ ಮೇಲೆ ಇನ್ನೂ ಕೆಟ್ಟ ಪರಿಣಾಮ ಬೀರುತ್ತದೆ. ಇದು ವಿನಾಶಕಾರಿಯಾಗಬಹುದು ಎಂದು ಹೇಳಿದ್ದಾರೆ. ನಾನು ನನ್ನ ಸಾಮಾಜಿಕ…
ವಿಶ್ವವಿಖ್ಯಾತ ಕಾನ್ಸ್ ಚಲನಚಿತ್ರೋತ್ಸವದಲ್ಲಿ ಕನ್ನಡ ಜಾನಪದ ಕಿರುಚಿತ್ರ ‘ಸನ್ಫ್ಲವರ್ಸ್ ವರ್ ದಿ ಫಸ್ಟ್ ಒನ್ಸ್ ಟು ನೋ’ ಪ್ರದರ್ಶನಗೊಂಡಿದೆ. ಶಿವಮೊಗ್ಗ ಮೂಲದವರಾದ ಹಾಗೂ ಸದ್ಯ ಮೈಸೂರಿನಲ್ಲಿ ವಾಸಿಸುತ್ತಿರುವ ಚಿದಾನಂದ ಎಸ್. ನಾಯ್ಕ್ ಅವರು ನಿರ್ದೇಶಿಸಿರುವ 16 ನಿಮಿಷದ ಕಿರುಚಿತ್ರದಲ್ಲಿ ಬಂಜಾರ ಸಮುದಾಯದ ಹಳ್ಳಿಯೊಂದರಲ್ಲಿ ಹುಂಜವನ್ನು ಕದ್ದೊಯ್ದಾಗ ಗ್ರಾಮದಲ್ಲಿ ಬೆಳಕೇ ಮೂಡದೆ ಅಂಧಕಾರದಲ್ಲಿ ವೃದ್ಧೆ ಪರಿತಪಿಸುತ್ತಿರುವ ಕುರಿತು ಚಿತ್ರಿಸಲಾಗಿದೆ. ಈ ನಿಮಿತ್ತ ಚಿತ್ರೋತ್ಸವಕ್ಕಾಗಿ ನಾಯಕ್, ಫೋಟೋಗ್ರಫಿ ನಿರ್ದೇಶಕ ಊರಜ್ ಠಾಕೂರ್, ಸೌಂಡ್ ಡಿಸೈನರ್ ಅಭಿಷೇಕ್ ಕದಂ, ಪ್ರೊಡಕ್ಷನ್ ಡಿಸೈನರ್ ಪ್ರಣವ್ ಖೋತ್ ಕಾನ್ಸ್ಗೆ ಆಗಮಿಸಿದ್ದಾರೆ. ಈ ಚಿತ್ರವನ್ನು ಚಲನಚಿತ್ರ ಶಾಲಾ ಪ್ರಶಸ್ತಿ ವಿಭಾಗದಲ್ಲಿ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯನ್ನು ಪ್ರತಿನಿಧಿಸಿದ್ದು, ಗುರುವಾರ ಈ ವಿಭಾಗದಲ್ಲಿ ಪ್ರದರ್ಶನಗೊಂಡ ಚಿತ್ರಗಳಿಗೆ ಪ್ರಶಸ್ತಿ ಘೋಷಣೆಯಾಗಲಿದೆ. ಪುಣೆಯ ಫಿಲ್ಮ್ ಆಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಫ್ಟಿಐಐ) ವಿದ್ಯಾರ್ಥಿಯು ನಿರ್ಮಿಸಿದ ಈ ಕಿರುಚಿತ್ರವು ಕಾನ್ಸ್ ಚಿತ್ರೋತ್ಸವದ ಲಾ ಸಿನೆಫ್ ವಿಭಾಗಕ್ಕೆ ಆಯ್ಕೆಗೊಂಡಿತ್ತು. ಒಟ್ಟು 2,263 ಕಿರುಚಿತ್ರಗಳು ಈ…
ಕೆಕೆಆರ್ ಪಂದ್ಯವನ್ನು ವೀಕ್ಷಿಸಲು ಅಹಮದಾಬಾದ್ಗೆ ಆಗಮಿಸಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಇದ್ದಕ್ಕಿದ್ದಂತೆಯೇ ಆಸ್ಪತ್ರೆಗೆ ದಾಖಲಾಗಿದ್ದರು. ಹೀಟ್ ಸ್ಟ್ರೋಕ್ನಿಂದ ದಿಢೀರ್ ಎಂದು ಆಸ್ಪತ್ರೆಗೆ ದಾಖಲಾಗಿದ್ದು ನಟ ಆಸ್ಪತ್ರೆಗೆ ದಾಖಲಾದ ಸುದ್ದಿ ಕೇಳಿ ಅಭಿಮಾನಿಗಳು ಕಂಗಾಲಾಗಿದ್ದರು. ಸದ್ಯ ಶಾರುಖ್ ಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ. ನಟಿ ಜೂಹಿ ಚಾವ್ಲಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಶಾರುಖ್ ಆರೋಗ್ಯ ವಿಚಾರಿಸಿದ್ದಾರೆ. ಈ ಮಧ್ಯೆ ಸುಹಾನಾ ಖಾನ್ ಅವರು ಮುಂಬೈಗೆ ಮರಳಿದ್ದು, ಅನನ್ಯಾ ಪಾಂಡೆ, ಶನಾಯಾ ಕಪೂರ್, ನವ್ಯಾ ನಂದ ಜೊತೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಶಾರುಖ್ ಅವರ ಕುರಿತು ಹೇಳಿರುವ ನಟಿ ಜೂಹಿ ಚಾವ್ಲಾ, ‘ಮೇ 21ರಂದು ಅವರಿಗೆ ಅನಾರೋಗ್ಯ ಕಾಡಿತ್ತು. ಆದಾಗ್ಯೂ ಅವರು ಮ್ಯಾಚ್ ವೀಕ್ಷಿಸಿದರು. ಈಗ ಅವರ ಆರೋಗ್ಯ ಸುಧಾರಿಸುತ್ತಿದೆ. ಅವರು ಶೀಘ್ರವೇ ಸಂಪೂರ್ಣ ಚೇತರಿಕೆ ಕಾಣಲಿದ್ದು, ಫಿನಾಲೆ ವೀಕ್ಷಿಸಲಿದ್ದಾರೆ’ ಎಂದು ಹೇಳಿದ್ದಾರೆ. ಈ ಮೂಲಕ ಶಾರುಖ್ ಅಭಿಮಾನಿಗಳು ನಿರಾಳರಾಗಿದ್ದಾರೆ. ಬೆಳಿಗ್ಗೆ ಅವರ ಸ್ಥಿತಿ ಹದಗೆಟ್ಟ ನಂತರ, ಶಾರುಖ್…
ಹಮಾಸ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಈ ಮಧ್ಯೆ ಮತ್ತೊಂದು ಭಯಾನಕ ವಿಡಿಯೋ ಬಹಿರಂಗವಾಗಿದೆ. ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಹಮಾಸ್ ಉಗ್ರರು ಲೈಂಗಿಕ ದೌರ್ಜನ್ಯ ನಡೆಸಿರುವ ವಿಡಯೋ ವೈರಲ್ ಆಗಿದೆ. ಒತ್ತೆಯಾಳುಗಳು ಮತ್ತು ಕಾಣೆಯಾದ ಕುಟುಂಬಗಳ ವೇದಿಕೆ ಬಿಡುಗಡೆ ಮಾಡಿದ ಅಸಹ್ಯಕರ ತುಣುಕುಗಳು ಅಕ್ಟೋಬರ್ 7 ರಂದು ನಡೆದ ದಾಳಿಯ ಸಮಯದಲ್ಲಿ ಹಮಾಸ್ ಭಯೋತ್ಪಾದಕರು ಐದು ಮಹಿಳಾ ಇಸ್ರೇಲಿ ಸೈನಿಕರನ್ನು ಸಾಲಾಗಿ ನಿಲ್ಲಿಸಿದ ಕ್ಷಣವನ್ನು ಬಹಿರಂಗಪಡಿಸಿದೆ. ಬಂದೂಕುಧಾರಿಗಳ ಬಾಡಿಕ್ಯಾಮ್ ತುಣುಕುಗಳು ಮಹಿಳಾ ಸೈನಿಕರನ್ನು ಕೈಕೋಳ ತೊಡಿಸಿ ಗೋಡೆಗೆ ಒತ್ತಿದ ಕ್ಷಣವನ್ನು ತೋರಿಸುತ್ತದೆ, ಅವರ ಕೊಲೆಯಾದ ಸಹಚರರ ಶವಗಳಿಂದ ಸುತ್ತುವರೆದಿದೆ. ಮಹಿಳೆಯರು ಗಾಯಗೊಂಡಿದ್ದಾರೆ, ಅವರ ಮುಖದ ಮೇಲೆ ರಕ್ತವಿದೆ. ಗಾಜಾ ಪಟ್ಟಿಯ ಹೊರಗಿನ ನಹಾಲ್ ಓಜ್ ನೆಲೆಯಲ್ಲಿ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದರು. ಬಂಧಿತರನ್ನು ಲಿರಿ ಅಲ್ಬಾಗ್, ಕರೀನಾ ಆರೀವ್, ಅಗಮ್ ಬರ್ಗರ್, ಡೇನಿಯೆಲ್ಲಾ ಗಿಲ್ಬೋವಾ ಮತ್ತು ನಾಮಾ ಲೆವಿ ಎಂದು ಗುರುತಿಸಲಾಗಿದೆ. ಬಂದೂಕುಧಾರಿಗಳು ಮಹಿಳೆಯರ ಮೇಲೆ ಲೈಂಗಿಕ…
ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ ದೇಶ, ವಿದೇಶದಲ್ಲೂ ಸದ್ದು ಮಾಡಿತ್ತು. ಸಿನಿಮಾ ನೋಡಿದ ಪ್ರತಿಯೊಬ್ಬರು ಕಾಂತಾರ ಚಿತ್ರವನ್ನು ಕಂಡು ಸೆಲ್ಯೂಟ್ ಹೊಡೆದಿದ್ದರು. ಇದೀಗ ‘ಕಾಂತಾರ’ ಸಿನಿಮಾದ ಕ್ಲೈಮ್ಯಾಕ್ಸ್ ನೋಡಿ ಪುಟಾಣಿ ಮಗುವಿನ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ರಿಷಬ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಾಂತಾರ ಸಿನಿಮಾ ನೋಡಿದ ಪುಟ್ಟ ಹೆಣ್ಣುಮಗುವೊಂದು ಕ್ಲೈಮ್ಯಾಕ್ಸ್ ನೋಡುತ್ತಾ, ಕೂಗುತ್ತಾ, ತಲ್ಲೀನವಾಗಿರುವ ವಿಡಿಯೋವೊಂದನ್ನು ಎಕ್ಸ್ನಲ್ಲಿ ಸ್ವತಃ ರಿಷಬ್ ಶೆಟ್ಟಿ ರೀ ಶೇರ್ ಮಾಡಿದ್ದಾರೆ. ಇದಕ್ಕೆ ಕಣ್ಣಿನಲ್ಲಿ ಹಾರ್ಟ್ ಇರುವ ಎಮೋಜಿಗಳನ್ನು ಹಾಕಿ ಧನ್ಯವಾದ ತಿಳಿಸಿದ್ದಾರೆ. ಇದನ್ನು ಮೊದಲು ಶ್ರೀರಾಮ್ ಎಂಬವರು ಹಂಚಿಕೊಂಡಿದ್ದು, ಆಧ್ಯಾತ್ಮ ಎಂಬುದು ಮಗುವಿನ ಹೃದಯವನ್ನು ಹೊಕ್ಕಾಗ ಅದೊಂದು ಮ್ಯಾಜಿಕ್ ಆಗುತ್ತದೆ ಎಂದು ಅಡಿಬರಹ ನೀಡಿದ್ದರು. ಈ ವಿಡಿಯೋಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಸದ್ಯ ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಶೂಟಿಂಗ್ನಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಬಿಡುವು ಮಾಡಿಕೊಂಡು ಕುಟುಂಬ ಸದಸ್ಯರ ಜೊತೆ ಚಿಕ್ಕಮಗಳೂರಿನ ಹರಿಹರಪುರದ ಶಾರದಾ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಭೇಟಿ…