ಬೆಳಗಾವಿ : ಸುವರ್ಣ ವಿಧಾನಸೌಧ ಬಳಿ ಪೆಟ್ರೋಲ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿದೆ. ಬೆಳಗಾವಿ ತಾಲೂಕಿನ ಹಲಗಾ ಬಳಿ ಇರುವ ಸುವರ್ಣ ವಿಧಾನಸೌಧದ ಹೆದ್ದಾರಿಯಲ್ಲಿ ನಡೆದಿದೆ. https://ainlivenews.com/a-tipper-lorry-collided-with-a-pedestrian-gram-panchayat-chairperson-dies/ ಧಾರವಾಡ ಕಡೆಯಿಂದ ಬೆಳಗಾವಿಯತ್ತ ಬರುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಭಾರಿ ಅನಾಹುತ ತಪ್ಪಿದೆ. ಟ್ಯಾಂಕರ್ ವಾಹನ ಪಲ್ಟಿಯಾದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿ ಬಂದ್ ಮಾಡಿ ಕ್ರೇನ್ ಮೂಲಕ ಲಾರಿ ಮೇಲೆತ್ತಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Author: Author AIN
ಬೆಂಗಳೂರು, ಫೆಬ್ರವರಿ 19: ವೈಟ್ಫೀಲ್ಡ್ನ ಮೆಡಿಕವರ್ ಆಸ್ಪತ್ರೆಯಲ್ಲಿ ಇಂದು ಕಿಮೋಥೆರಪಿ ಡೇ ಕೇರ್ ಸೆಂಟರ್ ಅಧಿಕೃತವಾಗಿ ಉದ್ಘಾಟನೆಯಾಯಿತು. ಈ ಕಾರ್ಯಕ್ರಮಕ್ಕೆ ಆಸ್ಪತ್ರೆಯ ಮುಖ್ಯಸ್ಥ ಮತ್ತು ಅಸೋಸಿಯೇಟ್ ಉಪಾಧ್ಯಕ್ಷ ಶ್ರೀ ಕೃಷ್ಣಮೂರ್ತಿ ಜಿ, ಮೆಡಿಕವರ್ ಗ್ರೂಪ್ನ ಮುಖ್ಯ ಹಣಕಾಸು ಅಧಿಕಾರಿ, ಶ್ರೀ ನೀರಾಜ್ ಜೈಸುವಾಲ್, ವೈದ್ಯಕೀಯ ಅಧೀಕ್ಷಕಿ ಡಾ. ಶೃತಿ ಕೊಯ್ಲಿ ಮತ್ತು ಆನ್ಕೊಲೊಜಿಸ್ಟ್ ಡಾ. ಕಾಕೋಲಿ ಯವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಆಸ್ಪತ್ರೆಯ ಎಲ್ಲಾ ಹಿರಿಯ ವೈದ್ಯರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಈ ಸಮಾರಂಭದಲ್ಲಿ ಭಾಗವಹಿಸಿದರು. ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಜಿ ಮಾತನಾಡಿ,ಇದು ಕೇವಲ ಒಂದು ಪ್ರಾರಂಭ ಮಾತ್ರ.ಭವಿಷ್ಯದಲ್ಲಿ ಮೆಡಿಕವರ್ ಆಸ್ಪತ್ರೆಯಲ್ಲಿ ಇನ್ನಷ್ಟು ವೈದ್ಯಕೀಯ ವಿಭಾಗಗಳು ಸ್ಥಾಪನೆಯಾಗಲಿವೆ. ನಮ್ಮ ಆಸ್ಪತ್ರೆಗೆ ಬರುವ ರೋಗಿಗಳಿಗೆ ತಕ್ಷಣ ಮತ್ತು ಸೂಕ್ತ ಚಿಕಿತ್ಸೆ ದೊರೆಯುವಂತೆ ಎಲ್ಲ ಸೌಲಭ್ಯಗಳನ್ನು ನಾವು ಒದಗಿಸುವ ಭರವಸೆ ನೀಡುತ್ತೇವೆ ಎಂದು ತಿಳಿಸಿದರು. ಮೆಡಿಕವರ್ ಗ್ರೂಪ್ CFO ಶ್ರೀ ನೀರಾಜ್ ಜೈಸುವಾಲ್ ಅವರು,ವೈಟ್ಫೀಲ್ಡ್ನಲ್ಲಿ ಮೆಡಿಕವರ್ ಆಸ್ಪತ್ರೆ ಅತ್ಯಾಧುನಿಕ…
ಸ್ಯಾಂಡಲ್ವುಡ್ ಸ್ಟಾರ್ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಸಮುದ್ರ ತೀರದಲ್ಲಿ ಪತ್ನಿ ಜೊತೆಗೆ ರೊಮ್ಯಾನ್ಸ್ ಮಾಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ವಿವಾಹ ವಾರ್ಷಿಕೋತ್ಸವವನ್ನು ಇಬ್ಬರು ಮುದ್ದು ಮಕ್ಕಳ ಜೊತೆ ಸಮುದ್ರದ ದಡದಲ್ಲಿ ಸೆಲೆಬ್ರೇಟ್ ಮಾಡಿದ್ದಾರೆ. ಹಲವು ವರ್ಷಗಳ ಕಾಲ ಪ್ರೀತಿಸಿ 2017ರಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಪ್ರೀತಿಸಿ, ಗುರು ಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕುಂದಾಪುರದಲ್ಲಿ ಪ್ರಗತಿ ಹಾಗೂ ರಿಷಬ್ ಅವರ ಮದುವೆ ಅದ್ಧೂರಿಯಾಗಿ ನಡೆದಿತ್ತು. ಈ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಇನ್ನು, ವಿವಾಹ ವಾರ್ಷಿಕೋತ್ಸದ ಅಂಗವಾಗಿ ಕಡಲ ತೀರದಲ್ಲಿ ಕೇಕ್ ಕಟ್ ಮಾಡಿ ಸಂಭ್ರಮಿಸಿದೆ. ಅಲ್ಲದೇ ಬ್ಯೂಟಿಫುಲ್ ಲೊಕೇಶನ್ ರಿಷಬ್ ದಂಪತಿ ಮಕ್ಕಳ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಸ್ಪೆಷಲ್ ಫೋಟೋದಲ್ಲಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಫೋಟೋದಲ್ಲಿ ಪ್ರಗತಿ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಬಿಳಿ ಬಣ್ಣದ ಮೇಲೆ ಕೆಂಪು ಬಣ್ಣದ ಹಾರ್ಟ್…
ಬೆಂಗಳೂರು: ರಕ್ಷಣಾ ಮಂತ್ರಿ ಕಾನ್ವೇ ಹೋಗುವಾಗ ಹೆಡ್ ಕಾನ್ಸಟೇಬಲ್ ಮೇಲೆ ಬೈಕ್ ಹತ್ತಿಸಿದ್ದ ಪುಂಡನನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಹಮ್ಮದ್ ದಿಲ್ವಾರ್ ಹುಸೇನ್ ಬಂಧಿತಆರೋಪಿಯಾಗಿದ್ದು, ಫೆಬ್ರವರಿ 9ರಂದು ಸೆಂಟ್ರಲ್ ಸ್ಟ್ರೀಟ್ನ ಬಿಆರ್ವಿ ಜಂಕ್ಷನ್ನಿಂದ ಅನಿಲ್ ಕುಂಬ್ಳೆ ಸರ್ಕಲ್ ನಡುವಿನ ಮಾರ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಾಜಿನಗರ ಸಂಚಾರ ಠಾಣೆಯ ಹೆಡ್ ಕಾನ್ಸ್ಟೇಬಲ್ ದಿನೇಶ್ ಅವರತ್ತ ಆರೋಪಿ ತನ್ನ ಸ್ಕೂಟರ್ ನುಗ್ಗಿಸಿದ್ದ. https://ainlivenews.com/bumper-offer-from-modi-government-women-will-get-rs-7000-under-this-scheme/ ಇದರಿಂದ ನೆಲಕ್ಕೆ ಬಿದ್ದಿದ್ದ ದಿನೇಶ್ ಅವರ ತಲೆ, ಬಲ ಕಿವಿ, ಕೈಕಾಲಿಗೆ ಗಾಯಗಳಾಗಿದ್ದವು. ಗಾಯಗೊಂಡಿದ್ದ ಹೆಡ್ ಕಾನ್ಸ್ಟೇಬಲ್ ದಿನೇಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದರು. ಸದ್ಯ ಆರೋಪಿಯನ್ನ ಬಂಧಿಸಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಜೈಲಿಗಟ್ಟಿದ್ದಾರೆ.
ಹಾಸನ : ಪಾದಚಾರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಘಟನೆ ನಡೆದಿದೆ. ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮಲ್ಲಿಗಮ್ಮ (58), ಬ್ಯಾಂಕ್ಗೆ ತೆರಳಿ ವಾಪಾಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಮಹಿಳೆಗೆ ಡಿಕ್ಕಿ ಹೊಡೆದದಿದ್ದು, ಮಲ್ಲಿಗಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಿಂದ ಕೆಲಕಾಲ ಸಂಚಾರ ದಟ್ಟಣೆಯುಂಟಾಗಿತ್ತು. ಘಟನಾ ಸ್ಥಳಕ್ಕೆ ಬೇಲೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. https://ainlivenews.com/bjp-protests-against-sale-of-anganwadi-food-in-kalasanthe/ ಬಾಗಲಕೋಟೆ : ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಬಾಗಲಕೋಟೆ ಜಿಲ್ಲೆಯ ಲೊಕಾಪೂರ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ. ಬೆಳಗಾವಿಯಿಂದ ರಾಯಚೂರ್ ಗೆ ತರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಗೆ ನುಗ್ಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಸೇಫ್ ಆಗಿದ್ದಾರೆ.
ಹುಬ್ಬಳ್ಳಿ : ಬಡ ಮಕ್ಕಳಿಗೆ ವಿತರಣೆ ಮಾಡಬೇಕಿದ್ದ ಅಂಗನವಾಡಿ ಆಹಾರ ಪದಾರ್ಥಗಳನ್ನು, ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಗೋಡನ್ ನಲ್ಲಿ ಸಂಗ್ರಹಿಸಿಟ್ಟು, ಪ್ರಕರಣ ಬೆಳಕಿಗೆ ಬರುತ್ತಲೇ ತಲೆ ಮರೆಸಿಕೊಂಡಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಕಾಂಗ್ರೆಸ್ ಮುಖಂಡೆ ಬತುಲ್ಲಾ ಕಿಲ್ಲೆದಾರ ಶ್ರೀಘ್ರ ಬಂಧನಕ್ಕೆ ಆಗ್ರಹಿಸಿ ಮತ್ತು ಅವರ ಹಿಂದೆ ಶಾಸಕ ಪ್ರಸಾದ್ ಅಬ್ಬಯ್ಯ ಕೈವಾಡಯಿದೆ ಅಂತ ಆರೋಪಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. https://ainlivenews.com/give-free-land-to-construction-workers-citu-taluk-president-honnoor-saheb/ ಹುಬ್ಬಳ್ಳಿ ದುರ್ಗದಬೈಲ್ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರ ಆಕ್ರೋಶ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಸಿಎಂ ಸಿದ್ದರಾಮಯ್ಯ, ಶಾಸಕ ಪ್ರಸಾದ ಅಬ್ಬಯ್ಯಯೊಂದಿಗೆ ಇರುವ ಆರೋಪಿ ಫೋಟೋ ಹಿಡಿದು ಘೋಷಣೆ ಕೂಗಿ, ಪ್ರಸಾದ ಅಬ್ಬಯ್ಯ ಅವರ ಪೋಷಿತ ಕಳ್ಳಿ, ಕಾಂಗ್ರೆಸ್ ಪಕ್ಷದ ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದಲೇ ಈ ಕಳ್ಳತನ ನಡೆದಿದೆ ಎಂದು ಆರೋಪಿಸಿದ್ದಾರೆ.
ಮೆಲ್ಬೋರ್ನ್: ಸಮುದ್ರ ತೀರದಲ್ಲಿ ಸುಮಾರು 150 ತಿಮಿಂಗಲಗಳು ಬಂದು ಬಿದ್ದಿರುವ ಘಟನೆ ಆಸ್ಟ್ರೇಲಿಯಾದ ವಾಯುವ್ಯ ಪ್ರಾಂತ್ಯದ ತಾಸ್ಮಾನಿಯಾ ರಾಜ್ಯದ ಅರ್ಥೂರ್ ನದಿ ಸಮುದ್ರವನ್ನು ಸಂಗಮಿಸುವ ಸ್ಥಳದಲ್ಲಿ ನಡೆದಿದೆ. ಈ 150 ತಿಮಿಂಗಿಲಗಳ ಪೈಕಿ 136 ತಿಮಿಂಗಿಲಗಳು ಇನ್ನೂ ಜೀವಂತವಿದ್ದು, ಉಳಿದವು ಮೃತಪಟ್ಟಿವೆ. ಜೀವಂತವಿರುವ ತಿಮಿಂಗಿಲಗಳ ಪೈಕಿ ಕೆಲವು ಜೀವನ್ಮರಣದ ಹೋರಾಟ ನಡೆಸುತ್ತಿವೆ ಎಂದು ಆಸ್ಟ್ರೇಲಿಯಾದ ಪರಿಸರ ಸಚಿವಾಲಯದ ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಿಮಿಂಗಿಲಗಳು ಇಷ್ಟು ದೊಡ್ಡ ಪ್ರಮಾಣದಲ್ಲಿ ಸಮುದ್ರ ತೀರಕ್ಕೆ ಬಂದು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯ ಮೀನುಗಾರರು ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಾಸ್ಮಾನಿಯಾ ರಾಜ್ಯದ ಅರ್ಥೂರ್ ನದಿ ಸಮುದ್ರವು ಜನವಸತಿ ರಹಿತ ಹಾಗೂ ಸಾರಿಗೆ ಸಂಪರ್ಕಗಳಿಲ್ಲದ ಪ್ರದೇಶವಾಗಿರುವುದರಿಂದ, ಅಲ್ಲಿಗೆ ಪರಿಹಾರ ಕಾರ್ಯಾಚರಣೆ ತಂಡ ತಲುವುದಕ್ಕೆ ತುಂಬಾ ಸಮಸ್ಯೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೀಗಿದ್ದೂ, ಕೆಲವು ಮರಿ ತಿಮಿಂಗಿಲಗಳನ್ನು ಆಳ ಸಮುದ್ರಕ್ಕೆ ಡೂಡುವ ಪ್ರಯತ್ನ ನಡೆದಿದೆ ಎಂದು ಅವರು ಹೇಳಿದ್ದಾರೆ ಇಷ್ಟೊಂದು ದೊಡ್ಡ ಪ್ರಮಾಣದ ತಿಮಿಂಗಿಲಗಳು ಸಮುದ್ರದ ತೀರಕ್ಕೆ ಬಂದು…
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವ ಕಾರಣ ಬೆಂಗಳೂರು ನಗರದ ಹಲವೆಡೆ ಫೆಬ್ರವರಿ 20ರಂದು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ನೀರು ಪೂರೈಕೆ ಸ್ಥಗಿತವಾಗಲಿದೆ. ಈ ಬಗ್ಗೆ ಬೆಂಗಳೂರು ಜಲ ಮಂಡಳಿ ಮಾಹಿತಿ ನೀಡಿದೆ. ಮಾರತ್ತಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. https://ainlivenews.com/bumper-offer-from-modi-government-women-will-get-rs-7000-under-this-scheme/ ಮಾರತ್ತಹಳ್ಳಿಯ ಜೀವಿಕಾ ಆಸ್ಪತ್ರೆ ಬಳಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ 20 ರಂದು ನಗರದ ವಿವಿಧ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಪ್ರಕಟಣೆ ತಿಳಿಸಿದೆ. ಎಷ್ಟು ಗಂಟೆಯ ವರಗೆ ನೀರು ಪೂರೈಕೆ ಇರಲ್ಲ? ನಾಲ್ಕನೇ ಹಂತದ ಕಾವೇರಿ ನೀರಿನ ಪೂರೈಕೆ ಯೋಜನೆಯ ಕಾಮಗಾರಿ ಗುರುವಾರ ಬೆಳಗ್ಗೆ 9 ರಿಂದ ರಾತ್ರಿ 9 ರ ವರೆಗೆ ನಡೆಯಲಿದೆ. ಇದರಿಂದಾಗಿ ಈ ಅವಧಿಯಲ್ಲಿ ನೀರು ಪೂರೈಕೆ ಸ್ಥಗಿತವಾಗಲಿದೆ. ಎಲ್ಲೆಲ್ಲಿ ನೀರು ಪೂರೈಕೆ ಸ್ಥಗಿತ? ಮಾರತ್ತಹಳ್ಳಿ, ದೊಡ್ಡಾನೆಕುಂದಿ, ಮುನ್ನೆಕೊಳಲು, ಓಎಂಬಿಆರ್ಲೇಔಟ್, ಎಚ್ಆರ್ಬಿಆರ್ಲೇಔಟ್, ಸಿಗೇಹಳ್ಳಿ, ಬಟ್ಟರ ಹಳ್ಳಿ, ಮೇಡೆಹಳ್ಳಿ, ಟಿ.ಸಿ.ಪಾಳ್ಯ,…
ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಅಭಿಮಾನಿಗಳು ಸದಾ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಒಂದೊಳ್ಳೆ ಕಂಟೆಂಟ್ ನೊಂದಿಗೆ ಹಾರಾರ್ ಜಾನರ್ ನ ಕಥಾಹಂದರವನ್ನೂ ಹೊಂದಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. “ಅಣ್ಣಯ್ಯ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ವಿಕಾಶ್ ಉತ್ತಯ್ಯ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಅಭಿಜಿತ್ ತೀರ್ಥಹಳ್ಳಿ ಬರೆದು ನಿರ್ದೇಶಿಸಿದ್ದಾರೆ. ಹಿರಿಯ ಚಲನಚಿತ್ರ ಪತ್ರಕರ್ತೆ ಸರಸ್ವತಿ ಜಾಗಿರದಾರ್, ಚಲನಚಿತ್ರ ಸ್ಥಿರ ಛಾಯಾಗ್ರಾಹಕರಾದ ಮನು, ಮೋಕ್ಷೇಂದ್ರ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಕನ್ನಡ ಚಲನಚಿತ್ರಗಳನ್ನು ಸದಾ ಪ್ರೋತ್ಸಾಹಿಸುತ್ತಾ ಬಂದಿರುವ ಕನ್ನಡಪರ ಹೋರಾಟಗಾರರು, ಕ್ಯಾಬ್ ಹಾಗೂ ಆಟೋ ಚಾಲಕರು, ಯವಕರು ಸೇರಿದಂತೆ ವಿವಿಧ ರೀತಿಯಲ್ಲಿ ಗುರುತಿಸಿಕೊಂಡಿರುವ ಗಣ್ಯರು ಟ್ರೇಲರ್ ಬಿಡುಗಡೆಗೆ ಸಾಥ್ ನೀಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಕನ್ನಡ ಚಿತ್ರರಂಗದ ವಿವಿಧ ಆಯಾಮಗಳಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡಿರುವ ನನಗೆ ನಿರ್ದೇಶಕನಾಗಿ ಇದು ಮೊದಲ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಅಭಿಜಿತ್ ತೀರ್ಥಹಳ್ಳಿ, ಇದು ಸಸ್ಪೆನ್ಸ್ ಥ್ರಿಲ್ಲರ್…
ಈ ಹಿಂದೆ ‘ಯುದ್ಧ ಮತ್ತು ಸ್ವಾತಂತ್ರ್ಯ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ವಿದ್ಯಾ, ಈಗ ಒಂದು ಸಣ್ಣ ಗ್ಯಾಪ್ನ ನಂತರ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿದ್ಯಾ ಸದ್ಯ ‘ಬೇಬೋ’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚಿಗೆ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿದೆ. ಉಪೇಂದ್ರ ಅವರ ಅಣ್ಣನ ಮಗ ನಿರಂಜನ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ನಟ ಕೌಶಿಕ್, ಅನಂತು ಮುಂತಾದ ಗಣ್ಯರು ಈ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ‘ಬೇಬೋ’ ಚಿತ್ರಕ್ಕೆ ‘ಆದ್ರೆ ಇವ್ಳು ಕರೀನಾ ಅಲ್ಲ’ ಎಂಬ ಅಡಿಬರಹವಿದ್ದು, ಈ ಚಿತ್ರವನ್ನು ಜಯ ಹರಿಪ್ರಸಾದ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರವನ್ನು ವಿ.ಕೆ. ಕಂಬೈನ್ಸ್ ಬ್ಯಾನರ್ ಅಡಿ ವಿದ್ಯಾ ಅವರ ಸಂಬಂಧಿಕರಾದ ಸಂತೋಷ್ ವಿಜಯ್ ಮತ್ತು ಸುಪ್ರೀತ್ ವಿಜಯ್ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ವಿ. ಮನೋಹರ್ ಅವರ ಸಂಗೀತ ಸಂಯೋಜನೆ ಮತ್ತು ಸುರೇಶ್ ಚಿಕ್ಕಣ್ಣ ಅವರ ಛಾಯಾಗ್ರಹಣವಿದೆ. ಈ ಚಿತ್ರದ ಕುರಿತು ಮಾತನಾಡುವ ನಾಯಕಿ ವಿದ್ಯಾ,…