Author: Author AIN

ತಮಿಳು ಸೂಪರ್‌ ಸ್ಟಾರ್ ಅಜಿತ್ ಕುಮಾರ್ ‘ತುನಿವು’ ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡಿದ್ದರು. ಸದ್ಯ ಆಕ್ಷನ್-ಥ್ರಿಲ್ಲರ್ ಚಿತ್ರ ‘ವಿದಾಮುಯಾರ್ಚಿ’ ಚಿತ್ರದಲ್ಲಿ ನಟ ಬ್ಯುಸಿಯಾಗಿದ್ದು ಈ ಮಧ್ಯೆ ಅಜಿತ್ ಓಡಿಸುತ್ತಿದ್ದ ಗಾಡಿ ಅಪಘಾತಕ್ಕೀಡಾಗಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವರ್ಷವೇ ‘ವಿದಾಮುಯಾರ್ಚಿ’ ಬಿಡುಗಡೆಯಾಗಲಿದೆ. ಆದರೆ, ಚಿತ್ರದ ಬಿಡುಗಡೆ ದಿನಾಂಕ ಇನ್ನೂ ಬಹಿರಂಗವಾಗಿಲ್ಲ. ಮಾಗಿಜ್ ತಿರುಮೇನಿ ಈ ‘ವಿದಾಮುಯಾರ್ಚಿ’ಯನ್ನು ನಿರ್ದೇಶಿಸಲಿದ್ದಾರೆ. ಅದೇ ಸಮಯದಲ್ಲಿ, ಚಿತ್ರ ನಿರ್ಮಾಪಕರು ಈ ಚಿತ್ರದ ಶೂಟಿಂಗ್‌ ವೇಳೆ ಅಜಿತ್ ಅವರು ಅಪಘಾತಕ್ಕೀಡಾಗಿದ್ದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಲೈಕಾ ಪ್ರೊಡಕ್ಷನ್ಸ್ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮೂರು ಮಾರಣಾಂತಿಕ ಆಕ್ಷನ್ ಸೀಕ್ವೆನ್ಸ್‌ಗಳ ವೀಡಿಯೊಗಳನ್ನು ಹಂಚಿಕೊಂಡಿದೆ. ‘ಶೌರ್ಯಕ್ಕೆ ಮಿತಿಯಿಲ್ಲ, ಯಾವುದೇ ಬಾಡಿ ಡಬಲ್ ಇಲ್ಲದೆ ವಿದಾಮುಯಾರ್ಚಿಯಲ್ಲಿ ಅಜಿತ್ ಅವರ ಡೇರಿಂಗ್ ಸ್ಟಂಟ್ ಸೀಕ್ವೆನ್ಸ್’ ಎಂಬ ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಮೊದಲ ವೀಡಿಯೊದಲ್ಲಿ, ಚಿತ್ರದ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಜಿತ್ ಗಾಯಗೊಂಡ ನಟನನ್ನು ಕಾರಿನಲ್ಲಿ ವೇಗವಾಗಿ ಹೊತ್ತೊಯ್ಯುತ್ತಿರುವುದನ್ನು ನೀವು ನೋಡುತ್ತೀರಿ. ವೇಗವಾಗಿ ಹೋಗುವ…

Read More

ತನ್ನ ಸೌಂದರ್ಯ ಹಾಗೂ ಅದ್ಭುತ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನ ಗೆದ್ದಿರುವ ನಟಿ ಶ್ರೀದೇವಿ ರಿಯಲ್ ಲೈಫ್ ಬಗ್ಗೆ ತಿಳಿದುಕೊಳ್ಳಬೇಕು ಎಂಬ ಕ್ಯೂರಿಯಾಸಿಟಿ ಸಾಕಷ್ಟು ಮಂದಿಗೆ ಇದೆ. ಅಂತೆಯೇ ಬಾಲಿವುಡ್ ನಲ್ಲಿ ಅನೇಕ ಮಂದಿ ಶ್ರೀದೇವಿ ಬಯೋಪಿಕ್ ಮಾಡಬೇಕು ಎಂದುಕೊಂಡಿದ್ದಾರೆ. ಆದರೆ ನಾನು ಬದುಕಿರುವವರೆಗೂ ಶ್ರೀದೇವಿ ಬಯೋಪಿಕ್ ಗೆ ಇಪ್ಪಿಗೆ ನೀಡಲ್ಲ ಎಂದು ನಿರ್ಮಾಪಕ ಹಾಗೂ ಶ್ರೀದೇವಿ ಪತಿ ಬೋನಿ ಕಪೂರ್ ಹೇಳಿದ್ದಾರೆ. ಬೋನಿ ಕಪೂರ್ ನಿರ್ಮಾಣದ ‘ಮೈದಾನ್’ ಸಿನಿಮಾದ ಪ್ರಚಾರದಲ್ಲಿ ಅವರು ನಿರತರಾಗಿದ್ದಾರೆ. ಚಿತ್ರದ ಪ್ರಚಾರಕ್ಕಾಗಿ ನೀಡಿದ ವಿವಿಧ ಸಂದರ್ಶನಗಳಲ್ಲಿ ಶ್ರೀದೇವಿಯನ್ನು ಪ್ರಸ್ತಾಪಿಸಿದಾಗ ಅವರು ಭಾವುಕರಾಗುತ್ತಿದ್ದಾರೆ. ಸಂದರ್ಶನವೊಂದರಲ್ಲಿ ಅವರಿಗೆ ಶ್ರೀದೇವಿ ಅವರ ಬಯೋಪಿಕ್ ಕುರಿತ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಅವರು ಉತ್ತರಿಸಿದ್ದಾರೆ. ಶ್ರೀದೇವಿಯನ್ನು ಮದುವೆಯಾಗುವ ಮೊದಲು ಬೋನಿ ಕಪೂರ್ ಅವರಿಗೆ ಆಗಲೇ ಮದುವೆ ಆಗಿತ್ತು. ಮೋನಾ ಜೊತೆ ಅವರು ಸಂಸಾರ ನಡೆಸುತ್ತಿದ್ದರು. ಆದಾಗ್ಯೂ ಶ್ರೀದೇವಿ ಜೊತೆ ಅವರಿಗೆ ಪ್ರೀತಿ ಮೂಡಿತು. 1996ರಲ್ಲಿ  ಇವರು ಮದುವೆ ಆದರು. ಅವರಿಗೆ ಜಾನ್ವಿ…

Read More

ಬಿಗ್​ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಸದ್ಯ ಸೀರಿಯಲ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ದಿವ್ಯಾ ಇನ್ಸ್ಟಾಗ್ರಾಂನಲ್ಲಿ ಹುಡುಗನ ಜೊತೆಗಿರುವ ಫೋಟೋ ಹಂಚಿಕೊಳ್ಳುವ ಮೂಲಕ ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿದ್ದಾರೆ. ದಿವ್ಯಾ ಸುರೇಶ್ ಜೊತೆ ಕಾಣಿಸಿಕೊಂಡಿರುವ ಹುಡುಗ ಯಾರು ಎಂಬ ಕುತೂಹಲ ಶುರುವಾಗಿದೆ. ಆತ ಆಕೆಯ ಸ್ನೇಹಿತನಾ, ಬಾಯ್ ಫ್ರೆಂಡಾ ಅಥವಾ ಮದುವೆಯಾಗುವ ಹುಡುಗಾನಾ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ದಿವ್ಯಾ ಸುರೇಶ್ ಆಗಾಗ ತಮ್ಮ ಫೊಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ಆದರೆ ಈಗ ನಟಿ ಯುವಕನೊಬ್ಬನ ಜೊತೆ ಫೋಟೋ ಹಾಕಿದ್ದು ಪಕ್ಕಾ ಇದು ನಟಿಯ ಬಾಯ್​​ಫ್ರೆಂಡ್ ಇರಬೇಕು ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ದಿವ್ಯಾ ಶೇರ್ ಮಾಡಿರುವ ಫೋಟೋದಲ್ಲಿ ಯುವಕನನ್ನು ತಬ್ಬಿಕೊಂಡು ಕೊರಳಿಗೆ ಮುತ್ತು ನೀಡುತ್ತಿರುವುದನ್ನು ಕಾಣಬಹುದು. ನಟಿ ಈ ಫೋಟೋವನ್ನು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಶೇರ್ ಮಾಡಿದ್ದು ಈ ಫೋಟೋ ನೋಡಿದರೆ ನಿಮ್ಮನ್ನು ಫ್ರೆಂಡ್ಸ್ ಎಂದು ಹೇಳಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ ನೆಟ್ಟಿಗರು. ಈ ಫೋಟೋ ಕೆಟ್ಟ…

Read More

ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ಅಟ್ಲಿ ಕಾಂಬಿನೇಷನ್ ನ ಸಿನಿಮಾ ಆರಂಭಕ್ಕೂ ಮುನ್ನವೇ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈಗಾಗ್ಲೆ ಚಿತ್ರದಲ್ಲಿ ಸಮಂತಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಈ ಮಧ್ಯೆ ಚಿತ್ರತಂಡಕ್ಕೆ ಮತ್ತೋರ್ವ ನಟಿ ಎಂಟ್ರಿಕೊಟ್ಟಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಅಲ್ಲು ಅರ್ಜುನ್ ಮುಂದಿನ ಸಿನಿಮಾಗೆ ಸಮಂತಾ ನಾಯಕಿಯಾಗ್ತಾರೆ ಎಂಬ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಸಲಿಗೆ ಸಮಂತಾ ಅಟ್ಲಿ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಾರಾ? ಎಂಬುದು ಇನ್ನೂ ಖಾತ್ರಿಯಾಗಿಲ್ಲ. ಈ ಬೆನ್ನಲ್ಲೇ ಸ್ಟಾರ್ ನಟಿ ತ್ರಿಶಾ ಹೆಸರು ಕೂಡ ಕೇಳಿ ಬಂದಿದೆ. ಅಲ್ಲು ಅರ್ಜುನ್ ಮುಂಬರುವ ಸಿನಿಮಾದಲ್ಲಿ ಸಮಂತಾ ಮತ್ತು ತ್ರಿಶಾ ಕೃಷನ್ ಇಬ್ಬರೂ ತೆರೆಹಂಚಿಕೊಳ್ತಾರೆ ಎನ್ನಲಾಗುತ್ತಿದೆ. ಇಬ್ಬರ ಜೊತೆ ಅಲ್ಲು ಅರ್ಜುನ್ ಡ್ಯುಯೇಟ್ ಹಾಡೋಕೆ ರೆಡಿಯಾಗುತ್ತಿದ್ದಾರಂತೆ. ತ್ರಿಶಾ ಕೃಷ್ಣನ್ ಅವರಿಗೂ ಕೂಡ ಸಿನಿಮಾದಲ್ಲಿ ಉತ್ತಮ ಪಾತ್ರವಿದೆ ಎನ್ನಲಾಗುತ್ತಿದೆ. ಅಲ್ಲು ಅರ್ಜುನ್ ಜೊತೆ ಸಮಂತಾ, ತ್ರಿಶಾ ನಟಿಸುವ ಸುದ್ದಿಯ ಬಗ್ಗೆ ಚಿತ್ರತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ…

Read More

ಸ್ಯಾಂಡಲ್‌ವುಡ್ ನಟಿ, ಬಿಗ್‌ ಬಾಸ್‌ ಕನ್ನಡ 7ರ ಸ್ಪರ್ಧಿ ದೀಪಿಕಾ ದಾಸ್ ಇತ್ತೀಚೆಗೆ ದೀಪಕ್ ಎಂಬುವವರ ಜೊತೆ ಮದುವೆಯಾಗಿದ್ದಾರೆ. ಇದೀಗ ಪತಿ ಜೊತೆ ದೀಪಿಕಾ ದಾಸ್ ವೆಕೇಷನ್ ಮೂಡ್‌ನಲ್ಲಿದ್ದಾರೆ. ಟರ್ಕಿಗೆ ತೆರಳಿರುವ ಜೋಡಿ ನಟಿಯ ಸುಂದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪತಿ ಜೊತೆ ದೀಪಿಕಾ ಟರ್ಕಿಗೆ ತೆರಳಿದ್ದು, ರೆಕ್ಕೆಯನ್ನು ಬೆನ್ನಿಗೆ ಸಿಕ್ಕಿಸಿ, ಕಲರ್‌ಫುಲ್ ಡ್ರೆಸ್‌ನಲ್ಲಿ ನಟಿ ಮಿಂಚಿದ್ದಾರೆ. ಯಾವಾಗಲೂ ಸೂರ್ಯನ ಕಿರಣಕ್ಕೆ ಮುಖ ಒಡ್ಡಿಕೊಳ್ಳಿ, ಆಗ ನೆರಳು ನಿಮ್ಮ ಹಿಂದೆಯೇ ಉಳಿಯುತ್ತದೆ ಎಂದು ಕ್ಯಾಪ್ಷನ್ ನೀಡಿದ್ದಾರೆ. ದೀಪಿಕಾ ದಾಸ್‌ಗೆ ಗೋವಾದಲ್ಲಿ ಆಪ್ತರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಬಳಿಕ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆರತಕ್ಷತೆ ಹಮ್ಮಿಕೊಳ್ಳಲಾಗಿತ್ತು. ದೀಪಿಕಾ ಉದ್ಯಮಿ ದೀಪಕ್ ಎಂಬವವರ ಜೊತೆ ಹಸೆಮಣೆ ಏರಿದ್ದಾರೆ.

Read More

ಡೆವಿಲ್ ಸಿನಿಮಾದ ಶೂಟಿಂಗ್ ವೇಳೆ ನಟ ದರ್ಶನ್ ಕೈಗೆ ಪೆಟ್ಟಾಗಿದ್ದು, ಇಂದು ಆಪರೇಷನ್ ನಡೆಯಲಿದೆ. ಈ ಮಾಹಿತಿಯನ್ನು ಸ್ವತಃ ದರ್ಶನ್ ಅವರೇ ಹೇಳಿಕೊಂಡಿದ್ದಾರೆ. ಮಂಡ್ಯದಲ್ಲಿ ನಡೆದ ಸುಮಲತಾ ಅಂಬರೀಶ್ ಅವರ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿದ್ದಾರೆ. ಡೆವಿಲ್ ಸಿನಿಮಾದ ಸಾಹಸ ಸನ್ನಿವೇಶ ಶೂಟಿಂಗ್ ಸಮಯದಲ್ಲಿ ದರ್ಶನ್ ಕೈಗೆ ಏಟು ಬಿದ್ದಿದೆ ಎಂದು ಹೇಳಲಾಗುತ್ತಿದೆ. ಕೈಗೆ ಬೆಲ್ಟ್ ಕಟ್ಟಿಕೊಂಡು ಈವರೆಗೂ ಓಡಾಡುತ್ತಿದ್ದ ದರ್ಶನ್ ವೈದ್ಯರ ಸಲಹೆ ಮೇರೆಗೆ ಇದೀಗ ಆಪರೇಷನ್ ಗೆ ಒಳಗಾಗುತ್ತಿದ್ದಾರೆ. ಆಪರೇಷನ್ ಒಳಗಾಗುವ ಮುನ್ನ ಹಲವಾರು ಕಾರ್ಯಕ್ರಮಗಳಲ್ಲೂ ದರ್ಶನ್ ಭಾಗಿ ಆಗಿದ್ದಾರೆ. ನೀನಾಸಂ ಸತೀಶ್ ನಟನೆಯ ಮ್ಯಾಟ್ನಿ ಸಿನಿಮಾದ ಇವೆಂಟ್, ನಿನ್ನ ಜಾಜಿ ಹೆಸರಿನ ಕಾರ್ಯಕ್ರಮ ವೇಳೆಯೂ ದರ್ಶನ್ ಕೈಗೆ ಬೆಲ್ಟ್ ಕಟ್ಟಿಕೊಂಡೇ ಇದ್ದರು.

Read More

ಕಳೆದ ಕೆಲವು ದಿನಗಳ ಹಿಂದೆ ಬಾಲಿವುಡ್ ನಟಿ ತಾಪ್ಸಿ ಪನ್ನು ಮದುವೆಯಾಗಿದ್ದಾರೆ ಎಂದು ಸಾಕಷ್ಟು ಸುದ್ದಿಯಾಗಿತ್ತು. ಆದರೆ ನಟಿಯ ಮದುವೆಯ ಫೋಟೋ ಅಥವಾ ವಿಡಿಯೋವಾಗಲಿ ಸಿಕ್ಕಿರಲಿಲ್ಲ. ಿದೀಗ ತಾಪ್ಸಿ ಮದುವೆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಲೀಕ್​ ಆಗಿದ್ದು, ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ತಾಪ್ಸಿ ಪನ್ನು ಮಾರ್ಚ್ 25 ರಂದು ಗುಟ್ಟಾಗಿ ಮದುವೆ ಆಗಿದ್ದಾರೆ. ತಾಪ್ಸಿ ತನ್ನ ಬಹುಕಾಲದ ಗೆಳೆಯ ಮಥಿಯಾಸ್‌ ಜೊತೆ ಹಸೆ ಮಣೆ ಏರಿದ್ದಾರೆ. 10 ವರ್ಷಗಳ ಡೇಟಿಂಗ್ ಬಳಿಕ ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದಾರೆ. ನಟಿ ,ಮದುವೆಯ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಇದೀಗ ತಾಪ್ಸಿ ಮದುವೆಯ ಮೊದಲ ವಿಡಿಯೋ ಹೊರಬಿದ್ದಿದೆ. ಇಬ್ಬರ ಮದುವೆಗೆ ಆಪ್ತರು ಮತ್ತು ಕುಟುಂಬದವರು ಸಾಕ್ಷಿಯಾಗಿದ್ರು.  ತಾಪ್ಸಿ, ಮಥಿಯಾಸ್ ಮದುವೆ ಉದಯಪುರದ ಪರಿಣಯ ಸೂತ್ರದಲ್ಲಿ ನಡೆದಿದೆ. ತಾಪ್ಸಿ ಅವರ ಪತಿ ಒಲಿಂಪಿಕ್ ಪದಕ ವಿಜೇತರಾಗಿದ್ದಾರೆ. ಮದುವೆಯ ಕುರಿತು ಇವರಿಬ್ಬರೂ ಇನ್ನೂ ಅಧಿಕೃತವಾಗಿ ಅನೌನ್ಸ್ ಮಾಡಿಲ್ಲ. ತಾಪ್ಸಿಯ ಮದುವೆಯ ಫೋಟೋಗಳನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

Read More

ಬಾಲಿವುಡ್ ನಟ ರಣಬೀರ್ ಕಪೂರ್ ಬಳಿಕ ಈಗಾಗಲೇ ದುಬಾರಿ ಬೆಲೆಯ ಕಾರುಗಳ ಸಂಗ್ರಹವೇ ಇದೆ. ಇದೀಗ ನಟ 8 ಕೋಟಿ ಬೆಲೆಯ ಕಾರನ್ನು ಖರೀದಿಸಿ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ವರ್ಷ ನಟ ರಣಬೀರ್ ಕಫೂರ್ ನಟನೆಯ ‘ಅನಿಮಲ್’ ಸಿನಿಮಾ 900 ಕೋಟಿ ರೂಪಾಯಿ ಬಾಚಿಕೊಂಡಿದ್ದಷ್ಟೇ ತಡ ರಣಬೀರ್ ರೇಂಜ್ ಬದಲಾಗಿ ಹೋಗಿದೆ. ಒಂದು ಸಮಯದಲ್ಲಿ ಒಂದರ ಹಿಂದೊಂದು ಸೋಲುಗಳನ್ನು ಕಂಡಿದ್ದ ನಟನಿಗೆ ಇದೀಗ ಶುಕ್ರದೆಸೆ ಶುರುವಾಗಿದ್ದು ಬಾಲಿವುಡ್ ನಲ್ಲಿ ಸಖತ್ ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ. ಸದ್ಯ ರಾಮಾಯಣ ಸಿನಿಮಾದ ಕೆಲಸದಲ್ಲಿ ತೊಡಗಿಕೊಂಡಿರುವ ನಟ ರಣಬೀರ್ ಇದೀಗ  ಬೆಂಟ್ಲಿ ಕಾಂಟಿನೆಂಟಲ್ ಜಿಟಿ ಕಾರನ್ನು ಖರೀದಿಸಿದ್ದಾರೆ. ರಣ್‌ಬೀರ್ ಕಪೂರ್ ಖರೀದಿಸಿದ ಕಾರು ಇಷ್ಟೊಂದು ಚರ್ಚೆಯಾಗುವುದಕ್ಕೆ ಕಾರಣ ಆ ಕಾರಿನ ಬೆಲೆ. ಬೆಂಟ್ಲಿ ಕಾಂಟಿನೆಂಟಲ್ ಜಿಟಿ ವಿ8 ಕಾರಿನ ಬೆಲೆ ಬರೋಬ್ಬರಿ 8 ಕೋಟಿ ರೂಪಾಯಿ. ಬೆಂಟ್ಲಿ ತಯಾರಿಸುವ ಕಾರುಗಳಲ್ಲೇ ಇದು ಅತೀ ದುಬಾರಿ ಎಂದು ಹೇಳಲಾಗುತ್ತಿದೆ. ರಣ್‌ಬೀರ್ ಕಪೂರ್ ಈ ಕಾರಿನಲ್ಲಿ ಪ್ರಯಾಣ ಮಾಡುತ್ತಿರುವ…

Read More

ಬಿಗ್ ಬಾಸ್ ಸ್ಪರ್ಧಿ, ಸೋಷಿಯಲ್ ಮೀಡಿಯಾದಲ್ಲಿ ಖ್ಯಾತಿ ಘಳಿಸಿದ್ದ ಸೋನು ಶ್ರೀನಿವಾಸ್ ಗೌಡ ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆ ತಾಯಿಯನ್ನು ಕೌನ್ಸಿಲಿಂಗ್ ಗೆ ಒಳಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ. ಕೌನ್ಸಿಲಿಂಗ್‌ನಲ್ಲಿ ಹಲವು ಅಂಶಗಳನ್ನು ಚರ್ಚಿಸಲಿದ್ದು, ತಂದೆ ತಾಯಿ ತಪ್ಪು ಮಾಡಿದ್ದರೆ ಕ್ರಮ, ಇಲ್ಲವಾದಲ್ಲಿ ತಂದೆ ತಾಯಿಗೆ ಮಗುವನ್ನ ವಾಪಸ್ ಕೊಡಿಸಲು ರಕ್ಷಣಾ ಆಯೋಗ ಮುಂದಾಗಿದೆ. ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ಸೋನು ಶ್ರೀನಿವಾಸ್ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಮಗುವಿನ ತಂದೆ ತಾಯಿಯನ್ನು ಕೌನ್ಸಿಲಿಂಗ್ ಮಾಡಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ ಮುಂದಾಗಿದೆ. ಮಗುವನ್ನು ಸೋನು ಶ್ರೀನಿವಾಸ್ ಗೌಡ ಕರೆದುಕೊಂಡು ಹೋದ ಮೇಲೆ ಪೋಷಕರು ಯಾಕೆ ದೂರು ನೀಡಲಿಲ್ಲ? ಅವರಿಂದ ಆಮಿಷಕ್ಕೆ ಒಳಗಾಗಿದ್ರಾ ಎಂಬ ಆಯಾಮದಲ್ಲಿ ಕೌನ್ಸಿಲಿಂಗ್ ಮಾಡಿ ಮಗುವನ್ನು ರಕ್ಷಣೆ ಮಾಡೋಕೆ ಮುಂದಾಗಿದ್ದಾರೆ. ಸದ್ಯ ಮಗು ಬಾಲಿಕ ಆಶ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿ ನಿಗಾದಲ್ಲಿದೆ. ದತ್ತು ಪಡೆಯುವಾಗ…

Read More

ನಟಿ ಪೂಜಾ ಹೆಗ್ಡೆ ಟಾಲಿವುಡ್ ಚಿತ್ರರಂಗಕ್ಕೆ ಮತ್ತೆ ಮರಳಿದ್ದಾರೆ. ಬಾಲಿವುಡ್ ಗೆ ಹೋಗಿದ್ದ ಪೂಜಾ ಹೆಗ್ಡೆ ಅಲ್ಲಿ ಸಕ್ಸಸ್ ಕಾಣದ ಕಾರಣ ಮತ್ತೆ ಟಾಲಿವುಡ್ ಚಿತ್ರರಂಗಕ್ಕೆ ಮರಳಿದ್ದ ನಟಿ ನಾಗಚೈತನ್ಯ ಜೊತೆ ಡ್ಯೂಯೆಟ್ ಹಾಡಲಿದ್ದಾರೆ. ಸಿನಿಮಾ ಕೆರಿಯರ್ ಶುರು ಮಾಡಿದ ನಟನ ಜೊತೆಯೇ ಪೂಜಾ ಹೆಗ್ಡೆ ರೊಮ್ಯಾನ್ಸ್ ಮಾಡೋಕೆ ಮುಂದಾಗಿದ್ದಾರೆ. ಈ ಹಿಂದೆ ತೆರೆಕಂಡಿದ್ದ ‘ಒಕಾ ಲೈಲಾ ಕೋಸಂ’ ಚಿತ್ರದಲ್ಲಿ ನಾಗಚೈತನ್ಯಗೆ ಜೋಡಿಯಾಗುವ ಮೂಲಕ ಪೂಜಾ ಹೆಗ್ಡೆ ಟಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದರು. ಇದೀಗ 10 ವರ್ಷಗಳ ನಂತರ ನಾಗಚೈತನ್ಯ ನಟನೆಯ ಹೊಸ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿಯಾಗಿದ್ದಾರೆ. ‘ವಿರೂಪಾಕ್ಷ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ನಿರ್ದೇಶಕ ಕಾರ್ತಿಕ್ ವರ್ಮಾ ದಂಡು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಆ್ಯಕ್ಷನ್ ಜೊತೆ ಲವ್ ಸ್ಟೋರಿ ಸಿನಿಮಾ ತೋರಿಸೋಕೆ ನಿರ್ದೇಶಕರು ಮುಂದಾಗಿದ್ದು, ಸದ್ಯದಲ್ಲೇ ಸಿನಿಮಾ ಶೂಟಿಂಗ್ ಶುರುವಾಗಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ಯೋಚಿಸಿದ್ದಾರೆ.

Read More