ವಿಶ್ವದಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಹಾಲಿವುಡ್ ನ ಖ್ಯಾತ ಡಿ ಜೆ ಅಲೆನ್ ವಾಕರ್ ಮಾಸ್ಕ್ ಧರಿಸದೆ ಮನೆಯಿಂದ ಹೊರಗೆ ಕಾಲಿಡುವುದಿಲ್ಲ. ಸದಾ ಮಾಸ್ಕ್ ಧರಿಸಿ ಮುಖ ಮುಚ್ಚಿಕೊಂಡೆ ಇರುವ ಅಲೆನ್ ತಮ್ಮನ್ನು ಯಾರು ಗುರುತಿಸದಿರಲಿ ಎಂಬ ಕಾರಣಕ್ಕೆ ಮಾಸ್ಕ್ ಧರಿಸುವುದಾಗಿ ಹೇಳಿದ್ದಾರೆ. ಅಷ್ಟಕ್ಕೂ ಅಲೆನ್ ಮಾಸ್ಕ್ ಹಾಕಿಕೊಂಡೇ ಇರುವುದು ಯಾಕೆ? ಕೋವಿಡ್ ನಂತರವೂ ಅವರು ಮಾಸ್ಕ್ ಹಾಕಿಕೊಳ್ಳುವುದು ಯಾಕೆ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಅಂದ ಹಾಗೆ ಸಂಗತಿ ಕೋವಿಡ್ ಗಿಂತ ಮುಂಚೆಯೇ ಅವರು ಮಾಸ್ಕ್ ಧರಿಸಿಕೊಂಡೇ ಓಡಾಡುತ್ತಿದ್ದರಂತೆ. ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಂತೆ 2015ರಿಂದ ನಿರಂತವಾಗಿ ಮಾಸ್ಕ್ ಧರಿಸುತ್ತಿದ್ದಾರಂತೆ. ಬೆಂಗಳೂರಿನಲ್ಲಿ ನಡೆದ ಆರ್.ಸಿ.ಬಿ ಅನ್ ಬಾಕ್ಸ್ ಕಾರ್ಯಕ್ರಮಕ್ಕೂ ಅಲೆನ್ ಆಗಮಿಸಿದ್ದರು. ಆಗಲೂ ಅವರು ಮಾಸ್ಕ್ ಧರಿಸಿಕೊಂಡೇ ಇದ್ದರು. ಕಾರ್ಯಕ್ರಮದಲ್ಲಾದರೂ ಅವರು ಮಾಸ್ಕ್ ತೆಗೆಯುತ್ತಾರೆ ಎನ್ನುವ ನಂಬಿಕೆ ಇತ್ತು. ಆದರೆ, ಅವರು ಕೊನೆಗೂ ಮಾಸ್ಕ್ ತಗೆಯಲಿಲ್ಲ. ಹಾಗೆಯೇ ಕಾರ್ಯಕ್ರಮ ನಡೆಸಿಕೊಟ್ಟು ಮತ್ತಷ್ಟು ಕುತೂಹಲ ಮೂಡಿಸಿದರು. ಮಾಸ್ಕ್ ಇಲ್ಲದೇ ಓಡಾಡಿದರೆ, ಜನರು ತಮ್ಮನ್ನು…
Author: Author AIN
ಬನಾರಸ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟ ಝೈದ್ ಖಾನ್ ಸದ್ಯ ಸಖತ್ ಬ್ಯುಸಿಯಾಗಿದ್ದಾರೆ. ‘ಉಪಾಧ್ಯಕ್ಷ’ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಜೊತೆ ಝೈದ್ ಖಾನ್ ಕೈ ಜೋಡಿಸಿದ್ದು ಇದೀಗ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಝೈದ್ ಖಾನ್ ಹಾಗೂ ಅನಿಲ್ ಕುಮಾರ್ ಕಾಂಬಿನೇಷನ್ ನ ಚಿತ್ರದ ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇನ್ನು ಈ ನೂತನ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ? ಕುತೂಹಲ ಅಭಿಮಾನಿ ವಲಯದಲ್ಲಿದೆ. ಫಸ್ಟ್ ಲುಕ್ ನಲ್ಲೇ ಚಿತ್ರದ ಶೀರ್ಷಿಕೆ ಸಹ ಅನಾವರಣವಾಗಲಿದೆ. ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.
ಟಾಲಿವುಡ್ ಸ್ಟಾರ್ ರಾಮ್ಚರಣ್ ಹಾಗೂ ಸ್ಯಾಂಡಲ್ ವುಡ್ ಸ್ಟಾರ್ ಶಿವರಾಜ್ಕುಮಾರ್, ಬಿಟೌನ್ ಬ್ಯೂಟಿ ಜಾನ್ವಿ ಕಪೂರ್ ನಟನೆಯ ಹೊಸ ಸಿನಿಮಾಗೆ ಇಂದು (ಮಾ.20) ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಮುಹೂರ್ತ ಕಾರ್ಯಕ್ರಮಕ್ಕೆ ರಾಮ್ ಚರಣ್, ಜಾನ್ವಿ, ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಅನೇಕರು ಭಾಗಿಯಾಗಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ನಟಿ ಜಾನ್ವಿ ಕಪೂರ್ ಈಗಾಗಲೇ ತೆಲುಗಿನತ್ತ ಮುಖ ಮಾಡಿದ್ದಾರೆ. ಜ್ಯೂ.ಎನ್ಟಿಆರ್ ಜೊತೆ ಡ್ಯುಯೇಟ್ ಹಾಡಿದ ಮೇಲೆ ರಾಮ್ಚರಣ್ ಜೊತೆ ರೊಮ್ಯಾನ್ಸ್ ಮಾಡೋದಕ್ಕೆ ರೆಡಿಯಾಗಿದ್ದಾರೆ. ರಾಮ್ ಚರಣ್ ನಟನೆಯ 16ನೇ ಚಿತ್ರಕ್ಕೆ ಇದೀಗ ಅದ್ಧೂರಿಯಾಗಿ ಮುಹೂರ್ತ ನಡೆದಿದೆ. ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ರಾಮ್ಚರಣ್-ಉಪಾಸನಾ, ಬುಚ್ಚಿಬಾಬು ಜೊತೆ ಡೈರೆಕ್ಟರ್ ಶಂಕರ್, ಎ.ಆರ್ ರೆಹಮಾನ್, ಪುಷ್ಪ ಡೈರೆಕ್ಟರ್ ಸುಕುಮಾರ್, ಮೆಗಾಸ್ಟಾರ್ ಚಿರಂಜೀವಿ, ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಮೊದಲ ಬಾರಿಗೆ ರಾಮ್- ಜಾನ್ವಿ ಕಪೂರ್ ಜೋಡಿಯಾಗಿ ನಟಿಸುತ್ತಿರೋದ್ರಿಂದ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಾಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಕೂಡ ಚಿತ್ರದಲ್ಲಿ ಬಹುಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.…
ತಮಿಳು ಸ್ಟಾರ್ ನಟ ಸೂರ್ಯ ನಟನೆಯ ‘ಕಂಗುವ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಅದ್ಧೂರಿ ಮೇಕಿಂಗ್, ಕಲಾವಿದ ಆರ್ಭಟ. ದೃಶ್ಯ ವೈಭವ ಹಾಗೂ ಹಿನ್ನೆಲೆ ಸಂಗೀತದಿಂದಾಗಿ ಟೀಸರ್ ಸಾಕಷ್ಟು ಹೈಲೈಟ್ ಆಗಿದೆ. ಹೊಡೆದಾಟ, ರಕ್ತದೋಕುಳಿ, ಹೊಸ ಬಗೆಯ ಆಯುಧ, ರಾಕ್ಷಸರು ಹೀಗೆ ನಾನಾ ರೀತಿಯ ದೃಶ್ಯಗಳು ಟೀಸರ್ ನಲ್ಲಿದೆ. ಇತ್ತೀಚೆಗಷ್ಟೇ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿತ್ತು. ಈ ಪೋಸ್ಟರ್ ನಲ್ಲಿ ಸೂರ್ಯ ಸಖತ್ ಮಿಂಚಿದ್ದರು. ಪೋಸ್ಟರ್ ಕಂಡು ಅಭಿಮಾನಿಗಳು ಫಿದಾ ಆಗಿದ್ದರು. ಜೊತೆಗೆ ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಜೊತೆಗೆ 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಸಿನಮಾ ಬಿಡುಗಡೆಗೂ ಮುನ್ನವೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ. ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗಿದ್ದು ಚಿತ್ರತಂಡಕ್ಕೆ ಮತ್ತಷ್ಟು ಖುಷಿ ನೀಡಿದೆ. ಅಮೆಜಾನ್ ಪ್ರೈಮ್ ಸಂಸ್ಥೆಯು ಕಂಗುವ ಸಿನಿಮಾದ ಓಟಿಟಿ \ಹಕ್ಕನ್ನು ಬರೋಬ್ಬರಿ 80 ಕೋಟಿಗೆ ಖರೀದಿ ಮಾಡಿದೆ ಎಂಬ ಸುದ್ದಿ…
ಪಾಕಿಸ್ತಾನದಲ್ಲಿ ಇಂದು ಮುಂಜಾನೆ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಭಾರತೀಯ ಕಾಲಮಾನದ ಪ್ರಕಾರ ಮುಂಜಾನೆ 2:57 ಕ್ಕೆ ಭೂಕಂಪ ಸಂಭವಿಸಿದ್ದು, ಅದರ ಆಳವನ್ನು 105 ಕಿ.ಮೀ ಎಂದು ಅಳೆಯಲಾಗಿದೆ. 5.5 ತೀವ್ರತೆಯ ಭೂಕಂಪವು 20-03-2024, 02:57:11 ಭಾರತೀಯ ಕಾಲಮಾನ, ಲಾಟ್: 29.74 ಮತ್ತು ಉದ್ದ: 65.93, ಆಳ: 105 ಕಿ.ಮೀ, ಸ್ಥಳ: ಪಾಕಿಸ್ತಾನ” ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಸಾಮಾಜಿಕ ಮಾಧ್ಯಮದಲ್ಲಿ ಬರೆದಕೊಂಡಿದೆ.
ಸ್ಟಾರ್ ನಟಿ ಸಮಂತಾ ಸದ್ಯ ವರುಣ್ ಧವನ್ ಜೊತೆಗಿನ ‘ಹನಿ ಬನಿ’ ವೆಬ್ ಸರಣಿ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಸಮಂತಾ ನಟಿ ತಮನ್ನಾ ಭಾಟಿಯಾ ಬಾಯ್ಫ್ರೆಂಡ್ ವಿಜಯ್ ವರ್ಮಾ ಜೊತೆ ಕಾಣಿಸಿಕೊಂಡಿದ್ದಾರೆ. ಸಮಂತಾ ಹಾಗೂ ವಿಜಯ್ ವರ್ಮಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಟಿಟಿ ಕಾರ್ಯಕ್ರಮವೊಂದರಲ್ಲಿ ವಿಜಯ್ ವರ್ಮಾ ಜೊತೆ ಸಮಂತಾ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ವೈರಲ್ ಆಗಿರುವ ವಿಡಿಯೋವೊಂದರಲ್ಲಿ ವಿಜಯ್ ಜೊತೆ ಮಾತನಾಡುತ್ತಾ ನಗು ನಗುತ್ತಾ ಸಮಂತಾ ಬರುತ್ತಿದ್ದಾರೆ. ಸಾಮಾನ್ಯವಾಗಿ ಸಿನಿಮಾ ರಂಗದಲ್ಲಿ ಸೆಲೆಬ್ರಿಟಿಗಳು ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗೋದಿಲ್ಲ. ಇದೇ ಕಾರಣಕ್ಕೆ ಸ್ಟಾರ್ಸ್ ಗಳ ಕಾರ್ಯಕ್ರಮದಲ್ಲಿ ಮತ್ತೋರ್ವ ಸ್ಟಾರ್ಸ್ ಕಾಣಿಸೋದಿಲ್ಲ. ಆದರೆ ಈ ಮಾತನ್ನು ಸಮಂತಾ ತಮನ್ನಾ ಹುಸಿ ಮಾಡಿದ್ದಾರೆ. ಒಟಿಟಿ ಕಾರ್ಯಕ್ರಮದಲ್ಲಿ ಹಲವು ತಿಂಗಳುಗಳ ಬಳಿಕ ವಿಜಯ್ ಜೊತೆಯೇ ತಮನ್ನಾ ಅವರು ಸಮಂತಾರನ್ನು ಭೇಟಿಯಾಗಿದ್ದಾರೆ. ಇಬ್ಬರು ಖುಷಿಯಿಂದ ತಬ್ಬಿಕೊಂಡು ಫೋಟೋ ತೆಗೆದುಕೊಂಡಿದ್ದಾರೆ. ಅಸಲಿಗೆ ಆ ಫೋಟೋವನ್ನು ಕ್ಲಿಕ್ ಮಾಡಿದ್ದೇ ವಿಜಯ್ ವರ್ಮಾ.…
ರಕ್ಷಿತ್ ಶೆಟ್ಟಿ ನಟನೆಯ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ನಿರ್ದೇಶನ ಮಾಡಿದ್ದ ಸಚಿನ್ ರವಿ ಇದೀಗ ಬಾಲಿವುಡ್ ಸ್ಟಾರ್ ಶಾಹಿದ್ ಕಪೂರ್ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಈಗಾಗಲೇ ಟೈಟಲ್ ಇಡಲಾಗಿದ್ದು, ಮುಂಬೈನಲ್ಲಿ ನಡೆದ ಒಟಿಟಿ ಕಾರ್ಯಕ್ರಮದಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ. ಸಚಿನ್ ರವಿ ಹಾಗೂ ಶಾಹಿದ್ ಕಪೂರ್ ಕಾಂಬಿನೇಷನ್ ನ ಸಿನಿಮಾಗೆ ‘ಅಶ್ವತ್ಥಾಮ: ದಿ ಸಾಗಾ ಕಂಟಿನ್ಯೂಸ್’ ಎಂಬ ಟೈಟಲ್ ಇಡಲಾಗಿದೆ. ಈ ಕಥೆಯಲ್ಲಿ ಅಶ್ವತ್ಥಾಮ ವರ್ತಮಾನದಲ್ಲಿರುವ ನಾಯಕ. ಅಮರತ್ವದ ಪರಿಕಲ್ಪನೆಯನ್ನು ಶೋಧಿಸುವ ಕೆಲಸ ಆತನದ್ದು. ಇಷ್ಟನ್ನಷ್ಟೇ ಹೇಳಬಲ್ಲೆ. ಆದರೆ ಈ ಚಿತ್ರ ಅದ್ಭುತ ಆ್ಯಕ್ಷನ್ ಇರುವ, ಮತ್ತು ಎಲ್ಲಾ ತಲೆಮಾರಿನ ವೀಕ್ಷಕರನ್ನೂ ಸೆಳೆಯಬಲ್ಲ ಚಿತ್ರವಾಗಲಿದೆ. ಅಶ್ವತ್ಥಾಮನಂತೆ ಅಮರತ್ವ ಹೊಂದಿರುವ ವ್ಯಕ್ತಿಗಳನ್ನು ಚಿತ್ರದಲ್ಲಿ ತರುವ ಪ್ರಯತ್ನವೂ ಇರಲಿದೆ. ಕಾಲ್ಪನಿಕ ಸನ್ನಿವೇಶನಗಳ ಅನ್ವೇಷಣೆ ಹಾಗೂ ಅದರ ಸಾಧ್ಯತೆ ಕುರಿತು ಕಥೆ ರಚಿಸಿ, ಸಾಧ್ಯವಾಗಿಸುವುದು ಚಿತ್ರ ನಿರ್ದೇಶನಕಾಗಿ ಸವಾಲಿನ ಕೆಲಸ. ನನ್ನ ಬಾಲ್ಯದಿಂದಲೂ ಅಶ್ವತ್ಥಾಮನ ಪಾತ್ರ ನನ್ನ ಮೇಲೆ ಬಹಳಷ್ಟು ಪ್ರಭಾವ…
ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜೆಂಟೀನಾದ ಟಾಪ್ ಫ್ಲೈಟ್ ಕ್ಲಬ್ ವೆಲೆಜ್ ಸಾರ್ಸ್ಫೀಲ್ಡ್ನ ನಾಲ್ವರು ಫುಟ್ಬಾಲ್ ಆಟಗಾರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋಲ್ಕೀಪರ್ ಸೆಬಾಸ್ಟಿಯನ್ ಸೋಸಾ, ಡಿಫೆಂಡರ್ ಬ್ರೈನ್ ಕು-ಫ್ರು , ಮಿಡ್ಫೀಲ್ಡರ್ ಜೋಸ್ ಇಗ್ನಾಸಿಯೊ -ಪ್ರೊರೆಂಟಿನ್ ಮತ್ತು ಸ್ಟ್ರಜೈಕರ್ ಅಬಿಯೆಲ್ ಒಸೊರಿಯೊ ಎಂಬುವವರನ್ನು ಬಂಧಿಸಲಾಗಿದೆ. ಕಳೆದ ಮಾರ್ಚ್ 3 ರಂದು ಮಹಿಳೆಯೋರ್ವಳು ಆಟಗಾರನೊಂದಿಗೆ ರೂಮಿಗೆ ತೆರಳಿದ್ದಾಳೆ. ಈ ವೇಳೆ ಅಲ್ಲಿದ್ದ ಮೂವರು ಪುರುಷರು ಆಕೆಯನ್ನು ಅತ್ಯಾಚಾರ ಎಸಗಿದ್ದಾರೆ. ಸ್ಯಾನ್ ಮಿಗುಯೆಲ್ ಡಿ ಟುಕುಮಾನ್ನಲ್ಲಿ ಕೇಸ್ ಪ್ರಾಸಿಕ್ಯೂಟರ್ ಮರಿಯಾ ಯುಜೆನಿಯಾ ಪೊಸ್ಸೆ ಅವರ ಸೂಚನೆ ಮೇರೆಗೆ ಫುಟ್ಬಾಲ್ ಆಟಗಾರರನ್ನು ಬಂಧಿಸಲಾಗಿದೆ. 10 ರಾಷ್ಟ್ರೀಯ ಪ್ರಶಸ್ತಿಗಳು ಮತ್ತು 1994 ರ ಕೋಪಾ ಲಿಬರ್ಟಡೋರ್ಸ್ ಟ್ರೋಫಿ ಹೊಂದಿರುವ ಐತಿಹಾಸಿಕ ಕ್ಲಬ್ ವೆಲೆಜ್ , ಅವರು ಬಂಧಿಸಲ್ಪಟ್ಟ ನಂತರ ಎಲ್ಲಾ ನಾಲ್ಕು -ಫುಟ್ಬಾಲ್ ಆಟಗಾರರ ಒಪ್ಪಂದಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು. ಈ ಕ್ಲಬ್ ನಮ್ಮ ಸಂಸ್ಥೆಯ ತತ್ವಗಳು ಮತ್ತು ಮೌಲ್ಯಗಳಿಗೆ ಸ್ಪಷ್ಟವಾಗಿ…
ಮುಂಬರುವ 2025ರ ಆರ್ಥಿಕ ವರ್ಷಕ್ಕೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾಗಳ ಆರಂಭಿಕ ನೋಂದಣಿ ಅವಧಿಯು ಮಾರ್ಚ್ 22 ರಂದು ಮುಕ್ತಾಯಗೊಳ್ಳಲಿದೆ ಎಂದು ಫೆಡರಲ್ ಏಜೆನ್ಸಿ ಮಾಹಿತಿ ನೀಡಿದೆ. H-1B ವೀಸಾ ವಲಸೆ ರಹಿತ ವೀಸಾ ಆಗಿದ್ದು, ಇದು ಅಮೆರಿಕ ಕಂಪನಿಗಳಿಗೆ ಸೈದ್ಧಾಂತಿಕ ಅಥವಾ ತಾಂತ್ರಿಕ ಪರಿಣತಿಯ ಅಗತ್ಯವಿರುವ ವಿಶೇಷ ಉದ್ಯೋಗಗಳಲ್ಲಿ ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಭಾರತ ಮತ್ತು ಚೀನಾದಂತಹ ದೇಶಗಳಿಂದ ಪ್ರತಿ ವರ್ಷ ಹತ್ತು ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ತಂತ್ರಜ್ಞಾನ ಕಂಪನಿಗಳು ಇದನ್ನು ಅವಲಂಬಿಸಿವೆ. 2025 ರ ಹಣಕಾಸು ವರ್ಷದಲ್ಲಿ ವಿದೇಶಿ ಅತಿಥಿ ಉದ್ಯೋಗಿಗಳಿಗೆ ಹೆಚ್ಚು ಬೇಡಿಕೆಯಿರುವ H-1B ವೀಸಾಗಳ ಆರಂಭಿಕ ನೋಂದಣಿ ಅವಧಿಯು ಮಾರ್ಚ್ 22 ರಂದು ಮದ್ಯಾಹ್ನ 12ಕ್ಕೆ ಮುಕ್ತಾಯಗೊಳ್ಳುತ್ತದೆ ಎಂದು ಅಮೆರಿಕ ಪೌರತ್ವ ಮತ್ತು ವಲಸೆ ಸೇವೆಗಳ ಇಲಾಖೆ ತಿಳಿಸಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೆಲುವು ಸಿಗಲಿ ಎಂದು ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಐಟಿ ತಂತ್ರಜ್ಞರು ಹೋಮ ನಡೆಸಿದ್ದಾರೆ. ಸಿಲಿಕಾನ್ ವ್ಯಾಲಿಯಲ್ಲಿರುವ ಹಿಂದೂ ದೇವಾಲಯದಲ್ಲಿ ಪೂಜೆ ಆಯೋಜಿಸಿ ಮೋದಿ ಗೆಲುವಿಗೆ ಸಾಕಷ್ಟು ಮಂದಿ ಪ್ರಾರ್ಥನೆ ಸಲ್ಲಿಸಿದರು. ‘ಇದು ಕೇವಲ ಒಂದು ಧಾರ್ಮಿಕ ಕಾರ್ಯಕ್ರಮವಲ್ಲ. ಬದಲಿಗೆ ನಮ್ಮ ಬೇಡಿಕೆಗಳ ಈಡೇರಿಕೆಗೆ ಸಲ್ಲಿಸುತ್ತಿರುವ ಸಾಮೂಹಿಕ ಆವಾಹನೆಯಾಗಿದೆ. ಅನಿವಾಸಿ ಭಾರತೀಯರು ಹಾಗೂ ದೊಡ್ಡ ಸಂಖ್ಯೆಯಲ್ಲಿ ನೆಲೆಸಿರುವ ಭಾರತೀಯರ ಪ್ರಾರ್ಥನೆಯಾಗಿದೆ’ ಎಂದು ಆಯೋಜಕರು ಹೇಳಿದ್ದಾರೆ. ಹವನ ಸಂದರ್ಭದಲ್ಲಿ ‘ಅಬ್ ಕೀ ಬಾರ್ 400 ಪಾರ್’ ಘೊಷಣೆಯನ್ನು OFBJP ಸದಸ್ಯರು ಕೂಗಿದರು. ಬರಲಿರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನಾಯಕತ್ವದಲ್ಲಿ ಬಿಜೆಪಿಯು ಸ್ಪಷ್ಟ ಬಹುಮತದೊಂದಿಗೆ ವಿಜಯ ದಾಖಲಿಸಿದೆ ಎಂದು ಭವಿಷ್ಯ ನುಡಿದರು. ‘ಈ ಧಾರ್ಮಿಕ ಸಂಘಟನೆಯು ನಾವು ಪ್ರಜಾಪ್ರಭುತ್ವದಲ್ಲಿ ಇಟ್ಟಿರುವ ಆಳವಾದ ನಂಬಿಕೆ ಹಾಗೂ ಭಾರತದಲ್ಲಿ ಮುಂದುವರಿದಿರುವ ಆಡಳಿತಾತ್ಮಕ ಸುಧಾರಣೆ ಮತ್ತು ಪ್ರಗತಿಯ ಪ್ರತಿಫಲನವಾಗಿದೆ’ ಎಂದಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯು ಏ.…