Author: Author AIN

ಭಯೋತ್ಪಾದನೆ ನಿಗ್ರಹಿಸಲು ಪಾಕಿಸ್ತಾನಕ್ಕೆ ಸಹಾಯ ಮಾಡಲು ಸಿದ್ಧವಿರುವುದಾಗಿ ಚೀನಾ ಹೇಳಿದೆ. ಪಾಕಿಸ್ತಾನದ ಖೈಬರ್-ಪಖ್ತುಂಖ್ವಾ ಪ್ರಾಂತ್ಯದ ಬೆಶಾಮ್​ನಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಐವರು ಚೀನೀ ಪ್ರಜೆಗಳು ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಚೀನಾದ ಈ ಪ್ರಸ್ತಾವನೆ ಮಹತ್ವ ಪಡೆದುಕೊಂಡಿದೆ. ಆತ್ಮಾಹುತಿ ಬಾಂಬ್ ದಾಳಿಯ ಬಳಿಕ ಪಾಕಿಸ್ತಾನದಲ್ಲಿರುವ ತನ್ನ ಪ್ರಜೆಗಳಿಗೆ ಹೆಚ್ಚಿನ ಭದ್ರತೆ ನೀಡಬೇಕೆಂದು ಚೀನಾ ಸರ್ಕಾರ ಪಾಕಿಸ್ತಾನ ಸರ್ಕಾರಕ್ಕೆ ಮನವಿ ಮಾಡಿದೆ. “ಭಯೋತ್ಪಾದಕ ದಾಳಿಗಳು ಸೇರಿದಂತೆ ವಿವಿಧ ಭದ್ರತಾ ಅಪಾಯಗಳು ಮತ್ತು ಸವಾಲುಗಳನ್ನು ನಿಭಾಯಿಸಲು, ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಜಂಟಿಯಾಗಿ ರಕ್ಷಿಸಲು ಚೀನಾದ ಮಿಲಿಟರಿ ಪಾಕಿಸ್ತಾನದೊಂದಿಗೆ ಕೆಲಸ ಮಾಡಲು ಸಿದ್ಧವಿದೆ” ಎಂದು ಚೀನಾದ ರಾಷ್ಟ್ರೀಯ ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ವು ಕಿಯಾನ್ ಹೇಳಿದ್ದಾರೆ. “ಚೀನಾ ಎಲ್ಲ ರೀತಿಯ ಭಯೋತ್ಪಾದನೆಯನ್ನು ವಿರೋಧಿಸುತ್ತದೆ. ಭಯೋತ್ಪಾದನೆಯ ವಿರುದ್ಧ ಹೋರಾಡಲು ಪಾಕಿಸ್ತಾನವನ್ನು ದೃಢವಾಗಿ ಬೆಂಬಲಿಸುತ್ತದೆ ಮತ್ತು ಪಾಕಿಸ್ತಾನದಲ್ಲಿನ ಚೀನಾದ ಸಿಬ್ಬಂದಿ, ಯೋಜನೆಗಳು ಮತ್ತು ಸಂಸ್ಥೆಗಳ ಸುರಕ್ಷತೆ ಮತ್ತು ಭದ್ರತೆಗಾಗಿ ಸಾಧ್ಯವಿರುವ ಎಲ್ಲವನ್ನೂ ಮಾಡಲು ಚೀನಾ ಬದ್ಧವಾಗಿದೆ”…

Read More

ಸದಾ ಬಾಲಿವುಡ್ ಬ್ಯೂಟಿಯರ ಜೊತೆ ಕಾಣಿಸಿಕೊಳ್ಳುವ ಓರ್ರಿ ಅಲಿಯಾಸ್ ಒರ್ಹಾನ್ ಅವತ್ರಾಮಣಿ ಇದೀಗ ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ ರುಚಿಕಾ ವಿರುದ್ಧ ಫುಲ್ ರಾಂಗ್ ಆಗಿದ್ದಾರೆ. ರುಚಿಕಾ ಲೋಹಿಯಾ ನಡೆಯಿಂದ ಕೋಪಗೊಂಡಿರುವ ಓರ್ರಿ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರುವ ವಿಡಿಯೋ ಒಂದು ಇಬ್ಬರ ನಡುವೆ ವೈಮನಸ್ಸಿಗೆ ಕಾರಣವಾಗಿದೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಓರ್ರಿ ಮತ್ತು ರುಚಿಕಾ ಅನಿರಿಕ್ಷಿತವಾಗಿ ಭೇಟಿಯಾಗಿದ್ದಾರೆ. ಈ ವೇಳೆ ಓರ್ರಿ ಕೈ ಕುಲುಕಲು ನಿರಾಕರಿಸಿದ್ದಾರೆ. ಜೊತೆಗೆ ಫೋಟೋ ತೆಗೆದುಕೊಳ್ಳಲು ಸಹ ಬಿಡಲಿಲ್ಲ ಎಂದು ರುಚಿಕಾ ಆರೋಪಿಸಿದ್ದಾರೆ. ಈ ವಿಡಿಯೋ ಇದೀಗ 5 ಮಿಲಿಯನ್ ವಿವ್ಸ್ ಪಡೆದಿದ್ದು, ಈ ವಿಚಾರವಾಗಿ ಓರ್ರಿ ಸಿಟ್ಟಾಗಿದ್ದಾರೆ. ಮಾನನಷ್ಟ ಮೊಕ್ಕದಮೆ ಹೂಡುವುದಾಗಿ ರುಚಿಕಾಗೆ ಬೆದರಿಕೆ ಹಾಕಿದ್ದಾರೆ. ರುಚಿಕಾ ಹೇಳಿದಿಷ್ಟು, ಓರ್ರಿ ಮ್ಯಾನೇಜರ್ ಓರ್ರಿ ಜೊತೆ ಫೋಟೋ ತೆಗೆದುಕೊಳ್ಳದಂತೆ ಸೂಚಿಸಿದ್ದರು. ಓರ್ರಿಗೆ ಬೈ ಹೇಳುವಾಗ ಹ್ಯಾಡ್ ಶೇಕ್ ಮಾಡುವ ಬದಲು ಮುಷ್ಠಿ ಹಿಡಿದು ಗುದ್ದಿದ್ದರು ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಇದಕ್ಕೆ…

Read More

ರಾಕಿಂಗ್ ಸ್ಟಾರ್ ಯಶ್ ನಟನೆಯ ಕಿರಾತಕ ಸಿನಿಮಾದಲ್ಲಿ ಖಳ ನಟನಾಗಿ ಅಭಿನಯಿಸಿದ್ದ ನಟ ಡೇನಿಯಲ್ ಬಾಲಾಜಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತಮಿಳು ಚಿತ್ರ ರಂಗದಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದ ಡೇನಿಯಲ್ ಬಾಲಾಜಿ ನಿನ್ನೆ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎದೆನೋವಿನಿಂದ ಬಳಲುತ್ತಿದ್ದ ನಟನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 48 ವರ್ಷದ ನಟನ ಹಠಾತ್ ಸಾವು ತಮಿಳು ಚಿತ್ರರಂಗ ಮತ್ತು ಅವರ ಅಭಿಮಾನಿಗಳನ್ನು ನೋವುಂಟು ಮಾಡಿದೆ. ಬಾಲಾಜಿ ನಿಧನಕ್ಕೆ ಸಿನಿಮಾ ರಂಗದವರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಸಂತಾಪ ಸೂಚಿಸಿದ್ದಾರೆ.

Read More

ಸಿರಿಯಾದ ಅಲೆಪ್ಪೊ ಪ್ರಾಂತ್ಯದ ಮೇಲೆ ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಲೆಬನಾನ್ ಉಗ್ರಗಾಮಿ ಗುಂಪು ಹೆಜ್ಬುಲ್ಲಾ ಕಮಾಂಡರ್ ಸೇರಿ 42 ಜನರು ಸಾವನ್ನಪ್ಪಿದ್ದಾರೆ. ಇದು ಇಸ್ರೇಲ್-ಹಮಾಸ್ ಯುದ್ಧದ ನಂತರ ಸಿರಿಯಾದಲ್ಲಿ ಇಸ್ರೇಲ್ ನಡೆಸಿದ ಅತ್ಯಂತ ಭೀಕರ ದಾಳಿ ಎನ್ನಲಾಗಿದೆ. 2011ರಲ್ಲಿ ಅಂತರ್ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್ ಸಿರಿಯಾದಲ್ಲಿ ನೂರಾರು ವೈಮಾನಿಕ ದಾಳಿಗಳನ್ನು ನಡೆಸಿದೆ, ಸೇನಾ ಪೋಸ್ಟ್ ಗಳು ಮತ್ತು ಹಿಜ್ಬುಲ್ಲಾ ಮತ್ತು ಪ್ಯಾಲೆಸ್ಟೈನ್ ಗುಂಪು ಹಮಾಸ್ ಸೇರಿದಂತೆ ಇರಾನ್ ಬೆಂಬಲಿತ ಪಡೆಗಳನ್ನು ಗುರಿಯಾಗಿಸಿಕೊಂಡಿದೆ. ಅಕ್ಟೋಬರ್ 7 ರಂದು ಹಮಾಸ್ ಮತ್ತು ಇಸ್ರೇಲ್ ನಡುವಿನ ಯುದ್ಧ ಪ್ರಾರಂಭವಾದಾಗಿನಿಂದ ಸಿರಿಯಾದಲ್ಲಿ ಇಸ್ರೇಲ್ ಮಿಲಿಟರಿ ದಾಳಿ ಹೆಚ್ಚಾಗಿದೆ. ವರದಿಗಳ ಪ್ರಕಾರ, ಅಲೆಪ್ಪೊ ವಿಮಾನ ನಿಲ್ದಾಣದ ಬಳಿಯ ಲೆಬನಾನ್ ಭಯೋತ್ಪಾದಕ ಸಂಘಟನೆ ಹೆಜ್ಬುಲ್ಲಾದ ರಾಕೆಟ್ ಡಿಪೋವನ್ನು ಇಸ್ರೇಲ್ ಗುರಿಯಾಗಿಸಿಕೊಂಡಿದೆ. ಇದು ಆರು ಹಿಜ್ಬುಲ್ಲಾ ಉಗ್ರರು ಸೇರಿದಂತೆ 42 ಜನರನ್ನು ಕೊಂದಿತು. ಮೃತಪಟ್ಟವರಲ್ಲಿ ಸಿರಿಯಾ ಸೇನೆಯ 36 ಸೈನಿಕರು ಸೇರಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Read More

ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಸಿನಿಮಾಗಳಿಗಿಂತ ಹೆಚ್ಚಾಗಿ ನಟಿ ರಶ್ಮಿಕಾ ಮಂದಣ್ಣ ವಿಷಯದಲ್ಲಿಯೇ ಸದ್ದು ಮಾಡಿದ್ದರು.  ಇದೀಗ ಮದುವೆ ಬಗ್ಗೆ ಪ್ರತಿಕ್ರಿಯಿಸಿರೋ ವಿಜಯ್ ದೇವರಕೊಂಡ, ಲವ್ ಮ್ಯಾರೇಜ್ ಆಗುವುದಾಗಿ ಹೇಳಿದ್ದಾರೆ.  ‘ಫ್ಯಾಮಿಲಿ ಸ್ಟಾರ್’ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ವಿಜಯ್ ದೇವರಕೊಂಡಗೆ ಮದುವೆ ಪ್ರಶ್ನೆ ಎದುರಾಗಿದೆ. ‘ಫ್ಯಾಮಿಲಿ ಸ್ಟಾರ್’ ಸಿನಿಮಾದಲ್ಲಿ ನಟಿಸಿದ್ದೇನೋ ನಿಜ. ಹಾಗೇ ಇದೇ ವರ್ಷ ರಿಯಲ್ ಲೈಫ್‌ನಲ್ಲೂ ಫ್ಯಾಮಿಲಿ ಸ್ಟಾರ್ ಆಗುವ ಸಾಧ್ಯತೆ ಇದೆಯೇ ಎಂದು ಪ್ರಶ್ನೆ ಮಾಡಲಾಗಿದೆ. ಆ ಪ್ರಶ್ನೆಗೆ ವಿಜಯ್ ದೇವರಕೊಂಡ ಪ್ರತಿಕ್ರಿಯಿಸಿ, ನಾನು ಖಂಡಿತವಾಗಿಯೂ ಮದುವೆ ಆಗುತ್ತೇನೆ. ನನಗೂ ಮದುವೆ ಆಗಬೇಕೆಂಬ ಆಸೆ ಇದೆ. ನನಗೂ ಮಕ್ಕಳು ಬೇಕು. ಆದರೆ, ಈ ವರ್ಷ ಖಂಡಿತಾ ಅಲ್ಲ ಎಂದಿದ್ದಾರೆ. ಲವ್ ಮ್ಯಾರೇಜ್ ಆಗುತ್ತೀರಾ? ಅರೇಂಜ್ಡ್ ಮ್ಯಾರೇಜ್ ಆಗುತ್ತೀರಾ? ಎಂಬ ಪ್ರಶ್ನೆಗೆ ಲವ್ ಮ್ಯಾರೇಜ್ ಆಗುತ್ತೀನಿ ಎಂದು ವಿಜಯ್ ಹೇಳಿದ್ದಾರೆ. ಆ ಹುಡುಗಿಯನ್ನು ಅಪ್ಪ, ಅಮ್ಮ ಇಬ್ಬರೂ ಮೆಚ್ಚಬೇಕು. ಅವರಿಗೆ ಆ ಹುಡುಗಿ ಇಷ್ಟ ಆಗಬೇಕು…

Read More

ಹಿಂದಿ ಕಿರುತೆರೆಯಲ್ಲಿ ಖ್ಯಾತಿ ಘಳಿಸಿರುವ ನಟಿ ಸಾಕ್ಷಿ ತನ್ವರ್ ರಾಕಿಂಗ್ ಸ್ಟಾರ್ ಯಶ್ ಗೆ ಜೋಡಿಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈ ವಿಚಾರ ಕೇಳಿ ಯಶ್ ಅಭಿಮಾನಿಗಳು ಬೇಸರಗೊಂಡಿದ್ದರು. ಯಶ್ ಗೆ 38 ವರ್ಷ, ಸಾಕ್ಷಿಗೆ 52 ವರ್ಷ. ಇಬ್ಬರು ಜೋಡಿಯಾಗಿ ನಟಿಸಿದರೆ ಚೆನ್ನಾಗಿ ಇರಲ್ಲ ಎಂದು ಮಾತನಾಡಿಕೊಂಡಿದ್ದರು. ಆದರೆ ಯಶ್ ಗೆ ಜೋಡಿಯಾಗುವ ಗಾಸಿಪ್ ಸುದ್ದಿಗೆ ನಟಿ ಸಾಕ್ಷಿ ಸ್ಪಷ್ಟನೆ ನೀಡಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದಲ್ಲಿ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಾವಣನ ಪತ್ನಿ ಮಂಡೋದರಿ ಪಾತ್ರದಲ್ಲಿ ಸಾಕ್ಷಿ ತನ್ವರ್ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಗಾಳಿ ಸುದ್ದಿಗೆ ಸಾಕ್ಷಿ ಸ್ಪಷ್ಟನೆ ನೀಡಿದ್ದಾರೆ. ‘ಮಂಡೋದರಿಯ ಪಾತ್ರಕ್ಕೆ ಯಾರೂ ಕೂಡ ನನ್ನನ್ನು ಬಂದು ಕೇಳಿಲ್ಲ’ ಎಂದು ಸಾಕ್ಷಿ ತನ್ವರ್​ ಹೇಳಿದ್ದಾರೆ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ. ಆ ಮೂಲಕ ಅವರು ಎಲ್ಲ ಗಾಸಿಪ್​ಗಳಿಗೆ ಪೂರ್ಣವಿರಾಮ ಹಾಕಿದ್ದಾರೆ. ರಾಮಾಯಣ ಸಿನಿಮಾದಲ್ಲಿ ಶ್ರೀರಾಮನಾಗಿ ರಣಬೀರ್​ ಕಪೂರ್​…

Read More

ಹಾಲಿವುಡ್ ನ ಖ್ಯಾತ ಗಾಯಕ, ರ್ಯಾಪರ್ 50 ಸೆಂಟ್ ವಿರುದ್ಧ ಆತನ ಮಾಜಿ ಪ್ರೇಯಸಿ ಅತ್ಯಾಚಾರ ಮತ್ತು ನಿಂದನೆ ಆರೋಪವನ್ನು ಮಾಡಿದ್ದಾರೆ. ಖ್ಯಾತ ಮಾಡೆಲ್ ಡ್ಯಾಫ್ನಿ ಜೋಯ್ ಹಾಗೂ ಫಿಫ್ಟಿ ಸೆಂಟ್ ಹಲವು ವರ್ಷಗಳ ಕಾಲ ಲಿವಿನ್ ರಿಲೇಷನ್​ನಲ್ಲಿದ್ದರು. ಇಬ್ಬರಿಗೂ ಓರ್ವ ಮಗನಿದ್ದಾನೆ. ಆದರೆ ಕಳೆದ ಕೆಲ ತಿಂಗಳುಗಳ ಹಿಂದೆ ಫಿಫ್ಟಿ ಸೆಂಟ್ ನಿಂದ ಡ್ಯಾಫ್ನಿ ಜೋಯ್ ದೂರಾಗಿದ್ದರು. ಇತ್ತೀಚೆಗೆ ಡ್ಯಾಫ್ನಿ ಜೋಯ್ ವಿರುದ್ಧ ವೇಶ್ಯಾವಾಟಿಕೆ ಆರೋಪ ಸಹ ಕೇಳಿ ಬಂದಿತ್ತು. ಇದರ ಬೆನ್ನಲ್ಲೆ ಇದೀಗ ಡ್ಯಾಫ್ನಿ ಜೋಯ್ ತನ್ನ ಮಾಜಿ ಪ್ರಿಯಕರನ ವಿರುದ್ಧ ಅತ್ಯಾಚಾರ, ಹಲ್ಲೆ ಹಾಗೂ ನಿಂದನೆ ಆರೋಪ ಮಾಡಿದ್ದಾರೆ. ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಡ್ಯಾಫ್ನಿ ಜೋಯ್, ‘ನೀನು ಸರಿಹೋಗುತ್ತೀಯ, ತಂದೆಯಾಗಿ ನಿನ್ನ ಜವಾಬ್ದಾರಿಯನ್ನು ಪೊರೈಸುತ್ತೀಯ ಎಂದು ನಾನು ಕಾದಿದ್ದು ವ್ಯರ್ಥವಾಗಿದೆ. ಎರಡು ವರ್ಷಗಳಲ್ಲಿ ಕೇವಲ 10 ಬಾರಿ ಮಾತ್ರವೇ ನೀನು ನಿನ್ನ ಮಗನನ್ನು ನೋಡಲು ಬಂದಿದ್ದೆ. ನಿನ್ನ ಮೇಲೆ ಇಟ್ಟಿದ್ದ ನಂಬಿಕೆ ಇನ್ನು ಮುಗಿದಿದೆ. ಇನ್ನು…

Read More

ಮಾಜಿ ಬಿಗ್​ ಬಾಸ್​ ಸ್ಪರ್ಧಿ ಕನ್ನಡ ಪರ ಹೋರಾಟಗಾರ ಪ್ರಶಾಂತ್​ ಸಂಬರ್ಗಿ ಅವರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ವಾಟ್ಸಪ್​ ಮತ್ತು ಇ-ಮೇಲ್​ ಮೂಲಕ ಬೆದರಿಕೆ ಹಾಕಿದ ಕಿಡಿಗೇಡಿಗಳು ಆ್ಯಸಿಡ್​​ ಹಾಕುವುದಾಗಿ ಎಚ್ಚರಿಸಿದ್ದಾರೆ. ಈ ಸಂಬಂಧವಾಗಿ ಪ್ರಶಾಂತ್​ ಸಂಬರ್ಗಿ ಅವರು ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಬೆದರಿಕೆ ಬಂದ ಹಿನ್ನೆಲೆಯಲ್ಲಿ ದೂರು ನೀಡಿದ ಸಂಬರ್ಗಿ ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ರಕ್ಷಣೆ ನೀಡಬೇಕು ಎಂದು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ. ವಿದೇಶದ ಮೊಬೈಲ್​ ಸಂಖ್ಯೆಗಳಿಂದ ಪ್ರಶಾಂತ್ ಸಂಬರ್ಗಿ ಅವರಿಗೆ ಬೆದರಿಕೆ ಸಂದೇಶ ಬಂದಿದೆ. ಅಮೆರಿಕ, ಕ್ರೊಯೇಷ್ಯಾ ಮುಂತಾದ ದೇಶಗಳ ವಾಟ್ಸಪ್​ ಸಂಖ್ಯೆಗಳನ್ನು ಬಳಸಿ ಬೆದರಿಕೆ ಸಂದೇಶ ಕಳಿಸಲಾಗಿದೆ. ಪ್ರಶಾಂತ್​ ಸಂಬರ್ಗಿ ಅವರ ಫ್ಯಾಮಿಲಿ ಫೋಟೋವನ್ನು ಕಳಿಸಿ, ‘ಟಾರ್ಗೆಟ್​’ ಎಂದು ಬರೆಯಲಾಗಿದೆ. ಪತ್ನಿ ಮತ್ತು ಮಕ್ಕಳನ್ನು ಕೂಡ ಬಲಿ ತೆಗೆದುಕೊಳ್ಳುವುದಾಗಿ ಬೆದರಿಕೆ ಸಂದೇಶ ಕಳಿಸಲಾಗಿದೆ. ‘ಮಾರ್ಚ್​ 10ರ ಮಧ್ಯರಾತ್ರಿಯಿಂದ ನನಗೆ ಮೇಲ್ಕಂಡ ಮೊಬೈಲ್​ ಸಂಖ್ಯೆಗಳಿಂದ ಬೆದರಿಕೆ ಸಂದೇಶ ಬಂದಿದೆ.…

Read More

ಅಮೆರಿಕದ ಕ್ರಿಪ್ಟೋ ಲೋಕದ ಜೀನಿಯಸ್ ಎಂದು ಖ್ಯಾತಿ ಘಳಿಸಿದ್ದ ಸ್ಯಾಮ್ ಬ್ಯಾಂಕ್​ಮ್ಯಾನ್ ಫ್ರೈಡ್ ಇದೀಗ 25 ವರ್ಷ ಜೈಲುಶಿಕ್ಷೆಗೆ ಗುರಿಯಾಗಿದ್ದಾರೆ. 32 ವರ್ಷದ ಈ ಯುವ ಉದ್ಯಮಿ ಮುಂದಿನ 25 ವರ್ಷ ಜೈಲಿನಲ್ಲೇ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. 8 ಬಿಲಿಯಲ್ ಡಾಲರ್ ಹಣಕಾಸು ವಂಚನೆಯ ಆರೋಪದಲ್ಲಿ ಸ್ಯಾಮ್ ಬ್ಯಾಂಕ್​ಮ್ಯಾನ್ ಫ್ರೈಡ್ ಆರೋಪಿಯಾಗಿದ್ದಾರೆ. ಈತನ ಮೇಲಿದ್ದ ಎಲ್ಲಾ ಎಂಟು ದೂರುಗಳಲ್ಲೂ ಆರೋಪ ಸಾಬೀತಾಗಿದೆ. ತೀರ್ಪು ನೀಡಿದ ನ್ಯಾಯಾಧೀಶರು, ಎಸ್​ಬಿಎಫ್ ಅವರನ್ನು ಅಮೆರಿಕದ ಹಣಕಾಸು ಇತಿಹಾಸದಲ್ಲೇ ಅತಿದೊಡ್ಡ ವಂಚಕ ಎಂದಿದ್ದಾರೆ. ಅಮೆರಿಕದ ಸ್ಯಾಮ್ ಬ್ಯಾಂಕ್ಮನ್ ಫ್ರೈಡ್ 2019ರಲ್ಲಿ ಎಫ್​ಟಿಎಕ್ಸ್ ಎಂಬ ಕ್ರಿಪ್ಟೋಕರೆನ್ಸಿ ಎಕ್ಸ್​ಚೇಂಜ್ ಅನ್ನು ತೆರೆದಿದ್ದರು. ಆಗ ಕ್ರಿಪ್ಟೋಕರೆನ್ಸಿ ಬಹಳ ದೊಡ್ಡ ಭರವಸೆ ಹುಟ್ಟಿಸಿದ ಕ್ಷೇತ್ರವಾಗಿತ್ತು. ಕಡಿಮೆ ಶುಲ್ಕ ಹಾಗೂ ವೇಗದ ವಹಿವಾಟು ಇವೆರಡನ್ನೂ ಕೊಡುತ್ತಿದ್ದರಿಂದ ಎಫ್​ಟಿಎಕ್ಸ್ ಬಹಳ ವೇಗದಲ್ಲಿ ಬೆಳೆಯಿತು. ಬಹಳ ಬೇಗ ಇದು ವಿಶ್ವದ ಎರಡನೇ ಅತಿದೊಡ್ಡ ಕ್ರಿಪ್ಟೋ ಎಕ್ಸ್​ಚೇಂಜ್ ಎನಿಸಿತು. ನೋಡನೋಡುತ್ತಿದ್ದಂತೆಯೇ ಸ್ಯಾಮ್ ಬ್ಯಾಂಕ್​ಮ್ಯಾನ್ ಫ್ರೈಡ್ ಅತಿಕಿರಿಯ ವಯಸ್ಸಿನ ಬಿಲಿಯನೇರ್…

Read More

ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಹಾಗೂ ಟಾಲಿವುಡ್ ಹೀರೋ ಸಿದ್ದಾರ್ಥ್ ಮದುವೆಯಾಗಿದ್ದಾರೆ ಎಂಬ ಸುದ್ದಿ ಎರಡು ದಿನಗಳ ಕಾಲ ಸಖತ್ ವೈರಲ್ ಆಗಿತ್ತು. ಮದುವೆಯ ಸುದ್ದಿಗೆ ಸ್ಪಷ್ಟನೆ ನೀಡಿದ ನಟಿ ಅದಿತಿ ರಾವ್ ನಾವಿನ್ನು ಮದುವೆಯಾಗಿಲ್ಲ. ಆಗಿರೋದು ಜಸ್ಟ್ ಎಂಗೇಜ್ ಮೆಂಟ್ ಅಷ್ಟೇ ಎಂದು ಕ್ಲಾರಿಟಿ ನೀಡಿದ್ದರು. ಅಂದ ಹಾಗೆ ಅದಿತಿ ಹಾಗೂ ಸಿದ್ದಾರ್ಥ್ ಇಬ್ಬರಿಗೂ ಇದು ಎರಡನೇ ಮದುವೆ. ಮೊದಲನೇ ಮದುವೆಯ ಸಂಬಂಧ ಕಳೆದುಕೊಂಡಿರುವ ಜೋಡಿ ಇದೀಗ ಎರಡನೇ ಮದುವೆಯಾಗಲು ರೆಡಿಯಾಗಿದ್ದಾರೆ. ಸಿನಿಮಾ ರಂಗದಿಂದ ಕೆಲ ವರ್ಷಗಳ ಕಾಲ ಬ್ರೇಕ್ ತೆಗೆದುಕೊಂಡಿದ್ದ ಸಿದ್ದಾರ್ಥ್ ಇದೀಗ ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಸಿದ್ದಾರ್ಥ್ 2003ರಲ್ಲಿ ಮೇಘನಾ ನಾರಾಯಣ್ ಎಂಬುವವರನ್ನು ಮದುವೆಯಾಗಿದ್ದರು. ಕಾಲೇಜಿನಲ್ಲಿ ಓದುತ್ತಿದ್ದ ವೇಳೆ ಪಕ್ಕದ ಮನೆಯ ಮೇಘನಾ ಮೇಲೆ ಪ್ರೀತಿ ಶುರುವಾಗಿ ಬಳಿಕ ಆಕೆಯನ್ನು ವರಿಸಿದ್ದರು. ಸಿದ್ದಾರ್ಥ್ ಹಾಗೂ ಮೇಘನಾ ಮದುವೆಯನ್ನು ಸಾಕಷ್ಟು ಗುಟ್ಟಾಗಿ ಇಡಲಾಗಿತ್ತು. ಇದುವರೆಗೂ ಮೇಘನಾ ಹಾಗೂ ಸಿದ್ದಾರ್ಥ್ ಮದುವೆಯ ಫೋಟೋಗಳು ಲಭ್ಯವಾಗಿಲ್ಲ. ಇಬ್ಬರ ಮಧ್ಯೆ ಶುರುವಾದ…

Read More