Author: Author AIN

ಬಾಲಿವುಡ್ ನಟ ವಿಕ್ಕಿ ಕೌಶಲ್ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ಛಾವಾ ಚಿತ್ರ ಬಾಕ್ಸಾಫೀಸ್ ನಲ್ಲಿ ತನ್ನ ನಾಗಾಲೋಟ ಮುಂದುವರೆಸಿದ್ದು, ಬಿಡುಗಡೆಯಾದ ದಿನದಿಂದಲೇ ಚಿತ್ರ ಭರ್ಜರಿ ಕಲೆಕ್ಷನೆ ಮಾಡುತ್ತಿದೆ. ಐತಿಹಾಸಿಕ ಕಥಾಹಂದರ ಹೊಂದಿರುವ ಈ ಚಿತ್ರದ ಬಗ್ಗೆ ಆರಂಭದಲ್ಲಿ ದೊಡ್ಡ ಕ್ರೇಜ್ ಇರಲಿಲ್ಲ. ಆದರೆ ರಿಲೀಸ್ ಬಳಿಕ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದರಿಂದ ಕಲೆಕ್ಷನ್ ಹೆಚ್ಚುತ್ತಾ ಹೋಯಿತು. ‘ಛಾವ’ ಸಿನಿಮಾಗೆ ಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಗುತ್ತಿದ್ದು, ದಿನದಿಂದ ದಿನಕ್ಕೆ ಕಲೆಕ್ಷನ್ ಹೆಚ್ಚಾಗುತ್ತಿದೆ. ಈಗ ಈ ಸಿನಿಮಾದ ಕಲೆಕ್ಷನ್ 200 ಕೋಟಿ ರೂಪಾಯಿ ಸನಿಹದಲ್ಲಿದೆ. ಲಕ್ಷ್ಮಣ್ ಉಟೇಕರ್ ಅವರು ನಿರ್ದೇಶನ ಮಾಡಿದ ‘ಛಾವ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಛತ್ರಪತಿ ಶಂಭಾಜಿ ಮಹಾರಾಜ್ ಪಾತ್ರವನ್ನು ಮಾಡಿದ್ದಾರೆ. ಮಹಾರಾಣಿ ಯೇಸುಬಾಯಿ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಅವರು ಬಣ್ಣ ಹಚ್ಚಿದ್ದಾರೆ. ಔರಂಗ್​ಜೇಬ್ ಪಾತ್ರದಲ್ಲಿ ಅಕ್ಷಯ್ ಖನ್ನಾ ಅವರು ಕಾಣಿಸಿಕೊಂಡಿದ್ದಾರೆ. ಐತಿಹಾಸಿಕ ಕಥಾಹಂದರ ಹೊಂದಿರುವ ಈ ಸಿನಿಮಾಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. https://ainlivenews.com/if-you-have-these-problems-do-not-drink-turmeric-milk/ ಮೊದಲ ದಿನ (ಫೆ.14)…

Read More

ಪಾಕಿಸ್ತಾನ ತಂಡ ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿತ್ತು. ಆತಿಥೇಯ ತಂಡ ನ್ಯೂಜಿಲೆಂಡ್ ವಿರುದ್ಧ 60 ರನ್‌ಗಳಿಂದ ಸೋತಿತು. ಬುಧವಾರ 321 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ 47.2 ಓವರ್‌ಗಳಲ್ಲಿ 260 ರನ್‌ಗಳಿಗೆ ಆಲೌಟ್ ಆಯಿತು. ವಿಲಿಯಂ ಒ’ರೂರ್ಕ್ ಮತ್ತು ಮಿಚೆಲ್ ಸ್ಯಾಂಟ್ನರ್ ತಲಾ 3 ವಿಕೆಟ್ ಪಡೆದರು. ಮ್ಯಾಟ್ ಹೆನ್ರಿ 2 ವಿಕೆಟ್ ಪಡೆದರು. ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ಪಾಕಿಸ್ತಾನ ತಂಡವು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ನ್ಯೂಜಿಲೆಂಡ್ 5 ವಿಕೆಟ್ ನಷ್ಟಕ್ಕೆ 320 ರನ್ ಗಳಿಸಿತು. ನ್ಯೂಜಿಲೆಂಡ್ ಪರ ವಿಲ್ ಯಂಗ್ 107, https://ainlivenews.com/does-armpit-sweat-cause-bad-odor-if-so-heres-the-solution-to-this-problem/ ಟಾಮ್ ಲ್ಯಾಥಮ್ 126 ಮತ್ತು ಗ್ಲೆನ್ ಫಿಲಿಪ್ಸ್ 54 ರನ್ ಗಳಿಸಿದರು. ಪಾಕಿಸ್ತಾನದ ಬೌಲರ್‌ಗಳಲ್ಲಿ ನಸೀಮ್ ಶಾ 2 ವಿಕೆಟ್ ಪಡೆದರು. ಅಬ್ರಾರ್ ಅಹ್ಮದ್ ಮತ್ತು ಹ್ಯಾರಿಸ್ ರೌಫ್ ತಲಾ ಒಂದು ವಿಕೆಟ್ ಪಡೆದರು. ಪಾಕಿಸ್ತಾನ ಪರ ಖುಶ್ದಿಲ್ ಶಾ (69 ರನ್) ಮತ್ತು…

Read More

ಮಂಡ್ಯ : ಮೈಶುಗರ್ ಕಾರ್ಖಾನೆ ಭಾರೀ ನಷ್ಟ ಕಂಡು ಬಂದಿದ್ದು, ರೈತರು ಹಾಗೂ ಹೋರಾಟಗಾರರು ಆರ್ಥಿಕ ಇಲಾಖೆಯ ವರದಿಯಿಂದ ಭಯಗೊಂಡಿದ್ದಾರೆ. ಮೈಶುಗರ್ ಕಾರ್ಖಾನೆಯಲ್ಲಿ ಹಿಂದಿನ  ಆಡಳಿತ ಮಂಡಳಿಯಲ್ಲಿ ನಡೆದಿದ್ದ ಭಾರೀ ಅವ್ಯವಹಾರ ನಡೆದಿದ್ದು, ಭಾರೀ ನಷ್ಟದಿಂದ ಕಾರ್ಖಾನೆ ಮುಚ್ಚಲ್ಪಟ್ಟಿತ್ತು. https://www.youtube.com/watch?v=lMg_I8lOA-0 ಸರ್ಕಾರಿ ಸಾಮ್ಯದ ಏಕೈಕ ಕಾರ್ಖಾನೆ ಮಂಡ್ಯದ ಮೈಷುಗರ್ ಕಾರ್ಖಾನೆಯಲ್ಲಿ ನೂರಾರು ಕೋಟಿ ಅಕ್ರಮ ನಡೆದಿದೆ. 2008 ರಿಂದ 2013ರವರೆಗೆ ಭ್ರಷ್ಟಾಚಾರ ನಡೆದಿದ್ದು,  ಅಂದಿನ ಅಧ್ಯಕ್ಷ ನಾಗರಾಜಪ್ಪ ಅವಧಿಯಲ್ಲಿ ಸರ್ಕಾರದ 122 ಕೋಟಿ ರೂ. ಹಣ ಲೂಟಿಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಲೋಕಾಯುಕ್ತದಿಂದ ತನಿಖೆ ನಡೆದು ಆರೋಪ ಸಾಬೀತಾಗಿದೆ. ಆರೋಪ ಸಾಬೀತಾದ ಹಿನ್ನೆಲೆ ಲೋಕಾಯುಕ್ತರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. https://ainlivenews.com/jammer-in-hindalaga-jail-network-problem-for-people-around/ ನಾಗರಾಜಪ್ಪನವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಲೋಕಾಯುಕ್ತ ಆದೇಶ ನೀಡಿದೆ. ಇಷ್ಟಾದ್ರೂ ಯಾವುದೇ ಕ್ರಮ ಕೈಗೊಳ್ಳದೇ ಸರ್ಕಾರ ಹಾಗೂ ಆಡಳಿತ ಮಂಡಳಿ ಮೀನಾ ಮೇಷ ಎಣಿಸುತ್ತಿದೆ. ಚುನಾವಣಾ ಪೂರ್ವವಾಗಿ ಅಧಿಕಾರಕ್ಕೆ ಬಂದ ಹದಿನೈದು ದಿನದಲ್ಲಿ ಕಾರ್ಖಾನೆ…

Read More

ಬೆಳಗಾವಿ :  ಹಿಂಡಲಗಾ ಜೈಲಿನಲ್ಲಿ ಜಾಮರ್ ಅಳವಡಿಕೆಯಿಂದಾಗಿ ಜೈಲಿನ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಇದೀಗ ಸಮಸ್ಯೆಯುಂಟಾಗುತ್ತಿದೆ.  ಜಾಮರ್ ಅಳವಡಿಕೆಯಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಆರಂಭವಾಗಿದೆ. ಹಿಂಡಲಗಾ ಗ್ರಾಮ, ವಿಜಯನಗರ, ಗಣೇಶಪುರ, ಬೆನಕನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಜನ ವಸತಿ ಪ್ರದೇಶದಲ್ಲಿ ನೆಟ್ವರ್ಕ್ ಸಮಸ್ಯೆ ಹೆಚ್ಚಾಗಿದ್ದು, ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪರದಾಡುವಂತಾಗಿದೆ. ಗ್ರಾಮ ಪಂಚಾಯತಿ, ಸರ್ಕಾರಿ ಕಚೇರಿಗಳಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಪದೇ ಪದೇ ಸರ್ವರ್ ಡೌನ್ ಆಗುತ್ತಿದ್ದು, ಜಾಮರ್ ಪ್ರೀಕ್ವೇನ್ಸಿ ಕಡಿಮೆ ಮಾಡಲು ಹಿಂಡಲಗಾ ಗ್ರಾಮ ಪಂಚಾಯತಿಯಿಂದ ಜೈಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಜೈಲಿನ ಕೈದಿಗಳು‌‌ ಮೊಬೈಲ್ ಬಳಕೆಗೆ ಬ್ರೇಕ್ ಹಾಕಲು ಜಾಮರ್ ಅಳವಡಿಕೆ ಮಾಡಲಾಗಿದೆ. ಇದೇ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ ಹೋಗಿತ್ತು. ಹಿಂಡಲಗಾ ಜೈಲಿನಲ್ಲಿ ದುಡ್ಡುಕೊಟ್ಟರೆ ಎಲ್ಲವೂ ಸಿಗುತ್ತೆ ಅನ್ನೋದನ್ನ ಕೈದಿಗಳೇ ಮೊಬೈಲ್ ನಲ್ಲಿ ವಿಡಿಯೋ ಮಾಡಿ ಬೆಳಕಿಗೆ ತಂದಿದ್ದರು. ಹೀಗಾಗಿ ಕೈದಿಗಳು ಜೈಲಿನಲ್ಲಿ ಮೊಬೈಲ್ ಬಳಕೆ ಬ್ರೇಕ್ ಹಾಕಲು ಜೈಲಾಧಿಕಾರಿಗಳಿಂದ ಜಾಮರ್ ಅಳವಡಿಕೆ…

Read More

ದೆಹಲಿಯ ಸಿಂಹಾಸನದ ಮೇಲೆ ಔರ್ ಏಕ್ ರಾಣಿ. ಮೊದಲ ಬಾರಿಗೆ ಶಾಸಕಿಯಾಗಿ ಗೆದ್ದಿರುವ ರೇಖಾ ಗುಪ್ತಾ, ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರೇಖಾ ಗುಪ್ತಾ ಸಿಎಂ ಸೇರಿದಂತೆ ಆರು ಸಚಿವರೊಂದಿಗೆ ದೆಹಲಿಯಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ. ಪ್ರಮಾಣವಚನ ಸಮಾರಂಭಕ್ಕಾಗಿ ರಾಮಲೀಲಾ ಮೈದಾನದಲ್ಲಿ ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಬಿಜೆಪಿಯ ಉನ್ನತ ನಾಯಕರು, ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರಮುಖ ಎನ್‌ಡಿಎ ನಾಯಕರು ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ. ರೇಖಾ ಗುಪ್ತಾ ಯಾರು?: ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರೇಖಾ ಗುಪ್ತಾ ಅವರ ಹೆಸರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ, ರೇಖಾ ಗುಪ್ತಾ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ವಂದನಾ ಕುಮಾರಿ ಅವರನ್ನು 29,595 ಮತಗಳ ಭಾರೀ ಅಂತರದಿಂದ…

Read More

ಹುಬ್ಬಳ್ಳಿ: ಅಂಗನವಾಡಿ ಕೇಂದ್ರಗಳಿಂದ ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಸಬೇಕಾದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಗೋದಾಮಿನಲ್ಲಿ ಸಂಗ್ರಹಿಸಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹುಲಿಗೆವ್ವ ಕುಕನೂರು ( ಡಿಡಿ)  ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ( ಸಿಡಿಪಿಓ) ಮುತ್ತಣ್ಣ ಸಿ.ಎ. ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. https://ainlivenews.com/good-news-for-homemakers-from-the-state-government-must-see-news-for-women/ ಇಬ್ಬರೂ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ. ಇಲಾಖೆ ವಿಚಾರಣೆ ಬಾಕಿಯಿರಿಸಿ, ಇಬ್ಬರನ್ನೂ ಅಮಾನತು ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪಕಾರ್ಯದರ್ಶಿ ಬಲರಾಮ ಆದೇಶ ಹೊರಡಿಸಿದ್ದಾರೆ. ‘ಸರ್ಕಾರ ವಿತರಿಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಧಾರವಾಡದ ಲಕಮನಹಳ್ಳಿ ಎಂಎಸ್‌ಪಿಸಿ ಗೋದಾಮಿನಿಂದ ಅಂಗನವಾಡಿ ಕೇಂದ್ರಗಳಿಗೆ ವಿತರಿಸದೆ, ಅಕ್ರಮವಾಗಿ ಗಬ್ಬೂರು ಸಮೀಪದ ಗೋದಾಮಿನಲ್ಲಿ ಸಂಗ್ರಹಿಸಿದ್ದಾರೆ. ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆಯಡಿ ಅಂಗನವಾಡಿ ಕೇಂದ್ರದ ಫಲಾನು ಭವಿಗಳಿಗೆ ಪೌಷ್ಟಿಕ ಆಹಾರ ಒದಗಿಸಲು ವಿಫಲವಾಗಿದ್ದಾರೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದ್ದಾರೆ.

Read More

ಬೆಂಗಳೂರು: ಚಿನ್ನ ಮಾಡಿಸಿಕೊಳ್ಳಬೇಕು ಎಂದಾದರೆ ಬೆಲೆ ಇಳಿಕೆಯಾಗುವುದು ಮುಖ್ಯವಾಗಿದೆ. ಆದರೂ ಒಮ್ಮೊಮ್ಮೆ ಪರಿಸ್ಥಿತಿಗೆ ಕಟ್ಟುಬಿದ್ದು ಬೆಲೆ ಏರಿಕೆಯ ಸಮಯದಲ್ಲೇ ಸಾಕಷ್ಟು ಗ್ರಾಹಕರು ಚಿನ್ನ ಖರೀದಿಸುತ್ತಾರೆ. ಬೆಲೆ ತಗ್ಗಿದರೆ ನಮಗೊಂದಿಷ್ಟು ಲಾಭವಿತ್ತೆಂದು ಸಾಕಷ್ಟು ಜನ ಈ ಸಮಯದಲ್ಲಿ ಭಾವಿಸುತ್ತಾರೆ. ಚಿನ್ನದ ಮಾರುಕಟ್ಟೆಯೇ ಹಾಗೆ ಬೆಲೆ ಯಾವಾಗ ಏರುತ್ತದೆ? ಯಾವಾಗ ಇಳಿಯುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಚಿನ್ನ ಖರೀದಿಗೂ ಮುನ್ನ ಇಂದಿನ ರೇಟ್ ಹೇಗಿದೆ ಎಂಬುದನ್ನು ತಿಳ್ಕೊಳ್ಳೋಣ https://ainlivenews.com/if-you-have-these-problems-do-not-drink-turmeric-milk/ ಗುರುವಾರ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಹೆಚ್ಚಾಗಿದೆ. ಅಪರಂಜಿ ಚಿನ್ನದ ಬೆಲೆಯಲ್ಲಿ 39 ರೂ ಏರಿಕೆ ಆಗಿದೆ. ಸೋಮವಾರದಿಂದ ಸತತ ನಾಲ್ಕನೇ ದಿನ ಈ ಸ್ವರ್ಣ ದುಬಾರಿಯಾಗಿದೆ. ಅಪರಂಜಿ ಚಿನ್ನದ ಬೆಲೆ ಭಾರತದಲ್ಲಿ 8,800 ರೂ ಮೈಲಿಗಲ್ಲು ಮುಟ್ಟಿ ಹೊಸ ದಾಖಲೆ ಬರೆದಿದೆ. 18 ಕ್ಯಾರಟ್ ಚಿನ್ನದ ಬೆಲೆಯೂ 6,600 ರೂ ಗಡಿ ಮುಟ್ಟಿ ದಾಖಲೆ ಮಾಡಿದೆ. ಇತ್ತ ಚಿನ್ನದ ಬೆಲೆ ಏರಿಕೆ ಆಗುತ್ತಿದ್ದರೂ ಬೆಳ್ಳಿ ಸ್ತಬ್ಧತೆ ಮುಂದುವರಿದಿದೆ. ಇಂದೂ ಕೂಡ ಬೆಳ್ಳಿ ಬೆಲೆಯ…

Read More

ಬೆಂಗಳೂರು: ಪ್ರಪಂಚದಾದ್ಯಂತ ಪ್ರೇಮಿಗಳ ವಾರವನ್ನು ಬಹಳ ಉತ್ಸಾಹದಿಂದ ಆಚರಿಸಲಾಯಿತು, ಮತ್ತು ಅದು ಮುಗಿದ ತಕ್ಷಣ, ಅನೇಕ ವಿಚಿತ್ರ ದಿನಗಳನ್ನು ಹೊಂದಿದ್ದ ಪ್ರೇಮಿಗಳ ವಿರೋಧಿ ವಾರ ಪ್ರಾರಂಭವಾಯಿತು. ಈ ವಾರದ ಆರನೇ ದಿನ, ಅಂದರೆ ನೆನಪಿನ ದಿನ, ಆದ್ದರಿಂದ ಕಾಣೆಯಾದವರ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿದುಕೊಳ್ಳೋಣ. ದಿನಾಂಕ ಪ್ರತಿ ವರ್ಷ ಫೆಬ್ರವರಿ 20 ರಂದು ಕಾಣೆಯಾದ ದಿನವನ್ನು ಆಚರಿಸಲಾಗುತ್ತದೆ, ಈ ದಿನವು ಪ್ರೇಮಿಗಳ ವಿರೋಧಿ ವಾರದ ಆರನೇ ದಿನವಾಗಿದೆ, ಈ ವಿಶೇಷ ದಿನದಂದು ಜನರು ತಮ್ಮ ಕಳೆದುಹೋದ ಪಾಲುದಾರರನ್ನು ನೆನಪಿಸಿಕೊಳ್ಳುತ್ತಾರೆ. ಇತಿಹಾಸ ಮಿಸ್ಸಿಂಗ್ ಡೇ ಬಗ್ಗೆ ಯಾವುದೇ ಲಿಖಿತ ಇತಿಹಾಸವಿಲ್ಲ ಆದರೆ ಸಾಮಾನ್ಯವಾಗಿ ಹೇಳುವುದಾದರೆ, ಈ ದಿನವು ನಮ್ಮಿಂದ ಶಾಶ್ವತವಾಗಿ ದೂರವಾಗಿರುವ ಅಥವಾ ಪ್ರಸ್ತುತ ನಮ್ಮಿಂದ ದೂರವಾಗಿರುವ ಪ್ರೀತಿಪಾತ್ರರನ್ನು ಸ್ಮರಿಸಲು ಮೀಸಲಾಗಿರುತ್ತದೆ. ಈ ದಿನ ನೀವು ನಿಮ್ಮ ಸಂಗಾತಿಯನ್ನು ಮಾತ್ರ ನೆನಪಿಸಿಕೊಳ್ಳುವ ಅಗತ್ಯವಿಲ್ಲ. ನೀವು ದೀರ್ಘಕಾಲದಿಂದ ಭೇಟಿಯಾಗದ ವಿಶೇಷ ಸ್ನೇಹಿತನನ್ನು ಸಹ ನೀವು ನೆನಪಿಸಿಕೊಳ್ಳಬಹುದು. ಅಥವಾ ನೀವು ಮನೆಯಿಂದ ದೂರ ವಾಸಿಸುತ್ತಿದ್ದರೆ,…

Read More

ಸ್ಯಾಂಡಲ್ ವುಡ್ ಅಂಗಳದಲ್ಲೀಗ ಜೋಗಪ್ಪನ ಸದ್ದು ಜೋರಾಗಿದೆ. ಅನೇಕ ಹಿಟ್ ಧಾರಾವಾಹಿಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಹಯದವನ ಚೊಚ್ಚಲ ಪ್ರಯತ್ನದ ಎಲ್ಲೋ ಜೋಗಪ್ಪ ನಿನ್ನರಮನೆ ಪ್ರೇಕ್ಷಕರ ಎದುರು ಬರಲು ಕೆಲ ದಿನಗಳಷ್ಟೇ ಬಾಕಿ ಇದೆ. ಬಿಡುಗಡೆಗೆ ಸಜ್ಜಾಗಿರುವ ಚಿತ್ರತಂಡ ಭರದಿಂದ ಪ್ರಚಾರ ಕೂಡ ನಡೆಸುತ್ತಿದೆ. ಇದೇ ತಿಂಗಳ 21ಕ್ಕೆ ತೆರೆಗೆ ಬರ್ತಿರುವ ಸಿನಿಮಾ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿಯನ್ನು ಹಂಚಿಕೊಂಡಿದೆ. ನಿನ್ನೆ ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಸುದ್ದಿಗೋಷ್ಟಿ ಆಯೋಜಿಸಲಾಗಿತ್ತು. ಈ ವೇಳೆ ನಿರ್ದೇಶಕ ಹಯದವನ ಮಾತನಾಡಿ, ಎಲ್ಲೋ ಜೋಗಪ್ಪ ನಿನ್ನರಮನೆ ಹುಡುಕಾಟದ ಕಥೆ. ಟ್ರೇಲರ್ ನಲ್ಲಿ ಒಂದು ಡೈಲಾಗ್ ಬರುತ್ತದೆ. ಎಲ್ಲರೂ ದುಡ್ಡಿಗೋಸ್ಕರ ಏನೂ ಮಾಡ್ತಿದ್ದೀಯಾ ಅಂತಾ ಕೇಳ್ತಾರೆ. ನಿನ್ನ ಖುಷಿಗೋಸ್ಕರ ಏನೂ ಮಾಡ್ತಿದ್ದೀಯಾ ಎಂದು ಕೇಳಲ್ಲ. ಈ ಸಂದರ್ಭದಲ್ಲಿ ಈ ಡೈಲಾಗ್ ನ್ನು ನನ್ನ ಜೀವನಕ್ಕೆ ಕನೆಕ್ಟ್ ಮಾಡಿಕೊಳ್ಳುತ್ತೇನೆ. ನನ್ನ ಖುಷಿ, ಫ್ಯಾಷನ್ ಗೋಸ್ಕರ ಸಿನಿಮಾಕ್ಕೆ ಬಂದಿದ್ದೇನೆ. ಇಷ್ಟು ವರ್ಷಗಳ ಟಿವಿ ಜರ್ನಿ ನಂತರ.…

Read More

ಕಲಬುರಗಿ : ಸಿಮೆಂಟ್ ಫ್ಯಾಕ್ಟರಿ ಅವಾಂತರಕ್ಕೆ ಮತ್ತೊಬ್ಬ ಯುವಕನ ಜೀವ ಬಲಿಯಾಗಿದೆ. ಕಲಬುರಗಿ ಜಿಲ್ಲೆಯ ಸೇಡಂನ‌ ವಾಸವದತ್ತಾ ಫ್ಯಾಕ್ಟರಿ  ಗೂಡ್ಸ್ ರೈಲು ಸಂಚರಿಸ್ತಿದ್ದ ಹಿನ್ನಲೆ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಆದರೆ ಫ್ಯಾಕ್ಟರಿ ಗೂಡ್ಸ್ ರೈಲು ಪಾಸ್ ಆಗುವವರೆಗೂ ರಸ್ತೆಯಲ್ಲಿ ಆ್ಯಂಬುಲೆನ್ಸ್ ಕಾದು ನಿಲ್ಲೇಬೇಕಾಗಿತ್ತು. ಹೀಗಾಗಿ ಸೇಡಂನಿಂದ‌ ಕಲಬುರಗಿಗೆ ಚಿಕಿತ್ಸೆಗಾಗಿ ತೆರಳುತ್ತಿದ್ದ ಯುವಕ ಸಾವು ಆ್ಯಂಬುಲೆನ್ಸ್‌ನಲ್ಲಿ ಸಾವನ್ನಪ್ಪಿದ್ದಾನೆ. ಸೇಡಂ ಪಟ್ಟಣದ ನಿವಾಸಿ ಮುಕ್ತಾರ ಎಂಬಾತ ನಿನ್ನೆ ರಾತ್ರಿ ಕ್ರಿಕೆಟ್ ಆಡುವಾಗ ಫಿಡ್ಸ್ ಬಂದು ಬಳಿಕ ಹೃದಯಾಘಾತಕ್ಕೆ ಒಳಗಾಗಿದ್ದ. ಆತನನ್ನೂ ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಕೊಂಡೊಯ್ಯಲು ಸೂಚನೆ ನೀಡಲಾಗಿತ್ತು. ಸೇಡಂನಿಂದ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಕರೆತರುವಾಗ ಘಟನೆ ನಡೆದಿದೆ. https://ainlivenews.com/escape-with-a-friend-who-is-married/ ಗೂಡ್ಸ್‌ ವಾಹನ ನಿಲ್ಲಿಸಿದರಿಂದಲೇ ಮುಕ್ತಾರ್‌ ಸಾವಾಗಿದೆ ಎಂದು ಆರೋಪಿಸಿದ ಮುಕ್ತಾರ ಸಂಬಂಧಿಕರು ಫ್ಯಾಕ್ಟರಿ ಮುಂಭಾಗ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ. ವಾಸವದತ್ತಾ ಫ್ಯಾಕ್ಟರಿ ರೈಲು ಹಳಿ ಸ್ಥಾಳಂತರಿಸುವಂತೆ ಹಲವು ವರ್ಷಗಳಿಂದ‌…

Read More