Author: Author AIN

ಐಪಿಎಲ್‌ 17ನೇ ಆವೃತ್ತಿ ಶುರುವಾಗಲು ಇನ್ನೇನು ಕೆಲ ದಿನಗಳ ಮಾತ್ರವೇ ಬಾಕಿಯಿದೆ. ಮಾರ್ಚ್‌ 19ಕ್ಕೆ ಆರ್‌ಸಿಬಿ ಅನ್‌ಬಾಕ್ಸ್‌ ಕಾರ್ಯಕ್ರಮವಿದ್ದು ಮೊದಲ ಪ್ರೋಮೋದಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದರು. ಬಳಿಕ ಅಶ್ವಿನಿ ಪುನೀತ್‌ ರಾಜ್‌ಕುಮಾರ್, ಶಿವರಾಜ್‌ಕುಮಾರ್ ಕಾಣಿಸಿಕೊಳ್ಳುವ ಮೂಲಕ ಆರ್‌ಸಿಬಿ ಹೆಸರು ಬದಲಿಸುವ ಬಗ್ಗೆ ಸುಳಿವು ನೀಡಿದ್ದರು. ಇದೀಗ ಕಿಚ್ಚ ಸುದೀಪ್ ಕೂಡ ಆರ್‌ಸಿಬಿ ಹೊಸ ಪ್ರೋಮೋದಲ್ಲಿ ಕಾಣಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನ್‌ ಬಾಕ್ಸ್ ಈವೆಂಟ್ ಕುರಿತ ಪ್ರೋಮೊದಲ್ಲಿ ಸುದೀಪ್ ಸ್ಟೈಲೀಶ್‌ ಆಗಿ ಕಾಣಿಸಿಕೊಂಡಿದ್ದಾರೆ. ಹೋಟೆಲ್‌ನಲ್ಲಿ ಕಿಚ್ಚ ಸ್ಟೈಲ್ ಆಗಿ ಬಂದು ಡೈನಿಂಗ್ ಟೇಬಲ್ ಮೇಲೆ ಕೂರುತ್ತಾರೆ. ಈ ವೇಳೆ ಮೂರು ಇಡ್ಲಿ ಬರತ್ತೆ. ಅದರಲ್ಲಿ ಮೂರನೆ ಇಡ್ಲಿ ಬೇಡ ಎಂದು ಬಳಿಕ ಯಾಕೆ ಅಂತ ಅರ್ಥ ಆಯ್ತಾ? ಎಂದು ಸುದೀಪ್ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಅಭಿಮಾನಿಗಳ ಆರ್ ಸಿ ಬಿ ಹೆಸರು ಬದಲಾಗುವ ಸೂಚನೆಯನ್ನು ಸುದೀಪ್ ನೀಡಿದ್ದಾರೆ. ಆರ್‌ಸಿಬಿ ಐಪಿಎಲ್ ಕ್ರಿಕೆಟ್ ತಂಡದ ಜೊತೆ ಹೊಂಬಾಳೆ ಸಂಸ್ಥೆ ಕೂಡ ಸಾಥ್…

Read More

ಪಂಜಾಬಿಯ ಖ್ಯಾತ ಗಾಯಕ ಸಿಧು ಮೂಸೆವಾಲ ಮೃತಪಟ್ಟ ಎರಡು ವರ್ಷಗಳ ಬಳಿಕ ಅವರ ತಾಯಿ ಚರಣ್ ಕೌರ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಎರಡು ವರ್ಷಗಳ ಹಿಂದೆ ಸಿಧು ಮೂಸೆವಾಲ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಬಳಿಕ ಚರಣ್ ಕೌರ್ ಮತ್ತೊಮ್ಮೆ ಗಂಡು ಮಗುವಿನ ತಾಯಿಯಾಗಿದ್ದಾರೆ. ಈ ಕುರಿತು ಸಿಧು ಅವರ ತಂದೆ ಬಲ್ಕೌರ್ ಸಿಂಗ್ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಮಗುವಿನೊಂದಿಗಿರುವ ಫೋಟೋ ಹಂಚಿಕೊಂಡಿದ್ದಾರೆ.  ಶುಭದೀಪ್‌ನನ್ನು ಪ್ರೀತಿಸುವ ಲಕ್ಷಾಂತರ ಜನರ ಆಶೀರ್ವಾದದಿಂದ ದೇವರು ಶುಭದೀಪ್ ಅವರ ಕಿರಿಯ ಸಹೋದರರನ್ನು ನಮ್ಮ ತೋಳಿಗೆ ಹಾಕಿದ್ದಾನೆ. ವಾಹೆಗುರುಗಳ ಆಶೀರ್ವಾದದಿಂದ ಕುಟುಂಬವು ಆರೋಗ್ಯವಾಗಿದೆ ಎಂದು ಪೋಸ್ಟ್ ಮಾಡುವ ಮೂಲಕ ಮಗುವಿನ ಆಗಮನದ ಸುದ್ದಿಯನ್ನು ತಿಳಿಸಿದ್ದಾರೆ. ಸಿಧು ತಾಯಿ 58ನೇ ವಯಸ್ಸಿನಲ್ಲಿ ಮತ್ತೆ ಗರ್ಭಿಣಿಯಾಗಿದ್ದಾರೆ ಎಂಬ ವಿಷಯ ಎಲ್ಲೆಡೆ ಹರಿದಾಡಿತ್ತು. ಈ ಸುದ್ದಿಯನ್ನು ಚರಣ್ ಕೌರ್ ಸ್ಪಷ್ಟಪಡಿಸಿದ್ದರು. ಸಿಧು ಮೂಸೆವಾಲ ಅವರು ತನ್ನ ತಂದೆ ತಾಯಿಗೆ ಒಬ್ಬನೇ ಮಗ ಆಗಿದ್ದರು. ಅಂತಹ ಪರಿಸ್ಥಿತಿಯಲ್ಲಿ, ತನ್ನ ಮಗನನ್ನು…

Read More

ಅಮೆರಿಕದ ಇಂಡಿಯಾನಾ ಮತ್ತು ಓಹಿಯೊ ರಾಜ್ಯದ ಗ್ರಾಮೀಣ ಭಾಗದಲ್ಲಿ ಅಪ್ಪಳಿಸಿದ ಚಂಡಮಾರುತದಿಂದ ಕನಿಷ್ಠ 3 ಮಂದಿ ಮೃತಪಟ್ಟಿದ್ದು 38ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಓಹಿಯೋದ ಲೊಗಾನ್ ಕೌಂಟಿಯಲ್ಲಿ ಮೂರು ಸಾವಿನ ಪ್ರಕರಣ ವರದಿಯಾಗಿದೆ. ಚಂಡಮಾರುತದಿಂದ ವಿದ್ಯುತ್ ಪೂರೈಕೆ ಜಾಲಕ್ಕೆ ಹಾನಿಯಾಗಿರುವುದರಿಂದ ಹಲವೆಡೆ ವಿದ್ಯುತ್ ಸಮಸ್ಯೆ ಕಾಣಿಸಿಕೊಂಡಿದೆ. ಜೊತೆಗೆ ಪರಿಹಾರ ಕಾರ್ಯಾಚರಣೆಗೆ ತೊಡಕಾಗಿದೆ. ಹಲವು ಮನೆಗಳು ಕುಸಿದಿದ್ದು ಇದರಿಂದ ಜನ ಜೀವನ ಅಸ್ತ ವ್ಯಸ್ಥವಾಗಿದೆ. ಭಾರೀ ಗಾತ್ರದ ಮರಗಳು ರಸ್ತೆಗೆ ಉರುಳಿಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಓಹಿಯೋದ ಮುಖ್ಯಾಧಿಕಾರಿ ರ್ಯಾಂಡಲ್ ಡಾಡ್ಸ್ ಹೇಳಿದ್ದಾರೆ. ಪೂರ್ವ ಇಂಡಿಯಾನಾದಲ್ಲಿ ಮೂವರು ನಿಧನರಾಗಿದ್ದು, 38 ಮಂದಿ ಗಾಯಗೊಂಡಿದ್ದು, 22 ಮನೆಗಳು ನಾಶವಾಗಿದ್ದು 100ಕ್ಕೂ ಅಧಿಕ ಮನೆಗಳು ತೀವ್ರವಾಗಿ ಹಾನಿಗೊಳಗಾಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Read More

ಮಾಲ್ದೀವ್ಸ್ ನಲ್ಲಿ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರನ್ನು ಕಾರ್ಯಾಚರಿಸುತ್ತಿದ್ದ ಭಾರತೀಯ ಸೇನಾ ಸಿಬ್ಬಂದಿಗಳ ಮೊದಲ ತಂಡವು ಭಾರತಕ್ಕೆ ಮರಳಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತಿಳಿಸಿದೆ. ಮಿಲಿಟರಿ ತಂಡದ ಬದಲು ಮಾಲ್ಡೀವ್ಸ್ ನಲ್ಲಿ ನಾಗರಿಕ ತಾಂತ್ರಿಕ ತಜ್ಞರನ್ನು ನಿಯೋಜಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ. ಮಾಲ್ದೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಅವರು ತನ್ನ ದೇಶದಿಂದ ಭಾರತೀಯ ಸೇನಾ ಸಿಬ್ಬಂದಿಗಳ ಮೊದಲ ತಂಡವನ್ನು ವಾಪಸ್ ಕರೆಸಿಕೊಳ್ಳಲು ಮಾ.10ರ ಗಡುವನ್ನು ವಿಧಿಸಿದ್ದರು. ನವಂಬರ್ ನಲ್ಲಿ ಮುಯಿಝ್ಝು ಅಧಿಕಾರಕ್ಕೆ ಬಂದ ಬಳಿಕ ಭಾರತ ಮತ್ತು ಮಾಲ್ದೀವ್ಸ್ ನಡುವಿನ ಸಂಬಂಧಗಳು ಸ್ವಲ್ಪ ಹಳಿತಪ್ಪಿವೆ. ಚೀನಾ ಪರ ನಾಯಕರಾಗಿ ವ್ಯಾಪಕವಾಗಿ ಪರಿಗಣಿಸಲಾಗಿರುವ ಮುಯಿಝ್ಝು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ತನ್ನ ದೇಶದಿಂದ ಭಾರತೀಯ ಸೇನಾ ಸಿಬ್ಬಂದಿಗಳನ್ನು ತೆರವುಗೊಳಿಸುವ ತನ್ನ ಚುನಾವಣಾ ಭರವಸೆಯನ್ನು ಉಳಿಸಿಕೊಳ್ಳುವುದಾಗಿ ತಿಳಿಸಿದರು.

Read More

ಪಾಕಿಸ್ತಾನದ ಉತ್ತರ ವಜಿರಿಸ್ತಾನ್ ಜಿಲ್ಲೆಯ ಮಿರ್ ಅಲಿ ಪ್ರದೇಶದ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದು ದಾಳಿಯಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ಏಳು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇಂಟರ್ ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಉಲ್ಲೇಖಿಸಿ ಡಾನ್ ವರದಿ ಮಾಡಿದೆ. ಆರು ಭಯೋತ್ಪಾದಕರ ಗುಂಪು ಶನಿವಾರ ಮುಂಜಾನೆ ಉತ್ತರ ವಜಿರಿಸ್ತಾನದ ಮಿರ್ ಅಲಿಯ ಸಾಮಾನ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳ ಪೋಸ್ಟ್ ಮೇಲೆ ದಾಳಿ ನಡೆಸಿದೆ. ಈ ವೇಳೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ. ಆರಂಭಿಕ ದಾಳಿಯಲ್ಲಿ ಮೃತಪಟ್ಟ ಸೈನಿಕರನ್ನು ಹವಿಲ್ದಾರ್ ಸಬೀರ್, ನಾಯಕ್ ಖುರ್ಷಿದ್, ಸಿಪಾಯಿ ನಾಸಿರ್, ಸಿಪಾಯಿ ರಾಜಾ ಮತ್ತು ಸಿಪಾಯಿ ಸಜ್ಜಾದ್ ಎಂದು ಗುರುತಿಸಲಾಗಿದೆ ಎಂದು ಡಾನ್ ವರದಿಯಲ್ಲಿ ಉಲ್ಲೇಖಿಸಿದೆ.

Read More

ವರ್ಷದ ಕೊನೆಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ತಾವು ಅಧ್ಯಕ್ಷರಾಗಿ ಆಯ್ಕೆಯಾಗದಿದ್ದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಓಹಿಯೋದ ಡೇಟನ್ ಬಳಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ” ನಾನು ಚುನಾಯಿತನಾಗದಿದ್ದರೆ, ದೇಶದಲ್ಲಿ ರಕ್ತಪಾತವಾಗಲಿದೆ” ಎಂದು ಹೇಳಿದ್ದಾಗಿ ಪೊಲಿಟಿಕೊ ವರದಿ ಮಾಡಿದೆ. ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಆಟೋಮೊಬೈಲ್ ಉದ್ಯಮದ ಬಗ್ಗೆ ದೂರುತ್ತಿರುವುದರಿಂದ ಟ್ರಂಪ್ ಅವರ ಹೇಳಿಕೆಗಳ ನಿಖರವಾದ ಅರ್ಥವೇನು ಎಂಬುದು ಸ್ಪಷ್ಟವಾಗಿಲ್ಲ. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ತಾವು ಮತ್ತೆ ಆಯ್ಕೆಯಾದರೆ ಯುಎಸ್ ಗೆ ಆಮದು ಮಾಡಿಕೊಳ್ಳುವ ಯಾವುದೇ ವಾಹನಗಳನ್ನು ಚೀನಾ ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ. ನವೆಂಬರ್ ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಮುಂಚಿತವಾಗಿ ಯುಎಸ್ ಅಧ್ಯಕ್ಷ ಜೋ ಬೈಡನ್ ವಿರುದ್ಧ ತಮ್ಮ ಪ್ರಕರಣವನ್ನು ಪ್ರಸ್ತುತಪಡಿಸಲು ಟ್ರಂಪ್ ಆಗಾಗ್ಗೆ ರಾಷ್ಟ್ರದ ಕರಾಳ ಚಿತ್ರಣವನ್ನು ಪ್ರದರ್ಶಿಸುತ್ತಾರೆ. ಜನವರಿ 6, 2021 ರಂದು ಕ್ಯಾಪಿಟಲ್ ಮೇಲಿನ ದಾಳಿಗೆ ಮುಂಚಿತವಾಗಿ 2020 ರ ಅಧ್ಯಕ್ಷೀಯ ಚುನಾವಣಾ ಫಲಿತಾಂಶಗಳನ್ನು ಉರುಳಿಸುವ…

Read More

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟಿದ ದಿನ ಇಂದು. ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ಅಪ್ಪು ಸ್ಮಾರಕದ ಬಳಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದು ಅಗಲಿದ ದಿವ್ಯ ಚೇತನಕ್ಕೆ ನಮನ ಸಲ್ಲಿಸಿದ್ದಾರೆ. ಅಪ್ಪು ಬರ್ತಡೇ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಿಂದಲೇ ಹಲವು ರೀತಿಯ ಕಾರ್ಯಕ್ರಮಗಳು ಕಂಠೀರವ ಸ್ಟುಡಿಯೋನಲ್ಲಿನ ಅಪ್ಪು ಸ್ಮಾರಕ ಬಳಿ ಪ್ರಾರಂಭವಾಗಿವೆ. ರಾತ್ರಿಯೇ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಂದಹಾಗೆ ಅಪ್ಪುವಿನ ಈ ಹುಟ್ಟುಹಬ್ಬವನ್ನು ‘ಸ್ಪೂರ್ತಿಯ ಹಬ್ಬ’ವನ್ನಾಗಿ ಆಚರಿಸಲಾಗುತ್ತಿದೆ. ಹುಟ್ಟುಹಬ್ಬದ ಅಂಗವಾಗಿ ಅಪ್ಪುವಿನ ಸಮಾಧಿಯನ್ನು ಕೆಂಪು ಗುಲಾಬಿ ಹೂವುಗಳಿಂದ ಅಲಂಕರಿಸಲಾಗಿದೆ. ಅಭಿಮಾನಿಗಳ ಸುಗಮ ದರ್ಶನಕ್ಕೆ ಸಕಲ ರೀತಿಯ ವ್ಯವಸ್ಥೆ ಮಾಡಿಸಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಮಂದಿ ಅಭಿಮಾನಿಗಳು ಇಂದು ಒಂದೇ ದಿನ ಆಗಮಿಸುವ ನಿರೀಕ್ಷೆ ಇದ್ದು, ಎಲ್ಲರಿಗೂ ಅನ್ನದಾನ ವ್ಯವಸ್ಥೆಯನ್ನು ದೊಡ್ಮನೆ ಕುಟುಂಬ ಮಾಡಿದೆ. ಬಂದವರಿಗೆಲ್ಲ ಚಿಕನ್ ಬಿರಿಯಾನಿ ನೀಡುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಇದರ ಜವಾಬ್ದಾರಿಯನ್ನು ಯುವ ರಾಜ್​ಕುಮಾರ್ ಹೊತ್ತುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇಂದು ಬೆಳ್ಳಂಬೆಳಿಗ್ಗೆ ದೊಡ್ಮನೆ ಕುಟುಂಬದ ಸದಸ್ಯರೆಲ್ಲ ಸ್ಮಾರಕಕ್ಕೆ…

Read More

ತೆಲುಗಿನ ಸ್ಟಾರ್ ನಟ ವಿಕ್ಟರಿ ವೆಂಕಟೇಶ್ ಅವರ 2ನೇ ಮಗಳು ಹಯವಾಹಿನಿಯ ಮದುವೆ ಅದ್ಧೂರಿಯಾಗಿ ನಡೆದಿದೆ. ದಗ್ಗುಬಾಟಿ ಕುಟುಂಬದ ನವಜೋಡಿಗೆ ಶುಭಕೋರಲು ಸ್ಟಾರ್ ಕಲಾವಿದರ ದಂಡೇ ಹರಿದು ಬಂದಿದ್ದು ನವ ಜೋಡಿಗೆ ಶುಭ ಹಾರೈಸಿದ್ದಾರೆ. ಹೈದರಾಬಾದ್ ನಲ್ಲಿ ನಡೆದ ಅದ್ದೂರಿ ವಿವಾಹದಲ್ಲಿ ಹಯವಾಹಿನಿ, ನಿಶಾಂತ್ ಎಂಬುವವರ ಜೊತೆ ಸಪ್ತಪತಿ ತುಳಿದಿದ್ದಾರೆ. ಹಯವಾಹಿನಿ ಎಂಗೇಜ್‌ಮೆಂಟ್ ಕಳೆದ ವರ್ಷ ನೆರವೇರಿದ್ದು, ಇದೀಗ ಅದ್ದೂರಿಯಾಗಿ ಮದುವೆ ನಡೆದಿದೆ. ಮದುವೆಗೆ ನಟರಾದ ಚಿರಂಜೀವಿ ಮಹೇಶ್ ಬಾಬು, ಕಾರ್ತಿ ಸೇರಿದಂತೆ ಸಾಕಷ್ಟು ಕಲಾವಿಧರು ಭಾಗಿಯಾಗಿ ನವ ದಂಪತಿಗೆ ವಿಶ್ ಮಾಡಿದ್ದಾರೆ.

Read More

ನಟ ಧ್ರುವ ಸರ್ಜಾ ತಮ್ಮ ಸಿನಿಮಾದ ಕೆಲಸದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಈ ಮಧ್ಯೆಯೇ ಬಿಡುವು ಮಾಡಿಕೊಂಡು ‘ಭುವನಂ ಗಗನಂ’ ಚಿತ್ರದ ಟ್ರೈಲರ್ ರಿಲೀಸ್ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಈ ವೇಳೆ, ಅಭಿಮಾನಿಗಳಿಗೆ ಧ್ರುವ ಸರ್ಜಾ ಮನವಿವೊಂದನ್ನು ಮಾಡಿದ್ದಾರೆ. ಪ್ರಮೋದ್, ಪೃಥ್ವಿ ಅಂಬರ್ ನಟನೆಯ ‘ಭುವನಂ ಗಗನಂ’ ಚಿತ್ರದ ಟೀಸರ್ ಲಾಂಚ್ ಇವೆಂಟ್‌ಗೆ ಧ್ರುವ, ಸರ್ಜಾ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಮಾತನಾಡಿದ ಧ್ರುವ ಸರ್ಜಾ, ನಾನು ಅವರ ಫ್ಯಾನು, ಇವರ ಫ್ಯಾನು ಎನ್ನಬೇಡಿ. ಪ್ರತಿ ಸಿನಿಮಾಗೂ ಪ್ರೀತಿ ತೋರಿಸಿ ಎಂದು ಮನವಿ ಮಾಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಫ್ಯಾನ್ಸ್ ವಾರ್ ಇತ್ತೀಚೆಗೆ ತುಸು ಹೆಚ್ಚಾಗಿದೆ. ಸ್ಟಾರ್ ನಟರ ಅಭಿಮಾನಿಗಳು ಇನ್ನೊಬ್ಬ ನಟನನ್ನು ಸಾಮಾಜಿಕ ಜಾಲತಾಣದಲ್ಲಿ ಹೀಯಾಳಿಸುವುದು, ಇನ್ನೊಬ್ಬ ನಟನ ಅಭಿಮಾನಿಗಳೊಟ್ಟಿಗೆ ಜಗಳ ಮಾಡುವುದು ಸಾಮಾನ್ಯ ಎಂಬಂತಾಗಿದೆ. ಇದಕ್ಕಿಂತಲೂ ಮುಂದೆ ಹೋಗಿ, ಇತರೆ ನಟನ ಸಿನಿಮಾವನ್ನೇ ತುಳಿಯುವ ಪ್ರಯತ್ನಗಳೂ ನಡೆದಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನಾವೆಲ್ಲರೂ ಒಂದೇ ಎಂದಿದ್ದಾರೆ. ಯಾರ ಫ್ಯಾನ್…

Read More

ಬಾಲಿವುಡ್ ನಟಿ ಕೃತಿ ಕರಬಂಧ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ದೆಹಲಿಯಲ್ಲಿ ಅದ್ಧೂರಿಯಾಗಿ ಪುಲ್ಕಿತ್ ಸಾಮ್ರಾಟ್ ಜೊತೆ ಹಸೆಮನೆ ಏರಿರುವ ಕೃತಿ ಕರಬಂಧ ಮದುವೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬಹುಕಾಲದ ಗೆಳೆಯನ ಜೊತೆ ಮದುವೆ ಆಗಿದ್ದು ಅತ್ಯಂತ ಸಂಭ್ರಮ ತಂದಿದೆ ಎಂದು ಕೃತಿ ಕರಬಂಧ ಸಂತಸ ಹಂಚಿಕೊಂಡಿದ್ದಾರೆ.ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿರುವ ಈ ಜೋಡಿಯನ್ನು ಶುಭ ಹಾರೈಸುವುದಕ್ಕಾಗಿ ಬಾಲಿವುಡ್ ಸ್ಟಾರ್‌ಗಳಾದ ರಿಚಾ ಚಡ್ಡಾ, ಅಲಿ ಫಜಲ್, ಫರ್ಹಾನ್ ಅಖ್ತರ್, ಶಿಬಾನಿ ದಾಂಡೇಕರ್, ಜೋಯಾ ಅಕ್ತರ್, ರಿತೇಶ್ ಸಿದ್ವಾನಿ, ಲವ್ ರಂಜನ್ ಸೇರಿದಂತೆ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಮಾರ್ಚ್ 13ರಂದು ಮೆಹಂದಿ ಕಾರ್ಯಕ್ರಮ ನಡೆದಿದ್ದು, ಮಾರ್ಚ್ 14ರಂದು ಹಳದಿ ಶಾಸ್ತ್ರ ಮತ್ತು ಕಾಕ್‌ಟೈಲ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ನಿನ್ನೆ ಸುಮಾರು 300 ಎಕರೆಯಲ್ಲಿ ನಿರ್ಮಾಣಗೊಂಡಿರುವ ರೆಸಾರ್ಟ್‌ನಲ್ಲಿ ಈ ಜೋಡಿ ಹಸಮಣೆ ತುಳಿದಿದೆ. ದೆಹಲಿಯಲ್ಲಿರುವ ಐಟಿಸಿ ಗ್ರ್ಯಾಂಡ್ ಐಷಾರಾಮಿ ರೆಸಾರ್ಟ್‌ನಲ್ಲಿ ಮದುವೆ ನಡೆದಿದ್ದು…

Read More