ವಿವಾದಗಳ ಮೂಲಕವೇ ಸದ್ದು ಸುದ್ದಿಯಲ್ಲಿರುವ ಬಾಲಿವುಡ್ ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಖಿಗೆ ಹೃದಯದ ಸಮಸ್ಯೆ ಕಾಣಿಸಿಕೊಂಡಿದೆ. ಈ ಬಗ್ಗೆ ರಾಖಿ ಸಾವಂತ್ ಪಾಪರಾಟ್ಜಿಯೊಬ್ಬರಿಗೆ ಸಂದೇಶ ಕಳಿಸಿ ತಿಳಿಸಿದ್ದಾರಂತೆ. ಆ ವಿಷಯನ್ನು ಪಾಪರಾಟ್ಜಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ನಿಜಕ್ಕೂ ರಾಖಿ ಸಾವಂತ್ ಆರೋಗ್ಯ ಹದಗೆಟ್ಟಿದೆಯೇ ಅಥವಾ ಪ್ರಚಾರಕ್ಕಾಗಿ ಹೀಗೆ ಮಾಡುತ್ತಿದ್ದಾರೆಯೇ ಎಂಬ ಅನುಮಾನವೂ ಹುಟ್ಟಿಕೊಂಡಿದೆ. ರಾಖಿಯ ಒಂದು ಕೈಗೆ ಆಕ್ಸಿಮೀಟರ್ ಮತ್ತೊಂದು ಕೈಗೆ ಬಿಪಿ ಯಂತ್ರವನ್ನು ಹಾಕಿ, ರಾಖಿ ಬೆಡ್ ಮೇಲೆ ಮಲಗಿರುವ ಚಿತ್ರವನ್ನು ಪಾಪರಾಟ್ಜಿಯೊಬ್ಬರು ಹಂಚಿಕೊಂಡಿದ್ದಾರೆ. ರಾಖಿಗೆ ಹೃದಯ ಸಮಸ್ಯೆ ಎದುರಾಗಿದೆ ಹಾಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಾಪರಾಜಿ ಬರೆದುಕೊಂಡಿದ್ದಾರೆ. ರಾಖಿಯ ಮಾಜಿ ಪತಿ ರಿತೇಶ್, ತಮಗೆ ರಾಖಿಯ ಆರೋಗ್ಯದ ಸಮಸ್ಯೆ ಬಗ್ಗೆ ಮಾಹಿತಿ ಇಲ್ಲ, ಮಾಹಿತಿ ತಿಳಿದ ಕೂಡಲೇ ತಿಳಿಸುವುದಾಗಿ ಹೇಳಿದ್ದಾರೆ. ಇನ್ನು ರಾಖಿಯ ಮಾಜಿ ಪತಿ, ಮೈಸೂರಿನ ಆದಿಲ್, ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಇದು ತಮ್ಮ ಪಾಲಿನ ಅತ್ಯಂತ ಖುಷಿಯ ದಿನ ಎಂದು…
Author: Author AIN
ಜಿಲ್ಲೆಯ 1,49,262 ರೈತರಿಗೆ ₹195.55 ಕೋಟಿ ಬರ ಪರಿಹಾರ ಜಮಾ ಮಾಡಲಾಗುತ್ತಿದೆ. ಪರಿಹಾರ ಜಮಾ ಆಗದ ರೈತರು ಆಯಾ ತಾಲ್ಲೂಕಿನಲ್ಲಿ ಆರಂಭಿಸಿರುವ ಸಹಾಯವಾಣಿ ಕೇಂದ್ರಗಳನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನದಲ್ಲಿ ಎಸ್ಡಿಆರ್ಎಫ್, ಎನ್ಡಿಆರ್ಎಫ್ ನಿಯಮಾನುಸಾರ ಜಮಾ ಮಾಡಲಾಗುತ್ತಿದೆ. ಮಳೆಯಾಶ್ರಿತ ಪ್ರತಿ ಹೆಕ್ಟೇರ್ಗೆ ₹8,500, ನೀರಾವರಿಯ ಪ್ರತಿ ಹೆಕ್ಟೇರ್ಗೆ ₹17 ಸಾವಿರದಂತೆ ಒಬ್ಬ ರೈತರಿಗೆ ಗರಿಷ್ಠ ಎರಡು ಹೆಕ್ಟೇರ್ವರೆಗೂ ನೀಡಲಾಗುತ್ತದೆ. ಬೆಳೆ ಹಾನಿಯಾದ ರೈತರ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶ ಹಾಗೂ ಬೆಳೆ ಸಮೀಕ್ಷೆ ವರದಿ ಆಧಾರದ ಮೇಲೆ ಪರಿಹಾರ ಪಾವತಿಸಲು ಕ್ರಮ ವಹಿಸಲಾಗಿರುತ್ತದೆ. ಈಗಾಗಲೇ ರೈತರ ಖಾತೆಗೆ ನೇರವಾಗಿ ಪರಿಹಾರ ಜಮಾ ಆಗಿದ್ದು, ಪರಿಹಾರ ಬಾರದಿರುವ, ಬಂದ ಪರಿಹಾರದಲ್ಲಿ ವ್ಯತ್ಯಾಸವಿದ್ದರೆ, ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಿದ್ದು, ಈಗಾಗಲೇ ಸರ್ಕಾರದಿಂದ 1 ರಿಂದ 9ನೇ ಹಂತದವರೆಗೆ ಜಿಲ್ಲೆಯ 1,69,175 ರೈತರಿಗೆ ತಲಾ ₹2 ಸಾವಿರದಂತೆ ಫೆಬ್ರುವರಿ ತಿಂಗಳಿನಲ್ಲಿಯೇ ₹33.53…
‘ಉಸಿರಿಗಿಂತ ನೀನೇ ಹತ್ತಿರ’, ನಾವಿಕ, ಅತಿರಥ, ನುಗ್ಗೇಕಾಯಿ, ಲಂಕೇ, ಡಿಎನ್ಎ, ಲೋಕಲ್ ಟ್ರೇನ್ ಇನಾಮ್ದಾರ್ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಘಳಿಸಿರುವ ನಟಿ ಎಸ್ತಾರ್ ನರೋನ್ಹಾ ಹೇಳಿಕೆಯೊಂದು ಚರ್ಚೆಗೆ ಕಾರಣವಾಗಿದೆ. ಕನ್ನಡದೊಂದಿಗೆ ತೆಲುಗಿನಲ್ಲಿ ದೊಡ್ಡ ಪ್ರಮಾಣದ ಅಭಿಮಾನಿಗಳನ್ನು ಹೊಂದಿರುವ ನಟಿಯ ಹೇಳಿಕೆ ವೈರಲ್ ಆಗಿದೆ. ಮದುವೆಯಾದ ಕೆಲವೇ ದಿನಗಳಲ್ಲಿ ಗಂಡನಿಂದ ದೂರವಾದ ಎಸ್ತಾರ್ ಹೇಳಿಕೆ ವೈರಲ್ ಆಗಿದೆ. 2019ರಲ್ಲಿ ಗಾಯಕ ಹಾಗೂ ರಾಪರ್ ನೋಯೆಲ್ ಸೀನ್ರನ್ನು ವಿವಾಹವಾದ ಎಸ್ತರ್ 16 ದಿನದಲ್ಲೇ ಪತಿಯಿಂದ ದೂರವಾದರು. ಒಂದು ವರ್ಷದ ಬಳಿಕ ಆತನಿಂದ ವಿಚ್ಛೇದನ ಪಡೆದುಕೊಂಡಿದ್ದರು. ಇತ್ತೀಚೆಗಿನ ಸಂದರ್ಶನವೊಂದರಲ್ಲಿ ಎಸ್ತರ್ ನೊರೊನ್ಹಾ ಶಾಕಿಂಗ್ ಕಾಮೆಎಂಟ್ ಮಾಡಿದ್ದು, ಇದು ವೈರಲ್ ಆಗಿದೆ. ತಾವು ಎರಡನೇ ಮದುವೆಯಾಗಲು ಸಿದ್ಧ ಎಂದು ಅವರು ಹೇಳಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ನನಗೆ ಜೀವನದಲ್ಲಿ ಒಬ್ಳೇ ಇರೋಕೆ ಬರೋದಿಲ್ಲ. ಏಕಾಂಗಿಯಾಗಿ ಬದುಕೋಕೆ ನನಗೆ ಸಾಧ್ಯವಿಲ್ಲ. ನಾನು ಮತ್ತೊಮ್ಮೆ ಮದುವೆಯಾಗುತ್ತೇನೆ. ನನಗೊಂದು ಸುಂದರ ಬದುಕು ಬೇಕು. ಅದಕ್ಕಾಗಿ ಸರಿಯಾದ ಸಂಗಾತಿಯ ಹುಡುಕಾಟದಲ್ಲಿದ್ದೇನೆ. ಆದರೆ,…
ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. 2021 ರಂದು ಮೊದಲ ಹೆಣ್ಣು ಮಗವನ್ನು ಬರಮಾಡಿಕೊಂಡಿದ್ದ ಜೋಡಿ 2024ರಲ್ಲಿ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ವಾಮಿಕಾಗೆ ನಾಲ್ಕು ವರ್ಷವಾಗಿದ್ದರು ಇದುವರೆಗೂ ಆಕೆಯ ಮುಖವನ್ನು ಜನರಿಗೆ ತೋರಿಸಿಲ್ಲ. ಮಕ್ಕಳ ಗೌಪ್ಯತೆ ಕಾಪಾಡುವಂತೆ ಪಾಪಾರಾಜಿಗಳಲ್ಲಿ ದಂಪತಿ ಬೇಡಿಕೊಂಡಿದ್ದರು. ವಿರಾಟ್ ಮತ್ತು ಅನುಷ್ಕಾ ಅವರ ಎರಡನೇ ಮಗು ಅಕಾಯ್ ಕೊಹ್ಲಿ ಕೂಡಾ ಹುಟ್ಟಿದಂದಿನಿಂದ ದಂಪತಿ ಮಗುವಿನ ಮುಖ ಎಲ್ಲೂ ತೋರಿಸಿಲ್ಲ. ಮಗುವಿನ ಚಿತ್ರಗಳನ್ನು ಕ್ಲಿಕ್ ಮಾಡಬೇಡಿ ಎಂಬ ದಂಪತಿಗಳ ಕೋರಿಕೆಗೆ ಪಾಪಾರಾಜಿಗಳು ಬದ್ಧರಾಗಿದ್ದಾರೆ. ಇದೀಗ ಪಾಪಾರಾಜಿಗಳು ತಮ್ಮ ಮನವಿಯನ್ನು ಗೌರವಿಸಿದ್ದಕ್ಕಾಗಿ ವಿರುಷ್ಕಾ ದಂಪತಿ ಅವರಿಗೆ ದುಬಾರಿ ಉಡುಗೊರೆ ನೀಡಿದ್ದಾರೆ. ಮೇ 14, 2024 ರಂದು, ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಮ್ಮ ಮಕ್ಕಳ ಚಿತ್ರಗಳನ್ನು ಕ್ಲಿಕ್ ಮಾಡದಿರುವ ವಿನಂತಿಯನ್ನು ಶ್ರದ್ಧೆಯಿಂದ ಅನುಸರಿಸಿದ್ದಕ್ಕಾಗಿ ಕ್ಯಾಮರಾಮನ್ಗಳಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಜೊತೆಗೆ ದಂಪತಿ ಮೆಚ್ಚುಗೆಯ ಟೋಕನ್ ಆಗಿ ಎಲ್ಲರಿಗೂ ಗಿಫ್ಟ್ ಹ್ಯಾಂಪರ್ ಕಳುಹಿಸಿದ್ದಾರೆ. ತಮ್ಮ ಸೋಷ್ಯಲ್ ಮೀಡಿಯಾಗಳಲ್ಲಿ…
ಮಾಲಿವುಡ್ನ ಖ್ಯಾತ ನಟ ಟೊವಿನೋ ಥಾಮಸ್ ಮತ್ತು ನಿರ್ದೇಶಕ ಸನಲ್ ಕುಮಾರ್ ಶಶಿಧರನ್ ನಡುವಿನ ಜಗಳ ದಿನಕ್ಕೊಂದು ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತಿದೆ. ಸನಲ್ ಕುಮಾರ್ ಶಶಿಧರನ್ ನಿರ್ದೇಶನದಲ್ಲಿ ‘ವಳಕ್ಕು’ ಸಿನಿಮಾ ಮೂಡಿಬಂದಿದ್ದು, ಚಿತ್ರದ ಪ್ರಮುಖ ಪಾತ್ರದಲ್ಲಿ ಟೊವಿನೋ ಥಾಮಸ್ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಟೊವಿನೋ ಬಂಡವಾಳ ಕೂಡ ಹೂಡಿದ್ದಾರೆ. ಆದರೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗುವುದಕ್ಕೂ ಮುನ್ನವೇ ಆನ್ಲೈನ್ನಲ್ಲಿ ಈ ಸಿನಿಮಾವನ್ನು ಸನಲ್ ಕುಮಾರ್ ಶಶಿಧರನ್ ಲೀಕ್ ಮಾಡಿದ್ದಾರೆ. ‘ವಳಕ್ಕು’ ಸಿನಿಮಾದ ಬಿಡುಗಡೆ ವಿಚಾರವಾಗಿ ಟೊವಿನೋ ಥಾಮಸ್ ಮತ್ತು ಸನಲ್ ಕುಮಾರ್ ಶಶಿಧರನ್ ನಡುವೆ ಮೊದಲಿನಿಂದಲೂ ಮನಸ್ತಾಪ ಇತ್ತು. ಅದು ಈಗ ಅತಿರೇಕಕ್ಕೆ ಹೋಗಿದೆ. ಸಿನಿಮಾದ ಬಿಡುಗಡೆಗೆ ಸಂಬಂಧಿಸಿದಂತೆ ಟೊವಿನೋ ಥಾಮಸ್ ಮೂಗು ತೂರಿಸುತ್ತಿದ್ದಾರೆ ಎಂದು ಈ ಮೊದಲು ಸನಲ್ ಕುಮಾರ್ ಶಶಿಧರನ್ ಆರೋಪಿಸಿದ್ದರು. ಈ ಸಿನಿಮಾ ಸಿದ್ಧವಾಗಿ ಬಹಳ ಸಮಯ ಕಳೆದಿದೆ. ಆದರೆ ಹೀರೋ ಮತ್ತು ನಿರ್ದೇಶಕನ ನಡುವೆ ಕೆಲವು ವಿಚಾರಗಳು ಇತ್ಯರ್ಥ ಆಗದ ಕಾರಣ ಇದರ ಬಿಡುಗಡೆ ತಡವಾಗಿದೆ. ಇದರಿಂದ ನಿರ್ದೇಶಕ ಸನಲ್ ಕುಮಾರ್ ಶಶಿಧರನ್…
ತೆಲುಗು ಚಿತ್ರರಂಗದ ಸ್ಟಾರ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಪೀಠಾಪುರಂ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಜನಸೇನಾ ಪಕ್ಷದ ಸಂಸ್ಥಾಪಕರೂ ಆಗಿರುವ ಪವನ್ ಕಲ್ಯಾಣ್ ಕಳೆದ ಕೆಲ ವರ್ಷದಿಂದಲೂ ಆಂಧ್ರದ ಆಡಳಿತ ಪಕ್ಷ ವೈಸಿಪಿ ವಿರುದ್ಧ ಹೋರಾಟ ನಡೆಸುತ್ತಿದ್ದು, ಪಕ್ಷವನ್ನು ಅಧಿಕಾರದಿಂದ ಇಳಿಸಲೇ ಬೇಕೆಂಬ ಹಠ ತೊಟ್ಟಿದ್ದಾರೆ. ಅಂತೆಯೇ ಪವನ್ ಕಲ್ಯಾಣ್ ಪರವಾಗಿ ರಾಮ್ ಚರಣ್ ತೇಜ ಸೇರಿದಂತೆ ಇನ್ನೂ ಕೆಲವು ಸೆಲೆಬ್ರಿಟಿಗಳು ಪೀಠಾಪುರಂ ಗೆ ತೆರಳಿ ಪ್ರಚಾರ ಸಹ ಮಾಡಿದ್ದಾರೆ. ಆದರೆ ಮೆಗಾಸ್ಟಾರ್ ಕುಟುಂಬಕ್ಕೆ ಸೇರಿದ ಅಲ್ಲು ಅರ್ಜುನ್ ಮಾತ್ರ, ಪವನ್ ರ ಎದುರಾಳಿ ಪಕ್ಷವಾದ ವೈಸಿಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದರು. ಇದು ಮೆಗಾಸ್ಟಾರ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ತಮ್ಮ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ಎದುರಾದ ಬೆನ್ನಲ್ಲೆ ಇದೀಗ ಅಲ್ಲು ಅರ್ಜುನ್ ಸ್ಪಷ್ಟನೆ ನೀಡಿದ್ದಾರೆ. ‘ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸಂಭಂಧಿಸಿದ ವ್ಯಕ್ತಿಯಲ್ಲ. ರಾಜಕೀಯ ಪಕ್ಷಗಳ ವಿಷಯದಲ್ಲಿ ನಾನು ತಟಸ್ಥ. ಚಿಕ್ಕಪ್ಪ…
ಉಕ್ರೇನ್ ಹಾಗೂ ರಷ್ಯಾದ ನಡುವಿನ ಯುದ್ದ ಆರಂಭವಾಗಿ ಸಾಕಷ್ಟು ಸಮಯ ಕಳೆದಿದೆ. ಈ ಯುದ್ಧದಿಂದ ಸಾಕಷ್ಟು ಅಮಾಯಕ ಜೀವಗಳು ಬಲಿಯಾಗಿವೆ. ಇದೀಗ ಉಕ್ರೇನ್ ಸೈನಿಕರು ತಮ್ಮದೇ ಅಧ್ಯಕ್ಷರ ವಿರುದ್ಧ ತಿರುಗಿ ಬಿದಿದ್ದಾರೆ. ಉಕ್ರೇನ್ ಮೇಲೆ ಸಮರ ಸಾರಿರುವ ರಷ್ಯಾ ದಿನಕಳೆದಂತೆ ಉಕ್ರೇನ್ ಮೇಲಿನ ಹಿಡಿತವನ್ನು ಬಿಗಿಗೊಳಿಸುತ್ತಿದ್ದು, ಉಕ್ರೇನ್ ಹಿಡಿತದಲ್ಲಿದ್ದ ಪ್ರದೇಶಗಳನ್ನು ತನ್ನ ಕೈವಶ ಮಾಡಿಕೊಳ್ಳುತ್ತಿದೆ. ಈ ಮಧ್ಯೆ ಉಕ್ರೇನ್ ಸೈನಿಕರೇ ತಮ್ಮ ಅಧ್ಯಕ್ಷ ಝೆಲೆನ್ಸ್ಕಿ ವಿರುದ್ಧ ತಿರುಗಿಬಿದ್ದಿದ್ದು, ರಷ್ಯಾ ವಿರುದ್ಧ ಹೋರಾಟ ಮಾಡಲು ಅಗತ್ಯ ಶಸ್ತ್ರಾಸ್ತ್ರ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಲಗಳ ಪ್ರಕಾರ ಯುದ್ಧದಲ್ಲಿ ರಷ್ಯಾ ಸೈನಿಕರು ಮುನ್ನಡೆಯಲ್ಲಿದ್ದು, ಉಕ್ರೇನ್ನ ದೊಡ್ಡ ಪ್ರಾಂತ್ಯ ಮತ್ತು ರಷ್ಯಾ ಗಡಿಗೆ ಹತ್ತಿರದಲ್ಲೇ ಇರುವ ಖಾರ್ಕೀವ್ ಮೇಲೆ ರಷ್ಯಾ ಸೈನಿಕರು ಬಹುತೇಕ ಹಿಡಿತ ಸಾಧಿಸಿದ್ದಾರೆ. ಕಳೆದ 2 ದಿನದಲ್ಲಿ ಭರ್ಜರಿ 10 ಹಳ್ಳಿ, ಹಾಗೂ ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ್ದಾರೆ. ಉಕ್ರೇನ್ ಸೈನಿಕರಿಗೆ ಸೂಕ್ತ ಶಸ್ತ್ರಾಸ್ತ್ರಗಳು ಸಿಗದ ಕಾರಣ ಯಾವುದೇ ವಿರೋಧ ಇಲ್ಲದೆ…
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸಹೋದರಿ, ನಟಿ ಶಮಿತಾ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿ ಎಂಡೊಮೆಟ್ರಿಯೊಸಿಸ್ ಸಮಸ್ಯೆಯಿಂದ ಬಳಲುತ್ತಿದ್ದು ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ವಿಡಿಯೋ ಹಂಚಿಕೊಂಡ ನಟಿ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಶಮಿತಾ ಶೆಟ್ಟಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ ಆಸ್ಪತ್ರೆಯಲ್ಲಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ವಿಡಿಯೋ ಮತ್ತು ಕ್ಯಾಪ್ಷನ್ನಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಕಾರಣವನ್ನು ತಿಳಿಸಿದ್ದಾರೆ. ಜೊತೆಗೆ ಹೊರಗಿರುವ ಎಲ್ಲಾ ಮಹಿಳೆಯರಿಗೂ ಈ ಬಗ್ಗೆ ಜಾಗೃತರಾಗಿರುವಂತೆ, ಪರೀಕ್ಷೆ ಮಾಡಿಸಿಕೊಳ್ಳಲು ಸಲಹೆ ನೀಡಿದ್ದಾರೆ. ಆಸ್ಪತ್ರೆಯಿಂದ ತಮ್ಮ ವಿಡಿಯೋ ಶೇರ್ ಮಾಡಿಕೊಂಡ ಶಮಿತಾ ಶೆಟ್ಟಿ, ”ಸುಮಾರು ಶೇ. 40ರಷ್ಟು ಮಹಿಳೆಯರು ಎಂಡೊಮೆಟ್ರಿಯೊಸಿಸ್ನಿಂದ ಬಳಲುತ್ತಿದ್ದಾರೆ ಎಂಬುದು ನಿಮಗೆ ತಿಳಿದಿದೆಯೇ. ನಮ್ಮಲ್ಲಿ ಹೆಚ್ಚಿನವರಿಗೆ ಈ ಕಾಯಿಲೆ ಬಗ್ಗೆ ತಿಳಿದಿಲ್ಲ. ನನ್ನ ನೋವಿನ ಮೂಲ ಕಾರಣವನ್ನು ಕಂಡುಕೊಳ್ಳುವವರೆಗೂ ಕೆಲಸ ನಿಲ್ಲಿಸದ ನನ್ನ ವೈದ್ಯರಾದ ಡಾ. ನೀತಾ ವಾರ್ತಿ ಮತ್ತು ಡಾ. ಸುನೀತಾ ಬ್ಯಾನರ್ಜಿ ಇಬ್ಬರಿಗೂ ಧನ್ಯವಾದ ಅರ್ಪಿಸಲು ಬಯಸುತ್ತೇನೆ. ಸದ್ಯ ಶಸ್ತ್ರಚಿಕಿತ್ಸೆಯಿಂದ…
ದೈತ್ಯ ಟೆಲಿಕಾಂ ಸಂಸ್ಥೆಯಾದ ರಿಲಯನ್ಸ್ ಜಿಯೋ ತನ್ನ ಜಿಯೋ ಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಈ ಹೊಸ ಯೋಜನೆಯು ಒಟಿಟಿ ಪ್ಲಾಟ್ ಫಾರ್ಮ್ಗಳನ್ನು ಅತಿಹೆಚ್ಚು ಬಳಕೆ ಮಾಡುವವರಿಗೆ ಹೇಳಿಮಾಡಿಸಿದಂತಿದೆ. ಜಿಯೋ ತನ್ನ ಗ್ರಾಹಕರಿಗಾಗಿ ಕೇವಲ 888 ರೂ.ಗಳ ‘ಅಲ್ಟಿಮೇಟ್ ಸ್ಟ್ರೀಮಿಂಗ್ ಪ್ಲಾನ್’ ಎಂಬ ನೂತನ ಪೋಸ್ಟ್ ಪೇಯ್ಡ್ ಪ್ಲ್ಯಾನ್ ಬಿಡುಗಡೆ ಮಾಡಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರಿಗೆ ವೇಗದ ಇಂಟರ್ನೆಟ್ ಸಂಪರ್ಕ, ಡಿಜಿಟಲ್ ಟಿವಿ ಪ್ರಸಾರ ಮತ್ತು 15 ಪ್ರೀಮಿಯಂ ಒಟಿಟಿ ಆ್ಯಪ್ಗಳು ಲಭ್ಯವಾಗಲಿವೆ. ಹೊಸ ಬಳಕೆದಾರರಲ್ಲದೇ, ಈಗಾಗಲೇ ಅಸ್ತಿತ್ವದಲ್ಲಿರುವ ಜಿಯೋ ಫೈಬರ್ ಮತ್ತು ಜಿಯೋ ಏರ್ ಫೈಬರ್ ಬಳಕೆದಾರರು ಸಹ ಈ ಯೋಜನೆಗೆ ಬದಲಾಯಿಸಬಹುದು ಎಂದು ಜಿಯೋ ಮಾಹಿತಿ ನೀಡಿದೆ. ಅನಿಯಮಿತ (ಅನ್ಲಿಮಿಟೆಡ್) ಡೇಟಾ ಪ್ರಯೋಜನ ಸಹ ಲಭ್ಯವಾಗಲಿದ್ದು, ಬಳಕೆದಾರರು ತಮ್ಮ ಅಚ್ಚುಮೆಚ್ಚಿನ ಅಪ್ಲಿಕೇಷನ್ಗಳಲ್ಲಿ ಯಾವಾಗ ಮತ್ತು ಎಲ್ಲಿ ಬೇಕಾದರೂ ಕಾರ್ಯಕ್ರಮಗಳ ವೀಕ್ಷಣೆ ಮಾಡಲು ಅವಕಾಶ ಇದೆ. ಜಿಯೋ ತಂದಿರುವ ಈ ಹೊಸ…
ಬಿಗ್ಬಾಸ್ ಚೆಲುವೆ, ಚಾರ್ಲಿ ಬೆಡಗಿ ಸಂಗೀತಾ ಶೃಂಗೇರಿ ಇತ್ತೀಚೆಗೆ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ನಟಿಯ ಬರ್ತಡೇ ಪಾರ್ಟಿಯಲ್ಲಿ ಬಿಗ್ ಬಾಸ್ ಮಂದಿ ಭಾಗಿಯಾಗಿ ನಟಿಗೆ ಶುಭ ಹಾರೈಸಿದ್ದಾರೆ. ಸಂಗೀತಾ ಶೃಂಗೇರಿ ಅವರು ಜನ್ಮದಿನದ ಪ್ರಯುಕ್ತ ಆಕೆಯ ಕುಟುಂಬಸ್ಥರು ಮಧ್ಯರಾತ್ರಿಯೇ ಡೆಕೋರೇಶನ್ ಮಾಡಿ, ಕೇಕ್ ಕಟ್ ಮಾಡಿಸಿ ಸರ್ಪ್ರೈಸ್ ನೀಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಸ್ಪರ್ಧಿ ಸಂಗೀತಾ ಶೃಂಗೇರಿ ಜನ್ಮದಿನಕ್ಕೆ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಆಗಮಿಸಿ ಸ್ನೇಹಿತೆಗೆ ಶುಭ ಹಾರೈಸಿದ್ದಾರೆ. ಸಂಗೀತಾ ಶೃಂಗೇರಿ ಅವರ ಜನ್ಮದಿನಕ್ಕೆ ನೀಲಿ, ಬಿಳಿ ಬಣ್ಣದ ಥೀಮ್ನಲ್ಲಿ ಕೇಕ್ ರೆಡಿ ಮಾಡಿಸಲಾಗಿತ್ತು. ಕೇಕ್ ಕತ್ತರಿಸಿದ ನಟಿ ಸಂಗೀತ ಸಂಭ್ರಮ ಪಟ್ಟಿದ್ದಾರೆ. ಸಂಗೀತಾ ಶೃಂಗೇರಿ ಅವರ ಬರ್ತ್ಡೇ ಪಾರ್ಟಿಯಲ್ಲಿ ತಂದೆ-ತಾಯಿ, ಅಣ್ಣ-ಅತ್ತಿಗೆ ಸಖತ್ ಎಂಜಾಯ್ ಮಾಡಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಇದ್ದಷ್ಟು ದಿನವೂ ಸಂಗೀತಾ ಶೃಂಗೇರಿ, ಡ್ರೋನ್ ಪ್ರತಾಪ್ ನಡುವೆ ಅಕ್ಕ-ತಮ್ಮನ ಬಾಂದವ್ಯ ಇತ್ತು. ಅದು ಈಗಲೂ ಮುಂದುವರೆದಿದೆ. ಸಂಗೀತ ಹುಟ್ಟುಹಬ್ಬಕ್ಕೆ ಶುಭ…