Author: Author AIN

ಅಮೆರಿಕ ದೇಶಕ್ಕೆ ಭಾರತದ ಅರ್ಹ ವೃತ್ತಿಪರರ ಅಗತ್ಯವಿದೆ ಎಂದು ಅಮೆರಿಕದ ಪ್ರಭಾವಿ ಸಂಸದ, ಕಾಂಗ್ರೆಸ್‌ ಸದಸ್ಯ ಮ್ಯಾಟ್ ಕಾರ್ಟ್‌ರೈಟ್ ತಿಳಿಸಿದ್ದಾರೆ. ಪ್ರತಿ ದೇಶಕ್ಕೆ ವರ್ಷಕ್ಕೆ ಗ್ರೀನ್ ಕಾರ್ಡ್ ವಿತರಣೆ ಮಾಡಲು ಇರುವ ಶೇ 7ರ ಮಿತಿಯನ್ನು ತೆಗೆದುಹಾಕಬೇಕು. ಇದು ಭಾರತದಿಂದ ವಲಸೆ ಬಂದ ವೃತ್ತಿಪರರಿಗೆ ದಶಕಗಳ ದೀರ್ಘ ಕಾಯುವಿಕೆಗೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ. ‘ಭಾರತೀಯರು ಉದ್ಯೋಗಕ್ಕಾಗಿ ಅಮೆರಿಕಕ್ಕೆ ವಲಸೆ ಬರುವುದು ತುಂಬಾ ಮುಖ್ಯವಾಗಿದೆ. ಏಕೆಂದರೆ, ಅಮೆರಿಕವು ಇಲ್ಲಿ ಕೆಲಸ ಮಾಡಲು ಅರ್ಹ, ಉನ್ನತ ಕೌಶಲ್ಯ ಹೊಂದಿರುವ ಜಗತ್ತಿನ ವಿವಿಧೆಡೆಯಿಂದ ಬರುವ ಬುದ್ಧಿವಂತ ಜನರನ್ನು ಅವಲಂಬಿಸಿದೆ. ಇದು ಅಮೆರಿಕಕ್ಕೆ ಸಹಜ ಪ್ರಯೋಜನಗಳಲ್ಲಿ ಒಂದಾಗಿದೆ’ಎಂದು ಪೆನ್ಸಿಲ್ವೇನಿಯಾದ 8ನೇ ಕಾಂಗ್ರೆಷನಲ್ ಡಿಸ್ಟ್ರಿಕ್ಟ್ ಅನ್ನು ಪ್ರತಿನಿಧಿಸುವ ಕಾಂಗ್ರೆಸ್‌ ಸದಸ್ಯ ಮ್ಯಾಟ್ ಕಾರ್ಟ್‌ರೈಟ್ ಸಂದರ್ಶನದಲ್ಲಿ ತಿಳಿಸಿದ್ದಾರೆ. ಅಮೆರಿಕವು ಪ್ರತಿ ವರ್ಷ ಗ್ರೀನ್ ಕಾರ್ಡ್‌ಗಳನ್ನು ನೀಡುವಲ್ಲಿ ಪ್ರತಿ ದೇಶಕ್ಕೆ ಶೇ 7ರಷ್ಟು ಕೋಟಾ ಹೊಂದಿದೆ. ಇದನ್ನು ತೆಗೆದುಹಾಕಲು ಫೌಂಡೇಶನ್ ಫಾರ್ ಇಂಡಿಯಾ ಮತ್ತು ಇಂಡಿಯನ್ ಡಯಾಸ್ಪೊರಾ (ಎಫ್‌ಐಐಡಿಎಸ್) ಸೇರಿದಂತೆ…

Read More

ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಕಂ ಮಾಡೆಲ್‌ ಮೀರಾ ಚೋಪ್ರಾ ಉದ್ಯಮಿ ರಕ್ಷಿತ್‌ ಕೇಜ್ರಿವಾಲ್‌ ಜೊತೆ ಅದ್ದೂರಿಯಾಗಿ ವಿವಾಹವಾಗಿದ್ದಾರೆ. ಜೈಪುರದಲ್ಲಿ ಮೀರಾ ಚೋಪ್ರಾ ಹಾಗೂ ರಕ್ಷಿತ್ ಕೇಜ್ರಿವಾಲ್ ವಿವಾಹ ಸಮಾರಂಭ ಅದ್ದೂರಿಯಾಗಿ ನಡೆದದ್ದು ಮದುವೆಯ ಚಿತ್ರಗಳನ್ನು ಮೀರಾ ಚೋಪ್ರಾ ಸಾಮಾಜಿಕ ಜಾಲಾ ತಾಣದಲ್ಲಿ ಹಂಚಿಕೊಂಡಿದ್ದಾರೆ. ಮೀರಾ ಚೋಪ್ರಾ ಕೆಂಪು ಬಣ್ಣದ ಲೆಹೆಂಗಾದಲ್ಲಿ ಕಂಗೊಳಿಸುತ್ತಿದ್ದರೆ, ರಕ್ಷಿತ್ ಕೇಜ್ರಿವಾಲ್ ಬಿಳಿ ಬಣ್ಣದ ಶೇರ್ವಾನಿಯಲ್ಲಿ ಮಿಂಚಿದ್ದಾರೆ. ಎಂದೆಂದಿಗೂ ಸಂತೋಷ, ಜಗಳ, ನಗು, ಕಣ್ಣೀರು, ಮತ್ತು ನೆನಪುಗಳು ಈ ಜೀವಮಾನದಲ್ಲಿ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಿಮ್ಮೊಂದಿಗೆ ಪ್ರತಿ ಜನ್ಮ ಬದುಕುತ್ತೇನೆ ಎಂದು ಮೀರಾ ಮದುವೆಯ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ. ಜೈಪುರ-ದೆಹಲಿ ಹೆದ್ದಾರಿಯಲ್ಲಿರುವ ಬ್ಯೂನಾ ವಿಸ್ಟಾ ಐಷಾರಾಮಿ ಗಾರ್ಡನ್ ಸ್ಪಾ ರೆಸಾರ್ಟ್‌ನಲ್ಲಿ ವಿವಾಹ ನಡೆಯಿತು. ಮಾರ್ಚ್ 11 ರಂದು ದಂಪತಿಗಳು ತಮ್ಮ ಮೆಹಂದಿ, ಹಲ್ದಿ ಮತ್ತು ಸಂಗೀತ ಸಮಾರಂಭಗಳನ್ನು ಅಯೋಜಿಸಿದ್ದರು. ಇದರಲ್ಲಿ ಸಂದೀಪ್ ಸಿಂಗ್, ಆನಂದ್ ಪಂಡಿತ್,…

Read More

ಟಾಲಿವುಡ್ ಚಿತ್ರರಂಗದಲ್ಲಿ ದೊಡ್ಡ ಮಟ್ಟಿಗೆ ಸದ್ದು ಮಾಡಿದ್ದ ನಟಿ ಅನುಷ್ಕಾ ಶೆಟ್ಟಿ ಬಾಹುಬಲಿ 2 ಸಿನಿಮಾದ ಬಳಿಕ ಕೊಂಚ ಮಟ್ಟಿಗೆ ಸೈಲೆಂಟ್ ಆಗಿದ್ದಾರೆ. ಆಗೊಂದು ಈಗೊಂದು ಸಿನಿಮಾಗಳಲ್ಲಿ ಬಣ್ಣ ಹಚ್ಚುತ್ತಿರುವ ನಟಿ ಇದೀಗ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಮಹಿಳಾ ಪ್ರಧಾನ ಸಿನಿಮಾ, ಸಣ್ಣ ಬಜೆಟ್​ನ ಸಿನಿಮಾಗಳಿಗೆ ಮಾತ್ರವೇ ತಮ್ಮನ್ನು ಸೀಮಿತಗೊಳಿಸಿಕೊಂಡಿರುವ ಅನುಷ್ಕಾ ಶೆಟ್ಟಿ ಇದೇ ಮೊದಲ ಭಾರಿಗೆ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಮೋಡಿ ಮಾಡಿದ್ದ ನಟಿ ಇದೀಗ ಮಲಯಾಳಂ ಚಿತ್ರರಂಗದಲ್ಲು ಸದ್ದು ಮಾಡಲು ರೆಡಿಯಾಗಿದ್ದಾರೆ. ಮಲಯಾಳಂ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರಾದ ರೋಜಿನ್ ಥಾಮಸ್ ನಿರ್ದೇಶನ ಮಾಡುತ್ತಿರುವ ಹಾರರ್ ಸಿನಿಮಾನಲ್ಲಿ ಅನುಷ್ಕಾ ಶೆಟ್ಟಿ ನಟಿಸಲಿದ್ದಾರೆ. ಸಿನಿಮಾಕ್ಕೆ ‘ಕತನಾರ್; ದಿ ವೈಲ್ಡ್ ಸಾರ್ಸರರ್’ ಎಂದು ಹೆಸರಿಡಲಾಗಿದ್ದು, ಸಿನಿಮಾದಲ್ಲಿ ’ಕಲಿಯಂಕಟ್ಟು ನೀಲಿ’ ಎಂಬ ಕೇರಳದ ಜನಪದ ಕತೆಗಳಲ್ಲಿ ಬರುವ ಯಕ್ಷಿಣಿ ಅಥವಾ ಆತ್ಮದ ಪಾತ್ರದಲ್ಲಿ ಅನುಷ್ಕಾ ಶೆಟ್ಟಿ ನಟಿಸುತ್ತಿದ್ದಾರೆ. ನಿರ್ದೇಶಕ ರೋಜಿನ್ ಈ ಹಿಂದೆ ‘ಹೋಮ್’ ಹೆಸರಿನ ಸುಂದರ…

Read More

ಕನ್ನಡದ ಖ್ಯಾತ ನಟ ರಿಷಬ್ ಶೆಟ್ಟಿ ‘ಕಾಂತಾರ’ ಸಿನಿಮಾ ಮಾಡಿದ ಬಳಿಕ ಡಿವೈನ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಸದ್ಯ ಕಾಂತಾರ ಪಾರ್ಟ್ 1ಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಈ ಮಧ್ಯೆ ರಿಷಬ್ ಸಿನಿಮಾದಲ್ಲಿ ಜ್ಯೂ.ಎನ್‌ಟಿಆರ್ ನಟಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕಾಂತಾರ ಚಿತ್ರದ ಚಿತ್ರೀಕರಣ ಕರಾವಳಿಯಲ್ಲಿ ನಡೆಯುತ್ತಿದೆ. ಹಾಗಾಗಿ ರಿಷಬ್ ಶೆಟ್ಟಿ ಹೆಚ್ಚಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಆದರೆ ಇತ್ತೀಚೆಗೆ ಏಕಾಏಕಿ ಜ್ಯೂ.ಎನ್‌ಟಿಆರ್ ಜೊತೆ ಕಾಣಿಸಿಕೊಂಡು ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿದ್ದರು. ಹೀಗಾಗಿ ರಿಷಬ್ ಶೆಟ್ಟಿ ಜೊತೆ ಜ್ಯೂನಿಯರ್ ಎನ್ ಟಿ ಆರ್ ನಟಿಸುತ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಕಾಂತಾರ ಚಿತ್ರದ ಚಿತ್ರೀಕರಣ ನಡೆಯುತ್ತಿರುವುದರಿಂದ ರಿಷಬ್ ಶೆಟ್ಟಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಈ ಮಧ್ಯೆ ಟಾಲಿವುಡ್ ಯಂಗ್ ಟೈಗರ್ ಜ್ಯೂ.ನ್‌ಟಿಆರ್ ಜೊತೆ ಪತ್ನಿ ಪ್ರಗತಿ ಸಮೇತ ಕಾಣಿಸಿಕೊಂಡಿದ್ದಾರೆ. ಆಗ ಎಲ್ಲರೂ ಸೇರಿ ಫೋಟೊ ತೆಗೆಸಿಕೊಂಡರು. ಫೋಟೋ ನೋಡಿದ ನೆಟ್ಟಿಗರು ಜ್ಯೂ.ನ್‌ಟಿಆರ್ ಕೂಡ ಬಣ್ಣ ಹಚ್ಚಲಿದ್ದಾರೆ ಎಂದು ಮಾತನಾಡ್ತಿದ್ದಾರೆ. ಆದರೆ ಚಿತ್ರದಲ್ಲಿ ನಟಿಸುವ ಕುರಿತು ಯಾವುದೇ ಸ್ಪಷ್ಟನೆ…

Read More

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ ಬಹುನಿರೀಕ್ಷಿತ ‘ಭೈರತಿ ರಣಗಲ್’ ಸಿನಿಮಾದ ಚಿತ್ರೀಕರಣ 70%ರಷ್ಟು ಮುಗಿದಿದೆ. ಅಲ್ಲವು ಅಂದುಕೊಂಡತೆ ಆದರೆ ಇದೇ ಆಗಸ್ಟ್ 15ಕ್ಕೆ ಚಿತ್ರ ತೆರೆಗೆ ಬರಲಿದೆ.  ಈ ಮಧ್ಯೆ ಚಿತ್ರದಲ್ಲಿ ನಟ ಶ್ರೀಮುರಳಿ ಇರುತ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದ್ದು ಅದಕ್ಕೀಗ ಸ್ಪಷ್ಟನೆ ಸಿಕ್ಕಿದೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಚಿತ್ರದುರ್ಗಕ್ಕೆ ಆಗಮಿಸಿದ ನಟ ಶ್ರೀಮುರುಳಿ, ‘ಬಘೀರ’ ಸಿನಿಮಾ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಬಹುನಿರೀಕ್ಷಿತ ‘ಭೈರತಿ ರಣಗಲ್’ ಸಿನಿಮಾದಲ್ಲಿ ಶ್ರೀಮುರಳಿ ನಟಿಸುತ್ತಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ನಟ ಈ ಚಿತ್ರದಲ್ಲಿ ನಾನು ನಟಿಸುತ್ತಿಲ್ಲ ಎಂದಿದ್ದಾರೆ. ಭೈರತಿ ರಣಗಲ್ ಚಿತ್ರದಲ್ಲಿ ನಾನು ನಟನೆ ಮಾಡ್ತಿಲ್ಲ. ಅದು ಶಿವಣ್ಣ ಮಾಮನ ಮೂವಿ ಮಾತ್ರ ಅದ್ರಲ್ಲಿ ನಾನಿಲ್ಲ. `ಮಫ್ತಿ’ ಚಿತ್ರದ ಪ್ರೀಕ್ವೆಲ್ ಕಥೆ ಅದಾಗಿದೆ, ಅದ್ರಲ್ಲಿ ನಾನಿಲ್ಲ ಎಂದು ಶ್ರೀಮುರಳಿ ಸ್ಪಷ್ಟನೆ ನೀಡಿದ್ದಾರೆ. ‘ಭೈರತಿ ರಣಗಲ್’ ಸೀಕ್ವೆಲ್ ಬಗ್ಗೆ ಕೇಳಿದಕ್ಕೆ ನೋ ಕಾಮೆಂಟ್ಸ್ ಎಂದ ನಟ ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಭೈರತಿ ರಣಗಲ್…

Read More

ನೇಪಾಳದಲ್ಲಿ 16 ವರ್ಷಗಳ ಹಿಂದೆ ನಡೆದ ಬೃಹತ್ ಪ್ರತಿಭಟನೆಗಳು ಆಗಿನ ರಾಜ ಜ್ಞಾನೇಂದ್ರ ಶಾ ಅವರನ್ನು ಸಿಂಹಾಸನ ತೊರೆದು ಪ್ರಜಾಪ್ರಭುತ್ವಕ್ಕೆ ಹಾದಿ ಮಾಡಿಕೊಡುವಂತೆ ಮಾಡಿತ್ತು. ಇದೀಗ ಅದೇ ರಾಜ ಜ್ಞಾನೇಂದ್ರ ಶಾ ಅವರನ್ನು ಪುನಃ ಸಿಂಹಾಸನಕ್ಕೇರಿಸಲು ದೇಶದಲ್ಲಿ ಪ್ರತಿಭಟನೆಯ ಆರಂಭವಾಗಿದೆ. ಈ ಬಾರಿ ಪ್ರತಿಭಟನಕಾರರು ಜ್ಞಾನೇಂದ್ರ ಶಾ ಅವರನ್ನು ರಾಜನಾಗಿ ಸಿಂಹಾಸನದಲ್ಲಿ ಮತ್ತೆ ಕೂರಿಸಬೇಕು, ಹಿಂದೂ ಧರ್ಮವನ್ನು ರಾಷ್ಟ್ರ ಧರ್ಮವಾಗಿ ಮರಳಿ ಸ್ಥಾಪಿಸಬೇಕೆಂದು ಹೋರಾಟಕ್ಕೆ ಮುಂದಾಗಿದ್ದಾರೆ. ದೇಶದ ಪ್ರಮುಖ ರಾಜಕೀಯ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಆಡಳಿತ ವಿಫಲವಾಗಿದೆ ಎಂದು ರಾಜಪ್ರಭುತ್ವದ ನಿಷ್ಠರು ಆರೋ‍ಪಿಸುತ್ತಿದ್ದು, ರಾಜಕಾರಣಿಗಳ ನಡೆಯಿಂದ ಜನಸಾಮಾನ್ಯರು ಹತಾಶರಾಗಿರುವುದು ಕಾಣಬರುತ್ತಿದೆ. ದೇಶದಲ್ಲಿನ ಸದ್ಯದ ವ್ಯವಸ್ಥೆಯಿಂದಾಗಿ ಬೆಳೆಯುತ್ತಿರುವ ಹತಾಶೆಯು ಆಮೂಲಾಗ್ರ ಬದಲಾವಣೆಯ ಒಕ್ಕೊರಲ ಕೂಗಿಗೆ ಕಾರಣವಾಗಿದೆ. ರಾಜಪ್ರಭುತ್ವದ ಪರವಾದ ರ‍್ಯಾಲಿಗಳು ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿವೆ. ಹೆಚ್ಚಿನ ಜನರು ತಮ್ಮ ಮನೆಗಳು ಮತ್ತು ಅಂಗಡಿಮುಂಗಟ್ಟು, ವಾಣಿಜ್ಯಮಳಿಗೆಗಳ ಮುಂದೆ ಮಾಜಿ ದೊರೆ ಮತ್ತು ಅವರ ಪೂರ್ವಜರ ಭಾವಚಿತ್ರಗಳನ್ನು ಪ್ರದರ್ಶಿಸುತ್ತಿದ್ದಾರೆ. ‘ಮರಳಿ ಬನ್ನಿ ದೊರೆ, ದೇಶವನ್ನು…

Read More

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸಂಪುಟ ವಿಸ್ತರಣೆ ಮಾಡಿದ್ದು, ಈ ಹಿಂದೆ ನಾಲ್ಕು ಬಾರಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಅನುಭವ ಹೊಂದಿರುವ ಮುಹಮ್ಮದ್ ಇಶಾಖ್ ದರ್ ಅವರನ್ನು ವಿದೇಶಾಂಗ ಸಚಿವರಾಗಿ ನೇಮಕ ಮಾಡಲಾಗಿದೆ. ಭಾರತ, ಅಫ್ಗಾನಿಸ್ತಾನ ಸೇರಿದಂತೆ ನೆರೆಯ ದೇಶಗಳೊಂದಿಗೆ ಹಲವು ಸಮಸ್ಯೆ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ವಿದೇಶಾಂಗ ಸಚಿವ ಸ್ಥಾನವು ಮಹತ್ವದ್ದಾಗಿದೆ. ಇಂಥ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳಲ್ಲಿ ಕಡಿಮೆ ಅನುಭವ ಹೊಂದಿರುವ ದರ್ ಅವರಿಗೆ ಪ್ರಮುಖ ಖಾತೆ ನೀಡಲಾಗಿದೆ. ಕಾಶ್ಮೀರಿ ಜನಾಂಗದ ದರ್ ಅವರು ವೃತ್ತಿಯಿಂದ ಚಾರ್ಟಡ್ ಅಕೌಂಟೆಂಟ್ ಆಗಿದ್ದು, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್‌-ಎನ್‌) ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಜತೆಗೆ ಪಕ್ಷದ ವರಿಷ್ಠ ನವಾಜ್ ಷರೀಫ್ ಅವರ ನಂಬಿಕಸ್ಥ ಬೆಂಬಲಿಗರಾಗಿದ್ದಾರೆ.

Read More

ಪುಟ್ಟಗೌರಿ ಧಾರವಾಹಿ ಮೂಲಕ ಪ್ರೇಕ್ಷಕರ ಮನ ಗೆದ್ದು, ಬಿಗ್ ಬಾಸ್ ಮನೆಗೆ ಹೋಗಿ ಬಂದಿರುವ ನಟಿ ಸಾನ್ಯಾ ಐಯ್ಯರ್ ಬಿಗ್ ಸ್ಕ್ರೀನ್ ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ನಟಿ ಸಾನ್ಯಾ ಐಯ್ಯರ್ ಅವರು ಹಲವು ವಿಚಾರಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ಸಾನ್ಯಾ  ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದು, ಆಗಾಗ ಬೋಲ್ಡ್ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ನಟಿ ಸಾನ್ಯಾ ಅಯ್ಯರ್ ಸಖತ್ ಬ್ಯುಸಿಯಾಗಿದ್ದಾರೆ. ಸಾನ್ಯಾ ಐಯ್ಯರ್ ಹಂಚಿಕೊಳ್ಳುವ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ನೆಗೆಟಿವ್ ಕಮೆಂಟ್ ಬರುತ್ತದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಳ್ಳದ ಸಾನ್ಯಾ ಮತ್ತೆ ಮತ್ತೆ ಫೋಟೋಗಳನ್ನು  ಹಂಚಿಕೊಳ್ಳುತ್ತಿರುತ್ತಾರೆ. ಸದಾ ತಮ್ಮ ಫೋಟೋ ಶೂಟ್ ಗಳಿಂದ ಸುದ್ದಿಯಾಗೋ ಸಾನ್ಯಾ ಮತ್ತೊಂದು ಫೋಟೋ ಶೂಟ್ ಮಾಡಿಸಿದ್ದಾರೆ. ಫೋಟೋದಲ್ಲಿ ಸಾನ್ಯಾ ಸಕ್ಕತ್ತಾಗೆ ಮಿಂಚಿದ್ದಾರೆ. ಗೌರಿ ಸಿನಿಮಾದ ಮೂಲಕ ಸಾನ್ಯಾ ಅಯ್ಯರ್  ನಾಯಕಿಯಾಗಿ ಗಾಂಧಿನಗರಕ್ಕೆ ಎಂಟ್ರಿಕೊಡ್ತಿದ್ದಾರೆ. ಈ ಚಿತ್ರದಲ್ಲಿ ಸಾನ್ಯಾಗೆ ನಾಯಕನಾಗಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪುತ್ರ…

Read More

ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡಿದ್ದ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಸದ್ಯ ಸೈಲೆಂಟ್ ಆಗಿದ್ದಾರೆ. ಪುಷ್ಕರ್ ಇತ್ತೀಚೆಗೆ ಕೊಂಚ ಮಟ್ಟಿಗೆ ಸಿನಿಮಾಗಳಿಂದ ದೂರವಿದ್ದಾರೆ. ಇದೀಗ ನಟ ರಕ್ಷಿತ್ ಶೆಟ್ಟಿ ಜೊತೆ ಸಿನಿಮಾ ಮಾಡುವ ಕುರಿತು ಪುಷ್ಕರ್ ಪ್ರತಿಕ್ರಿಯಿಸಿದ್ದಾರೆ. ಕಿರಿಕ್ ಪಾರ್ಟಿಯಂತಹ ಸೂಪರ್ ಹಿಟ್ ಸಿನಿಮಾವನ್ನು ನೀಡಿದ್ದ ರಕ್ಷಿತ್ ಶೆಟ್ಟಿ ಹಾಗೂ ಪುಷ್ಕರ್ ಮಧ್ಯೆ ಅವನೇ ಶ್ರೀಮನ್ನಾರಾಯಣ ಚಿತ್ರದಲ್ಲಿ ಕೆಲವು ವಿಚಾರಕ್ಕೆ ಮನಸ್ತಾಪ ಉಂಟಾಗಿತ್ತು. ಆ ಬಳಿಕ ಇಬ್ಬರು ಬೇರೆ ಬೇರೆಯಾಗಿದ್ದರು. ಈ ಮಧ್ಯೆ ಪುಷ್ಕರ್ ಮತ್ತೆ ರಕ್ಷಿತ್ ಜೊತೆ ಸಿನಿಮಾ ಮಾಡ್ತಾರೆ ಎಂದು ಹೇಳಲಾಗಿತ್ತು. ಆದರೆ ಅದಕ್ಕೆ ಪುಷ್ಕರ್ ಸದ್ಯಕ್ಕೆ ಫುಲ್ ಸ್ಟಾಪ್ ಇಟ್ಟಿದ್ದಾರೆ. ‘ನನ್ನ ಹಾಗೂ ರಕ್ಷಿತ್ ಶೆಟ್ಟಿ ಮಧ್ಯೆ ಯಾವುದೇ ಹೇಟ್​ ರಿಲೇಶನ್​ಶಿಪ್​ ಇಲ್ಲ. ಇಬ್ಬರೂ ಗೌರವಯುತವಾಗಿ ನಮ್ಮದೇ ಸ್ಪೇಸ್​ನಲ್ಲಿ ಇದ್ದೇವೆ. ರಕ್ಷಿತ್ ಶೆಟ್ಟಿ ಸಿನಿಮಾ ಮಾಡಲು 10-20 ನಿರ್ಮಾಪಕರು ರೆಡಿ ಇದ್ದಾರೆ. ನಾನು ಹಣ ಹಾಕ್ತೀನಿ ಡೇಟ್ ಕೊಡಿ ಎಂದು ಅವರು ಕೇಳುತ್ತಾ ಇರುತ್ತಾರೆ. ಹೀಗಾಗಿ,…

Read More

ಬಂಗಾರಪ್ಪ ಅವರ ಕುಟುಂಬ ಒಡೆದುಹೋಗಿದ್ದು ಅವರ ಮನೆ ಒಂದು ಮಾಡಲು ಪ್ರಯತ್ನ ಮಾಡುತ್ತೀರಾ ಎಂಬ ಪ್ರಶ್ನೆಗೆ ನಟ ಹಾಗೂ ಬಂಗಾರಪ್ಪ ಅವರ ಅಳಿಯ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬಂಗಾರಪ್ಪ ಅವರ ಮಗಳು, ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಚುನಾವಣಾ ಕೆಲಸಗಳಿಗಗಿ ಈಗಾಗಲೇ ಶಿವಮೊಗ್ಗದಲ್ಲಿ ಬಾಡಿಗೆ ಮನೆ ಪಡೆದಿರುವ ಗೀತಾ ಶಿವರಾಜ್ ಕುಮಾರ್ ಈಗಾಗಲೇ ಕೆಲಸ ಆರಂಭಿಸಿದ್ದಾರೆ. ಬಂಗಾರಪ್ಪ ಪುತ್ರರಾದ ಸಚಿವ ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ನಡುವೆ ವೈಮನಸ್ಯವಿದೆ. ಹೀಗಾಗಿ ಬಂಗಾರಪ್ಪ ಮನೆ ಒಡೆದ ಮನೆಯಂತಾಗಿದೆ. ಈ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಅವರಿಗೆ ಬಂಗಾರಪ್ಪ ಮನೆ ಒಂದು ಮಾಡುತ್ತೀರಾ ಎಂಬ ಪ್ರಶ್ನೆ ಎದುರಾಗಿದೆ. ಬಂಗಾರಪ್ಪ ಅವರ ಮನೆ ಒಂದು ಮಾಡುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವರಾಜ್ ಕುಮಾರ್ ‘ಬಂಗಾರಪ್ಪ ಅವರ ಮನೆ ಒಂದು ಮಾಡಲು ನಾನು ಅವರ ಮನೆ ಅಳಿಯ, ಮಗನಲ್ಲ’ ಎಂದಿದ್ದಾರೆ. ಆ ಮೂಲಕ ಬಂಗಾರಪ್ಪ…

Read More