Author: Author AIN

ಬೆಳಗಾವಿ :  ಹಿಂಡಲಗಾ ಜೈಲಿನಲ್ಲಿ ಜಾಮರ್ ಅಳವಡಿಕೆಯಿಂದಾಗಿ ಜೈಲಿನ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಇದೀಗ ಸಮಸ್ಯೆಯುಂಟಾಗುತ್ತಿದೆ.  ಜಾಮರ್ ಅಳವಡಿಕೆಯಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಆರಂಭವಾಗಿದೆ. ಹಿಂಡಲಗಾ ಗ್ರಾಮ, ವಿಜಯನಗರ, ಗಣೇಶಪುರ, ಬೆನಕನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಜನ ವಸತಿ ಪ್ರದೇಶದಲ್ಲಿ ನೆಟ್ವರ್ಕ್ ಸಮಸ್ಯೆ ಹೆಚ್ಚಾಗಿದ್ದು, ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪರದಾಡುವಂತಾಗಿದೆ. ಗ್ರಾಮ ಪಂಚಾಯತಿ, ಸರ್ಕಾರಿ ಕಚೇರಿಗಳಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಪದೇ ಪದೇ ಸರ್ವರ್ ಡೌನ್ ಆಗುತ್ತಿದ್ದು, ಜಾಮರ್ ಪ್ರೀಕ್ವೇನ್ಸಿ ಕಡಿಮೆ ಮಾಡಲು ಹಿಂಡಲಗಾ ಗ್ರಾಮ ಪಂಚಾಯತಿಯಿಂದ ಜೈಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಜೈಲಿನ ಕೈದಿಗಳು‌‌ ಮೊಬೈಲ್ ಬಳಕೆಗೆ ಬ್ರೇಕ್ ಹಾಕಲು ಜಾಮರ್ ಅಳವಡಿಕೆ ಮಾಡಲಾಗಿದೆ. ಇದೇ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ ಹೋಗಿತ್ತು. ಹಿಂಡಲಗಾ ಜೈಲಿನಲ್ಲಿ ದುಡ್ಡುಕೊಟ್ಟರೆ ಎಲ್ಲವೂ ಸಿಗುತ್ತೆ ಅನ್ನೋದನ್ನ ಕೈದಿಗಳೇ ಮೊಬೈಲ್ ನಲ್ಲಿ ವಿಡಿಯೋ ಮಾಡಿ ಬೆಳಕಿಗೆ ತಂದಿದ್ದರು. ಹೀಗಾಗಿ ಕೈದಿಗಳು ಜೈಲಿನಲ್ಲಿ ಮೊಬೈಲ್ ಬಳಕೆ ಬ್ರೇಕ್ ಹಾಕಲು ಜೈಲಾಧಿಕಾರಿಗಳಿಂದ ಜಾಮರ್ ಅಳವಡಿಕೆ…

Read More

ದೆಹಲಿಯ ಸಿಂಹಾಸನದ ಮೇಲೆ ಔರ್ ಏಕ್ ರಾಣಿ. ಮೊದಲ ಬಾರಿಗೆ ಶಾಸಕಿಯಾಗಿ ಗೆದ್ದಿರುವ ರೇಖಾ ಗುಪ್ತಾ, ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರೇಖಾ ಗುಪ್ತಾ ಸಿಎಂ ಸೇರಿದಂತೆ ಆರು ಸಚಿವರೊಂದಿಗೆ ದೆಹಲಿಯಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ. ಪ್ರಮಾಣವಚನ ಸಮಾರಂಭಕ್ಕಾಗಿ ರಾಮಲೀಲಾ ಮೈದಾನದಲ್ಲಿ ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಬಿಜೆಪಿಯ ಉನ್ನತ ನಾಯಕರು, ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರಮುಖ ಎನ್‌ಡಿಎ ನಾಯಕರು ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ. ರೇಖಾ ಗುಪ್ತಾ ಯಾರು?: ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರೇಖಾ ಗುಪ್ತಾ ಅವರ ಹೆಸರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ, ರೇಖಾ ಗುಪ್ತಾ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ವಂದನಾ ಕುಮಾರಿ ಅವರನ್ನು 29,595 ಮತಗಳ ಭಾರೀ ಅಂತರದಿಂದ…

Read More

ಹುಬ್ಬಳ್ಳಿ: ಅಂಗನವಾಡಿ ಕೇಂದ್ರಗಳಿಂದ ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಸಬೇಕಾದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಗೋದಾಮಿನಲ್ಲಿ ಸಂಗ್ರಹಿಸಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹುಲಿಗೆವ್ವ ಕುಕನೂರು ( ಡಿಡಿ)  ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ( ಸಿಡಿಪಿಓ) ಮುತ್ತಣ್ಣ ಸಿ.ಎ. ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. https://ainlivenews.com/good-news-for-homemakers-from-the-state-government-must-see-news-for-women/ ಇಬ್ಬರೂ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ. ಇಲಾಖೆ ವಿಚಾರಣೆ ಬಾಕಿಯಿರಿಸಿ, ಇಬ್ಬರನ್ನೂ ಅಮಾನತು ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪಕಾರ್ಯದರ್ಶಿ ಬಲರಾಮ ಆದೇಶ ಹೊರಡಿಸಿದ್ದಾರೆ. ‘ಸರ್ಕಾರ ವಿತರಿಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಧಾರವಾಡದ ಲಕಮನಹಳ್ಳಿ ಎಂಎಸ್‌ಪಿಸಿ ಗೋದಾಮಿನಿಂದ ಅಂಗನವಾಡಿ ಕೇಂದ್ರಗಳಿಗೆ ವಿತರಿಸದೆ, ಅಕ್ರಮವಾಗಿ ಗಬ್ಬೂರು ಸಮೀಪದ ಗೋದಾಮಿನಲ್ಲಿ ಸಂಗ್ರಹಿಸಿದ್ದಾರೆ. ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆಯಡಿ ಅಂಗನವಾಡಿ ಕೇಂದ್ರದ ಫಲಾನು ಭವಿಗಳಿಗೆ ಪೌಷ್ಟಿಕ ಆಹಾರ ಒದಗಿಸಲು ವಿಫಲವಾಗಿದ್ದಾರೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದ್ದಾರೆ.

Read More

ಬೆಂಗಳೂರು: ಚಿನ್ನ ಮಾಡಿಸಿಕೊಳ್ಳಬೇಕು ಎಂದಾದರೆ ಬೆಲೆ ಇಳಿಕೆಯಾಗುವುದು ಮುಖ್ಯವಾಗಿದೆ. ಆದರೂ ಒಮ್ಮೊಮ್ಮೆ ಪರಿಸ್ಥಿತಿಗೆ ಕಟ್ಟುಬಿದ್ದು ಬೆಲೆ ಏರಿಕೆಯ ಸಮಯದಲ್ಲೇ ಸಾಕಷ್ಟು ಗ್ರಾಹಕರು ಚಿನ್ನ ಖರೀದಿಸುತ್ತಾರೆ. ಬೆಲೆ ತಗ್ಗಿದರೆ ನಮಗೊಂದಿಷ್ಟು ಲಾಭವಿತ್ತೆಂದು ಸಾಕಷ್ಟು ಜನ ಈ ಸಮಯದಲ್ಲಿ ಭಾವಿಸುತ್ತಾರೆ. ಚಿನ್ನದ ಮಾರುಕಟ್ಟೆಯೇ ಹಾಗೆ ಬೆಲೆ ಯಾವಾಗ ಏರುತ್ತದೆ? ಯಾವಾಗ ಇಳಿಯುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಚಿನ್ನ ಖರೀದಿಗೂ ಮುನ್ನ ಇಂದಿನ ರೇಟ್ ಹೇಗಿದೆ ಎಂಬುದನ್ನು ತಿಳ್ಕೊಳ್ಳೋಣ https://ainlivenews.com/if-you-have-these-problems-do-not-drink-turmeric-milk/ ಗುರುವಾರ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಹೆಚ್ಚಾಗಿದೆ. ಅಪರಂಜಿ ಚಿನ್ನದ ಬೆಲೆಯಲ್ಲಿ 39 ರೂ ಏರಿಕೆ ಆಗಿದೆ. ಸೋಮವಾರದಿಂದ ಸತತ ನಾಲ್ಕನೇ ದಿನ ಈ ಸ್ವರ್ಣ ದುಬಾರಿಯಾಗಿದೆ. ಅಪರಂಜಿ ಚಿನ್ನದ ಬೆಲೆ ಭಾರತದಲ್ಲಿ 8,800 ರೂ ಮೈಲಿಗಲ್ಲು ಮುಟ್ಟಿ ಹೊಸ ದಾಖಲೆ ಬರೆದಿದೆ. 18 ಕ್ಯಾರಟ್ ಚಿನ್ನದ ಬೆಲೆಯೂ 6,600 ರೂ ಗಡಿ ಮುಟ್ಟಿ ದಾಖಲೆ ಮಾಡಿದೆ. ಇತ್ತ ಚಿನ್ನದ ಬೆಲೆ ಏರಿಕೆ ಆಗುತ್ತಿದ್ದರೂ ಬೆಳ್ಳಿ ಸ್ತಬ್ಧತೆ ಮುಂದುವರಿದಿದೆ. ಇಂದೂ ಕೂಡ ಬೆಳ್ಳಿ ಬೆಲೆಯ…

Read More

ಬೆಂಗಳೂರು: ಪ್ರಪಂಚದಾದ್ಯಂತ ಪ್ರೇಮಿಗಳ ವಾರವನ್ನು ಬಹಳ ಉತ್ಸಾಹದಿಂದ ಆಚರಿಸಲಾಯಿತು, ಮತ್ತು ಅದು ಮುಗಿದ ತಕ್ಷಣ, ಅನೇಕ ವಿಚಿತ್ರ ದಿನಗಳನ್ನು ಹೊಂದಿದ್ದ ಪ್ರೇಮಿಗಳ ವಿರೋಧಿ ವಾರ ಪ್ರಾರಂಭವಾಯಿತು. ಈ ವಾರದ ಆರನೇ ದಿನ, ಅಂದರೆ ನೆನಪಿನ ದಿನ, ಆದ್ದರಿಂದ ಕಾಣೆಯಾದವರ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿದುಕೊಳ್ಳೋಣ. ದಿನಾಂಕ ಪ್ರತಿ ವರ್ಷ ಫೆಬ್ರವರಿ 20 ರಂದು ಕಾಣೆಯಾದ ದಿನವನ್ನು ಆಚರಿಸಲಾಗುತ್ತದೆ, ಈ ದಿನವು ಪ್ರೇಮಿಗಳ ವಿರೋಧಿ ವಾರದ ಆರನೇ ದಿನವಾಗಿದೆ, ಈ ವಿಶೇಷ ದಿನದಂದು ಜನರು ತಮ್ಮ ಕಳೆದುಹೋದ ಪಾಲುದಾರರನ್ನು ನೆನಪಿಸಿಕೊಳ್ಳುತ್ತಾರೆ. ಇತಿಹಾಸ ಮಿಸ್ಸಿಂಗ್ ಡೇ ಬಗ್ಗೆ ಯಾವುದೇ ಲಿಖಿತ ಇತಿಹಾಸವಿಲ್ಲ ಆದರೆ ಸಾಮಾನ್ಯವಾಗಿ ಹೇಳುವುದಾದರೆ, ಈ ದಿನವು ನಮ್ಮಿಂದ ಶಾಶ್ವತವಾಗಿ ದೂರವಾಗಿರುವ ಅಥವಾ ಪ್ರಸ್ತುತ ನಮ್ಮಿಂದ ದೂರವಾಗಿರುವ ಪ್ರೀತಿಪಾತ್ರರನ್ನು ಸ್ಮರಿಸಲು ಮೀಸಲಾಗಿರುತ್ತದೆ. ಈ ದಿನ ನೀವು ನಿಮ್ಮ ಸಂಗಾತಿಯನ್ನು ಮಾತ್ರ ನೆನಪಿಸಿಕೊಳ್ಳುವ ಅಗತ್ಯವಿಲ್ಲ. ನೀವು ದೀರ್ಘಕಾಲದಿಂದ ಭೇಟಿಯಾಗದ ವಿಶೇಷ ಸ್ನೇಹಿತನನ್ನು ಸಹ ನೀವು ನೆನಪಿಸಿಕೊಳ್ಳಬಹುದು. ಅಥವಾ ನೀವು ಮನೆಯಿಂದ ದೂರ ವಾಸಿಸುತ್ತಿದ್ದರೆ,…

Read More

ಸ್ಯಾಂಡಲ್ ವುಡ್ ಅಂಗಳದಲ್ಲೀಗ ಜೋಗಪ್ಪನ ಸದ್ದು ಜೋರಾಗಿದೆ. ಅನೇಕ ಹಿಟ್ ಧಾರಾವಾಹಿಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಹಯದವನ ಚೊಚ್ಚಲ ಪ್ರಯತ್ನದ ಎಲ್ಲೋ ಜೋಗಪ್ಪ ನಿನ್ನರಮನೆ ಪ್ರೇಕ್ಷಕರ ಎದುರು ಬರಲು ಕೆಲ ದಿನಗಳಷ್ಟೇ ಬಾಕಿ ಇದೆ. ಬಿಡುಗಡೆಗೆ ಸಜ್ಜಾಗಿರುವ ಚಿತ್ರತಂಡ ಭರದಿಂದ ಪ್ರಚಾರ ಕೂಡ ನಡೆಸುತ್ತಿದೆ. ಇದೇ ತಿಂಗಳ 21ಕ್ಕೆ ತೆರೆಗೆ ಬರ್ತಿರುವ ಸಿನಿಮಾ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿಯನ್ನು ಹಂಚಿಕೊಂಡಿದೆ. ನಿನ್ನೆ ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಸುದ್ದಿಗೋಷ್ಟಿ ಆಯೋಜಿಸಲಾಗಿತ್ತು. ಈ ವೇಳೆ ನಿರ್ದೇಶಕ ಹಯದವನ ಮಾತನಾಡಿ, ಎಲ್ಲೋ ಜೋಗಪ್ಪ ನಿನ್ನರಮನೆ ಹುಡುಕಾಟದ ಕಥೆ. ಟ್ರೇಲರ್ ನಲ್ಲಿ ಒಂದು ಡೈಲಾಗ್ ಬರುತ್ತದೆ. ಎಲ್ಲರೂ ದುಡ್ಡಿಗೋಸ್ಕರ ಏನೂ ಮಾಡ್ತಿದ್ದೀಯಾ ಅಂತಾ ಕೇಳ್ತಾರೆ. ನಿನ್ನ ಖುಷಿಗೋಸ್ಕರ ಏನೂ ಮಾಡ್ತಿದ್ದೀಯಾ ಎಂದು ಕೇಳಲ್ಲ. ಈ ಸಂದರ್ಭದಲ್ಲಿ ಈ ಡೈಲಾಗ್ ನ್ನು ನನ್ನ ಜೀವನಕ್ಕೆ ಕನೆಕ್ಟ್ ಮಾಡಿಕೊಳ್ಳುತ್ತೇನೆ. ನನ್ನ ಖುಷಿ, ಫ್ಯಾಷನ್ ಗೋಸ್ಕರ ಸಿನಿಮಾಕ್ಕೆ ಬಂದಿದ್ದೇನೆ. ಇಷ್ಟು ವರ್ಷಗಳ ಟಿವಿ ಜರ್ನಿ ನಂತರ.…

Read More

ಕಲಬುರಗಿ : ಸಿಮೆಂಟ್ ಫ್ಯಾಕ್ಟರಿ ಅವಾಂತರಕ್ಕೆ ಮತ್ತೊಬ್ಬ ಯುವಕನ ಜೀವ ಬಲಿಯಾಗಿದೆ. ಕಲಬುರಗಿ ಜಿಲ್ಲೆಯ ಸೇಡಂನ‌ ವಾಸವದತ್ತಾ ಫ್ಯಾಕ್ಟರಿ  ಗೂಡ್ಸ್ ರೈಲು ಸಂಚರಿಸ್ತಿದ್ದ ಹಿನ್ನಲೆ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಆದರೆ ಫ್ಯಾಕ್ಟರಿ ಗೂಡ್ಸ್ ರೈಲು ಪಾಸ್ ಆಗುವವರೆಗೂ ರಸ್ತೆಯಲ್ಲಿ ಆ್ಯಂಬುಲೆನ್ಸ್ ಕಾದು ನಿಲ್ಲೇಬೇಕಾಗಿತ್ತು. ಹೀಗಾಗಿ ಸೇಡಂನಿಂದ‌ ಕಲಬುರಗಿಗೆ ಚಿಕಿತ್ಸೆಗಾಗಿ ತೆರಳುತ್ತಿದ್ದ ಯುವಕ ಸಾವು ಆ್ಯಂಬುಲೆನ್ಸ್‌ನಲ್ಲಿ ಸಾವನ್ನಪ್ಪಿದ್ದಾನೆ. ಸೇಡಂ ಪಟ್ಟಣದ ನಿವಾಸಿ ಮುಕ್ತಾರ ಎಂಬಾತ ನಿನ್ನೆ ರಾತ್ರಿ ಕ್ರಿಕೆಟ್ ಆಡುವಾಗ ಫಿಡ್ಸ್ ಬಂದು ಬಳಿಕ ಹೃದಯಾಘಾತಕ್ಕೆ ಒಳಗಾಗಿದ್ದ. ಆತನನ್ನೂ ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಕೊಂಡೊಯ್ಯಲು ಸೂಚನೆ ನೀಡಲಾಗಿತ್ತು. ಸೇಡಂನಿಂದ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಕರೆತರುವಾಗ ಘಟನೆ ನಡೆದಿದೆ. https://ainlivenews.com/escape-with-a-friend-who-is-married/ ಗೂಡ್ಸ್‌ ವಾಹನ ನಿಲ್ಲಿಸಿದರಿಂದಲೇ ಮುಕ್ತಾರ್‌ ಸಾವಾಗಿದೆ ಎಂದು ಆರೋಪಿಸಿದ ಮುಕ್ತಾರ ಸಂಬಂಧಿಕರು ಫ್ಯಾಕ್ಟರಿ ಮುಂಭಾಗ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ. ವಾಸವದತ್ತಾ ಫ್ಯಾಕ್ಟರಿ ರೈಲು ಹಳಿ ಸ್ಥಾಳಂತರಿಸುವಂತೆ ಹಲವು ವರ್ಷಗಳಿಂದ‌…

Read More

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯಕ್ಕೆ ಸಜ್ಜಾಗುತ್ತಿದೆ. ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ತಂಡವು ಬಾಂಗ್ಲಾದೇಶವನ್ನು ಎದುರಿಸುತ್ತಿದೆ. ಐದು ದಿನಗಳ ಹಿಂದೆ ದುಬೈಗೆ ಆಗಮಿಸಿ ತೀವ್ರ ಅಭ್ಯಾಸ ನಡೆಸುತ್ತಿರುವ ರೋಹಿತ್ ಸೇನೆ, ಯಾವುದೇ ಸಮಯದಲ್ಲಿ ಮೈದಾನಕ್ಕೆ ಇಳಿಯುವ ಆತಂಕದಲ್ಲಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಇಂದು ತ‌ನ್ನ ಮೊದಲ ಪಂದ್ಯದೊಂದಿಗೆ ಚಾಂಪಿಯನ್ಸ್‌ ಟ್ರೋಫಿ ಅಭಿಯಾನ ಆರಂಭಿಸಲಿದೆ. ಬಾಂಗ್ಲಾದೇಶ ವಿರುದ್ಧ ಮೊದಲ ಪಂದ್ಯವಾಡಲಿರುವ ರೋಹಿತ್ ಪಡೆ, 2025ರ ಐಸಿಸಿ ಟೂರ್ನಿಯಲ್ಲಿ ಶುಭಾರಂಭದ ಕಾತುರತೆಯಲ್ಲಿದೆ. ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಸರಣಿ ಗೆದ್ದು ಅದೇ ಜೋಶ್‌ನಲ್ಲಿ, ಚಾಂಪಿಯನ್ಸ್ ಟ್ರೋಫಿಗೆ ತೆರಳಿರೋ ಭಾರತ ತಂಡ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ಇದುವರೆಗೂ ಭಾರತ ಮತ್ತು ಬಾಂಗ್ಲಾ ನಡುವೆ 41 ಪಂದ್ಯಗಳು ನಡೆದಿದ್ದು 32 ಪಂದ್ಯಗಳಲ್ಲಿ ಭಾರತ, 8ರಲ್ಲಿ ಬಾಂಗ್ಲಾ ಗೆಲುವು ಸಾಧಿಸಿದ್ದರೆ, 1 ಪಂದ್ಯ ಫಲಿತಾಂಶವಿಲ್ಲದೇ ರದ್ದಾಗಿದೆ. https://ainlivenews.com/does-armpit-sweat-cause-bad-odor-if-so-heres-the-solution-to-this-problem/ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಭಾರತೀಯ…

Read More

ಬಿಳಿ ಹಾಲಿಗಿಂತ ಹಳದಿ ಹಾಲು ಆರೋಗ್ಯಕ್ಕೆ ಹೆಚ್ಚು ಉಪಯುಕ್ತ ಎಂದು ಹೇಳುವರು. ಹಾಲು ಮತ್ತು ಇನ್ನಿತರ ಡೈರಿ ಉತ್ಪನ್ನಗಳ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಒಳ್ಳೆಯ ಪ್ರಯೋಜನಗಳು ಉಂಟಾಗುವುದಂತೂ ಸತ್ಯ. ಕೆಲವರಿಗೆ ಹಾಲಿನ ಅಂಶಗಳು ಅಲರ್ಜಿಯಾಗಿ ಕಾಡುತ್ತವೆ. ಅದು ಬೇರೆ ವಿಷಯ. https://ainlivenews.com/do-you-know-what-are-the-health-benefits-of-wearing-silver-anklets/ ಅನೇಕರು ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದನ್ನು ಅಭ್ಯಾಸ ಮಾಡಿಕೊಂಡಿರುತ್ತಾರೆ. ಇದು ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ. ಅರಿಶಿನ ಮತ್ತು ಹಾಲು ಎರಡರಲ್ಲೂ ಉತ್ಕರ್ಷಣ ನಿರೋಧಕಗಳು, ಬ್ಯಾಕ್ಟೀರಿಯಾ ವಿರೋಧಿ ಮತ್ತು ಕ್ಯಾಲ್ಸಿಯಂನಂತಹ ಪ್ರಮುಖ ಪೋಷಕಾಂಶಗಳಿವೆ. ಅರಿಶಿನ ಹಾಲು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಆದರೆ ಕೆಲವು ಸಂದರ್ಭಗಳಲ್ಲಿ ಅದನ್ನು ಸೇವಿಸದಿರುವುದು ಉತ್ತಮ. ಹೈಪೊಗ್ಲಿಸಿಮಿಯಾ: ಕಡಿಮೆ ರಕ್ತದ ಸಕ್ಕರೆ ಹೊಂದಿರುವ ಜನರು ವೈದ್ಯರ ಸಲಹೆಯಂತೆ ಅರಿಶಿನ ಹಾಲನ್ನು ಸೇವಿಸಬೇಕು. ಅರಿಶಿನವು ಕರ್ಕ್ಯುಮಿನ್​ನ್ನು ಹೊಂದಿರುತ್ತದೆ. ಹೈಪೊಗ್ಲಿಸಿಮಿಯಾ ಹೊಂದಿರುವ ರೋಗಿಗಳು ಅರಿಶಿನ ಹಾಲನ್ನು ಸೇವಿಸುವ ಮೂಲಕ ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮತ್ತಷ್ಟು ಕಡಿಮೆ ಮಾಡಬಹುದು. ಅಜೀರ್ಣ: ಅಜೀರ್ಣದಿಂದ ಬಳಲುತ್ತಿರುವವರು ಮಲಬದ್ಧತೆ, ಗ್ಯಾಸ್, ಉಬ್ಬುವುದು, ಎದೆಯುರಿ, ಆಸಿಡ್ ರಿಫ್ಲಕ್ಸ್,…

Read More

ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಹಲವು ಯೋಜನೆಗಳನ್ನು ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಹನಿ ನೀರಾವರಿಗಾಗಿ ಸಹಾಯಧನ ಪಡೆದುಕೊಳ್ಳಲು ಯೋಜನೆ ರೂಪಿಸಲಾಗಿದೆ. ಹನಿ ನೀರಾವರಿಗೆ ಶೇ. 90 ರಷ್ಟು ಸಹಾಯಧನ ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆಯಡಿ ಸಹಾಯಧನ ಸೌಲಭ್ಯ ದೊರೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್  ತಾಲೂಕಿನ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಸ್‌.ಕೇಶವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಯೋಜನೆಯಡಿ ಫಲಾನುಭವಿಗೆ ಗರಿಷ್ಠ 2 ಎಕರೆ ಪ್ರದೇಶದ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಅವಕಾಶವಿದೆ. ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90ರಷ್ಟು ಸಹಾಯಧನ ದೊರೆಯುತ್ತದೆ. ಆಸಕ್ತರು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಿ ಅರ್ಜಿ ಸಲ್ಲಿಸಲು ಕೋರಿದೆ ಹನಿ ನಿರಾವರಿ ಸಹಾಯಧನ ಪಡೆಯಲು ಅರ್ಜಿ ಅಲ್ಲಿಸಿ ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಲುವಾಗಿ ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆ ಅನುಷ್ಠಾನಗೊಳಿಸುತ್ತಿದ್ದು ಈ ಯೋಜನೆಯಡಿ ರೈತರಿಗೆ ಸಹಾಯ ಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಿದೆ. ಹಾವೇರಿ ಜಿಲ್ಲೆಯ ಹಾನಗಲ್…

Read More