ಮೇ 12ರ ಸಂಜೆ ಮುಂಬೈನ ಘಾಟ್ ಕೋಪರ್ ನಲ್ಲಿ ಸಂಭವಿಸಿದ ಭೀಕರ ಗಾಳಿ ಮಳೆಗೆ ಬೃಹತ್ ಜಾಹೀರಾತು ಫಲಕ ಕುಸಿದು ಬಿದ್ದಿತ್ತು. ಪರಿಣಾಮ ಮಳೆಯಿಂದಾಗಿ ಪೆಟ್ರೋಲ್ ಬಂಕ್ನಲ್ಲಿ ನಿಂತುಕೊಂಡಿದ್ದ 16 ಮಂದಿ ಸಾವಿಗೀಡಾಗಿದ್ದು, 75 ಮಂದಿ ಗಾಯಗೊಂಡಿದ್ದರು. ಈ ಅವಘಡದಲ್ಲಿ ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಅವರ ಹತ್ತಿರದ ಸಂಬಂಧಿಕರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಈಚೆಗೆ ಅವರ ಅಂತ್ಯಕ್ರಿಯೆಯಲ್ಲಿ ನಟ ಕಾರ್ತಿಕ್ ಆರ್ಯನ್ ಭಾಗಿಯಾಗಿದ್ದರು. ಮೃತರನ್ನು ವಾಯು ಸಂಚಾರ ನಿಯಂತ್ರಣ ಜನರಲ್ ಮ್ಯಾನೇಜರ್ ಮನೋಜ್ ಚನ್ಸೋರಿಯಾ ಮತ್ತು ಅವರ ಪತ್ನಿ ಅನಿತಾ ಚನ್ಸೋರಿಯಾ ಎಂದು ಗುರುತಿಸಲಾಗಿದೆ. ಇವರು ಕಾರ್ತಿಕ್ ಆರ್ಯನ್ ಅವರ ಹತ್ತಿರದ ಸಂಬಂಧಿಗಳು. ಮೇ 15ರಂದು ಮನೋಜ್ ಮತ್ತು ಅನಿತಾ ಅವರ ಮೃತದೇಹಗಳು ಪತ್ತೆಯಾಗಿದ್ದು, ಮೇ 16ರಂದು ಅವರ ಅಂತ್ಯಕ್ರಿಯೆಯನ್ನು ಮಾಡಲಾಗಿದೆ. ಈ ವೇಳೆ ನಟ ಕಾರ್ತಿಕ್ ಆರ್ಯನ್ ಕೂಡ ಹಾಜರಿದ್ದರು. ಇನ್ನು, ಹೋರ್ಡಿಂಗ್ ಅಳವಡಿಸಿದ್ದ ಮಾಲೀಕ ಭವೇಶ್ ಪ್ರಭುದಾಸ್ ಭಿಂದೆ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಚ್ಚರಿ…
Author: Author AIN
‘ಭಾರತವು ತನ್ನ ಉದ್ಯಮಿಗಳನ್ನು ಉತ್ತಮ ರೀತಿಯಲ್ಲಿ ಬೆಂಬಲಿಸುತ್ತಿರುವುದರಿಂದ ದೇಶದ ಪ್ರಗತಿ ಸಾಧ್ಯವಾಗಿದೆ. ಆದರೆ ನಗದು ಕೊರತೆ ಎದುರಿಸುತ್ತಿರುವ ರಾಷ್ಟ್ರಗಳಲ್ಲಿ ಉದ್ಯಮಿಗಳನ್ನು ಕಳ್ಳರಂತೆ ಕಾಣಲಾಗುತ್ತಿದೆ’ ಎಂದು ಪಾಕಿಸ್ತಾನದ ಆಂತರಿಕ ಸಚಿವ ಮೊಹಸೀನ್ ನಖ್ವಿ ಬೇಸರ ವ್ಯಕ್ತಪಡಿಸಿದ್ದಾರೆ. ‘ಭಾರತದಲ್ಲಿ ಉದ್ಯಮಿಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸಲಾಗುತ್ತಿದೆ ಹಾಗೂ ಗೌರವದಿಂದ ಕಾಣಲಾಗುತ್ತದೆ. ಆದರೆ ಪಾಕಿಸ್ತಾನದ ಸ್ಥಿತಿಯೇ ಬೇರೆ. ಇಲ್ಲಿ ಉದ್ಯಮಿಯೊಬ್ಬ ಬೆಳೆಯುತ್ತಿದ್ದಾನೆ ಎಂದರೆ ಆತನಿಗೆ ಕಳ್ಳನ ಪಟ್ಟ ಕಟ್ಟಲಾಗುತ್ತದೆ’ ಎಂದು ಬೇಸರ ಹೊರ ಹಾಕಿದ್ದಾರೆ. 2022ರಲ್ಲಿ 17 ಸಾವಿರ ಪಾಕಿಸ್ತಾನಿ ಪ್ರಜೆಗಳಿಗೆ ಸೇರಿದ 23 ಸಾವಿರ ಆಸ್ತಿಗಳ ಮಾಹಿತಿ ಸೋರಿಕೆಯಾದ ‘ದುಬೈ ಲೀಕ್ಸ್’ ಪ್ರಕರಣ ಕುರಿತು ನಖ್ವಿ ಮಾತನಾಡಿದ್ದಾರೆ. ಸಂಘಟಿತ ಅಪರಾಧ ಹಾಗೂ ಭ್ರಷ್ಟಾಚಾರ ಯೋಜನೆ ಕುರಿತು ಸಂಗ್ರಹಿಸಿದ ಮಾಹಿತಿ ಅನ್ವಯ, ನಖ್ವಿ ಅವರ ಪತ್ನಿಗೆ ಸೇರಿದ ದುಬಾರಿ ಬೆಲೆಯ ಆಸ್ತಿ ದುಬೈನಲ್ಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದೇ ವರದಿಯಲ್ಲಿ ಪಾಕಿಸ್ತಾನದ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಅವರ ಮಕ್ಕಳಾದ ಬಿಲಾವಲ್ ಭುಟ್ಟೊ ಜರ್ದಾರಿ, ಆಸೀಫಾ ಭುಟ್ಟೊ ಜರ್ದಾರಿ,…
ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ದೇಶದ ಉದ್ದದ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ರಶ್ಮಿಕಾ ಮಂದಣ್ಣ ಪ್ರಶಂಸೆ ವ್ಯಕ್ತಪಡಿಸಿ ವಿಡಿಯೋ ಮಾಡಿದ್ದು ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ರಶ್ಮಿಕಾ ಮಂದಣ್ಣ ಟ್ವೀಟ್ ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರತಿಕ್ರಿಯಿಸಿ ಮೆಚ್ಚುಗೆ ವ್ಯಕ್ತ ಪಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದ ನಟಿ ರಶ್ಮಿಕಾ ವಿರುದ್ಧ ಕಾಂಗ್ರೆಸ್ ನಾಯಕಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಕಿಡಿ ಕಾರಿದ್ದಾರೆ. ಬುಲೆಟ್ ರೈಲಿನ ಬಗ್ಗೆ ಏನಾದರೂ ಹೇಳಲು ಇದ್ಯಾ ಎಂದು ಪ್ರಶ್ನಿಸಿರುವ ಅಂಜಲಿ ನಿಂಬಾಳ್ಕರ್ , ಮುಂಬೈ – ಅಹಮದಾಬಾದ್ ಬುಲೆಟ್ ರೈಲು ಯೋಜನೆ ದುರಂತ. ಬೂಟ್ ನೆಕ್ಕುವುದನ್ನು ನಿಲ್ಲಿಸಿ. ಮೆಗಾಸ್ಟಾರ್ ಆಗಲು ಇದು ನಿಮಗೆ ಸಹಾಯ ಮಾಡುವುದಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ
ಪ್ರತಿಷ್ಠಿತ ಕೇನ್ಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಬಾಲಿವುಡ್ ಬ್ಯೂಟಿ ನಟಿ ಊರ್ವಶಿ ರೌಟೇಲಾ ಬೆಕ್ಕಿನ ನಡಿಗೆಯಲ್ಲಿ ಅಲ್ಲಿದ್ದವರ ಕಣ್ಣು ಕಕ್ಕುವಂತೆ ಕಾಣಿಸಿಕೊಂಡಿದ್ದಾರೆ. ಊರ್ವಶಿ ರೌಟೇಲಾ ಸದಾ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ತನ್ನ ಸ್ಟೈಲ್ ನಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಸೆಳೆದಿರುವ ನಟಿಯ ಕೇನ್ಸ್ ಫಿಸ್ಟಿವಲ್ ಲುಕ್ ಗೆ ಎಲ್ಲರು ಫಿದಾ ಆಗಿದ್ದಾರೆ. ಕೇನ್ಸ್ ಚಲನಚಿತ್ರೋತ್ಸವದ ಮೊದಲ ದಿನವೇ ಊರ್ವಶಿ ರೌಟೇಲಾ ಕೂಡ ರೆಡ್ ಕಾರ್ಪೆಟ್ ಮೇಲೆ ಎಂಟ್ರಿ ಕೊಟ್ಟಿದ್ದಾರೆ. ನಟಿ ಊರ್ವಶಿ ರೌಟೇಲಾ ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ನಟಿಯ ಗುಲಾಬಿ ಬಣ್ಣದ ದಿರಿಸು ನೋಡಿ ಫ್ಯಾನ್ಸ್ ಕ್ಲೀನ್ ಬೋಲ್ಡ್ ಆಗಿದ್ದಾರೆ. ನಟಿ ಊರ್ವಶಿ ರೌಟೇಲಾ ರೋಸ್ ಕಲರ್ ಹೈ ಥಾಯ್ ಸ್ಲಿಟ್ ಗೌನ್ ಧರಿಸಿದ್ದರು. ರೋಸ್ ಕಲರ್ ಡ್ರೆಸ್ ನಲ್ಲಿ ನಟಿ ಊರ್ವಶಿ ಬಾರ್ಬಿ ಗೊಂಬೆಯಂತೆ ಮುದ್ದಾಗಿ ಕಾಣುತ್ತಿದ್ದಾರೆ. ಊರ್ವಶಿ ಚೆಂದದ ಮೇಕಪ್ ನೊಂದಿಗೆ ಇನ್ನು ಅಂದವಾಗಿ ಕಾಣ್ತಿದ್ದಾರೆ. ಆದರೆ, ಊರ್ವಶಿಯ ಈ ಲುಕ್ ನೋಡಿ ಕೆಲವರಿಗೆ ದೀಪಿಕಾ…
ಭಾರತದ ಮಸಾಲೆ ಪದಾರ್ಥಗಳದ ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆಯಲ್ಲಿ ವಿಷಕಾರಿ ಅಂಶಗಳಿರುವುದು ಪತ್ತೆಯಾಗಿದ್ದು, ಈಗಾಗಲೇ ಹಲವು ರಾಷ್ಟ್ರಗಳು ಇವುಗಳ ಆಮದನ್ನು ನಿಷೇಧಿಸಿದೆ. ಅದೇ ರೀತಿ ಇದೀಗ ನೇಪಾಳ ಕೂಡ ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆಗಳನ್ನು ಆಮದು ಮಾಡಿಕೊಳ್ಳದಂತೆ ಆದೇಶಿಸಿದ್ದು, ನೇಪಾಳ ಮಾರುಕಟ್ಟೆಯಲ್ಲಿ ಕೂಡ ಈ ಮಸಾಲೆಗಳ ಮಾರಾಟ ನಿಷೇಧಿಸಲಾಗಿದೆ. ಸದ್ಯ ಈ ಎರಡೂ ಮಸಾಲೆ ಪುಡಿಗಳಲ್ಲಿರುವ ರಾಸಾಯನಿಕಗಳ ಪರೀಕ್ಷೆ ನಡೆಯುತ್ತಿದ್ದು, ಫಲಿತಾಂಶ ಬರುವವರೆಗೂ ನಿಷೇಧ ಜಾರಿಯಲ್ಲಿರುತ್ತದೆ. ಅಲ್ಲಿಯವರೆಗೂ ಈ ಮಸಾಲೆಗಳನ್ನು ಆಮದು ಮಾಡಿಕೊಳ್ಳುವುದಿಲ್ಲ ಮತ್ತು ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುವುದಿಲ್ಲವೆಂದು ನೇಪಾಳ ಸರ್ಕಾರ ತಿಳಿಸಿದೆ. ಈ ಮಸಾಲೆಗಳಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿದ್ದು, ಇದು ಮಾನವನಲ್ಲಿ ಕ್ಯಾನ್ಸರ್ ಹೆಚ್ಚಾಗಲು ಕಾರಣವಾಗಿದೆ. ಅಲ್ಲದೇ ಈ ರಾಸಾಯನಿಕವನ್ನು ಕ್ರಿಮಿನಾಶಕ್ಕಾಗಿ ಬಳಕೆ ಮಾಡಲಾಗುತ್ತದೆ. ಇಂಥ ರಾಸಾಯನಿಕದ ಪ್ರಮಾಣ ಮಸಾಲೆ ಪುಡಿಯಲ್ಲಿ ಹೆಚ್ಚಾಗಿದೆ ಎಂಬ ಆರೋಪ ಕೇಳಿ ಬಂದ ಕಾರಣಕ್ಕೆ, ಮಸಾಲೆಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಕಾರಣಕ್ಕೆ ಹಾಂಕಾಂಗ್, ಆಸ್ಟ್ರೇಲಿಯಾ, ಅಮೆರಿಕದಲ್ಲಿ ಈ ಮಸಾಲೆ ಪುಡಿಗಳನ್ನು ನಿಷೇಧಿಸಲಾಗಿದೆ.
ಬಾಲಿವುಡ್ ನ ಕಾಂಟ್ರವರ್ಸಿ ಕ್ವೀನ್ ಎಂದೇ ಫೇಮಸ್ ಆಗಿರುವ ನಟಿ ರಾಖಿ ಸಾವಂತ್ ಕಳೆದ ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಖಿ ಆಸ್ಪತ್ರೆಗೆ ದಾಖಲಾಗಿರುವುದೆಲ್ಲಾ ಡ್ರಾಮಾ ಎಂದೇ ಹೇಳಲಾಗುತ್ತಿದೆ. ಆದರೆ ರಾಖಿ ಗರ್ಭಾಶಯ ತೊಂದರೆಯಿಂದ ಬಳಲುತ್ತಿದ್ದಾರಂತೆ. ನಾಳೆ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಹೇಳಿದ್ದಾರೆ. ನಟಿಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಖಿ ಸಾವಂತ್ ಗಂಭೀರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು. ಆಕೆ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ರಾಖಿ ಸಾವಂತ್ ಅವರ ಈ ಫೋಟೋಗಳನ್ನು ನೋಡಿದರೆ ಆಕೆಗೆ ಪ್ರಜ್ಞೆ ಇಲ್ಲದೇ ಮಲಗಿದ್ದಾರಾ ಅಥವಾ ಗಾಢ ನಿದ್ರೆಯಲ್ಲಿದ್ದಾರೋ ಎಂಬುದು ತಿಳಿದಿರಲಿಲ್ಲ. ಫೋಟೋದಲ್ಲಿ ನರ್ಸ್ ಬಿಪಿ ಪರೀಕ್ಷಿಸುತ್ತಿರುವುದನ್ನು ಕಾಣಬಹುದಾಗಿತ್ತು. ಹಿಂಭಾಗದಲ್ಲಿ ದೊಡ್ಡ ಇಸಿಜಿ ಯಂತ್ರವನ್ನೂ ಅಳವಡಿಸಲಾಗಿತ್ತು. ಈ ಕುರಿತಂತೆ ಆದಿಲ್ ಮಾತನಾಡಿದ್ದು, ಬಂಧನ ಭೀತಿಯಲ್ಲಿರುವ ರಾಖಿ ಡ್ರಾಮಾ ಮಾಡುತ್ತಿದ್ದಾಳೆ. ಜೈಲಿಗೆ ಹೋಗೋದನ್ನು ತಪ್ಪಿಸಲು ಆಸ್ಪತ್ರೆಯಲ್ಲಿ ಮಲಗಿದ್ದಾಳೆ…
ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಒಂದಾಗಿರುವ ಕಾನ್ಸ್ ಫಿಲ್ಮ್ ಫೆಸ್ಟಿವಲ್ ಇದೇ 14ರಿಂದ ಆರಂಭವಾಗಿದೆ. ಇದೀಗ ಮಾಜಿ ವಿಶ್ವ ಸುಂದರಿ ನಟಿ ಐಶ್ವರ್ಯಾ ರೈ ಕೈಗೆ ಬ್ಯಾಂಡೇಜ್ ಸುತ್ತಿಕೊಂಡೇ ಕಾನ್ಸ್ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ. ಪ್ರತಿವರ್ಷದಂತೆ ಈ ವರ್ಷವು ಕಾನ್ಸ್ ಚಿತ್ರೋತ್ಸವದಲ್ಲಿ ಬಾಲಿವುಡ್ ಬ್ಯೂಟಿ ನಟಿ ಐಶ್ವರ್ಯಾ ರೈ ಭಾಗಿಯಾಗಿದ್ದಾರೆ. ಕೈಗೆ ಬ್ಯಾಂಡೇಜ್ ಸುತ್ತಿಕೊಂಡೇ ಕಾನ್ಸ್ ರೆಡ್ ಕಾರ್ಪೆಟ್ ಮೇಲೆ ನಟಿ ಹೆಜ್ಜೆ ಹಾಕಿದ್ದಾರೆ. ನಟಿಯ ಕೈಗೆ ಪೆಟ್ಟಾಗಿದ್ರೂ ನಗು ಮುಖದಿಂದ ನಟಿ ಕಾರ್ಯಕ್ರಮದಲ್ಲಿ ಮಿಂಚಿರೋದು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಕಾನ್ಸ್ ರೆಡ್ ಕಾರ್ಪೆಟ್ನಲ್ಲಿ ನಟಿ ಫಲ್ಗುಣಿ ಶೇನ್ ಪೀಕಾಕ್ ಗೌನ್ನಲ್ಲಿ ಮಿಂಚಿದ್ದಾರೆ. ಐಶ್ವರ್ಯಾ ರೈ ವಿವಿಧ ಭಂಗಿಯಲ್ಲಿ ನಿಂತು ಪೋಸ್ ಕೊಡ್ತಿರೋದನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. 50ನೇ ವರ್ಷದ ವಯಸ್ಸಿನಲ್ಲಿಯೂ ನಟಿ ಗ್ಲ್ಯಾಮರಸ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಘಾಟ್ ಕೋಪರ್ ನಲ್ಲಿ ಬಿಲ್ ಬೋರ್ಡ್ ಕುಸಿದು ಬಿದ್ದು 16 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಹೀರಾತು ಫಲಕ ಅಳವಡಿಸುವ ಹೊಣೆ ಹೊತ್ತಿದ್ದ ಉದ್ಯಮಿ ಭವೇಶ್ ಭಿಂಡೆ ಎಂಬವರನ್ನು ರಾಜಸ್ಥಾನದ ಉದಯಪುರದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್ನ ಮಾಲೀಕ ಭಿಂಡೆ ಅವರನ್ನು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ಬಂಧಿಸಿದೆ. ಆರೋಪಿಯ ಬಂಧನಕ್ಕೆ ಮುಂಬೈ ಪೊಲೀಸರಿಂದ ಒಟ್ಟು ಎಂಟು ತಂಡಗಳನ್ನು ವಿವಿಧ ಸ್ಥಳಗಳಿಗೆ ಕಳುಹಿಸಲಾಗಿತ್ತು. ಆರೋಪಿ ಪದೇ ಪದೇ ಸ್ಥಳ ಬದಲಿಸುತ್ತಿದ್ದ. ಅಲ್ಲದೇ ಹೆಸರು ಬದಲಿಸಿಕೊಂಡು ಉದಯಪುರದ ಹೋಟೆಲ್ ಒಂದರಲ್ಲಿ ತಂಗಿದ್ದ. ಇದೀಗ ಆರೋಪಿಯ ಬಂಧನವಾಗಿದ್ದು, ಇಂದು ಬೆಳಗ್ಗೆ ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಾಹೀರಾತು ಫಲಕ ಅಳವಡಿಕೆ ಕಂಪನಿ, ಫಲಕ ಅಳವಡಿಸುವಲ್ಲಿ ನಿಯಮ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ. ಕಂಪನಿಗೆ 40*40 ಅಡಿಗಳ ಫಲಕ ಅಳವಡಿಸಲು ಮಾತ್ರ ಪರವಾನಿಗೆ ಇತ್ತು. ದುರ್ಘಟನೆಗೆ ಕಾರಣವಾದ ಜಾಹೀರಾತು ಫಲಕ 120*120 ಅಡಿ ಇತ್ತು. ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಆರೋಪಿ…
ವಾಹನಗಳಿಗೆ ಹಳೆಯ ನಂಬರ್ ಪ್ಲೇಟ್ ಬದಲು ಹೈಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಹೆಚ್ಎಸ್ಆರ್ಪಿ) ಅಳವಡಿಕೆಗೆ ಮೇ 31 ಕಡೆಯ ದಿನವಾಗಿದ್ದು,ತಪ್ಪಿದ್ದಲ್ಲ ದಂಡ ವಿಧಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಬಗ್ಗೆ ಈ ಹಿಂದೆ ಸಾರಿಗೆ ಇಲಾಖೆ ನೀಡಿದ್ದ ಗಡುವು ವಿಸ್ತರಣೆ ಮಾಡುವಂತೆ ವಾಹನಗಳ ಮಾಲೀಕರು ಒತ್ತಾಯಿಸಿದ್ದರು. ಕೆಲ ಹಳೆಯ ವಾಹನಗಳ ಕಂಪನಿಯ ಶೋರೂಮ್ಗಳ ಅಲಭ್ಯತೆ, ವೆಬ್ ಪೋರ್ಟಲ್ನ ಸರ್ವರ್ ಸಮಸ್ಯೆ ಹಾಗೂ ಪ್ರೀ ಬುಕ್ಕಿಂಗ್ ಸ್ಲಾಟ್ಗಳು ನಿಗದಿ ಆಗಿರುವುದರಿಂದ ನಿಗದಿತ ಸಮಯದಲ್ಲಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ವಾಹನ ಸವಾರರು ತಮ್ಮ ಅಳಲು ತೋಡಿಕೊಂಡಿದ್ದರು. ಇದರಿಂದ ಹೆಚ್ಎಸ್ಆರ್ಪಿ ಅಳವಡಿಕೆಗೆ ಮೇ 31ರವರೆಗೂ ಗಡುವು ನೀಡಲಾಗಿತ್ತು. ಅವಧಿ ವಿಸ್ತರಣೆಯ ಬಳಿಕವೂ ಸಾಕಷ್ಟು ವಾಹನಗಳ ಮಾಲೀಕರು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುತ್ತಿಲ್ಲ. ಆದ್ದರಿಂದ ಮೇ 31ರ ನಂತರವೂ ಹೆಚ್ಎಸ್ಆರ್ಪಿ ಪ್ಲೇಟ್ ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಮೊದಲ ಬಾರಿ ನಿಯಮ ಉಲ್ಲಂಘಿಸಿದವರಿಗೆ 500 ರೂ.…
ಸ್ಟಾರ್ ನಟ ಅಲ್ಲು ಅರ್ಜುನ್ ನಟನೆಯ ಟಾಲಿವುಡ್ ನ ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾತಂಡದಿಂದ ಮತ್ತೊಂದು ಅಪ್ಡೇಟ್ ಸಿಕ್ಕಿದೆ. ನಟಿ ಕಮ್ ನಿರೂಪಕಿ ಅನಸೂಯಾ ಪುಷ್ಪ 2ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಇದೀಗ ಚಿತ್ರದಲ್ಲಿ ಅವರ ಲುಕ್ ಅನ್ನು ಚಿತ್ರತಂಡ ರಿವೀಲ್ ಮಾಡಿದೆ. ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಟೀಮ್ನಿಂದ ನಟಿ ಅನಸೂಯಾ ಭಾರದ್ವಾಜ್ಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಅನಸೂಯಾ ಅವರ ಹುಟ್ಟುಹಬ್ಬಕ್ಕೆ ದಾಕ್ಷಾಯಿಣಿ ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಅಭಿಮಾನಿಗಳು ಫಸ್ಟ್ ಲುಕ್ಗೆ ಫಿದಾ ಆಗಿದ್ದಾರೆ. ಜಬರ್ದಸ್ತ್ ಲುಕ್ನಲ್ಲಿ ಮಾಸ್ ಆಗಿ ನಟಿ ಕಾಣಿಸಿಕೊಂಡಿದ್ದು, ಸೀರೆಯುಟ್ಟು ಮೈ ತುಂಬಾ ಆಭರಣ ಧರಿಸಿ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್ಗೆ ಖಡಕ್ ವಿಲನ್ ಆಗಿ ಅನಸೂಯಾ ನಟಿಸಿದ್ದಾರೆ. ಅಲ್ಲು ಅರ್ಜುನ್ ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ಚಿತ್ರದಲ್ಲಿ ನಟಿಸಿದ್ದು ಚಿತ್ರದ…