Author: Author AIN

ಬಾಲಿವುಡ್ ನ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ನಟಿ ಶ್ರೀದೇವಿ ಎಂದರೆ ಎಲ್ಲಿಲ್ಲದ ಅಭಿಮಾನ. ವರ್ಮಾ ಆಗಾಗ ಶ್ರೀದೇವಿ ಅವರನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ ವರ್ಮಾ. ಶ್ರೀದೇವಿಯ ಸೌಂದರ್ಯವನ್ನು ಸಾಕಷ್ಟು ಬಾರಿ ಹೊಗಳಿದ್ದಾರೆ. ಶ್ರೀದೇವಿ ಮರಣ ಹೊಂದಿದ್ದಾಗ ಕಣ್ಣೀರಿಟ್ಟಿದ್ದ ವರ್ಮಾ ಇದೀಗ ಆಕೆಯನ್ನು ಸ್ವರ್ಗಕ್ಕೆ ಹೋಗಿ ಭೇಟಿ ಮಾಡಿ ಬಂದಿದ್ದಾಗಿ ಹೇಳಿದ್ದಾರೆ. ಶ್ರೀದೇವಿ ಅಗಲಿಕೆಯ ನಂತರವೂ ನಟೊಯ ಜೊತೆಗಿನ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ ವರ್ಮಾ. ಕಾರಿನಲ್ಲಿ ಡ್ರೈವರ್ ಸೀಟ್ ನಲ್ಲಿ ಶ್ರೀದೇವಿ ಕುಳಿತಿದ್ದು, ಅದರ ಪಕ್ಕದ ಸೀಟಿನಲ್ಲಿ ಸೀಗರೇಟು ಹಿಡಿದುಕೊಂಡು ವರ್ಮಾ ಕೂತಿದ್ದಾರೆ. ಈ ಫೋಟೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಾನು ಶ್ರೀದೇವಿ ಅವರನ್ನು ಭೇಟಿ ಮಾಡೋಕೆ ಸ್ವರ್ಗಕ್ಕೆ ಹೋಗಿದ್ದೆ ಎಂದು ಬರೆದುಕೊಂಡಿದ್ದಾರೆ. ವಾಸ್ತವವಾಗಿ ಇದು ತಂತ್ರಜ್ಞಾನ ಬಳಸಿ ಎಡಿಟ್ ಮಾಡಿದ ಚಿತ್ರ. ಆದರೆ ಈ ಫೋಟೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಶ್ರೀದೇವಿ ರಾಮ್ ಗೋಪಾಲ್ ವರ್ಮಾ ಜೊತೆ ಎರಡು ಸಿನಿಮಾ ಮಾಡಿದ್ದಾರೆ. ಅವರು ವರ್ಮಾ ನಿರ್ದೇಶನದ ಗೋವಿಂದಾ ಗೋವಿಂದಾ…

Read More

ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ಅರ್ಜುನ  ಆನೆ ಸಮಾಧಿಗೆ ಯಾವುದೇ ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ಸಿಗಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ನಟ ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅರ್ಜುನ್ ಗೆ ಸಿಗಬೇಕಾದ ಗೌರವವನ್ನು ಕೂಡಲೇ ಸಲ್ಲಿಸಬೇಕು ಎಂದು ದರ್ಶನ್ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ದರ್ಶನ್ ಪ್ರಾಣಿಗಳ ಮೇಲಿನ ಪ್ರೀತಿಯನ್ನು ಮತ್ತೊಮ್ಮೆ ತೋರಿಸಿದ್ದಾರೆ. ಸ್ವತಃ ಪ್ರಾಣಿ ಪ್ರಿಯರೂ ಆಗಿರುವ ದರ್ಶನ್, ಮೈಸೂರು ಮೃಗಾಲಯ ಸೇರಿದಂತೆ ನಾನಾ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ಅವರು ದತ್ತು ಪಡೆದಿದ್ದಾರೆ. ಜೊತೆಗೆ ಮನೆಯಲ್ಲೂ ಹಲವು ರೀತಿಯ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಅದರಲ್ಲೂ ಆನೆಗಳೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಹಾಗಾಗಿಯೇ ತಮ್ಮ ಕಾಟೇರ ಸಿನಿಮಾವನ್ನು ಹುತಾತ್ಮ ಆನೆ ಅರ್ಜುನ್ ಗೆ ಅರ್ಪಿಸಿದ್ದಾರೆ. ಸಿನಿಮಾ ಶುರುವಾಗುವ ಮುನ್ನ ‘ನಾಡ ದೇವಿ ಚಾಮುಂಡಿಯ ಅಂಬಾರಿಯನ್ನು ಹೊತ್ತು ದಸರೆಯ ವೈಭವವನ್ನು ಜಗತ್ತಿನಾದ್ಯಂತ…

Read More

ಇತ್ತೀಚೆಗೆ ಸುರಿದ ಭಾರಿ ಮಳೆಗೆ ದಕ್ಷಿಣ ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ಹೆದ್ದಾರಿ ಕುಸಿತದಿಂದ ಇದುವರೆಗೂ 48 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಭಾರೀ ಮಳೆಯಿಂದಾಗಿ ಮೀಝೌ ನಗರದಿಂದ ಡಾಬು ಕೌಂಟಿಯ ಕಡೆಗೆ ಚಲಿಸುವ ರಸ್ತೆಯು ಕುಸಿತ ಕಂಡಿದೆ. ವಾಹನಗಳು ಟಾರ್ಮ್ಯಾಕ್‌ನಲ್ಲಿ ಸುಮಾರು 18 ಮೀಟರ್ ಉದ್ದದ (59-ಅಡಿ) ಗಾಶ್‌ಗೆ ಸಿಲುಕಿ, ಕಡಿದಾದ ಇಳಿಜಾರಿನಲ್ಲಿ ಕೆಳಗೆ ಬಿದ್ದಿದ್ದು ಘಟನೆಯಲ್ಲಿ ಸಾಕಷ್ಟು ಸಾವು ನೋವು ಸಂಭವಿಸಿದೆ. ದಟ್ಟವಾದ ಜನನಿಬಿಡ ಕೈಗಾರಿಕಾ ಶಕ್ತಿ ಕೇಂದ್ರವಾದ ಗುವಾಂಗ್‌ಡಾಂಗ್, ಇತ್ತೀಚಿನ ವಾರಗಳಲ್ಲಿ ಹವಾಮಾನ ವೈಪರೀತ್ಯಗಳಿಂದಾಗಿ ಸಂಭವಿಸಿದ ವಿಪತ್ತುಗಳ ಸರಮಾಲೆಯಿಂದ ಹಾನಿಗೊಳಗಾಗಿದೆ. ಚಂಡಮಾರುತಗಳು ವರ್ಷದಲ್ಲಿ ನಿರೀಕ್ಷೆಗಿಂತ ಹೆಚ್ಚು ಭಾರೀ ಪ್ರಮಾಣದಲ್ಲಾಗಿವೆ. ಹವಾಮಾನ ಬದಲಾವಣೆಗೆ ಸಂಭವಿಸುತ್ತಿವೆ. ಹವಾಮಾನ ಬದಲಾವಣೆಗೆ ಕೊಡುಗೆ ನೀಡುವ ಹಸಿರುಮನೆ ಅನಿಲಗಳ ಅತಿದೊಡ್ಡ ಹೊರಸೂಸುವಿಕೆ ದೇಶ ಚೀನಾ. 2060 ರ ವೇಳೆಗೆ ಹೊರಸೂಸುವಿಕೆಯನ್ನು ನಿವ್ವಳ ಶೂನ್ಯಕ್ಕೆ ತಗ್ಗಿಸಲು ರಾಷ್ಟ್ರ ಪ್ರತಿಜ್ಞೆ ಮಾಡಿದೆ. ಗುರುವಾರ ಬೆಳಗ್ಗೆ ಹೆದ್ದಾರಿ ಕುಸಿತದಿಂದ 36…

Read More

ತಮಿಳು ಚಿತ್ರರಂಗದ ಖ್ಯಾತ ಗಾಯಕಿ ಉಮಾ ರಮಣನ್ 69ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಮೇ 1ರಂದು ಉಮಾ ಚೆನ್ನೈನಲ್ಲಿ ವಿಧಿವಶರಾಗಿದ್ದು, ಅವರ ಸಾವಿನ ಹಿಂದಿನ ಕಾರಣ ತಿಳಿದು ಬಂದಿಲ್ಲ. ತಮಿಳಿನಲ್ಲಿ ಸಾಕಷ್ಟು ಸೂಪರ್ ಹಿಟ್ ಹಾಡುಗಳಿಗೆ ಉಮಾ ಧ್ವನಿ ನೀಡಿದ್ದರು. ಶಾಸ್ತ್ರಿಯ ಸಂಗೀತ ಕಲಿತು ಗಾಯನದಲ್ಲಿ ಹೆಸರು ಮಾಡಿರುವ ಉಮಾ 35 ವರ್ಷಗಳಲ್ಲಿ 6000ಕ್ಕೂ ಹೆಚ್ಚು ಸಂಗೀತ ಕಛೇರಿಗಳನ್ನು ನಡೆಸಿಕೊಟ್ಟಿದ್ದಾರೆ. 1977ರಲ್ಲಿ ಹಿಂದಿ ಸಿನಿಮಾದಲ್ಲಿ ಹಾಡಲು ಅವಕಾಶ ಸಿಕ್ಕಿದರೂ ತಮಿಳು ಚಿತ್ರರಂಗ ಅವರ ಕೆರಿಯರ್‌ಗೆ ದೊಡ್ಡ ಬ್ರೇಕ್ ನೀಡಿತ್ತು. ಇಳಯರಾಜ ಸಂಗೀತದಲ್ಲಿ ಉಮಾ ರಮಣನ್ ಸಾಕಷ್ಟು ಹಿಟ್ ಸಾಂಗ್‌ಗಳನ್ನು ನೀಡಿದ್ದಾರೆ. ಉಮಾ ರಮಣನ್ ನಿಧನಕ್ಕೆ ಆಪ್ತರು, ಅಭಿಮಾನಿಗಳು, ಚಿತ್ರರಂಗದವರು ಸಂತಾಪ ಸೂಚಿಸಿದ್ದಾರೆ.

Read More

ಕಾಲಿವುಡ್ ನಟ ರಾಘವ್ ಲಾರೆನ್ಸ್‌ ಮೇ.1ರಂದು ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ರೈತರಿಗೆ ಉಚಿತ ಟ್ರ್ಯಾಕ್ಟರ್ ನೀಡಿದ್ದಾರೆ. ನಟನ ಜನಪರ ಕೆಲಸಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂದು (ಮೇ 1) ಕಾರ್ಮಿಕರ ದಿನಾಚರಣೆಯ ಸಂದರ್ಭದಲ್ಲಿ ರಾಘವ ಲಾರೆನ್ಸ್ ರೈತರಿಗೆ 10 ಟ್ರ‍್ಯಾಕ್ಟರ್‌ಗಳನ್ನು ವಿತರಣೆ ಮಾಡಿದ್ದಾರೆ. ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ ಬೆಂಬಲಿಸಬೇಕಾಗಿ ವಿನಂತಿ ಎಂದು ನಟ ಮನವಿ ಮಾಡಿದ್ದಾರೆ. ಈ ವಿಶೇಷ ಹೊಸ ಪ್ರಯಾಣವನ್ನು ಪ್ರಾರಂಭಿಸಲು ನನಗೆ ತುಂಬಾ ಸಂತೋಷವಾಗಿದೆ. ಆರಂಭದಲ್ಲಿ ನಮ್ಮ ದೇಶದ ಬೆನ್ನೆಲುಬಾಗಿರುವ ರೈತರಿಗೆ ನನ್ನ ಸ್ವಂತ ಹಣದಲ್ಲಿ 10 ಟ್ರ‍್ಯಾಕ್ಟರ್ ನೀಡುತ್ತೇನೆ. ಅಗತ್ಯವಿರುವ ಜನರಿಗೆ ಸೇವೆ ಸಲ್ಲಿಸಲು ಪ್ರತಿಯೊಬ್ಬರೂ ಈ ನಿಸ್ವಾರ್ಥ ಪ್ರಯಾಣವನ್ನು ಬೆಂಬಲಿಸಬೇಕು. ಶಬ್ದಗಳಿಗಿಂತ ಕಾರ್ಯಗಳು ಜೋರಾಗಿ ಮಾತನಾಡುತ್ತವೆ. ನನ್ನ ಪ್ರಯಾಣದಲ್ಲಿ ನನಗೆ ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದ ಬೇಕು. ಇಂದಿನಿಂದ ಸೇವೆ ಆರಂಭವಾಗಿದೆ ಎಂದು ಲಾರೆನ್ಸ್ ಹೇಳಿರುವ ವಿಡಿಯೋ ಶೇರ್ ಮಾಡಿದ್ದಾರೆ. ಇದರ ಜೊತೆಗೆ ನಟ ಲಾರೆನ್ಸ್ ಇತ್ತೀಚೆಗೆ 150 ಮಕ್ಕಳನ್ನು ದತ್ತು ಪಡೆದಿದ್ದಾರೆ. ಅವರ…

Read More

ನಟಿ ಮೃಣಾಲ್ ಠಾಕೂರ್ ಸದ್ಯ ಹಿಂದಿ ಮತ್ತು ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೀತಾ ರಾಮ ಸಿನಿಮಾದ ಬಳಿಕ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡಿರುವ ನಟಿ ಇದೀಗ ಸಂದರ್ಶನವೊಂದರಲ್ಲಿ ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದಾರೆ. ಅನೇಕ ಸಿನಿಮಾಗಳ ಅವಕಾಶ ಕೈತಪ್ಪಿ ಹೋಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕೆರಿಯರ್ ಶುರುವಿನಲ್ಲಿ ಆಡಿಷನ್ ಕೊಡುವಾಗ ಹಳ್ಳಿ ಹುಡುಗಿಯಂತೆ ಕಾಣ್ತಾಳೆ, ನಮ್ಮ ಸಿನಿಮಾಗೆ ಸೂಟ್ ಆಗಲ್ಲ. ಸಿನಿಮಾದಲ್ಲಿ ಮಾಡ್ರರ್ನ್ ಆಗಿ ಕಾಣಿಸಿಕೊಳ್ಳಬೇಕು ಎಂದು ಕಾರಣ ನೀಡಿ ಸೆಲೆಕ್ಟ್ ಮಾಡಲಿಲ್ಲ ಎಂದು ನಟಿ ಹೇಳಿದ್ದಾರೆ. ಟಿವಿ ಕಾರ್ಯಕ್ರಮಗಳೊಂದಿಗೆ ವೃತ್ತಿಜೀವನವನ್ನು ಪ್ರಾರಂಭಿಸಿ ಮೃಣಾಲ್ ಠಾಕೂರ್ ಗೆ ಸೀತಾ ರಾಮಂ ಸಿನಿಮಾ ಬಳಿಕ ಭಾರೀ ಜನಪ್ರಿಯತೆ ಸಿಕ್ಕಿದೆ, ಜರ್ಸಿ, ಘೋಸ್ಟ್ ಸ್ಟೋರೀಸ್, ಹಾಯ್ ನನ್ನಾ, ದಿ ಫ್ಯಾಮಿಲಿ ಸ್ಟಾರ್ ನಂತಹ ಚಲನಚಿತ್ರಗಳೊಂದಿಗೆ ಮೃಣಾಲ್ ಠಾಕೂರ್ ಅಭಿಮಾನಿಗಳ ಮನಗೆದ್ದು, ಆಕೆಯ ಅಭಿನಯಕ್ಕೆ ಪ್ರೇಕ್ಷಕರು ಸೇರಿದಂತೆ ವಿಮರ್ಶಕರು ಫಿದಾ ಆಗಿದ್ದಾರೆ.

Read More

ಸೆಲೆಬ್ರಿಟಿಗಳು ತಮ್ಮ ಫಿಟ್ ನೆಸ್ ಗಾಗಿ ಸಾಕಷ್ಟು ತ್ಯಾಗಗಳನ್ನು ಮಾಡುತ್ತಾರೆ. ಇದಕ್ಕೆ ಬೆಸ್ಟ್ ಎಕ್ಸಾಂಪಲ್ ಅಂದ್ರೆ ಬಾಲಿವುಡ್ ನಟ ಜಾನ್ ಅಬ್ರಹಾಂ. ಇವರು ಕಳೆದ 25 ವರ್ಷಗಳಿಂದ ಸಿಹಿ, ಮಾಂಸಾಹಾರ ಹಾಗೂ ಮದ್ಯ ಸಿಗರೇಟ್ ಗಳಿಂದ ದೂರವಿರೋದಾಗಿ ಬ್ರಿಟನ್-ಪಾಕ್ ನಟ ಆ್ಯಲಿ ಖಾನ್ ಅಚ್ಚರಿ ಹೊಹಾಕಿದ್ದಾರೆ. ಜಾನ್ ಅಬ್ರಹಾಂ ಅವರು ಸಂಪೂರ್ಣವಾಗಿ ಸಿಹಿಯಿಂದ ದೂರ ಇದ್ದಾರೆ. ಬ್ರಿಟಿಷ್-ಪಾಕಿಸ್ತಾನಿ ನಟ ಅಲಿ ಖಾನ್ ಅವರು ಜಾನ್ ಅಬ್ರಹಾಂ ಅವರೊಂದಿಗೆ ಕೆಲಸ ಮಾಡಿದ್ದನ್ನು ಇತ್ತೀಚೆಗೆ ನೆನಪಿಸಿಕೊಂಡರು.  ಜಾನ್ ಒಬ್ಬ ಸನ್ಯಾಸಿಯಂತೆ ಬದುಕುತ್ತಾರೆ. ಅದು ಚಲನಚಿತ್ರೋದ್ಯಮದಲ್ಲಿ ಅವರ ನಿರಂತರ ಯಶಸ್ಸಿನ ರಹಸ್ಯವಾಗಿದೆ ಎಂದಿದ್ದಾರೆ ​. ಜೋಯಾ ಅಖ್ತರ್ ನಿರ್ದೇಶನದ ‘ಲಕ್ ಬೈ ಚಾನ್ಸ್’ ಸಿನಿಮಾದಲ್ಲಿ ಅಲಿ ಖಾನ್ ನಟಿಸಿದ್ದರು. ಈ ಚಿತ್ರದಲ್ಲಿ ಜಾನ್ ಅಬ್ರಹಾಂ ಅವರು ಅತಿಥಿ ಪಾತ್ರ ಮಾಡಿದ್ದರು. ಈಗ ‘ತೆಹ್ರಾನ್’ ಸಿನಿಮಾದಲ್ಲಿ ಜಾನ್ ಜೊತೆ ಕೆಲಸ ಮಾಡೋ ಅವಕಾಶ ಆ್ಯಲಿಗೆ ಸಿಕ್ಕಿದೆ. ಜಾನ್ ಅಬ್ರಹಾಂ ಶಿಸ್ತನ್ನು ನೋಡಿ ದಂಗಾಗಿರುವುದಾಗಿ ಅಲಿ ಹೇಳಿದ್ದಾರೆ.  ಜಾನ್‌ಗೆ…

Read More

ಟಗರು ಪುಟ್ಟಿ ನಟಿ ಮಾನ್ವಿತಾ ಕಾಮತ್ ಚಿಕ್ಕಮಗಳೂರಿನ ಕಳಸದಲ್ಲಿ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಹಸೆಮಣೆ ಏರಿದ್ದಾರೆ. ಮೈಸೂರು ಮೂಲದ ಹುಡುಗ ಅರುಣ್ ಕುಮಾರ್ ಅವರನ್ನು ನಟಿ ವರಿಸಿದ್ದು, 2 ಕುಟುಂಬದ ಸದಸ್ಯರು ಮತ್ತು ಸಿನಿಮಾ ರಂಗದ ಗಣ್ಯರು ಹಾಗೂ ಆಪ್ತರು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ಮೇ 1ರಂದು ಮಾನ್ವಿತಾ ,ಅರುಣ್ ಮದುವೆ ಕೊಂಕಣಿ ಸಂಪ್ರದಾಯದಂತೆ ನಡೆದಿದೆ. ಅದಕ್ಕೂ ಮುನ್ನ ಏಪ್ರಿಲ್‌ 29ರಂದು ಮೆಹೆಂದಿ ಹಾಗೂ 30ರಂದು ಸಂಗೀತ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅರುಣ್ ಅವರು ಮ್ಯೂಸಿಕ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮದುವೆಯ ಬಳಿಕವೂ ಮಾನ್ವಿತಾ ಅವರು ಸಿನಿಮಾರಂಗದಲ್ಲಿ ಇರಲಿದ್ದಾರೆ ಎಂದು ಅರುಣ್ ಹೇಳಿದ್ದಾರೆ. ಅರುಣ್ ಹಾಗೂ ಮಾನ್ವಿತಾ ಕಾಮತ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು ತಾಯಿ ನೋಡಿ ಮೆಚ್ಚಿದ ಹುಡುಗನನ್ನೇ ನಟಿ ವರಿಸಿದ್ದಾರೆ. ಮಾನ್ವಿತಾ ಕಾಮತ್ ಅವರ ಮದುವೆಯನ್ನು ಅವರ ಸೋದರ ಮಾವಂದಿರೇ ಮುನ್ನಡೆಸಿಕೊಟ್ಟಿದ್ದಾರೆ. 2 ಕುಟುಂಬದವರು, ಆಪ್ತರು ಹಾಗೂ ಕನ್ನಡ ಚಿತ್ರರಂಗದ ಗಣ್ಯರು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರು.…

Read More

ಪಂಜಾಬಿ ಗಾಯಕ ಸಿಧು ಮೂಸೇವಾಲಾ ಹತ್ಯೆ ಪ್ರಕರಣದ ರೂವಾರಿ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನು ದಲ್ಲಾ ಲಖ್ಬೀರ್ ಗ್ಯಾಂಗ್‌ನ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕ್ಯಾಲಿಫೋರ್ನಿಯಾದ ಹೋಟೆಲ್ ಫೇರ್‌ಮೌಂಟ್‌ನಲ್ಲಿ ಘಟನೆ ನಡೆದಿದೆ. ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್ ಕೆನಡಾದಲ್ಲಿನ 25 ಮೋಸ್ಟ್ ವಾಂಟೆಡ್‌ ವ್ಯಕ್ತಿಗಳಲ್ಲಿ ಒಬ್ಬನಾಗಿದ್ದ. 2022ರ ಮೇ 29 ರಂದು ಗೋಲ್ಡಿ ಬ್ರಾರ್‌ನ ಸೂಚನೆಯ ಮೇರೆಗೆ ಪಂಜಾಬಿ ಗಾಯಕ ಸಿಧು ಮೂಸೇವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಎನ್ನಲಾಗಿದೆ.

Read More

15 ವರ್ಷದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮೆರಿಕದ ಶಿಕ್ಷಕಿಯೊಬ್ಬರನ್ನು ಬಂಧಿಸಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. 26 ವರ್ಷ ವಯಸ್ಸಿನ ರೇಗನ್ ಗ್ರೇ ಅವರನ್ನು ಬಂಧಿಸಲಾಗಿದೆ. ಲಿಟ್ಲ್ ರಾಕ್ ಇಮ್ಯಾನ್ಯುಯಲ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಸ್ವಯಂಸೇವಕಿಯಾಗಿ ಕಾರ್ಯ ನಿರ್ವಹಿಸುವ ವೇಳೆ 2020ರಿಂದೀಚೆಗೆ 15 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಳು ಎನ್ನುವುದು ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮಗನ ಮೊಬೈಲ್ ಫೋನ್ ನಲ್ಲಿದ್ದ ಮೆಸೇಜ್ ಗಳನ್ನು ನೋಡಿದ ಬಳಿಕ ಬಾಲಕನ ಪೋಷಕರು ಮಹಿಳೆ ಬಗ್ಗೆ ಹಿರಿಯ ಪಾಸ್ಟರ್ ಗೆ ದೂರು ನೀಡಿದ್ದರು. ಬಾಲಕನಿಗೆ ನಗ್ನ ಚಿತ್ರಗಳನ್ನು ಹೇರಳವಾಗಿ ಕಳುಹಿಸುತ್ತಿದ್ದುದು ಕಂಡುಬಂದಿತ್ತು. ಲಿಟ್ಲ್ ರಾಕ್ ಕ್ರಿಶ್ಚಿಯನ್ ಅಕಾಡೆಮಿಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆ, ಕೌನ್ಸಿಲಿಂಗ್ ವೇಳೆ ದೈಹಿಕ ಸಂಬಂಧವಾಗಿರಲಿಲ್ಲ ಎಂದು ಚರ್ಚ್ ಅಧಿಕಾರಿಗಳಿಗೆ ತಿಳಿಸಿದ್ದಳು. ಈ ವರ್ಷದ ಫೆಬ್ರುವರಿಯಲ್ಲಿ ಸ್ನ್ಯಾಪ್ ಚಾಟ್ ಮೂಲಕ 15 ವರ್ಷದ ಬಾಲಕನಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದುದು ದೃಢಪಟ್ಟಿದ್ದು ಇದೀಗ ಮಹಿಳೆಯನ್ನು ಬಂಧಿಸಲಾಗಿದೆ.

Read More