Author: Author AIN

ಬಾಲಿವುಡ್ ನಟಿ ಕೃತಿ ಕರಬಂಧ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ದೆಹಲಿಯಲ್ಲಿ ಅದ್ಧೂರಿಯಾಗಿ ಪುಲ್ಕಿತ್ ಸಾಮ್ರಾಟ್ ಜೊತೆ ಹಸೆಮನೆ ಏರಿರುವ ಕೃತಿ ಕರಬಂಧ ಮದುವೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬಹುಕಾಲದ ಗೆಳೆಯನ ಜೊತೆ ಮದುವೆ ಆಗಿದ್ದು ಅತ್ಯಂತ ಸಂಭ್ರಮ ತಂದಿದೆ ಎಂದು ಕೃತಿ ಕರಬಂಧ ಸಂತಸ ಹಂಚಿಕೊಂಡಿದ್ದಾರೆ.ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿರುವ ಈ ಜೋಡಿಯನ್ನು ಶುಭ ಹಾರೈಸುವುದಕ್ಕಾಗಿ ಬಾಲಿವುಡ್ ಸ್ಟಾರ್‌ಗಳಾದ ರಿಚಾ ಚಡ್ಡಾ, ಅಲಿ ಫಜಲ್, ಫರ್ಹಾನ್ ಅಖ್ತರ್, ಶಿಬಾನಿ ದಾಂಡೇಕರ್, ಜೋಯಾ ಅಕ್ತರ್, ರಿತೇಶ್ ಸಿದ್ವಾನಿ, ಲವ್ ರಂಜನ್ ಸೇರಿದಂತೆ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಮಾರ್ಚ್ 13ರಂದು ಮೆಹಂದಿ ಕಾರ್ಯಕ್ರಮ ನಡೆದಿದ್ದು, ಮಾರ್ಚ್ 14ರಂದು ಹಳದಿ ಶಾಸ್ತ್ರ ಮತ್ತು ಕಾಕ್‌ಟೈಲ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ನಿನ್ನೆ ಸುಮಾರು 300 ಎಕರೆಯಲ್ಲಿ ನಿರ್ಮಾಣಗೊಂಡಿರುವ ರೆಸಾರ್ಟ್‌ನಲ್ಲಿ ಈ ಜೋಡಿ ಹಸಮಣೆ ತುಳಿದಿದೆ. ದೆಹಲಿಯಲ್ಲಿರುವ ಐಟಿಸಿ ಗ್ರ್ಯಾಂಡ್ ಐಷಾರಾಮಿ ರೆಸಾರ್ಟ್‌ನಲ್ಲಿ ಮದುವೆ ನಡೆದಿದ್ದು…

Read More

ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಗೇಮ್ ಚೇಂಜರ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.  ‘ಆರ್​ಆರ್​ಆರ್​’ ಸಿನಿಮಾದ ಬಳಿಕ ರಾಮ್​ ಚರಣ್​ ‘ಗೇಮ್​ ಚೇಂಜರ್​’ ಸಿನಿಮಾ ಒಪ್ಪಿಕೊಂಡಿದ್ದರಿಂದ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಇದೀಗ ಚಿತ್ರದ ಶೂಟಿಂಗ್ ಸೆಟ್ ನಿಂದ ಕೆಲವೊಂದು ಫೋಟೋ ಲೀಕ್ ಆಗಿದ್ದು ಆ ಮೂಲಕ ರಾಮ್ ಚರಣ್ ಅವರ ಪಾತ್ರದ ಲುಕ್ ಬಹಿರಂಗವಾಗಿದೆ. ಗೇಮ್ ಚೇಂಜರ್ ಚಿತ್ರವನ್ನು ಶಂಕರ್ ನಿರ್ದೇಶನ ಮಾಡುತ್ತಿದ್ದು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಬಹುನಿರೀಕ್ಷಿತ ಸಿನಿಮಾಗಳ ಶೂಟಿಂಗ್​ ನಡೆಯುವಾಗ ಚಿತ್ರತಂಡದವರು ಸಖತ್​ ಎಚ್ಚರಿಕೆ ವಹಿಸುತ್ತಾರೆ. ಯಾವುದೇ ಫೋಟೋ ಅಥವಾ ವಿಡಿಯೋ ಲೀಕ್​ ಆಗದಂತೆ ನೋಡಿಕೊಳ್ಳಲಾಗುತ್ತದೆ. ಆದರೂ ಕೂಡ ಕೆಲವೊಮ್ಮೆ ಇಂಥ ಎಡವಟ್ಟು ನಡೆಯುತ್ತದೆ. ‘ಗೇಮ್​ ಚೇಂಜರ್​’ ಸಿನಿಮಾದಲ್ಲಿ ರಾಮ್​ ಚರಣ್​ ಅವರ ಲುಕ್​ ಹೇಗಿದೆ ಎಂಬುದು ಬಹಿರಂಗ ಆಗಿರುವುದರಿಂದ ಅಭಿಮಾನಿಗಳ ಕೌತುಕ ಕಡಿಮೆ ಆಗುವ ಸಾಧ್ಯತೆ ಇರುತ್ತದೆ. ಇದು ಚಿತ್ರತಂಡಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಚುನಾವಣೆಯ ಕುರಿತು ‘ಗೇಮ್​ ಚೇಂಜರ್​’ ಸಿನಿಮಾ ಮೂಡಿಬರುತ್ತಿದ್ದು…

Read More

ಬಾಲಿವುಡ್ ಚಿತ್ರರಂಗದ ಹಿರಿಯ ನಟ ಬಿಗ್ ಬಿ ಅಮಿತಾಭ್ ಬಚ್ಚನ್ ಮಾರ್ಚ್ 15ರಂದು ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿದೆ ಎಂದು ಹೇಳಲಾಗಿತ್ತು. ನೆಚ್ಚಿನ ನಟ ಏಕಾಏಕಿ ಆಸ್ಪತ್ರೆಗೆ ದಾಖಲಾದಾಗ ಅಭಿಮಾನಿಗಳಿಗೆ ಆತಂಕ ಉಂಟಾಗಿತ್ತು. ಇದೀಗ ಬಚ್ಚನ್ ಆರೋಗ್ಯ ಸುಧಾರಿಸಿದ್ದು ಮನೆಗೆ ಮರಳಿದ್ದಾರೆ. ಅಮಿತಾಭ್​ ಬಚ್ಚನ್​ಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಈ ವಿಚಾರ ತಿಳಿದಾಕ್ಷಣ ಅಮಿತಾಭ್​ ಬಚ್ಚನ್​ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಉಂಟಾಗಿರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರಿಗೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಉಂಟಾಗಿಲ್ಲ. ನಟನ ಕಾಲಿನ ರಕ್ತನಾಳದ ಸಮಸ್ಯೆ ಉಂಟಾಗಿತ್ತು. ಇದಕ್ಕಾಗಿ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಅಮಿತಾಭ್ ಶುಕ್ರವಾರ ಸಂಜೆಯೇ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಿದ್ದು ಸದ್ಯ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಅಮಿತಾಭ್ ಟ್ವಿಟರ್​ನಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಸದಾ ಒಂದಲ್ಲಾ ಒಂದು ವಿಚಾರದ ಬಗ್ಗೆ ಟ್ವೀಟ್ ಮಾಡುತ್ತಾ ಇರುತ್ತಾರೆ. ಆಸ್ಪತ್ರೆಗೆ ಅಡ್ಮಿಟ್ ಆಗುವ ಸುದ್ದಿ ಹೊರ ಬೀಳುವುದಕ್ಕೂ ಮೊದಲು ಟ್ವಿಟರ್​ನಲ್ಲಿ,‘ಎಂದೆಂದಿಗೂ ಚಿರಋಣಿ’…

Read More

ರಷ್ಯಾ ಅಧ್ಯಕ್ಷರ ಆಯ್ಕೆಗೆ ಶುಕ್ರವಾರ ಚುನಾವಣೆ ಆರಂಭವಾಗಿದ್ದು, ಹಾಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತೊಮ್ಮೆ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ರಷ್ಯಾದಲ್ಲಿ ಪ್ರಬಲ ವಿಪಕ್ಷವಿಲ್ಲದೇ ಚುನಾವಣೆ ನಡೆಯುತ್ತಿದೆ. ನಾಳೆ ಅಂದರೆ ಭಾನುವಾರದ ವರೆಗು ಚುನಾವಣೆ ನಡೆಯಲಿದ್ದು, ಇದೇ ಮೊದಲ ಬಾರಿಗೆ ಆನ್‌ ಲೈನ್‌ನಲ್ಲಿ ಮತಹಾಕಲು ಅವಕಾಶ ನೀಡಲಾಗಿದೆ. ಚುನಾವಣೆ ಆರಂಭವಾಗುತ್ತಿದ್ದಂತೆ ಮಾಸ್ಕೋದಲ್ಲಿ 2 ಲಕ್ಷ ಮಂದಿ ಹಕ್ಕು ಚಲಾಯಿಸಿದ್ದಾರೆ. ರತೀಶ್ ನಾಯರ್, ರಷ್ಯಾ ಒಕ್ಕೂಟದ ಕೇಂದ್ರ ಚುನಾವಣಾ ಆಯೋಗವು ಕೇರಳದಲ್ಲಿರುವ ರಷ್ಯಾದ ನಾಗರಿಕರು ತಮ್ಮ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಮತ ಚಲಾಯಿಸಿದ್ದಾರೆ. ಮತದಾನದಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದಿದ್ದಾರೆ. ನಾವು ಅಧ್ಯಕ್ಷೀಯ ಚುನಾವಣೆಯ ಚೌಕಟ್ಟಿನಲ್ಲಿ ಪ್ರಾಥಮಿಕ ಮತದಾನ ಆಯೋಜಿಸಿದ್ದೇವೆ. ಭಾರತದಲ್ಲಿ ವಾಸಿಸುವ ರಷ್ಯಾದ ಒಕ್ಕೂಟಗಳ ನಾಗರಿಕರಿಗೆ ಅವಕಾಶ ಒದಗಿಸಲು ನಾವು ಇಲ್ಲಿದ್ದೇವೆ ಎಂದು ಚೆನ್ನೈನ ಹಿರಿಯ ಕಾನ್ಸುಲ್ ಜನರಲ್ ಸೆರ್ಗೆ ಅಜುರೊವ್ ಹೇಳಿದ್ದಾರೆ. ಭಾರತದಲ್ಲಿ ಕೇರಳ ಸಹಿತ 144 ದೇಶಗಳ 288 ಮತಗಟ್ಟೆಗಳಲ್ಲಿ ರಷ್ಯಾ ನಾಗರಿಕರಿಗೆ ಹಕ್ಕು ಚಲಾಯಿಸಲು ಅವಕಾಶ…

Read More

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪರಭಾಷೆಯಲ್ಲಿ ಮಿಂಚುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರುವ ಶಿವಣ್ಣ ಇದೀಗ ರಾಮ್ ಚರಣ್ ಜೊತೆ ಸ್ಕ್ರೀನ್ ಶೇರ್ ಮಾಡ್ತಿದ್ದಾರೆ. ರಾಮ್ ಚರಣ್ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಚಿತ್ರ ಇದೇ ಮಾರ್ಚ್ 20ರಂದು ಸೆಟ್ಟೇರಲಿದೆ. ರಾಮ್ ಚರಣ್ ಹಾಗೂ ಶಿವಣ್ಣ ಕಾಂಬಿನೇಷನ್ ನ ಸಿನಿಮಾಗೆ ಪೆದ್ದಿ ಎಂದು ಹೆಸರಿಡಲಾಗಿದೆಯಂತೆ. ಪೆದ್ದಿ ಎಂದರೆ ತೆಲುಗಿನಲ್ಲಿ ದೊಡ್ಡದು ಎಂದರ್ಥ. ಈ ಸಿನಿಮಾದ ಕುರಿತಂತೆ ಹಲವಾರು ವಿಚಾರಗಳು ಈಗಾಗಲೇ ತೆಲುಗು ಸಿನಿಮಾ ರಂಗದಲ್ಲಿ ಗಿರಕಿ ಹೊಡೆಯುತ್ತಿವೆ. ಈ ಸಿನಿಮಾದಲ್ಲಿ ಶಿವಣ್ಣ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಸ್ವತಃ ಶಿವರಾಜ್ ಕುಮಾರ್ ಮಾತನಾಡಿದ್ದಾರೆ. ‘ತೆಲುಗಿನಲ್ಲಿ ಆಫರ್ ಬಂದಿದ್ದು ನಿಜ. ರಾಮ್ ಚರಣ್ ಅವರ ಚಿತ್ರವನ್ನು ನಿರ್ದೇಶನ ಮಾಡುತ್ತಿರುವ ಬುಚ್ಚಿ ಬಾಬು ನನ್ನನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಆ ಸಿನಿಮಾ ಬಗ್ಗೆ ಸದ್ಯ ಏನೂ ಹೇಳಲಾರೆ ಎಂದು ಹೇಳುವ…

Read More

ಕಾಟೇರ ಸಿನಿಮಾದ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಡೆವಿಲ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಮೊದಲ ಹಂತದ ಚಿತ್ರೀಕರಣವು ಇದೇ ಸೋಮವಾರದಿಂದ ಬೆಂಗಳೂರಿನ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಲಿದ್ದು, ಅದಕ್ಕೂ ಮುನ್ನ ಚಿತ್ರತಂಡ ಕುಕ್ಕೆ ಸುಬ್ರಮಣ್ಯಂ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದೆ. ಈಗಾಗಲೇ ‘ಡೆವಿಲ್’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿ ಸಖತ್ ಸದ್ದು ಮಾಡುತ್ತಿದೆ. ದರ್ಶನ್ ಹುಟ್ಟುಹಬ್ಬದ ದಿನ ಫ್ಯಾನ್ಸ್‌ಗೆ ಇದೊಂದು ಸರ್ಪ್ರೈಸ್ ಗಿಫ್ಟ್ ಆಗಿತ್ತು. ದರ್ಶನ್ ‘ಡೆವಿಲ್’ನಲ್ಲಿ ವಿಭಿನ್ನ ಲುಕ್‌ನಲ್ಲಿ ಕಾಣಿಸ್ಕೊಂಡಿದ್ದಾರೆ. ಇದೀಗ ಚಿತ್ರತಂಡ ಕುಕ್ಕೆಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದರ್ಶನ್ ಹುಟ್ಟುಹಬ್ಬದ ದಿನವೇ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ರಿವೀಲ್ ಆಯ್ತು. ಅಬ್ಬರಿಸುವ ಡೈಲಾಗ್ ಮೂಲಕ ದಚ್ಚು ಎಂಟ್ರಿ ಬಹಳ ಕುತೂಹಲಕಾರಿಯಾಗಿತ್ತು. ‘ನಮ್ಮ ಮನೆಯಲೊಂದು ಪುಟ್ಟ ಪಾಪು ಇರುವುದು’ ಎಂಬ ವಿಭಿನ್ನ ಡೈಲಾಗ್ ಹೇಳುವ ಮೂಲಕ ದರ್ಶನ್ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದ್ದು ಇದೀಗ ಚಿತ್ರತಂಡ…

Read More

ಸದಾ ವಿವಾದಗಳ ಮೂಲಕವೇ ಸದ್ದು ಮಾಡುವ ಟಾಲಿವುಡ್ ಚಿತ್ರರಂಗದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದೀಗ ಮತ್ತೊಂದು ಸುದ್ದಿ ನೀಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಾವು ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿರುವ ವರ್ಮಾ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ರಾಮ್ ಗೋಪಾಲ್ ವರ್ಮಾ ಖ್ಯಾತ ನಟ ಪವನ್ ಕಲ್ಯಾಣ್ ವಿರುದ್ಧ ಚುನಾವಣೆ ಎದುರಿಸಲಿದ್ದಾರೆ. ಪವನ್ ಕಲ್ಯಾಣ್ ಆಂಧ್ರದ ಪಿಠಾಪುರಂ ಕ್ಷೇತ್ರದಿಂದ ಚುನಾವಣೆ ಸ್ಪರ್ಧೆ ಮಾಡಲಿದ್ದು, ಅದೇ ಕ್ಷೇತ್ರದಲ್ಲೇ ತಾವೂ ಸ್ಪರ್ಧೆ ಮಾಡುವುದಾಗಿ ವರ್ಮಾ ಹೇಳಿಕೊಂಡಿದ್ದಾರೆ. ಹಲವು ವರ್ಷಗಳಿಂದ ಪವನ್ ಕಲ್ಯಾಣ್ ಅವರಿಗೂ ವರ್ಮಾ ಅವರಿಗೂ ಶಿತಲ ಸಮರ ನಡೆಯುತ್ತಲೇ ಇದೆ. ಅದು ಸಿನಿಮಾಗಳ ಮೂಲಕ ಮತ್ತಷ್ಟು ಗದ್ದಲಕ್ಕೆ ಕಾರಣವಾಗಿದೆ. ಈ ಬಾರಿ ಚುನಾವಣೆಗೆ ಏನಾದರೂ ವರ್ಮಾ ನಿಂತರೆ, ಅದು ಮತ್ತೊಂದು ದಿಕ್ಕು ಪಡೆದುಕೊಳ್ಳುವುದು ಪಕ್ಕಾ ಆಗಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವರ್ಮಾ ಮಾಡಿರುವ ಫೋಸ್ಟ್ ಸಾಕಷ್ಟು ಕುತೂಹಲ ಮೂಡಿಸಿದೆ. ಸದಾ ಒಂದಲ್ಲ ಒಂದು ಕಾರಣಕ್ಕೆ ವಿವಾದ ಮಾಡಿಕೊಳ್ಳುವ…

Read More

ಮೆಗಾಸ್ಟಾರ್ ಚಿರಂಜೀವಿ ಅವರ ಮನೆ ಮಗಳು ನಿಹಾರಿಕಾ ಕೊನೆಡೇಲಾ ಸಿನಿಮಾಗಳಿಗಿಂತ ಹೆಚ್ಚಾಗಿ ವೈಯಕ್ತಿಯ ಬದುಕಿನ ಕುರಿತಾಗೆ ಸಾಕಷ್ಟು ಸದ್ದು ಮಾಡಿದ್ದಾರೆ. ಕೆಲ ತಿಂಗಳ ಹಿಂದೆ ಪತಿ ಚೈತನ್ಯ ಅವರಿಂದ ವಿಚ್ಛೇದನ ಪಡೆದುಕೊಂಡಿರುವ ನಿಹಾರಿಕಾ ಇದೀಗ ತಮ್ಮ ಹೇಳಿಕೆಯ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಡಿವೋರ್ಸ್ ಆದ 7 ತಿಂಗಳಲ್ಲೇ ನನಗೆ ಮದುವೆ ಬೇಡ ಮಗು ಬೇಕು ಎಂಬ ಹೇಳಿಕೆ ನೀಡಿದ್ದಾರೆ. ನಿಹಾರಿಕಾ ಕೊನಿಡೆಲಾ ಅವರು ಚೈತನ್ಯ ಜೊನ್ನಲಗುಡ್ಡ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆ ಸಮಾರಂಭ ಕೂಡ ನಡೆದಿತ್ತು. ನಿಹಾರಿಕಾ ಹಾಗೂ ಚೈತನ್ಯ ಮದುವೆಗೆ ಇಡೀ ಮೆಗಾಸ್ಟರ್‌ ಕುಟುಂಬ ಸಾಕ್ಷಿಯಾಗಿತ್ತು. ಆದರೆ ಮದುವೆಯಾದ ಎರಡೂವರೆ ವರ್ಷಕ್ಕೆ ಇಬ್ಬರು ದೂರು ದೂರವಾದರು. ಸದ್ಯ ಏಕಾಂಗಿಯಾಗಿ ಲೈಫ್‌ ಲೀಡ್‌ ಮಾಡುತ್ತಿರೋ ನಿಹಾರಿಕಾ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಈ ಮಧ್ಯೆ ಸೋಶಿಯಲ್‌ ಮೀಡಿಯಾದಲ್ಲಿ ಈಕೆಯ ಎರಡನೇ ಮದುವೆಯ ಕುರಿತಾಗಿ ಸಾಕಷ್ಟು ಸುದ್ದಿ ಹರಿದಾಡುತ್ತಿದೆ. ಸ್ಟಾರ್‌ ನಟನನ್ನು ನಿಹಾರಿಕಾ ಮದುವೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಹೆಸರು ರಿವೀಲ್​…

Read More

ಬಾಲಿವುಡ್ ನ ಹಿರಿಯ ನಟ, ಬಿಗ್‌ ಬಿ ಅಮಿತಾಬ್ ಬಚ್ಚನ್ ಇಂದು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದು, ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ ಹೃದಯಾಘಾತ ಸಂಭವಿಸಿದಾಗ ವೈದ್ಯರು ಆಂಜಿಯೋಪ್ಲಾಸ್ಟಿ ಮಾಡಲು ಸಲಹೆ ನೀಡುತ್ತಾರೆ. ಆದರೆ ಅಮಿತಾಬ್ ಬಚ್ಚನ್ ಅವರ ಕಾಲಿನ ಸಮಸ್ಯೆಯಿದ್ದು, ಹೀಗಾಗಿ ಕಾಲಿಗೆ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಬಾಹ್ಯ ಆಂಜಿಯೋಪ್ಲ್ಯಾಸ್ಟಿ ಎಂದರೆ ಅಪಧಮನಿಯ ಹೊರಭಾಗದಲ್ಲಿ ರಕ್ತ ನಾಳಗಳನ್ನು ತೆರೆಯಲು ಆಂಜಿಯೋಪ್ಲ್ಯಾಸ್ಟಿ ವೈದ್ಯಕೀಯ ಬಲೂನ್ ಅನ್ನು ಬಳಸಲಾಗುತ್ತದೆ. ಹೃದಯದಂತೆ ದೇಹದ ಇತರ ಭಾಗಗಳಲ್ಲಿಯೂ ಸಮಸ್ಯೆ ಕಂಡುಬಂದಾಗ ಅಥವಾ ರಕ್ತದ ಹರಿವು ಸರಿಯಾಗಿಲ್ಲದಿದ್ದಾಗ ಆಂಜಿಯೋಪ್ಲ್ಯಾಸ್ಟಿ ಮಾಡಲಾಗುತ್ತದೆ. ರಕ್ತನಾಳಗಳನ್ನು ಅಗಲಗೊಳಿಸಲು ಈ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುತ್ತದೆ. ಈ ಚಿಕಿತ್ಸೆಯು ರಕ್ತವು ಸರಿಯಾಗಿ ಹರಿಯುವಂತೆ ಮಾಡುತ್ತದೆ. ಹಾಗೆಯೇ ರಕ್ತ ಹೆಪ್ಪುಗಟ್ಟುವಿಕೆಯನ್ನು ಕಡಿಮೆ ಮಾಡುತ್ತದೆ. ಹೃದಯದ ಹೊರತಾಗಿ, ಸೊಂಟದ ಅಪಧಮನಿ, ತೊಡೆಯ ಅಪಧಮನಿ, ಮೊಣಕಾಲಿನ ಹಿಂದಿನ ಅಪಧಮನಿ, ಕೆಳ ಕಾಲಿನ ಅಪಧಮನಿಗೂ ಆಂಜಿಯೋಪ್ಲ್ಯಾಸ್ಟಿ ಮಾಡಲಾಗುತ್ತದೆ. ಸದ್ಯ ಬಿಗ್ ಬಿ ಆರೋಗ್ಯ ಸುಧಾರಿಸಿದ್ದು ವಿಶ್ರಾಂತಿ…

Read More

ಇತ್ತೀಚಿನ ದಿನಗಳಲ್ಲಿ ಚಿಕ್ಕಮಕ್ಕಳಿಂದ ಹಿಡಿದು ಎಲ್ಲ ವಯಸ್ಸಿನವರು ಕೂಡ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಸಾವಿನ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ದಿ. ಪುನೀತ್ ರಾಜಕುಮಾರ್‌ ಅವರ ಹೆಸರಿನಲ್ಲಿ ವಿನೂತನ ಯೋಜನೆಯೊಂದನ್ನು ಜಾರಿಗೆ ತಂದಿದೆ. ರಾಜ್ಯ ಸರ್ಕಾರ ಡಾ.ಪುನೀತ್ ರಾಜಕುಮಾರ್‌ ಅವರ ಹೆಸರಿನಲ್ಲಿ ʻಹೃದಯ ಜ್ಯೋತಿʼ  ಯೋಜನೆ ಜಾರಿಗೆ ತಂದಿದೆ. ಇದರ 2ನೇ ಹಂತದ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಧಾರವಾಡದ ಡಾ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು. ಹೃದಯಾಘಾತವಾದ ಕೆಲವೇ ಸಮಯದಲ್ಲಿ ಬಡವರಿಗೂ ಲಭ್ಯವಾಗುವ ರೀತಿಯಲ್ಲಿ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 28,000 ರೂ. ಮೌಲ್ಯದ Tenecteplase ಇಂಜಕ್ಷನ್‌ ಅನ್ನು ಉಚಿತವಾಗಿ ನೀಡುವ ಯೋಜನೆ ಇದಾಗಿದೆ. ಹೃದಯಾಘಾತವಾದ ಕೆಲ ಸಮಯದಲ್ಲಿ ತಕ್ಷಣ ಇಸಿಜಿ ಮಾಡುವ ಸ್ಟೆಮಿ ಕಿಟ್‌ ಅನ್ನೂ ಈ ಯೋಜನೆಯಡಿ ನೀಡಲಾಗುತ್ತಿದೆ. ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರದಿಂದ ಈ ಯೋಜನೆ ಜಾರಿ…

Read More