ಬೆಟ್ಟಿಂಗ್ ಆಪ್ ಪ್ರಚಾರ ಮಾಡುತ್ತಿದ್ದ ತಾರೆಯರಿಗೆ ತೆಲಂಗಾಣ ಪೊಲೀಸರು ಬಿಸಿಮುಟ್ಟಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಬೆಟ್ಟಿಂಗ್ ಅಪ್ಲಿಕೇಷನ್ ಗಳನ್ನು ಪ್ರಮೋಷನ್ ಮಾಡುತ್ತಿದ್ದ 25 ಕ್ಕೂ ಹೆಚ್ಚು ನಟ ನಟಿಯರ ವಿರುದ್ಧ ಕೇಸ್ ದಾಖಲಾಗಿದೆ. ಬೆಟ್ಟಿಂಗ್ ಆಪ್ಗಳನ್ನು ಪ್ರಚಾರ ಮಾಡಿ ಯುವ ಜನತೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಫಣೀಂದ್ರ ಶರ್ಮಾ ಎಂಬುವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಹೈದರಾಬಾದ್ನ ಮಿಯಾಪುರ್ ಪೊಲೀಸರು ಟಾಲಿವುಡ್ ನಟರು ಮತ್ತು ಸೋಶಿಯಲ್ ಮೀಡಿಯಾ ಇನ್ಫ್ಲೂಯನ್ಸ್ರ್ಗಳ ಮೇಲೆ ಕೇಸ್ ದಾಖಲಿಸಿದ್ದಾರೆ. ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ಮಂಚು ಲಕ್ಷ್ಮಿ, ಪ್ರಣೀತಾ, ನಿಧಿ ಅಗರ್ವಾಲ್ , ಅನನ್ಯಾ, ಶ್ರೀಮುಖಿ, ಸಿರಿ ಹನುಮಂತು, ಶ್ಯಾಮಲಾ, ವರ್ಷಿಣಿ, ಶೋಭಾ, ನೇಹಾ, ಪಾಂಡು, ಪದ್ಮಾವತಿ, ಇಮ್ರಾನ್ ಖಾನ್, ವಿಷ್ಣು ಪ್ರಿಯಾ, ಹರ್ಷ ಸಾಯಿ, ಸನ್ನಿ ಯಾದವ್, ಟೇಸ್ಟಿ ತೇಜಾ ಮತ್ತು ರಿತು ಸೇರಿದಂತೆ ಹಲವರ ಮೇಲೆ ಎಫ್ಐಆರ್ ದಾಖಲಾಗಿದೆ. ಬೆಟ್ಟಿಂಗ್ ಆಪ್ ಪ್ರಚಾರಕ್ಕೆ ತೆಲಂಗಾಣ ಸರ್ಕಾರ ಈಗಾಗಲೇ…
Author: Author AIN
ಚಿತ್ರದುರ್ಗ: ಒಳಮೀಸಲಾತಿ ಕೂಡಲೇ ಜಾರಿ ಮಾಡುವಂತೆ ಮಾಜಿ ಸಚಿವ ಹೆಚ್. ಆಂಜನೇಯ ಆಗ್ರಹಿಸಿದ್ದಾರೆ. ಒಳಮೀಸಲಾತಿ ಜಾರಿ ಮಾಡಿ ಇಲ್ಲವೇ ಬೀದಿಗಿಳಿದು ಹೋರಾಟ ಮಾಡುವುದು ಎಚ್ಚರಿಕೆ ನೀಡಿದ್ದಾರೆ. https://ainlivenews.com/nelamangala-protest-demanding-implementation-of-internal-reservation/ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಳಂಬ ಮಾಡಿದರೆ ಸಹಿಸಲ್ಲ. ಬೀದಿಗಳಿದು ಹೋರಾಟ ಮಾಡುತ್ತೇವೆ. ಈಗಿರುವ ಎಂಪರಿಕಲ್ ಡಾಟಾ ನೋಡಿಒಳ ಮೀಸಲಾತಿ ಜಾರಿಗೊಳಿಸಿ. ನಂತರ ಮತ್ತೊಮ್ಮೆ ಸಮಾಜಿಕ ಶೈಕ್ಷಣಿಕ ಜಾತ ಗಣತಿ ಮಾಡಿರಿ. ಅನಾವಶ್ಯಕ ವಿಳಂಬ ಸಲ್ಲದು. ಕೆಲವರು ಒಳಮೀಸಲಾತಿ ವಿರುದ್ಧ ಮಾತಾಡುತ್ತಿದ್ದಾರೆ, ಅವರ ಮಾತನ್ನು ಸಿಎಂ ಕೇಳಬಾರದು. ಏ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲವೇ ಬೀದಿಗಿಳಿದು ಹೋರಾಟ ಮಾಡುವುದು ಖಚಿತ ಎಂದು ಸರ್ಕಾರ ಹಾಗೂ ಸಿಎಂಗೆ ಮನವಿ ಮೂಲಕ ಎಚ್ಚರಿಕೆ ನೀಡಿದರು.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೆ ಹನಿಟ್ರ್ಯಾಪ್ ಸದ್ದು ಮಾಡಿದೆ. ವಿಧಾನಸೌಧದ ಮೊಗಸಾಲೆಯಲ್ಲಿ ಹನಿಟ್ರ್ಯಾಪ್ ಕುರಿತು ಸಾಕಷ್ಟು ಚರ್ಚೆಯಾಗಿದೆ. ಹನಿಟ್ರ್ಯಾಪ್ ಗೆ ಬಲಿಯಾದವರು ಯಾರು ಅನ್ನೋ ಬಗ್ಗೆ ಕುತೂಹಲ ಶುರುವಾಗಿದೆ. ಅಧಿಕಾರಸ್ಥ ವ್ಯಕ್ತಿಯನ್ನು ಹನಿಟ್ರ್ಯಾಪ್ ಗೆ ಒಳಪಡಿಸಿದ ಶಕ್ತಿ ಎಂತಹುದು ಎನ್ನುವುದರ ಬಗ್ಗೆಯೂ ಚರ್ಚೆ ಶುರುವಾಗಿದೆ. https://ainlivenews.com/these-are-the-reasons-for-the-fights-that-happen-at-home-do-you-know-what-the-garuda-purana-says/ ಇನ್ನೂ ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅದನ್ನು ಮಾಧ್ಯಮಗಳಲ್ಲಿ ನೋಡಿದ್ದಷ್ಟೇ ಗೊತ್ತು, ಇದು ಬಹಳ ಸೂಕ್ಷ್ಮ ವಿಚಾರ, ಇಂಥ ವಿಷಯಗಳಲ್ಲಿ ತಾನು ಪೆದ್ದು, ಸರಿಯಾದ ಮಾಹಿತಿ ಇಲ್ಲದೆ ಸಚಿವರ ತೇಜೋವಧೆ ಮಾಡುವುದು ಸರಿಯಲ್ಲ. ಒಂದು ಪಕ್ಷ ಸುದ್ದಿ ನಿಜವೇ ಆಗಿದ್ದರೆ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ, ನಾಯಕನಾದವನಿಗೆ ಬಾಯಿ ಮತ್ತು ಕಚ್ಚೆ ಭದ್ರವಾಗಿರಬೇಕೆಂದು ಹಿರಿಯ ರಾಜಕಾರಣಿಗಳು ಹೇಳಿದ್ದು ನೆನಪಾಗುತ್ತಿದೆ ಎಂದು ಶಾಸಕ ಹೇಳಿದರು.
ಕೋಲಾರ : ದಾಯಾದಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಕಂಡಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಪಡವನಹಳ್ಳಿಯಲ್ಲಿ ಘಟನೆ ನಡೆದಿದೆ. ಮುನಿರಾಜು (35) ಕೊಲೆಯಾದ ವ್ಯಕ್ತಿ. ಬೋರ್ ವೆಲ್ ಲಾರಿ ಹಾಗು ಮೆಣಸಿನ ಗಿಡ ಹಾಳು ಮಾಡಿದ್ದಾರೆಂದು ಅಣ್ಣತಮ್ಮಂದಿರ ನಡುವೆ ಜಗಳ ನಡೆದಿದೆ. ಮಧ್ಯ ರಾತ್ರಿ 12 ಗಂಟೆ ಸುಮಾರಿಗೆ ದಾಯಾದಿಗಳ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಮುನಿರಾಜು ಎಂಬುವರ ಹತ್ಯೆಯಾಗಿದೆ. https://ainlivenews.com/fraudsters-who-were-doubling-money-caught-during-police-checks/ ಅಣ್ಣಯ್ಯಪ್ಪ, ವೀರಸ್ವಾಮಿ, ಸೋಮಶೇಖರ್, ಕಾಂತರಾಜು, ಭರತ್, ವೆಂಕಟೇಶ್, ಭಾಗ್ಯಮ್ಮ ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಮಾಲೂರು ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸ್ತಿದ್ದಾರೆ. ಘಟನಾ ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಾಲೂರು ಠಾಣಾ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.
ಚಾಮರಾಜನಗರ : ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆಗೆ ಹೋಗುತ್ತಿದ್ದ ವಂಚಕರು ಪೊಲೀಸರು ಕೈಗೆ ಸಿಕ್ಕಿ ಬಿದಿದ್ದಾರೆ. ಖೋಟಾ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಓರ್ವನನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿದ್ದು ಮತ್ತಿಬ್ಬರು ತಲೆಮರೆಸಿಕೊಂಡಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ ಶೇಖರ್ ಬಂಧಿತ ಆರೋಪಿಯಾಗಿದ್ದಾನೆ. ಏನಿದು ಘಟನೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಆನೆ ತಲೆ ದಿಂಬದ ಬಳಿ ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದಾಗ, ಪೊಲೀಸರ ವಾಹನ ಕಂಡು ಕಾರಿನ ಚಾಲಕ ಕಾರು ನಿಲ್ಲಿಸಿ ಪರಾರಿಯಾಗಿದ್ದಾನೆ. ಅನುಮಾನಗೊಂಡ ಪೊಲೀಸರು ಕಾರು ಸುತ್ತುವರಿದು ಕಾರಿನಲ್ಲಿದ್ದ ಶೇಖರ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪರಿಶೀಲನೆ ವೇಳೆ ಕಾರಿನ ಒಳಗೆ ಒಂದು ಬ್ಯಾಗಿನಲ್ಲಿ 500 ನೋಟುಗಳಿಗೆ ಹೋಲುವ ಕಪ್ಪು ಬಣ್ಣದ 370 ಬಂಡಲ್ ಪೇಪರ್ ಕಟ್ಟುಗಳಿದ್ದು, ಒಂದು ಬಂಡಲ್ ನಲ್ಲಿ 100 ಹಾಳೆಗಳು, ಎರಡು ಖಾಲಿ ಬ್ಯಾಗ್, ನೋಟುಗಳು ಎಣಿಸುವ ಮಿಷನ್ ಪತ್ತೆಯಾಗಿದೆ. ಬಂಧಿತ ಆರೋಪಿಯಿಂದ 500 ರೂ…
2025 ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ಹಣದ ಮಳೆ ಸುರಿಸಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ತಂಡಕ್ಕೆ ಬಿಸಿಸಿಐ 58 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿತು. ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ ಮತ್ತು ಆಯ್ಕೆ ಸಮಿತಿ ಸದಸ್ಯರಿಗೆ ಬಹುಮಾನದ ಹಣವನ್ನು ಮಂಡಳಿ ಘೋಷಿಸಿದೆ. https://ainlivenews.com/these-are-the-reasons-for-the-fights-that-happen-at-home-do-you-know-what-the-garuda-purana-says/ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಟೂರ್ನಿಯಲ್ಲಿ ಪ್ರಾಬಲ್ಯ ಸಾಧಿಸಿತು. ಪಂದ್ಯಾವಳಿಯ ಉದ್ದಕ್ಕೂ ಅದು ಅಜೇಯವಾಗಿ ಉಳಿಯಿತು. ಬಾಂಗ್ಲಾದೇಶ ವಿರುದ್ಧ ಆರು ವಿಕೆಟ್ಗಳ ಭರ್ಜರಿ ಗೆಲುವಿನೊಂದಿಗೆ ಭಾರತ ತಂಡ ತನ್ನ ಅಭಿಯಾನ ಆರಂಭಿಸಿತು. ನಂತರ ಪಾಕಿಸ್ತಾನದ ವಿರುದ್ಧ 6 ವಿಕೆಟ್ಗಳ ಅದ್ಭುತ ಜಯ ಸಾಧಿಸಿತು. ನಂತರ ಅವರು ನ್ಯೂಜಿಲೆಂಡ್ ವಿರುದ್ಧದ ಅಂತಿಮ ಗುಂಪು ಪಂದ್ಯವನ್ನು 44 ರನ್ಗಳಿಂದ ಗೆಲ್ಲುವ ಮೂಲಕ ತಮ್ಮ ಆವೇಗವನ್ನು ಮುಂದುವರೆಸಿದರು. ಅವರು ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾವನ್ನು ನಾಲ್ಕು ವಿಕೆಟ್ಗಳಿಂದ ಸೋಲಿಸಿದರು. ನಂತರ, ಮಾರ್ಚ್ 9 ರಂದು ದುಬೈನಲ್ಲಿ ನಡೆದ ಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವನ್ನು ನಾಲ್ಕು…
ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಸದಾ ಸಿನಿಮಾ ಮತ್ತು ಸಾಮಾಜಿಕ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ಬಹಳ ವರ್ಷಗಳಿಂದ ಇಂಡಸ್ಟ್ರೀಯ ಆಳ ಅಗಲ ಅರಿತಿರುವ ಕೊಡಗಿನ ಮಗಳು ಈಗ ನಿರ್ದೇಶಕಿಯಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಚೊಚ್ಚಲ ನಿರ್ದೇಶನದಲ್ಲಿಯೇ ಹರ್ಷಿಕಾ ನೈಜ ಘಟನೆಯನ್ನು ಹೇಳೋದಿಕ್ಕೆ ಹೊರಟಿದ್ದಾರೆ. ಆ ಚಿತ್ರದ ಹೆಸ್ರು ʼಚಿ.ಸೌಜನ್ಯʼ. ಈ ಕ್ರೈಂ ಥ್ರಿಲ್ಲರ್ ಸಿನಿಮಾ ʼಚಿ.ಸೌಜನ್ಯʼ ಚಿತ್ರಕ್ಕೆ ಹರ್ಷಿಕಾ ಅವರ ಪತಿ ಭುವನ್ ಪೊನ್ನಣ್ಣ ಅವರ ಭುವನಂ ಎಂಟರ್ ಟೈನ್ಮೆಂಟ್ ಹಾಗೂ ಮಧು ಕಂಸಾಳೆ ಫಿಲಂಸ್ ಬ್ಯಾನರ್ ಹಾಗು ಗಣೇಶ್ ಮಹಾದೇವ್ ಅವರ ನೇತೃತ್ವದಲ್ಲಿ ನಿರ್ಮಾಣವಾಗುತ್ತಿದೆ. ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಬಹುಭಾಷಾ ನಟ ಕಿಶೋರ್ ಅವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಸಿನಿಮಾಗೆ ಇಬ್ಬರು ನಾಯಕಿಯರು. ಸದ್ಯ ನಾಯಕಿಯರ ಹುಡಗಾಟದಲ್ಲಿದೆ ಚಿತ್ರತಂಡ ಉಗ್ರಂ ಮಂಜು, ಕಾಕ್ರೊಚ್ ಸುಧಿ ಖಳನಾಯಕರಾಗಿ ನಟಿಸುತ್ತಿದ್ದು, ಸದ್ಯ ಸ್ಕ್ರಿಪ್ಟ್ ಕೆಲಸ ಮುಗಿಸಿಕೊಳ್ಳುತ್ತಿರುವ ತಂಡ ಮುಂದಿನ ತಿಂಗಳು ಶೂಟಿಂಗ್ ತಯಾರಿ ಮಾಡಿಕೊಳ್ಳುತ್ತಿದೆ. ಧೈಯದಿಂದ ಒಂದು ಹೆಣ್ಣು ಇಂತಾ…
ನೆಲಮಂಗಲ: ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ನೆಲಮಂಗಲ ನಗರದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿ, ಆಹಾರ ಸಚಿವ ಸೇರಿದಂತೆ ಸಚಿವರ ಭಾವಚಿತ್ರ ಹಾಕಿಕೊಂಡುಒಳ ಮೀಸಲಾತಿ ಜಾರಿ ಮಾಡಿ ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದು ಆಗ್ರಹಿಸಿದ್ದಾರೆ. ನೆಲಮಂಗಲ ನಗರದಿಂದ ಬೆಂಗಳೂರಿನ ಫ್ರೀಡಂ ಪಾಕ್೯ ವರೆಗೆ ಜಾತಾ ಹಮ್ಮಿಗೊಂಡಿದ್ದು, ನಾಳೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲಿದ್ದಾರೆ. https://ainlivenews.com/these-are-the-reasons-for-the-fights-that-happen-at-home-do-you-know-what-the-garuda-purana-says/ ಕೂಡಲೇ ಸಚಿವ ಕೆ.ಎಚ್.ಮುನಿಯಪ್ಪ ಸಮುದಾಯದ ಕ್ಷಮೆ ಕೇಳಬೇಕು. ಸರ್ಕಾರದ ಒಳ ಮೀಸಲಾತಿಯನ್ನ ಕೂಡಲೇ ಜಾರಿಗೆ ತರಬೇಕು ಸಮುದಾಯದ ಮಕ್ಕಳ ಅಭಿವೃದ್ಧಿ ಜಾರಿ ಮಾಡಬೇಕುಎಂದು ವಿಭಿನ್ನ ರೀತಿಯಲ್ಲಿ ನೆಲಮಂಗಲ ದಿಂದ ಬೆಂಗಳೂರು ಕಡೆ ಪಾದಯಾತ್ರೆ ಮಾಡಿದ್ದಾರೆ.
ಬಾಗಲಕೋಟೆ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಹಾಗೂ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕನ್ನು ಬೆಸುಗೆ ಮಾಡುವಲ್ಲಿ ಮಹತ್ತರ ಯೋಜನೆ ಮಹಿಷವಾಡ ಸೇತುವೆ. ರಬಕವಿ-ಬನಹಟ್ಟಿ ಜಾಕವೆಲ್ನ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಮಹಿಷವಾಡಗಿ ಸೇತುವೆ ಕಾಮಗಾರಿ ಪ್ರಾರಂಭವಾಗಿ ಬರೋಬ್ಬರಿ 7 ವರ್ಷಗಳೇ ಗತಿಸಿದೆ. ಇದರ ಮಧ್ಯ ಮೂರಾಲ್ಕು ಬಾರಿ ಕಾಮಗಾರಿ ಸ್ಥಗಿತಗೊಂಡು ಇದೀಗ ಬೇಸಿಗೆ ಬಂದಾಗ ಮಾತ್ರ ಒಂದೆರಡು ತಿಂಗಳು ಕೆಲಸ ಪ್ರಾರಂಭವಾಗಿ ಮತ್ತೇ ನೇಪಥ್ಯಕ್ಕೆ ಸರಿಯುವ ಕಾರ್ಯ ಸಾಮಾನ್ಯವಾಗಿದೆ. 2018 ರಲ್ಲಿ ಅಂದಿನ ಸಚಿವೆ ಉಮಾಶ್ರೀಯವರು 30 ಕೋಟಿ ರೂ.ಗಳಷ್ಟು ಟೆಂಡರ್ ಕಾಮಗಾರಿ ಮೂಲಕ ನಾಗಾರ್ಜುನ ಕನಸ್ಪನ್ಸ್ ಕಂಪನಿಗೆ ನೀಡಿತ್ತು. ಇದಕ್ಕೆ ಪೂರಕವಾಗಿ 2021 ರಲ್ಲಿ ಕಾಮಗಾರಿಗೆ ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ಹಾಲಿ ಶಾಸಕ ಸಿದ್ದು ಸವದಿಯವರು ಸೇತುವೆ ವಿಸ್ತರಣೆ ಹೆಚ್ಚಿಸಲು ಟೆಂಡರ್ ಕಾಮಗಾರಿಯನ್ನು 40 ಕೋಟಿ ರೂ.ಗಳವರೆಗೆ ಹೆಚ್ಚಳಗೊಳಿಸುವ ಮೂಲಕ ಕಾಮಗಾರಿ ಮತ್ತಷ್ಟು ವೇಗ ಹಾಗು ವಿಸ್ತರಣೆಯಾಗಲೆಂದು ಸರ್ಕಾರದಿಂದ ಅನುಮೋದನೆ ಮಾಡಿಸಿದರು. ಆದರೆ…
ಕಾಲಿವುಡ್ನ ಪ್ರಮುಖ ನಟರಾಗಿರುವ ಧನುಷ್ ಇತ್ತೀಚೆಗೆ ನೀಲವುಕ್ಕು ಎನ್ ಮೆಲ್ ಏನದಿ ಕೊಬಮ್ ಚಿತ್ರವನ್ನು ನಿರ್ದೇಶಿಸಿದರು. ಅಂದಿನಿಂದ ಅವರು ಹಲವು ಚಿತ್ರಗಳಲ್ಲಿ ನಟಿಸುವುದರಲ್ಲಿ ನಿರತರಾಗಿದ್ದಾರೆ. ತಮಿಳು, ಹಿಂದಿ ಸೇರಿದಂತೆ ಭಾಷೆಗಳ ಚಿತ್ರಗಳಲ್ಲಿ ನಟಿಸುತ್ತಿರುವ ಧನುಷ್, ಯುವ ನಿರ್ದೇಶಕರೊಬ್ಬರ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ವರದಿಯಾಗಿದೆ. https://ainlivenews.com/these-are-the-reasons-for-the-fights-that-happen-at-home-do-you-know-what-the-garuda-purana-says/ ಈ ಚಿತ್ರದಲ್ಲಿ ಧನುಷ್ ಎದುರು ಮಮಿತಾ ಬೈಜು ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಧನುಷ್ ಗಿಂತ 18 ವರ್ಷ ಚಿಕ್ಕವರು. ಬೋರ್ ಅಗ್ನಿ ಚಿತ್ರವನ್ನು ನಿರ್ದೇಶಿಸಿದ್ದ ವಿಘ್ನೇಶ್ ರಾಜ, ಧನುಷ್ ಅವರ ಹೊಸ ಚಿತ್ರವನ್ನು ನಿರ್ದೇಶಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಯುವಕರಲ್ಲಿ ಟ್ರೆಂಡಿಂಗ್ ಆಗಿರುವ ನಾಯಕಿ ಇವರು. ಪ್ರೇಮಲು ಚಿತ್ರದ ಮೂಲಕ ಜನರಲ್ಲಿ ಜನಪ್ರಿಯರಾದ ಅವರು ಈಗ ತಮಿಳಿನಲ್ಲೂ ಎಂಟ್ರಿ ಕೊಟ್ಟಿದ್ದಾರೆ. ಅವರು ವಿಜಯ್ ಜೊತೆ ಜನ ನಾಯಗನ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅದಕ್ಕೂ ಮೊದಲು ಅವರು ಪೆನ್ಸಿಲ್ ಚಿತ್ರದಲ್ಲಿ ನಟಿಸಿದ್ದರು. ಧನುಷ್ ಜೊತೆಗೆ ಮಮಿತಾ ನಟಿಸುತ್ತಿರುವ ಸುದ್ದಿ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಆದರೆ, ಈ…