Author: Author AIN

ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಎಪ್ರಿಲ್ 23ರಂದು ನಡೆದಿದ್ದ ಭಾರತೀಯ ಪ್ರಜೆ ಕುಲ್ವಿಂದರ್ ಸಿಂಗ್ ಸೊಹಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಯುವಕನನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ. ಎಪ್ರಿಲ್ 23ರಂದು ವೈಟ್ರಾಕ್ ನಗರದಲ್ಲಿ ಇಬ್ಬರು ಯುವಕರ ನಡುವೆ ಆರಂಭಗೊಂಡ ಮಾತಿನ ಚಕಮಕಿ ಯಲ್ಲಿ ಓರ್ವನಿಗೆ ಚೂರಿಯಿಂದ ಇರಿಯಲಾಗಿತ್ತು. ಚೂರಿ ಇರಿತಕ್ಕೆ ಒಳಗಾದ ಯುವಕನನ್ನು ಭಾರತ ಮೂಲದ ಕುಲ್ವಿಂದರ್ ಸಿಂಗ್ ಎಂದು ಗುರುತಿಸಲಾಗಿತ್ತು. ಒಂದು ವಾರದ ಕಾರ್ಯಾಚರಣೆಯ ಬಳಿಕ 28 ವರ್ಷದ ಶಂಕಿತ ಆರೋಪಿಯನ್ನು ಬಂಧಿಸಿರುವುದಾಗಿ ಕೆನಡಾ ಪೊಲೀಸರು ಮಾಹಿತಿ ನೀಡಿದ್ದಾರೆ.

Read More

ಬಾಲಿವುಡ್ ನಟರಾದ ಸನ್ನಿ ಡಿಯೋಲ್ ಹಾಗೂ ಬಾಬಿ ಡಿಯೋಲ್ ಇತ್ತೀಚೆಗೆ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’  ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ, ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಇದ್ರೂ ಅವಕಾಶ ಇಲ್ಲದೇ ಎದುರಿಸಿದ ಸಂಕಷ್ಟಗಳ ಬಗ್ಗೆ ನಟ ಸನ್ನಿ ವಿವರಿಸಿದ್ದು, ಸಹೋದರನ ಮಾತಿಗೆ ಬಾಬಿ ಡಿಯೋಲ್ ಕಣ್ಣೀರಿಟ್ಟಿದ್ದಾರೆ. ನಾವು 1960ರ ದಶಕದಿಂದ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದೇವೆ. ಕಳೆದ ಕೆಲವು ವರ್ಷಗಳಿಂದ ಎಷ್ಟೇ ಪ್ರಯತ್ನಪಟ್ಟರೂ ಕೂಡ ನಮಗೆ ಗೆಲುವು ಸಿಗುತ್ತಿರಲಿಲ್ಲ. ಇತ್ತೀಚೆಗೆ ನನ್ನ ಮಗನ ಮದುವೆ ನಡೆಯಿತು. ಗದರ್ 2 ಚಿತ್ರದ ಸಕ್ಸಸ್ ಕಂಡಿತ್ತು. ಅಪ್ಪನ ಸಿನಿಮಾ ಕೂಡ ಹಿಟ್ ಆಯ್ತು. ಅನಿಮಲ್ ಚಿತ್ರಕ್ಕೆ ಉತ್ತಮ ಪ್ರಶಂಸೆ ಸಿಕ್ಕಿತ್ತು. ಇಷ್ಟೆಲ್ಲಾ ಹಾರೈಕೆ ಹೇಗೆ ಬಂತೋ ಗೊತ್ತಿಲ್ಲ ಎಂದು ಸನ್ನಿ ಡಿಯೋಲ್ ಮಾತನಾಡುವಾಗ ಬಾಬಿ ಡಿಯೋಲ್ ಕಣ್ಣೀರು ಸುರಿಸಿದ್ದಾರೆ. ಸಹೋದರನ ಮಾತಿಗೆ ಕಪಿಲ್ ಶರ್ಮಾ ಭಾವುಕರಾಗಿದ್ದಾರೆ. ಸದ್ಯಕ್ಕೆ ಡಿಯೋಲ್​ ಕುಟುಂಬಕ್ಕೆ ಒಳ್ಳೆಯ ಕಾಲ ಬಂದಿದೆ. ಸನ್ನಿ ಡಿಯೋಲ್​ ನಟಿಸಿದ ‘ಗದರ್​ 2’, ಬಾಬಿ ಡಿಯೋಲ್​ ನಟಿಸಿದ…

Read More

ಹಾಸನದ ಹಾಲಿ ಎಂಪಿ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸುತ್ತಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಪಕ್ಷದ ಮುಖಂಡರು, ಸಿನಿಮಾ ತಾರೆಯರು ಸೇರಿದಂತೆ ಹಲವರು ಪ್ರಜ್ವಲ್ ರೇವಣ್ಣ ವಿರುದ್ಧ ಕಿಡಿಕಾರಿದ್ದು ಇದೀಗ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಆಕ್ರೋಶ ಹೊರ ಹಾಕಿದ್ದಾರೆ. ಹಾಸನ ಎಂಪಿ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆನ್ನಲಾದ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ವಿವಾದ ಭುಗಿಲೆದ್ದಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣ ವಿವಾದ ಭುಗಿಲೇಳುತ್ತಿದ್ದಂತೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಕೂಡ ಎಕ್ಸ್ ಖಾತೆಯ ಮೂಲಕ ಕಿಡಿ ಕಾರಿದ್ದಾರೆ. ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, ಅಪರಾಧಿ ಮುಸ್ಲಿಂ, ಟಿಎಂಸಿ ಇಲ್ಲವೇ ಕಾಂಗ್ರೆಸ್‌ನವರು ಆಗಿದ್ದರೆ ಮಾತ್ರ ಮಹಿಳಾ ಸುರಕ್ಷತೆ ಬಗ್ಗೆ ಕಾಳಜಿ ವಹಿಸುತ್ತಾರೆಂದು ಆಕ್ರೋಶ ಹೊರ ಹಾಕಿದ್ದಾರೆ. “ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಅಪರಾಧದ ಬಗ್ಗೆ ಮೋದಿ…

Read More

ಸ್ಯಾಂಡಲ್‌ವುಡ್ ನಟಿ ಮಾನ್ವಿತಾ ಕಾಮತ್ ಇಂದು ಚಿಕ್ಕಮಗಳೂರಿನ ಕಳಸದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈಗಾಗಲೇ ನವಜೋಡಿಯ ಅರಿಶಿನ ಶಾಸ್ತ್ರ, ಮೆಹಂದಿ ಮತ್ತು ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದ್ದು ಸಾಕಷ್ಟು ಮಂದಿ ಭಾಗಿಯಾಗಿ ಶುಭ ಹಾರೈಸಿದ್ದಾರೆ. ಮೈಸೂರಿನ ವರ ಅರುಣ್ ಕುಮಾರ್ ಜೊತೆ ಮಾನ್ವಿತಾ ಮದುವೆಯಾಗುತ್ತಿದ್ದು, ಚಿಕ್ಕಮಗಳೂರಿನ ಕಳಸದಲ್ಲಿ ಮದುವೆಯ ಶಾಸ್ತ್ರಗಳು ನಡೆಯುತ್ತಿವೆ. ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ನವಜೋಡಿ ನೇರಳೆ ಬಣ್ಣದ ಧಿರಿಸಿನಲ್ಲಿ ಮಿಂಚಿದ್ದಾರೆ. ಮಾನ್ವಿತಾರ ಮದುವೆಯ ಮುನ್ನ ಸಂಭ್ರಮದಲ್ಲಿ ನಿಧಿ ಸುಬ್ಬಯ್ಯ ಶ್ರುತಿ ಹರಿಹರನ್, ರಿಲಾಕ್ಸ್ ಸತ್ಯ ನಟ ಪ್ರಭು ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಇಂದು ನಡೆಯಲಿರುವ ಮದುವೆಯಲ್ಲಿ ಸ್ಟಾರ್‌ ನಟ-ನಟಿಯರು ಭಾಗಿಯಾಗಲಿದ್ದಾರೆ. ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎಂದು ಮಾನ್ವಿತಾ ಹೇಳಿದ್ದಾರೆ.

Read More

ಮಲಯಾಳಂ ಸಿನಿಮಾ ರಂಗದ ಖ್ಯಾತ ನಟಿ ನವ್ಯಾ ನಾಯರ್ ಬೇಸರ ಹೊರ ಹಾಕಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ಆಗಮಿಸಿದ್ದ ನಟಿ ಫ್ಯಾಮಿಲಿ ಬಗ್ಗೆ ತಪ್ಪಾದ ಮಾಹಿತಿ ನೀಡಿದ್ದ ಆಯೋಜಕರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ನಿಮಗೆ ಒಂದು ವಿಚಾರವನ್ನು ಹೇಳಲು ಬಯಸುತ್ತೇನೆ. ನಾನಿಲ್ಲಿರುವ ಬುಕ್‌ಲೆಟ್ ಅನ್ನು ನೋಡಿದೆ. ಅದರಲ್ಲಿ ನನಗೆ ಇಬ್ಬರೂ ಮಕ್ಕಳಿದ್ದಾರೆ ಎಂದು ಬರೆಯಲಾಗಿದೆ. ಈ ಬಗ್ಗೆ ನನ್ನ ಕುಟುಂಬ ಚಿಂತಿಸುವುದಿಲ್ಲವೇ ಎಂದು ನಟಿ ಆಯೋಜಕರ ಮಾಡಿರುವ ಯಡವಟ್ಟಿನ ಬಗ್ಗೆ ಖಡಕ್ ಆಗಿ ಪ್ರಶ್ನೆ ಮಾಡಿದ್ದಾರೆ. ನನಗಿರುವುದು ಒಬ್ಬನೇ ಮಗ. ನೀವು ಯಮಿಕಾ ಎಂದು ಮಗಳಿದ್ದಾಳೆ ಎಂದು ಬರೆದಿದ್ದೀರಿ. ಜನರು ನನ್ನ ಬಗ್ಗೆ ತಪ್ಪು ತಿಳಿದುಕೊಳ್ಳುವುದಿಲ್ಲವೇ. ವಿಕಿಪಿಡಿಯಾದಲ್ಲಿ ಮಾಹಿತಿ ಲಭ್ಯವಿದೆ. ಈ ರೀತಿ ಬರೆಯುವಾಗ ವಿಚಾರ ಅರಿತು ಬರೆಯಬೇಕು ಎಂದು ಆಯೋಜಕರನ್ನು ನಟಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅದಷ್ಟೇ ಅಲ್ಲ, ತಾವು ನಟಿಸದೇ ಇರುವ ಸಿನಿಮಾಗಳ ಹೆಸರು ಹಾಕಿರೋದ್ದಕ್ಕೆ ನಟಿ ಬೇಸರ ವ್ಯಕ್ತಪಡಿಸಿದ್ದಾರೆ.

Read More

ಬಾಲಿವುಡ್ ನಟಿ ರಾಖಿ ಸಾವಂತ್ ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೆ ಇರುತ್ತಾರೆ. ಮಾಜಿ ಪತಿ ಆದಿಲ್ ನಿಂದ ದೂರವಾದ ಬಳಿಕ ಇದೀಗ ಮತ್ತೋರ್ವ ಮಾಜಿ ಪತಿ ರಿತೇಶ್ ಜೊತೆ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಮಾಜಿಪತಿಯ ಜೊತೆ ಕಾಣಿಸಿಕೊಂಡಿರುವ ರಾಖಿ, ಈ ಇಬ್ಬರೂ ಸೇರಿ ಆದಿಲ್ ಮೇಲೆ ಆರೋಪ ಮಾಡಿದ್ದಾರೆ. ಕೋರ್ಟ್ ವಿಷಯದಲ್ಲಿ ಆದಿಲ್ ಸುಳ್ಳು ಹೇಳುತ್ತಿದ್ದಾನೆ. ನಾನು ಜೈಲಿಗೆ ಹೋಗಲಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾನೆ. ನಾನು ಅದನ್ನು ಕೇಳಿ ಮಜಾ ಮಾಡುತ್ತಿದ್ದೇನೆ ಎಂದಿದ್ದಾರೆ ರಾಖಿ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಬಾಲಿವುಡ್ ನಟಿ ರಾಖಿ ಸಾವಂತ್ ಬಾಂಬೆ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಜಾಮೀನು ನೀಡಬೇಕು ಎಂದು ರಾಖಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಈಗಾಗಲೇ  ತಿರಸ್ಕರಿಸಿದೆ. ಸದ್ಯ ರಾಖಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

Read More

ಬಾಲಿವುಡ್ ಮಿಸ್ಟರ್ ಫರ್ಫೆಕ್ಷನಿಸ್ಟ್ ನಟ ಆಮಿರ್ ಖಾನ್ ಕಾಮಿಡಿ ವಿತ್ ಕಪಿಲ್ ಶೋ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದೇ ವೇಳೆ ಸಿನಿಮಾ ಹಾಗೂ ರಿಯಲ್ ಲೈಫ್ ಬಗ್ಗೆ ಆಮೀರ್ ಮಾತನಾಡಿದ್ದಾರೆ. ಪಿಕೆ ಸಿನಿಮಾದ ದೃಶ್ಯವೊಂದರಲ್ಲಿ ರಿಯಲ್ ಆಗಿ ಬೆತ್ತಲೆಯಾಗಿಯೇ ನಟಿಸಿದ್ದೆ ಎಂದು ಅವರು ಹೇಳಿಕೊಂಡಿದ್ದಾರೆ. ಪಿಕೆ ಸಿನಿಮಾದಲ್ಲಿ ಖಾಸಗಿ ಅಂಗಾಂಗಕ್ಕೆ  ರೇಡಿಯೋ ಮುಚ್ಚಿಕೊಂಡು ಓಡುವ ದೃಶ್ಯವೊಂದಿದೆ. ಈ ದೃಶ್ಯದಲ್ಲಿ ತಾವು ಸಂಪೂರ್ಣ ಬೆತ್ತಲೆಯಾಗಿಯೇ ನಟಿಸಿದ್ದೆ. ಅದೊಂದು ರೀತಿಯಲ್ಲಿ ಮುಜಗರ ಕೂಡ ತಂದಿತ್ತು. ಮಾಡಲೇಬೇಕಾದ ಅನಿವಾರ್ಯ ಕೂಡ ಎದುರಾಗಿತ್ತು ಎಂದಿದ್ದಾರೆ ಆಮೀರ್. ಈ ಮೊದಲು ನಿರ್ದೇಶಕ ರಾಜ್ ಕುಮಾರ್ ಹಿರಾನಿ, ಶಾರ್ಟ್ಸ್ ಧರಿಸಿದ್ದರು. ಅದನ್ನು ಹಾಕಿಕೊಂಡು ಓಡಲು ಸಾಧ್ಯವಾಗಲಿಲ್ಲ. ಪದೇ ಪದೇ ಬಿಚ್ಚಿ ಬೀಳುತ್ತಿತ್ತು. ಹಾಗಾಗಿ ಶಾರ್ಟ್ಸ್ ಕಿತ್ತಾಕಿ, ನೈಜವಾಗಿಯೇ ಬೆತ್ತಲೆ ದೃಶ್ಯ ಮಾಡಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಎಲ್ಲ ವಿಷ್ಯದಲ್ಲಿ ನಾನು ಫರ್ಫೆಕ್ಟ್ ಎಂದಿದ್ದಾರೆ ಆಮೀರ್. ಹಳ್ಳಿಯೊಂದರಲ್ಲಿ ಚಿತ್ರೀಕರಣ ನಡೆದಿದ್ದರಿಂದ ಜನರೂ ಇರಲಿಲ್ಲ. ಶೂಟಿಂಗ್ ಸ್ಪಾಟ್ ನಲ್ಲೂ ಕಡಿಮೆ ಸದಸ್ಯರು ಇದ್ದರು. ಆದರೂ,…

Read More

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ದೆಹಲಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಡೀಪ್ ಫೇಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮ್ಮ ಹೇಳಿಕೆಯನ್ನು ನೀಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳ ವರದಿ ಮಾಡಿವೆ. ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ದೇಶದಾದ್ಯಂತ ಈ ನಡೆಯನ್ನು ಖಂಡಿಸಿ, ಅನೇಕರು ಆಕ್ರೋಶ ಹೊರ ಹಾಕಿದ್ದರು. ನಟ ಅಮಿತಾಭ್ ಬಚ್ಚನ್ ಸೇರಿದಂತೆ ಸಾಕಷ್ಟು ಕಲಾವಿದರು ಇದರ ವಿರುದ್ದದ ಕ್ರಮಕ್ಕೆ ಒತ್ತಾಯ ಮಾಡಿದ್ದರು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೂಡ ಕ್ರಮಕ್ಕೆ ಮುಂದಾಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದು ಈ ಬಗ್ಗೆ ಹೇಳಿಕೆ ಪಡೆಯಲು ರಶ್ಮಿಕಾ ಅವರನ್ನು ಠಾಣೆಗೆ ಬರುವಂತೆ ತಿಳಿಸಿದ್ದರು. ಈ ಸಂಬಂಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ನಟಿ ತಮ್ಮ ಹೇಳಿಕೆ ನೀಡಿದ್ದಾರೆ. ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕಾಗಿ ಸಾಕಷ್ಟು ಜನರು ಒತ್ತಾಯಿಸಿದ್ದರು. ಒತ್ತಡ ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಆಸಾಮಿಗಳಿಗೆ ಬಲೆ ಬೀಸಿದ್ದರು. ಕೊನೆಗೂ ವ್ಯಕ್ತಿಯೊಬ್ಬನ ಬಂಧನವಾಗಿತ್ತು. ರಶ್ಮಿಕಾ…

Read More

‘ಬಿಗ್ ಬಾಸ್ ಕನ್ನಡ ಸೀಸನ್ ಕುರಿತು ಒಂದಲ್ಲ ಒಂದು ಸುದ್ದಿಗಳು ಕೇಳಿ ಬರುತ್ತಲೆ ಇದೆ. 10ನೇ ಸೀಸನ್ ಮುಗಿದು ಮೂರು ತಿಂಗಳು ಕಳೆದರು ಬಿಗ್ ಬಾಸ್ ಕುರಿತು ಚರ್ಚೆಗಳು ನಡೆಯುತ್ತಲೆ ಇವೆ. ಇದೀಗ ಶೋ ಬಗ್ಗೆ ನಮ್ರತಾ ಮಾತನಾಡಿದ್ದಾರೆ. ಬಿಗ್ ಬಾಸ್​ನಲ್ಲಿ ಪ್ಲ್ಯಾನ್ ಮಾಡಿದಂತೆ ಯಾವುದೂ ನಡೆಯುತ್ತಿಲ್ಲ ಎಂದು ನಮ್ರತಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ‘ಬಿಗ್ ಬಾಸ್​’ನಲ್ಲಿ ಇದ್ದಾಗ ವಿನಯ್ ಗೌಡ, ನಮ್ರತಾ, ರಕ್ಷಕ್ ಬುಲೆಟ್, ಈಶಾನಿ, ಮೈಕಲ್ ಅಜಯ್ ಮೊದಲಾದವರು ಒಟ್ಟಿಗೆ ಇದ್ದರು. ಇವರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿತ್ತು. ‘ಬಿಗ್ ಬಾಸ್’ ಪೂರ್ಣಗೊಂಡ ಬಳಿಕ ಹೊರಗೆ ಪ್ರತಿ ವಾರ ಸಿಗೋಣ, ಪಾರ್ಟಿ ಮಾಡೋಣ ಎಂದೆಲ್ಲ ಪ್ಲ್ಯಾನ್ ಮಾಡಿದ್ದರು. ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಆರಂಭದಲ್ಲಿ ಕೆಲವು ಬಾರಿ ಇವರು ಭೇಟಿ ಆಗಿದ್ದು ಇದೆ. ಈಗ ಆ ರೀತಿಯ ಭೇಟಿಗಳು ನಿರಂತರವಾಗಿ ನಡೆಯುತ್ತಿಲ್ಲ ಎಂದು ನಮ್ರತಾ ಹೇಳಿದ್ದಾರೆ. ‘ದಿನವೂ ಸಿಗಬೇಕು ಇಲ್ಲವಾದರೆ ವಾರಕ್ಕೆ ಒಮ್ಮೆ ಆದರೂ ಸಿಗಬೇಕು ಎಂದು ಬಿಗ್…

Read More

ಕೋವಿಡ್ -19 ಲಸಿಕೆಗಳಲ್ಲಿ ಒಂದಾದ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡಪರಿಣಾಮಕ್ಕೆ ಕಾರಣವಾಗಬಹುದು ಎಂದು ನ್ಯಾಯಾಲಯದ ದಾಖಲೆಗಳಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಆಕ್ಸ್ಫರ್ಡ್-ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆಯನ್ನು ಜಾಗತಿಕವಾಗಿ ಕೋವಿಶೀಲ್ಡ್ ಮತ್ತು ವ್ಯಾಕ್ಸ್ಜೆವ್ರಿಯಾ ಬ್ರಾಂಡ್ ಹೆಸರುಗಳಲ್ಲಿ ಮಾರಾಟ ಮಾಡಲಾಯಿತು. ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದ ಲಸಿಕೆಯಿಂದ ಉಂಟಾದ ಗಂಭೀರ ಗಾಯಗಳು ಮತ್ತು ಸಾವುಗಳನ್ನು ಆರೋಪಿಸಿ ಔಷಧೀಯ ಕಂಪನಿ ವರ್ಗ ಮೊಕದ್ದಮೆಯನ್ನು ಎದುರಿಸುತ್ತಿದೆ. ಅಸ್ಟ್ರಾಜೆನೆಕಾ ಲಸಿಕೆಯ ಅಡ್ಡಪರಿಣಾಮಗಳು ವಿನಾಶಕಾರಿ ಪರಿಣಾಮಗಳನ್ನು ಬೀರಿವೆ ಎಂದು ಸಾಕಷ್ಟು ಮಂದಿ ಆರೋಪಿಸಿದ್ದರು. ಕಂಪನಿಯ ಪ್ರವೇಶವು ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಒಂದು ಪ್ರಮುಖ ಕ್ಷಣವನ್ನು ಸೂಚಿಸುತ್ತದೆ, ವ್ಯಾಕ್ಸಿನೇಷನ್ಗೆ ಸಂಬಂಧಿಸಿದ ಸಂಭಾವ್ಯ ಅಪಾಯಗಳನ್ನು ಎತ್ತಿ ತೋರಿಸುತ್ತದೆ. ಏಪ್ರಿಲ್ 2021 ರಲ್ಲಿ ಅಸ್ಟ್ರಾಜೆನೆಕಾ ಲಸಿಕೆ ಪಡೆದ ನಂತರ ಮೆದುಳಿಗೆ ಶಾಶ್ವತ ಗಾಯದಿಂದ ಬಳಲುತ್ತಿದ್ದ ಜೇಮಿ ಸ್ಕಾಟ್ ಈ ಮೊಕದ್ದಮೆಯನ್ನು ಪ್ರಾರಂಭಿಸಿದರು. ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್ಲೆಟ್ ಎಣಿಕೆಯಿಂದ ನಿರೂಪಿಸಲ್ಪಟ್ಟ ಥ್ರಾಂಬೋಸಿಸ್ ವಿತ್ ಥ್ರಾಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡಪರಿಣಾಮದ ತೀವ್ರ…

Read More