Author: Author AIN

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಆಘಾತಗಳನ್ನೇ ಎದುರಿಸುತ್ತ ಬರ್ತಿದ್ದಾರೆ. ಇತ್ತೀಚೆಗಷ್ಟೇ ಇಡಿ ಅಧಿಕಾರಿಗಳು ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾಗೆ ಸೇರಿದ್ದ ಸುಮಾರು 90 ಕೋಟಿಗೆ ಅಧಿಕ ಮೊತ್ತದ್ದ ಆಸ್ತಿಯನ್ನು ಸೀಸ್ ಮಾಡಿದ್ದರು. ಈ ಬೆನ್ನಲ್ಲೇ ನಟಿ ದೇವರ ಮೊರೆ ಹೋಗಿದ್ದಾರೆ. ಕಷ್ಟ ಬಂದಾಗೆಲ್ಲ ದೇವರ ಮುಂದೆ ಬಂದು ನಿಲ್ಲುವ ಶಿಲ್ಪಾ ಶೆಟ್ಟಿ, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್ ತಾಲೂಕಿನ ದೇಲಂತಬೆಟ್ಟು ಶಿಬರೂರು ಕೊಡಮಣಿತ್ತಾಯ ಕ್ಷೇತ್ರದ ಬ್ರಹ್ಮಕುಂಭಾಭಿಷೇಕದಲ್ಲಿ ಭಾಗಿಯಾಗಿದ್ದಾರೆ. ಕಷ್ಟಗಳನ್ನು ಕರಗಿಸುವಂತೆ ದೇವರ ಮುಂದೆ ಕೈ ಮುಗಿದು ಬೇಡಿಕೊಂಡಿದ್ದಾರೆ ದಕ್ಷಿಣ ಕನ್ನಡಕ್ಕೆ ತಾಯಿ ಮತ್ತು ಮಕ್ಕಳೊಂದಿಗೆ ಬಂದಿದ್ದ ಶಿಲ್ಪಾ, ಬ್ರಹ್ಮಕುಂಭಾಭಿಷೇಕದಲ್ಲಿ ಭಾಗಿಯಾಗಿ ದೇವರ ಆಶೀರ್ವಾದ ಪಡೆದಿದ್ದಾರೆ. ಈ ಹಿಂದೆಯೂ ಅವರು ಅನೇಕ ಬಾರಿ ದೈವದ ಮೊರೆ ಹೋಗಿ ಕಷ್ಟಗಳನ್ನು ದಾಟಿಕೊಂಡಿದ್ದಾರೆ. ಈ ಬಾರಿಯೂ ಅದೇ ನಂಬಿಕೆಯೊಂದಿಗೆ ದೇವರ ಮುಂದೆ ನಿಂತು ಕಷ್ಟಗಳನ್ನು ನಿವಾರಿಸುವಂತೆ ಬೇಡಿಕೊಂಡಿದ್ದಾರೆ. 2022ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದಿ ಅಡಿ…

Read More

ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ ಚಿತ್ರದ ಮಾಜಿ ನಟ ಗುರುಚರಣ್ ಸಿಂಗ್ ದೆಹಲಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ದೂರು ದಾಖಲಿಸಿದ್ದ ನಟನ ಕುಟುಂಬಸ್ಥರು ಹುಡುಕಿಕೊಡುವಂತೆ ಮನವಿ ಮಾಡಿಕೊಂಡಿದ್ದರು. ಇದೀಗ ನಟನ ಗುರುತು ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ದೂರು ದಾಖಲಾಗುತ್ತಿದ್ದಂತೆಯೇ ದೆಹಲಿ ಪೊಲೀಸರು ತಂಡಗಳನ್ನು ರಚಿಸಿ, ನಟನೆ ಹುಡುಕಾಟ ಆರಂಭಿಸಿದ್ದರು. ಪೊಲೀಸರಿಗೆ ಕೆಲವು ಮಾಹಿತಿಗಳು ಲಭ್ಯವಾಗಿದ್ದು, ಏಪ್ರಿಲ್ 22ರಂದು ರಾತ್ರಿ 9.14ಕ್ಕೆ ದೆಹಲಿಯ ಪಾಲಂ ಪ್ರದೇಶದ ಪರುಶುರಾಮ್ ಚೌಕ್ ನಲ್ಲಿ ನಟ ಸಿಂಗ್ ತಮ್ಮ ಬೆನ್ನಿನ ಮೇಲೆ ಬ್ಯಾಗ್ ನೇತಾಕಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ತಿಳಿಸಿದ್ದಾರೆ. ಚಿತ್ರೀಕರಣಕ್ಕೆ ತೆರಳುತ್ತೇನೆಂದು ಮನೆಯಲ್ಲಿ ಹೇಳಿ ಮನೆಯಿಂದ ಹೊರಟ ತಾರಕ್ ಮೆಹ್ತಾ ಚಶ್ಮಾ ಧಾರಾವಾಹಿ ಖ್ಯಾತಿಯ ನಟರಾಗಿದ್ದಾರೆ. ದೆಹಲಿಯಿಂದ ಮುಂಬೈಗೆ ತೆರಳಿದ್ದ ಅವರು ಏರ್ ಪೋರ್ಟ್ ನಿಂದ ಕಾಣೆಯಾಗಿದ್ದಾರೆ ಎಂದು ಅವರ ತಂದೆ ಹರ್ಜಿತ್ ಸಿಂಗ್ ದೂರು ದಾಖಲಿಸಿದ್ದಾರೆ. ಐವತ್ತರ ವಯಸ್ಸಿನ ನಟ ಮುಂಬೈ ತಲುಪಿಲ್ಲ ಎಂದು ಗೊತ್ತಾಗುತ್ತಿದ್ದಂತೆಯೇ ಕುಟುಂಬಸ್ಥರು ಅವರ…

Read More

ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ ಚಿತ್ರದ ಮಾಜಿ ನಟ ಗುರುಚರಣ್ ಸಿಂಗ್ ದೆಹಲಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ದೂರು ದಾಖಲಿಸಿರುವ ನಟನ ಕುಟುಂಬಸ್ಥರು ಹುಡುಕಿಕೊಡುವಂತೆ ಮನವಿ ಮಾಡಿಕೊಂಡಿದೆ. ತನ್ನ ಮಗ ಕಾಣೆಯಾಗಿರೋದಕ್ಕೆ ಉದ್ದೇಶಿತ ಕೈವಾಡದ ಶಂಕೆಯನ್ನು ಅವರು ವ್ಯಕ್ತ ಪಡಿಸಿದ್ದಾರೆ. ಗುರುಚರಣ್ ದೆಹಲಿಯಿಂದ ಮುಂಬೈಗೆ ವಿಮಾನ ಹಿಡಿಯಲು ಮನೆಯಿಂದ ಹೊರಟಿದ್ದರು ಆದರೆ ಅವರು ಮುಂಬೈ ತಲುಪಲಿಲ್ಲ ಅಥವಾ ಮನೆಗೆ ಹಿಂತಿರುಗಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಚಿತ್ರೀಕರಣಕ್ಕೆ ತೆರಳುತ್ತೇನೆಂದು ಮನೆಯಲ್ಲಿ ಹೇಳಿ ಮನೆಯಿಂದ ಹೊರಟ ತಾರಕ್ ಮೆಹ್ತಾ ಚಶ್ಮಾ ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ಸಿಂಗ್ ನಾಪತ್ತೆಯಾಗಿದ್ದಾರೆ. ದೆಹಲಿಯಿಂದ ಮುಂಬೈಗೆ ತೆರಳಿದ್ದ ಅವರು ಏರ್ಪೋರ್ಟ್ನಿಂದ ಕಾಣೆಯಾಗಿದ್ದಾರೆ ಎಂದು ಅವರ ತಂದೆ ಹರ್ಜಿತ್ ಸಿಂಗ್ ದೂರು ದಾಖಲಿಸಿದ್ದಾರೆ. ಐವತ್ತರ ವಯಸ್ಸಿನ ನಟ ಮುಂಬೈ ತಲುಪಿಲ್ಲ ಎಂದು ಗೊತ್ತಾಗುತ್ತಿದ್ದಂತೆಯೇ ಕುಟುಂಬಸ್ಥರು ಅವರ ಮೊಬೈಲ್ ಗೆ ಕಾಲ್ ಮಾಡಿದರೂ, ಸ್ವಿಚ್ ಆಫ್ ಬಂದಿರೋದು ಆತಂಕಕ್ಕೆ ಕಾರಣವಾಗಿದೆ. ದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,…

Read More

ಗಾಝಾ ಪಟ್ಟಿಯ ದಕ್ಷಿಣದಲ್ಲಿರುವ ರಾಫಾ ನಗರದ ಮೇಲೆ ಯೋಜಿತ ದಾಳಿಗೂ ಮುನ್ನ ಗಾಝಾ ಯುದ್ಧದಲ್ಲಿ ಕದನ ವಿರಾಮ ಮತ್ತು ಒತ್ತೆಯಾಳುಗಳ ಒಪ್ಪಂದವನ್ನು ಸಾಧಿಸುವ ಇತ್ತೀಚಿನ ಪ್ರಯತ್ನಗಳನ್ನು ಇಸ್ರೇಲ್ ಕೊನೆಯ ಅವಕಾಶವೆಂದು ಪರಿಗಣಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇಸ್ರೇಲ್ ನ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಟೆಲ್ ಅವೀವ್ನಲ್ಲಿ ಈಜಿಪ್ಟ್ ಮತ್ತು ಇಸ್ರೇಲ್ ಪ್ರತಿನಿಧಿಗಳ ನಡುವಿನ ಮಾತುಕತೆ “ತುಂಬಾ ಉತ್ತಮ” ಮತ್ತು ಕೇಂದ್ರೀಕೃತವಾಗಿದೆ. ಒಪ್ಪಂದಕ್ಕೆ ಬರುವ ಸಲುವಾಗಿ ಈಜಿಪ್ಟಿನವರು ಪ್ಯಾಲೆಸ್ಟೈನ್ ಉಗ್ರಗಾಮಿ ಸಂಘಟನೆ ಹಮಾಸ್ ಮೇಲೆ ಒತ್ತಡ ಹೇರಲು ಸಿದ್ಧರಾಗಿದ್ದರು. ಮಾತುಕತೆಯ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲಾಗಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ಶುಕ್ರವಾರ ಸಂಜೆ ವರದಿಗಳನ್ನು ಉಲ್ಲೇಖಿಸಿದೆ. ಈ ಹಿಂದೆ, ಸರ್ಕಾರಿ ಸಂಯೋಜಿತ ಈಜಿಪ್ಟ್ ಟೆಲಿವಿಷನ್ ಸ್ಟೇಷನ್ ಅಲ್-ಖಹಿರಾ ನ್ಯೂಸ್ ಕೂಡ ಗಣನೀಯ ಪ್ರಗತಿಯನ್ನು ವರದಿ ಮಾಡಿತ್ತು. ರಾಫಾದಲ್ಲಿ ಯೋಜಿತ ಮಿಲಿಟರಿ ದಾಳಿಯನ್ನು ತಡೆಗಟ್ಟುವ ಸಲುವಾಗಿ ಒತ್ತೆಯಾಳುಗಳ ಒಪ್ಪಂದವನ್ನು ವಿಳಂಬಗೊಳಿಸಲು ಹಮಾಸ್, ವಿಶೇಷವಾಗಿ ಗಾಝಾ ಪಟ್ಟಿಯ ನಾಯಕ ಯಾಹ್ಯಾ ಅಲ್-ಸಿನ್ವರ್ ಅವರಿಗೆ…

Read More

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಬಾಲಿವುಡ್ ನಲ್ಲಿ ಮಿಂಚುತ್ತಿರುವ ನಟಿ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿ ಜೀವನದ ಸೀಕ್ರೆಟ್‌ ಒಂದನ್ನು ಹಂಚಿಕೊಂಡಿದ್ದಾರೆ. ಅಂದ ಹಾಗೆ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ರಾತ್ರೋ ರಾತ್ರಿ ನ್ಯಾಷನಲ್ ಕ್ರಶ್ ಪಟ್ಟ ಗಿಟ್ಟಿಸಿಕೊಂಡರು. ಆದರೆ ಅದಕ್ಕೂ ಮೊದಲು ನಡೆದ ಘಟನೆಯನ್ನು ನಟಿ ರಿವೀಲ್ ಮಾಡಿದ್ದಾರೆ. ಇಂದು ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿರುವ ರಶ್ಮಿಕಾ ಅಂದು ಸಾಕಷ್ಟು ಬಾರಿ ರಿಜೆಕ್ಟ್‌ ಆಗಿದ್ದರು. ಹೌದು ಈ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಹೇಳಿಕೊಂಡಿದ್ದಾರೆ. ‘ನಾನು ನನ್ನ ಮೊದಲ ಸಿನಿಮಾದಲ್ಲಿ ಸಕ್ಸಸ್ ಪಡೆಯುವ ಮೊದಲು ಕನಿಷ್ಠ 25 ಬಾರಿ ರಿಜೆಕ್ಟ್ ಆಗಿದ್ದೇನೆ. ಒಂದು ಸಿನಿಮಾಗೆ ನಾನು ಸೆಲೆಕ್ಟ್ ಆಗಿ ಎರಡು ತಿಂಗಳು ಟ್ರೇನಿಂಗ್ ಪಡೆದಿದ್ದೆ. ಆ ಸಿನಿಮಾಕ್ಕೆ ‘ಗೆಳಯರೇ ಗೇಳತಿಯರೇ’ ಎಂದು ಟೈಟಲ್ ಇಡಲಾಗಿತ್ತು. ಆದರೆ ಆ ಚಿತ್ರವು ಟೇಕ್‌ಅಪ್‌ ಆಗಲೇ ಇಲ್ಲ. ಅದಾದ ಬಳಿಕ ಕೂಡ ಹಲವು ಕಡೆ ರಿಜೆಕ್ಟ್…

Read More

ನಟಿ ಸಾರಾ ಅಲಿ ಖಾನ್ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ದಕ್ಷಿಣದ ಖ್ಯಾತ ನಟನ ಚಿತ್ರದಲ್ಲಿ ತಾವು ನಟಿಸುವುದಿಲ್ಲವೆಂದು ಹೇಳಿದ್ದಾರೆ. ನಾಗ ಚೈತನ್ಯ ನಟನೆಯ ಚಿತ್ರದಲ್ಲಿ ಸಾರಾ ನಟಿಸಬೇಕಾಗಿತ್ತು. ಅದಕ್ಕಾಗಿ ನಿರ್ದೇಶಕರು ಆಕೆಯನ್ನು ಸಂಪರ್ಕಿಸಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ನಾನು ಅವರ ಜೊತೆ ನಟಿಸಲಾರೆ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. ಸಾರಾ ಹಾಗೆ ಹೇಳುವುದುಕ್ಕೂ ಕಾರಣವಿದೆ. ಸಾರಾ ನಾಗ ಚೈತನ್ಯ ಅವರನ್ನು ದ್ವೇಷಿಸುತ್ತಿಲ್ಲ. ನಾಗ ಚೈತನ್ಯ ನನಗೆ ಅಣ್ಣನಂತೆ ಕಾಣಿಸುತ್ತಾರೆ. ಅವರೊಂದಿಗೆ ನಾನು ಹೇಗೆ ನಟಿಸಲಿ? ಇದರ ಹೊರತಾಗಿ ಯಾವುದೇ ಕಾರಣವಿಲ್ಲವೆಂದು ನಟಿ ಹೇಳಿದ್ದಾಗಿ ವರದಿಯಾಗಿದೆ.

Read More

ತಮಿಳು ಚಿತ್ರನಟ ವಿಶಾಲ್ ತಮ್ಮ ಚಿತ್ರಗಳಿಗೆ ತೊಂದರೆ ನೀಡಲಾಗುತ್ತಿದೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದು ತಮ್ಮನ್ನು ಕೆಣಕಿದರೆ ನೆಟ್ಟಗಿರಲ್ಲ ಎಂದು ಆಕ್ರೋಶ  ಹೊರ ಹಾಕಿದ್ದಾರೆ. ಹಲವಾರು ಚಿತ್ರಮಂದಿರಗಳಲ್ಲಿ ನನ್ನ ಚಿತ್ರಗಳು ರಿಲೀಸ್ ಆಗುತ್ತಿಲ್ಲ. ಅದಕ್ಕೆ ಕಾರಣ ಏನು ಎನ್ನುವುದು ನನಗೆ ಗೊತ್ತಿದೆ. ಹೀಗೆ ಕೆಣಕಿದರೆ ಸುಮ್ಮನೆ ಇರೋದಿಲ್ಲ ಎಂದಿದ್ದಾರೆ. ವಿಶಾಲ್ ಸಚಿವ ಹಾಗೂ ನಟ ಉದಯ್ ನಿಧಿ ಸ್ಟಾಲಿನ್ ಅವರಿಗೆ ವಾರ್ನ್ ಮಾಡಿದ್ದಾರೆ. ವಿಶಾಲ್ ಹಾಗೂ ಸ್ಟಾಲಿನ್ ಮಧ್ಯ ಕೋಲ್ಡ್ ವಾರ್ ನಡೆಯುತ್ತಿದೆ. ವಿಶಾಲ್ ಸಿನಿಮಾಗಳಿಗೆ ಅವರು ತಡೆಯೊಡ್ಡುತ್ತಾರೆ ಎನ್ನುವ ಆರೋಪವೂ ಈ ಹಿಂದೆ ಕೇಳಿ ಬಂದಿತ್ತು. ಈಗಲೂ ಅದನ್ನೇ ಮುಂದುವರೆಸಿದ್ದಾರೆ ಎನ್ನುವುದು ವಿಶಾಲ್ ಆರೋಪ. ಸದ್ಯ ವಿಶಾಲ್ ನಟನೆಯ ರತ್ನಂ ಸಿನಿಮಾ ರಿಲೀಸ್ ಆಗಿದೆ. ಜಿಲ್ಲಾ ಕೇಂದ್ರಗಳಲ್ಲೇ ವಿಶಾಲ್ ಚಿತ್ರಕ್ಕೆ ಥಿಯೇಟರ್ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಜೊತೆಗೆ ಸಿನಿಮಾ ರಂಗದಲ್ಲಿ ಅವರನ್ನು ಹತ್ತಿಕ್ಕುವ ಕೆಲಸವನ್ನೂ ಕೆಲವರು ಮಾಡುತ್ತಿದ್ದಾರಂತೆ. ಹಾಗಾಗಿ ವಿಶಾಲ್ ವಾರ್ನ್ ಮಾಡಿದ್ದಾರೆ.

Read More

ನನ್ನರಸಿ ರಾಧೆ ಖ್ಯಾತಿಯ ನಟಿ ಕೌಸ್ತುಭ ಮಣಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಏ.26ರಂದು ಸಿದ್ಧಾಂತ್ ಸತೀಶ್ ಎಂಬುವವರ ಜೊತೆ ನಟಿ ಹಸೆಮಣೆ ಏರಿದ್ದು ಮದುವೆ ಸಂಭ್ರಮದಲ್ಲಿರುವ ನಟಿಗೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಕೌಸ್ತುಭ ಮದುವೆ ಫೋಟೋ ವೈರಲ್ ಆಗಿದ್ದು, ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದಾರೆ. ವರ ಸಿದ್ಧಾಂತ್ ಪಂಚೆ ಮತ್ತು ಶಲ್ಯ ಧರಿಸಿದ್ದಾರೆ. ನಟಿಯ ಮದುವೆಯಲ್ಲಿ ಕುಟುಂಬಸ್ಥರು, ಆಪ್ತರಷ್ಟೇ ಭಾಗಿಯಾಗಿದ್ದರು. ಇತ್ತೀಚೆಗಷ್ಟೇ ಜೋಡಿಗಳು ಪ್ರೀವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಚಾಪರ್ ಬಳಸಿ ಶೂಟ್ ಮಾಡಿಸಿಕೊಂಡು ಮತ್ತೆ ಸುದ್ದಿಯಾಗಿದ್ದರು. ಕೌಸ್ತುಭ ಕೆನಾಡಾದಲ್ಲಿ ವರ್ಕ್ ಮಾಡುತ್ತಿರುವ ಹುಡುಗ ಸಿದ್ಧಾಂತ್ ಜೊತೆ ಮಾರ್ಚ್ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಪ್ರೀವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎನ್ನುವ ಸುಳಿವು ನೀಡಿದ್ದರು. ಈ ಮಧ್ಯೆ ಆಪ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಮದುವೆಯಾಗಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

Read More

‘ಗೀತಾ’ ಧಾರವಾಹಿಯ ಮೂಲಕ ಖ್ಯಾತಿ ಘಳಿಸಿರುವ ನಟ ಧನುಷ್ ಗೌಡ ಅದ್ಧೂರಿಯಾಗಿ ಹಸೆಮಣೆ ಏರಿದ್ದಾರೆ. ಮದುವೆ ಸಂಭ್ರಮದ ನಡುವೆಯೂ ವೋಟ್ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಏ.26ರಂದು ನಟ ಧನುಷ್ ಅತ್ತೆಯ ಮಗಳ ಜೊತೆ ಸಪ್ತಪದಿ ತುಳಿದಿದ್ದಾರೆ. ಧನುಷ್ ಮದುವೆ ಸಂಭ್ರಮದಲ್ಲಿ ಕಿರುತೆರೆಯ ನಟ-ನಟಿಯರು ಭಾಗವಹಿಸಿ ಶುಭಹಾರೈಸಿದ್ದಾರೆ. ಮದುವೆಯ ಶಾಸ್ತ್ರದ ನಡುವೆ ಧನುಷ್ ವೋಟ್ ಮಾಡಿರೋದು ಅಭಿಮಾನಿಗಳ ಗಮನ ಸೆಳೆದಿದೆ. ಮಾಂಗಲ್ಯಧಾರಣೆ ವೇಳೆ ವಧು ಸಂಜನಾ ಕಣ್ಣೀರಿಟ್ಟರು. ಈ ವೇಳೆ, ಸಂಗಾತಿಗೆ ಧನುಷ್ ಸಿಹಿಮುತ್ತು ನೀಡಿದ್ದಾರೆ. ಇನ್ನೂ ಗ್ರ್ಯಾಂಡ್ ರಿಸೆಪ್ಷನ್ ಏರ್ಪಡಿಸಿದ್ದು ನಟಿಯರಾದ ಭವ್ಯ ಗೌಡ, ಮೌನ ಗುಡ್ಡೇಮನೆ, ಜಯಶ್ರೀ ಆರಾಧ್ಯ , ಸ್ಪಂದನಾ ಸೋಮಣ್ಣ ಸೇರಿದಂತೆ ಸಾಕಷ್ಟು ಮಂದಿ ಆಗಮಿಸಿ ನವ ಜೋಡಿಗೆ ಶುಭ ಹಾರೈಸಿದರು.

Read More

ಸ್ಯಾಂಡಲ್‌ವುಡ್ ನಟಿ ರಾಧಿಕಾ ಪಂಡಿತ್ ಪೋಷಕರ ಜೊತೆ ಬಂದು  ಮತದಾನ ಮಾಡಿದ್ದಾರೆ. ಈ ವೇಳೆ ಸರದಿ ಸಾಲಿನಲ್ಲಿ ನಿಂತ ರಾಧಿಕಾ ಜೊತೆ ಸೆಲ್ಫಿ ಕ್ಲಿಕ್ಕಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.  ಕುಟುಂಬದ ಜೊತೆ ಗಾಯತ್ರಿ ನಗರದ ಮತಗಟ್ಟೆಗೆ ಆಗಮಿಸಿ ರಾಧಿಕಾ ಪಂಡಿತ್ ಮತ ಚಲಾಯಿಸಿದ್ದಾರೆ. ಈ ವೇಳೆ ನಟಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಸೆಲೆಬ್ರಿಟಿಗಳು ಹೇಳ್ತಾರೆ ಅಂತ ವೋಟ್ ಮಾಡಬೇಡಿ. ಮತದಾನ ಮಾಡೋದು ನಮ್ಮೆಲ್ಲರ ಹಕ್ಕು ಎಂದಿದ್ದಾರೆ. ಎಲ್ಲರೂ ಬಂದು ಮತ ಚಲಾಯಿಸಿ ಇನ್ನೂ ಸಮಯ ಇದೆ ಬನ್ನಿ ಎಂದು ಹೇಳಿದ್ದಾರೆ. ನಾನೆಲ್ಲಿ ವೋಟ್ ಮಾಡ್ತೀನಿ ಅನ್ನೋದು ಮುಖ್ಯ ಅಲ್ಲ. ನಾವು ವೋಟ್ ಮಾಡ್ತಿವೋ ಇಲ್ವೋ ಎಂಬುದು ಮುಖ್ಯ ಎಂದು ನಟಿ ಮಾತನಾಡಿದ್ದಾರೆ. ಈ ಮೂಲಕ ಮತ ಚಲಾಯಿಸುವಂತೆ ಅಭಿಮಾನಿಗಳಿಗೆ ರಾಧಿಕಾ ಮನವಿ ಮಾಡಿದ್ದಾರೆ.

Read More