ಬಾಲಿವುಡ್ನಲ್ಲಿ ತಯಾರಾಗುತ್ತಿರುವ ಬಿಗ್ ಬಜೆಟ್ ನ ರಾಮಾಯಣ ಸಿನಿಮಾ ಆರಂಭಕ್ಕೂ ಮೊದಲೇ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಹೀಗೆ ಸಾಕಷ್ಟು ಘಟಾನುಘಟಿ ಕಲಾವಿದರು ಬಣ್ಣ ಹಚ್ಚುತ್ತಿದ್ದಾರೆ. ಆದರೆ ಇದೀಗ ಸಿನಿಮಾದ ಶೂಟಿಂಗ್ ನಿಂತಿದ್ದು ಸುದ್ದಿ ಕೇಳಿ ಅಭಿಮಾನಿಗಳು ದಂಗಾಗಿದ್ದಾರೆ. ರಾಮಾಯಣ ಸಿನಿಮಾದ ನಿರ್ಮಾಪಕರು ಕಾಪಿರೈಟ್ ನಿಯಮವನ್ನು ಉಲ್ಲಂಘನೆ ಮಾಡಿರುವ ಕಾರಣಕ್ಕಾಗಿ ಸಿನಿಮಾವನ್ನು ನಿಲ್ಲಿಸಲಾಗಿದೆ. ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾ ತಂಡಕ್ಕೆ ‘ಅಲ್ಲು ಮಂಟೇನಾ ಮೀಡಿಯಾ ವೆಂಚರ್ಸ್ ಎಲ್ಎಲ್ಪಿ’ ಕಂಪನಿಯು ನೋಟಿಸ್ ಕಳಿಸಿತ್ತು. ಅದರ ಅನ್ವಯ ‘ರಾಮಾಯಣ’ ಸಿನಿಮಾದ ನಿರ್ಮಾಪಕರು ಈ ಕಂಪನಿಯ ಜೊತೆ ಮಾಡಿಕೊಂಡ ಒಪ್ಪಂದದ ಪ್ರಕಾರ ಸ್ಕ್ರಿಪ್ಟ್ಗೆ ಸಂಬಂಧಿಸಿದ ಕೆಲವು ಹಕ್ಕುಗಳನ್ನು ಖರೀದಿಸಬೇಕಿತ್ತು. ಆ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ನೋಟಿಸ್ ಕಳಿಸಲಾಗಿತ್ತು. ‘ರಾಮಾಯಣ’ ಚಿತ್ರತಂಡಕ್ಕೆ ನೋಟಿಸ್ ಬಂದ ನಂತರವೂ ಕೆಲವು ದಿನಗಳ ಕಾಲ ಶೂಟಿಂಗ್ ಮುಂದುವರಿಸಲಾಯಿತು.…
Author: Author AIN
ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಅಂತ್ಯಕ್ರಿಯೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಬುಧವಾರ ಇರಾನ್ ದೇಶಕ್ಕೆ ತೆರಳುವ ಸಾಧ್ಯತೆ ಇದೆ. ರೈಸಿ ಅವರ ಗೌರವಾರ್ಥವಾಗಿ ಮಂಗಳವಾರ ಭಾರತದಾದ್ಯಂತ ಶೋಕಾಚರಣೆ ಆಚರಿಸಲಾಗುತ್ತಿದೆ. 63 ವರ್ಷದ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಭಾನುವಾರ ಅಜೆರ್ ಬೈಜಾನ್ ಪ್ರಾಂತ್ಯದ ಗಡಿಯ ಗುಡ್ಡಪ್ರದೇಶಗಳ ವ್ಯಾಪ್ತಿಯಲ್ಲಿ ಅಪಘಾತಕ್ಕೀಡಾಗಿತ್ತು. ಭಾನುವಾರ ಪತನಗೊಂಡ ಹೆಲಿಕಾಪ್ಟರ್ನ ಅವಶೇಷಗಳು ಸೋಮವಾರ ಮುಂಜಾನೆ ಪತ್ತೆಯಾಗಿವೆ. ಅಧ್ಯಕ್ಷರು ಇದ್ದ ಹೆಲಿಕಾಪ್ಟರ್ ಪರ್ವತಕ್ಕೆ ಬಡಿದು, ಚೂರಾಯಿತು ಎಂದು ಸರ್ಕಾರಿ ಮಾಧ್ಯಮ ಹೇಳಿದೆ. ರೈಸಿ ಹಾಗೂ ಇತರರು ಪೂರ್ವ ಅಜರ್ಬೈಜಾನ್ ಪ್ರಾಂತ್ಯದಲ್ಲಿ ಅಣೆಕಟ್ಟು ಯೋಜನೆಯೊಂದನ್ನು ಉದ್ಘಾಟಿಸಿ ಮರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಸ್ಪೇನ್ ರಾಜಧಾನಿ ಮ್ಯಾಡ್ರಿಡ್ನಲ್ಲಿ ಭಾನುವಾರ ಬಲಪಂಥೀಯ ರ್ಯಾಲಿಯಲ್ಲಿ ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮಿಲೆ ಪಾಲ್ಗೊಂಡಿದ್ದರು. ಈ ವೇಳೆ ಅವರು ಸ್ಪೇನ್ನ ಪ್ರಧಾನಿ ಪೆಡ್ರೋ ಸ್ಯಾಂಚೆಸ್ ಅವರ ಪತ್ನಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಈ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಅರ್ಜೆಂಟೀನಾದಿಂದ ತನ್ನ ರಾಯಭಾರಿಯನ್ನು ವಾಪಾಸು ಕರೆಸಿಕೊಳ್ಳುವುದಾಗಿ ಸ್ಪೇನ್ ಸರಕಾರ ಘೋಷಿಸಿದೆ. ಸ್ಯಾಂಚೆಸ್ ಅವರ ಪತ್ನಿ ಬೆಗೋನ ಗೋಮೆಝ್ರನ್ನು `ಭ್ರಷ್ಟಾಚಾರಿ’ ಎಂದು ಟೀಕಿಸಿದ್ದರು ಹಾಗೂ ಸಮಾಜವಾದವನ್ನು `ಶಾಪಗ್ರಸ್ತ ಮತ್ತು ಹಾನಿಕಾರಕ ವ್ಯವಸ್ಥೆ’ ಎಂದು ಲೇವಡಿ ಮಾಡಿದ್ದರು. ಸ್ಪೇನ್ ಅಧ್ಯಕ್ಷರ `ಸೋಷಿಯಲಿಸ್ಟ್ ಪಾರ್ಟಿ’ಯನ್ನು ಗುರಿಯಾಗಿಸಿ ಈ ಹೇಳಿಕೆ ನೀಡಿದ್ದಾರೆಂದು ವಿಶ್ಲೇಷಿಸಲಾಗಿದೆ. ಈ ರ್ಯಾಲಿಯಲ್ಲಿ ಸ್ಪೇನ್ನ ಹಲವು ಅಂತರಾಷ್ಟ್ರೀಯ ಮಿತ್ರದೇಶಗಳ ಪ್ರತಿನಿಧಿಗಳೂ ಪಾಲ್ಗೊಂಡಿದ್ದರು. ಅರ್ಜೆಂಟೀನಾ ಅಧ್ಯಕ್ಷರ ನಡವಳಿಕೆಯನ್ನು ಸ್ಪೇನ್ ಸರಕಾರ ತೀವ್ರವಾಗಿ ಖಂಡಿಸಿದ್ದು ಜೇವಿಯರ್ ಮಿಲೆ ತಕ್ಷಣ ಕ್ಷಮೆ ಯಾಚಿಸಬೇಕೆಂದು ಸ್ಪೇನ್ನ ವಿದೇಶಾಂಗ ಸಚಿವ ಜೋಸ್ ಮ್ಯಾನುವೆಲ್ ಆಗ್ರಹಿಸಿದ್ದಾರೆ. ತಮ್ಮ ವರ್ತನೆಯಿಂದ ಮಿಲೆ ಉಭಯ ದೇಶಗಳ ನಡುವಿನ ಸಂಬಂಧಕ್ಕೆ ತೀವ್ರ ಹಾನಿ ತಂದಿದ್ದಾರೆ ಎಂದವರು ಖಂಡಿಸಿದ್ದಾರೆ. ಆದರೆ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿಜಯಲಕ್ಷ್ಮಿ ಮೇ19ರಂದು ದುಬೈನಲ್ಲಿ ಅದ್ದೂರಿಯಾಗಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಈ ಮಧ್ಯೆ ನಟಿ ಪವಿತ್ರಾ ಗೌಡ ಅವರು ನಿಗೂಡಾರ್ಥದಲ್ಲಿ ಪೋಸ್ಟ್ ಒಂದನ್ನು ಮಾಡಿದ್ದು ಚರ್ಚೆಗೆ ಕಾರಣವಾಗಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಪವಿತ್ರಾ ಗೌಡ ನಡುವೆ ಇರುವ ಮನಸ್ಥಾಪ ಗುಟ್ಟಾಗಿ ಉಳಿದಿಲ್ಲ. ಕೆಲವು ದಿನಗಳಿಂದ ಮಗಳ ಜೊತೆ ಕಾಶ್ಮೀರದಲ್ಲಿ ಇರುವ ಪವಿತ್ರಾ ಗೌಡ ಇದ್ದಕ್ಕಿದ್ದಂತೆ ದರ್ಶನ್ ಹಳೆ ವಿಡಿಯೋ ಒಂದು ಶೇರ್ ಮಾಡಿಕೊಂಡಿದ್ದಾರೆ. ‘ಕರ್ಮ ಅನ್ನೋದು ಬ್ಯಾಗೇಜ್ ರೀತಿ. ನಾವು ಏನು ಮಾಡುತ್ತೀವಿ ಅದು ನಮಗೆ ರಿಟರ್ನ್ ಆಗುತ್ತದೆ ಅಂತ. ನಾವು ಸಣ್ಣವರು ಇದ್ದಾಗ ಅಜ್ಜಿ ತಾತ ಹೇಳುತ್ತಿದ್ದರು ಈಗ ನೀನು ಮಾಡುತ್ತಿರುವೆ ಮುಂದಿನ ಜನ್ಮದಲ್ಲಿ ಇರುತ್ತೆ ನಿನಗೆ ಅಂತ ಆದರೆ ಈಗ ಹಾಗಲ್ಲ…ಅಲ್ಲೇ ಡ್ರಾ ಅಲ್ಲೇ ಬಹುದುಮಾನ’ ಎಂದು ದರ್ಶನ್ ವಿಡಿಯೋದಲ್ಲಿ ಹೇಳಿದ್ದಾರೆ. ಕೆಲವು ತಿಂಗಳ ಹಿಂದೆ ವಿಜಯಲಕ್ಷ್ಮಿ ಮತ್ತು ಪವಿತ್ರಾ ಗೌಡ ಸೋಷಿಯಲ್ ಮೀಡಿಯಾ ವಾರ್ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಆದರೆ…
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಜಿಆರ್ ಫಾರ್ಮ್ಸ್ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ನಟಿ ಹೇಮಾ ಭಾಗಿಯಾಗಿದ್ದರು ಎಂದು ನಗರ ಪೊಲೀಸ್ ಕಮಿಷನರ್ ದಯಾನಂದ್ ಸ್ಪಷ್ಟನೆ ನೀಡಿದ್ದಾರೆ. ಆದರೂ ಸುಮ್ಮನಾಗದ ನಟಿ ಹೇಮಾ ಇದೀಗ ಮತ್ತೊಂದು ವಿಡಿಯೋ ಮಾಡಿದ್ದು ಅದನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರೇವ್ ಪಾರ್ಟಿಯ ಮೇಲೆ ರೈಡ್ ಆಗುತ್ತಿದ್ದಂತೆ ಅಲ್ಲೇ ಇದ್ದ ಮಾವಿನ ತೋಟದಿಂದ ವಿಡಿಯೋ ಮಾಡಿದ್ದ ನಟಿ ನಾನು ಹೈದರಾಬಾದ್ ನ ಫಾರಂ ಹೌಸ್ ನಲ್ಲಿ ಇದ್ದೇನೆ ಎಂದು ಹೇಳಿದ್ದರು. ಇದೀಗ ಮತ್ತೊಂದು ವಿಡಿಯೋವನ್ನು ಹೇಮಾ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. ಮನೆಯಲ್ಲಿ ಚಿಕನ್ ಬಿರಿಯಾನಿ ಮಾಡುತ್ತಿರುವ ವಿಡಿಯೋ ಒಂದನ್ನು ಹೇಮಾ ಇದೀಗ ಹಂಚಿಕೊಂಡಿದ್ದಾರೆ. ವಿಡಿಯೋನಲ್ಲಿ ಹೇಮಾ, ತಮ್ಮ ಮನೆಯಲ್ಲಿ ಚಿಕನ್ ಬಿರಿಯಾನಿ ಮಾಡುತ್ತಿದ್ದಾರೆ. ಆದರೆ ಈ ವಿಡಿಯೋನಲ್ಲಿ ಅವರು ಬೆಂಗಳೂರಿನ ರೇವ್ ಪಾರ್ಟಿ ವಿಷಯ ಮಾತನಾಡಿಲ್ಲ. ‘ನಾನು ಪಾರ್ಟಿಯಲ್ಲಿಲ್ಲ, ಮನೆಯಲ್ಲಿದ್ದೇನೆ’ ಎಂದು ಸಹ ಹೇಮಾ ಹೇಳಿಲ್ಲ. ಹಾಗಾಗಿ ಇದು ಹಳೆಯ ವಿಡಿಯೋ ಎನ್ನಲಾಗುತ್ತಿದೆ. ಆದರೆ ಇದಕ್ಕೆ ಮುನ್ನ…
ಭಜರಂಗಿ. ‘ವೇದ’, ‘ಜೈ ಮಾರುತಿ 800’, ‘ಅಜಿತ್’ ಇನ್ನೂ ಹಲವು ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ನಟಿಸಿದ್ದ ನಟಿ ವಿದ್ಯಾ ಕೊಲೆಯಾಗಿದ್ದಾರೆ. ಪತಿಯೇ ವಿದ್ಯಾರನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದ್ದು, ಪತಿ ನಂದೀಶ್ ನಾಪತ್ತೆಯಾಗಿದ್ದಾನೆ. ಸದ್ಯ ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮೃತ ವಿದ್ಯಾ ನಟನೆಯ ಜೊತೆಗೆ ರಾಜಕಾರಣಿಯಾಗಿಯೂ ಗುರುತಿಸಿಕೊಂಡಿದ್ದರು. ಮೈಸೂರು ನಗರ ಕಾಂಗ್ರೆಸ್ನ ಕಾರ್ಯದರ್ಶಿಯಾಗಿ ವಿದ್ಯಾ ಕೆಲಸ ಮಾಡುತ್ತಿದ್ದರು. 2018ರಲ್ಲಿ ವಿದ್ಯಾ, ನಂದೀಶ್ ಎಂಬುವರೊಟ್ಟಿಗೆ ವಿವಾಹವಾಗಿದ್ದರು. ಆರಂಭದ ಕೆಲ ದಿನಗಳ ಬಳಿಕ ಇಬ್ಬರ ನಡುವೆ ಮನಸ್ತಾಪ ಏರ್ಪಟ್ಟಿತ್ತು. ಇಬ್ಬರ ನಡುವೆ ಕಲಹ ಸಾಮಾನ್ಯವಾಗಿತ್ತು. ಆಗಾಗ್ಗೆ ಈ ದಂಪತಿಗಳು ಜಗಳ ಮಾಡುತ್ತಲೇ ಇದ್ದರು. ವಿಚ್ಛೇದನಕ್ಕೂ ಸಹ ಇವರು ಪ್ರಯತ್ನಿಸಿದ್ದರು ಆದರೆ ಪೋಷಕರು ಬುದ್ಧಿವಾದ ಹೇಳಿ ಇಬ್ಬರನ್ನೂ ಒಂದು ಮಾಡಿದ್ದರು. ಆದರೆ ಜಗಳ ಹಾಗೆಯೇ ಮುಂದುವರೆದಿತ್ತು. ಇತ್ತೀಚೆಗೆ ಮತ್ತೊಮ್ಮೆ ಇಬ್ಬರ ನಡುವೆ ಜಗಳ ನಡೆದಿತ್ತು. ಆಗ ವಿದ್ಯಾ, ಗಂಡನ ಮನೆಯಿರುವ ಮೈಸೂರಿನ ತುರಗನೂರಿನಿಂದ, ತಮ್ಮ ತವರು ಮನೆಯಾದ ಬೆಂಗಳೂರಿನ ಶ್ರೀರಾಮಪುರಕ್ಕೆ ಬಂದಿದ್ದರು. ಮೇ 20…
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಜಿಆರ್ ಫಾರ್ಮ್ ಹೌಸ್ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಹಲವು ಸೆಲೆಬ್ರಿಟಿಗಳ ಹೆಸರು ಕೇಳಿ ಬರುತ್ತಿದ್ದು, ಅದರಲ್ಲಿ ಪ್ರಮುಖವಾಗಿರುವುದು ತೆಲುಗು ನಟಿ ಹೇಮಾ ಅವರದ್ದು. ರೇವ್ ಪಾರ್ಟಿಯಲ್ಲಿ ಹೇಮಾ ಭಾಗಿಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ವಿಡಯೋ ಮಾಡಿದ ನಟಿ ತಾವು ಹೈದರಾಬಾದ್ನ ಫಾರ್ಮ್ಹೌಸ್ನಲ್ಲಿ ಇರೋದಾಗಿ ಸುಳ್ಳು ವಿಡಿಯೋ ಮಾಡಿದ್ದರು. ಅವರು ಕೂಡ ಪಾರ್ಟಿಯಲ್ಲಿ ಇದ್ದರು ಎನ್ನುವ ವಿವಾರವನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅವರ ಅಸಲಿ ಮುಖ ಬಯಲಿಗೆ ಎಳೆದಿದ್ದಾರೆ. ‘ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಭಾಗಿಯಾಗಿದ್ದು ಸತ್ಯ’ ಎಂದು ಪೊಲೀಸ್ ಆಯುಕ್ತ ದಯಾನಂದ್ ಕ್ಲ್ಯಾರಿಟಿ ನೀಡಿದ್ದಾರೆ. ಇದೇ ವೇಳೆ ಫಾರ್ಮ್ ಹೌಸ್ನಲ್ಲೇ ನಟಿ ವಿಡಿಯೋ ಮಾಡಿ ಹೇಳಿಕೆ ಬಿಡುಗಡೆ ಮಾಡಿರುವ ಪ್ರಕರಣದ ಕುರಿತು ದಯಾನಂದ್ ಮಾತನಾಡಿದ್ದಾರೆ. ಯಾವ ಸಂದರ್ಭದಲ್ಲಿ ವಿಡಿಯೋ ಮಾಡಿದ್ದಾರೆಂಬ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ದಯಾನಂದ್ ಹೇಳಿದ್ದಾರೆ. ಸದ್ಯ ಹೇಮಾ…
ಬಾಲಿವುಡ್ ಬೆಡಗಿ ಪೂನಂ ಪಾಂಡೆ ಸದಾ ಒಂದಲ್ಲಾ ಒಂದು ವಿವಾದಗಳ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಬೆತ್ತಲೆ ಫೋಟೋ ಹಂಚಿಕೊಂಡು ನಟಿ ಮತ್ತೆ ಸುದ್ದಿಯಲ್ಲಿದ್ದಾರೆ. ನಾನು ನಿಮ್ಮ ಮನಸ್ಸಿನಲ್ಲಿದ್ದೇನೆ ಎಂದು ಪಡ್ಡೆಹುಡುಗರಿಗೆ ಸಂದೇಶ ಕಳುಹಿಸಿದ್ದಾರೆ. ಟಬ್ನಲ್ಲಿ ಕುಳಿತು ಹಿಂಭಾಗದ ಫೋಟೋಗಳನ್ನು ಹಂಚಿಕೊಂಡು ಪಡ್ಡೆಹುಡುಗರ ಟೆಂಪ್ರೆಚರ್ ಹೆಚ್ಚಿಸಿದ್ದಾರೆ. ಮುಖದ ಕ್ಲೋಸಪ್ ಶಾಟ್ಸ್ಗಳನ್ನು ಶೇರ್ ಮಾಡಿದ್ದಾರೆ. ನಟಿಯ ಬೆತ್ತಲೆ ಫೋಟೋಗಳನ್ನು ನೋಡಿ ಪಡ್ಡೆಹುಡುಗರು ಬೋಲ್ಡ್ ಆಗಿದ್ದಾರೆ. ನಗ್ನ ಫೋಟೋ ಶೇರ್ ಮಾಡಿ, ನನ್ನನ್ನು ಪ್ರೀತಿಸಿ ಅಥವಾ ದ್ವೇಷಿಸಿ, ನಾನು ಇನ್ನೂ ನಿಮ್ಮ ಮನಸ್ಸಿನಲ್ಲಿದ್ದೇನೆ ಎಂದು ಪೂನಂ ಅಡಿಬರಹ ನೀಡಿದ್ದಾರೆ. ನಟಿಯ ಪೋಸ್ಟ್ಗೆ ನೆಟ್ಟಿಗರಿಂದ ಬಗೆ ಬಗೆಯ ಕಾಮೆಂಟ್ಗಳು ಹರಿದು ಬರುತ್ತಿವೆ. ಇತ್ತೀಚೆಗೆ ಸುಳ್ಳು ಸಾವಿನ ಸುದ್ದಿ ತಿಳಿಸುವ ಮೂಲಕ ನಟಿ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಪೂನಂ ನಿಧನರಾಗಿದ್ದಾರೆ ಎನ್ನಲಾದ ಸುಳ್ಳು ಸುದ್ದಿ ಕೇಳಿಯೇ ಅನೇಕರು ಶಾಕ್ ಆಗಿದ್ದರು. ಬಳಿಕ ಗರ್ಭಕಂಠ ಕುರಿತಂತೆ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ಸತ್ತಂತೆ ನಾಟಕವಾಡಿದ್ದರು. ಈ…
ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದ ಕುರಿತಾಗಿ ಒಂದಲ್ಲ ಒಂದು ಸುದ್ದಿಗಳು ಕೇಳಿ ಬರುತ್ತಲೆ ಇದೆ. ಬಿಗ್ ಪ್ರೋಜೆಕ್ಟ್ ನ ರಾಮಾಯಣ ಸಿನಿಮಾದಲ್ಲಿ ಸಾಕಷ್ಟು ಸ್ಟಾರ್ ಕಲಾವಿದರು ಕಾಣಿಸಿಕೊಳ್ತಿದ್ದಾರೆ. ಈಗಾಗಲೇ ಕ್ಯಾರೆಕ್ಟರ್ ಕಾಸ್ಟೂಮ್ ಡಿಸೈನ್ ಕೆಲಸ ಶುರುವಾಗಿದ್ದು ಇದರಲ್ಲಿ ರಾಕಿಂಗ್ ಸ್ಟಾರ್ ಯಶ್ ರಿಯಲ್ ಗೋಲ್ಡ್ ಧರಿಸುತ್ತಿದ್ದಾರಂತೆ. ರಾಮಾಯಣ ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಳತಿದ್ದಾರೆ. ಇದರಲ್ಲಿ ರಾಕಿಂಗ್ ಸ್ಟಾರ್ ಯಶ್ ಅಸಲಿ ಚಿನ್ನ ಬಳಕೆ ಮಾಡಿರೋ ಕಾಸ್ಟೂಮ್ಗಳನ್ನೆ ಧರಿಸಲಿದ್ದಾರೆ.ಈ ಹಿಂದೆ ಕೆಜಿಎಫ್ ಸಿನಿಮಾದಲ್ಲಿ ಯಶ್ ನಕಲಿ ಗೋಲ್ಡ್ ಧರಿಸಿದ್ದರು. ಡೈರೆಕ್ಟರ್ ನಿತೇಶ್ ತಿವಾರಿ ಅವರ ರಾಮಾಯಣದಲ್ಲಿ ರಿಯಲ್ ಗೋಲ್ಡ್ ಬಳಕೆ ಆಗುತ್ತಿದೆ. ವಿಶೇಷವಾಗಿ ರಾವಣನ ಪಾತ್ರದ ಕಾಸ್ಟೂಮ್ ಹೆಚ್ಚು ಸದ್ದು ಮಾಡುತ್ತಿವೆ. ಕಾರಣ, ಈ ಒಂದು ಪಾತ್ರದ ಕಾಸ್ಟೂಮ್ಗೆ ರಿಯಲ್ ಗೋಲ್ಡ್ ಬಳಕೆ ಅಗುತ್ತಿದೆ ಅನ್ನೋ ಮಾಹಿತಿ ಹರಿದಾಡುತ್ತಲೇ ಇದೆ. ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ ಏನೂ ಹೊರಬಂದಿಲ್ಲ. ಈ ಚಿತ್ರದ ಕಾಸ್ಟೂಮ್ ಡಿಸೈನ್ ಅನ್ನ…
ಕೇಂದ್ರ ಸರ್ಕಾರವು ಜನ ಸಾಮಾನ್ಯರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದರೆ ಈ ಯೋಜನೆಗಳ ಬಗ್ಗೆ ಜನರಿಗೆ ಸರಿಯಾಗಿ ಗೊತ್ತಿರದ ಕಾರಣ ಅವುಗಳ ಸದುಪಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಸದ್ಯ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳಿಗಾಗಿ ಯೋಜನೆಯೊಂದನ್ನು ನೀಡಿದ್ದು ಅದರಲ್ಲಿ 4 ಲಕ್ಷದವರೆಗೂ ಹಣ ಪಡೆಯಬಹುದಾಗಿದೆ. ಮೋದಿ ಸರ್ಕಾರವು ವೃತ್ತಿಪರ ಶಿಕ್ಷಣ ಮತ್ತು ತರಬೇತಿ ಸಾಲ ಯೋಜನೆ ಎಂಬ ಯೋಜನೆಯನ್ನು ಜಾರಿಗೆ ತರುತ್ತಿದೆ. ಕೇಂದ್ರದಿಂದ ಯುವಕರಿಗೆ ಆರ್ಥಿಕ ನೆರವು ನೀಡುವ ಉತ್ತಮ ಆಲೋಚನೆಯೊಂದಿಗೆ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಯುವಕರು ತಮ್ಮ ಕೌಶಲ್ಯಗಳನ್ನು ಸುಧಾರಿಸಿಕೊಳ್ಳಬಹುದು ಮತ್ತು ಸುಲಭವಾಗಿ ಉದ್ಯೋಗವನ್ನು ಪಡೆಯಬಹುದು. ಯೋಜನೆಯ ಭಾಗವಾಗಿ, ಕೇಂದ್ರವು ನೀಡಿದ ಮೊತ್ತವನ್ನು ವೃತ್ತಿಪರ ಶಿಕ್ಷಣ ಮತ್ತು ತರಬೇತಿ ಕೋರ್ಸ್ಗಳಿಗೆ ಬಳಸಬಹುದು. ವಿದ್ಯಾರ್ಥಿಗಳು ಈ ಯೋಜನೆಗೆ ಸಂಬಂಧಿಸಿದ ಹಣವನ್ನು ಇತರ ವೆಚ್ಚಗಳಿಗೆ ಸಹ ಬಳಸಬಹುದು. ವಿದ್ಯಾರ್ಥಿಯ ಅಗತ್ಯಗಳನ್ನು ಅವಲಂಬಿಸಿ ಸಾಲವನ್ನು ಮಂಜೂರು ಮಾಡಲಾಗುತ್ತದೆ ಮತ್ತು ಗರಿಷ್ಠ 4 ಲಕ್ಷ ರೂ.ಗಳವರೆಗೆ ಸಾಲ ಪಡೆಯುವ ಸಾಧ್ಯತೆಯಿದೆ.…