Author: Author AIN

ದಕ್ಷಿಣ ಬ್ರೇಜಿಲ್ ನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಪ್ರವಾಹ ಉಂಟಾಗಿದ್ದು ಜನ ಜೀವನ ಅಸ್ತವ್ಯಸ್ಥವಾಗಿದೆ. ಪ್ರವಾಹದಿಂದು ಇದುವರೆಗೂ 78 ಮಂದಿ ಮೃತಪಟ್ಟಿದ್ದು, ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಹದಿಂದಾಗಿ ಇದುವರೆಗೂ 1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 3,000ಕ್ಕೂ ಹೆಚ್ಚು ಸೈನಿಕರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರ ರಕ್ಷಕರಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ನೀರು, ವಿದ್ಯುತ್ ಇಲ್ಲದೆ ಮನೆಗಳಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲಾಗುತ್ತಿದೆ. ಇದರೊಂದಿಗೆ ಸೇನಾ ಆಸ್ಪತ್ರೆ ಸ್ಥಾಪಿಸಿ ಜನರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರವಾಹದಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದ್ದು ರಸ್ತೆಗಳು ಬಂದ್‌ ಆಗಿವೆ. ರಿಯೊ ಗ್ರಾಂಡೆ ಡೊ ಸುಲ್ ಹೆಚ್ಚು ಪರಿಣಾಮ ಬೀರಿದೆ. ಈ ನಡುವೆ ಡಾಟ್‌ಕಾಂ ಎಂಬ ಕಂಪನಿಯ ಕಟ್ಟಡದಲ್ಲಿ ಕೆಲವರು…

Read More

ಸಿಡ್ನಿ ಆಸ್ಟ್ರೇಲಿಯಾದ ಪರ್ತ್‍ನಲ್ಲಿ ವ್ಯಕ್ತಿಯೊಬ್ಬನನ್ನು ಚೂರಿಯಿಂದ ಇರಿದು ಗಾಯಗೊಳಿಸಿ, ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾದ ಯುವಕನನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಪರ್ತ್‍ನ ದಕ್ಷಿಣದಲ್ಲಿರುವ ವಿಲೆಟ್ಟನ್ ನಗರದ ಕಾರು ಪಾರ್ಕಿಂಗ್ ಪ್ರದೇಶದಲ್ಲಿ 16 ವರ್ಷದ ಯುವಕನೊಬ್ಬ ಹಿಂಸಾತ್ಮಕ ರೀತಿಯಲ್ಲಿ ವರ್ತಿಸುತ್ತಿದ್ದು ಓರ್ವ ವ್ಯಕ್ತಿಯನ್ನು ಚೂರಿಯಿಂದ ಇರಿದು ಗಾಯಗೊಳಿಸಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಶರಣಾಗುವಂತೆ ಸೂಚಿಸಿದರೂ ಆರೋಪಿ ನಿರಾಕರಿಸಿದ್ದಾರೆ. ಬಳಿಕ ಆರೋಪಿಯು ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಎಚ್ಚರಿಕೆಯ ಗುಂಡು ಹಾರಿಸಿದರೂ ಆತ ನಿರ್ಲಕ್ಷಿಸಿ ಪೊಲೀಸರತ್ತ ಚೂರಿ ಬೀಸಿದಾಗ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ತೀವ್ರ ಗಾಯಗೊಂಡ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Read More

ಡೆನ್ವರ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಪ್ರಿಲ್ ತಿಂಗಳಲ್ಲಿ ಇಬ್ಬರು ವ್ಯಕ್ತಿಗಳಿಗೆ ಶ್ವಾನವು ಕಚ್ಚಿತ್ತು. ಘಟನೆಯ ತನಿಖೆಯ ಬಳಿಕ ಶ್ವಾನವನ್ನು ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕವಾಗಿ ಪೊಲೀಸ್‌ ಕಸ್ಟಡಿಯಲ್ಲಿರಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಎಪ್ರಿಲ್ 26, 2024ರಂದು ಬೆಳಗ್ಗೆ ಸುಮಾರು 11.15 ಗಂಟೆಯಲ್ಲಿ ಬೆಲ್ಲಾ ಎಂಬ ಬೆಲ್ಜಿಯನ್ ಮ್ಯಾಲಿನಾಯ್ಸ್ ತಳಿಯ ಶ್ವಾನವು ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ವಾನವು ವಿಮಾನ ಯಾನ ಸಂಸ್ಥೆಯ ಉದ್ಯೋಗಿ ಹಾಗೂ ಪ್ರಯಾಣಿಕನಿಗೆ ಕಚ್ಚಿತ್ತು. ಈ ಪೈಕಿ ಓರ್ವ ವ್ಯಕ್ತಿ ಅಮೆರಿಕನ್ ಏರ್‌ಲೈನ್ಸ್‌ನ ಉದ್ಯೋಗಿಯಾಗಿದ್ದರೆ, ಮತ್ತೊಬ್ಬರು ವಿಮಾನಕ್ಕಾಗಿ ಕಾಯುತ್ತಿದ್ದ ಪ್ರಯಾಣಿಕರಾಗಿದ್ದರು. ಶ್ವಾನವನ್ನು ಡೆನ್ವರ್ ಪ್ರಾಣಿಗಳ ತಂಗುದಾಣದಲ್ಲಿ ಹತ್ತು ದಿನಗಳ ಕಾಲ ಪೊಲೀಸ್‌ ಕಸ್ಟಡಿಯಲ್ಲಿರಿಸಲಾಗಿದ್ದು, ಮೇ 6ರಂದು ಬಿಡುಗಡೆ ಮಾಡಲಾಗುತ್ತದೆ. ಬೆಲ್ಲಾ ಹೆಸರಿನ ಈ ಶ್ವಾನದ ಮಾಲಕರು, ಅದು ಶ್ವಾನದಳದ ಶ್ವಾನವೆಂದು ಪ್ರತಿಪಾದಿಸಿದ್ದು, ಇಂತಹ ಶ್ವಾನಗಳಿಗೆ ಕೆಲವು ರಕ್ಷಣೆಗಳಿರುತ್ತವೆ. ಡೆನ್ವರ್ ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಇಲಾಖೆಯ ಪ್ರಕಾರ, ಉದ್ಯೋಗಿಯ ಮುಖ ಹಾಗೂ ತುಟಿಯನ್ನು ಕಚ್ಚಲಾಗಿದ್ದರೆ,…

Read More

ಬಾಲಿವುಡ್ ನಟಿ ಕಂಗನಾ ರಣಾವತ್ ಒಂದಲ್ಲ ಒಂದು ಕಾರಣಕ್ಕೆ ತಕರಾರು ತೆಗೆಯುತ್ತಲೆ ಇರುತ್ತಾರೆ. ಸಿನಿಮಾ ರಂಗದಲ್ಲಿದ್ದ ವೇಳೆ ಎಲ್ಲರ ವಿರುದ್ಧ ಗುಡುಗುತ್ತಿದ್ದ ನಟಿ ಇದೀಗ ರಾಜಕೀಯಕ್ಕೆ ಎಂಟ್ರಿಕೊಟ್ಟ ಬಳಿಕವೂ ಅದನ್ನೇ ಮುಂದುವರೆಸಿದ್ದಾರೆ. ಅಲ್ಲದೆ ತಮ್ಮ ಪಕ್ಷದವರ ಮೇಲೂ ನಟಿ ಕೂಗಾಡುತ್ತಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಅವರು ಬಿಜೆಪಿ ಟಿಕೆಟ್ ಪಡೆದು ಸ್ಪರ್ಧಿ ಮಾಡಿದ್ದಾರೆ. ಈಗ ಅವರಿಂದ ದೊಡ್ಡ ಅಚಾತುರ್ಯ ನಡೆದು ಹೋಗಿದೆ. ತಮ್ಮದೇ ಪಕ್ಷದ ಸಂಸದ (ಬೆಂಗಳೂರು ದಕ್ಷಿಣ) ತೇಜಸ್ವಿ ಸೂರ್ಯ ವಿರುದ್ಧ ಕಂಗನಾ ರಣಾವತ್ ಅವರು ಕೂಗಾಡಿದ್ದಾರೆ. ಅಸಲಿಗೆ ಅವರು ತೆಗೆದುಕೊಳ್ಳಬೇಕಿದ್ದಿದ್ದು ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಹೆಸರು. ಮಂಡಿ ಕ್ಷೇತ್ರದಲ್ಲಿ ಕಂಗನಾ ಅವರು ಪ್ರಚಾರ ರ್ಯಾಲಿಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಮಾತನಾಡಿದ ಅವರು, ‘ಒಂದು ಪಕ್ಷ ಇದೆ. ಅಲ್ಲಿದ್ದವರಿಗೆ ತಮಗೆ ಎಲ್ಲಿ ಹೋಗಬೇಕು ಎನ್ನುವುದೇ ಗೊತ್ತಿಲ್ಲ. ರಾಹುಲ್ ಗಾಂಧಿ ಅವರು ಚಂದ್ರನ ಮೇಲೆ ಆಲೂಗಡ್ಡೆ ಬೆಳೆಸಲು ಬಯಸಿದ್ದಾರೆ. ತೇಜಸ್ವಿ ಸೂರ್ಯ, ರೌಡಿಸಂ ಮಾಡುತ್ತಾರೆ ಮತ್ತು ಮೀನು ತಿನ್ನುತ್ತಾರೆ’…

Read More

‘ಲಕ್ಷ್ಮಿ ಬಾರಮ್ಮ’ ಧಾರವಾಹಿ ಮೂಲಕ ಖ್ಯಾತಿ ಘಳಿಸಿರುವ ಕವಿತಾ ಗೌಡ ಮತ್ತು ಚಂದನ್ ಕುಮಾರ್ ದಂಪತಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ನಟಿ ಕವಿತಾ ತಾಯಿಯಾಗುತ್ತಿದ್ದು, ಈ ಬಗ್ಗೆ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಇಮೋಜಿ ಒಳಗೆ ಸ್ಕ್ಯಾನಿಂಗ್ ಫೋಟೋ ಹಾಕಿ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರೋದಾಗಿ ಈ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಸದ್ಯ ಈ ಜೋಡಿಗೆ ಅಭಿಮಾನಿಗಳು, ಆಪ್ತರು ಹಾಗೂ ಸ್ನೇಹಿತರು ಶುಭ ಹಾರೈಸಿದ್ದಾರೆ., ಕವಿತಾ ಗೌಡ ಮತ್ತು ಚಂದನ್ ನಟನೆಯ ಜೊತೆಗೆ ಹೋಟೆಲ್ ಉದ್ಯಮ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದಾರೆ. ಇನ್ನೂ ಚಂದನ್ ಕನ್ನಡದ ಜೊತೆಗೆ ಪರಭಾಷೆಯ ಸೀರಿಯಲ್ ಗಳಲ್ಲೂ ಮಿಂಚುತ್ತಿದ್ದಾರೆ.

Read More

ಬಾಲಿವುಡ್ ನಟಿ ಕರೀನಾ ಕಪೂರ್ ಯುನಿಸೆಫ್ ಇಂಡಿಯಾದ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. 2014ರಿಂದ ಯುನಿಸೆಫ್ ಜೊತೆ ಉತ್ತಮ ನಂಟು ಹೊಂದಿರುವ ಕರೀನಾ ಇದೀಗ ರಾಯಭಾರಿಯಾಗಿ ಆಯ್ಕೆಯಾಗಿರುವ ಬಗ್ಗೆ ಮಾಹಿತಿ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದು, ವಿಶೇಷ ಗೌರವದ ಬಗ್ಗೆ ನಟಿ ಸಂತಸ ವ್ಯಕ್ತಪಡಿಸಿದ್ದಾರೆ.  ನನಗೆ ಇದು ಭಾವನಾತ್ಮಕ ದಿನ. ನಾನು ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿರುವುದಕ್ಕೆ ಗೌರವವಿದೆ. ಕಳೆದ 10 ವರ್ಷಗಳಲ್ಲಿ ಯುನಿಸೆಫ್ ಇಂಡಿಯಾ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಾನು ಆ ಕೆಲಸದ ಬಗ್ಗೆ ಹೆಮ್ಮೆಪಡುತ್ತೇನೆ. ಮಕ್ಕಳ ಹಕ್ಕುಗಳನ್ನು ಉತ್ತೇಜಿಸಲು ಮತ್ತು ರಕ್ಷಿಸಲು ಮತ್ತು ಎಲ್ಲಾ ಮಕ್ಕಳಿಗೆ ಸಮಾನ ಭವಿಷ್ಯಕ್ಕಾಗಿ ಧ್ವನಿಯಾಗಲು ಹೆಮ್ಮೆಯಾಗುತ್ತಿದೆ. ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳಿಗಾಗಿ ದಣಿವರಿಯದೇ ಶ್ರಮಿಸುತ್ತಿರುವ ಇಡೀ ತಂಡಕ್ಕೆ ವಿಶೇಷ ಧನ್ಯವಾದಗಳು ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದಿಂದ ಕರೀನಾ ಕಪೂರ್ ಹೊರಬಂದಿದ್ದಾರೆ ಎನ್ನಲಾಗಿದೆ. ಡೇಟ್ಸ್ ಸಮಸ್ಯೆಯಿಂದ ಸಿನಿಮಾದಿಂದ ಹೊರ ಬಂದಿದ್ದು ಆ ಜಾಗಕ್ಕೆ ಇದೀಗ ನಯನತಾರಾ…

Read More

ನಾಗಿಣಿ ಧಾರವಾಹಿಯ ನಟಿ, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ದೀಪಿಕಾ ದಾಸ್ ಇತ್ತೀಚೆಗೆ ದೀಪಕ್ ಅವರನ್ನು ವರಿಸಿದ್ದಾರೆ. ಸದ್ಯ ಈ ಜೋಡಿ ವಿದೇಶಕ್ಕೆ ಹಾರಿದ್ದು ಪ್ರವಾಸ ಎಂಜಾಯ್‌ ಮಾಡುತ್ತಿದ್ದಾರೆ. ವಿದೇಶ ಪ್ರವಾಸದ ಸುಂದರ ಫೋಟೋಗಳನ್ನು ದೀಪಿಕಾ ದಾಸ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪತಿ ದೀಪಕ್ ಜೊತೆ ಐಲ್ಯಾಂಡ್ ನ ಪುಕೆಟ್‌ಗೆ ದೀಪಿಕಾ ದಾಸ್ ತೆರಳಿದ್ದಾರೆ. ಬೋಟ್ ಮಧ್ಯೆ ಕುಳಿತು ಪತಿ ಜೊತೆ ರೊಮ್ಯಾಂಟಿಕ್ ಆಗಿ ಪೋಸ್ ನೀಡಿದ್ದಾರೆ. ಫೋಟೋದಲ್ಲಿ ನಟಿ ತಾಳಿ ಧರಿಸದೇ ಇರೋದನ್ನು ಗಮನಿಸಿ ಯಾವ ದೇಶಕ್ಕೆ ಹೋದ್ರು ನಮ್ಮ ಸಂಸ್ಕೃತಿ ಮರಿಬೇಡಿ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಗೋವಾದಲ್ಲಿ ಮದುವೆಯಾಗುವ ಕನಸು ಹೊಂದಿದ್ದ ದೀಪಿಕಾ ದಾಸ್ ಅದರಂತೆ, ಕೇವಲ ಕುಟುಂಬಸ್ಥರ ಸಮ್ಮುಖದಲ್ಲಿ ಉದ್ಯಮಿ ದೀಪಕ್ ಜೊತೆ ಮಾರ್ಚ್ 1ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕಳೆದ ನಾಲ್ಕೈದು ವರ್ಷಗಳಿಂದ ಸ್ನೇಹಿತರಾಗಿದ್ದ ದೀಪಿಕಾ ಹಾಗೂ ದೀಪಕ್ ಆ ಬಳಿಕ ಕುಟುಂಬಸ್ಥರ ಒಪ್ಪಿಗೆ ಪಡೆದು ಮದುವೆಯಾಗಿದ್ದು ಇದೀಗ ವೆಕೇಷನ್ ಎಂಜಾಯ್…

Read More

ನಟಿ ಜ್ಯೋತಿಕಾ ದಕ್ಷಿಣ ಭಾರತ ಹಾಗೂ ಬಾಲಿವುಡ್ ಸಿನಿಮಾ ರಂಗದಲ್ಲಿ ಖ್ಯಾತಿ ಘಳಿಸಿದ್ದಾರೆ. ಸದ್ಯ ಜೋತಿಕಾ ಹಿಂದಿಯ ‘ಶ್ರೀಕಾಂತ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ತುಶಾರ್ ಹಿರಾನಂದನಿ ಇದನ್ನು ನಿರ್ದೇಶನ ಮಾಡಿದ್ದು, ರಾಜ್​ಕುಮಾರ್ ರಾವ್, ಅಲಯಾ ಎಫ್, ಶರದ್ ಕೇಲ್ಕರ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಇದೀಗ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ನಟಿ ಆನ್‌ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದು ಹೇಳಿಕೆ ನೀಡುವ ಮೂಲಕ ಫುಲ್ ಟ್ರೋಲ್ ಆಗಿದ್ದಾರೆ. ಇತ್ತೀಚೆಗೆ ಚೆನ್ನೈನಲ್ಲಿ ಲೋಕಸಭಾ ಚುನಾವಣೆ ನಡೆದಿದೆ. ಅನೇಕ ಸೆಲೆಬ್ರಿಟಿಗಳು ಬಂದು ವೋಟ್ ಮಾಡಿದ್ದಾರೆ. ಆದರೆ, ಜ್ಯೋತಿಕಾ ವೋಟ್ ಮಾಡಿಲ್ಲ. ಇದನ್ನು ಅನೇಕರು ಟ್ರೋಲ್ ಮಾಡಿದ್ದರು. ಈ ಬಗ್ಗೆ ಉತ್ತರಿಸಿದ ನಟಿ, ‘ನಾನು ಪ್ರತಿ ವರ್ಷ ವೋಟ್ ಮಾಡುತ್ತೇನೆ’ ಎಂದಿದ್ದಾರೆ ಜ್ಯೋತಿಕಾ. ನಂತರ ಮತದಾನ ಪ್ರತಿ ವರ್ಷ ನಡೆಯಲ್ಲ ಎಂದು ಸಂದರ್ಶಕರು ಹೇಳಿದರು. ಇದನ್ನು ಜ್ಯೋತಿಕಾ ಒಪ್ಪಿಕೊಂಡಿದ್ದಾರೆ. ‘ಮತದಾನದ ಸಂದರ್ಭದಲ್ಲಿ ನಾವು ನಮ್ಮ ರಾಜ್ಯದಲ್ಲಿ ಇಲ್ಲದೆ ಇರಬಹುದ, ನಮಗೆ ಅನಾರೋಗ್ಯ ಆಗಿರಬಹುದು. ಅದು ನಮ್ಮ…

Read More

ಕಿರುತೆರೆ ನಟಿ ನಮ್ರತಾ ಗೌಡ, ಬಿಗ್‌ಬಾಸ್ ಮನೆಯಿಂದ ಹೊರಬಂದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ನಮೃತಾ ಆಗಾಗ ತಮ್ಮ ಹೊಸ ಹೊಸ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅಂತೆಯೇ ಇತ್ತೀಚೆಗೆ ನಟಿ ಬ್ಲೂ ಕಲರ್‌ ರೇಷ್ಮೆ ಸೀರೆಯುಟ್ಟು ಮುದ್ದಾಗಿ ನಗೆ ಬೀರಿದ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ನಮೃತಾ ಸಿಲ್ವರ್ ಲೈನ್ಸ್ ಇರುವ ನೀಲಿ ಬಣ್ಣದ ರೇಷ್ಮೆ ಸೀರೆಯನ್ನು ಇದಕ್ಕೆ ಸರಳವಾದ ಆಭರಣಗಳನ್ನು ಧರಿಸಿ ಸುಂದರವಾಗಿ ಕಾಣುತ್ತಿದ್ದಾರೆ. ಫ್ಯಾನ್ಸ್ ಈ ಫೋಟೋ ನೋಡಿ ನಟಿಯ ಸೌಂದರ್ಯವನ್ನು ಹೊಗಳಿದ್ದಾರೆ. ‘ಕೃಷ್ಣ ರುಕ್ಮಿಣಿ’ ಧಾರಾವಾಹಿಯಲ್ಲಿ ನಟಿಸಿ ಎಲ್ಲರ ಮೆಚ್ಚುಗೆ ಗಳಿಸಿದ್ದ ನಮೃತಾ ಗೌಡ ಆ ಬಳಿಕ ಇದಾದ ಬಳಿಕ ‘ಪುಟ್ಟ ಗೌರಿ’ ಮದುವೆ ಧಾರಾವಾಹಿಯಲ್ಲಿ ಹಿಮ ಪಾತ್ರದಲ್ಲಿ ಮಿಂಚಿದ್ದರು. ಈ ಸೀರಿಯಲ್‌ನಲ್ಲಿ ಆಕೆಯ ಪಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಕನ್ನಡ ಕಿರುತೆರೆಯಲ್ಲಿ ಕೆಲ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿರುವ ನಮ್ರತಾ ಗೌಡ, ಜೀ ಕನ್ನಡದಲ್ಲಿ ಪ್ರಸಾರವಾಗುವ ನಾಗಿಣಿ 2 ಸೀರಿಯಲ್ ಮೂಲಕ ಹೆಚ್ಚು ಜನಪ್ರಿಯತೆಯನ್ನು ಪಡೆದಿದ್ದಾರೆ.…

Read More

ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್‍ಸ್ಕಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿರುವ ರಶ್ಯ, ಅವರನ್ನು ವಾಂಟೆಡ್ ಪಟ್ಟಿಯಲ್ಲಿ ಸೇರಿಸಿದೆ ಎಂದು ಸರಕಾರಿ ಸ್ವಾಮ್ಯದ `ತಾಸ್’ ಸುದ್ಧಿಸಂಸ್ಥೆ ವರದಿ ಮಾಡಿದೆ. 2022ರ ಫೆಬ್ರವರಿಯಲ್ಲಿ ಉಕ್ರೇನ್ ಜೊತೆಗಿನ ಸಂಘರ್ಷ ಆರಂಭಗೊಂಡಂದಿನಿಂದ ರಶ್ಯವು ಯುರೋಪ್ ಮತ್ತು ಉಕ್ರೇನ್‍ನ ಹಲವು ರಾಜಕಾರಣಿಗಳ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿದೆ. ಎಸ್ಟೋನಿಯಾದ ಪ್ರಧಾನಿ ಕಾಜ ಕಲ್ಲಾಸ್, ಲಿಥ್ವೇನಿಯಾದ ಸಾಂಸ್ಕೃತಿಕ ಸಚಿವರು ಸೇರಿದಂತೆ ಹಲವರನ್ನು ಕಳೆದ ಫೆಬ್ರವರಿಯಲ್ಲಿ ವಾಂಟೆಡ್ ಪಟ್ಟಿಗೆ ಸೇರಿಸಿದ್ದು ಇದೀಗ ಝೆಲೆನ್ ಸ್ಕಿ ಅವರನ್ನು ಸೇರಿಸಿದೆ.

Read More