Author: Author AIN

ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರ ವಿಚ್ಛೇದಿತ ಪತ್ನಿ ಮೆಲಿಂದಾ ಫ್ರೆಂಚ್ ಗೇಟ್ಸ್ ಅವರು ಗೇಟ್ಸ್ ಫೌಂಡೇಶನ್​ ಗೆ ರಾಜೀನಾಮೆ ನೀಡಿದ್ದಾರೆ.  ಬಿಲ್​ಗೇಟ್ಸ್​ ಜೊತೆ ವಿಚ್ಛೇದನ ಪಡೆದ ಮೂರು ವರ್ಷದ ಬಳಿಕ ಮಿಲಿಂಡಾ ಫ್ರೆಂಚ್​​ ಗೇಟ್ಸ್ ಅವರು ಬಿಲ್​ ಆ್ಯಂಡ್​ ಮಿಲಿಂಡಾ ಗೇಟ್ಸ್​ ಫೌಂಡೇಷನ್​ನ ಸಹ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದಾರೆ. ವಿಶ್ವದ ಬಿಲಿಯನೇರ್​​ ಉದ್ಯಮಿ ಬಿಲ್​ ಗೇಟ್ಸ್​ 20 ವರ್ಷಗಳ ಹಿಂದೆ ಪತ್ನಿ ಮಿಲಿಂಡಾ ಜೊತೆ ಸೇರಿ ವಿಶ್ವದ ಅತೀ ದೊಡ್ಡ ಸಾಮಾಜಿಕ ಸೇವಾ ಸಂಸ್ಥೆ ಸ್ಥಾಪಿಸಿದ್ದರು. ಈ ಮೂಲಕ ವಿವಿಧ ದೇಶಗಳಲ್ಲಿ ಸಾಮಾಜಿಕ ಕಾರ್ಯ ನಿರ್ವಹಿಸಿದ್ದಾರೆ. “ಬಿಲ್ ಮತ್ತು ನಾನು ಒಟ್ಟಾಗಿ ನಿರ್ಮಿಸಿದ ಸಂಸ್ಥೆ​ಯ ಬಗ್ಗೆ ನನಗೆ ಹೆಮ್ಮೆ ಇದೆ. ಇದರೊಂದಿಗೆ ನಾವು ಜಗತ್ತಿನೆಲ್ಲೆಡೆ ಅಸಾಮಾನತೆ ಪರಿಹಾರ ಸೇರಿದಂತೆ ಹಲವು ಅದ್ಭುತ ಕೆಲಸಗಳನ್ನು ಮಾಡಿದ್ದೇವೆ” ಎಂದು ಮಿಲಿಂಡಾ ತಿಳಿಸಿದ್ದಾರೆ. ಇದೇ ವೇಳೆ, ಫೌಂಡೇಷನ್​ ಸಿಇಒ ಮಾರ್ಕ್​​ ಸುಜಾಮ್ಯಾನ್​ ಅವರನ್ನು ಶ್ಲಾಘಿಸಿದ್ದಾರೆ. ಮಿಲಿಂಡಾ ರಾಜೀನಾಮೆಗೆ ಪ್ರತಿಕ್ರಿಯಿಸಿರುವ ಬಿಲ್ ಗೇಟ್ಸ್​​, ಸಂಸ್ಥೆಯಲ್ಲಿ ಮಿಲಿಂಡಾ…

Read More

ಒಂದು ವಾರದ ಹಿಂದೆ ದಕ್ಷಿಣ ಆಫ್ರಿಕಾದ ಕರಾವಳಿಯ ಜಾರ್ಜ್ ನಗರದಲ್ಲಿ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಕಟ್ಟಡ ಕುಸಿದುಬಿದ್ದ ಘಟನೆಯಲ್ಲಿ ಸಾವಿನ ಸಂಖ್ಯೆ 32ಕ್ಕೇ ಏರಿಕೆ ಆಗಿದೆ. ಅವಶೇಷಗಳಡಿ ಬದುಕುಳಿದವರನ್ನು ಹುಡುಕುವ ಪ್ರಯತ್ನ ನಿರಂತರವಾಗಿ ನಡೆಯುತ್ತಿವೆ ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನೊಬ್ಬನನ್ನು ರಕ್ಷಿಸಲಾಗಿದೆ. ಈತ ಆಹಾರ, ನೀರಿಲ್ಲದೆ ಆರು ದಿನಗಳ ಕಾಲ ಅವಶೇಷಗಳಡಿ ಸಿಲುಕಿದ್ದ. ರಕ್ಷಣಾ ಸಿಬ್ಬಂದಿ ಈ ಕಾರ್ಮಿಕನನ್ನು ಜೀವಂತವಾಗಿ ಹೊರತಂದಾಗ ಅಲ್ಲಿ ನೆರೆದಿದ್ದವರ ಕಣ್ಣಾಲಿಗಳು ತೇವಗೊಂಡಿದ್ದವು. ಆರು ದಿನಗಳ ಬಳಿಕ ಬದುಕುಳಿದ ವ್ಯಕ್ತಿಯ ಹೆಸರು ಗೇಬ್ರಿಯಲ್ ಗುವಾಂಬೆ (32). ಸದ್ಯ ಈತತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಬದುಕಿರುವ ಸಾಧ್ಯತೆ ಇದ್ದು, ಕಾರ್ಯಾಚರಣೆ ತೀವ್ರಗೊಂಡಿದೆ. ಸಾವಿನ ಸಂಖ್ಯೆಯೂ ಹೆಚ್ಚುತ್ತಲೇ ಇದೆ. ಸೋಮವಾರ 11 ಶವಗಳನ್ನು ಹೊರತೆಗೆಯಲಾಗಿದ್ದು, ಇನ್ನೂ 20 ಕಾರ್ಮಿಕರು ಕಾಣೆಯಾಗಿದ್ದಾರೆ. ಮೇ 6ರಂದು ಕಟ್ಟಡ ಕುಸಿದು ಬಿದ್ದಿದ್ದು, 600ಕ್ಕೂ ಹೆಚ್ಚು ತುರ್ತು ಸೇವೆ…

Read More

ಇಸ್ರೇಲ್‌-ಹಮಾಸ್‌‍ ಸಂಘರ್ಷಕ್ಕೆ ವಿಶ್ವಸಂಸ್ಥೆಯಲ್ಲಿ ಕೆಲಸ ಮಾಡುವ ಭಾರತೀಯ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ.ಇಸ್ರೇಲ್-ಹಮಾಸ್‌ ಸಂಘರ್ಷ ಆರಂಭಗೊಂಡ ನಂತರ ವಿಶ್ವ ಸಂಸ್ಥೆಯ ಅಂತರರಾಷ್ಟ್ರೀಯ ಸಿಬ್ಬಂದಿಯೊಬ್ಬರು ಬಲಿಯಾದ ಮೊದಲ ಘಟನೆ ಇದಾಗಿದೆ. ಮೃತ ವ್ಯಕ್ತಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ವಿಭಾಗದ ಸದಸ್ಯರಾಗಿದ್ದರು. ಜೊತೆಗೆ ಭಾರತೀಯ ಸೇನೆಯ ಮಾಜಿ ಸಿಬ್ಬಂದಿಯಾಗಿದ್ದರು ಎಂದು ತಿಳಿದುಬಂದಿದ್ದರೂ ಅವರ ಗುರುತನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ರಫಾದಲ್ಲಿ ಭಾರತೀಯ ವ್ಯಕ್ತಿಯ ಜೊತೆಗಿದ್ದ ಇನ್ನೊಬ್ಬ ವಿಶ್ವ ಸಂಸ್ಥೆಯ ಸಿಬ್ಬಂದಿ ಗಾಯಗೊಂಡಿದ್ದರು. ಅವರು ರಫಾದಲ್ಲಿರುವ ಯುರೋಪಿಯನ್‌ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು. ವಿಶ್ವಸಂಸ್ಥೆ ಸಿಬ್ಬಂದಿ ಮೇಲಿನ ಎಲ್ಲಾ ದಾಳಿಗಳನ್ನು ಗುಟೆರಸ್‌‍ ಖಂಡಿಸಿದ್ದಾರೆ ಮತ್ತು ಸಂಪೂರ್ಣ ತನಿಖೆಗೆ ಕರೆ ನೀಡಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿಯ ಉಪ ವಕ್ತಾರ ಫರ್ಹಾನ್‌ ಹಕ್‌ ಅವರು ಹೇಳಿಕೆ ನೀಡಿದ್ದಾರೆ. ವಿಶ್ವಸಂಸ್ಥೆ ವಾಹನವನ್ನು ಗಾಜಾದಲ್ಲಿ ಹೊಡೆದುರುಳಿಸಲಾಯಿತು, ನಮ ಸಹೋದ್ಯೋಗಿಗಳಲ್ಲಿ ಒಬ್ಬರು ಸಾವನ್ನಪ್ಪಿ ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಎಕ್ಸ್ ನಲ್ಲಿ ಗುಟೆರೆಸ್‌‍ ತಿಳಿಸಿದ್ದಾರೆ.

Read More

ನಾಜಿ ಸಿದ್ದಾಂತದಿಂದ ಪ್ರೇರೆಪಣೆಗೊಂಡು ಕಳೆದ ವರ್ಷ ಬಾಡಿಗೆ ಟ್ರಕ್‌ನಿಂದ ಶ್ವೇತಭವನದ ಮೇಲೆ ದಾಳಿ ನಡೆಸಿದ್ದೆ ಎಂದು ಅಮೆರಿಕದಲ್ಲಿ ಖಾಯಂ ಆಗಿ ನೆಲೆಸಿರುವ 20 ವರ್ಷದ ಭಾರತೀಯ ಪ್ರಜೆಯೊಬ್ಬ ತಪ್ಪೊಪ್ಪಿಕೊಂಡಿದ್ದಾರೆ. ತಪ್ಪೊಪ್ಪಿಕೊಂಡಿರುವ ಭಾರತೀಯ ಮೂಲದ ಆರೋಪಿಯನ್ನು ಸಾಯಿ ವರ್ಷಿತ್‌ ಕಂದುಲಾ ಎಂದು ಗುರುತಿಸಲಾಗಿದೆ. ಈತ ಮಿಸೌರಿಯ ಸೇಂಟ್‌ ಲೂಯಿಸ್‌‍ನಲ್ಲಿ ವಾಸಿಸುತ್ತಿದ್ದು ಕಳೆದ ವರ್ಷ ಮೇ.22ರಂದು ಬಾಡಿಗೆ ಟ್ರಕ್‌ನಿಂದ ಶ್ವೇತಭವನಕ್ಕೆ ಡಿಕ್ಕಿ ಹೊಡೆಸಿದ್ದ ಎಂದು ವರದಿಯಾಗಿದೆ. ಅಮೆರಿಕ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಡಾಬ್ನಿ ಔ. ಫ್ರೆಡ್ರಿಕ್‌ ಅವರು ಸಾಯಿ ವರ್ಷಿತ್‌ ಶಿಕ್ಷೆಯನ್ನು ಆಗಸ್ಟ್‌ 23 ಕ್ಕೆ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರಜಾಸತ್ತಾತಕವಾಗಿ ಚುನಾಯಿತ ಸರ್ಕಾರವನ್ನು ನಾಜಿ ಜರ್ಮನಿಯ ಸಿದ್ಧಾಂತದಿಂದ ಉತ್ತೇಜಿತವಾದ ಸರ್ವಾಧಿಕಾರದೊಂದಿಗೆ ಬದಲಿಸಲು ಕಂದುಲಾ ಉದ್ದೇಶಿಸಿದ್ದ ಎಂದು ಅಟಾರ್ನಿ ವ್ಯಾಥ್ಯೂ ಗ್ರೇವ್ ಹೇಳಿದ್ದಾರೆ. ತನ್ನ ಉದ್ದೇಶವನ್ನು ಸಾಧಿಸಲು ಅಗತ್ಯವಿದ್ದಲ್ಲಿ ಯುಎಸ್‌‍ ಅಧ್ಯಕ್ಷ ಮತ್ತು ಇತರರನ್ನು ಕೊಲ್ಲಲು ತಾನು ವ್ಯವಸ್ಥೆ ಮಾಡಿದ್ದೇನೆ ಎಂದು ಕಂದುಲಾ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಅವರ ಕ್ರಮಗಳು ಬೆದರಿಕೆ ಅಥವಾ ಬಲವಂತದ…

Read More

ಬಹುಭಾಷಾ ನಟಿ, ಸದ್ಯ ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆ ಕೆಲಸದವರೇ ಕೃತ್ಯ ಎಸಗಿದ್ದು ಸದ್ಯ ಕಳ್ಳತನ ಮಾಡಿದವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಇದೀಗ ನಟಿ ಛಾಯಾ ಸಿಂಗ್ ತಾಯಿ ಚಮನಲತಾ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯಿಂದ ಕೃತ್ಯ ಜರುಗಿದೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಾರೆ. ಮನೆಯ ಮಾಲೀಕರು ಚಿನ್ನಾಭರಣ ಪರಿಶೀಲಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣ ವಶಪಡಿಸಿಕೊಂಡಿದ್ದಾರೆ. ಬಂಧಿತಳಿಂದ 66 ಗ್ರಾಂ ಚಿನ್ನ, 150 ಬೆಳ್ಳಿ ಆಭರಣ ವಶಕ್ಕೆ ಪಡೆಯಲಾಗಿದೆ.

Read More

‘ಮಹಾನಟಿ’ ಕೀರ್ತಿ ಸುರೇಶ್ ಟಾಲಿವುಡ್ ಜೊತೆಗೆ ಬಾಲಿವುಡ್ ನಲ್ಲೂ ಸಖತ್ ಬ್ಯುಸಿಯಾಗಿದ್ದಾರೆ. ಈಗಾಗ್ಲೆ ವರುಣ್ ಧವನ್ ಗೆ ಜೋಡಿಯಾಗೋ ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಇದೀಗ ಮರ್ತೋರ್ವ ಸ್ಟಾರ್ ನಟನಿಗೆ ಜೋಡಿಯಾಗ್ತಿದ್ದಾರೆ. ವರುಣ್ ಧವನ್ ನಟನೆಯ ಹೊಸ ಸಿನಿಮಾದಲ್ಲಿ ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. ‘ಬೇಬಿ ಜಾನ್’ ಎಂದು ಈ ಸಿನಿಮಾಗೆ ಟೈಟಲ್ ಇಡಲಾಗಿದೆ. ಈ ಚಿತ್ರವನ್ನು ‘ಜವಾನ್’ ಡೈರೆಕ್ಟರ್ ಅಟ್ಲಿ ನಿರ್ದೇಶನ ಮಾಡುತ್ತಿದ್ದಾರೆ. ಇದರ ನಡುವೆ ಅಕ್ಷಯ್ ಕುಮಾರ್‌ಗೆ ನಾಯಕಿಯಾಗಿ ನಟಿಸುವ ಚಾನ್ಸ್ ಪಡೆದುಕೊಂಡಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿರುವ ಅಕ್ಷಯ್ ಕುಮಾರ್ ಇದೀಗ ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಜೊತೆ ಕೈಜೋಡಿಸಿದ್ದಾರೆ. ಇಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ಬರುವ ಬಗ್ಗೆ ಘೋಷಣೆ ಕೂಡ ಆಗಿದೆ. ಈ ಸಿನಿಮಾದಲ್ಲಿ ನಟಿಸಲು ಹಲವು ನಟಿಮಣಿಯರ ಹೆಸರು ಸದ್ದು ಮಾಡಿತ್ತು. ಕಡೆಯದಾಗಿ ಕೀರ್ತಿ ಸುರೇಶ್ ಸೂಕ್ತ ಎಂದೆನಿಸಿ ನಟಿಗೆ ಸಿನಿಮಾ ಟೀಮ್ ಮಣೆ ಹಾಕಿದೆ. ಕಾಮಿಡಿ ಕಮ್ ಲವ್ ಸ್ಟೋರಿ ಇರುವ ಸಿನಿಮಾ ಇದಾಗಿದ್ದು, ನಾಯಕನಿಗೆ ಪ್ರಾಮುಖ್ಯತೆ…

Read More

ಸ್ಯಾಂಡಲ್‌ವುಡ್ ನಟ ಡಾರ್ಲಿಂಗ್ ಕೃಷ್ಣ ತಮ್ಮ ಮೊದಲ ಪ್ಯಾನ್ ಇಂಡಿಯಾ ಚಿತ್ರ‘ಹಲಗಲಿ’ ಇಂದ ಹೊರಬಂದಿದ್ದಾರೆ. ಒಂದೇ ಚಿತ್ರಕ್ಕೆ 3 ವರ್ಷ ಡೇಟ್ಸ್ ಕೊಡೋಕೆ ಆಗಲ್ಲ ಎಂಬ ಕಾರಣಕ್ಕೆ ಚಿತ್ರದಿಂದ ಕೃಷ್ಣ ಹೊರ ಬಂದಿದ್ದರು. ಈ ಬಗ್ಗೆ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ‘ಹಲಗಲಿ’ ಸಿನಿಮಾ ಅತೀ ದೊಡ್ಡ ಪ್ರಾಜೆಕ್ಟ್ ಆದರೆ ಬೇರೆ ಸಿನಿಮಾಗಳಲ್ಲಿ ನಟಿಸುತ್ತಾ ಈ ಚಿತ್ರದಲ್ಲಿ ನಟಿಸಲು ಡಾರ್ಲಿಂಗ್ ಕೃಷ್ಣ ರೆಡಿ ಇದ್ದರು. ಆದರೆ ಚಿತ್ರತಂಡ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ಮೂರು ವರ್ಷ ಬೇರೆ ಸಿನಿಮಾದಲ್ಲಿ ನಟಿಸದೇ ಈ ಸಿನಿಮಾಗಾಗಿ ಮೀಸಲಿಡಲು ಸಾಧ್ಯವಿಲ್ಲ ಎಂದು ಕೃಷ್ಣ ಸಿನಿಮಾದಿಂದ ಹೊರಬಂದಿರುವುದಾಗಿ ಕೃಷ್ಣ ಹೇಳಿದ್ದಾರೆ. ‘ಹಲಗಲಿ’ ಸಿನಿಮಾಗಾಗಿ ಕಳೆದ 6 ತಿಂಗಳಿಂದ ಬೇರೆ ಯಾವುದೇ ಸಿನಿಮಾವನ್ನು ಒಪ್ಪಿಕೊಂಡಿರಲಿಲ್ಲ. ಇತ್ತೀಚೆಗೆ ಫಾದರ್ ಸಿನಿಮಾದ ಆಫರ್ ಸಿಕ್ಕಿದೆ. ಇದಾದ ನಂತರ ಮತ್ತೆ ನಿರ್ದೇಶಕ ಶಶಾಂಕ್ ಜೊತೆ ಹೊಸ ಸಿನಿಮಾ ಮಾಡುವ ಬಗ್ಗೆ ಕೃಷ್ಣ ತಿಳಿಸಿದ್ದರು. ಆದರೆ ‘ಹಲಗಲಿ’ ಚಿತ್ರತಂಡ 3 ವರ್ಷದ ಕಮೀಟ್‌ಮೆಂಟ್ ಕೇಳಿದ್ರಿಂದ ಚಿತ್ರ ಕೈಬೀಡಬೇಕಾಯ್ತು…

Read More

ಬಾಲಿವುಡ್ ಬ್ಯೂಟಿ ನಟಿ ಆಲಿಯಾ ಭಟ್ ಸದ್ಯ ಸಿನಿಮಾಗಳ ಜೊತೆಗೆ ಮುದ್ದಾದ ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆಗಾಗ ಮುದ್ದು ಮಗಳು ರಹಾ ಜೊತೆ ಕಾಣಿಸಿಕೊಳ್ಳುವ ನಟಿ ಆಲಿಯಾ ಭಟ್ ಇದೀಗ ತಾವು ಮಾಡಿರೋ ತಪ್ಪನ್ನು ಮಗಳಿಗೆ ಮಾಡೋಕೆ ಬಿಡಲ್ಲ ಎಂದಿದ್ದಾರೆ. ‘ನಾನು ಹಾಲಿವುಡ್​ನ ಹಾರ್ಟ್ ಆಫ ಸ್ಟೋನ್ ಸಿನಿಮಾ ಶೂಟಿಂಗ್​ಗಾಗಿ ಲಂಡನ್​ನಲ್ಲಿ ಇದ್ದೆ. ನಾನು ಮೂರು ದಿನ ನಿದ್ದೆ ಮಾಡಿರಲಿಲ್ಲ. ನಾನು ಒಳ್ಳೆಯ ಮಗಳಲ್ಲ ಎನ್ನುವ ಭಾವನೆ ನನ್ನನ್ನು ಕಾಡುತ್ತಿತ್ತು’ ಎಂದಿದ್ದಾರೆ ಆಲಿಯಾ ಭಟ್. ಮಗಳನ್ನು 20 ವರ್ಷದವರೆಗೆ ಮನೆಯಿಂದ ಹೊರಗೆ ಹೋಗಿ ಬೇರೆ ಕಡೆ ಸೆಟಲ್ ಆಗೋಕೆ ಬಿಡಲ್ಲ ಎಂಬರ್ಥದಲ್ಲೂ ಆಲಿಯಾ ಮಾತನಾಡಿದ್ದಾರೆ. ‘ನಾನು ಮನೆಯಿಂದ ಹೊರಗೆ ಹೋದಾಗ ನನಗೆ 23 ವರ್ಷ. ಶೂಟಿಂಗ್ ಕಾರಣದಿಂದ ಮನೆಯಿಂದ ದೂರವೇ ಇರುತ್ತಿದ್ದೆ. ಯಾವ ನಗರ ಅನ್ನೋದು ಕೂಡ ನನಗೆ ಗೊತ್ತಿರುತ್ತಿರಲಿಲ್ಲ. ನಾನು ಮನೆಯನ್ನು ಬೇಗ ತೊರೆದೆ ಎಂದು ನನಗೆ ಅನಿಸೋಕೆ ಆರಂಭವಾಯಿತು. ಇದನ್ನು ನನ್ನ ಮಗಳಿಗೆ ಆಗೋಕೆ ಬಿಡಲ್ಲ’ ಎಂದು ಆಲಿಯಾ…

Read More

ಕೆಜಿಎಫ್, ಕೆಜಿಎಫ್ 2 ಸಿನಿಮಾದ ಸಕ್ಸಸ್ ಬಳಿಕ ನಟ ಯಶ್ ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಟಾಕ್ಸಿಕ್ ಕುರಿತು ದಿನಕ್ಕೊಂದು ಸುದ್ದಿಗಳು ಹರಿದಾಡುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ನೀಡಲ್ಲ. ಇದೀಗ ಚಿತ್ರತಂಡಕ್ಕೆ ಬಾಲಿವುಡ್ ಬೆಡಗಿ ನಟಿ ಹುಮಾ ಖುರೇಶಿ ಎಂಟ್ರಿಕೊಡಲಿದ್ದಾರೆ ಎನ್ನಲಾಗುತ್ತಿದೆ. ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಲು ಸಾಕಷ್ಟು ನಟಿಯರ ಹೆಸರು ಕೇಳಿ ಬಂದಿತ್ತು. ನಟಿಯರಾದ ಕರೀನಾ ಕಪೂರ್, ನಯನತಾರಾ, ಕಿಯಾರಾ, ಐಶ್ವರ್ಯಾ ರೈ ಸೇರಿದಂತೆ ಹಲವು ನಟಿಮಣಿಯರ ಹೆಸರು ಸದ್ದು ಮಾಡುತ್ತಿದೆ. ಇದೀಗ ಹುಮಾ ಖುರೇಶಿ ಹೆಸರು ಕೇಳಿ ಬಂದಿದ್ದು, ಹುಮಾ ನಟಿಸಲಿರುವ ಪಾತ್ರಕ್ಕೆ ಬಹಳಷ್ಟು ಪ್ರಾಮುಖ್ಯತೆ ಇದೆ ಎನ್ನಲಾಗಿದೆ. ಹುಮಾ ಖುರೇಶಿ ಅವರು ಯಶ್ ಸಿನಿಮಾದಲ್ಲಿ ನಟಿಸುತ್ತಾರಾ? ಅಥವಾ ಇದು ಹರಿದಾಡುತ್ತಿರುವ ಸುದ್ದಿನಾ ಎಂದು ಕಾದುನೋಡಬೇಕಿದೆ. ಹುಮಾ ಖುರೇಶಿ ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಿದ್ರೆ ಇದು ಅವರು ನಟಿಸುವ ಕನ್ನಡದ ಮೊದಲ ಚಿತ್ರವಾಗಲಿದೆ. ಅಂದಹಾಗೆ, ಯಶ್ ಮೊದಲ ಬಾರಿಗೆ ‘ಟಾಕ್ಸಿಕ್’ ಸಿನಿಮಾದ ಮೂಲಕ ನಿರ್ಮಾಪಕನಾಗಿ ಎಂಟ್ರಿ ಕೊಡ್ತಿದ್ದಾರೆ.…

Read More

ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್ ತಮ್ಮ 11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಬಗ್ಗೆ ಜಿ.ವಿ ಪ್ರಕಾಶ್ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ಸಾಕಷ್ಟು ಆಲೋಚಿಸಿ ನಾನು ಹಾಗೂ ಸೈಂಧವಿ ಬೇರೆ ಆಗುತ್ತಿದ್ದೇವೆ. 11 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡುತ್ತಿದ್ದೇವೆ. ನಮ್ಮ ಮಾನಸಿಕ ಆರೋಗ್ಯಕ್ಕಾಗಿ ಈ ನಿರ್ಧಾರ ಎಂದು ಪ್ರಕಾಶ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾಂಪತ್ಯ ಬದುಕಿನ ಬಿರುಕಿನ ಬಗ್ಗೆ ಹಲವು ದಿನಗಳಿಂದ ಸುದ್ದಿಯಾಗಿತ್ತು. ಈಗ ಅಧಿಕೃತ ಮಾಹಿತಿ ಹೊರಬಿದ್ದಿದೆ. ಈ ವೈಯಕ್ತಿಕ ಪರಿವರ್ತನೆಯ ಸಮಯದಲ್ಲಿ ನಮ್ಮ ಖಾಸಗಿತನಕ್ಕೆ ಬೆಲೆ ನೀಡಬೇಕು ಎಂದು ಮಾಧ್ಯಮಗಳು, ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾವು ದಯೆಯಿಂದ ಕೇಳುತ್ತೇವೆ. ನಾವು ಬೇರೆ ಬೇರೆ ಆಗಿ ಬೆಳೆಯುತ್ತಿದ್ದೇವೆ. ಇದು ಅತ್ಯುತ್ತಮ ನಿರ್ಧಾರ ಎಂದು ನಾವು ಭಾವಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಿಮ್ಮ ತಿಳುವಳಿಕೆ ಮತ್ತು ಬೆಂಬಲವು ಮುಖ್ಯ ಎಂದು ಪ್ರಕಾಶ್ ಬರೆದುಕೊಂಡಿದ್ದಾರೆ. ಪ್ರಕಾಶ್ ಕುಮಾರ್ ಅವರು ಎ.ಆರ್ ರೆಹಮಾನ್ ಅವರ ಸೋದರಳಿಯ.…

Read More