Author: Author AIN

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪರಭಾಷೆಯಲ್ಲಿ ಮಿಂಚುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರುವ ಶಿವಣ್ಣ ಇದೀಗ ರಾಮ್ ಚರಣ್ ಜೊತೆ ಸ್ಕ್ರೀನ್ ಶೇರ್ ಮಾಡ್ತಿದ್ದಾರೆ. ರಾಮ್ ಚರಣ್ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಚಿತ್ರ ಇದೇ ಮಾರ್ಚ್ 20ರಂದು ಸೆಟ್ಟೇರಲಿದೆ. ರಾಮ್ ಚರಣ್ ಹಾಗೂ ಶಿವಣ್ಣ ಕಾಂಬಿನೇಷನ್ ನ ಸಿನಿಮಾಗೆ ಪೆದ್ದಿ ಎಂದು ಹೆಸರಿಡಲಾಗಿದೆಯಂತೆ. ಪೆದ್ದಿ ಎಂದರೆ ತೆಲುಗಿನಲ್ಲಿ ದೊಡ್ಡದು ಎಂದರ್ಥ. ಈ ಸಿನಿಮಾದ ಕುರಿತಂತೆ ಹಲವಾರು ವಿಚಾರಗಳು ಈಗಾಗಲೇ ತೆಲುಗು ಸಿನಿಮಾ ರಂಗದಲ್ಲಿ ಗಿರಕಿ ಹೊಡೆಯುತ್ತಿವೆ. ಈ ಸಿನಿಮಾದಲ್ಲಿ ಶಿವಣ್ಣ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಸ್ವತಃ ಶಿವರಾಜ್ ಕುಮಾರ್ ಮಾತನಾಡಿದ್ದಾರೆ. ‘ತೆಲುಗಿನಲ್ಲಿ ಆಫರ್ ಬಂದಿದ್ದು ನಿಜ. ರಾಮ್ ಚರಣ್ ಅವರ ಚಿತ್ರವನ್ನು ನಿರ್ದೇಶನ ಮಾಡುತ್ತಿರುವ ಬುಚ್ಚಿ ಬಾಬು ನನ್ನನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಆ ಸಿನಿಮಾ ಬಗ್ಗೆ ಸದ್ಯ ಏನೂ ಹೇಳಲಾರೆ ಎಂದು ಹೇಳುವ…

Read More

ಕಾಟೇರ ಸಿನಿಮಾದ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಡೆವಿಲ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಮೊದಲ ಹಂತದ ಚಿತ್ರೀಕರಣವು ಇದೇ ಸೋಮವಾರದಿಂದ ಬೆಂಗಳೂರಿನ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಲಿದ್ದು, ಅದಕ್ಕೂ ಮುನ್ನ ಚಿತ್ರತಂಡ ಕುಕ್ಕೆ ಸುಬ್ರಮಣ್ಯಂ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದೆ. ಈಗಾಗಲೇ ‘ಡೆವಿಲ್’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿ ಸಖತ್ ಸದ್ದು ಮಾಡುತ್ತಿದೆ. ದರ್ಶನ್ ಹುಟ್ಟುಹಬ್ಬದ ದಿನ ಫ್ಯಾನ್ಸ್‌ಗೆ ಇದೊಂದು ಸರ್ಪ್ರೈಸ್ ಗಿಫ್ಟ್ ಆಗಿತ್ತು. ದರ್ಶನ್ ‘ಡೆವಿಲ್’ನಲ್ಲಿ ವಿಭಿನ್ನ ಲುಕ್‌ನಲ್ಲಿ ಕಾಣಿಸ್ಕೊಂಡಿದ್ದಾರೆ. ಇದೀಗ ಚಿತ್ರತಂಡ ಕುಕ್ಕೆಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದರ್ಶನ್ ಹುಟ್ಟುಹಬ್ಬದ ದಿನವೇ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ರಿವೀಲ್ ಆಯ್ತು. ಅಬ್ಬರಿಸುವ ಡೈಲಾಗ್ ಮೂಲಕ ದಚ್ಚು ಎಂಟ್ರಿ ಬಹಳ ಕುತೂಹಲಕಾರಿಯಾಗಿತ್ತು. ‘ನಮ್ಮ ಮನೆಯಲೊಂದು ಪುಟ್ಟ ಪಾಪು ಇರುವುದು’ ಎಂಬ ವಿಭಿನ್ನ ಡೈಲಾಗ್ ಹೇಳುವ ಮೂಲಕ ದರ್ಶನ್ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದ್ದು ಇದೀಗ ಚಿತ್ರತಂಡ…

Read More

ಸದಾ ವಿವಾದಗಳ ಮೂಲಕವೇ ಸದ್ದು ಮಾಡುವ ಟಾಲಿವುಡ್ ಚಿತ್ರರಂಗದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದೀಗ ಮತ್ತೊಂದು ಸುದ್ದಿ ನೀಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಾವು ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿರುವ ವರ್ಮಾ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ರಾಮ್ ಗೋಪಾಲ್ ವರ್ಮಾ ಖ್ಯಾತ ನಟ ಪವನ್ ಕಲ್ಯಾಣ್ ವಿರುದ್ಧ ಚುನಾವಣೆ ಎದುರಿಸಲಿದ್ದಾರೆ. ಪವನ್ ಕಲ್ಯಾಣ್ ಆಂಧ್ರದ ಪಿಠಾಪುರಂ ಕ್ಷೇತ್ರದಿಂದ ಚುನಾವಣೆ ಸ್ಪರ್ಧೆ ಮಾಡಲಿದ್ದು, ಅದೇ ಕ್ಷೇತ್ರದಲ್ಲೇ ತಾವೂ ಸ್ಪರ್ಧೆ ಮಾಡುವುದಾಗಿ ವರ್ಮಾ ಹೇಳಿಕೊಂಡಿದ್ದಾರೆ. ಹಲವು ವರ್ಷಗಳಿಂದ ಪವನ್ ಕಲ್ಯಾಣ್ ಅವರಿಗೂ ವರ್ಮಾ ಅವರಿಗೂ ಶಿತಲ ಸಮರ ನಡೆಯುತ್ತಲೇ ಇದೆ. ಅದು ಸಿನಿಮಾಗಳ ಮೂಲಕ ಮತ್ತಷ್ಟು ಗದ್ದಲಕ್ಕೆ ಕಾರಣವಾಗಿದೆ. ಈ ಬಾರಿ ಚುನಾವಣೆಗೆ ಏನಾದರೂ ವರ್ಮಾ ನಿಂತರೆ, ಅದು ಮತ್ತೊಂದು ದಿಕ್ಕು ಪಡೆದುಕೊಳ್ಳುವುದು ಪಕ್ಕಾ ಆಗಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವರ್ಮಾ ಮಾಡಿರುವ ಫೋಸ್ಟ್ ಸಾಕಷ್ಟು ಕುತೂಹಲ ಮೂಡಿಸಿದೆ. ಸದಾ ಒಂದಲ್ಲ ಒಂದು ಕಾರಣಕ್ಕೆ ವಿವಾದ ಮಾಡಿಕೊಳ್ಳುವ…

Read More

ಮೆಗಾಸ್ಟಾರ್ ಚಿರಂಜೀವಿ ಅವರ ಮನೆ ಮಗಳು ನಿಹಾರಿಕಾ ಕೊನೆಡೇಲಾ ಸಿನಿಮಾಗಳಿಗಿಂತ ಹೆಚ್ಚಾಗಿ ವೈಯಕ್ತಿಯ ಬದುಕಿನ ಕುರಿತಾಗೆ ಸಾಕಷ್ಟು ಸದ್ದು ಮಾಡಿದ್ದಾರೆ. ಕೆಲ ತಿಂಗಳ ಹಿಂದೆ ಪತಿ ಚೈತನ್ಯ ಅವರಿಂದ ವಿಚ್ಛೇದನ ಪಡೆದುಕೊಂಡಿರುವ ನಿಹಾರಿಕಾ ಇದೀಗ ತಮ್ಮ ಹೇಳಿಕೆಯ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಡಿವೋರ್ಸ್ ಆದ 7 ತಿಂಗಳಲ್ಲೇ ನನಗೆ ಮದುವೆ ಬೇಡ ಮಗು ಬೇಕು ಎಂಬ ಹೇಳಿಕೆ ನೀಡಿದ್ದಾರೆ. ನಿಹಾರಿಕಾ ಕೊನಿಡೆಲಾ ಅವರು ಚೈತನ್ಯ ಜೊನ್ನಲಗುಡ್ಡ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆ ಸಮಾರಂಭ ಕೂಡ ನಡೆದಿತ್ತು. ನಿಹಾರಿಕಾ ಹಾಗೂ ಚೈತನ್ಯ ಮದುವೆಗೆ ಇಡೀ ಮೆಗಾಸ್ಟರ್‌ ಕುಟುಂಬ ಸಾಕ್ಷಿಯಾಗಿತ್ತು. ಆದರೆ ಮದುವೆಯಾದ ಎರಡೂವರೆ ವರ್ಷಕ್ಕೆ ಇಬ್ಬರು ದೂರು ದೂರವಾದರು. ಸದ್ಯ ಏಕಾಂಗಿಯಾಗಿ ಲೈಫ್‌ ಲೀಡ್‌ ಮಾಡುತ್ತಿರೋ ನಿಹಾರಿಕಾ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಈ ಮಧ್ಯೆ ಸೋಶಿಯಲ್‌ ಮೀಡಿಯಾದಲ್ಲಿ ಈಕೆಯ ಎರಡನೇ ಮದುವೆಯ ಕುರಿತಾಗಿ ಸಾಕಷ್ಟು ಸುದ್ದಿ ಹರಿದಾಡುತ್ತಿದೆ. ಸ್ಟಾರ್‌ ನಟನನ್ನು ನಿಹಾರಿಕಾ ಮದುವೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಹೆಸರು ರಿವೀಲ್​…

Read More

ಬಾಲಿವುಡ್ ನ ಹಿರಿಯ ನಟ, ಬಿಗ್‌ ಬಿ ಅಮಿತಾಬ್ ಬಚ್ಚನ್ ಇಂದು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದು, ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ ಹೃದಯಾಘಾತ ಸಂಭವಿಸಿದಾಗ ವೈದ್ಯರು ಆಂಜಿಯೋಪ್ಲಾಸ್ಟಿ ಮಾಡಲು ಸಲಹೆ ನೀಡುತ್ತಾರೆ. ಆದರೆ ಅಮಿತಾಬ್ ಬಚ್ಚನ್ ಅವರ ಕಾಲಿನ ಸಮಸ್ಯೆಯಿದ್ದು, ಹೀಗಾಗಿ ಕಾಲಿಗೆ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಬಾಹ್ಯ ಆಂಜಿಯೋಪ್ಲ್ಯಾಸ್ಟಿ ಎಂದರೆ ಅಪಧಮನಿಯ ಹೊರಭಾಗದಲ್ಲಿ ರಕ್ತ ನಾಳಗಳನ್ನು ತೆರೆಯಲು ಆಂಜಿಯೋಪ್ಲ್ಯಾಸ್ಟಿ ವೈದ್ಯಕೀಯ ಬಲೂನ್ ಅನ್ನು ಬಳಸಲಾಗುತ್ತದೆ. ಹೃದಯದಂತೆ ದೇಹದ ಇತರ ಭಾಗಗಳಲ್ಲಿಯೂ ಸಮಸ್ಯೆ ಕಂಡುಬಂದಾಗ ಅಥವಾ ರಕ್ತದ ಹರಿವು ಸರಿಯಾಗಿಲ್ಲದಿದ್ದಾಗ ಆಂಜಿಯೋಪ್ಲ್ಯಾಸ್ಟಿ ಮಾಡಲಾಗುತ್ತದೆ. ರಕ್ತನಾಳಗಳನ್ನು ಅಗಲಗೊಳಿಸಲು ಈ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುತ್ತದೆ. ಈ ಚಿಕಿತ್ಸೆಯು ರಕ್ತವು ಸರಿಯಾಗಿ ಹರಿಯುವಂತೆ ಮಾಡುತ್ತದೆ. ಹಾಗೆಯೇ ರಕ್ತ ಹೆಪ್ಪುಗಟ್ಟುವಿಕೆಯನ್ನು ಕಡಿಮೆ ಮಾಡುತ್ತದೆ. ಹೃದಯದ ಹೊರತಾಗಿ, ಸೊಂಟದ ಅಪಧಮನಿ, ತೊಡೆಯ ಅಪಧಮನಿ, ಮೊಣಕಾಲಿನ ಹಿಂದಿನ ಅಪಧಮನಿ, ಕೆಳ ಕಾಲಿನ ಅಪಧಮನಿಗೂ ಆಂಜಿಯೋಪ್ಲ್ಯಾಸ್ಟಿ ಮಾಡಲಾಗುತ್ತದೆ. ಸದ್ಯ ಬಿಗ್ ಬಿ ಆರೋಗ್ಯ ಸುಧಾರಿಸಿದ್ದು ವಿಶ್ರಾಂತಿ…

Read More

ಇತ್ತೀಚಿನ ದಿನಗಳಲ್ಲಿ ಚಿಕ್ಕಮಕ್ಕಳಿಂದ ಹಿಡಿದು ಎಲ್ಲ ವಯಸ್ಸಿನವರು ಕೂಡ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಸಾವಿನ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ದಿ. ಪುನೀತ್ ರಾಜಕುಮಾರ್‌ ಅವರ ಹೆಸರಿನಲ್ಲಿ ವಿನೂತನ ಯೋಜನೆಯೊಂದನ್ನು ಜಾರಿಗೆ ತಂದಿದೆ. ರಾಜ್ಯ ಸರ್ಕಾರ ಡಾ.ಪುನೀತ್ ರಾಜಕುಮಾರ್‌ ಅವರ ಹೆಸರಿನಲ್ಲಿ ʻಹೃದಯ ಜ್ಯೋತಿʼ  ಯೋಜನೆ ಜಾರಿಗೆ ತಂದಿದೆ. ಇದರ 2ನೇ ಹಂತದ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಧಾರವಾಡದ ಡಾ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು. ಹೃದಯಾಘಾತವಾದ ಕೆಲವೇ ಸಮಯದಲ್ಲಿ ಬಡವರಿಗೂ ಲಭ್ಯವಾಗುವ ರೀತಿಯಲ್ಲಿ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 28,000 ರೂ. ಮೌಲ್ಯದ Tenecteplase ಇಂಜಕ್ಷನ್‌ ಅನ್ನು ಉಚಿತವಾಗಿ ನೀಡುವ ಯೋಜನೆ ಇದಾಗಿದೆ. ಹೃದಯಾಘಾತವಾದ ಕೆಲ ಸಮಯದಲ್ಲಿ ತಕ್ಷಣ ಇಸಿಜಿ ಮಾಡುವ ಸ್ಟೆಮಿ ಕಿಟ್‌ ಅನ್ನೂ ಈ ಯೋಜನೆಯಡಿ ನೀಡಲಾಗುತ್ತಿದೆ. ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರದಿಂದ ಈ ಯೋಜನೆ ಜಾರಿ…

Read More

ಬಹುಭಾಷಾ ನಟಿ ಅಮಲಾ ಪೌಲ್ ಮುದ್ದು ಮಗುವಿನ ಆಗಮದ ನಿರೀಕ್ಷೆಯಲ್ಲಿದ್ದಾರೆ. ಇದೇ ಖುಷಿಯಲ್ಲಿ ನಟಿ ಪತ್ನಿಯೊಂದಿಗೆ ಲಿಪ್​ಲಾಕ್ ಮಾಡುತ್ತಿರುವ ಫೋಟೋ ಒಂದನ್ನು ಶೇರ್ ಮಾಡಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಜೋಡಿ ಮುದ್ದಾಗ ಲಿಪ್​ಲಾಪ್ ಫೋಟೋವನ್ನು ಸಾಮಾಜಿಕ ಜಾಲಾ ತಾಣದಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಶೇರ್ ಮಾಡಿದ ಅಮಲಾ ಪೌಲ್ ಅವರ ಪತಿ ಆ ಫೋಟೋಗೆ ಸ್ವರ್ಗದಲ್ಲಿ ಪ್ರೇಮಿಗಳು ಎನ್ನುವ ಕ್ಯಾಪ್ಶನ್ ನೀಡಿದ್ದಾರೆ. ಸದ್ಯ ಗರ್ಭಿಣಿಯಾಗಿರುವ ಪತ್ನಿ ಅಮಲಾ ಪೌಲ್ ಅವರ ಜೊತೆಯೇ ಇರುವ ಅಮಲಾ ಪತಿ ಹೆಂಡತಿಯನ್ನು ಸಾಕಷ್ಟು ಕೇರ್ ಮಾಡ್ತಿದ್ದಾರೆ. ಇತ್ತೀಚೆಗೆ ಅಮಲಾ ಪೌಲ್ ಪತಿಯೊಂದಿಗೆ ಇಶಾ ಫೌಂಡೇಷನ್ ಗೆ ಭೇಟಿ ನೀಡಿದ್ದಾರೆ. ಮಹಾಶಿವರಾತ್ರಿಯನ್ನು ಇಶಾ ಫೌಂಡೇಷನ್​ನಲ್ಲಿ ಕಳೆದಿರುವ ಜೋಡಿ ಅಲ್ಲಿನ ಸುಂದರ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಅಮಲಾ ಪೌಲ್ ಅವರು ಮದುವೆಯಾಗಿ ಕೆಲವೇ ದಿನಗಳಲ್ಲಿ ಪ್ರೆಗ್ನೆನ್ಸಿ ಅನೌನ್ಸ್ ಮಾಡಿದ್ದರು. ಅವರು ಗರ್ಭಿಣಿಯಾದ ನಂತರವೇ ತುಂಬಾ ಸರಳವಾದ ಸಮಾರಂಭದಲ್ಲಿ ಆಪ್ತರ ಸಮ್ಮುಖದಲ್ಲಿ ಜಗತ್ ದೇಸಾಯಿ ಅವರನ್ನು ವಿವಾಹವಾಗಿದ್ದಾರೆ. ದಕ್ಷಿಣದ ನಟಿ ಅಮಲಾ…

Read More

ನಟಿ ಆಗಬೇಕೆಂಬ ಕನಸು ಕಂಡಿದ್ದ ಯುವತಿಯೊಬ್ಬಳು ಮೋಸದ ಜಾಲಕ್ಕೆ ಸಿಲುಕಿ ಲಕ್ಷ ಲಕ್ಷ ಕಳೆದುಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಸೂಪರ್ ಸ್ಟಾರ್ ರಜನಿಕಾಂತ್ ಹೆಸರು ಹೇಳಿಕೊಂಡು ಕಾಸ್ಟಿಂಗ್ ಡೈರೆಕ್ಟರ್ ಸುರೇಶ್ ಕುಮಾರ್ ಎಂಬಾತ ಯುವತಿಯಿಂದ ಹಣ ಸುಲಿಗೆ ಮಾಡಿದ್ದಾನೆ. ರಜನಿಕಾಂತ್ ನಟನೆಯ ಹೊಸ ಸಿನಿಮಾ Thalaiver 171- code red ಪಾತ್ರವೊಂದು ಖಾಲಿ ಇದೆ ಎಂದು ಸುರೇಶ್ ಇನ್ಸ್ಟಾಗ್ರಾಂನಲ್ಲಿ ವಿಡಿಯೊವನ್ನು ಹಂಚಿಕೊಂಡಿದ್ದರು. ಇದನ್ನು ನೋಡಿ ಯುವತಿಯೊಬ್ಬಳು ಸುರೇಶ್ ಕುಮಾರ್‌ನನ್ನು ಸಂಪರ್ಕ ಮಾಡಿದ್ದಾಳೆ.  ನಂತರ ಕಾಸ್ಟಿಂಗ್‌ಗೆ ಇಷ್ಟು ಹಣ ಖರ್ಚಾಗುತ್ತೆ ಎಂದು ಸಬೂಬು ಹೇಳಿ, ಹಂತ ಹಂತವಾಗಿ 3,94,000 ರೂ. ಹಣವನ್ನು ದೋಚಿದ್ದಾನೆ. ಇತ್ತ ಯುವತಿಯಿಂದ ಹಣ ಸುಲಿಗೆ ಮಾಡಿ, ಅವಕಾಶವನ್ನು ಕೊಡದೆ, ಹಣವನ್ನೂ ವಾಪಾಸ್ ಕೊಡದೆ ಸುರೇಶ್ ಪರಾರಿ ಆಗಿದ್ದಾನೆ. ಇತ್ತ ಹಣವೂ ಇಲ್ಲದೆ ಅವಕಾಶವೂ ಇಲ್ಲದೇ ಮೋಸ ಹೋದ ಯುವತಿ ಕಂಗಲಾಗಿದ್ದು ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಆರೋಪಿಯ ವಿರುದ್ಧ ಐಟಿ ಆಕ್ಟ್ ನಡಿ ದೂರು ದಾಖಲಾಗಿದೆ.

Read More

ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ನಟನೆಯ ಮೊದಲ ಕನ್ನಡ ಸಿನಿಮಾ ‘ಅರಬ್ಬಿ’ಯ ಟ್ರೈಲರ್ ರಿಲೀಸ್ ಆಗಿದೆ. ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಸ್ವಯಂ ನಿವೃತ್ತಿ ಪಡೆದುಕೊಂಡ ಬಳಿಕ ಕನ್ನಡ ಸಿನಿಮಾ ಒಂದರಲ್ಲಿ ನಟಿಸಿದ್ದರು. ಇದೀಗ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಟ್ರೈಲರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅರಬ್ಬಿ ಸಿನಿಮಾದಲ್ಲಿ ಅಣ್ಣಾಮಲೈ ಅವರದ್ದು ಪ್ರಮುಖ ಪಾತ್ರವಾಗಿದ್ದು ಕೆಲವು ಆಕ್ಷನ್ ದೃಶ್ಯಗಳಲ್ಲಿ ಸಹ ಕಾಣಿಸಿಕೊಂಡಿದ್ದಾರೆ. ಎರಡೂ ಕೈಗಳಿಲ್ಲದಿದ್ದರೂ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆ ಮಾಡಿರುವ ಕನ್ನಡಿಗ ಕೆಎಸ್ ವಿಶ್ವಾಸ್ ಅವರ ಜೀವನದ ಬಗ್ಗೆ ನಿರ್ಮಿಸಲಾಗಿರುವ ‘ಅರಬ್ಬಿ’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಸಿನಿಮಾನಲ್ಲಿ ತಮ್ಮ ಪಾತ್ರದಲ್ಲಿ ತಾವೇ ನಟಿಸಿದ್ದಾರೆ ವಿಶ್ವಾಸ್. ಕೈಗಳು ಇಲ್ಲದ ಅವರು ಸಮಾಜದಲ್ಲಿ ಹೇಗೆ ಸಮಸ್ಯೆಗಳನ್ನು ಎದುರಿಸಿದರು. ಅದೆಲ್ಲವನ್ನೂ ಮೆಟ್ಟಿನಿಂತು ಹೇಗೆ ಮೇಲೆ ಬಂದರು, ಸಾಧನೆ ಮಾಡಿದರು. ಅವರಿಗೆ ಸ್ಪೂರ್ತಿ ಯಾರು? ಯಾರು ಸಹಾಯ ಮಾಡಿದವರು ಎಂಬ ವಿಷಯಗಳು ಈ ಸಿನಿಮಾ ಒಳಗೊಂಡಿದೆ. ‘ಅರಬ್ಬಿ’ ಸಿನಿಮಾನಲ್ಲಿ…

Read More

ಮುಸ್ಲಿಂಮರ ಪವಿತ್ರ ರಂಜಾನ್ ತಿಂಗಳಿನಲ್ಲಿ ಕರ್ತವ್ಯದಲ್ಲಿರುವ ಪೈಲಟ್ ಗಳು ಉಪವಾಸ ಮಾಡದಂತೆ ಪಾಕ್ ಏರ್‌ ಲೈನ್‌ ಸಂಸ್ಥೆಯ ಪೈಲಟ್‍ಗಳಿಗೆ ಹಾಗೂ ವಿಮಾನದ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ. ಉಪವಾಸವಿದ್ದ ವೇಳೆ ವ್ಯಕ್ತಿಗಳಲ್ಲಿ ನಿರ್ಜಲೀಕರಣ, ಆಲಸ್ಯ ಮತ್ತು ನಿದ್ರೆಗೆ ಸಂಬಂಧಿಸಿದ ಸಮಸ್ಯೆಗೆ ಕಾರಣವಾಗಬಹುದು. ಆದ್ದರಿಂದ ಪೈಲಟ್ ಹಾಗೂ ಸಿಬ್ಬಂದಿ ಉಪವಾಸ ಮಾಡುವುದು ಬೇಡ  ಎಂಬ ವೈದ್ಯಕೀಯ ಸಲಹೆಯನ್ನು ಆಧರಿಸಿ ಈ ಸೂಚನೆ ನೀಡಲಾಗಿದೆ. ಕಾರ್ಪೋರೇಟ್ ಸುರಕ್ಷತಾ ನಿರ್ವಹಣೆ ಮತ್ತು ವಿಮಾನ ಸಿಬಂದಿ ವೈದ್ಯಕೀಯ ಕೇಂದ್ರವು ಈ ಶಿಫಾರಸನ್ನು ಅನುಮೋದಿಸಿದ್ದು ಪಾಕಿಸ್ತಾನ್ ಇಂಟರ್ ನ್ಯಾಷನಲ್ ಏರ್‌ ಲೈನ್‌ (ಪಿಐಎ)ನ ಪೈಲಟ್‍ಗಳು ಹಾಗೂ ಕ್ಯಾಬಿನ್ ಸಿಬಂದಿಗಳು ಕರ್ತವ್ಯದಲ್ಲಿರುವಾಗ ಉಪವಾಸ ನಡೆಸದಂತೆ ಸಲಹೆ ನೀಡಿದೆ. ಈ ಸಲಹೆಯನ್ನು ಆಧರಿಸಿ ಪಿಐಎ ತಕ್ಷಣ ಜಾರಿಯಾಗುವಂತೆ ಆದೇಶ ಜಾರಿಗೊಳಿಸಲಾಗಿದೆ.

Read More