ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿಯ ಲೋಕಸಭಾ ಅಭ್ಯರ್ಥಿ, ಬಾಲಿವುಡ್ ನಟಿ ಕಂಗನಾ ರಣಾವತ್ ಈ ಹಿಂದೆ ನನಗೆ ಗೋಮಾಂಸ ಇಷ್ಟ ಅಂದಿದ್ದರು ಎಂದು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ರ್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ತಾನು ಗೋಮಾಂಸವನ್ನು ಇಷ್ಟಪಡುತ್ತೇನೆ ಮತ್ತು ತಿನ್ನುತ್ತೇನೆ ಎಂದು ಎಕ್ಸ್ನಲ್ಲಿ ಬರೆದಿದ್ದ ರಣಾವತ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಆರೋಪಿಸಿದರು. ವಡೆತ್ತಿವಾರ್ ಹೇಳಿಕೆಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ಪ್ರತಿಕ್ರಿಯಿಸಿದ್ದು, ಇದು ಕಾಂಗ್ರೆಸ್ನ ಕೊಳಕು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಅದು ಸಮಸ್ಯೆಗಳ ಬಗ್ಗೆ ನಮ್ಮ ವಿರುದ್ಧ ಹೋರಾಡಲು ಸಾಧ್ಯವಿಲ್ಲ. ಇದು ಪಕ್ಷದ ಸೋಲಿನ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು. ಬಿಜೆಪಿ ನಾಯಕಿ ಶೈನಾ ಎನ್ಸಿ ಅವರು ಕಾಂಗ್ರೆಸ್ ಅನ್ನು “ಮಹಿಳಾ ವಿರೋಧಿ” ಎಂದು ಆರೋಪಿಸಿದರು. ಅಲ್ಲದೇ ಜೂನ್ 4 ರಂದು ಭಾರತದ ಮಹಿಳೆಯರು ಕಾಂಗ್ರೆಸ್ ಎಂಬ ಮಹಿಳಾ ವಿರೋಧಿ ಪಕ್ಷದ ವಿರುದ್ಧ ಮಾತನಾಡುತ್ತಾರೆ ಮತ್ತು ಮತ ಚಲಾಯಿಸಿದಾಗ ಅದಕ್ಕೆ ತಕ್ಕ…
Author: Author AIN
ಈ ವರ್ಷದ ಮೊದಲ ಸೂರ್ಯಗ್ರಹಣವು ನಾಳೆ ಅದರೆ ಏ.8ರಂದು ಸಂಭವಿಸಲಿದೆ. ವೈಜ್ಞಾನಿಕ ದೃಷ್ಟಿಕೋನದಿಂದ, ಸೂರ್ಯಗ್ರಹಣವು ಕೇವಲ ಖಗೋಳ ಘಟನೆಯಾಗಿದೆ, ಆದರೆ ಧಾರ್ಮಿಕ ದೃಷ್ಟಿಕೋನದಿಂದ ಇದನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ವರ್ಷದ ಮೊದಲ ಚಂದ್ರ ಗ್ರಹಣವು ಮಾರ್ಚ್ 25 ರಂದು ಗೋಚರಿಸಿತು, ಇದು ಭಾರತದಲ್ಲಿ ಗೋಚರಿಸಲಿಲ್ಲ. ವಿಶೇಷವೆಂದರೆ ಎರಡೂ ಗ್ರಹಣ ದಿನಗಳು ಒಂದೇ ಆಗಿರುತ್ತವೆ. ಅಂದರೆ, ಮೊದಲ ಚಂದ್ರ ಮತ್ತು ಸೂರ್ಯ ಗ್ರಹಣ ಸೋಮವಾರ ಸಂಭವಿಸಲಿದೆ. ಇದು ವರ್ಷದ ಮೊದಲ ಸಂಪೂರ್ಣ ಸೂರ್ಯಗ್ರಹಣವಾಗಿದೆ. ಸರಿಯಾಗಿ 54 ವರ್ಷಗಳ ಹಿಂದೆ, 1970 ರಲ್ಲಿ, ಅಂತಹ ಸೂರ್ಯಗ್ರಹಣ ಸಂಭವಿಸಿತು. ಏಪ್ರಿಲ್ 8 ರಂದು ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಆದರೆ ಇದು ಭಾರತದಲ್ಲಿ ಕಾಣುವುದಿಲ್ಲ. ಆದ್ದರಿಂದ, ಇದು ಧಾರ್ಮಿಕ ಮಹತ್ವವನ್ನು ಹೊಂದಿರುವುದಿಲ್ಲ. ಸೂರ್ಯಗ್ರಹಣವು ಉತ್ತರ ಅಮೆರಿಕ ಮತ್ತು ದಕ್ಷಿಣ ಅಮೆರಿಕಾದಲ್ಲಿ ಮಾತ್ರ ಗೋಚರಿಸುತ್ತದೆ. ರಾತ್ರಿ 9.12ಕ್ಕೆ ಸೂರ್ಯಗ್ರಹಣ ಆರಂಭವಾಗಲಿದೆ. ಸೂರ್ಯಗ್ರಹಣವು 10:10 ನಿಮಿಷಗಳಿಗೆ ಪ್ರಾರಂಭವಾಗುತ್ತದೆ. ಸೂರ್ಯಗ್ರಹಣದ ಮಧ್ಯವು ರಾತ್ರಿ 11:47 ಕ್ಕೆ ಇರುತ್ತದೆ. ಖಾಗ್ರಾಸ್ ಮುಂಜಾನೆ 1:25 ಕ್ಕೆ…
ಅಫ್ಘಾನಿಸ್ತಾನದಲ್ಲಿ ಇಂದು ಮುಂಜಾನೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭಾರತೀಯ ಕಾಲಮಾನ ಮುಂಜಾನೆ 2.26 ರ ಸುಮಾರಿಗೆ 120 ಕಿಲೋಮೀಟರ್ ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತ್ರೀವ್ರತೆಯ ಭೂಕಂಪ ಸಂಭವಿಸಿದೆ. ಮುಂಜಾನೆ 2.47 ರ ಸುಮಾರಿಗೆ, ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಪ್ರದೇಶದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ. ಕೆಲವು ದಿನಗಳ ಹಿಂದೆ ಮಾರ್ಚ್ 28 ರಂದು ಅಫ್ಘಾನಿಸ್ತಾನದಲ್ಲಿ ಇದೇ ರೀತಿಯ ಮತ್ತೊಂದು ಭೂಕಂಪ ಸಂಭವಿಸಿತ್ತು. ಭಾರತೀಯ ಕಾಲಮಾನ ಬೆಳಿಗ್ಗೆ 5.44 ರ ಸುಮಾರಿಗೆ 4.2 ತೀವ್ರತೆಯ ಭೂಕಂಪ ಸಂಭವಿಸಿದೆ. ಇದಕ್ಕೂ ಮುನ್ನ ಜನವರಿಯಲ್ಲಿ ಅಫ್ಘಾನಿಸ್ತಾನದ ಬಳಿ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು ಮತ್ತು ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡುಕ ಉಂಟಾಗಿತ್ತು.
ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಟ ಲೂಸ್ ಮಾದ ಖ್ಯಾತಿಯ ಯೋಗಿ ಇದೀಗ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅರುಣ್ ವಿಜಯ್ ನಾಯಕನಾಗಿ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ಯೋಗಿ ಪ್ರಮುಖ ಪಾತ್ರವೊಂದನ್ನು ಮಾಡಲಿದ್ದಾರೆ. ಈ ಚಿತ್ರವನ್ನು ತಿರುಕುಮಾರನ್ ನಿರ್ದೇಶನ ಮಾಡುತ್ತಿದ್ದಾರೆ. ನಟ ಯೋಗಿ ತಮ್ಮ 50ನೇ ಚಿತ್ರದ ಮೂಲಕ ಸದ್ದು ಮಾಡುತ್ತಿದ್ದಾರೆ. ‘ರೋಸಿ’ ಸಿನಿಮಾದಲ್ಲಿ ಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಶ್ರೀನಗರ ಕಿಟ್ಟಿ ಬೆನ್ನಲ್ಲೇ ಇದೀಗ ಒರಟ ಪ್ರಶಾಂತ್ ಕೂಡ ‘ರೋಸಿ’ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ‘ರೋಸಿ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಪ್ರಶಾಂತ್ ಕಾಣಿಸಿಕೊಂಡಿದ್ದಾರೆ. ಒರಟ ಪ್ರಶಾಂತ್ ಮಾಡುತ್ತಿರುವ ಪಾತ್ರದ ಹೆಸರು ಸ್ವಾಮಿ ಅಣ್ಣ ಎಂದು. ಚಿತ್ರತಂಡ ಒರಟ ಪ್ರಶಾಂತ್ ಅವರ ಪಾತ್ರವನ್ನು ಪೋಸ್ಟರ್ ಮೂಲಕ ಪರಿಚಯಿಸಿದ್ದಾರೆ. ಇದರಲ್ಲಿ ಖಡಕ್ & ಮಾಸ್ ಪಾತ್ರದ ಮೂಲಕ ಅವರು ಗಮನ ಸೆಳೆದಿದ್ದಾರೆ. ಈ ಸಿನಿಮಾ ಬಗ್ಗೆ ಇರುವ ನಿರೀಕ್ಷೆ ಈಗ ಹೆಚ್ಚಾಗಿದೆ. ಒರಟನ ನಯಾ ಅವತಾರ ಫ್ಯಾನ್ಸ್ಗೆ ಖುಷಿ ಕೊಟ್ಟಿದೆ. ಶೂನ್ಯ ನಿರ್ದೇಶನದಲ್ಲಿ ‘ರೋಸಿ’ ಚಿತ್ರ…
ಅಕ್ರಮವಾಗಿ ಮಗುವನ್ನು ಮನೆಯಲ್ಲಿ ಇಟ್ಟುಕೊಂಡು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಪರಪ್ಪನ ಅಗ್ರಹಾರ ಜೈಲಿನಿಂದ ಶನಿವಾರ ರಾತ್ರಿ ಬಿಡುಗಡೆ ಆಗಿದ್ದಾರೆ. ಕಾನೂನುಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಜೈಲು ಸೇರಿದ್ದ ಸೋನು ಶ್ರೀನಿವಾಸ್ ಗೌಡ ಇದೀಗ 11 ದಿನಗಳ ಬಳಿಕ ರಿಲೀಸ್ ಆಗಿದ್ದಾರೆ. ಬಿಡುಗಡೆ ಬಳಿಕ ಅಕ್ಕನ ಜೊತೆ ಮನೆಗೆ ತೆರಳಿದ್ದಾರೆ. ಮೂರು ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್ನಿಂದ ಜಾಮೀನು ಮಂಜೂರಾಗಿತ್ತು. ಇಬ್ಬರ ಶ್ಯೂರಿಟಿ ಜೊತೆಗೆ 1 ಲಕ್ಷ ಬಾಂಡ್ ಷರತ್ತನ್ನು ನ್ಯಾಯಾಧೀಶರು ವಿಧಿಸಿದ್ದರು. ಜಾಮೀನು ಅರ್ಜಿಯ ಷರತ್ತುಗಳನ್ನ ಪೂರೈಸಿದ ಹಿನ್ನೆಲೆ ಶನಿವಾರ ರಾತ್ರಿ 8:10 ರ ಸುಮಾರಿಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಭೂಗತ ನೀರಿನ ಮೂಲವು ನೀರಿನ ಮೇಲ್ಮೈಗಿಂತ 700 ಕಿ.ಮೀ ಆಳದಲ್ಲಿದ್ದು ಅಮೆರಿಕದ ಇಲಿನಾಯ್ಸ್ ರಾಜ್ಯದ ನಾರ್ಥ್ವೆಸ್ಟರ್ನ್ ವಿವಿಯ ವಿಜ್ಞಾನಿಗಳು ಈ ಗಮನಾರ್ಹ ಆವಿಷ್ಕಾರವನ್ನು ಕಂಡು ಹಿಡಿದಿದ್ದಾರೆ. ಭೂಮಿಯ ನೀರಿನ ಮೂಲವನ್ನು ಪತ್ತೆಹಚ್ಚಲು ನಡೆಸಿದ ಸಂಶೋಧನೆಯಲ್ಲಿ ಭೂಮಿಯ ಹೊದಿಕೆಗೊಳಗೆ ಆಳದಲ್ಲಿ ಒಂದು ಬೃಹತ್ ಸಾಗರ ಅಡಗಿರುವುದು ಬೆಳಕಿಗೆ ಬಂದಿದೆ. ರಿಂಗ್ವುಡೈಟ್ ಎಂದು ಕರೆಯಲ್ಪಡುವ ನೀಲಿಬಣ್ಣದ ಬಂಡೆಯೊಳಗೆ ಹುದುಗಿಕೊಂಡಿರುವ ಈ ಗುಪ್ತ ಸಾಗರ ಇದೀಗ ವಿಜ್ಞಾನಿಗಳ ಕಣ್ಣಿಗೆ ಬಿದ್ದಿದೆ. ಈ ಗುಪ್ತಸಾಗರದ ಪ್ರಮಾಣವು ಭೂಮಿಯ ಜಲಚಕ್ರದ ಮರು ಮೌಲ್ಯಮಾಪನಕ್ಕೆ ಪ್ರೇರಣೆಯಾಗಿದ್ದು ಧೂಮಕೇತುವಿನ ಪ್ರಭಾವಗಳನ್ನು ಪ್ರತಿಪಾದಿಸುವ ಸಿದ್ಧಾಂತಕ್ಕೆ ವಿರುದ್ಧವಾಗಿದೆ. `ಇದು ಭೂಮಿಯ ನೀರು ಆಂತರಿಕವಾಗಿ ಹುಟ್ಟಿಕೊಂಡಿದೆ ಎಂಬ ಕಲ್ಪನೆಯನ್ನು ಬೆಂಬಲಿಸುವ ಗಮನಾರ್ಹ ಪುರಾವೆಯಾಗಿದೆ. ಜಲಾಶಯ ಇಲ್ಲದಿದ್ದರೆ ಮತ್ತು ಈ ಎಲ್ಲಾ ನೀರು ಮೇಲ್ಮೈಗೆ ಬಂದರೆ ಆಗ ಗೋಚರಿಸುವ ಏಕೈಕ ಭೂಮಿ ಪರ್ವತಗಳ ಶಿಖರಗಳಾಗಿರಬಹುದು’ ಎಂದು ಸಂಶೋಧನಾ ಕಾರ್ಯದ ನೇತೃತ್ವ ವಹಿಸಿದ್ದ ನಾರ್ಥ್ವೆಸ್ಟರ್ನ್ ವಿವಿಯ ಸಂಶೋಧಕ ಸ್ಟೀವನ್ ಜಾಕೊಬ್ಸನ್ ಪ್ರತಿಪಾದಿಸಿದ್ದಾರೆ. ತಮ್ಮ ಅಧ್ಯಯನದಲ್ಲಿ ಸಂಶೋಧಕರು ಅಮೆರಿಕದಾದ್ಯಂತ 2000…
ಕಾಟೇರ ಸಿನಿಮಾ ಮೂಲಕ ದರ್ಶನ್ ತೂಗ್ ದೀಪ್ ಜೊತೆ ಸ್ಯಾಂಡಲ್ ವುಡ್ ಗೆ ಭರ್ಜರಿ ಎಂಟ್ರಿ ಕೊಟ್ಟ ನಟಿ ಆರಾಧನಾ ರಾಮ್ ಇದೀಗ ಹೊಸ ಫೋಟೋ ಶೂಟ್ ಮೂಲಕ ಮಿಂಚಿದ್ದಾರೆ. ಕನ್ನಡ ಚಿತ್ರರಂಗ ನಿರ್ಮಾಪಕ ರಾಮ್ ಹಾಗೂ ನಟಿ ಮಾಲಾಶ್ರೀ ಮಗಳು ಆರಾಧನಾ ಮೊದಲ ಸಿನಿಮಾ ಮೂಲಕವೇ ಕನ್ನಡದ ಭರವಸೆಯ ನಟಿಯಾಗಿ ಹೊರಹೊಮ್ಮಿದ್ದಾರೆ. ಅದರ ಜೊತೆಗೆ ತಮ್ಮ ಸ್ಟೈಲ್ ನಿಂದಾಗಿ ಕೂಡ ಸದಾ ಸುದ್ದಿಯಲ್ಲಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ಆರಾಧನಾ ರಾಮ್ ಇದೀಗ ಜಿನ್ಸ್ ಪ್ಯಾಂಟ್ ಹಾಗೂ ಕ್ರಾಫ್ ಟಾಪ್ ತೊಟ್ಟು ನಯಾ ಫೋಟೋ ಶೂಟ್ ಮಾಡಿಸಿದ್ದಾರೆ. ಕಾಟೇರ ಸಿನಿಮಾದ ಬಳಿಕ ಆರಾಧನಾ ನಟನೆಯ ಯಾವುದೇ ಹೊಸ ಸಿನಿಮಾ ಅನೌನ್ಸ್ ಆಗಿಲ್ಲ. ಕಾಟೇರ ಅದ್ಭುತ ಯಶಸ್ಸು ಕಂಡರೂ, ನಾಯಕಿಯ ಮತ್ತೊಂದು ಸಿನಿಮಾ ಘೋಷಣೆ ಆಗದೇ ಇರುವುದಕ್ಕೆ ಹಲವಾರು ಚರ್ಚೆಗಳು ಕೂಡ ನಡೆದಿವೆ. ಕಾಟೇರ ಗೆಲುವಿನ ನಂತರವೂ ಅವರಿಗೆ ಅವಕಾಶ ಸಿಕ್ಕಿಲ್ಲ ಎನ್ನುವ ಮಾತು ಕೇಳಿ ಬಂದಿವೆ. ಆರಾಧನಾ ಆಪ್ತರ ಮಾಹಿತಿಯ ಪ್ರಕಾರ…
ನ್ಯೂಜೆರ್ಸಿಯಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈ ವೇಳೆ ಸ್ಟ್ಯಾಚ್ಯೂ ಆಫ್ ಲಿಬರ್ಟಿ ಪ್ರತಿಮೆಯು ಕಂಪಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಭೂಕಂಪನವು ನ್ಯೂಜೆರ್ಸಿಯ ಕ್ಯಾಲಿಫೋನ್ ಬಳಿ ಹುಟ್ಟಿಕೊಂಡಿದ್ದು, ಇದು ಬೆಳಿಗ್ಗೆ 10:23 ರ ಸುಮಾರಿಗೆ ಅಪ್ಪಳಿಸಿದೆ. @EarthCam ಟ್ವಿಟರ್ ಖಾತೆಯಲ್ಲಿ ಭೂಕಂಪನದ ವಿಡಿಯೋವನ್ನು ಏಪ್ರಿಲ್ 05ರಂದು ಹಂಚಿಕೊಳ್ಳಲಾಗಿದೆ. ಸ್ಟ್ಯಾಚ್ಯೂ ಆಫ್ ಲಿಬರ್ಟಿ ಭೂಕಂಪನದ ವೇಳೆ ಕೆಲ ಸೆಕೆಂಡುಗಳ ವರೆಗೆ ಕಂಪಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸರಿಸುಮಾರು 42 ಮಿಲಿಯನ್ ಜನರು ಭೂಕಂಪವನ್ನು ಅನುಭವಿಸಿದ್ದಾರೆ ಎಂದು ವರದಿಯಾಗಿದೆ, ವಾಷಿಂಗ್ಟನ್ DC ಯಿಂದ ನ್ಯೂಯಾರ್ಕ್-ಕೆನಡಾ ಗಡಿಯವರೆಗೆ ಕಂಪನಗಳು ವಿಸ್ತರಿಸಿವೆ. ಅಲುಗಾಡುವಿಕೆಯು ಕೇವಲ ಸೆಕೆಂಡುಗಳ ಕಾಲ ನಡೆದರೂ, ನ್ಯೂಯಾರ್ಕ್ ನಗರದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೃತಪಟ್ಟಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಇಲ್ಲಿನ ಭಾರತದ ರಾಯಭಾರ ಕಚೇರಿ ತಿಳಿಸಿದೆ. ಓಹಿಯೋದ ಕ್ಲೀವ್ಲ್ಯಾಂಡ್ನಲ್ಲಿ ಉಮಾ ಸತ್ಯ ಸಾಯಿ ಗಡ್ಡೆ ಅವರ ನಿಧನದಿಂದ “ತೀವ್ರ ದುಃಖವಾಗಿದೆ” ಎಂದು ನ್ಯೂಯಾರ್ಕ್ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ತಿಳಿಸಿದ್ದಾರೆ. ಸಾವಿನ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ಇದು ಭಾರತದಲ್ಲಿನ ಕುಟುಂಬದೊಂದಿಗೆ ಸಂಪರ್ಕವನ್ನು ಮುಂದುವರೆಸಿದೆ ಎಂದು ಕಾನ್ಸುಲೇಟ್ ತಿಳಿಸಿದೆ. ಉಮಾ ಗಡ್ಡೆ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಶೀಘ್ರವಾಗಿ ಸಾಗಿಸುವುದು ಸೇರಿದಂತೆ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡಲಾಗುತ್ತಿದೆ ಎಂದು ಕಾನ್ಸುಲೇಟ್ ಟ್ವೀಟ್ ಮೂಲಕ ತಿಳಿಸಿದೆ. 2024 ರ ಆರಂಭದಿಂದ, ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳು ಕನಿಷ್ಠ ಅರ್ಧ ಡಜನ್ ಸಾವುಗಳು ಸಂಭವಿಸಿವೆ. ದಾಳಿಗಳ ಸಂಖ್ಯೆಯಲ್ಲಿ ಆತಂಕಕಾರಿ ಹೆಚ್ಚಳವು ಸಮುದಾಯದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮುಂಬರುವ ಲೋಕಸಭೆ ಚುನಾವಣೆ ಮೇಲೆ ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ದುರ್ಬಳಕೆ ಮಾಡಿಕೊಂಡು ಚೀನಾಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಭಾರತಕ್ಕೆ ಮೈಕ್ರೋಸಾಫ್ಟ್ ಎಚ್ಚರಿಕೆ ನೀಡಿದೆ. ಭಾರತದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ದುರುಪಯೋಗದ ಬಗ್ಗೆ ಸುದೀರ್ಘ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಈ ಎಚ್ಚರಿಕೆ ಬಂದಿರುವುದು ಗಮನಾರ್ಹವಾಗಿದೆ. ಭಾರತದಲ್ಲಿ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಚೀನಾ ಎಐ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಚುನಾವಣೆಗಳ ಮೇಲೆ ಪ್ರಭಾವ ಬೀರಬಹುದು ಎಂದು ಮೈಕ್ರೋಸಾಫ್ಟ್ ಹೇಳಿದೆ. ಮೈಕ್ರೋಸಾಫ್ಟ್ ಪ್ರಕಾರ, ಚೀನಾ ಸರ್ಕಾರದ ಸೈಬರ್ ಗುಂಪುಗಳು ಈ ವರ್ಷ ನಡೆಯಲಿರುವ ಪ್ರಮುಖ ಚುನಾವಣೆಗಳನ್ನು ಗುರಿಯಾಗಿರಿಸಿಕೊಳ್ಳುತ್ತವೆ ಮತ್ತು ಉತ್ತರ ಕೊರಿಯಾ ಕೂಡ ಇದರಲ್ಲಿ ಪಾತ್ರ ವಹಿಸಬಹುದು. ಈ ವರ್ಷ ಪ್ರಪಂಚದಾದ್ಯಂತ ಹಲವು ದೇಶಗಳಲ್ಲಿ ಚುನಾವಣೆಗಳು ನಡೆಯುತ್ತಿವೆ. ವಿಶೇಷವಾಗಿ ಭಾರತ, ದಕ್ಷಿಣ ಕೊರಿಯಾ ಮತ್ತು ಅಮೆರಿಕದಲ್ಲಿ ಚುನಾವಣೆಗಳು ನಡೆಯಲಿವೆ. ಹ್ಯಾಕರ್ಗಳಿಗೆ ಎಐ ಪ್ರಮುಖ ಅಸ್ತ್ರವಾಗಿದೆ ಎಂದು ಕಂಪನಿ ಹೇಳಿದೆ. ಹ್ಯಾಕರ್ಗಳು ವೀಡಿಯೊಗಳನ್ನು ಸುಲಭವಾಗಿ ಮಾರ್ಫ್ ಮಾಡಬಹುದು . ಎಐ ಸಹಾಯದಿಂದ ಪ್ರಸಿದ್ಧ…