Author: Author AIN

`ಎವರೆಸ್ಟ್ ಮ್ಯಾನ್’ ಎಂದೇ ಖ್ಯಾತಿ ಘಳಿಸಿರುವ ನೇಪಾಳದ ಕಮಿರಿತ ಶೆರ್ಪ ಭಾನುವಾರ 29ನೇ ಬಾರಿ ವಿಶ್ವದ ಅತೀ ಎತ್ತರದ ಶಿಖರ ಎವರೆಸ್ಟ್ ಪರ್ವತವನ್ನು ಏರುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಪರ್ವತಾರೋಹಿ ಮತ್ತು ಗೈಡ್ ಆಗಿರುವ 54 ವರ್ಷದ ಶೆರ್ಪ ಕಳೆದ ವರ್ಷ 8848.86 ಮೀಟರ್ ಎತ್ತರದ ಎವರೆಸ್ಟ್ ಅನ್ನು ಒಂದೇ ವಾರದಲ್ಲಿ ಎರಡು ಬಾರಿ ಏರಿದ್ದು ಇದು 28ನೇ ಬಾರಿಯ ಎವರೆಸ್ಟ್ ಆರೋಹಣವಾಗಿದೆ. ಈ ಬಾರಿಯೂ ಒಂದೇ ವಾರದಲ್ಲಿ ಎರಡು ಬಾರಿ ಏರುವ ಯೋಜನೆಯಿದೆ ಎಂದವರು ಹೇಳಿದ್ದಾರೆ. ಭಾನುವಾರ ಬೆಳಿಗ್ಗೆ 7:25ಕ್ಕೆ ಕಮಿರಿತ ಶೆರ್ಪ ಸಾಗರ್‍ಮಾತ ಪರ್ವತದ ಶಿಖರಕ್ಕೆ ತಮ್ಮ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದು ಅವರಿಗೆ ಮತ್ತು ತಂಡಕ್ಕೆ ಅಭಿನಂದನೆಗಳು’ ಎಂದು ನೇಪಾಳದ ಪ್ರವಾಸೋದ್ಯಮ ಇಲಾಖೆ ಟ್ವೀಟ್(ಎಕ್ಸ್) ಮಾಡಿದೆ. ಎವರೆಸ್ಟ್ ಪರ್ವತಕ್ಕೆ ನೇಪಾಳದಲ್ಲಿ ಸಾಗರ್‍ಮಾತ ಶಿಖರ ಎಂಬ ಹೆಸರಿದೆ. ನೇಪಾಳದೆ ಮತ್ತೊಬ್ಬ ಪರ್ವತಾರೋಹಿ ಪಸಂಗ್ ದವಾ ಶೆರ್ಪ ಎವರೆಸ್ಟ್ ಶಿಖರವನ್ನು 27 ಬಾರಿ ಏರಿದ್ದ ದಾಖಲೆಯನ್ನು ಕಳೆದ ವರ್ಷ ಕಮಿರಿತ ಶೆರ್ಪ…

Read More

ಹೈಸ್ಕೂಲ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಕೆಲ ಕಾರುಗಳು ಮತ್ತು ಮೂರು ದ್ವಿಚಕ್ರವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಾವಾ ದ್ವೀಪದಲ್ಲಿ ನಡೆದಿದೆ. ಅಪಘಾತ ಸಂಭವಿಸಿದಾಗ ಶಾಲಾ ಬಸ್​ನಲ್ಲಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದ್ದರು. ಈ ಬಸ್​ ಜಾವಾ ದ್ವೀಪದ ಪಟ್ಟಣವಾದ ಡಿಪೋಕ್‌ನಿಂದ ಜನಪ್ರಿಯ ಪ್ರವಾಸಿ ತಾಣವಾದ ಲೆಂಬಾಂಗ್‌ಗೆ ಪ್ರವಾಸಕ್ಕೆ ಬಂದಿದ್ದರು. ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಪ್ರವಾಸದಿಂದ ಹಿಂದಿರುಗಿ ಕರೆದುಕೊಂಡು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಶನಿವಾರ ಸಂಜೆ 6.48ಕ್ಕೆ ಈ ದುರ್ಘಟನೆ ನಡೆದಿದೆ ಎಂದು ಪಶ್ಚಿಮ ಜಾವಾ ಪೊಲೀಸ್ ವಕ್ತಾರ ಜೂಲ್ಸ್ ಅಬ್ರಹಾಂ ಅಬಾಸ್ಟ್ ಹೇಳಿದ್ದಾರೆ. ಇಳಿಜಾರಿನ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಬಸ್​ನ ನಿಯಂತ್ರಣ ತಪ್ಪಿ ಲೇನ್‌ಗಳನ್ನು ದಾಟಿ ಹಲವಾರು ಕಾರುಗಳು ಮತ್ತು ಮೋಟಾರ್‌ಬೈಕ್‌ಗಳಿಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿತು. ಒಂಬತ್ತು ಜನರು ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಶಿಕ್ಷಕ ಮತ್ತು ಸ್ಥಳೀಯ ವಾಹನ ಚಾಲಕ ಸೇರಿದಂತೆ ಇಬ್ಬರು ಆಸ್ಪತ್ರೆಯಲ್ಲಿ…

Read More

ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ತಮ್ಮ ಚಿಕ್ಕಪ್ಪ ಪವನ್ ಕಲ್ಯಾಣ್ ಪರ ಪ್ರಚಾರ ಮಾಡಲು ಪೀಠಾಪುರಂಗೆ ತೆರಳಿದ್ದರು. ಈ ವೇಳೆ ನೆಚ್ಚಿನ ನಟನನ್ನು ನೋಡಿ ಖುಷಿಯಾದ ಅಭಿಮಾನಿಗಳು ರಾಮ್ ಚರಣ್ ಅವರನ್ನು ಮುತ್ತಿಗೆ ಹಾಕಿದ್ದಾರೆ. ಇದೇ ವೇಳೆ ರಾಮ್ ಚರಣ್ ಅವರ ಶರ್ಟ್ ಅನ್ನು ಅಭಿಮಾನಿಗಳು ಹರಿದು ಹಾಕಿದ್ದು, ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್‌ ಪರ ಪ್ರಚಾರ ಮಾಡಲು ರಾಮ್ ಚರಣ್ ಮತ್ತು ಅವರ ತಾಯಿ ಸಾಥ್ ನೀಡಿದ್ದರು. ಚುನಾವಣಾ ಪ್ರಚಾರಕ್ಕಾಗಿ ಪೀಠಾಪುರಂಗೆ ನಟ ಬಂದಿದ್ದಾರೆ. ನೆಚ್ಚಿನ ನಟನನ್ನು ಹತ್ತಿರದಿಂದ ನೋಡಲು ಜನಸಾಗರವೇ ಸೇರಿತ್ತು. ಈ ವೇಳೆ, ರಾಮ್ ಚರಣ್ ಅನ್ನು ಅಭಿಮಾನಿಗಳು ಮುತ್ತಿಕೊಂಡರು. ರಾಮ್ ಚರಣ್ ಅಭಿಮಾನಿಗಳಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟರು. ಅಭಿಮಾನಿಗಳು ನಟನನ್ನು ತಳ್ಳಿದರು, ನೂಕಿದರು, ಅವರ ಶರ್ಟ್ ಅನ್ನು ಹರಿದರು. ಅಭಿಮಾನಿಗಳ ವರ್ತನೆಗೆ ಸುಸ್ತಾದ್ರು ರಾಮ್ ಚರಣ್. ಆದರೂ ಏನೂ ಪ್ರತಿಕ್ರಿಯೆ ನೀಡದೆ ಸಹಿಸಿಕೊಂಡು…

Read More

ಸೌತ್ ಸುಂದರಿ ತ್ರಿಷಾ ಕೃಷ್ಣನ್ 14 ವರ್ಷಗಳ ಬಳಿಕ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ಬಾಲಿವುಡ್  ಬ್ಯಾಡ್ ಬಾಯ್ ಸಲ್ಮಾನ್ ಖಾನ್‌ ನಟನೆಯ ಸಿಖಂದರ್ ಸಿನಿಮಾದಲ್ಲಿ ಸಲ್ಮಾನ್ ಖಾನ್ ಗೆ ಜೋಡಿಯಾಗಿ ತ್ರಿಷಾ ನಟಿಸಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. 2010ರಲ್ಲಿ ತೆರೆಕಂಡ ‘ಕಟ್ಟಾ ಮೀಟಾ’ ಚಿತ್ರದಲ್ಲಿ ಅಕ್ಷಯ್ ಕುಮಾರ್ ಗೆ ಜೋಡಿಯಾಗಿ ನಟಿ ತ್ರಿಷಾ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ನಟಿ ಜಿಲ್ಲಾಧಿಕಾರಿಯ ಪಾತ್ರದಲ್ಲಿ ಮಿಂಚಿದ್ದರು. ಅದಾದ ನಂತರ ಬಾಲಿವುಡ್‌ಗೆ ಗುಡ್ ಬೈ ಹೇಳಿದ್ದ ನಟಿ ಸಾಕಷ್ಟು ವರ್ಷಗಳ ಬಳಿಕ ಮತ್ತೆ ಹಿಂದಿ ಚಿತ್ರರಂಗಕ್ಕೆ ಮರಳಿದ್ದಾರೆ. ಸಲ್ಮಾನ್ ಖಾನ್ ನಟನೆಯ ‘ಸಿಖಂದರ್’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಎಂದು ಅಧಿಕೃತ ಘೋಷಣೆ ಮಾಡಿತ್ತು ಚಿತ್ರತಂಡ. ಈ ಬೆನ್ನಲ್ಲೇ ಸಿಖಂದರ್‌ ಸಲ್ಮಾನ್‌ಗೆ ಮತ್ತೋರ್ವ ನಾಯಕಿಯಾಗಿ ತ್ರಿಷಾ ಕೂಡ ಎಂಟ್ರಿ ಕೊಡ್ತಿದ್ದಾರೆ ಎನ್ನಲಾಗಿದೆ. ಸೆಕೆಂಡ್ ಲೀಡ್ ನಾಯಕಿಯಾಗಿ ನಟಿಸುತ್ತಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಬಗ್ಗೆ ಚಿತ್ರತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ…

Read More

ಕಿರುತೆರೆ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಲೀಕ್ ಆದ ಬೆನ್ನಲ್ಲೇ ನಟಿ ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದರು. ಇದೀಗ ನಟಿ ಪತಿಯೊಂದಿಗೆ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿ, ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ. ತಮ್ಮ ಪತಿ ಪೂರ್ವಜ್ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಕೆಲ ಕಾಲ ದೇವಸ್ಥಾನದಲ್ಲಿ ನಟಿ ಸಮಯ ಕಳೆದಿದ್ದು, ಈ ವೇಳೆ, ಅಭಿಮಾನಿಗಳು ನಟಿಯ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದಾರೆ. ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಇದರಿಂದ ನಟಿ ನೊಂದಿದ್ದಾರೆ. ಈ ಕುರಿತು ಸೈಬರ್ ಕ್ರೈಂಗೆ ನಟಿ ದೂರು ನೀಡಿದ್ದಾರೆ. ಮಾರ್ಫಿಂಗ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನಟಿ ಜ್ಯೋತಿ ರೈ ಮನವಿ ಮಾಡಿದ್ದು, ನನ್ನ ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು…

Read More

ಕನ್ನಡದ ನಟಿ, ಸದ್ಯ ತೆಲುರು ಕಿರುತೆರೆಯಲ್ಲಿ ಮಿಂಚುತ್ತಿರುವ ಪವಿತ್ರಾ ಜಯರಾಂ ಕಾರು ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು (ಮೇ 13)  ಪವಿತ್ರಾ ಅವರ ಮೃತದೇಹ ಆಂಧ್ರ ಪ್ರದೇಶದ ಕರ್ನೂಲಿನಿಂದ ಮಂಡ್ಯ ತಾಲೂಕಿನ ಹನಕೆರೆ ಗ್ರಾಮಕ್ಕೆ ತಲುಪಲಿದ್ದು, ಅವರ ಸ್ವಗೃಹದಲ್ಲಿ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ಅಪಘಾತಕ್ಕೀಡಾಗಿ ಪವಿತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪವಿತ್ರ ಪ್ರಯಾಣಿಸುತ್ತಿದ್ದ ಕಾರು ಮತ್ತು ಅಲ್ಲಿ ಸಂಚರಿಸುತ್ತಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ದುರಂತದಲ್ಲಿ ನಟಿ ಪವಿತ್ರಾ ಜಯರಾಂ ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ನಟಿಸುತ್ತಿದ್ದು, ಅಲ್ಲಿ ಕೂಡ ಬಹಳಷ್ಟು ಜನಪ್ರಿಯತೆ ಪಡೆದಿದ್ದರು.  ಮೂಲತಃ ಮಂಡ್ಯದವರಾದ ಪವಿತ್ರಾ ಅವರು ರೋಬೋ ಫ್ಯಾಮಿಲಿ, ನೀಲಿ, ರಾಧಾ ರಮಣ, ಜೋಕಾಲಿ ಸೀರಿಯಲ್‌ನಲ್ಲಿ ಪವಿತ್ರಾ ನಟಿಸಿದ್ದರು. ತೆಲುಗಿನ ‘ತ್ರಿನಯನಿ’ ಸೀರಿಯಲ್‌ನಲ್ಲಿ ವಿಲನ್ ಆಗಿ ಪವಿತ್ರಾ ಪ್ರೇಕ್ಷಕರ ಗಮನ ಸೆಳೆದಿದ್ದರು.

Read More

ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಘಟನೆ ನಡೆದಿದ್ದು ಚೇತನ್ ಚಂದ್ರ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಚೇತನ್ ಚಂದ್ರ ಅವರನ್ನು ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದ ಕೆಲ ಕಿಡಿಗೇಡಿಗಳು, ಬೈಕ್‍ಗೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಶುರುಮಾಡಿದ್ದಾರೆ. ಅಲ್ಲದೇ ನಟನ ಕೊರಳಿನಲ್ಲಿದ್ದ ಚೈನ್ ಒಂದನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಹಲ್ಲೆಯಿಂದ ಮೂಗಿಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ ಎಂದು ನಟ ತಿಳಿಸಿದ್ದಾರೆ. ‘ಇವತ್ತು ಒಂದು ಕೆಟ್ಟ ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡೆ. ನನ್ನ ಗಾಡಿ ಅಡ್ಡ ಹಾಕಿ ಹೊಡೆದರು. ಚೆನ್ನಾಗಿ ಕುಡಿದು ನನ್ನ ಗಾಡಿ ಅಡ್ಡ ಹಾಕಿದ್ದಾರೆ. ಏನಿಲ್ಲ ಅಂದರೂ 20 ಜನರು ಸೇರಿಕೊಂಡು ನನಗೆ ಹೊಡೆದಿದ್ದಾರೆ. ಅದರ ವಿಡಿಯೋ ಇದೆ. ಮೂಗು ಮುರಿದು ಹಾಕಿದ್ದಾರೆ. ಕಗ್ಗಲಿಪುರ ಪೊಲೀಸ್​ ಠಾಣೆ ಪಕ್ಕದಲ್ಲಿ ಪ್ರಥಮ ಚಿಕಿತ್ಸೆ ಪಡೆಯಲು ಬಂದಿದ್ದೇನೆ. ಈಗ ಮತ್ತೆ ಬಂದು ಕಾರು ಒಡೆದು ಹಾಕಿದ್ದಾರೆ. ತುಂಬ ಕೆಟ್ಟ ಜನರು’…

Read More

ಆಂಧ್ರ ಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಕಾವೂ ಜೋರಾಗಿದೆ. ಈ ಬಾರಿ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಚುನಾವಣಾ ಪ್ರಚಾರಕ್ಕೆ ಧುಮುಕಿದ್ದರು. ಆದರೆ ಸ್ನೇಹಿತನ ಪರವಾಗಿ ಪ್ರಚಾರಕ್ಕೆ ಹೋಗಿದ್ದೇ ಈಗ ಸಂಕಷ್ಟ ತಂದಿಟ್ಟಿದ್ದೆ. ಈ ಬಗ್ಗೆ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಾಗಿದೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್‌ಸಿಪಿ ಪಕ್ಷದ ಅಭ್ಯರ್ಥಿಯಾದ ರವಿ ಚಂದ್ರ ಕಿಶೋರ್ ರೆಡ್ಡಿ ಪರವಾಗಿ ಅಲ್ಲು ಅರ್ಜುನ್ ಅವರು ಶನಿವಾರ (ಮೇ 11) ಚುನಾವಣಾ ಪ್ರಚಾರ ನಡೆಸಿದ್ದರು. ಆಂಧ್ರ ಪ್ರದೇಶದ ನಂದ್ಯಾಲಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್, ತಮ್ಮ ಆಪ್ತ ಸ್ನೇಹಿತ ರವಿ ಚಂದ್ರ ಕಿಶೋರ್ ರೆಡ್ಡಿಯನ್ನು ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದ್ದರು. ಆದರೆ ಈ ವೇಳೆ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾಡಲಾಗಿದೆ ಎಂದು ಅಲ್ಲು ಅರ್ಜುನ್ ಮತ್ತು ಶಾಸಕ ಶಿಲ್ಪ ರವಿ ಚಂದ್ರ ಕಿಶೋರ್ ರೆಡ್ಡಿ ವಿರುದ್ಧ ಚುನಾವಣಾ ಅಧಿಕಾರಿಗಳು ಕೇಸ್ ದಾಖಲು ಮಾಡಿದ್ದಾರೆ. ನಂದ್ಯಾಲದಲ್ಲಿರುವ ರವಿ ಚಂದ್ರ…

Read More

ಮಾಜಿ ಮೈಕ್ರೋಸಾಫ್ಟ್ ಸಿಇಒ ಬಿಲ್ ಗೇಟ್ಸ್ ತಂತ್ರಜ್ಞಾನದ ಅನುಕೂಲಗಳು ಮತ್ತು ಅನಾನುಕೂಲಗಳನ್ನು ಸಾಕಷ್ಟು ಹತ್ತಿರದಿಂದ ನೋಡಿದ್ದಾರೆ. ಈ ಕಾರಣದಿಂದಲೇ ಅದರ ದುಷ್ಪರಿಣಾಮಗಳನ್ನು ತಪ್ಪಿಸಲು ಅವರು ತಮ್ಮ ಮೂವರು ಮಕ್ಕಳಿಗೆ 14 ವರ್ಷ ವಯಸ್ಸಿನವರೆಗೆ ಯಾವುದೇ ಫೋನ್ ಅಥವಾ ಟ್ಯಾಬ್ಲೆಟ್ ಅನ್ನು ನೀಡಿಲ್ಲ. ಮಕ್ಕಳಿಗೆ ಸ್ಮಾರ್ಟ್‌ಫೋನ್ ನೀಡಲು ನೀವು ಎಷ್ಟು ಸಮಯ ಕಾಯುತ್ತೀರೋ ಅಷ್ಟು ಒಳ್ಳೆಯದು. ಕೆಲವು ತಜ್ಞರ ಪ್ರಕಾರ ಮಕ್ಕಳಿಗೆ ಮೊಬೈಲ್ ಫೋನ್ ನೀಡಲು 12 ರಿಂದ 14 ಸೂಕ್ತ ವಯಸ್ಸು ಎಂದು ಪರಿಗಣಿಸಲಾಗಿದೆ. ಆದಾಗ್ಯೂ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ಸ್ಮಾರ್ಟ್‌ಫೋನ್‌ಗಳನ್ನು ನೀಡುವುದು ವ್ಯಸನಕಾರಿ ಆನ್‌ಲೈನ್ ಬೆದರಿಸುವಿಕೆ, ಗೇಮಿಂಗ್‌ ಅಥವಾ ಸೆಕ್ಸ್‌ಟಿಂಗ್‌ನಂತಹ ಸಮಸ್ಯೆಗಳಿಗೆ ಅವರು ತುತ್ತಾಗಬಹುದು. ಓದಿನ ಬಗ್ಗೆ ಆಸಕ್ತಿ ಕಳೆದುಕೊಳ್ಳಬಹುದು. ಉದ್ಯಮಿ ಬಿಲ್ ಗೇಟ್ಸ್‌ಗೆ ಮೂವರು ಮಕ್ಕಳಿದ್ದಾರೆ. ಮೂವರ ವಯಸ್ಸು ಕ್ರಮವಾಗಿ 20, 17 ಮತ್ತು 14 ವರ್ಷಗಳು. ಅವರ ಬಳಿ ಐಫೋನ್ ಇಲ್ಲ. ಬಿಲ್ ಗೇಟ್ಸ್ ಅವರು ತಮ್ಮ ಮಕ್ಕಳಿಗೆ 14 ವರ್ಷಕ್ಕಿಂತ ಮೊದಲು ಫೋನ್ ಬಳಸಲು ಅನುಮತಿಸಿಲ್ಲವಂತೆ.…

Read More

ಮೊದಲ ಸಿನಿಮಾದಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಾಯಕಿಯಾಗುವ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಟಿ ಆರಾಧನಾ ರಾಮ್ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ದಿನೇ ದಿನೇ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡುತ್ತಿರುವ ಕಾಟೇರನ ಬೆಡಗಿ ಇದೀಗ ಸಖತ್ ಹಾಟ್ ಆಗಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆದರೆ ನಟಿಯ ಫೋಟೋ ನೋಡಿ ಅಭಿಮಾನಿಗಳು ಅಸಮಾಧಾನ ಹೊರ ಹಾಕಿದ್ದಾರೆ. ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕ ದಿವಂಗತ ರಾಮ್ ಹಾಗೂ ನಟಿ ಮಾಲಾಶ್ರೀ ಮಗಳು ಆರಾಧನಾಗೆ ಮೊದಲ ಚಿತ್ರದಲ್ಲಿ ದರ್ಶನ್ ರಂತಹ ಸ್ಟಾರ್ ನಟನ ಜೊತೆ ನಟಿಸುವ ಅವಕಾಶ ಸಿಕ್ಕಿತ್ತು. ಈ ಸಿನಿಮಾದಲ್ಲಿ ಆರಾಧಾನ ಹಳ್ಳಿ ಹುಡುಗಿಯಾಗಿ ನಟಿಸಿದ್ದು, ಇದರಿಂದ ಅಪಾರ ಅಭಿಮಾನಿಗಳನ್ನು ಸಹ ಪಡೆದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ಆರಾಧನಾ ಇತ್ತೀಚೆಗೆ ಹೆಸರಾಂತ ಫೋಟೋಗ್ರಾಫರ್ ಡಬ್ಬು ರತ್ನಾನಿ ಅವರಿಂದ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಅದನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬೋಲ್ಡ್ ಆಗಿರುವ ಫೋಟೋಗೆ ಸಾಕಷ್ಟು ಮಂದಿ…

Read More