Author: Author AIN

ಹುಬ್ಬಳ್ಳಿ ಕಾಲೇಜೀನಲ್ಲಿ ನಡೆದ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದೀಗ ಹತ್ಯೆಯ ಕುರಿತು ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನೇಹಾ ಸಾವಿನ ಬಗ್ಗೆ ಧ್ರುವ ಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ. ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್‌ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗೂ ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ಏ.18ರಂದು ಹುಬ್ಬಳ್ಳಿ- ಧಾರಾವಾಡ ಮಹಾನಗರ ಪಾಲಿಕೆ ಕಾರ್ಪೊರೇಟರ್ ಅವರ ಪುತ್ರಿ ಹತ್ಯೆ ನಡೆದಿತ್ತು. ನೇಹಾ ಹತ್ಯೆಗೈದ ಆರೋಪಿ ಫಯಾಜ್ ಬಂಧನವಾಗಿದ್ದು ಆರೋಪಿಗೆ ಉಗ್ರ ಶಿಕ್ಷೆ ನೀಡುವಂತೆ ಒತ್ತಾಯ ಕೇಳಿ ಬಂದಿದೆ.

Read More

ಈ ಹಿಂದೆ ಶಿವರಾಜ್ ಕುಮಾರ್ ಹಾಗೂ ಭಾವನಾ ಮೆನನ್ ಜೋಡಿಯಾಗಿ ಟಗರು, ಭಜರಂಗಿ 2 ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಈ ಎರಡು ಸಿನಿಮಾಗಳು ಹಿಟ್ ಆಗಿದ್ದವು. ಇದೀಗ ಮತ್ತೆ ಈ ಜೋಡಿ ತೆರೆ ಮೇಲೆ ಕಾಣಿಸಿಕೊಳ್ಳಲು ರೆಡಿಯಾಗಿದ್ದಾರೆ. ಸದ್ಯ ನಟಿ ಭಾವನಾ ಕನ್ನಡದ ಜೊತೆಗೆ ಮಲಯಾಳಂ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಹೊಸ ಸಿನಿಮಾದಲ್ಲಿ ನಟಿಸುವ ಬಗ್ಗೆ ಸ್ವತಃ ಸಂದರ್ಶನವೊಂದರಲ್ಲಿ ಭಾವನಾ ಮಾಹಿತಿ ನೀಡಿದ್ದಾರೆ. ಬಹುನಿರೀಕ್ಷಿತ ‘ಉತ್ತರಕಾಂಡ’ ಚಿತ್ರದಲ್ಲಿ ಶಿವಣ್ಣ ಜೊತೆ ತೆರೆಹಂಚಿಕೊಳ್ಳುವ ಬಗ್ಗೆ ಸಿಹಿಸುದ್ದಿ ನೀಡಿದ್ದಾರೆ.  ಜನವರಿಯಲ್ಲಿ ‘ಉತ್ತರಕಾಂಡ’ ಚಿತ್ರದಲ್ಲಿ ಪಾತ್ರಕ್ಕಾಗಿ ತಮ್ಮನ್ನು ಸಂಪರ್ಕಿಸಿರೋದಾಗಿ ತಿಳಿಸಿದ್ದಾರೆ. ಏಪ್ರಿಲ್‌ನಲ್ಲಿ ಶೂಟಿಂಗ್ ಅಂದಿದ್ದರು. ನನ್ನ ಭಾಗದ ಚಿತ್ರೀಕರಣ ಮೇನಲ್ಲಿ ಶುರುವಾಗಲಿದೆ ಎಂದು ನಟಿ ಮಾಹಿತಿ ನೀಡಿದ್ದಾರೆ. ‘ಉತ್ತರಕಾಂಡ’ ಚಿತ್ರದಲ್ಲಿ ಶಿವರಾಜ್‌ಕುಮಾರ್ ಅವರ ಪತ್ನಿಯ ಪಾತ್ರದಲ್ಲಿ ಭಾವನಾ ನಟಿಸಿಲಿದ್ದಾರೆ ಎನ್ನಲಾಗುತ್ತಿದೆ. 20 ದಿನಗಳ ಕಾಲ ಭಾವನ ಪಾತ್ರದ ಶೂಟಿಂಗ್ ನಡೆಯಲಿದೆ ಎನ್ನಲಾಗುತ್ತಿದೆ. ಶಿವಣ್ಣ ಮತ್ತು ಡಾಲಿ ನಟನೆಯ ಈ ಸಿನಿಮಾದ ಚಿತ್ರೀಕರಣ ಸದ್ಯ ಬಿಜಾಪುರದಲ್ಲಿ ಭರದಿಂದ ನಡೆಯುತ್ತಿದೆ.…

Read More

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ದಂಪತಿಗೆ ಸೇರಿದ ಸುಮಾರು 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಏ.18ರಂದು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ಆಸ್ತಿಯಲ್ಲಿ ಮುಂಬೈನ ಪ್ರತಿಷ್ಠಿತ ಜುಹುವಿನಲ್ಲಿರುವ ಅಪಾರ್ಟ್ ಮೆಂಟ್ ಕೂಡ ಸೇರಿದೆ. ಇಡಿ ದಾಳಿ ಬಳಿಕ ರಾಜ್ ಕುಂದ್ರಾ-ಶಿಲ್ಪಾ ಶೆಟ್ಟಿ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಿಮಗೆ ಅಗೌರವ ತೋರುತ್ತಿರುವಾಗಲೂ ಶಾಂತವಾಗಿ ಇರುವುದನ್ನು ಕಲಿಯುವುದು ಒಂದು ಬೇರೆ ರೀತಿಯ ಬೆಳವಣಿಗೆ ಎಂದು ರಾಜ್ ಕುಂದ್ರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇಡಿ ದಾಳಿ ಮಾಡಿದ ಬಳಿಕ ಅವರ ಕಡೆಯಿಂದ ಬಂದಿರುವ ಮೊದಲ ಪ್ರತಿಕ್ರಿಯೆ ಇದಾಗಿದೆ. ಸಾಯಿ ಬಾಬ ದೇವರ ಫೋಟೋ ಶೇರ್‌ ಮಾಡಿ ದೇವರಿಗೆ ಶರಣು ಎಂಬರ್ಥದಲ್ಲಿ ಶಿಲ್ಪಾ ಶೆಟ್ಟಿ ಪೋಸ್ಟ್‌ ಮಾಡಿದ್ದಾರೆ. 2022ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದಿ ಅಡಿ ಇಡಿ ಪ್ರಕರಣವನ್ನು ದಾಖಲಿಸಿದ್ದು, ಜಾರಿ ನಿರ್ದೇಶನಾಲಯವು 97.97 ಕೋಟಿ ರೂಪಾಯಿ ಮೊತ್ತದ ಸ್ಥಿರ ಹಾಗೂ ಚರಾಸ್ತಿಯನ್ನು…

Read More

ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಜಪಾನ್‌ಗೆ ಭೇಟಿ ನೀಡಿ ಬಂದಿದ್ದಾರೆ. ಜಪಾನ್ ನಲ್ಲಿ ನಡೆದ ಅನಿಮಿ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಲು ನಟಿ ತೆರಳಿದ್ದರು. ಈ ಹಿಂದೆ ಜಪಾನ್ ಗೆ ಭೇಟಿ ನೀಡಿದ್ದ ಫೋಟೋವನ್ನು ಹಂಚಿಕೊಂಡಿದ್ದ ನಟಿ ಇದೀಗ ಇದೀಗ ಜಪಾನ್ ಸುತ್ತಾಟ ಮತ್ತು ತುಂಟಾಟದ ವಿಡಿಯೋ ತುಣುಕನ್ನು ಶೇರ್ ಮಾಡಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿ ಜರ್ನಿ ಆರಂಭಿಸಿದ ನಟಿ ಬಳಿಕ ಟಾಲಿವುಡ್ ಹಾಗೂ ಬಾಲಿವುಡ್ ನಲ್ಲಿ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ರಶ್ಮಿಕಾ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತಿದೆ, ಕೈ ಹಾಕಿದ ಸಿನಿಮಾಗಳೆಲ್ಲಾ ಹಿಟ್ ಆಗುತ್ತಿವೆ. ಅದರಲ್ಲೂ ಪುಷ್ಪ ಹಾಗೂ ‘ಅನಿಮಲ್’ ಸಿನಿಮಾ ಬಂದ ಮೇಲಂತೂ ರಶ್ಮಿಕಾ ಖ್ಯಾತಿ ಮತ್ತಷ್ಟು ಹೆಚ್ಚಿದೆ. ಈ ಹಿಂದೆ ಜಪಾನ್‌ಗೆ ಹೋಗೋದು ನನ್ನ ಬಾಲ್ಯದ ಕನಸು ಎಂದು ನಟಿ ಹೇಳಿದ್ದರು. ಹಾಗಾಗಿ ಜಪಾನ್ ಸ್ಥಳದ ವಿಶೇಷ ವಿಡಿಯೋ ಹಂಚಿಕೊಂಡಿದ್ದಾರೆ. ಒಬ್ಬ ನಟಿ ಎಂಥ ಹೋಟೆಲ್‌ನಲ್ಲಿ ಇರುತ್ತಾರೆ. ಏನೇನು ತಿನ್ನುತ್ತಾರೆ. ಜನರ ಜೊತೆ ಹೇಗೆ ಬೆರೆಯುತ್ತಾರೆ.…

Read More

ಸೀತಾ ರಾಮ ಸಿನಿಮಾದ ಬಳಿಕ ನಟಿ ಮೃಣಾಲ್ ಠಾಕೂರ್ ಗೆ ಭೇಡಿಕೆ ಹೆಚ್ಚಾಗಿದೆ. ಮೃಣಾಲ್ ನಟಿಸುತ್ತಿರುವ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಹಿಟ್ ಆಗುತ್ತಿವೆ. ಈ ಮಧ್ಯೆ ಬಿಟೌನ್ ಖ್ಯಾತ ನಿರ್ದೇಶಕ ಕಮ್ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ಹೀರೋಯಿನ್ ಆಗಿ ಅದೃಷ್ಟ ಕುಲಾಯಿಸಿದೆ. ಬಾಲಿವುಡ್‌ನ ಖ್ಯಾತ ನಟ ಸಿದ್ಧಾಂತ್ ಚತುರ್ವೇದಿಗೆ ಮೃಣಾಲ್ ನಾಯಕಿಯಾಗಿದ್ದಾರೆ. ಮುಂದಿನ ವಾರದಿಂದ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ. ಸದ್ಯ ಸಿನಿಮಾ ವರ್ಕ್ಶಾಪ್‌ನಲ್ಲಿ ನಟಿ ಭಾಗಿಯಾಗುತ್ತಿದ್ದಾರೆ. ಪಾತ್ರದ ತಯಾರಿಯಲ್ಲಿ ಮೃಣಾಲ್ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಮೃಣಾಲ್‌ರನ್ನು ಆಫೀಸ್‌ಗೆ ಕರೆಸಿ ಕಥೆ ಬಗ್ಗೆ ಚರ್ಚೆಸಿದ್ದರು ಬನ್ಸಾಲಿ ಟೀಮ್. ಅಷ್ಟು ಸುಲಭವಾಗಿ ಯಾರಿಗೂ ಮಣೆ ಹಾಕದ ನಿರ್ದೇಶಕ ಸಂಜಯ್ ಈಗ ಮೃಣಾಲ್ ನಟನೆಯನ್ನು ಮೆಚ್ಚಿ ಮುಂದಿನ ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ. ಸಿನಿಮಾದಲ್ಲಿ ಉತ್ತಮ ಪಾತ್ರವನ್ನೇ ಮೃಣಾಲ್‌ಗೆ ನೀಡಿದ್ದಾರೆ. ಸೀತಾರಾಮಂ, ಹಾಯ್ ನಾನಾ, ಫ್ಯಾಮಿಲಿ ಸ್ಟಾರ್ ಚಿತ್ರದ ಸಕ್ಸಸ್ ಬಳಿಕ ಮೃಣಾಲ್ ಸ್ಟಾರ್ ನಿರ್ದೇಶಕನ ಜೊತೆ ಕೈ ಜೋಡಿಸಿದ್ದು ಈ ಭಾರಿಯೂ ಮತ್ತೊಂದು…

Read More

ದುಬೈನಲ್ಲಿ ಸುರಿಯುತ್ತಿರುವ ಭೀಕರ ಮಳೆ ಮುಂದುವರೆದಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುವವರೆಗೂ ಅನಿವಾರ್ಯವಲ್ಲದ ಪ್ರಯಾಣವನ್ನು ಮುಂದೂಡುವಂತೆ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಅಥವಾ ಅದರ ಮೂಲಕ ಹಾದು ಹೋಗುವ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯರಿಗೆ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆ ನೀಡಿದೆ. ದುಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಾರದ ದಾಖಲೆಯ ಮಳೆಯಿಂದ ಚೇತರಿಸಿಕೊಳ್ಳಲು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಯತ್ನಿಸುತ್ತಿದೆ. ಯುಎಇ ಅಧಿಕಾರಿಗಳು ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸಾಮಾನ್ಯ ಸ್ಥಿತಿಗೆ ತರಲು ಹಗಲಿರುಳು ಶ್ರಮಿಸುತ್ತಿದ್ದಾರೆ. ನಿಮಾನಗಳ ನಿರ್ಗಮನ ದಿನಾಂಕ ಮತ್ತು ಸಮಯದ ಕುರಿತು ಆಯಾ ವಿಮಾನಯಾನ ಸಂಸ್ಥೆಗಳಿಂದ ಅಂತಿಮ ದೃಢೀಕರಣದ ನಂತರವೇ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸಬೇಕು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಈ ವಾರದ ಆರಂಭದಲ್ಲಿ ಸುರಿದ ಭಾರೀ ಮಳೆಯಿಂದಾಗಿ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಒಳಬರುವ ವಿಮಾನಗಳ ಸಂಖ್ಯೆಯನ್ನು ತಾತ್ಕಾಲಿಕವಾಗಿ ಸೀಮಿತಗೊಳಿಸಿದೆ ಎಂದು…

Read More

ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾದ ನಿರ್ಮಾಪಕ ಉದಯ್ ಕೆ ಮೆಹ್ತಾ ಹಾಗೂ ನಿರ್ದೇಶಕ ಎ.ಪಿ ಅರ್ಜುನ್ ಮಧ್ಯೆ ಕಿರಿಕ್ ಆಗಿ, ಈ ಜಗಳ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೆಟ್ಟಿಲು ಏರಿದೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಹಬ್ಬಿರೋದು ಗಾಸಿಪ್ ಇದೀಗ ತಣ್ಣಗಾಗಿದೆ. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ ಎಂದು ಮೆಹ್ತಾ ಮತ್ತು ಅರ್ಜುನ್ ವಿಡಿಯೋವೊಂದರ ಮೂಲಕ ತಿಳಿಸಿದ್ದಾರೆ. ಧ್ರುವ ಸರ್ಜಾ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ಮಾರ್ಟಿನ್ ಚಿತ್ರಕ್ಕೆ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರದ ಬಿಡುಗಡೆಗಾಗಿ ಧ್ರುವ ಸರ್ಜಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಚಿತ್ರೀಕರಣದಲ್ಲೂ ಮಾರ್ಟಿನ್ ದಾಖಲೆ ಬರೆದಿದೆ. ಒಟ್ಟು 240 ದಿನಗಳ ಚಿತ್ರೀಕರಣ ನಡೆದಿದೆ. ಇನ್ನು ಚಿತ್ರದ ಆಡಿಯೋ ಹಕ್ಕನ್ನು ಅಧಿಕ ಮೊತ್ತ ನೀಡಿ  ಜನಪ್ರಿಯ ಆಡಿಯೋ ಸಂಸ್ಥೆಯಾದ ಸರೆಗಮಪ ಪಡೆದುಕೊಂಡಿದೆ. ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದ್ದು,  ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

Read More

ತಮಿಳು ನಟ ಸೂಪರ್​ಸ್ಟಾರ್ ರಜನಿಕಾಂತ್ ಲೋಕಸಭೆ ಚುನಾವಣೆ 2024 ರ ಮೊದಲನೇ ಹಂತದ ಮತದಾನದಲ್ಲಿ ತಮಿಳುನಾಡಿನ ಮತ ಚಲಾಯಿಸಿದರು. ಮತದಾನ ಮಾಡಲು ಬಂದ ವೇಳೆ ರಜನಿಯನ್ನು ಅಭಿಮಾನಿಗಳು ಮುತ್ತಿಕೊಂಡು ಸೆಲ್ಫಿಗೆ ಮುಗಿ ಬಿದ್ದಿದ್ದಾರೆ. ಇಂದು ಬೆಳಗ್ಗೆ ಚೆನ್ನೈನ ಸ್ಟೆಲ್ಲಾ ಮಾರಿಸ್ ಕಾಲೇಜಿನ ಮತಗಟ್ಟೆಯಲ್ಲಿ ಮತದಾನ ಮಾಡಲು ಬಂದ ನಟನನ್ನು ನೋಡಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ನಟನನ್ನು ಕಾಣುತ್ತಿದ್ದಂತೆ ಅಭಿಮಾನಿಗಳು ಸೆಲ್ಫಿಗೆ ಮುಗಿ ಬಿದ್ದಿದ್ದಾರೆ . ಟ್ವಿಟರ್​ನಲ್ಲಿ ಶೇರ್ ಮಾಡಲಾದ ವೀಡಿಯೊದಲ್ಲಿ, ರಜನಿಕಾಂತ್ ಮತದಾನ ಮಾಡಲು ತಮ್ಮ ಸರದಿಗಾಗಿ ಕಾಯುತ್ತಿರುವುದನ್ನು ಕಾಣಬಹುದು. ನಟ ಮತ ಚಲಾಯಿಸಿ ಬಂದ ನಂತರ ತನ್ನ ಶಾಯಿ ಗುರುತಿನ ಬೆರಳನ್ನು ತೋರಿಸಿದರು. ಹೊರಡುವಾಗ ಮಾಧ್ಯಮಗಳೊಂದಿಗೆ ಮಾತನಾಡಿದ ರಜನಿಕಾಂತ್ಎಲ್ಲರೂ ಮತ ಚಲಾಯಿಸುವಂತೆ ಮನವಿ ಮಾಡಿದರು. ಮತದಾನ ಮಾಡುವುದು ನಾಗರಿಕರ ಕರ್ತವ್ಯ, ಪ್ರತಿಯೊಬ್ಬರು ಮತದಾನ ಮಾಡಿ ಎಂದು ಮನವಿ ಮಾಡಿದರು.

Read More

ತಮಿಳು ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಅವರು ಕಿರುತೆರೆ ನಟಿ ಮಹಾಲಕ್ಷ್ಮಿಯನ್ನು ಮದುವೆಯಾದಾಗಿನಿಂದಲೂ ಸಖತ್ ಸುದ್ದಿಯಲ್ಲಿದ್ದಾರೆ. ಮಹಾಲಕ್ಷ್ಮೀ ಹಾಗೂ ರವೀಂದರ್ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಆಗಿದ್ದರು. ಆದರೆ ಇಬ್ಬರೂ ಜೊತೆಯಾಗಿ ಸಂಸಾರ ಮಾಡುತ್ತಿದ್ದು ನಾವು ಸೂಪರ್ ಜೋಡಿ ಎನ್ನುವುದನ್ನು ಪ್ರೂವ್ ಮಾಡುತ್ತಿದ್ದಾರೆ. ಆದರೆ ಈಗ ರವೀಂದ್ರ ಅವರ ಪೋಸ್ಟ್ ಪ್ರತಿಯೊಬ್ಬರಲ್ಲೂ ಕಳವಳ ಮೂಡಿಸಿದೆ. ವಂಚನೆ ಪ್ರಕರಣದಲ್ಲಿ ಒಮ್ಮೆ ಜೈಲಿಗೂ ಹೋಗಿ ಬಂದ ರವೀಂದ್ರ ಅವರು ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದರು. ಇದರ ಮಧ್ಯೆ ಅವರಿಗೆ ಆರೋಗ್ಯ ಸಮಸ್ಯೆಯೂ ಇದೆ ಎನ್ನಲಾಗಿತ್ತು. ಈ ಎಲ್ಲ ಬೆಳವಣಿಗೆಗೆಳ ಮಧ್ಯೆ ಅವರು ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್ ಈಗ ಎಲ್ಲಾ ಕಡೆಗಳಲ್ಲಿ ವೈರಲ್ ಆಗಿದೆ. ಕೆಟ್ಟ ಭಾವನೆ ಎನ್ನುವುದು ಒಂದು ಸಂದರ್ಭ. ಕೆಟ್ಟ ವಾತಾವರಣ ಎನ್ನುವುದು ಋಣಾತ್ಮಕ ಶಕ್ತಿ. ಕೆಟ್ಟ ದಿನ ಎನ್ನುವುದು ಪ್ರತಿ ದಿನವಲ್ಲ. ನನ್ನ ದಿನಗಳು ಹತ್ತಿರವಾಗುತ್ತಿವೆ. ಆದರೆ ನಾನು ಮಿಲಿಯನ್​ ಸಲ ಒಳ್ಳೆತನ, ಕೆಟ್ಟದರಿಂದ ಪರೀಕ್ಷಿಸಲ್ಪಡುತ್ತಿದ್ದೇನೆ ಎಂದು ರವೀಂದ್ರ ಅವರು ಇನ್​ಸ್ಟಾಗ್ರಾಮ್​​ನಲ್ಲಿ…

Read More

ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಹಾಗೂ ಭುವನ್ ದಂಪತಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಬೆಂಗಳೂರಿನ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ಕರಾಮಾ ಹೆಸರಿನ ರೆಸ್ಟೊರೆಂಟ್‌ ಬಳಿ ಹಲ್ಲೆ ನಡೆದಿದ್ದು ಈ ಬಗ್ಗೆ ಹರ್ಷಿಕಾ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ. ನಮಸ್ಕಾರ, ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ.  ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ  ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ  ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯ ವಾಗ ಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ. ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ…

Read More