Author: Author AIN

ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಮಧ್ಯೆ ಪ್ರೀತಿ ಇದೆ ಅನ್ನೋದು ಗೊತ್ತೆ ಇದೆ. ಸಾಕಷ್ಟು ಕಡೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ ಜೋಡಿ ಹಕ್ಕಿಗಳು ನಡೆ ಇದೀಗ ಅನುಮಾನ ಹುಟ್ಟಿಹಾಕಿದೆ. ಇತ್ತೀಚೆಗೆ ವಿಜಯ್ ದೇವರಕೊಂಡ ಅವರ ಬರ್ತ್​ಡೇ ಇತ್ತು. ಆದರೆ, ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಜನ್ಮದಿನದ ಶುಭಾಶಯ ಕೋರಿಲ್ಲ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಈ ಕಾಂಬಿನೇಷನ್​ನ ಪ್ರೇಕ್ಷಕರು ಸಖತ್ ಇಷ್ಟಪಟ್ಟರು. ಆ ಬಳಿಕ ಇಬ್ಬರ ಮಧ್ಯೆ ಆಪ್ತತೆ ಬೆಳೆಯಿತು. ಕೆಲವು ವರದಿಗಳ ಪ್ರಕಾರ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಒಟ್ಟಾಗಿದ್ದಾರೆ. ಹಲವು ಕಡೆಗಳಲ್ಲಿ ಇವರು ಪ್ರವಾಸ ತೆರಳಿದ್ದಾರೆ. ಆದರೆ, ಈ ವಿಚಾರದಲ್ಲಿ ಇವರು ಬಾಯಿ ಬಿಟ್ಟಿಲ್ಲ. ಈಗ ರಶ್ಮಿಕಾ ಮಂದಣ್ಣ ಅವರು ವಿಜಯ್​ ಬರ್ತ್​ಡೇಗೆ ವಿಶ್ ಮಾಡದೆ ಇರುವುದು ಸಾಕಷ್ಟು ಅನುಮಾನ ಮೂಡಿಸಿದೆ. ಕಳೆದ ವರ್ಷ ರಶ್ಮಿಕಾ ಅವರು ವಿಜಯ್ ದೇವರಕೊಂಡಗೆ ಇನ್​ಸ್ಟಾಗ್ರಾಮ್…

Read More

ವಿಶ್ವದ 5ನೇ ಅತೀ ಎತ್ತರದ ಶಿಖರ ಮಕಾಲು ಪರ್ವತವನ್ನು ಏರಿದ ಬಳಿಕ ನೇಪಾಳದ ಶೆರ್ಪ(ಮಾರ್ಗದರ್ಶಿ) ಶಿಖರದಲ್ಲಿ ಸಾವನ್ನಪ್ಪಿರುವುದಾಗಿ ನೇಪಾಳದ ಅಧಿಕಾರಿಗಳು ತಿಳಿಸಿದ್ದಾರೆ. 53 ವರ್ಷದ ತೆಂಜಿ ಶೆರ್ಪ ಸೋಮವಾರ 27,838 ಅಡಿ ಎತ್ತರದ ಮಕಾಲು ಪರ್ವತದ ಶಿಖರವನ್ನು ವಿದೇಶಿ ಪರ್ವತಾರೋಹಿಗಳ ಜತೆ ಯಶಸ್ವಿಯಾಗಿ ಏರಿದ್ದರು. ಆದರೆ ಪರ್ವತದಿಂದ ಕೆಳಗೆ ಇಳಿಯುವಾಗ ಮೃತಪಟ್ಟಿದ್ದಾರೆ. ಶೆರ್ಪ ಅಸೌಖ್ಯಗೊಂಡಾಗ ತಂಡದ ಇತರ ಸದಸ್ಯರ ನೆರವಿನಿಂದ ಕೆಳಗೆ ಇಳಿಯುವ ಪ್ರಯತ್ನದಲ್ಲಿ ಮೃತಪಟ್ಟಿದ್ದಾರೆ ಎಂದು ನೇಪಾಳದ ಪ್ರವಾಸೋದ್ಯಮ ಇಲಾಖೆಯ ರಾಕೇಶ್ ಗುರುಂಗ್‍ರನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ಧಿಸಂಸ್ಥೆ ವರದಿ ಮಾಡಿದೆ. ಈ ಬಾರಿ ಮಕಾಲು ಪರ್ವತ ಏರಲು 59 ವಿದೇಶಿ ಪರ್ವತಾರೋಹಿಗಳಿಗೆ ನೇಪಾಳ ಸರಕಾರ ಅನುಮತಿ ನೀಡಿದೆ.

Read More

ಎಪ್ರಿಲ್ 13ರಂದು ಹಾರ್ಮುಜ್ ಜಲಸಂಧಿಯ ಬಳಿ ಇರಾನ್ ವಶಕ್ಕೆ ಪಡೆದಿದ್ದ ಪೋರ್ಚುಗೀಸ್ ಧ್ವಜ ಹೊಂದಿದ್ದ ಹಡಗಿನಲ್ಲಿದ್ದ 25 ಸಿಬ್ಬಂದಿಗಳಲ್ಲಿ 7 ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಿದ್ದು ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ ಎಂದು ಪೋರ್ಚುಗಲ್‍ನ ವಿದೇಶಾಂಗ ಇಲಾಖೆ ತಿಳಿಸಿದೆ. ಬಿಡುಗಡೆಗೊಂಡವರಲ್ಲಿ ಐವರು ಭಾರತೀಯರು, ಓರ್ವ ಫಿಲಿಪ್ಪೀನ್ಸ್ ಹಾಗೂ ಓರ್ವ ಎಸ್ಟೋನಿಯಾ ಪ್ರಜೆಗಳು ಸೇರಿದ್ದಾರೆ. ಪೋರ್ಚುಗೀಸ್ ಧ್ವಜ ಹೊಂದಿರುವ ಎಂಎಸ್‍ಸಿ ಏರೀಸ್ ಹಡಗನ್ನು ಎಪ್ರಿಲ್ 13ರಂದು ಇರಾನ್‍ನ ರೆವೊಲ್ಯುಷನರಿ ಗಾಡ್ರ್ಸ್ ವಶಕ್ಕೆ ಪಡೆದಿತ್ತು. ಕಂಟೈನರ್ ಹಡಗು ಇಸ್ರೇಲ್ ಜತೆ ಸಂಪರ್ಕ ಹೊಂದಿತ್ತು ಎಂದು ಇರಾನ್ ವಿದೇಶಾಂಗ ಇಲಾಖೆ ತಿಳಿಸಿತ್ತು. ಇರಾನ್‍ನ ಕ್ರಮವನ್ನು ಸ್ವಾಗತಿಸಿರುವ ಪೋರ್ಚುಗಲ್, ಉಳಿದ 17 ಸಿಬ್ಬಂದಿಗಳನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿದೆ. ಹಡಗಿನ ಎಲ್ಲಾ ಸಿಬ್ಬಂದಿಗಳನ್ನೂ ಮಾನವೀಯ ನೆಲೆಯಲ್ಲಿ ಬಿಡುಗಡೆಗೊಳಿಸಲಾಗುವುದು. ಆದರೆ ಜಫ್ತಿ ಮಾಡಿರುವ ಹಡಗನ್ನು ಬಿಡುಗಡೆಗೊಳಿಸುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವರು ಕಳೆದ ವಾರ ಹೇಳಿದ್ದರು.

Read More

ಕೆಜಿಎಫ್ ಸಿನಿಮಾದ ಬಳಿಕ ಯಶ್ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಆರಂಭವಾಗಿದೆ. ಟಾಕ್ಸಿಕ್ ಸಿನಿಮಾದ ಕುರಿತು ದಿನಕ್ಕೊಂದು ಹೊಸ ಹೊಸ ಸುದ್ದಿಗಳು ಹರಿದಾಡುತ್ತಿದೆ. ಇದೀಗ ಚಿತ್ರತಂಡಕ್ಕೆ ಮಾಜಿ ವಿಶ್ವಸುಂದರಿ ನಟಿ ಐಶ್ವರ್ಯಾ ರೈ ಎಂಟ್ರಿಕೊಡಲಿದ್ದಾರೆ ಎಂಬ ಸುದ್ದಿ ಕೇಳಿ ಬರ್ತಿದೆ. ಕೆಜಿಎಫ್ ಸಿನಿಮಾ ರಿಲೀಸ್ ಆದ ಸಾಕಷ್ಟು ಸಮಯದ ಬಳಿಕ ಯಶ್ ಟಾಕ್ಸಿಕ್ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾಗಾಗಿ ಬೆಂಗಳೂರಿನಲ್ಲಿ ಈಗಾಗಲೇ ಬೃಹತ್ ಸೆಟ್ ಹಾಕಿದ್ದು, ಇನ್ನೇನು ಸದ್ಯದಲ್ಲೇ ಶೂಟಿಂಗ್ ಕೂಡ ಶುರುವಾಗಲಿದೆ. ಇತ್ತೀಚೆಗೆ ಯಶ್ ಸಿನಿಮಾದಲ್ಲಿ ಕರೀನಾ ಕಪೂರ್ ನಟಿಸುವ ಸುದ್ದಿ ಭಾರೀ ಚರ್ಚೆಯಾಗಿತ್ತು. ಯಶ್ ಸಹೋದರಿ ಪಾತ್ರಕ್ಕೆ ಅವರನ್ನು ಸಂಪರ್ಕಿಸಿದೆ ಎನ್ನಲಾಗಿತ್ತು. ಆದರೆ ಡೇಟ್ಸ್ ಸಮಸ್ಯೆಯಿಂದ ಕರೀನಾ ಹೊರನಡೆದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬೆನ್ನಲ್ಲೇ ನಯನತಾರಾ ಹೆಸರು ಚಾಲ್ತಿಗೆ ಬಂತು. ಇದರ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವ ಮೊದಲೇ ಐಶ್ವರ್ಯಾ ರೈ ಹೆಸರು ಚರ್ಚೆಗೆ ಗ್ರಾಸವಾಗಿದೆ. ‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಸಹೋದರಿ ಪಾತ್ರಕ್ಕೆ ತುಂಬಾನೇ ಪ್ರಾಮುಖ್ಯತೆ ಇದೆ.…

Read More

ಬಾಲಿವುಡ್ ಬ್ಯೂಟಿ ಅನನ್ಯಾ ಪಾಂಡೆ ಹಾಗೂ ನಟ ಆದಿತ್ಯ ರಾಯ್ ಕಪೂರ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಹೋದಲ್ಲಿ ಬಂದಲೆಲ್ಲಾ ಕೈ ಕೈ ಹಿಡಿದು ಸುತ್ತಾಡ್ತಿದ್ದ ಜೋಡಿ ಇದೀಗ ಬ್ರೇಕ್ ಅಪ್ ಮಾಡಿಕೊಂಡಿದೆ. ಈ ಬೆನ್ನಲ್ಲೇ ಆದಿತ್ಯ ನಟಿ ಸಾರಾ ಅಲಿ ಖಾನ್ ಜೊತೆ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಕೇಳಿ ಬರ್ತಿದೆ. ಆದಿತ್ಯ ರಾಯ್ ಕಪೂರ್ ಅವರು ಸಾರಾ ಅಲಿ ಖಾನ್ (Sara Ali Khan) ಅವರೊಂದಿಗೆ ಪಾರ್ಟಿಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪಾರ್ಟಿಯ ಹಲವು ಫೋಟೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ವೈರಲ್ ಆದ ಫೋಟೋದಲ್ಲಿ ಆದಿತ್ಯ ಮತ್ತು ಸಾರಾ ಅವರು ನಿರ್ಮಾಪಕ ಅನುರಾಗ್ ಬಸು ಅವರೊಂದಿಗೆ ಸಮಯವನ್ನು ಕಳೆಯುತ್ತಿರುವುದು ಕಾಣಬಹುದು. ‘ಮೆಟ್ರೋ ಇನ್ ಡಿನೋ’ ಸಿನಿಮಾ ಸೆಟ್‌ನಲ್ಲಿ ಆಯೋಜಿಸಲಾದ ನಿರ್ದೇಶಕರ ಹುಟ್ಟುಹಬ್ಬದ ಸಂದರ್ಭದ ಫೋಟೋಗಳಿವು ಎನ್ನಲಾಗುತ್ತಿದೆ. ಆದಿತ್ಯ ಮತ್ತು ಸಾರಾ ಚಿತ್ರಗಳಲ್ಲಿ ಪರಸ್ಪರ ಹತ್ತಿರವಾಗಿ ನಿಂತಿದ್ದಾರೆ. 2022ರಲ್ಲಿ ಅನನ್ಯಾ ಮತ್ತು ಆದಿತ್ಯ ಪ್ರೀತಿಯಲ್ಲಿದ್ದಾರೆ ಎಂಬ ಸುದ್ದಿ ಕೇಳಿ…

Read More

ಬಾಲಿವುಡ್ ನಟ ರಣ್‌ವೀರ್ ಸಿಂಗ್ ಹಾಗೂ ನಟಿ ದೀಪಿಕಾ ಪಡುಕೋಣೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ರಣ್ ವೀರ್ ಮದುವೆ ಫೋಟೋಗಳನ್ನು ಡಿಲೀಟ್ ಮಾಡಿ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಈ ಮಧ್ಯೆ ದಂಪತಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಳ್ಳುವ ಮೂಲಕ ಗಾಸಿಪ್‌ಗಳಿಗೆ ತೆರೆ ಎಳೆದಿದ್ದಾರೆ. ಈ ಮಧ್ಯೆ ದೀಪಿಕಾ ಫೋಟೋ ತೆಗೆಯಲು ಬಂದ ಕ್ಯಾಮೆರಾಗೆ ಪಂಚ್ ನೀಡಿದ್ದು ಮೊಬೈಲ್ ಕಿತ್ತೆಸೆದಿದ್ದಾರೆ. ದೀಪಿಕಾ ಅವರ ಬೇಬಿ ಬಂಪ್ ಲುಕ್ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಆದರೆ ನಟಿ ಲೂಸ್ ಡ್ರೆಸ್ ಹಾಕಿ ನಡೆದುಬರುತ್ತಿದ್ದರಿಂದ ಅದು ಸಾಧ್ಯವಾಗಿಲ್ಲ. ಈ ವೇಳೆ ಅಭಿಮಾನಿಯೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ನಟಿಯ ಫೋಟೋ ತೆಗೆಯಲು ಮುಂದಾಗಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಸೆಲೆಬ್ರಿಟಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಂದಾಗುತ್ತಾರೆ. ಆದರೆ ಇದರಿಂದ ಸೆಲೆಬ್ರಿಟಿಗಳಿಗೆ ಕಿರಿಕಿರಿ ಆಗೋದು ಸಹಜ. ಅಭಿಮಾನಿಯೊಬ್ಬರು ನಟಿಯ ಫೋಟೋ ತೆಗೆಯಲು ಮುಂದಾದ ವೇಳೆ ಕೋಪಗೊಂಡ ನಟಿ  ಕ್ಯಾಮೆರಾಗೆ ಪಂಚ್ ನೀಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್…

Read More

ಕಿರುತೆರೆ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತಾಗಿ ನಟಿ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದಾರೆ. ಮಾರ್ಫಿಂಗ್ ಮಾಡಿರುವವರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಮಾರ್ಫಿಂಗ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನಟಿ ಜ್ಯೋತಿ ರೈ ಮನವಿ ಮಾಡಿದ್ದಾರೆ. ನನ್ನ ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು ದೂರಿನಲ್ಲಿ ನಟಿ ಕಳವಳ ವ್ಯಕ್ತಪಡಿಸಿದ್ದಾರೆ.‌ ನಾನು ಇಂಟರ್‌ನೆಟ್ ಮತ್ತು ಸಾಮಾಜಿಕ ಜಾಲತಾಣಗಳನ್ನು ನಿತ್ಯ ಬಳಕೆ ಮಾಡುತ್ತೇನೆ. ಇತ್ತೀಚಿನ ದಿನಗಳಲ್ಲಿ ಫೇಕ್ ಅಕೌಂಟ್‌ಗಳ ಮೂಲಕ ನನಗೆ ಮೆಸೇಜ್‌ಗಳು ಬರುತ್ತಿವೆ. ನನ್ನ ಫೋಟೋಗಳ ಜೊತೆಗೆ ಇಂಟರ್‌ನೆಟ್ ಡೌನ್‌ಲೋಡ್ ಮಾಡಲಾದ ನಗ್ನ ಹಾಗೂ ಅಶ್ಲೀಲ ಚಿತ್ರಗಳನ್ನು ಮಾರ್ಫಿಂಗ್ ಮಾಡಿ ನನ್ನ ಇನ್‌ಬಾಕ್ಸ್‌ಗೆ ಕಳುಹಿಸುತ್ತಿದ್ದಾರೆ. ನನ್ನ ಇನ್ಸ್ಟಾಗ್ರಾಂ ಸ್ಟೋರಿಗಳಲ್ಲಿ ಹಾಕಲಾದ ಫೋಟೋಗಳನ್ನು ಬಳಸಿ ಮಾರ್ಫಿಂಗ್ ಮಾಡಲಾಗಿದೆ. ನನಗೆ ಕಿರುಕುಳ ನೀಡುವ ಮತ್ತು…

Read More

ಕನ್ನಡ ಕಿರುತೆರೆಯ ಖ್ಯಾತ ನಟಿ, ಬಿಗ್​ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ ಸೋಷಿಯಲ್ ಮೀಡಿಯಾದಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸದಾ ತಮ್ಮ ಸ್ಟೈಲಿಶ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿರುವ ತನಿಷಾ ಇದೀಗ ಜಂಪ್‌ಸೂಟ್ ಧರಿಸಿ ತಮ್ಮ ಮುದ್ದಿನ ನಾಯಿಯೊಂದಿಗೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ರೆಡ್‌ ಕಲರ್‌ನಲ್ಲಿ ವೈಟ್‌ ಸ್ಟ್ರೈಪ್‌ ಇರೋ ಡ್ರೆಸ್‌ನ್ನು ತನಿಷಾ ಧರಿಸಿದ್ದಾರೆ. ಇದು ಹೈ ಸ್ಲಿಟ್ ಡ್ರೆಸ್ ಆಗಿದ್ದು ತನಿಷಾ ತೊಡೆ ಕಾಣುವಂತೆ ಬೋಲ್ಡ್ ಆಗಿ ಫೋಟೋಗೆ ಫೋಸ್ ನೀಡಿದ್ದಾರೆ.  ಜೊತೆಗೆ ತನಿಷಾ ತಮ್ಮ ಮುದ್ದಾದ ನಾಯಿ ಮರಿಯನ್ನು ಹಿಡಿದುಕೊಂಡು ಫೋಟೋಸ್‌ ಕ್ಲಿಕ್ಕಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಪೋಟೋಸ್ ಶೇರ್ ಮಾಡಿದ ತನಿಷಾ ಇದಕ್ಕೆ ‘ನಾನ್ ಏನ್ ಮಾಡ್ಲಿ ಸ್ವಾಮಿ, ನಮ್ ಹುಡುಗಿ ನಾಯಿ ಪ್ರೇಮಿ’ ಅನ್ನೋ ಸಾಂಗ್ ಸಹ ಹಾಕಿಕೊಂಡಿದ್ದಾರೆ. ನಟಿ ಬಿಗ್​​ಬಾಸ್ 10 ನಂತರ ಫುಲ್ ಬ್ಯುಸಿಯಾಗಿದ್ದಾರೆ. ಅವರು ಬಿಗ್​​ಬಾಸ್ ಮನೆಯಿಂದ ಹೊರಗೆ ಬಂದ ನಂತರವೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದೆ. ಅವದು ಹೆಚ್ಚಿನ ಇವೆಂಟ್​ಗಳಲ್ಲಿಯೂ ನಟಿ…

Read More

ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್‌ನ ಬೇಡಿಕೆಯ ನಟಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದೀಗ ಕಿರಿಕ್ ಬ್ಯೂಟಿ ಬಾಲಿವುಡ್‌ ಬ್ಯಾಡ್‌ ಬಾಯ್‌ ಸಲ್ಮಾನ್ ಖಾನ್‌ಗೆ ಜೋಡಿಯಾಗಿದ್ದಾರೆ. ಯೆಸ್. ರಶ್ಮಿಕಾ ಮಂದಣ್ಣ ಮತ್ತು ಸಲ್ಮಾನ್ ಖಾನ್ ಜೋಡಿಯಾಗಿ ನಟಿಸುತ್ತಿರುವ ಶಿಕಂದರ್ ಸಿನಿಮಾ 2025ರ ಈದ್‌ಗೆ ರಿಲೀಸ್ ಆಗಲಿದೆ. ದೊಡ್ಡ ತೆರೆ ಮೇಲೆ ಈ ಕಾಂಬಿನೇಷನ್‌ ನೋಡಲು ಕಾಯುತ್ತಿದ್ದೀವಿ’ ಎಂದು ನಾಡಿಯಾವಾಲಾ ಗ್ರಾಂಡ್‌ಸನ್‌ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ. ಈ ಚಿತ್ರವನ್ನು ಏ ಆರ್‌ ಮುರುಗಾದಾಸ್‌ ನಿರ್ದೇಶನ ಮಾಡುತ್ತಿದ್ದಾರೆ.  ‘ನೀವೆಲ್ಲರೂ ತುಂಬಾ ದಿನಗಳಿಂದ ಅಪ್‌ಡೇಟ್‌ ನೀಡಿ ಎಂದು ಕೇಳುತ್ತಿದ್ದೀರಿ, ಇಲ್ಲಿದೆ ನೋಡಿ….ಸರ್ಪ್ರೈಸ್. ಶಿಕಂದರ್‌ ಚಿತ್ರತಂಡದ ಜೊತೆ ಕೆಲಸ ಮಾಡಲು ತುಂಬಾನೇ ಖುಷಿಯಾಗುತ್ತಿದೆ’ ಎಂದು ರಶ್ಮಿಕಾ ಮಂದಣ್ಣ ಪೋಸ್ಟ್ ಮಾಡಿದ್ದಾರೆ. 

Read More

ದುಬಾರಿ ಉಡುಗೊರೆ ಪಡೆದ ಆರೋಪದಡಿ ಭಾರತ ಮೂಲದ ಸಿಂಗಪುರ ಸರ್ಕಾರದ ಮಾಜಿ ಸಚಿವ ಎಸ್.ಈಶ್ವರನ್ ವಿರುದ್ಧದ ಆರೋಪಗಳ ವಿಚಾರಣೆಗೆ ಅಲ್ಲಿನ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ವಿಚಾರಣೆಯು ಬರುವ ಆಗಸ್ಟ್‌ನಿಂದ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಈಶ್ವರನ್ ₹246 ಕೋಟಿ ಮೌಲ್ಯದ ಉಡುಗೊರೆ ಸ್ವೀಕರಿಸಿದ ಆರೋಪ ಕೇಳಿ ಬಂದಿದೆ. ನ್ಯಾಯಾಲಯದಲ್ಲಿ ಈಶ್ವರನ್ ಪರ ವಕೀಲ ದೇವಿಂದರ್ ಸಿಂಗ್ ಅವರು ವಾದ ಮಂಡಿಸಿ, ‘ಸಚಿವರಾಗಿದ್ದ ಅವಧಿಯಲ್ಲಿ ಅದರ ಸ್ಥಾನಮಾನದ ಇತಿಮಿತಗಳ ಅರಿವು ನನ್ನ ಕಕ್ಷೀದಾರರಿಗೆ ಇತ್ತು. ಹೀಗಾಗಿ ತಮ್ಮ ಮೇಲೆ ಹೊರಿಸಲಾಗಿರುವ ಎಲ್ಲಾ ಆರೋಪಗಳ ವಿಚಾರಣೆಯನ್ನೂ ನ್ಯಾಯಾಲಯ ನಡೆಸಲಿ. ಅದನ್ನು ಎದುರಿಸಲು ಸಿದ್ಧ ಎಂದಿದ್ದಾರೆ’. ‘ಕುಟುಂಬದವರು ಹಾಗೂ ವೈಯಕ್ತಿಕ ಸ್ನೇಹಿತರಿಂದ ಉಡುಗೊರೆ ಸ್ವೀಕರಿಸುವುದನ್ನು ತಡೆಯುವುದು ಸಚಿವರಿಂದ ಸಾಧ್ಯವಾಗಿರಲಿಲ್ಲ. ಆದರೆ ಆರೋಪ ಕೇಳಿಬಂದಿರುವ ಉಡುಗೊರೆಯು ರಿಯಲ್ ಎಸ್ಟೇಟ್‌ ಉದ್ಯಮಿ ಆಂಗ್ ಬೆಂಗ್‌ ಸೆಂಗ್‌ ಹಾಗೂ ನಿರ್ಮಾಣ ಸಂಸ್ಥೆಯ ಮಾಲೀಕ ಲುಮ್ ಕಾಕ್‌ ಸೆಂಗ್ ಅವರು ನೀಡಿದ್ದು ಎಂಬುದರ ಮಾಹಿತಿ ಈಶ್ವರನ್‌ಗೆ ಇರಲಿಲ್ಲ. ಸ್ನೇಹಿತರು ನೀಡಿದ…

Read More