Author: Author AIN

ಕಳೆದ ಹತ್ತು ದಿನಗಳ ಹಿಂದೆ ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅನಾರ್ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು, ಅವರ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶದ ಡೆಪ್ಯುಟಿ ಹೈಕಮಿಷನ್​ನ ಹಿರಿಯ ಅಧಿಕಾರಿಗಳ ಪ್ರಕಾರ, ಹಸೀನಾ ಅವರ ಪಕ್ಷದಿಂದ ಮೂರು ಬಾರಿ ಸಂಸದರಾಗಿದ್ದ ಅನಾರ್ ಕೋಲ್ಕತ್ತಾಗೆ ಆಗಮಿಸಿದ ಒಂದು ದಿನದ ನಂತರ ನಾಪತ್ತೆಯಾಗಿದ್ದರು. ವೈದ್ಯಕೀಯ ಚಿಕಿತ್ಸೆಗೆಂದು ಕೋಲ್ಕತ್ತಾಗೆ ಬಂದಿದ್ದ ಅನಾರ್ ಬಾರಾನಗರದಲ್ಲಿರುವ ಸ್ನೇಹಿತ ಗೋಪಾಲ್​ ಬಿಸ್ವಾಸ್ ಅವರ ಮನೆಯಲ್ಲಿ ಉಳಿದುಕೊಂಡಿದ್ದರು. ಮೇ 13ರಂದು ಯಾರನ್ನೋ ಭೇಟಿಯಾಗಲು ಹೋಗುತ್ತಿದ್ದೇನೆಂದು ಹೊರಟವರು ಮತ್ತೆ ಮನೆಗೆ ಹಿಂದಿರುಗಲಿಲ್ಲ.. ಸಂಸದರು ಚಿನ್ನದ ಆಮದು ಹಾಗೂ ರಫ್ತು ವ್ಯವಹಾರವನ್ನು ಹೊಂದಿದ್ದರು, ಹತ್ಯೆಯಲ್ಲಿ ಅಂತಾರಾಷ್ಟ್ರೀಯ ಕ್ರಿಮಿನಲ್​ಗಳ ಕೈವಾಡವಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ನಂತರ ಪೊಲೀಸರು ಮಹಿಳೆ ಸೇರಿದಂತೆ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳನ್ನು ಆರೋಪಿಗಳು ಎಂದು ಗುರುತಿಸಿದ್ದು, ಅವರಲ್ಲಿ ಒಬ್ಬರನ್ನು ಬಂಧಿಸಲಾಗಿದೆ. ಸಂಸದರ ಹತ್ಯೆಯ ನಂತರ…

Read More

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಫಾರಂ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಸಾಕಷ್ಟು ನಟ, ನಟಿಯರ ಹೆಸರು ಕೇಳಿ ಬಂದಿದೆ. ತೆಲುಗು ನಟಿ ಹೇಮಾ ಭಾಗಿಯಾಗಿದ್ದು ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ ನಟಿ ಮಾತ್ರ ನಾನು ಇರಲೇ ಇಲ್ಲ ಎನ್ನುತ್ತಿದ್ದಾರೆ. ಇದೀಗ ರೇವ್ ಪಾರ್ಟಿ ಕುರಿತು ಮತ್ತೋರ್ವ ನಟಿ ವಿಡಿಯೋದಲ್ಲಿ ತಿಳಿಸಿದ್ದಾರೆ. ತೆಲುಗಿನ ನಟಿ ಆಶಿ ರಾಯ್ ತಾನು ಪಾರ್ಟಿಯಲ್ಲಿ ಇದ್ದೆ ಎಂದು ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ. ಆಶಿ ರಾವ್ ರೇವ್ ಪಾರ್ಟಿಯಲ್ಲಿ ಇದ್ದರು ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಆಶಿ ರಾಯ್‌ ವಿಡಿಯೊದಲ್ಲಿ ಮಾತನಾಡಿ ʻʻಅದೊಂದು ಬರ್ತ್‌ಡೇ ಪಾರ್ಟಿಯಾಗಿತ್ತು. ಒಳಗೆ ಏನು ನಡೀತಿತ್ತು ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ದಯವಿಟ್ಟು ನೀವೆಲ್ಲ ನನ್ನ ಬೆಂಬಲಿಸಿ. ನಾನು ಕಷ್ಟಪಟ್ಟು ಉದ್ಯಮದಲ್ಲಿ ಬೆಳೆಯುತ್ತಿರುವ ಹುಡುಗಿ. ದಯವಿಟ್ಟು ನನಗೆ ಸಹಾಯ ಮಾಡಿʼʼ ಎಂದಿದ್ದಾರೆ. ಅಂದ ಹಾಗೆ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟಿ ಹೇಮಾ ರಾವ್ ಮುಜುಗರದಿಂದ ತಪ್ಪಿಸಿಕೊಳ್ಳಲು ಅಲ್ಲೇ ಇದ್ದ…

Read More

ಬಾಲಿವುಡ್ ನ ಬ್ಯೂಟಿಫುಲ್ ಕಪಲ್ಸ್ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಫೋಟೋವೊಂದು ಅಭಿಮಾನಿಗಳ ತಲೆಯಲ್ಲಿ ಹುಳ ಬಿಟ್ಟಿದೆ. ಲಂಡನ್ ಬೀದಿಗಳಲ್ಲಿ ವಿಕ್ಕಿ ಹಾಗೂ ಕ್ಯಾಟ್ ಸುತ್ತಾಡುತ್ತಿದ್ದು ಕತ್ರಿನಾ ನೋಡಿದವ್ರು ಈಕೆ ಗರ್ಭಿಣಿ ಇರಬೇಕು ಎನ್ನುತ್ತಿದ್ದಾರೆ. 2021ರ ಡಿಸೆಂಬರ್‌ನಲ್ಲಿ ರಾಜಸ್ಥಾನದಲ್ಲಿ ಮದುವೆಯಾದ ಕತ್ರಿನಾ ಹಾಗೂ ವಿಕ್ಕಿ ಕೌಶಲ್ ಮದುವೆಯಾದ ಎರಡು ವರ್ಷಗಳ ಬಳಿಕ ಗುಡ್ ನ್ಯೂಸ್ ನೀಡ್ತಿದ್ದಾರೆ. ಇತ್ತೀಚೆಗೆ ಕರ್ತಿಕಾ ಕೈಫ್ ಸಿನಿಮಾಗಳಿಂದ ದೂರವಿದ್ದರು.ಕತ್ರಿನಾ ನಟನೆಯ ಯಾವುದೇ ಸಿನಿಮಾಗಳು ಇತ್ತೀಚೆಗೆ ಆರಂಭವಾಗಿಲ್ಲ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಇದೀಗ ಕತ್ರಿನಾ ಗರ್ಭೀಣಿಯಾಗಿದ್ದು ಅದೇ ಕಾರಣಕ್ಕೆ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದರು ಎನ್ನಲಾಗುತ್ತಿದೆ. ಕತ್ರಿನಾ ಹಾಗೂ ವಿಕ್ಕಿಕೌಶಲ್ ಜೋಡಿಯು ಸದ್ಯ ಲಂಡನ್ ಪ್ರವಾಸದಲ್ಲಿದೆ. ಲಂಡನ್‌ನ ಬೇಕರ್ ಸ್ಟ್ರೀಟ್ ನಲ್ಲಿ ತಾರಾ ದಂಪತಿಯು ತಿರುಗಾಡುವ ದೃಶ್ಯವನ್ನು ಅಭಿಮಾನಿಗಳು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಕೆಲ ಅಭಿಮಾನಿಗಳು ಅವರ ಜತೆ ಫೋಟೋ ತೆಗೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ವಿಕ್ಕಿ ಕೌಶಲ್ ಅವರು ಬ್ಲೂ ಔಟ್‌ಫಿಟ್…

Read More

ಇರಾನ್ ಅಧ್ಯಕ್ಷ ಇಬ್ರಾಹೀಂ ರೈಸಿ ಹಾಗೂ ವಿದೇಶಾಂಗ ಸಚಿವ ಹುಸೈನ್ ಆಮಿರ್ ಅಬ್ದುಲಹಿಯಾನ್ ಹಾಗೂ 6 ಮಂದಿ ಇತರರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ವೈಫಲ್ಯದಿಂದಾಗಿ ಅಪಘಾತಕ್ಕೆ ಒಳಗಾಗಿದೆ ಎಂದು ಇರಾನ್‍ ನ ಸರಕಾರಿ ಮಾಧ್ಯಮ ವರದಿ ಮಾಡಿದೆ. ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತಕ್ಕೆ ಒಳಗಾಗಿದ್ದು ಈ ಬಗ್ಗೆ ತನಿಖೆಗೆ ಇರಾನ್ ಮಿಲಿಟರಿ ಆದೇಶಿಸಿದೆ. ಈ ಮಧ್ಯೆ, ರೈಸಿ, ಆಮಿರ್ ಅಬ್ದುಲಹಿಯಾನ್ ಹಾಗೂ ಇತರರ ದುರಂತ ಮರಣಕ್ಕೆ ಅಮೆರಿಕ ಸಂತಾಪ ಸೂಚಿಸಿದ್ದು ಇರಾನ್‍ನಲ್ಲಿ ನೂತನ ಅಧ್ಯಕ್ಷರ ಅಡಿಯಲ್ಲಿ `ಮೂಲಭೂತ ಸ್ವಾತಂತ್ರ್ಯ ಅಸ್ತಿತ್ವದಲ್ಲಿರುವ’ ಸಮಾಜವನ್ನು ಎದುರು ನೋಡುತ್ತಿರುವುದಾಗಿ ಹೇಳಿದೆ.

Read More

ಕಾರು ಅಪಘಾತದಲ್ಲಿ ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಅಮೆರಿಕಾದ ಜಾರ್ಜಿಯಾ ರಾಜ್ಯದಲ್ಲಿ ಕಳೆದ ವಾರ ನಡೆದಿದೆ. ಮೃತ ಮೂವರು ಹಾಗೂ ಗಾಯಗೊಂಡಿರುವ ಇಬ್ಬರು ವಿದ್ಯಾರ್ಥಿಗಳು 18 ವರ್ಷ ವಯೋಮಾನದವರಾಗಿದ್ದು ಇವರುಗಳು ಅಲ್ಫರೆಟ್ಟಾ ಪ್ರೌಢ ಶಾಲೆ ಹಾಗೂ ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅಪಘಾತದಲ್ಲಿ ಆರ್ಯನ್ ಜೋಶಿ ಹಾಗೂ ಶ್ರೀಯಾ ಅವಸರಲ ಎಂಬ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಅನ್ವಿ ಶರ್ಮ ಎಂಬ ವಿದ್ಯಾರ್ಥಿಯು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ರಿತ್ವಿಕ್ ಸೋಮೆಪಲ್ಲಿ ಹಾಗೂ ಮುಹಮ್ಮದ್ ಲಿಯಾಕತ್ ಎಂದು ಗುರುತಿಸಲಾಗಿದ್ದು, ಅವರಿಗೆ ಅಲ್ಫರೆಟ್ಟಾದಲ್ಲಿರುವ ನಾರ್ತ್ ಫುಲ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಕಾರು ಚಾಲಕನು ನಿಯಂತ್ರಣ ಕಳೆದುಕೊಂಡಿದ್ದರಿಂದ ರಸ್ತೆ ಬದಿಯ ಮರಗಳ ಸಾಲಿನ ಬಳಿ ಮಗುಚಿ ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More

ಸ್ಯಾಂಡಲ್‌ವುಡ್ ಸಿನಿಮಾದಲ್ಲಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ವಿದ್ಯಾ ಗಂಡನಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾಳೆ. ಧಾರವಾಹಿ, ಸಿನಿಮಾಗಳ ಜೊತೆಗೆ ವಿದ್ಯಾ ರಾಜಕಾರಣಿಯಾಗಿಯೂ ಗುರುತಿಸಿಕೊಂಡಿದ್ದರು. ಆದರೆ ಅದೇ ರಾಜಕಾರಣ ಆಕೆಯ ಬಾಳಿಗೆ ಮುಳುವಾಗಿದೆ ಎನ್ನಲಾಗುತ್ತಿದೆ. ಮೂಲತಃ ಪಿರಿಯಾಪಟ್ಟಣದ ವಿದ್ಯಾ, ಜೈ ಮಾರುತಿ 800 ಸಿನಿಮಾದ ನಂತರ ಮತ್ತಷ್ಟು ಖ್ಯಾತಿ ಗಳಿಸಿದ್ದ ವಿದ್ಯಾ ಮೈಸೂರು ತಾಲೂಕು ಟಿ.ನರಸೀಪುರ ತಾಲೂಕಿನ ತುರಗನೂರು ಗ್ರಾಮದ ನಂದೀಶ್ ಎನ್ನುವವರನ್ನು ಮದುವೆ ಆಗಿದ್ದರು. ಪತ್ನಿ ವಿದ್ಯಾಳ ಏಳಿಗೆಯನ್ನು ಕಂಡು ಆರಂಭದ ನಾಲ್ಕೈದು ವರ್ಷ ಸುಖವಾಗಿಯೇ ಸಂಸಾರ ಮಾಡಿಕೊಂಡಿದ್ದ ದಂಪತಿಗೆ ಮುದ್ದಾದ ಎರಡು ಹೆಣ್ಣು ಮಕ್ಕಳು ಕೂಡ ಇದ್ದಾರೆ. ಮದುವೆಯ ಬಳಿಕ ವಿದ್ಯಾ ಸಿನಿಮಾದ ಜೊತೆಗೆ ರಾಜಕೀಯ ಕ್ಷೇತ್ರದಲ್ಲಿಯೂ ಗುರುತಿಸಿಕೊಳ್ಳಲು ಮುಂದಾದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರೊಂದಿಗೆ ಉತ್ತಮ ಒಡನಾಟವನ್ನು ಹೊಂದಿದ್ದಳು. ಕಳೆದ ವರ್ಷದ 2023ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕುಟುಂಬಕ್ಕಿಂತ ರಾಜಕೀಯ ಚಟುವಟಿಕೆಗಳಲ್ಲಿಯೇ ವಿದ್ಯಾ ಹೆಚ್ಚಾಗಿ ತೊಡಗಿಸಿಕೊಂಡಿದ್ದರು. ಭಾರತ್ ಜೋಡೋ ಯಾತ್ರೆಯಲ್ಲಿಯೂ ಕಾಣಿಸಿಕೊಂಡು…

Read More

ಸ್ಟಾರ್ ನಟರು ಅಂದ್ರೆ ಸಾಮಾನ್ಯವಾಗಿ ಸ್ಟಾರ್ ಹೋಟೆಲ್ ಗಳಲ್ಲೇ ಊಟ ಮಾಡುತ್ತಾರೆ. ಆದರೆ ಕೆಲ ಸ್ಟಾರ್ ಗಳು ಮಾತ್ರ ಯಾವುದೇ ಹಮ್ಮು ಬಿಮ್ಮು ತೋರದೆ ರೋಡ್ ಸೈಡ್ ಡಾಬ, ಹೋಟೆಲ್ ಗಳಲ್ಲಿ ತಿಂದು ಸಿಂಪ್ಲಿಸಿಟಿ ಮೆರೆಯುತ್ತಾರೆ. ಇತ್ತೀಚೆಗೆ ಯಶ್‌, ಭಟ್ಕಳದ ಸಣ್ಣ ಅಂಗಡಿಯಲ್ಲಿ ಹೆಂಡತಿ ಮಕ್ಕಳಿಗೆ ತಿಂಡಿ ಕೊಡಿಸಿದ್ದ ಚಿತ್ರಗಳು ವೈರಲ್‌ ಆಗಿತ್ತು. ಈಗ ಮತ್ತೊಂದು ಅಂಥದ್ದೇ ಚಿತ್ರ ವೈರಲ್‌ ಆಗಿದೆ. ಟಾಲಿವುಡ್‌ನ ಸ್ಟಾರ್‌ ಹೀರೋ ಮೆಗಾಸ್ಟಾರ್‌ ಕುಟುಂಬದ ಕುಡಿ ಅಲ್ಲು ಅರ್ಜುನ್‌ಗೆ ಇತ್ತೀಚೆಗೆ ಪತ್ನಿ ಸ್ನೇಹಾ ರೆಡ್ಡಿ ಜೊತೆ ಪ್ರಯಾಣಿಸಿದ್ದು ಈ ವೇಳೆ ಅಲ್ಲು ಅರ್ಜುನ್‌ ಲೋಕಲ್‌ ಢಾಬಾದಲ್ಲಿ ಮಧ್ಯಾಹ್ನ ಊಟ ಮಾಡಿದ್ದಾರೆ ಈ ಚಿತ್ರ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕನಿಷ್ಠ ಎಸಿ ಕೂಡ ಇಲ್ಲದ ಢಾಬಾದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ಗಂಡ-ಹೆಂಡತಿ ಇಬ್ಬರೂ ಊಟ ಸವಿದಿರುವ ಚಿತ್ರವನ್ನು ಅಭಿಮಾನಿಗಳು ಮೆಚ್ಚಿದ್ದಾರೆ. ಈ ಚಿತ್ರ ಎಲ್ಲಿ ಹಾಗೂ ಯಾವಾಗ ತೆಗೆದಿದ್ದು ಎನ್ನುವ ಮಾಹಿತಿ ಇಲ್ಲವಾದರೂ ಅಲ್ಲು ಅರ್ಜುನ್ ಅವರ ಸಿಂಪಲ್…

Read More

ತೆಲುಗು ಚಿತ್ರರಂಗದಲ್ಲಿ ಇತ್ತೀಚೆಗೆ ಬಿಡುಗಡೆ ಆದ ಹನುಮಾನ್ ಸಿನಿಮಾ ಸಾಕಷ್ಟು ಸದ್ದು ಮಾಡಿತ್ತು. ಈ ಚಿತ್ರದ ಸಕ್ಸಸ್ ನಂತರ ಡೈರೆಕ್ಟರ್ ಪ್ರಶಾಂತ್ ವರ್ಮಾ ‘ರಾಕ್ಷಸ್’ ಸಿನಿಮಾಗಾಗಿ ರಣ್‌ವೀರ್ ಸಿಂಗ್ ಜೊತೆ ಕೈಜೋಡಿಸಿದ್ದರು. ಕೆಲ ಮನಸ್ತಾಪಗಳಿಂದ ರಣವೀರ್ ಸಿಂಗ್ ‘ಹನುಮಾನ್’ ನಿರ್ದೇಶಕನ ಮುಂಬರುವ ಚಿತ್ರದಿಂದ ಹೊರ ಬಂದಿದ್ದಾರೆ. ಡೈರೆಕ್ಟರ್ ಪ್ರಶಾಂತ್ ವರ್ಮಾ ಮತ್ತು ರಣ್‌ವೀರ್ ಸಿಂಗ್ ನಡುವೆ ಕತೆ ಮತ್ತು ಮೇಕಿಂಗ್ ವಿಷಯವಾಗಿ ಭಿನ್ನಾಭಿಪ್ರಾಯಗಳು ಮೂಡಿದ ಕಾರಣದಿಂದ ರಣ್‌ವೀರ್ ಸಿಂಗ್ ಈ ಸಿನಿಮಾದಿಂದ ಹೊರನಡೆದಿದ್ದಾರೆ. ಇತ್ತೀಚೆಗೆ ರಣ್‌ವೀರ್ ಹೈದರಾಬಾದ್‌ಗೆ ಹೋಗಿ ಸಿನಿಮಾದ ಫೋಟೊಶೂಟ್‌ನಲ್ಲಿ ಸಹ ಭಾಗಿಯಾಗಿ ಬಂದಿದ್ದರು. ಆದರೆ ಅದಾದ ಬಳಿಕ ಇಬ್ಬರ ನಡುವೆ ಉಂಟಾದ ಭಿನ್ನಾಭಿಪ್ರಾಯದಿಂದಾಗಿ ರಣವೀರ್ ಸಿನಿಮಾದಿಂದ ಆಚೆ ಬಂದಿದ್ದಾರೆ. ರಣ್‌ವೀರ್ ರಿಂದ ತೆರೆವಾದ ಜಾಗಕ್ಕೆ ಇದೀಗ ನಿರ್ದೇಶಕರು ಬೇರೆ ನಟನ ಹುಟುಕಾಟದಲ್ಲಿ ತೊಡಗಿಕೊಂಡಿದ್ದಾರೆ. ರಣವೀರ್ ಜಾಗಕ್ಕೆ ಸೂಕ್ತ ನಟನನ್ನೇ ತರಬೇಕು ಎಂದು ಚಿತ್ರತಂಡ ಮುಂದಾಗಿದೆ. ಸದ್ಯ ಸಿಂಗಂ ಅಗೇನ್, ಡಾನ್ 3, ಡೈರೆಕ್ಟರ್ ಎಸ್. ಶಂಕರ್ ಜೊತೆ ‘ಅನ್ನಿಯನ್’…

Read More

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗೇನ ಅಗ್ರಹಾರ ಬಳಿಯ ಜಿಆರ್ ಫಾರ್ಮ್‍ಹೌಸ್‍ನಲ್ಲಿ ನಡೀತಿದ್ದ ರೇವ್‍ಪಾರ್ಟಿ ತೆಲುಗು ನಟಿ ಹೇಮಾಗೆ ಸಂಕಷ್ಟ ತಂದೊಡ್ಡಿದೆ. ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಇದ್ದದ್ದು ಈಗ ಜಗಜ್ಜಾಹೀರವಾಗಿದೆ. ಈ ಕುರಿತು ಖುದ್ದು ಪೊಲೀಸ್ ಆಯುಕ್ತ ದಯಾನಂದ್, ತೆಲುಗಿನ ಖ್ಯಾತ ನಟಿ ಪಾರ್ಟಿಯಲ್ಲಿ ಇದ್ದಿದ್ದನ್ನು ಬಹಿರಂಗಗೊಳಿಸಿದ್ದಾರೆ. ಇನ್ನೂ ಪಾರ್ಟಿಯಲ್ಲಿ ಇದ್ದರೂ ಕೂಡ, ನಾನು ಹೈದ್ರಾಬಾದ್‍ನಲ್ಲಿದ್ದೇನೆ ಅಂತ ನಾಟಕವಾಡಿದ್ದ ನಟಿ ಹೇಮಾಗೆ ಈಗ ಸಂಕಷ್ಟ ಎದುಗುವ ಸಾಧ್ಯತೆ ಇದೆ. ಸ್ಟೇಷನ್ ಬೇಲ್ ಮೇಲೆ ರಕ್ತದ ಮಾದತಿ ಕೊಟ್ಟು ಹೋಗಿರೋ ನಟಿಗೆ ಪೊಲೀಸರು ಮಾಸ್ಟರ್ ಸ್ಟ್ರೋಕ್ ಕೊಡಲು ಮುಂದಾಗಿದ್ದಾರೆ ಅನ್ನೋದು ಗೊತ್ತಾಗಿದೆ. ರೇವ್ ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ್ದ ತೆಲುಗು ನಟಿ ಹೇಮಾಗೆ ಪೊಲೀಸರು ಬ್ಲಡ್ ಸ್ಯಾಂಪಲ್ ಪಡೆದು ಕಳಿಸಿದ್ದಾರೆ. ಬ್ಲಡ್ ಸ್ಯಾಂಪಲ್ ನಲ್ಲಿ ಪಾಸಿಟಿವ್ ಬಂದರೆ ಹೇರ್ ಪಾಲಿಕಲ್ ಟೆಸ್ಟ್ ಮಾಡಿಸಲು ಪೊಲೀಸರು ಮುಂದಾಗಿದ್ದಾರೆ. ಡ್ರಗ್ಸ್ ಸೇವನೆ ಮಾಡಿರೋದು ಹೇರ್ ಪಾಲಿಕಲ್ ಟೆಸ್ಟ್ ನಲ್ಲಿ ಗೊತ್ತಾಗಾಲಿದೆ. ಹಾಗಾಗಿ ಪೊಲೀಸ್ ಹೇರ್ ಪಾಲಿಕ್…

Read More

ಕನ್ನಡ ಬಿಗ್ ಬಸ್ ಸೀಸನ್ 10ರ ರನ್ನರ್ ಅಪ್ ಡ್ರೋನ್ ಪ್ರತಾಪ್ ಬಿಗ್​ಬಾಸ್ ಮನೆಯಿಂದ ಹೊರಬಂದ ಬಳಿಕ ಹಲವು ಸಮಾಜ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಡ್ರೋನ್ ಕಂಡು ಹಿಡಿದಿದ್ದಾಗಿ ಸುಳ್ಳು ಹೇಳಿ ಭಾರಿ ಜನಪ್ರಿಯತೆಗಿಟ್ಟಿಸಿಕೊಂಡಿದ್ದ ಡ್ರೋನ್ ಪ್ರತಾಪ್, ಬಿಗ್​ಬಾಸ್ ಶೋನಲ್ಲಿ ಉತ್ತಮವಾಗಿ ಆಡುವ ಮೂಲಕ ಜನರ ಮನ ಗೆದ್ದಿದ್ದರು. ಇದೀಗ ತಮ್ಮ ಹುಟ್ಟುಹಬ್ಬದಂದು ಲೋಕ ಮೆಚ್ಚುವ ಕೆಲಸ ಮಾಡಲು ಡ್ರೋನ್ ಪ್ರತಾಪ್ ಮುಂದಾಗಿದ್ದಾರೆ. ಡ್ರೋನ್ ಪ್ರತಾಪ್, ತಮ್ಮ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಅಪ್​ಲೋಡ್ ಮಾಡಿದ್ದು, ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿದ್ದಾರೆ. ಅಂದಿನ ದಿನ ತಾವು ಮಾಡಲು ಹೊರಟಿರುವ ಒಂದು ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ. ‘ಡಾ ರಾಜ್​ಕುಮಾರ್ ಅವರು ನೇತ್ರದಾನ ಮಹಾದಾನ ಎಂದಿದ್ದಾರೆ. ಜುಲೈ 11 ಕ್ಕೆ ನನ್ನ ಹುಟ್ಟುಹಬ್ಬವಿದೆ. ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಿಕೊಳ್ಳಬೇಕು ಎಂದು ನಾನು ನಿರ್ಧರಿಸಿದ್ದೇನೆ’ ಎಂದು ಡ್ರೋನ್ ಪ್ರತಾಪ್ ಹೇಳಿದ್ದಾರೆ. ‘ಯಾರಾದರೂ ಐದು ಮಂದಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಬೇಕು ಎಂದು…

Read More