ಪಿವಿಆರ್ ಐನಾಕ್ಸ್ನಲ್ಲಿ ಸಿನಿಮಾ ನೋಡಲು ಹೋಗುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಇನ್ನು ಕೆಲವೇ ದಿನಗಳಲ್ಲಿ ಜಾಹೀರಾತು ಪ್ರಸಾರ ಸಂಪೂರ್ಣವಾಗಿ ನಿಲ್ಲಲಿದೆ. ಆ ಬಳಿಕ ಸಿನಿ ಅಭಿಮಾನಿಗಳು ಯಾವುದೇ ಜಾಹೀರಾತಿನ ಕಿರಿಕಿರಿ ಇಲ್ಲದೆ ಸಿನಿಮಾ ನೋಡಬಹುದಾಗಿದೆ. ಹೀಗೊಂದು ಯೋಜನೆಯನ್ನು ಸಂಸ್ಥೆ ರೂಪಿಸುತ್ತಿದೆ. ದಿನದ ಒಟ್ಟಾರೆ ಜಾಹೀರಾತು ಪ್ರದರ್ಶನದ ಅವಧಿಯಲ್ಲಿ ಒಂದು ಶೋನ ಹೆಚ್ಚುವಾರಿಯಾಗಿ ಪ್ರದರ್ಶಿಸಬಹುದು ಅನ್ನೋದು ಸಂಸ್ಥೆಯ ಆಲೋಚನೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದು ನಿಜವಾಗಿದ್ದರೆ ಸಿನಿ ಪ್ರಿಯರಿಗೆ ಸಖತ್ ಖುಷಿಯಾಗಲಿದೆ. ಪಿವಿಆರ್-ಐನಾಕ್ಸ್ಗಳಲ್ಲಿ ಕನಿಷ್ಠ 5-10 ನಿಮಿಷಗಳ ಕಾಲ ಕೆಲವೊಮ್ಮೆ ಅದಕ್ಕೂ ಹೆಚ್ಚಿನ ಸಮಯದಲ್ಲಿ ಜಾಹೀರಾತು ಪ್ರದರ್ಶನ ಮಾಡಲಾಗುತ್ತಿದೆ. ಈಗ ಇದನ್ನು ಬಂದ್ ಮಾಡಲು ಸಂಸ್ಥೆ ಮುಂದಾಗಿದೆ ಎಂದು ಮನಿ ಕಂಟ್ರೋಲ್ ವೆಬ್ಸೈಟ್ ವರದಿ ಮಾಡಿದೆ. ಜಾಹೀರಾತು ಪ್ರದರ್ಶನಗಳಿಂದ ಪಿವಿಆರ್ ಐನಾಕ್ಸ್ಗೆ ದೊಡ್ಡ ಮಟ್ಟದ ಲಾಭ ಆಗುತ್ತಿದೆ. ಇದನ್ನು ನಿಲ್ಲಿಸಿದರೆ ಮುಂದೇನು ಎನ್ನುವ ಪ್ರಶ್ನೆ ಬರುತ್ತಿದೆ. ಜಾಹೀರಾತಿನ ಬದಲು ಒಂದು ಶೋನ ಹೆಚ್ಚುವರಿಯಾಗಿ ಪ್ರದರ್ಶಿಸಲು ಸಂಸ್ಥೆ ಮುಂದಾಗಿದೆ. ಇದರಿಂದ ಹೆಚ್ಚಿನ ಜನರು ಸಿನಿಮಾ ನೋಡಲು…
Author: Author AIN
ಕೆಜಿಎಫ್ ಸಿನಿಮಾದ ಬಳಿಕ ರಾಕಿಂಗ್ ಸ್ಟಾರ್ ಯಶ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ಕೆಜಿಎಫ್ ಬಳಿಕ ಯಶ್ ನಟನೆಯ ಮುಂದಿನ ಸಿನಿಮಾ ‘ಟಾಕ್ಸಿಕ್’ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಮಧ್ಯೆ ಯಶ್ ಹಿಂದಿಯ ‘ರಾಮಾಯಣ’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ರಾವಣನಾಗಿ ಕಾಣಿಸಿಕೊಳ್ಳಲಿದ್ದು, ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಬಗ್ಗೆ ಯಶ್ ಪ್ರತಿಕ್ರಿಯಿಸಿದ್ದಾರೆ. ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅವರ ಜೊತೆಗೆ ಯಶ್ ಕೂಡ ಕೈ ಜೋಡಿಸಿದ್ದಾರೆ. ‘ವೆರೈಟಿ ಮ್ಯಾಗಜಿನ್’ಗೆ ನೀಡಿದ ಸಂದರ್ಶನದಲ್ಲಿ ಯಶ್ ಸಿನಿಮಾ ನಿರ್ಮಾಣದ ಹಿಂದಿನ ಕಾರಣ ತಿಳಿಸಿದ್ದಾರೆ. ‘ಜಾಗತಿಕ ಮಟ್ಟದಲ್ಲಿ ಪ್ರದರ್ಶಿಸುವ ಸಿನಿಮಾಗಳನ್ನು ನಿರ್ಮಾಣ ಮಾಡಬೇಕು ಎಂಬುದು ನನ್ನ ದೀರ್ಘಕಾಲದ ಆಕಾಂಕ್ಷೆ ಆಗಿತ್ತು. ಅದರ ಅನ್ವೇಷಣೆಯಲ್ಲಿ ನಾನು ಲಾಸ್ ಏಂಜಲೀಸ್ಗೆ ಹೋಗಿದ್ದೆ. ಅತ್ಯುತ್ತಮ ವಿಎಫ್ಎಕ್ಸ್ ಸ್ಟುಡಿಯೋಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಅಲ್ಲಿದ್ದೆ. ಭಾರತೀಯ ಸಿನಿಮಾದ ದೃಷ್ಟಿಯಲ್ಲಿ ನನ್ನ ಮತ್ತು ನಮಿತ್ ಆಲೋಚನೆಗಳು ಹೊಂದುತ್ತವೆ’ ಎಂದಿದ್ದಾರೆ. ‘ನಾವು ವಿವಿಧ ಯೋಜನೆಗಳ…
ಬಾಲಿವುಡ್ ನ ಹಿರಿಯ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಈ ವಯಸ್ಸಿನಲ್ಲೂ ಬಿಡುವಿಲ್ಲದೆ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಅದೆಷ್ಟರ ಮಟ್ಟಿಗೆ ಅಂದರೆ ಅಮಿತಾಬ್ ಗೆ ಊಟ ಮಾಡಲು ಸಮಯ ಸಿಗುತ್ತಿಲ್ಲವಂತೆ. ಈ ಬಗ್ಗೆ ಸ್ವತಃ ಅಮಿತಾಬ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ದಿನದ ಒಂಬತ್ತು ಗಂಟೆ ಕೆಲಸ ಮಾಡುವೆ. ಕಾರಲ್ಲೇ ಊಟ ಮಾಡಿದೆ ಎಂದೆಲ್ಲ ಅಮಿತಾಬ್ ಬರೆದುಕೊಂಡಿದ್ದಾರೆ. ಸದ್ಯ ಅಮಿತಾಬ್ ಕಿರುತೆರೆಯ ಅತ್ಯಂತ ಜನಪ್ರಿಯ ಶೋ ಕೌನ್ ಬನೇಗಾ ಕರೋಡ್ಪತಿ ಸೀಸನ್ 16ರ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ವೇಳಾ ಪಟ್ಟಿಯ ಪ್ರಕಾರ 81ನೇ ವಯಸ್ಸಲ್ಲೂ ಬಿಗ್ ಬಾಸ್ ಸರಿ ಸುಮಾರು ಒಂಬತ್ತು ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ. ಈ ಮಾಹಿತಿಯನ್ನೂ ಅವರೇ ಹೇಳಿದ್ದಾರೆ. ಕರೋಡ್ಪತಿ ಸೆಟ್ ನಲ್ಲಿರುವ ಫೋಟೋವನ್ನೂ ಅವರು ಶೇರ್ ಮಾಡಿಕೊಂಡಿದ್ದು, ಕಾರಿನಲ್ಲೇ ಪ್ರಶ್ನೆಗಳನ್ನು ಓದುತ್ತಿದ್ದಾರೆ. ಅಲ್ಲಿಯೇ ಊಟ ಮಾಡುತ್ತಿದ್ದಾರೆ. ಜೊತೆಗೆ ಟ್ರಾವೆಲ್ ಮಾಡ್ತಾ, ಕಾರ್ಯಕ್ರಮದ ವಿವರವನ್ನೂ ಪಡೆದುಕೊಳ್ತಿದ್ದಾರೆ. ಈ ವಯಸ್ಸಿನಲ್ಲೂ ಅಮಿತಾಬ್ ಅವರಿಗೆ ಕೆಲಸದ ಮೇಲಿರುವ ಪ್ರೀತಿಯನ್ನು ಕಂಡು…
ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ ಅವರಿಗೆ ವಿಚಿತ್ರ ಆಸೆ ಇದೆಯಂತೆ. ಆ ಆಸೆಯನ್ನು ನಟ ಕಾಮಿಡಿ ವಿತ್ ಕಪಿಲ್ ಶೋನಲ್ಲಿ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ. ಅಮೀರ್ ಖಾನ್ ರ ವಿಚಿತ್ರ ಆಸೆ ಕೇಳಿದ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಶಾರ್ಟ್ಸ್ ಧರಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎನ್ನುವುದು ಆಮೀರ್ ಅವರಿಗೆ ಇರುವ ಆಸೆಯಂತೆ. ಆದರೆ ಅದಕ್ಕೆ ಮಕ್ಕಳು ಬಿಡುವುದಿಲ್ಲ. ನನ್ನ ಮಕ್ಕಳು ನನ್ನ ಮಾತನ್ನು ಕೇಳೋದಿಲ್ಲ ಎಂದೂ ಅವರು ಹೇಳಿದ್ದು, ಜೊತೆಗೆ ಪ್ರಶಸ್ತಿ ಸಮಾರಂಭಕ್ಕೆ ತಾವು ಏಕೆ ಹೋಗುವುದಿಲ್ಲ ಎನ್ನುವುದನ್ನೂ ಹೇಳಿದ್ದಾರೆ. ಆಮೀರ್ ಖಾನ್ ಬಾಲಿವುಡ್ ಕಂಡ ಅದ್ಭುತ ನಟ ಹಾಗೂ ನಿರ್ಮಾಪಕ. ಎರಡು ಮದುವೆಯಾಗಿ ಇಬ್ಬರಿಗೂ ಡಿವೋರ್ಸ್ ಕೊಟ್ಟಿದ್ದರು. ಈಗಲೂ ಇಬ್ಬರ ಜೊತೆಯೂ ಪ್ರೀತಿಯಿಂದ ನಡೆದುಕೊಳ್ಳುತ್ತಾರೆ. ಅಗತ್ಯ ಬಿದ್ದಾಗ ಭೇಟಿ ಮಾಡುತ್ತಾರೆ. ಜೊತೆಗೆ ಮಕ್ಕಳನ್ನು ಜತನದಿಂದ ಕಾಪಾಡಿಕೊಂಡಿದ್ದು ಇತ್ತೀಚೆಗೆ ಓರ್ವ ಮಗಳ ಮದುವೆ ಮಾಡಿದ್ದಾರೆ. ಸದ್ಯ ಅಮಿರ್ ಭಾಗಿಯಾಗಿರುವ ಕಾಮಿಡಿ ವಿತ್ ಕಪಿಲ್ ಶೋನಲ್ಲಿ ಕಾರ್ಯಕ್ರಮದ ಪ್ರವೋ ಬಿಡುಗಡೆ ಆಗಿದ್ದು ಸದ್ಯದಲ್ಲೇ ಕಾರ್ಯಕ್ರಮ…
ಯುರೋಪಿಯನ್ ಫುಡ್ ಸೇಫ್ಟಿ ಅಥಾರಿಟಿ ಸೆಪ್ಟೆಂಬರ್ 2020 ರಿಂದ ಏಪ್ರಿಲ್ 2024 ರವರೆಗೆ ಭಾರತಕ್ಕೆ ಸಂಬಂಧಿಸಿದ 527 ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್ ಸಂಬಂಧಿತ ರಾಸಾಯನಿಕಗಳನ್ನು ಪತ್ತೆ ಹಚ್ಚಿದೆ. ಎಥಿಲೀನ್ ಆಕ್ಸೈಡ್ ಪತ್ತೆಯಾದ ವಸ್ತುಗಳಲ್ಲಿ, ಒಣ ಹಣ್ಣುಗಳು ಮತ್ತು ಬೀಜಗಳು ಮೊದಲ ಸ್ಥಾನದಲ್ಲಿವೆ. ಒಣ ಹಣ್ಣುಗಳು ಮತ್ತು ಬೀಜಗಳಿಗೆ ಸಂಬಂಧಿಸಿದ 313 ವಸ್ತುಗಳಲ್ಲಿ ಈ ರಾಸಾಯನಿಕ ಕಂಡುಬಂದಿದೆ. ಇದರ ಬಳಿಕ ಈ ರಾಸಾಯನಿಕವು ಗಿಡಮೂಲಿಕೆಗಳು ಮತ್ತು ಮಸಾಲೆಗಳಿಗೆ ಸಂಬಂಧಿಸಿದ 60 ವಸ್ತುಗಳಲ್ಲಿ, ಆಹಾರಕ್ಕೆ ಸಂಬಂಧಿಸಿದ 48 ಆಹಾರ ಪದಾರ್ಥಗಳಲ್ಲಿ ಹಾಗೂ 34 ಇತರ ಆಹಾರ ಪದಾರ್ಥಗಳಲ್ಲಿ ಕಂಡುಬಂದಿದೆ. ಪ್ರಾಧಿಕಾರದ ಪ್ರಕಾರ, ಗಡಿಯಲ್ಲಿಯೇ 87 ಸರಕುಗಳನ್ನು ತಿರಸ್ಕರಿಸಲಾಗಿದೆ. ಉಳಿದ ವಸ್ತುಗಳು ಮಾರುಕಟ್ಟೆಯನ್ನು ತಲುಪಿದ್ದರೂ, ನಂತರ ಅವುಗಳನ್ನು ಮಾರುಕಟ್ಟೆಯಿಂದ ತೆಗೆದುಹಾಕಲಾಯಿತು. ಎಥಿಲೀನ್ ಆಕ್ಸೈಡ್ ಕೀಟಗಳನ್ನು ಕೊಲ್ಲಲು ಕೃಷಿಯಲ್ಲಿ ಬಳಸುವ ಕೀಟನಾಶಕವಾಗಿದೆ. ಇದು ಕ್ರಿಮಿನಾಶಕ ಏಜೆಂಟ್ ಆಗಿಯೂ ಕಾರ್ಯನಿರ್ವಹಿಸುತ್ತದೆ. ಆಹಾರ ಮತ್ತು ಪಾನೀಯಗಳಲ್ಲಿ ಮಿಶ್ರಣ ಮಾಡುವುದನ್ನು ನಿಷೇಧಿಸಲಾಗಿದೆ. ವೈದ್ಯಕೀಯ ಉಪಕರಣಗಳನ್ನು ಕ್ರಿಮಿನಾಶಕಗೊಳಿಸುವುದು ಇದರ ಮುಖ್ಯ ಕಾರ್ಯವಾಗಿದ್ದು, ಇದನ್ನು…
ಸಿನಿಮಾ ರಂಗದಲ್ಲಿ ಕಾಸ್ಟಿಂಗ್ ಕೌಚ್ ಎಂಬ ಪದ ಆಗಾಗ ಕೇಳಿ ಬರುತ್ತಿರುತ್ತದೆ. ಚಿತ್ರರಂಗದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳದ ಬಗ್ಗೆ ಈಗಾಗಲೇ ಹಲವು ನಾಯಕಿಯರು ಓಪನ್ ಆಗಿ ಮಾತನಾಡಿದ್ದಾರೆ. ಇದೀಗ ಈ ಬಗ್ಗೆ ಕಾಲಿವುಡ್ ನಾಯಕಿ ಪ್ರತಿಕ್ರಿಯಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಕಾಲಿವುಡ್ ನಾಯಕಿ ಗಾಯತ್ರಿ ರೆಮಾ, ನಿರ್ದೇಶಕರು ಮತ್ತು ನಿರ್ಮಾಪಕರು ನೇರವಾಗಿ ನಾಯಕಿಯರೊಂದಿಗೆ ಮಾತನಾಡುತ್ತಾರೆ. ಅವರು ಆಫರ್ಗಳನ್ನು ಬಯಸಿದರೆ, ಅಡ್ಜೆಸ್ಟ್ ಮೆಂಟ್ ಮಾಡಿಕೊಳ್ಳಲು ಓಕೆ ಅಂದರೆ ಮಾತ್ರ ಸಿನಿಮಾದಲ್ಲಿ ಅವಕಾಶ ಸಿಗುತ್ತದೆ ಎಂದಿದ್ದಾರೆ. ಅಡ್ಜಸ್ಟಮೆಂಟ್ ಬೇಡ ಎನ್ನುವ ಕಾರಣಕ್ಕೆ ಸಿನಿಮಾ ಅವಕಾಶಗಳು ಸಿಗುತ್ತಿಲ್ಲ. ಈ ಕ್ರಮದಲ್ಲಿ ನಿರ್ದೇಶಕರೊಬ್ಬರು ಕಮಿಟ್ ಮೆಂಟ್ ಕೇಳಿದ್ದರು. ‘ನಟಿಸಲು ಹೇಳಿದರೂ ಪರವಾಗಿಲ್ಲ, ನನ್ನ ಜೊತೆ ಮಲಗಲು ಹೇಳಿದರೆ ಹೇಗೆ’ ಎಂದು ಅಸಹನೆ ವ್ಯಕ್ತಪಡಿಸಿದ ಗಾಯತ್ರಿ ರೇಮಾ, ಹೀರೋ ಸಿದ್ಧಾರ್ಥ್ ಎಂದರೆ ನನಗೆ ತುಂಬಾ ಇಷ್ಟ.. ಅವರ ಜೊತೆ ನಟಿಸುವ ಅವಕಾಶ ಸಿಕ್ಕರೆ.. ಹಾಸಿಗೆ ಹಂಚಿಕೊಳ್ಳಲು ಸಿದ್ಧ ಎಂದು ಓಪನ್ ಆಗಿ ಹೇಳಿದ್ದಾರೆ. ವಿಮಾನ ನಿಲ್ದಾಣದ ಬಳಿ ಶೂಟಿಂಗ್…
ಕೊರಿಯಾದಲ್ಲಿ ಮಸೀದಿಯನ್ನು ನಿರ್ಮಿಸಲು ಮುಂದಾದ ಪಾಪ್ ತಾರೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ದಕ್ಷಿಣ ಕೊರಿಯಾದ ಯೂಟ್ಯೂಬರ್ ಮತ್ತು ಮಾಜಿ ಕೋರಿಯನ್ ಪಾಪ್ ತಾರೆ ದೌಡ್ ಕಿಮ್ ಇಂಚಿಯಾನ್ನಲ್ಲಿ ಮಸೀದಿ ನಿರ್ಮಿಸುವ ಪ್ರಯತ್ನಕ್ಕೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. 2020ರಲ್ಲಿ ಇಸ್ಲಾಂಗೆ ಮತಾಂತರಗೊಂಡ ಬಳಿಕ ತನ್ನ ಹೆಸರನ್ನು ದೌಡ್ ಕಿಮ್ ಎಂದು ಬದಲಾಯಿಸಿಕೊಂಡಿರುವ ಜೇ ಕಿಮ್ ಎರಡನೇ ಭಾರಿ ಮಸೀದಿ ನಿರ್ಮಿಸಲು ಪ್ರಯತ್ನಿಸಿದರು. ಸದ್ಯ ಅವರ ಮಸೀದಿಯನ್ನು ನಿರ್ಮಿಸುವ ಪ್ರಯತ್ನವು ಸ್ಥಳೀಯರಿಂದ ಪ್ರತಿರೋಧ ಮತ್ತು ವಂಚನೆಯ ಆರೋಪಗಳನ್ನು ಎದುರಿಸುತ್ತಿದೆ. 5.55 ಮಿಲಿಯನ್ ಯೂಟ್ಯೂಬ್ ಚಂದಾದಾರರನ್ನು ಹೊಂದಿರುವ ದೌಡ್ ಕಿಮ್ ದಕ್ಷಿಣ ಕೊರಿಯಾದಲ್ಲಿ ಮುಸ್ಲಿಮರಿಗೆ ಪ್ರಾರ್ಥನೆ ಮಾಡಲು ಹೆಚ್ಚಿನ ಸ್ಥಳಗಳನ್ನು ನಿರ್ಮಿಸಲು ಬಯಸಿರುವುದಾಗಿ Instagram ನಲ್ಲಿ ಹಂಚಿಕೊಂಡಿದ್ದಾರೆ. ಮಸೀದಿ ನಿರ್ಮಾಣ ಮಾಡಬೇಕೆಂದ ಉದ್ದೇಶದಿಂದ ಪಾಪ್ ತಾರೆ ದೌಡ್ ಕಿಮ್ ಇಂಚೆನ್ನ ಯೊಂಗ್ಜಾಂಗ್ ದ್ವೀಪದಲ್ಲಿ 284.4 ಚದರ ಮೀಟರ್ ಭೂಮಿಯನ್ನು 189.2 ಮಿಲಿಯನ್ ವೋನ್ಗಳಿಗೆ ($136,500) ಖರೀದಿ ಮಾಡಿದ್ದರು. ಆದರೆ ಸಿಯೋಲ್ ಕ್ಯಾಪಿಟಲ್ ಏರಿಯಾದ ಭಾಗವಾಗಿರುವ…
ಲೋಕಸಭಾ ಚುನಾವಣೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಸಾಕಷ್ಟು ನಟ, ನಟಿಯರು ತಮ್ಮ ನೆಚ್ಚಿನ ಅಭ್ಯರ್ಥಿ ಪರ ಬೀದಿಗಿಳಿದು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಕನ್ನಡ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಸಕ್ರಿಯರಾಗಿರುವ ನಟಿ ಮೇಘಾ ಶೆಟ್ಟಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದು ಕೆಲವೊಂದು ಫೋಟೋಸ್ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿವೆ. ಸವದತ್ತಿ ವಿಧಾನಸಭಾ ಕ್ಷೇತ್ರದ ಸತ್ತಿಗೇರಿ ಗ್ರಾಮದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪೋಸ್ಟ್ ಮಾಡಿದ್ದಾರೆ. ಇದೇ ಸಮಯದಲ್ಲಿ ಕಿರುತರೆ ನಟಿಯರು ಪ್ರಚಾರದಲ್ಲಿ ಭಾಗಿಯಾಗಿ ಸಾಥ್ ನೀಡಿರುವುದು ಖುಷಿ ತಂದಿದೆ. ಪ್ರಚಾರದಲ್ಲಿ ಶಾಸಕರಾದ ವಿಶ್ವಾಸ ಅಣ್ಣ ವೈದ್ಯ, ಗ್ರಾಮದ ಮುಖಂಡರು ಕಿರುತೆರೆ ನಟಿಯರಾದ ಮೇಘ ಶೆಟ್ಟಿ, ಮೌನ ಗುಡ್ಡೆಮನೆ, ಭವ್ಯಾ ಗೌಡ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಕರ್ನಾಟಕ ಲೋಕಸಭಾ ಚುನಾವಣೆಯ ಮತದಾನಕ್ಕೆ ಎರಡು ದಿನಗಳು ಮಾತ್ರ ಬಾಕಿ ಉಳಿದಿದೆ. ಏಪ್ರಿಲ್…
ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆದ ರೋಗಿಗಳು ಮರಣ ಹೊಂದುವ ಸಾಧ್ಯತೆ ಕಡಿಮೆ ಹಾಗೂ ತಕ್ಷಣಕ್ಕೆ ಚೇತರಿಸಿಕೊಳ್ಳುತ್ತಾರೆ ಎಂದು ಆನಲ್ಸ್ ಆಫ್ ಇಂಟರ್ನಲ್ ಮೆಡಿಸಿನ್ ಅಚ್ಚರಿಯ ವರದಿಯನ್ನು ಪ್ರಕಟಿಸಿದೆ. ಪುರುಷ ವೈದ್ಯರಿಂದ ಚಿಕಿತ್ಸೆ ಪಡೆದ ರೋಗಿಗಳಿಗಿಂತ ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆದ ರೋಗಿಗಳು ಕಡಿಮೆ ಮರಣ ಪ್ರಮಾಣ ಹೊಂದಿದ್ದಾರೆ ಎಂದು ಈ ವರದಿಯ ಅಧ್ಯಯನದಲ್ಲಿ ಉಲ್ಲೇಖಿಸಲಾಗಿದೆ. 2016 ರಿಂದ 2019 ರವರೆಗೆ ಆಸ್ಪತ್ರೆಗೆ ದಾಖಲಾದ 458,100 ಮಹಿಳಾ ರೋಗಿಗಳು, ಅದರಲ್ಲೂ 318,800 ಕ್ಕೂ ಹೆಚ್ಚು ಪುರುಷ ರೋಗಿಗಳು ಸೇರಿದಂತೆ 776,000 ಜನರನ್ನು ಈ ಅಧ್ಯಯನಕ್ಕೆ ಬಳಸಲಾಗಿದೆ. ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆದಾಗ ರೋಗಿಗಳಿಗೆ ಕಡಿಮೆ ಮರಣ ಮತ್ತು ತಕ್ಷಣದಲ್ಲಿ ಚೇತರಿಕೆಗೊಂಡಿದ್ದಾರೆ ಎಂದು ಹೇಳಲಾಗಿದೆ. ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆದ ಮಹಿಳಾ ರೋಗಿಗಳ ಮರಣ ಪ್ರಮಾಣವು 8.15% ರಷ್ಟಿದ್ದರೆ, ಪುರುಷ ವೈದ್ಯರಿಂದ ಚಿಕಿತ್ಸೆ ಪಡೆದು ಮರಣ ಹೊಂದಿದ ರೋಗಿಗಳು 8.38% ರಷ್ಟಿದೆ. ಇನ್ನು ಇದರಲ್ಲಿ ಮರಣ ಹೊಂದದವರ ಪ್ರಮಾಣವನ್ನು ಹೊಂದಾಣಿಕೆ ಮಾಡಿದ್ರೆ, ಪುರುಷ ವೈದ್ಯರಿಂದ ಚಿಕಿತ್ಸೆ ಪಡೆದು…
ಇಂದು ವರನಟ ಡಾ.ರಾಜ್ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಅಣ್ಣವ್ರ ಸ್ಮಾರಕಕ್ಕೆ ನಮಸಿದ್ದಾರೆ. ಇದೇ ವೇಳೆ ತಾವು ಆತ್ಮಹತ್ಯೆಗೆ ಪ್ರಯತ್ನಿಸಿದ ಸಂದರ್ಭದಲ್ಲಿ ಆಸ್ಪತ್ರೆಗೆ ಬಂದು ಅಣ್ಣಾವ್ರು ಧೈರ್ಯ ತುಂಬಿದ್ದರು ಎಂದು ಹಳೆಯ ದಿನಗಳನ್ನು ಜಗ್ಗೇಶ್ ಸ್ಮರಿಸಿದ್ದಾರೆ. 1994ರ ಸಮಯದಲ್ಲಿ ಜಗ್ಗೇಶ್ ಅವರ ಸಿನಿಮಾಗಳು ಫ್ಲಾಪ್ ಆದವು. ಇದರಿಂದ ಬೇಸರಗೊಂಡ ಜಗ್ಗೇಶ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ನನ್ನ ಪರ ನಿಂತಿದ್ದು ಅಣ್ಣಾವ್ರು ಎಂದಿದ್ದಾರೆ. ಆಗ ನಾನು ಆತ್ಮಹತ್ಯೆಗೆ ಪ್ರಯತ್ನಿಸಿದ್ದೆ, ಆಸ್ಪತ್ರೆಗೆ ನನ್ನನ್ನು ದಾಖಲಿಸಿದ್ದರು. ಅಂದು ಅಣ್ಣಾವ್ರು ಬಂದು ತಲೆ ಮೇಲೆ ಕೈ ಇಟ್ಟು ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಿದ್ದರು. ಯಾವುದೇ ಕಾರಣಕ್ಕೂ ಅತಿಯಾದ ಆಸೆ ಬೇಡ, ಜಗತ್ತನ್ನು ಮೆಚ್ಚಿಸಿ ಬದುಕೋಕೆ ಹೋಗಬಾರದು ಎಂದು ಕಿವಿಹಿಂಡಿದ್ದರು. ನನಗೆ ಮಾನಸಿಕವಾಗಿ ನನ್ನ ಜೊತೆ ನಿಂತರು. ಅವರ ಆಶೀರ್ವಾದದ ನಂತರ ನನ್ನ ಸಿನಿಮಾಗಳು ಮಾಸಿವ್ ಹಿಟ್ ಆದವು ಎಂದು ಅಣ್ಣಾವ್ರರನ್ನು ನೆನಪಿಸಿಕೊಂಡಿದ್ದಾರೆ ಜಗ್ಗೇಶ್. ನಮ್ಮ ತಂದೆ…