Author: Author AIN

ನೈಟ್ ಕ್ಲಬ್ ನವೀಕರಣದ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಪರಿಣಾಮ 25 ಮಂದಿ ಸಜೀವ ದಹನವಾಗಿ ಹಲವರು ಗಾಯಗೊಂಡಿರುವ ಘಟನೆ ಇಸ್ತಾಂಬುಲ್ ಸಂಭವಿಸಿದೆ. ಬೆಂಕಿಯಿಂದ ಕನಿಷ್ಠ ಎಂಟು ಜನರು ಗಾಯಗೊಂಡಿದ್ದು, ಅವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಅನಾಡೋಲು ಏಜೆನ್ಸಿ ವರದಿ ಮಾಡಿದೆ. ನವೀಕರಣಕ್ಕಾಗಿ ಮುಚ್ಚಲ್ಪಟ್ಟ ನೈಟ್ ಕ್ಲಬ್, ನಗರದ ಯುರೋಪಿಯನ್ ಬದಿಯಲ್ಲಿರುವ ಬೆಸಿಕ್ಟಾಸ್ ಜಿಲ್ಲೆಯ 16 ಅಂತಸ್ತಿನ ವಸತಿ ಕಟ್ಟಡದ ನೆಲ ಮಹಡಿಯಲ್ಲಿತ್ತು. ಇಸ್ತಾಂಬುಲ್ ಮೇಯರ್ ಎಕ್ರೆಮ್ ಇಮಾಮೊಗ್ಲು ಅವರು ಬೆಂಕಿಯನ್ನು ನಂದಿಸಲಾಗಿದೆ ಮತ್ತು ಗಾಯಗೊಂಡವರಿಗೆ ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು. ಘಟನೆಯ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ನಗರದ ರಾಜ್ಯಪಾಲರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಸುರಕ್ಷತಾ ಮುನ್ನೆಚ್ಚರಿಕೆಯಾಗಿ ನೆರೆಹೊರೆಯವರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂಬ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ  ಪೊಲೀಸರು ಪ್ರದೇಶವನ್ನು ನಿರ್ಬಂಧಿಸಿದ್ದು,  ಕ್ಲಬ್‌ನ ವ್ಯವಸ್ಥಾಪಕರು ಸೇರಿದಂತೆ ಹಲವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.  ಬೆಂಕಿಯಲ್ಲಿ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ ಮತ್ತು  ಒಬ್ಬ…

Read More

ತೈವಾನ್‌ ನ ಕರಾವಳಿ ಪ್ರದೇಶದಲ್ಲಿ ಇಂದು ಬೆಳಗ್ಗೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು ಯಾವುದೇ ಸಾವು ನೋವುಗಳಾದ ಬಗ್ಗೆ ವರದಿಯಾಗಿಲ್ಲ. ರಾಜಧಾನಿ ತೈಪೆ ಸೇರಿದಂತೆ ಪೂರ್ವ ತೈವಾನ್‌ನ ಹಲವು ಭಾಗಗಳಲ್ಲಿ ಭೂಕಂಪನ ಸಂಭವಿಸಿದೆ. ಪೂರ್ವ ತೈವಾನ್‌, ತೈಪೆ, ಓಕಿನಾವಾ ಸೇರಿದಂತೆ ಹಲವಾರು ಪ್ರದೇಶಗಳ ಕಟ್ಟಡಗಳು ಕುಸಿದಿದ್ದು, ಯಾವುದೇ ಅನಾಹುತದ ಬಗ್ಗೆ ವರದಿಗಳು ಲಭ್ಯವಾಗಿಲ್ಲ. ಕಟ್ಟಡ ಕುಸಿದಿರುವ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಭೂಮಿಯ ಮೇಲ್ಮೈಯಿಂದ ಸುಮಾರು 16 ಕಿ.ಮೀ ಆಳದಲ್ಲಿ ತೈಪೆಯ ಸಮೀಪ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ತೈವಾನ್‌ ಹವಮಾನ ಇಲಾಖೆ ವರದಿ ಮಾಡಿದೆ ಎಂದು ರಾಯಿಟರ್ಸ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ. ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.

Read More

ಬಿಗ್ ಬಾಸ್ ಸೀಸನ್ 10ರಲ್ಲಿ ಕಾಣಿಸಿಕೊಂಡಿದ್ದ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ಇದೀಗ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಧ್ಯಾಯ ಶುರು ಮಾಡಲು ಸಜ್ಜಾಗಿದ್ದಾರೆ. ಬುಲೆಟ್ ಪ್ರಕಾಶ್ ಪುತ್ರ ಹೀರೋ ಆಗಿ ಬೆಳ್ಳಿಪರದೆಯಲ್ಲಿ ಮಿಂಚಲು ರೆಡಿಯಾಗಿದ್ದು, ಬುಲೆಟ್ ಪ್ರಕಾಶ್ ಅವರ 47ನೇ ವರ್ಷದ ಹುಟ್ಟುಹಬ್ಬದ ದಿನವೇ ರಕ್ಷಕ್ ತಮ್ಮ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಎಲ್ಲಾ ನನ್ನ ಆತ್ಮೀಯರೇ, ಇಂದು (ಏ.2) ನನ್ನ ಪೂಜ್ಯ ತಂದೆ ದಿವಂಗತ ‘ಬುಲೆಟ್’ ಪ್ರಕಾಶ್ ಅವರ 47ನೇ ಜನ್ಮದಿನ. ಇಂದಿನ ವಿಶೇಷವೇನೆಂದರೆ, ನಾನು ನಾಯಕ ನಟನಾಗಿ ನಟಿಸುತ್ತಿರುವ ನನ್ನ ಚೊಚ್ಚಲ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುತ್ತಿರುವುದು. ನಿಜಕ್ಕೂ ನನಗೆ ಸಂತಸ ತಂದಿದೆ. ನನ್ನ ತಂದೆಯ ಆಶೀರ್ವಾದದೊಂದಿಗೆ ನಿಮ್ಮೆಲ್ಲರ ಆಶೀರ್ವಾದ ಕೂಡ ಸದಾ ನನ್ನ ಮೇಲಿರಲಿ ಎಂದು ಬಯಸುತ್ತೇನೆ. ನನಗೂ ಹಾಗೂ ನನ್ನ ಇಡೀ ಚಿತ್ರತಂಡಕ್ಕೂ ಹರಸಿ, ಹಾರೈಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದು ರಕ್ಷಕ್ ಬರೆದುಕೊಂಡಿದ್ದಾರೆ. ತಮ್ಮ ಮೊದಲ ಸಿನಿಮಾದ ಮೂಲಕ ರಕ್ಷಕ್ ಮಾಸ್ ಆಗಿ ಸ್ಯಾಂಡಲ್ ವುಡ್ ಗೆ…

Read More

ಬಾಲಿವುಡ್ ನಟಿ ಸದ್ಯ ಹಾಲಿವುಡ್ ಚಿತ್ರರಂಗದಲ್ಲಿ ಸೆಟಲ್ ಆಗಿರುವ ನಟಿ ಪ್ರಿಯಾಂಕಾ ಚೋಪ್ರಾ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಪ್ರಿಯಾಂಕ ಚೋಪ್ರಾ ಸಹೋದರನ ಎಂಗೇಜ್‌ಮೆಂಟ್ ಸಂಭ್ರಮದಲ್ಲಿ ಭಾಗಿಯಾಗಿದ್ದು ಎಂಗೇಜ್ ಮೆಂಟ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿದೇಶದಲ್ಲಿ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ ಕಳೆದ ಕೆಲದಿನಗಳ ಹಿಂದೆ ಪತಿ ಹಾಗೂ ಮಗಳು ಜೊತೆ ಭಾರತಕ್ಕೆ ಆಗಮಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಕಾರ್ಯಕ್ರಮಗಳಿಗೆ ನಟಿ ಹಾಜರಾಗುತ್ತಿದ್ದಾರೆ. ಆಭರಣ ಮಳಿಗೆ ಚಾಲನೆ, , ಅಂಬಾನಿ ಕುಟುಂಬದ ಪಾರ್ಟಿ, ಮನ್ನಾರಾ ಚೋಪ್ರಾ ಬರ್ತ್‌ಡೇ ಸೆಲೆಬ್ರೇಶನ್‌ಗಳಲ್ಲಿ ನಟಿ ಭಾಗಿಯಾಗಿದ್ದು ಇದೀಗ ಸಹೋದರನ ಎಂಗೇಜ್ ಮೆಂಟ್ ನಲ್ಲಿ ಭಾಗಿಯಾಗಿದ್ದಾರೆ. ಪ್ರಿಯಾಂಕ ಚೋಪ್ರಾ ಸಹೋದರ ಸಿದ್ಧಾರ್ಥ್ ಚೋಪ್ರಾ ಎಂಗೇಜ್‌ಮೆಂಟ್ ಮುಂಬೈನಲ್ಲಿ ಅದ್ಧೂರಿಯಾಗಿ ಜರುಗಿದೆ. ಬಹುಕಾಲದ ಗೆಳತಿ ನೀಲಂ ಜೊತೆ ಸಿದ್ಧಾರ್ಥ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ವೇಳೆ, ಪ್ರಿಯಾಂಕಾ ಪತಿ ನಿಕ್ ಹಾಗೂ ಮಗಳು ಮಾಲ್ತಿ ಜೊತೆ ಹಾಜರಾಗಿದ್ದಾರೆ.

Read More

ಟಾಲಿವುಡ್ ನಟ ವಿಜಯ್ ದೇವರಕೊಂಡ ಹಾಗೂ ಮೃಣಾಲ್ ಠಾಕೂರ್ ಫ್ಯಾಮಿಲಿ ಸ್ಟಾರ್ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಪ್ರಚಾರದ ವೇಳೆ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ವಿಜಯ್ ನಟಿ ಮೃಣಾಲ್ ಅವರ ತುಟಿ, ಕಣ್ಣು ಮತ್ತು ಮೂಗಿನ ಬಗ್ಗೆ ವರ್ಣನೆ ಮಾಡಿದ್ದಾರೆ. ಅಲ್ಲದೆ ಮೃಣಾಲ್ ಸೌಂದರ್ಯಕ್ಕೆ ಫಿದಾ ಆಗಿರೋದಾಗಿ ಹೇಳಿದ್ದಾರೆ. ಮೃಣಾಲ್‌ಗೆ ಚಿಕ್ಕ ವಯಸ್ಸಿನಿಂದಲೂ ನಟನೆ ಎಂದರೆ ತುಂಬಾ ಇಷ್ಟ. ಭಾಷೆ ತಿಳಿಯದಿದ್ದರೂ ಅದನ್ನು ಅರಿತು ಚೆನ್ನಾಗಿ ನಟಿಸುತ್ತಾರೆ. ಅದು ನನಗೆ ಹಲವು ಬಾರಿ ಅಚ್ಚರಿ ಮೂಡಿಸಿದೆ ಎಂದು ಮೃಣಾಲ್ ಬಗ್ಗೆ ವಿಜಯ್ ಹೇಳಿದ್ದಾರೆ. ನಿರ್ದೇಶಕರು ಏನೇ ಹೇಳಿದ್ದರು ಅದನ್ನು ಅರ್ಥ ಮಾಡಿಕೊಂಡು ನಟಿಸುವ ಸಾಮಾರ್ಥ್ಯ ಅವರಿಗಿದೆ. ಬ್ಯೂಟಿ ಅವರಿಗೆ ದೇವರು ಕೊಟ್ಟ ಕೊಡುಗೆ. ಮೃಣಾಲ್ ಕಣ್ಣು, ಮೂಗು, ತುಟಿ ಎಲ್ಲವೂ ಅವರಿಲ್ಲಿರುವ ಅದ್ಭುತ ಎಂದು ವಿಜಯ್ ದೇವರಕೊಂಡ ಹೇಳಿದ್ದಾರೆ. ವಿಜಯ್ ಮೃಣಾಲ್ ಅವರನ್ನು ಹೊಗಳಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ರಶ್ಮಿಕಾ ಮಂದಣ್ಣ ಕಥೆಯೇನು? ಎಂದು ನೆಟ್ಟಿಗರು ವಿಜಯ್‌ ಕಾಲೆಳೆದಿದ್ದಾರೆ.

Read More

ಬಾಲಿವುಡ್ ನಟಿ ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಮಧ್ಯೆ ಎಲ್ಲವು ಸರಿ ಇಲ್ಲ. ಈ ಜೋಡಿ ಡಿವೋರ್ಸ್ ಪಡೆದುಕೊಳ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ತಮ್ಮ ಕುಟುಂಬದ ಮುದ್ದಿನ ಸೊಸೆಯ ಬಗ್ಗೆ ಈಗಾಗಲೇ ನಟ ಅಮಿತಾಬ್ ಬಚ್ಚನ್ ಹಾಗೂ ಜಯಾ ಬಚ್ಚನ್ ಹಾಡಿ ಹೊಗಳಿದ್ದಾರೆ. ಆದರೆ ಅಮಿತಾಭ್​ ಬಚ್ಚನ್​ ಅವರ ಪುತ್ರಿ ಶ್ವೇತಾ ಅವರಿಗೆ ಐಶ್ವರ್ಯ ರೈ ಕಂಡರೆ ಹೊಟ್ಟೆ ಉರಿ ಎಂಬ ಸುದ್ದಿ ಸಾಕಷ್ಟು ಸಮಯದಿಂದ ಕೇಳಿ ಬಂದಿದೆ. ಅಭಿಷೇಕ್ ಬಚ್ಚನ್ ಅವರು ಐಶ್ವರ್ಯಾರನ್ನು ಮದುವೆಯಾಗುವುದನ್ನು ಶ್ವೇತಾ ಬಯಸಿರಲಿಲ್ಲವಂತೆ.  ಅಭಿಷೇಕ್ ಅವರು ತಮ್ಮ  ಮಾಜಿ ಗೆಳತಿ ಕರಿಷ್ಮಾ ಕಪೂರ್ ಅವರನ್ನು ಮದುವೆಯಾಗಬೇಕು ಎನ್ನುವುದು ಅವರ ಆಸೆಯಾಗಿತ್ತು. ಇವರಿಬ್ಬರ ಸಂಬಂಧ ಅವರಿಗೆ ಇಷ್ಟವಿತ್ತು. ಏಕೆಂದರೆ  ಶ್ವೇತಾ ಯಾವಾಗಲೂ ಕರಿಷ್ಮಾ ಅವರನ್ನು ಪರಿಪೂರ್ಣ ಬಚ್ಚನ್ ಬಹು ಎಂದು ಪರಿಗಣಿಸುತ್ತಿದ್ದರು. ಅಭಿಷೇಕ್ ಕಪೂರ್ ಕುಟುಂಬದ ಅಳಿಯನಾಗಬೇಕೆಂದು ಅವರು ಬಯಸಿದ್ದರು. ಅಭಿಷೇಕ್​ ಅವರು ಐಶ್ವರ್ಯರನ್ನು ಮದುವೆಯಾಗುವ ಪಟ್ಟು ಹಿಡಿದಾಗ,  ಆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನೆಯವರ…

Read More

‘ಗಾಜಾದ ಶಿಫಾ ಆಸ್ಪತ್ರೆಯಲ್ಲಿ ನಿಯೋಜಿಸಿದ್ದ ತನ್ನ ಯೋಧರನ್ನು ಇಸ್ರೇಲ್‌ ಹಿಂದಕ್ಕೆ ಕರೆಯಿಸಿಕೊಂಡಿದೆ’ ಎಂದು ಪ್ಯಾಲೆಸ್ಟೀನ್‌ ನಾಗರಿಕರು ತಿಳಿಸಿದ್ದಾರೆ. ‘ಕಳೆದ ಎರಡು ವಾರಗಳಿಂದ ಇಸ್ರೇಲ್‌ ಸೇನೆ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದು, ಅನೇಕರನ್ನು ಹತ್ಯೆ ಮಾಡಿದೆ’ ಎಂದೂ ಅವರು ದೂರಿದ್ದಾರೆ. ‘ಕಳೆದ ಆರು ತಿಂಗಳ ಯುದ್ಧದಲ್ಲಿ ಶಿಫಾ ಆಸ್ಪತ್ರೆ ಮೇಲೆ ನಡೆಸಿದ ದಾಳಿ ನಮ್ಮ ಅತ್ಯಂತ ಯಶಸ್ವಿ ಕಾರ್ಯಾಚರಣೆಗಳಲ್ಲಿ ಒಂದಾಗಿದೆ. ಈ ದಾಳಿಯ ಸಂದರ್ಭದಲ್ಲಿ ಹಮಾಸ್‌ ಮತ್ತು ಇತರ ಸಂಘಟನೆಗಳ ಉಗ್ರರನ್ನು ಕೊಂದಿದ್ದೇವೆ’ ಎಂದು ಇಸ್ರೇಲ್‌ ಸೇನೆ ಹೇಳಿಕೊಂಡಿದೆ. ‘ಹಮಾಸ್‌ ಮತ್ತು ಇಸ್ಲಾಮಿಕ್‌ ಜಿಹಾದ್‌ ಉಗ್ರ ಸಂಘಟನೆಗಳು ಆಸ್ಪತ್ರೆಯಲ್ಲೇ ತಮ್ಮ ಉತ್ತರ ಭಾಗದ ಮುಖ್ಯ ಕಚೇರಿಯನ್ನು ಸ್ಥಾಪಿಸಿದ್ದವು. ಆಸ್ಪತ್ರೆಯಲ್ಲಿ ನಡೆದ ವಿನಾಶಕ್ಕೆ ಹಮಾಸ್‌ ಉಗ್ರರೇ ಕಾರಣ’ ಎಂದು ಸೇನೆಯ ವಕ್ತಾರ ರೇರ್‌ ಅಡ್ಮಿರಲ್‌ ಡೇನಿಯಲ್‌ ಹಗಾರಿ ತಿಳಿಸಿದ್ದಾರೆ. ‘ದಾಳಿ ವೇಳೆ ನಮ್ಮ ಯೋಧರು 900 ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಜತೆಗೆ, ವಿವಿಧ ಕರೆನ್ಸಿಯ 30 ಲಕ್ಷ ಅಮೆರಿಕನ್‌ ಡಾಲರ್‌ ಮತ್ತು ಶಸ್ತ್ರಾಸ್ತ್ರಗಳನ್ನು ಸಹ…

Read More

ಫೋನ್‌ಪೇ ಅಪ್ಲಿಕೇಶನ್ ಬಳಕೆದಾರರು ಇದೀಗ UPI ಅನ್ನು ಬಳಸಿಕೊಂಡು UAEಯ ಟರ್ಮಿನಲ್‌ಗಳಲ್ಲಿ ಪಾವತಿಗಳನ್ನು ಮಾಡಬಹುದು ಎಂದು ತಿಳಿಸಿದ್ದು, ಯುಎಇಯಲ್ಲಿರುವ ಭಾರತೀಯ ವಲಸಿಗರಿಗೆ ವಹಿವಾಟಿನ ಸುಲಭ ಮತ್ತು ಅನುಕೂಲತೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಇದನ್ನು ಜಾರಿ ತಂದಿದೆ. PhonePe ಅಪ್ಲಿಕೇಶನ್ ಬಳಕೆದಾರರು ಇದೀಗ UPI ಅನ್ನು ಬಳಸಿಕೊಂಡು Mashreq ನ NEOPAY ಟರ್ಮಿನಲ್‌ಗಳಲ್ಲಿ ಪಾವತಿಗಳನ್ನು ಮಾಡಬಹುದಾಗಿದೆ ಮತ್ತು ಚಿಲ್ಲರೆ ಅಂಗಡಿಗಳು, ಊಟದ ಮಳಿಗೆಗಳು ಮತ್ತು ಪ್ರವಾಸಿ ಸ್ಥಳಗಳಲ್ಲಿ ಬಳಸಿಕೊಳ್ಳಬಹುದಾಗಿದೆ. QR ಕೋಡ್ ಅನ್ನು ಸ್ಕ್ಯಾನ್ ಕೂಡ ಮಾಡಬಹುದಾಗಿದೆ. ಖಾತೆಯ ಡೆಬಿಟ್ INR ನಲ್ಲಿ ಮತ್ತು ಕರೆನ್ಸಿ ವಿನಿಮಯ ದರವನ್ನು ತೋರಿಸಲಾಗುತ್ತದೆ. ಯುಎಇಯಲ್ಲಿರುವ ಭಾರತೀಯ ವಲಸಿಗರಿಗೆ ವಹಿವಾಟಿನ ಸುಲಭ ಮತ್ತು ಅನುಕೂಲತೆಯನ್ನು ಹೆಚ್ಚಿಸುವ ಗುರಿಯನ್ನು ಇದು ಹೊಂದಿದೆ. NPCI ಇಂಟರ್ನ್ಯಾಷನಲ್ ಪೇಮೆಂಟ್ಸ್ ಲಿಮಿಟೆಡ್ ನೊಂದಿಗೆ ಮಶ್ರೆಕ್ ಅವರ ಪಾಲುದಾರಿಕೆಯ ಮೂಲಕ ಇದನ್ನು ಜಾರಿತರಲಾಗಿದೆ. Mashreq ಯುಪಿಐ ಅಪ್ಲಿಕೇಶನ್‌ಗಳನ್ನು ಪಾವತಿ ಸಾಧನವಾಗಿ ಸ್ವೀಕರಿಸಲು NEOPAY ಟರ್ಮಿನಲ್‌ಗಳನ್ನು ಸಕ್ರಿಯಗೊಳಿಸಿದ್ದು, ಭಾರತೀಯ ಪ್ರಯಾಣಿಕರು ವಹಿವಾಟುಗಳಿಗಾಗಿ UPI ಅನ್ನು ಬಳಸಲು ಅನುಮತಿಸಿದೆ.…

Read More

ಲೋಕಸಭಾ ಚುನಾವಣೆಗೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಕ್ಷೇತ್ರದ 4 ಪ್ರಮುಖ ವ್ಯಕ್ತಿಗಳನ್ನು ರಾಯಭಾರಿಯಾಗಿ ನಿಯೋಜನೆ ಮಾಡಲಾಗಿದೆ.  ಖ್ಯಾತ ನಟ, ನಿರ್ದೇಶಕ ರಮೇಶ್ ಅರವಿಂದ್, ಬಿಗ್ ಬಾಸ್ ಸ್ಪರ್ಧಿ ನೀತು ವನಜಾಕ್ಷಿ ಸೇರಿದಂತೆ ನಾಲ್ವರನ್ನು ಜಿಲ್ಲಾ ಚುನಾವಣಾಧಿಕಾರಿ ಮತ್ತು ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ರಾಯಭಾರಿಗಳ ನೇಮಕ ಮಾಡಿದ್ದಾರೆ. ಮತದಾನ ಮಾಡುವ ಸಲುವಾಗಿ ನಗರದ ಜನತೆಗೆ ಹುಮ್ಮಸ್ಸು ತುಂಬಿಸುವ ಸಲುವಾಗಿ ಹಾಗೂ ಚುನಾವಣಾ ಹಬ್ಬಕ್ಕಾಗಿ ಈ 4 ಪ್ರಮುಖ ವ್ಯಕ್ತಿಗಳು ರಾಯಭಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ‘ನಮ್ಮ ಬೆಂಗಳೂರು ಐಕಾನ್ಸ್’ ಹೆಸರಿನಲ್ಲಿ ನಟ, ರಮೇಶ್ ಅರವಿಂದ್, ನಟಿ ಹಾಗೂ ರೂಪದರ್ಶಿ ನೀತು ವನಜಾಕ್ಷಿ, ಬ್ಯಾಡ್ಮಿಂಟನ್ ಆಟಗಾರ ಅನುಪ್ ಶ್ರೀಧರ್ ಹಾಗೂ ಟೇಬಲ್ ಟೆನ್ನಿಸ್ ಆಟಗಾರ್ತಿ ಅರ್ಚನಾ ಜಿ ಕಾಮತ್ ರಾಯಭಾರಿ ಆಗಿ ಆಯ್ಕೆಯಾಗಿದ್ದಾರೆ.

Read More

ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶೀವಣ್ಣ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದು ಇದೇ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಡಿಸ್ಚಾರ್ಜ್ ಆದ ನಂತರ ಚುನಾವಣೆ ಪ್ರಚಾರಕ್ಕೆ ತೆರಳೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಲೋಸಕಭಾ ಚುನಾವಣೆಯ ಪ್ರಚಾರ ಮತ್ತು ಬಿಡುವಿಲ್ಲದ ಚಿತ್ರೀಕರಣದಿಂದಾಗಿ ಸುಸ್ತಾಗಿದ್ದ ನಟ ಶಿವರಾಜ್ ಕುಮಾರ್ ವೈದ್ಯರ ಸಲಹೆ ಮೇರೆಗೆ ಒಂದು ದಿನ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿ ಚಿಕಿತ್ಸೆ ಪಡೆದಿದ್ದಾರೆ. ನಿನ್ನೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಇಂದು ಮನೆಗೆ ವಾಪಸ್ಸಾಗಿದ್ದಾರೆ. ನಿನ್ನೆ ಚಿಕಿತ್ಸೆ ಪಡೆದು ಇಂದು ಬೆಳಿಗ್ಗೆ ಮನೆಗೆ ತೆರಳಲಿದ್ದಾರೆ ಶಿವರಾಜ್ ಕುಮಾರ್. ಚಿಕಿತ್ಸೆ ನಂತರ ಶಿವರಾಜ್ ಕುಮಾರ್ ಆರಾಮಾಗಿದ್ದಾರೆ. ಯಾವುದೇ ಆತಂಕ ಪಡುವಂಥದ್ದು ಇಲ್ಲ ಎಂದು ಶಿವಣ್ಣ ಆಪ್ತರು ತಿಳಿಸಿದ್ದಾರೆ.

Read More