ಭದ್ರತೆಯ ಕಾರಣಕ್ಕಾಗಿ ತನ್ನನ್ನು ಗೃಹಬಂಧನದಿಂದ ಜೈಲಿಗೆ ಸ್ಥಳಾಂತರಿಸಲು ಸೂಚಿಸಬೇಕೆಂದು ಇಮ್ರಾನ್ಖಾನ್ ಅವರ ಪತ್ನಿ ಬುಷ್ರಾ ಬೀಬಿ ಸಲ್ಲಿಸಿದ್ದ ಅರ್ಜಿಯನ್ನು ಪಾಕಿಸ್ತಾನದ ನ್ಯಾಯಾಲಯ ಸ್ವೀಕರಿಸಿದೆ ಎಂದು ವಕೀಲರು ಹೇಳಿದ್ದಾರೆ. ಈ ಮೂಲಕ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿ ಅವರನ್ನುಇಮ್ರಾನ್ ಖಾನ್ ಇರುವ ಅಡಿಯಾಲಾ ಜೈಲಿಗೆ ಸ್ಥಳಾಂತರಿಸುವಂತೆ ಇಸ್ಲಾಮಾಬಾದ್ ಕೋರ್ಟ್ ಆದೇಶಿಸಿದೆ. ತಮ್ಮನ್ನು ಅಡಿಯಾಲಾ ಜೈಲಿಗೆ ವರ್ಗಾಯಿಸುವಂತೆ ಕೋರಿ ಬೀಬಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕಳೆದ ವಾರ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಮಿಯಾಂಗುಲ್ ಹಸನ್ ಔರಂಗಜೇಬ್, ತೀರ್ಪನ್ನು ಕಾಯ್ದಿರಿಸಿದ್ದರು. ಹೈಕೋರ್ಟ್ನ ಈ ಆದೇಶವನ್ನು, ಕಾನೂನು ಹೋರಾಟದಲ್ಲಿ ಬುಶ್ರಾ ಬೀಬಿ ಅವರಿಗೆ ದೊರೆತ ದೊಡ್ಡ ಜಯ ಎಂದೇ ವಿಶ್ಲೇಷಿಸಲಾಗುತ್ತಿದೆ. ಸದ್ಯ ಬೀಬಿ ಅವರ ಖಾಸಗಿ ನಿವಾಸವನ್ನೇ ಸಬ್ಜೈಲನ್ನಾಗಿ ಪರಿವರ್ತಿಸಲಾಗಿದ್ದು, ಅಲ್ಲಿಯೇ ಅವರು ಸೆರೆವಾಸದಲ್ಲಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿರುವ 71 ವರ್ಷದ ಬುಶ್ರಾ ಬೀಬಿ ಅವರು, ಇಸ್ಲಾಮಾಬಾದ್ ಹೊರವಲಯದ ಬಾನಿಗಾಲಾ ಎಂಬಲ್ಲಿರುವ ಇಮ್ರಾನ್ ಖಾನ್ ಅವರ ಬಂಗ್ಲೆಯಲ್ಲಿ ಸೆರೆವಾಸ…
Author: Author AIN
ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ರಫೀಕ್ ಚೌಧರಿ ಎಂದು ಗುರುತಿಸಲಾಗಿದ್ದು, ರಾಜಸ್ಥಾನದ ನಾಗೌರ್ ನಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೆ ಒಳಗಾಗಿರುವ ಮೊಹಮ್ಮದ್ ರಫೀಕ್ ಕೂಡ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ತಂಡದ ಸದಸ್ಯನೆಂದು ಹೇಳಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ. ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತನಾದ ಐದನೇ ವ್ಯಕ್ತಿ ಈತನಾಗಿದ್ದಾನೆ. ಈಗಾಗಲೇ ನಾಲ್ಕು ಜನರನ್ನು ಪೊಲೀಸರು ಬಂಧಿಸಿ, ತನಿಖೆಗೆ ಒಳಪಡಿಸಿದ್ದಾರೆ. ಈ ನಾಲ್ವರಲ್ಲಿ ಓರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಲ್ಮಾನ್ ಖಾನ್ ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು. ಈ ವೇಳೆ ಅನುಜ್ ಥಾಪಸ್ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಜ್ ಕುಟುಂಬ ಮುಂಬೈ ಹೈಕೋರ್ಟ್…
ತೆಲುಗು ಸೇರಿದಂತೆ ವಿವಿಧ ಭಾಷೆಯ ಸಿನಿಮಾ ಮತ್ತು ವೆಬ್ ಸಿರೀಸ್ ನಲ್ಲಿ ನಟಿಸಿರುವ ದೇವಿಯಾನಿ ಶರ್ಮಾ ಅವರಿಗೆ ಹ್ಯಾಕರ್ಸ್ ಗಳು ವಿಪರೀತ ತೊಂದರೆ ನೀಡಲಾಗುತ್ತಿದೆಯಂತೆ. ಹ್ಯಾಕರ್ಸ್ ಗಳಿಂದ ತಪ್ಪಿಸಿಕೊಳ್ಳೋಕೆ ಆಗದೇ ನಟಿ ಮೂರು ಬಾರಿ ಮುಂಬೈ ಪೊಲೀಸರಿಗೂ ದೂರು ನೀಡಿದ್ದು ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ನನ್ನ ಮೊಬೈಲ್ ಅನ್ನು ಯಾರೋ ಹ್ಯಾಕ್ ಮಾಡಿದ್ದರು. ಅಥವಾ ಕ್ಲೋನ್ ಮಾಡಿದ್ದರು. ನನ್ನ ಮೊಬೈಲ್ನಲ್ಲಿದ್ದ ನನ್ನ ಖಾಸಗಿ ಮಾಹಿತಿಗಳನ್ನು ಕದಿಯಲಾಗಿದೆ. ನನ್ನನ್ನು ಬ್ಲಾಕ್ ಮೇಲ್ ಮಾಡಲೆಂದು ಅಥವಾ ನನ್ನನ್ನು ಹೆದರಿಸಲೆಂದು ಹೀಗೆ ಮಾಡಲಾಗಿದೆ ಎಂದು ಊಹಿಸುತ್ತಿದ್ದೇನೆ. ಈಗ ಮತ್ತೆ ನನ್ನ ವಾಟ್ಸ್ಆಪ್ ಅನ್ನು ಹ್ಯಾಕ್ ಮಾಡಲಾಗಿದೆ. ನನ್ನ ಮೊಬೈಲ್ನ ಸೆಟ್ಟಿಂಗ್ಸ್ಗಳನ್ನು ಬದಲು ಮಾಡಲಾಗಿದೆ. ನನ್ನ ಮೊಬೈಲ್ ಫೋನ್ ಮೊದಲಿನಂತೆ ಇಲ್ಲ ಎಂಬುದು ನನಗೆ ಖಾತ್ರಿಯಾಗಿದೆ’ ಎಂದಿದ್ದಾರೆ ದೇವಯಾನಿ ಶರ್ಮಾ. ‘ನನ್ನ ಮೊಬೈಲ್ ಬಳಸಿ ಬೇರೆ ಯಾರಿಗಾದರೂ ಸಂದೇಶ ಕಳುಹಿಸಲಾಗಿದೆಯೇ ಎಂಬುದು ನನಗೆ ಗೊತ್ತಿಲ್ಲ. ಒಂದೊಮ್ಮೆ ಹಾಗೆ ಯಾರಿಗಾದರೂ ಸಂದೇಶ…
ತೆಲುಗಿನ ಆ ಒಕ್ಕಟಿ ಆಡಕ್ಕು ಸಿನಿಮಾ ಮೇ 3ರಂದು ತೆರೆಗೆ ಬಂದಿದ್ದು ಚಿತ್ರದ ನಟಿ ಫರಿಯಾ ಅಬ್ದುಲ್ಲಾ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಸಂದರ್ಶನದಲ್ಲಿ ಮದುವೆ ಬೇಡ ಆದರೆ ಮಕ್ಕಳು ಬೇಕು ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ನನಗೆ ನನ್ನ ಮದುವೆಯ ಬಗ್ಗೆ ಯಾವುದೇ ಭರವಸೆ ಇಲ್ಲ. ನಾನು ಖಂಡಿತವಾಗಿಯೂ ಮದುವೆಯಾಗಬೇಕು ಎಂದು ಯೋಚಿಸುವುದಿಲ್ಲ. ಆದರೆ ನಾನು ಮಕ್ಕಳನ್ನು ಪ್ರೀತಿಸುತ್ತೇನೆ. ಮದುವೆಯಾಗದೇ ಮಕ್ಕಳನ್ನು ಪಡೆಯಲು ಬಯಸುತ್ತೇನೆ ಎಂದು ನಟಿ ಹೇಳಿದ್ದು, ಸದ್ಯ ನಟಿಯ ಹೇಳಿಕೆ ವೈರಲ್ ಆಗಿದೆ. ‘ಜಾತಿರತ್ನಲು’ ಚಿತ್ರದ ಮೂಲಕ ಟಾಲಿವುಡ್ಗೆ ಎಂಟ್ರಿ ಕೊಟ್ಟ ಫರಿಯಾ ಆ ಬಳಿಕ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ನರೇಶ್ಗೆ ನಾಯಕಿಯಾಗಿ ಒಕ್ಕಟಿ ಅಡಕ್ಕು ಚಿತ್ರದ ಮೂಲಕ ಸದ್ದು ಮಾಡುತ್ತಿರುವ ನಟಿಯ ಹೇಳಿಕೆ ಸಾಮಾಜಿಕ ಜಾಲಾ ತಾಣದಲ್ಲಿ ಸುದ್ದಿಯಾಗುತ್ತಿದೆ.
ಮಾಲಿವುಡ್ ಚಿತ್ರರಂಗದ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಂಗೀತ್ ಶಿವನ್ 61ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ಮೂಲತಃ ಕೇರಳದ ತಿರುವನಂತಪುರಂನವರಾದ ಸಂಗೀತ್ ಶಿವನ್, 1989ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಆಮಿರ್ ಖಾನ್ ನಟನೆಯ ‘ರಾಖ್’ ಸಿನಿಮಾಗೆ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಆರಂಭಿಸಿದರು. ಬಳಿಕ 1990ರಲ್ಲಿ ಮಲಯಾಳಂನ ‘ವ್ಯೂಹಂ’ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ನಿರ್ದೇಶಕರಾಗಿ ಭಡ್ತಿ ಪಡೆದರು. ಮೋಹನ್ಲಾಲ್ ನಟನೆಯ ‘ಯೋಧ’ ಸಿನಿಮಾಗೆ ನಿರ್ದೇಶನ ಮಾಡಿ ಖ್ಯಾತಿ ಘಳಿಸಿದ್ದರು. ಬಾಲಿವುಡ್ನಲ್ಲಿ ಸಂಗೀತ್ ಶಿವನ್ ಅವರು ತಮ್ಮದೇ ಚಾಪು ಮೂಡಿಸಿದ್ದರು. ‘ಚುರಾ ಲಿಯಾ ಹೈ ತುಮ್ ನೇ’, ‘ಕ್ಯಾ ಕೂಲ್ ಹೈ ಹಮ್’, ‘ಅಪ್ನ ಸಪ್ನ ಮನಿ ಮನಿ’, ‘ಯಮ್ಲಾ ಪಗ್ಲ ದೀವಾನ 2’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದರು. ಮಲಯಾಳಂನ ‘ರೋಮಾಂಚಂ’ ಸಿನಿಮಾವನ್ನು ಹಿಂದಿಯಲ್ಲಿ ರಿಮೇಕ್ ಮಾಡಲು ಅವರು ಮುಂದಾಗಿದ್ದರು. ಆ ಕೆಲಸ…
ತಮಿಳು, ಮಲಯಾಳಂ, ತೆಲುಗು, ಕನ್ನಡ ಹೀಗೆ ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಊರ್ವಶಿ 90ರ ದಶಕದಲ್ಲಿ ತನ್ನ ಸೌಂದರ್ಯದಿಂದಲೇ ಕೋಟ್ಯಾಂತರ ಅಭಿಮಾನಿಗಳ ಮನಸೆಳೆದ ನಟಿ. ಬಾಲನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಊರ್ವಶಿ ಈಗ ಕೆಲ ವರ್ಷಗಳಿಂದ ತಾಯಿಯಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಭಾಗ್ಯರಾಜ್ ನಿರ್ದೇಶನದ ತಮಿಳಿನ ‘ಮುಂತಾನೈ ಮುಡಿಚು’ ಚಿತ್ರದಲ್ಲಿ ನಾಯಕಿಯಾಗಿ ಸಿನಿಮಾ ಜಗತ್ತಿಗೆ ಕಾಲಿಟ್ಟರು. ಕವಿತಾ ರಂಜನಿಯಾಗಿದ್ದ ನಟಿ ತಮ್ಮ ಹೆಸರನ್ನು ಚಿತ್ರಕ್ಕಾಗಿ ಊರ್ವಶಿ ಎಂದು ಬದಲಾಯಿಸಿಕೊಂಡರು. ತಮಿಳು ಚಿತ್ರರಂಗದ ಪ್ರಮುಖ ನಟಿಯಾಗಿದ್ದ ಊರ್ವಶಿ 2000ರಲ್ಲಿ ಕೇರಳದ ನಟ ಮನೋಜ್ ಜೈನ್ ಅವರನ್ನು ಪ್ರೀತಿಸಿ ವಿವಾಹವಾದರು. ಮದುವೆಯಾದ 8 ವರ್ಷಗಳ ನಂತರ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ವಿಚ್ಛೇದನ ಪಡೆದಿದ್ದು, ದಂಪತಿಗೆ ತೇಜಲಕ್ಷ್ಮಿ ಎಂಬ ಮಗಳಿದ್ದಾಳೆ. ಊರ್ವಶಿಯವರ ಕುಡಿತದ ಚಟದಿಂದಾಗಿ ಮಗಳು ಹಾಗೂ ಪತಿಯಿಂದ ದೂರವಾದರು. ಸದ್ಯ ಊರ್ವಶಿ ಪುತ್ರಿ ತೇಜಲಕ್ಷ್ಮಿ ತಂದೆ ಮನೋಜ್ ಜೊತೆ ವಾಸವಾಗಿದ್ದಾರೆ. 2013ರಲ್ಲಿ ಊರ್ವಶಿ ಶಿವಪ್ರಸಾದ್ ಅವರನ್ನು ಊರ್ವಶಿ ಮರುಮದುವೆಯಾಗಿದ್ದು, 43ನೇ ವಯಸ್ಸಿನಲ್ಲಿ ಮಗನಿಗೆ…
ಕನ್ನಡ ಕಿರುತೆರೆಯಲ್ಲಿ ಮಿಂಚಿ ಸುದ್ದಿಯಾಗಿ ಬಳಿಕ ತೆಲುಗು ಇಂಡಸ್ಟ್ರಿಯಲ್ಲಿ ಸದ್ದು ಮಾಡುತ್ತಿರುವ ಜ್ಯೋತಿ ರೈ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ ಹಾಟ್ ಹಾಟ್ ಫೋಟೋಗಳ ಮೂಲಕವೇ ಸದ್ದು ಮಾಡುತ್ತಿರುವ ನಟಿಯದ್ದು ಎನ್ನಲಾದ ಅಶ್ಲೀಲ ವಿಡಿಯೋವೊಂದು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಜ್ಯೋತಿ ರೈ ಅವರದ್ದು ಎನ್ನಲಾದ ಖಾಸಗಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಆರಂಭಿಸಿದೆ. ಅವರ ಈ ಫೋಟೋಗಳು ಪಕ್ಕದ ಆಂಧ್ರದಲ್ಲೂ ಸಖತ್ ಸದ್ದು ಮಾಡಿವೆ. ತೆಲುಗುವಿನಲ್ಲಿ ಗುಪ್ಪೆದ್ದಂತಾ ಮನಸು ಸೀರಿಯಲ್ ಮೂಲಕ ಅವರು ಮನೆಮಾತಾಗಿದ್ದಾರೆ. ಇದರಲ್ಲಿ ನಾಯಕ ರಿಷಿ ಅವರ ತಾಯಿ ಜಗತಿ ಪಾತ್ರದಲ್ಲಿ ಜ್ಯೋತಿ ರೈ ನಟಿಸಿದ್ದಾರೆ. ಆದರೆ, ಇತ್ತೀಚೆಗೆ ಸೀರಿಯಲ್ನಲ್ಲಿ ಜಗತಿ ಪಾತ್ರವನ್ನು ಮುಕ್ತಾಯ ಮಾಡಲಾಗಿದೆ. ಇದರ ಬೆನ್ನಲ್ಲುಯೇ ಕೆಲವರು ಜ್ಯೋತಿಯ ಅಶ್ಲೀಲ ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದಾರೆ, ಅವರ ಅಶ್ಲೀಲ ವೀಡಿಯೊಗಳು ಲೀಕ್ ಆಗಿವೆ ಮತ್ತು ಅವುಗಳನ್ನು ಯೂಟ್ಯೂಬ್ನಲ್ಲಿ ಪೋಸ್ಟ್ ಮಾಡಲಾಗುವುದು ಎಂದು ಹೇಳಿದ್ದಾರೆ. twitter.com/EDIT_BY_ABHI ಎನ್ನುವ ಟ್ವಿಟರ್ ಖಾತೆಯಲ್ಲಿ ‘Now jyothi…
ನಟ, ನಿರ್ಮಾಪಕ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ನಿರ್ಮಾಪಕರೊಬ್ಬರು, ನಿರ್ಮಾಪಕರ ಸಂಘದಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಕಮಲ್ ಹಾಸನ್ ನಟಿಸಿ, ಕನ್ನಡದ ನಟ ರಮೇಶ್ ಅರವಿಂದ್ ನಿರ್ದೇಶನ ಮಾಡಿದ್ದ ‘ಉತ್ತಮ ವಿಲನ್’ ಸಿನಿಮಾದ ನಿರ್ಮಾಪಕ ಲಿಂಗುಸ್ವಾಮಿ ಇದೀಗ ಕಮಲ್ ಹಾಸನ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಲಿಂಗುಸ್ವಾಮಿ ಮಾತ್ರವೇ ಅಲ್ಲದೆ ಅವರೊಟ್ಟಿಗೆ ‘ಉತ್ತಮ ವಿಲನ್’ ಸಿನಿಮಾಕ್ಕೆ ಬಂಡವಾಳ ಹೂಡಿದ್ದ ಸುಭಾಷ್ ಚಂದ್ರ ಭೋಸ್ ಸಹ ಕಮಲ್ ವಿರುದ್ಧ ವಂಚನೆ ಆರೋಪ ಮಾಡಿದ್ದು, ತಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ. 2015 ರಲ್ಲಿ ಬಿಡುಗಡೆ ಆದ ಕಮಲ್ ಹಾಸನ್ ನಟನೆಯ ‘ಉತ್ತಮ ವಿಲನ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸೋತ್ತಿತ್ತು. ಆ ಸಿನಿಮಾವನ್ನು ಕನ್ನಡದ ನಟ, ಕಮಲ್ ಹಾಸನ್ ಆಪ್ತ ರಮೇಶ್ ಅರವಿಂದ್ ನಿರ್ದೇಶನ ಮಾಡಿದ್ದರು. ಆ ಸಿನಿಮಾ ಸೋತ ಕಾರಣ, ಲಿಂಗುಸ್ವಾಮಿ ಹಾಗೂ ಸುಭಾಷ್ ಚಂದ್ರ ಭೋಸ್ ಅವರಿಗೆ ಭಾರಿ ನಷ್ಟವಾಗಿತ್ತು. ಸಿನಿಮಾದಿಂದ ಆದ ನಷ್ಟ ತುಂಬಿ ಕೊಡಲು ಅದೇ ನಿರ್ಮಾಪಕರುಗಳೊಟ್ಟಿಗೆ ಮತ್ತೊಂದು ಸಿನಿಮಾ…
ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿ, ನಿರ್ದೇಶಿಸಿದ್ದ ‘ಪ್ರೇಮಲೋಕ’ ಸಿನಿಮಾ ಸೂಪರ್ ಹಿಟ್ ಆಗಿತ್ತು. 1987ರಲ್ಲಿ ರಿಲೀಸ್ ಆದ ಪ್ರೇಮಲೋಕ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದು ಸಾಕಷ್ಟು ವರ್ಷಗಳ ಬಳಿಕ ಸೀಕ್ವೆಲ್ ಬರಲು ಸಿದ್ದವಾಗಿದೆ. ಸದ್ಯ ಸ್ಕ್ರಿಪ್ಟ್ ವರ್ಕ್ ನಡೆಯುತ್ತಿದ್ದು, ಪ್ರೇಮಲೋಕ 2ಗೆ ನಾಯಕಿ ಫೈನಲ್ ಆಗಿದ್ದಾರೆ ಎನ್ನಲಾಗುತ್ತಿದೆ. ಪ್ರೇಮಲೋಕ2ನಲ್ಲಿ ರವಿಚಂದ್ರನ್ ಜೊತೆ ಡ್ಯೂಯೆಟ್ ಹಾಡಲು ತಮಿಳಿನ ತೇಜು ಅಶ್ವಿನಿ ರೆಡಿಯಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಇದುವರೆಗೂ ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಇದೇ ತಿಂಗಳ 30ರಂದು ರವಿಚಂದ್ರನ್ ಬರ್ತ್ಡೇ. ಅಂದು ‘ಪ್ರೇಮಲೋಕ 2’ ಚಿತ್ರ ಲಾಂಚ್ ಆಗಲಿದೆ. ಈ ಸಿನಿಮಾದಲ್ಲಿ ರವಿಚಂದ್ರನ್ ಅವರ ಹಿರಿಯ ಮಗ ಮನೋರಂಜನ್ ಅವರು ಪ್ರಮುಖ ಪಾತ್ರವಹಿಸಲಿದ್ದಾರೆ. ರವಿಚಂದ್ರನ್ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಅನ್ನೋ ಕುತೂಹಲ ಮೂಡಿದೆ. ಈ ಚಿತ್ರದಲ್ಲಿ 20-25 ಸಾಂಗ್ಗಳು ಇರಲಿವೆ ಎಂದು ತಂಡ ಹೇಳಿಕೊಂಡಿದೆ. ರವಿಚಂದ್ರನ್ ಅವರು ಹೀರೋಯಿನ್ಗಳ ಆಯ್ಕೆಯಲ್ಲಿ ಸಾಕಷ್ಟು ಎಚ್ಚರಿಕೆ ವಹಿಸುತ್ತಾರೆ.…
‘ಕೆಜಿಎಫ್’ ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನಟಿ ನೆರವೇರಿಸಿದ್ದಾರೆ. ಈ ವೇಳೆ, ಮತ್ತಷ್ಟು ಎತ್ತರಕ್ಕೆ ಏರುತ್ತೀಯ ಎಂದು ದೈವ ಶ್ರೀನಿಧಿ ಶೆಟ್ಟಿಗೆ ಅಭಯ ನೀಡಿದೆ. ಮಂಗಳೂರಿನ ಹೊರವಲಯದ ಕಿನ್ನಿಗೋಳಿಯ ನಟಿಯ ಕುಟುಂಬದ ಮನೆ ತಾಳಿಪಾಡಿ ಗುತ್ತುವಿನಲ್ಲಿ ಈ ಹರಕೆ ನೇಮೋತ್ಸವ ನಡೆಯಿತು. ಈ ಹಿಂದೆ ತನ್ನ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತಂತೆ ಕಿನ್ನಿಗೋಳಿ ಸಮೀಪ ತಾಳಿಪಾಡಿ ಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ಮಾಡಲಾಗಿದೆ. ಈ ವೇಳೆ, ಶ್ರೀನಿಧಿ ಶೆಟ್ಟಿಯವರ ಕುಟುಂಬ ವರ್ಗದವರು ಸಂಬಂಧಿಕರು ಪಾಲ್ಗೊಂಡಿದ್ದಾರೆ. ತನ್ನ ಯಶಸ್ಸಿನ ಹಿಂದೆ ಕುಟುಂಬದ ದೈವಗಳ ಆಶೀರ್ವಾದ ಇದ್ದು, ತನ್ನ ಇಷ್ಟಾರ್ಥ ಸಿದ್ಧಿಗಾಗಿ ಈ ಹರಕೆ ಹೇಳಿಕೊಂಡಿದ್ದರು. ಅದರಂತೆ ಇದೀಗ ಹರಕೆಯನ್ನು ಶ್ರೀನಿಧಿ ಶೆಟ್ಟಿ ಸಲ್ಲಿಸಿದ್ದಾರೆ. ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀಯ ಎಂದು ದೈವಗಳು ಶ್ರೀನಿಧಿಗೆ ಅಭಯ ನೀಡಿವೆ.