Author: Author AIN

ಟೆಸ್ಲಾ ಇಂಕ್ ತನ್ನ ದೀರ್ಘಕಾಲದ ಭರವಸೆಯ ರೋಬೋಟಾಕ್ಸಿಯನ್ನು ಈ ವರ್ಷ ಪರಿಚಯಿಸಲು ಮುಂದಾಗಿದೆ. ಟೆಸ್ಲಾ ಕಂಪನಿಯ ಸಿಇಒ ಎಲೋನ್ ಮಸ್ಕ್ ಸಾಮಾಜಿಕ ಮಾಧ್ಯಮ ಸೈಟ್ ಎಕ್ಸ್ ನಲ್ಲಿ ಟೆಸ್ಲಾ ರೋಬೋಟಾಕ್ಸಿಯನ್ನು ಆಗಸ್ಟ್ 8 ರಂದು ಅನಾವರಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ನ್ಯೂಯಾರ್ಕ್ನಲ್ಲಿ, ಪೋಸ್ಟ್ಮಾರ್ಕೆಟ್ ವಹಿವಾಟಿನಲ್ಲಿ ಷೇರುಗಳು ಶೇಕಡಾ 5.1 ರಷ್ಟು ಏರಿಕೆಯಾಗಿದೆ. ಟೆಸ್ಲಾ ಷೇರು ಈ ವರ್ಷ ಶುಕ್ರವಾರದ ಅಂತ್ಯದ ವೇಳೆಗೆ ಶೇಕಡಾ 34 ರಷ್ಟು ಕುಸಿದಿದೆ. ಮಸ್ಕ್ ರೊಬೊಟಾಕ್ಸಿ ಬಗ್ಗೆ ಸುದ್ದಿಯನ್ನು ಪೋಸ್ಟ್ ಮಾಡುವ ಸ್ವಲ್ಪ ಸಮಯದ ಮೊದಲು, ಅವರು ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿ ಎಂಬ ಬಿರುದನ್ನು ಕಳೆದುಕೊಂಡರು. ಇದು ಈಗ ಮೆಟಾ ಪ್ಲಾಟ್ಫಾರ್ಮ್ಸ್ ಇಂಕ್ ಸಿಇಒ ಮಾರ್ಕ್ ಜುಕರ್ಬರ್ಗ್ ಅವರ ಹೆಸರಾಗಿದೆ. 2019 ರಲ್ಲಿ ಹೂಡಿಕೆದಾರರಿಗೆ ಪರಿಚಯಿಸಲಾದ ಸಂಪೂರ್ಣ ಸ್ವಾಯತ್ತ ವಾಹನವು ಟೆಸ್ಲಾದ ಹೆಚ್ಚಿನ ಮೌಲ್ಯಮಾಪನಕ್ಕೆ ಬಹಳ ಹಿಂದಿನಿಂದಲೂ ಪ್ರಮುಖವಾಗಿದೆ. ಇತ್ತೀಚಿನ ವಾರಗಳಲ್ಲಿ, ಟೆಸ್ಲಾ ಗ್ರಾಹಕರಿಗಾಗಿ ಡ್ರೈವರ್-ಅಸಿಸ್ಟೆನ್ಸ್ ಸಾಫ್ಟ್ವೇರ್ನ ಇತ್ತೀಚಿನ ಆವೃತ್ತಿಯನ್ನು ಬಿಡುಗಡೆ ಮಾಡಿದೆ, ಅದನ್ನು ಎಫ್‌ಎಸ್ಡಿ ಅಥವಾ…

Read More

ಪುನೀತ್ ರಾಜ್​ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕುರಿತು ಕೇಳಿ ಬಂದಿರುವ ಅವಹೇಳನಕಾರಿ ಪದ ಬಳಕೆಗೆ ಇದೀಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲವರನ್ನು ಸಮಾನಾಗಿ ಸ್ವೀಕರಿಸಬೇಕು ಎಂದಿದ್ದಾರೆ. ಗಜಪಡೆ ಹೆಸರಿನ ಟ್ವಿಟರ್ ಖಾತೆ ಮೂಲಕ ವ್ಯಕ್ತಿಯೋರ್ವ ಅಶ್ವಿನಿ ಅವರ ಬಗ್ಗೆ ತುಂಬಾನೇ ಕೀಳುಮಟ್ಟದ ಪದ ಬಳಕೆ ಮಾಡಿದ್ದ. ಇದು ದರ್ಶನ್ ಅಭಿಮಾನಿಯ ಖಾತೆ ಎಂದು ಹೇಳಲಾಗುತ್ತಿದೆ. ಈ ವಿಚಾರ ತನಿಖೆ ಬಳಿಕವೇ ಗೊತ್ತಾಗಬೇಕಿದೆ. ಈಗ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ. ‘ಪಾಸಿಟಿವ್ ಮತ್ತು ನೆಗೆಟಿವ್​ನ ಹೇಗೆ ತೆಗೆದುಕೊಳ್ಳುತ್ತಿರಿ’ ಎಂದು ಅಶ್ವಿನಿ ಅವರಿಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಅವರು ನೇರ ಉತ್ತರ ನೀಡಿದ್ದಾರೆ. ‘ಬೇರೆ ಆಯ್ಕೆ ಇಲ್ಲ. ಜೀವನ ಸಾಗಲೇಬೇಕು. ಎರಡನ್ನೂ ಸಮಾನವಾಗಿ ಸ್ವೀಕರಿಸುತ್ತೇನೆ’ ಎಂದಿದ್ದಾರೆ. ಈ ಮೂಲಕ ಸಾಕಷ್ಟು ಚರ್ಚೆ ಆದ ಘಟನೆಗೆ ಪರೋಕ್ಷವಾಗಿ ಅವರು ಉತ್ತರಿಸಿದ್ದಾರೆ. ಪಿಆರ್​​ಕೆ ಅಡಿಯಲ್ಲಿ ಸಿದ್ಧವಾಗುತ್ತಿದ್ದ ಸಿನಿಮಾಗಳಿಗೆ ಪುನೀತ್ ಅವರು ಕಥೆ ಕೇಳಿ ಫೈನಲ್…

Read More

ಕಳೆದ ಎರಡು ಮೂರು ದಿನಗಳ ಹಿಂದಷ್ಟೇ ‘ರಾಮಾಯಣ’ ಸಿನಿಮಾದ ಚಿತ್ರೀಕರಣ ಶುರುವಾಗಿದೆ. ಶೂಟಿಂಗ್ ಶುರುವಾದ ಮೊದಲನೇ ದಿನವೇ ಶೂಟಿಂಗ್ ಸೆಟ್ ನಿಂದ ಫೋಟೋ ಲೀಕ್ ಆಗಿತ್ತು. ಎರಡನೇ ದಿನ ನಟ ಅರುಣ್ ಗೋವಿಲ್ ಮತ್ತು ನಟಿ ಲಾರಾ ದತ್ತ ಹಾಗೂ ಮತ್ತಿತರರು ಶೂಟಿಂಗ್ ನಲ್ಲಿ ಭಾಗಿಯಾದ ಫೋಟೋಗಳು ಲೀಕ್ ಆಗಿವೆ.  ಹಾಗಾಗಿ ಚಿತ್ರೀಕರಣ ಸ್ಥಳದಲ್ಲಿ ಮೊಬೈಲ್ ನಿಷೇಧಿಸಿದೆಯಂತೆ ಚಿತ್ರತಂಡ. ರಾಮಾಯಣ ಸಿನಿಮಾ ಆರಂಭಕ್ಕೂ ಮುನ್ನವೇ ಸಾಕಷ್ಟು ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿದೆ. ಮೊನ್ನೆಯಿಂದ ಚಿತ್ರೀಕರಣವನ್ನು ಆರಂಭಿಸಿದ್ದಾರೆ ನಿರ್ದೇಶಕ ನಿತಿಶ್ ತೀವಾರಿ. ಈ ಹಂತದ ಚಿತ್ರೀಕರಣದಲ್ಲಿ ಸ್ಟಾರ್ ನಟರು ಭಾಗಿ ಆಗುತ್ತಿಲ್ಲ ಎನ್ನುವ ಮಾಹಿತಿ ಇದೆ. ಗುರುಕುಲ ದೃಶ್ಯದಿಂದ ಚಿತ್ರೀಕರಣ ಆರಂಭಿಸಿದ್ದಾರೆ. ನಂತರದ ಚಿತ್ರೀಕರಣದಲ್ಲಿ ಸ್ಟಾರ್ ತಾರಾಗಣವೇ ಇರಲಿದೆ. ಈ ನಡುವೆ ರಾಮಾಯಣ ಸಿನಿಮಾದ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿದೆ. ಮಂಡೋದರಿ ಪಾತ್ರವನ್ನು ಹಿಂದಿಯ ಖ್ಯಾತ ಕಿರುತೆರೆ ನಟಿ ಸಾಕ್ಷಿ ತನ್ವರ್ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಸುದ್ದಿ ಸಾಕಷ್ಟು ಸದ್ದು ಕೂಡ…

Read More

ಕೆಲಸಕ್ಕಾಗಿ ದಕ್ಷಿಣ ಏಷ್ಯಾ ರಾಷ್ಟ್ರ ಲಾವೋಸ್‌ಗೆ ಹೋಗಿ ತೊಂದರೆಗೆ ಸಿಲುಕಿದ್ದ 17 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ. ಲಾವೋಸ್‌ನಲ್ಲಿ ಕೆಲಸಕ್ಕೆಂದು ಹೋಗಿ ಸುರಕ್ಷಿತವಲ್ಲದ ಕೆಲಸಗಳಲ್ಲಿ ಹಾಗೂ ಕಾನೂನುಬಾಹಿರ ಕೆಲಸಕ್ಕೆ ಪ್ರೇರಿಪಿಸುವವರ ಜಾಲಕ್ಕೆ ಸಿಲುಕಿದ್ದ 17 ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಗಿದೆ. ಇದು ಲಾವೋಸ್‌ನಲ್ಲಿನ ನಮ್ಮ ರಾಯಭಾರ ಕಚೇರಿ ಅಧಿಕಾರಿಗಳ ಪರಿಶ್ರಮಕ್ಕೆ ಹಿಡಿದ ಕನ್ನಡಿ ಎಂದು ಜೈ ಶಂಕರ್ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ನಾವು ಭಾರತದ ಹೊರಗಿನವರ ನಮ್ಮವರ ಜೊತೆ ಇದ್ದೇವೆ ಎಂದು ತೋರಿಸುವ ಮೋದಿ ಗ್ಯಾರಂಟಿ ಇದು ಎಂದು ಜೈಶಂಕರ್ ಹೇಳಿದ್ದಾರೆ.

Read More

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿ ನಟಿ ರಶ್ಮಿಕಾ ಮಂದಣ್ಣ ಪರಭಾಷೆಯಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸದ್ದು ಮಾಡುತ್ತಿರುವ ನಟಿ ಸದಾ ಒಂದಲ್ಲ ಒಂದು ಕಾರಣಕ್ಕೆ ಟ್ರೋಲ್ ಗೆ ಗುರಿಯಾಗುತ್ತಿರುತ್ತಾರೆ. ಇದೀಗ ನಟಿ ಇತ್ತೀಚೆಗೆ ಟ್ರೋಲ್ ಆಗಿರುವ ‘ಅನಿಮಲ್’ ಚಿತ್ರದ ದೃಶ್ಯವೊಂದರ ಬಗ್ಗೆ ಮಾತನಾಡಿದ್ದಾರೆ. ಬಾಲಿವುಡ್ ನಟಿ ನೇಹಾ ಧೂಪಿಯಾ ಶೋಗೆ ರಶ್ಮಿಕಾ ಇತ್ತೀಚೆಗೆ ಆಗಮಿಸಿದ್ದರು. ಸಂದರ್ಶನದಲ್ಲಿ ಹಲವು ವಿಚಾರಗಳ ಬಗ್ಗೆ ನಟಿ ಮಾತನಾಡಿದ್ದಾರೆ. ದೇಹದ ವಿಚಾರ ಇಟ್ಟುಕೊಂಡು ಮಹಿಳೆಯರನ್ನು ಟ್ರೋಲ್ ಮಾಡಿದ್ದರ ಬಗ್ಗೆ ರಶ್ಮಿಕಾ ಮೌನ ಮುರಿದಿದ್ದಾರೆ. ಸಿನಿಮಾದಲ್ಲಿನ ಡೈಲಾಗ್ ವಿಚಾರಕ್ಕೆ ನನ್ನನ್ನು ಟ್ರೋಲ್ ಮಾಡಿದ್ದಾರೆ. ನನ್ನ ನಟನೆಯ ಬಗ್ಗೆ ನನಗೆ ಅರಿವಿದೆ ಎಂದಿದ್ದಾರೆ. ‘ಅನಿಮಲ್’ ಚಿತ್ರದಲ್ಲಿ ರಣ್‌ಬೀರ್ ಜೊತೆ‌ 9 ನಿಮಿಷಗಳ ಕರ್ವಾ ಚೌತ್ ದೃಶ್ಯ ಮಾಡುವಾಗ ಸೆಟ್‌ನಲ್ಲಿರುವ ಜನರು ನನ್ನ ನಟನೆ ನೋಡಿ ಮೆಚ್ಚಿಕೊಂಡಿದ್ದರು. ಆದರೆ ಚಿತ್ರದ ಟ್ರೈಲರ್, ಸಿನಿಮಾ ನೋಡಿದ ಜನರು ಆ ದೃಶ್ಯವನ್ನು ಟ್ರೋಲ್ ಮಾಡಿದರು. ಸೆಟ್‌ನಲ್ಲಿ ಇಷ್ಟವಾದ…

Read More

ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂರ್ ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನೇ ನಟಿ ನಟಿ ಅದಾ ಶರ್ಮಾ ಖರೀದಿಸಿದ್ದಾರೆ. ಈ ಮೂಲಕ ನೀವು ನನ್ನ ಹೃದಯದಲ್ಲಿ ಎಂದೆಂದಿಗೂ ಇದ್ದೀರಿ ಎನ್ನುವ ಸಂದೇಶವನ್ನು ನಟಿ ನೀಡಿದ್ದಾರೆ. ಮುಂಬೈನ ಮೋಂಟ್ ಬ್ಲ್ಯಾಂಕ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ಸುಶಾಂತ್ ಸಿಂಗ್ 2020 ಜೂನ್ 14ರಂದು ಅದೇ ಅಪಾರ್ಟ್ ಮೆಂಟ್ ನ ರೂಮ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆ ಬಳಿಕ ಆ ಫ್ಲ್ಯಾಟ್ ಖಾಲಿಯೇ ಉಳಿದಿತ್ತು. ಸುಶಾಂತ್ ಸಿಂಗ್ ಆತ್ಮ ಅಲ್ಲಿದೆ ಎಂದೂ ಸುದ್ದಿ ಹಬ್ಬಿಸಲಾಗಿತ್ತು. ಮುಂಬೈನ  ಆ ಫ್ಲ್ಯಾಟ್ ನಾಲ್ಕು ಕೋಣೆಗಳನ್ನು ಹೊಂದಿದ್ದು, ಒಟ್ಟು 2500 ಸ್ಕ್ವೇರ್ ಫೀಟ್ ವಿಸ್ತೀರ್ಣ ಹೊಂದಿದೆ. ಸಮುದ್ರಕ್ಕೆ ಮುಖ ಮಾಡಿದ ಮನೆಯಲ್ಲಿ ಹಲವಾರು ವರ್ಷಗಳಿಂದ ಸುಶಾಂತ್ ಸಿಂಗ್ ವಾಸವಿದ್ದರು. ಸಾವಿನ ನಂತರ ಯಾರೂ ಈ ಮನೆಯಲ್ಲಿ ಉಳಿದುಕೊಳ್ಳಲು ಇಷ್ಟ ಪಟ್ಟಿರಲಿಲ್ಲ. ಇದೀಗ ನಟಿ ಅದಾ ಶರ್ಮಾ ಆ ಮನೆಯನ್ನು ಖರೀದಿಸಿದ್ದಾರೆ.

Read More

ಅನುಪಮಾ ಪರಮೇಶ್ವರನ್ ನಟನೆಯ ಟಿಲ್ಲು ಸ್ಕ್ವೇರ್ ಚಿತ್ರ ಇತ್ತೀಚೆಗೆ ರಿಲೀಸ್ ಆಗಿದ್ದು ಕಲೆಕ್ಷನ್ ನಲ್ಲಿ ಕಮಾಲ್ ಮಾಡ್ತಿದೆ. ಸಿನಿಮಾ ತೆರೆಕಂಡ ಬಳಿಕ ನಟಿ ಅನುಪಮಾ ಪರಮೇಶ್ವರನ್ ಪಡ್ಡೆ ಹುಡುಗರ ಹೃದಯ ಕದ್ದಿದ್ದಾರೆ. ಈ ಸಿನಿಮಾ ಸಕ್ಸಸ್ ಆದ ಬಳಿಕ ನಟಿಯ ಸಂಭಾವನೆ ಕೂಡ ದುಪ್ಪಟ್ಟಾಗಿದೆ. ಇದುವರೆಗೂ ಹೋಮ್ಲಿ ಲುಕ್ ನಲ್ಲಿ ಕಾಣಿಸಿಕೊಳ್ತಿದ್ದ ನಟಿ ಅನುಪಮಾ ಪರಮೇಶ್ವರನ್ ಇದೀಗ ಹಾಟ್ ಹಾಟ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಟಿಲ್ಲು ಸ್ಕ್ವೇರ್’ ಚಿತ್ರದ ಮೂಲಕ ಬೋಲ್ಡ್ ಪಾತ್ರದಲ್ಲಿ ನಟಿಸಿರುವ ಅನುಪಮಾ ಸಂಭಾವನೆ ಕೂಡ ಹೆಚ್ಚಾಗಿದೆ. ಕಳೆದ ವರ್ಷ ‘ಕಾರ್ತಿಕೇಯ 2’ ಸಿನಿಮಾ ಆದ್ಮೇಲೆ ‘ಟಿಲ್ಲು ಸ್ಕ್ವೇರ್’ ಚಿತ್ರದ ಮೂಲಕ ಕೂಡ ಬ್ರೇಕ್ ಸಿಕ್ಕಿದೆ. 40ರಿಂದ 60 ಲಕ್ಷ ರೂಪಾಯಿ ಸಂಭಾವನೆ ಪಡೆಯುತ್ತಿದ್ದ ನಟಿ, ಒಂದೂವರೆ ಕೋಟಿ ರೂ.ವರೆಗೂ ಚಾರ್ಜ್ ಮಾಡುತ್ತಿದ್ದಾರಂತೆ. ಇದೀಗ ಬರುತ್ತಿರುವ ಸಿನಿಮಾ ಆಫರ್‌ಗಳಿಗೆ ದುಬಾರಿ ಸಂಭಾವನೆಗೆ ನಟಿ ಬೇಡಿಕೆ ಇಡುತ್ತಿದ್ದಾರೆ ಎಂದು ಟಾಲಿವುಡ್ ಅಂಗಳದಲ್ಲಿ ಗುಸು ಗುಸು ಶುರುವಾಗಿದೆ. ಈ ಮೂಲಕ ಅನುಪಮಾ ದುಬಾರಿ…

Read More

ಬಹುಭಾಷಾ ನಟಿ ಮೀರಾ ಜಾಸ್ಮಿನ್ ಅವರ ತಂದೆ ನಿಧನರಾಗಿದ್ದಾರೆ. ಈ ವಿಷಯವನ್ನು ಸ್ವತಃ ಮೀರಾ ಜಾಸ್ಮಿಕ್ ಸೋಷಿಯಲ್ ಮೀಡಿಯಾ ಮೂಲಕ ಖಚಿತ ಪಡಿಸಿದ್ದಾರೆ. ಮೀರಾ ತಂದೆ ಜೋಸೆಫ್ ಫಿಲಿಪ್ ಅವರಿಗೆ 83 ವರ್ಷ ವಯಸ್ಸಾಗಿದ್ದು, ಕೇರಳದ ಎರ್ನಾಕುಲಂ ನಲ್ಲಿ ನಿಧನರಾಗಿದ್ದಾರೆ. ತಂದೆಯ ಜೊತೆಗಿರುವ ಫೋಟೋ ಹಂಚಿಕೊಂಡಿರುವ ನಟಿ ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ. ಮೀರಾ ಜಾಸ್ಮಿನ್ ಅವರ ತಂದೆ ಜೋಸೆಫ್ ಫಿಲಿಪ್  ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ತಾನು ಸಿನಿಮಾ ರಂಗಕ್ಕೆ ಬರುವುದರ ಹಿಂದೆ ತನ್ನ ತಂದೆಯ ಸಾಕಷ್ಟು ಪ್ರೋತ್ಸಾಹ ಹಗೂ ಬಲವಾದ ಒತ್ತಾಸೆ ಇತ್ತು ಎಂದು ಮೀರಾ ಜಾಸ್ಮಿಕ್ ಸಾಕಷ್ಟು ಭಾರಿ ಹೇಳಿದ್ದರು.

Read More

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದ ಅನಾಮಿಕ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ‘ಗಜಪಡೆ’ ಹೆಸರಿನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ `ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.…

Read More

ರಷ್ಯಾದಿಂದ ತೈಲ ಆಮದು ಕಡಿಮೆ ಮಾಡುವಂತೆ ಭಾರತವನ್ನು ಕೇಳಿಲ್ಲ ಎಂದು ಅಮೇರಿಕಾ ಸ್ಪಷ್ಟನೆ ನೀಡಿದೆ. ಅನಿರ್ಬಂಧಿತ ರಷ್ಯಾ ತೈಲ ವ್ಯಾಪಾರಕ್ಕೆ ಅವಕಾಶ ಕೊಡುವುದು ಒಪ್ಪಲು ಸಾಧ್ಯವಿಲ್ಲದ ಸಂಗತಿಯಾಗಿದೆ ಎಂದು ಹೇಳಿರುವ ಅಮೇರಿಕಾ, ಮಾಸ್ಕೋದ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಪಾಶ್ಚಿಮಾತ್ಯ ಬೆಲೆಯ ಮಿತಿಯನ್ನು ರಷ್ಯಾವು ತೈಲವನ್ನು ಪಡೆಯುವುದಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವುದನ್ನು ಮುಂದುವರಿಸಲು ಒತ್ತಾಯಿಸಲು ಉದ್ದೇಶಿಸಿದೆ ಎಂದು ಅಮೇರಿಕಾ ತಿಳಿಸಿದೆ. ಅನಂತಾ ಕೇಂದ್ರದಲ್ಲಿ ಸಂವಾದಾತ್ಮಕ ಅಧಿವೇಶನದಲ್ಲಿ ಮಾತನಾಡಿದ ಆರ್ಥಿಕ ನೀತಿಯ US ಸಹಾಯಕ ಕಾರ್ಯದರ್ಶಿ ಎರಿಕ್ ವ್ಯಾನ್ ನಾಸ್ಟ್ರಾಂಡ್, ಯುರೋಪ್ ಮತ್ತು ಉದಯೋನ್ಮುಖ ಮಾರುಕಟ್ಟೆಗಳಿಗೆ ಸ್ಥಿರವಾದ ಶಕ್ತಿಯ ಪೂರೈಕೆಯನ್ನು ನಿರ್ವಹಿಸುತ್ತಿರುವಾಗ G7 ಬೆಲೆಯ ಮಿತಿ ವಿಧಾನ ಮಾಸ್ಕೋದ ಯುದ್ಧಕ್ಕೆ ಹಣಕಾಸಿನ ಪ್ರಮುಖ ಮೂಲವನ್ನು ಯಶಸ್ವಿಯಾಗಿ ಕುಂಠಿತಗೊಳಿಸಿದೆ ಎಂದು ವಿವರಿಸಿದರು.

Read More