ಅಭಿನಯ ಚಕ್ರವತಿ ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಸಿನಿಮಾದ ಬಳಿಕ ಯಾವುದೇ ಸಿನಿಮಾದಲ್ಲೂ ಕಾಣಿಸಿಕೊಂಡಿಲ್ಲ. ಸುದೀಪ್ ನಟನೆ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಸುದೀಪ್ ನಟನೆಯ ಮ್ಯಾಕ್ಸ್ ಚಿತ್ರ ನೋಡೋಕೆ ಫ್ಯಾನ್ಸ್ ಕಾಯ್ತಿದ್ದು ಇದೀಗ ಕಿಚ್ಚ ಮ್ಯಾಕ್ಸ್ ಚಿತ್ರದ ಅಪ್ ಡೇಟ್ ನೀಡಿದ್ದಾರೆ. ಈ ಹಿಂದೆ ಮ್ಯಾಕ್ಸ್ ಸಿನಿಮಾದ ಕುರಿತು ಮಾಹಿತಿ ಹಂಚಿಕೊಂಡಿದ್ದ ಕಿಚ್ಚ ಸುದೀಪ್, “ನಿಮ್ಮ ಪ್ರೀತಿ, ಕ್ಯೂರಿಯಾಸಿಟಿ ನನಗೆ ಅರ್ಥವಾಗುತ್ತದೆ. ಆದರೆ, ಸಿನಿಮಾ ಶೂಟ್ ಪೂರ್ಣಗೊಳ್ಳದೆ ಆ ಬಗ್ಗೆ ಅಪ್ಡೇಟ್ ನೀಡೋದು ಹೇಗೆ” ಎಂದು ಪ್ರಶ್ನಿಸಿದ್ದರು. ಮ್ಯಾಕ್ಸ್ ಸಿನಿಮಾ ಶೂಟಿಂಗ್ ನವೆಂಬರ್ ತಿಂಗಳಲ್ಲಿ ಮಳೆಯಿಂದ ಸಾಧ್ಯವಾಗಿರಲಿಲ್ಲ. ಆದೇ ರೀತಿ ಡಿಸೆಂಬರ್ನಲ್ಲಿ ಅಡೆತಡೆಗಳು ಎದುರಾಗಿದ್ದವು. ಸಂಕ್ರಾಂತಿಯ ಬಳಿಕ ಈ ನಟ ‘ಮ್ಯಾಕ್ಸ್’ ಶೂಟಿಂಗ್ ಶುರು ಆಗಿದೆ ಎಂದಿದ್ದರು. ಇದೀಗ ಸುದೀಪ್ ಮ್ಯಾಕ್ಸ್ ಚಿತ್ರದ ಬಗ್ಗೆ ಮತ್ತೊಂದು ಅಪ್ಡೇಟ್ ಕೊಟ್ಟಿದ್ದಾರೆ. ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟ, ಮ್ಯಾಕ್ಸ್ ಸಿನಿಮಾದ ಪ್ರಮುಖ ದೃಶ್ಯವನ್ನು ಶೂಟ್ ಮಾಡಿ ಮುಗಿಸಿದ್ದೇವೆ. ಅದೊಂದು ಪ್ರಮುಖ ಘಟ್ಟ. ಜೊತೆಗೆ…
Author: Author AIN
ಖ್ಯಾತ ನಟ ಕಮಲ್ ಹಾಸನ್ ತಮ್ಮ ಮಕ್ಕಳ್ ನೀಧಿ ಮೈಯಂ ಪಕ್ಷವನ್ನು ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಮತ್ತು ಲೋಕಸಭೆ ಚುನಾವಣೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಡಿಎಂಕೆ ಪ್ರಧಾನ ಕಛೇರಿ ಅಣ್ಣಾ ಅರಿವಲಯಂನಲ್ಲಿ ಕಮಲ್ ಹಾಸನ್ ಡಿಎಂಕೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಖ್ಯಾತ ನಟ ಕಮಲ್ ಹಾಸನ್ ಅವರು ದೇಶದ ಹಿತದೃಷ್ಟಿಯಿಂದ ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ. ನನಗೆ ಯಾವುದೇ ಹುದ್ದೆ ಬೇಡ, 2025ರ ರಾಜ್ಯಸಭಾ ಚುನಾವಣೆಗೆ ಎಂಎನ್ಎಂಗೆ ಡಿಎಂಕೆ ಒಂದು ಸ್ಥಾನವನ್ನು ನೀಡಿದೆ ಎಂದು ಹೇಳಿದ್ದಾರೆ. ಇಬ್ಬರು ನಾಯಕರ ನಡುವಿನ ಒಪ್ಪಂದದ ಪ್ರಕಾರ ತಮಿಳುನಾಡಿನ 39 ಲೋಕಸಭಾ ಸ್ಥಾನಗಳು ಮತ್ತು ಪುದುಚೇರಿ ಭಾಗದಲ್ಲಿ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಿ ಹೇಳಿದ್ದಾರೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಹಾಗೂ ದೆಹಲಿ ಪೊಲೀಸ್ ಪಡೆಯಲ್ಲಿ ಅಗತ್ಯ ಸಬ್ಇನ್ಸಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 4187ಕ್ಕೂ ಹೆಚ್ಚು ಹುದ್ದೆ ಇದ್ದು, ಮಾರ್ಚ್ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ನೀವು ಯಾವುದೇ ಪದವಿ ಪಾಸ್ ಅಥವಾ ತತ್ಸಮಾನ ಪರೀಕ್ಷೆ ಪಾಸಾಗಿರಬೇಕು. ದೆಹಲಿ ಪೊಲೀಸ್ ಎಸ್ಐ ಹುದ್ದೆಗೆ ವಾಹನ ಚಾಲನ ಪರವಾನಗಿರಬೇಕು. ಕನಿಷ್ಠ 20 ವರ್ಷ, ಗರಿಷ್ಠ 25 ವರ್ಷ ಮೀರಿರಬಾರದು (ವಯೋಮಿತಿ ಸಡಿಲಿಕೆ ಇದೆ). ತಿಂಗಳಿಗೆ 35400-112400 ರೂ. ವೇತನವಿದ್ದು, ಹೆಚ್ಚಿನ ಮಾಹಿತಿಗಾಗಿ https://ssc.nic.in/ ಗೆ ಭೇಟಿ ನೀಡಿ.
ಹಿಂದಿಯ ಬಿಗ್ ಬಾಸ್ ಒಟಿಟಿ 2ನಲ್ಲಿ ಸಾಕಷ್ಟು ಸದ್ದು ಮಾಡಿದ್ದ ಎಲ್ವಿಶ್ ಯಾದವ್ ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಒಂದೊಂದೇ ರಂಪಾಟ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ರೆಸ್ಟೋರೆಂಟ್ ಒಂದರಲ್ಲಿ ಒಬ್ಬರಿಗೆ ಹೊಡೆದ ವಿಡಿಯೋ ವೈರಲ್ ಆಗಿತ್ತು. ಇದೀಗ ಎಲ್ವಿಶ್ ಯಾದವ್ ಅವರು ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದು ಈ ವಿಡಿಯೋ ವೈರಲ್ ಆಗಿದೆ. ಯುಟ್ಯೂಬರ್ ಸಾಗರ್ ಅವರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿದ್ದರು. ಈಗ ಇದಕ್ಕೆ ಸಾಕ್ಷಿ ಸಿಕ್ಕಿದೆ. ಸಾಗರ್ ಅವರು ಕೊಠಡಿಯಲ್ಲಿ ಕುಳಿತಿದ್ದರು. ಈ ವೇಳೆ ಎಲ್ವಿಶ್ ಯಾದವ್ ಅವರು ಬರುತ್ತಿದ್ದಂತೆ ಹ್ಯಾಂಡ್ಶೇಕ್ ಮಾಡಲು ಹೋಗಿದ್ದಾರೆ. ಈ ವೇಳೆ ಎಲ್ವಿಶ್ ಅವರು ಸಾಗರ್ ಮೇಲೆ ಹಲ್ಲೆ ಮಾಡಿದ್ದು ಈ ವಿಡಿಯೋ ವೈರಲ್ ಆಗಿದೆ. ‘ಎಲ್ವಿಶ್ ನನ್ನನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನಾನು ಒಬ್ಬನೇ ಇದ್ದೆ. ಎಲ್ವಿಶ್ ಹಲವು ಜನರನ್ನು ಕರೆ ತಂದಿದ್ದರು. ಇದರ ಪೂರ್ತಿ ವಿಡಿಯೋನ ಬೆಳಿಗ್ಗೆ ಪೋಸ್ಟ್ ಮಾಡುತ್ತೇನೆ. ನನ್ನ ಬಳಿಯೂ…
ಎರಡು ಸಾವಿರ ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಕಳ್ಳಸಾಗಣೆ ಮಾಡಿದ್ದ ಸಿನಿಮಾ ನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳಿನಲ್ಲಿ ಕೆಲ ಸಿನಿಮಾಗಳ ನಿರ್ಮಾಣ ಮಾಡಿದ್ದ ನಿರ್ಮಾಪಕ ಹಾಗೂ ಸಕ್ರಿಯ ರಾಜಕೀಯದಲ್ಲಿಯೂ ತೊಡಗಿಕೊಂಡಿದ್ದ ಜಫರ್ ಸಾದಿಖ್ ನನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಜಫರ್ ಸಾದಿಖ್ ಅಂತರಾಷ್ಟ್ರೀಯ ಡ್ರಗ್ ಮಾಫಿಯಾದ ‘ಮಾಸ್ಟರ್ ಮೈಂಡ್’ ಆಗಿದ್ದಾನೆಂದು ಎನ್ಸಿಬಿ ಆರೋಪ ಮಾಡಿದೆ. ಈತನಿಗಾಗಿ ಕಳೆದ ಎರಡು ವಾರಗಳಿಂದಲೂ ಹುಡುಕಾಟ ನಡೆಸಲಾಗಿತ್ತು, ಇದೀಗ ಆರೋಪಿಯನ್ನು ಬಂಧಿಸಲಾಗಿದ್ದು ವಿಚಾರಣೆ ಆರಂಭಿಸಲಾಗಿದೆ. ಬಂಧಿತ ಜಫರ್ ಸಾದಿಖ್ ಡಿಎಂಕೆಯ ಸದಸ್ಯನಾಗಿದ್ದು, ಡ್ರಗ್ಸ್ ಪ್ರಕರಣದಲ್ಲಿ ಈತನ ಹೆಸರು ಕೇಳಿ ಬಂದ ಬಳಿಕ ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು. ಜಫರ್ ಸಾದಿಖ್, ಸಿನಿಮಾ ನಿರ್ಮಾಪಕ ಸಹ ಆಗಿದ್ದು ಜೆಎಸ್ಎಂ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ತಮಿಳಿನ ‘ಇರೈವನ್ ಮಿಗ ಪೆರಿಯವನ್’, ‘ಮಾಯವಲೈ’, ‘ಮಂಗೈ’ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾನೆ. ಇದೀಗ ವಸಂತ್ ರವಿ ನಟನೆಯ ಹೊಸ ಸಿನಿಮಾದ ನಿರ್ಮಾಣವನ್ನೂ ಮಾಡಿ ಮುಗಿಸಿದ್ದು ಆ ಸಿನಿಮಾ ಬಿಡುಗಡೆ ಆಗಬೇಕಿದೆಯಷ್ಟೆ. ಅಷ್ಟರಲ್ಲಿಯೇ ಈತ ಡ್ರಗ್ಸ್…
ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ ಸಿನಿಮಾ ಸೂಪರ್ ಹಿಟ್ ಆಗಿದೆ. ಇದೀಗ ಪುಷ್ಪ 2 ಸಿನಿಮಾ ಚಿತ್ರೀಕರಣ ಹಂತದಲ್ಲಿದ್ದು ಸಾಕಷ್ಟು ಕ್ರೇಜ್ ಕ್ರಿಯೇಟ್ ಮಾಡಿದೆ. ಸಿನಿಮಾದ ಚಿತ್ರೀಕರಣ ಮುಗಿಯುವ ಮುನ್ನವೇ ವಿಶ್ವದ ಮೂಲೆ ಮೂಲೆಗಳಲ್ಲೂ ಹವಾ ಕ್ರಿಯೇಟ್ ಮಾಡಿದೆ. ಈ ಮಧ್ಯೆ ಪುಷ್ಪ 2ಚಿತ್ರದ ಚಿತ್ರೀಕರಣವನ್ನು ನಟಿ ಶ್ರೀಲೀಲಾ ರಿಜೆಕ್ಟ್ ಮಾಡಿದ್ದಾರೆ. ಟಾಲಿವುಡ್ ಸಿನಿಮಾಗಳಲ್ಲಿ ಸಖತ್ ಆಗಿ ಮಿಂಚುತ್ತಿರುವ ಕರ್ನಾಟಕದ ನಟಿ ಶ್ರೀಲೀಲಾ ಅವರು ‘ಪುಷ್ಪ 2’ ಸಿನಿಮಾದ ಅವಕಾಶ ನಿರಾಕರಿಸಿದ್ದಾರೆ. ತೆಲುಗು ಸಿನಿಮಾಗಳಲ್ಲಿ ಮಿಂಚುತ್ತಿರುವ ನಟಿ ಶ್ರೀಲೀಲಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಮಹೇಶ್ ಬಾಬು, ನಂದಮೂರಿ ಬಾಲಕೃಷ್ಣ, ರವಿತೇಜ ಅಂಥಹಾ ದೊಡ್ಡ ನಟರ ಜೊತೆ ತೆರೆ ಹಂಚಿಕೊಂಡಿರುವ ಶ್ರೀಲೀಲಾಗೆ, ‘ಪುಷ್ಪ 2’ ಸಿನಿಮಾದ ಭಾಗವಾಗುವ ಅವಕಾಶ ಅರಸಿ ಬಂದಿತ್ತು. ಆದರೆ ಶ್ರೀಲೀಲಾ ಅವಕಾವನ್ನು ನಿರಾಕರಿಸಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ. ಈ ಹಿಂದೆ ಬಿಡುಗಡೆ ಆಗಿದ್ದ ‘ಪುಷ್ಪ’ ಸಿನಿಮಾನಲ್ಲಿ ಸಮಂತಾ…
ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ 2023ರ ಮಾರ್ಚ್ 4ರವರೆಗೆ 41,054 ಭಾರತೀಯ ಪ್ರವಾಸಿಗರು ಮಾಲ್ದೀವ್ಸ್ಗೆ ಭೇಟಿ ನೀಡಿದ್ದರು. ಆದರೆ ಈ ವರ್ಷ ಮಾರ್ಚ್ 2ರವರೆಗೆ 27,224 ಭಾರತೀಯ ಪ್ರವಾಸಿಗರು ಮಾಲ್ದೀವ್ಸ್ಗೆ ಭೇಟಿ ನೀಡಿದ್ದು ಭಾರತೀಯ ಪ್ರವಾಸಿಗರ ಸಂಖ್ಯೆಯಲ್ಲಿ 13,830 ಕುಸಿತ ಕಂಡುಬಂದಿದೆ. ಲಕ್ಷದ್ವೀಪಕ್ಕೆ ಭಾರತೀಯ ಪ್ರವಾಸಿಗರನ್ನು ಆಕರ್ಷಿಸಲು ಭಾರತದ ಸರಕಾರ ಕೈಗೊಂಡ ಅಭಿಯಾನವೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 2023ರ ಮಾರ್ಚ್ವರೆಗೆ ಭಾರತವು ಮಾಲ್ದೀವ್ಸ್ಗೆ ಪ್ರವಾಸೋದ್ಯಮದ ಎರಡನೇ ಅತೀ ದೊಡ್ಡ ಮೂಲವಾಗಿದ್ದು ಆ ದೇಶ ಪ್ರವಾಸೋದ್ಯಮದಿಂದ ಗಳಿಸುವ ಆದಾಯದಲ್ಲಿ 10% ಭಾರತೀಯ ಪ್ರವಾಸಿಗರಿಂದ ಬರುತ್ತಿತ್ತು. 2021, 2022 ಮತ್ತು 2023ರಲ್ಲಿ ಭಾರತ ಅಗ್ರಸ್ಥಾನದಲ್ಲಿತ್ತು. ಆದರೆ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ವಿವಾದ ಉಲ್ಬಣಿಸಿದ ಬಳಿಕ ಭಾರತ 6ನೇ ಸ್ಥಾನಕ್ಕೆ ಕುಸಿಯಿತು. ಭಾರತದ ಪ್ರವಾಸಿಗರ ಸಂಖ್ಯೆಯಲ್ಲಿ ಕುಸಿತ ದಾಖಲಾದರೆ ಚೀನಾದ ಪ್ರವಾಸಿಗರ ಪ್ರಮಾಣದಲ್ಲಿ ದಿಢೀರನೆ ಏರಿಕೆಯಾಗಿದೆ. ಚೀನಾ-ಮಾಲ್ದೀವ್ಸ್ ನಡುವಿನ ದ್ವಿಪಕ್ಷೀಯ ಬಾಂಧವ್ಯ ಬಲಗೊಳ್ಳುತ್ತಿದ್ದಂತೆಯೇ 2024ರ ಮಾರ್ಚ್ 4ರ ವೇಳೆಗೆ ಚೀನಾದ…
ನಟಿ ಮಲಾಶ್ರೀ ಪುತ್ರಿ, ಕಾಟೇರನ ಚೆಲುವೆ ಆರಾಧನಾ ರಾಮ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಸದ್ಯ ನಟಿ ಸುಂದರವಾದ ಟ್ರಾನ್ಸರೆಂಟ್ ಕಪ್ಪು ಸೀರೆ ಧರಿಸಿ ಫೋಟೋ ಶೂಟ್ ಮಾಡಿಸಿದ್ದಾರೆ. ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ನಟಿ ಮುದ್ದಾಗಿ ಫೋಟೋ ಶೂಟ್ ಮಾಡಿಸಿದ್ದು ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದರ್ಶನ್ ನಟನೆಯ ಕಾಟೇರ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ಆರಾಧನಾ ರಾಮ್ ಕನ್ನಡದ ಭರವಸೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ದರ್ಶನ್ ತೂಗ್ ದೀಪ್ ಗೆ ನಾಯಕಿಯಾಗಿ ಕಾಟೇರ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಭರ್ಜರಿ ಎಂಟ್ರಿ ಕೊಟ್ಟ ಖ್ಯಾತ ನಟಿ ಮಾಲಾಶ್ರೀ ಮಗಳು ಆರಾಧನಾ ರಾಮ್ ಅಂದ, ಚೆಂದ, ಸ್ಟೈಲ್ ಕಂಡು ಹುಡುಗರು ಫಿದಾ ಆಗಿದ್ದಾರೆ. ಮುಂಬೈನಲ್ಲಿ ಆ್ಯಕ್ಟಿಂಗ್ ತರಬೇತಿ ಪಡೆದ ಆರಾಧನಾ ತಮ್ಮ ಮೊದಲ ಸಿನಿಮಾದಲ್ಲಿ ಕನ್ನಡಿಗರ ಮನಗೆದ್ದರು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಇವರು ಸಿಕ್ಕಾಪಟ್ಟೆ ಫೋಟೊ ಶೇರ್ ಮಾಡುತ್ತಿರುತ್ತಾರೆ. ಕಾಟೇರ ಸಿನಿಮಾದಲ್ಲಿನ ಆರಾಧನಾ ಅಭಿನಯಕ್ಕಾಗಿ ಉತ್ತಮ…
ನಟ, ನಟಿಯರು ರಾಜಕೀಯಕ್ಕೆ ಎಂಟ್ರಿಕೊಡೋದು ಹೊಸದೇನು ಅಲ್ಲ. ಈಗಾಗಲೇ ಸಾಕಷ್ಟು ಕಲಾವಿಧರು ರಾಜಕೀಯಕ್ಕೆ ಎಂಟ್ರಿಕೊಟ್ಟು ಸದ್ದು ಮಾಡಿದ್ದಾರೆ. ಅಂತೆಯೇ ನಟ ಡಾಲಿ ಧನಂಜಯ್ ಕೂಡ ರಾಜಕೀಯಕ್ಕೆ ಬರ್ತಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಡಾಲಿ ಸ್ಪಷ್ಟನೆ ನೀಡಿದ್ದಾರೆ. ಚಲನಚಿತ್ರವೇ ನನ್ನ ಜೀವನ, ನನಗೆ ಅದರಲ್ಲೇ ಆಸಕ್ತಿ, ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ, ಚುನಾವಣೆ ಪ್ರಚಾರದಲ್ಲಿ ಭಾಗವಹಿಸುವ ಸಾಧ್ಯತೆಗಳಿಲ್ಲ ರಾಜಕೀಯ ಎಂಟ್ರಿಯ ಕುರಿತು ಸ್ಪಷ್ಟನೆ ನೀಡಿದ್ದಾರೆ. ಶಿವರಾತ್ರಿ ಪ್ರಯುಕ್ತ ಮಂಡ್ಯ ಜಿಲ್ಲೆಯ ಕೆರೆಗೋಡಿನ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿಯವರನ್ನು ವೈಯಕ್ತಿಕವಾಗಿ ಭೇಟಿ ಮಾಡುವ ಸಂದರ್ಭಗಳು ಬಂದಿಲ್ಲ. ಇತ್ತೀಚೆಗೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೇನೆ. ಅದನ್ನು ಹೊರತುಪಡಿಸಿ ವೈಯಕ್ತಿಕವಾಗಿ ಭೇಟಿ ಮಾಡಿಲ್ಲ ಎಂದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲೂ ಪ್ರಚಾರಕ್ಕಾಗಿ ನನಗೆ ಆಹ್ವಾನವಿತ್ತು. ಆದರೆ ನಾನು ಭಾಗವಹಿಸಿರಲಿಲ್ಲ. ಈ ಬಾರಿ ಲೋಕಸಭೆ ಚುನಾವಣೆಯಲ್ಲೂ ಪ್ರಚಾರದಲ್ಲಿ ಭಾಗವಹಿಸುವ ನಿರೀಕ್ಷೆಗಳು ಕಡಿಮೆ ಇದೆ ಎಂದಿದ್ದಾರೆ.
ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯಲ್ಲಿ, 13,700 ಅಡಿ ಎತ್ತರದಲ್ಲಿ ನಿರ್ಮಿಸಿರುವ ಸೆಲಾ ಸುರಂಗಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು (ಮಾರ್ಚ್ 9) ಚಾಲನೆ ನೀಡಿದ್ದಾರೆ. ಜಗತ್ತಿನಲ್ಲೇ ಅತಿ ಉದ್ದದ ಅವಳಿ ಸುರಂಗ ಎಂಬ ಖ್ಯಾತಿಗೆ ಭಾಜನವಾಗಿರುವ ಈ ಸುರಂಗ ಮಾರ್ಗವು ಸಂಪರ್ಕ, ಸಾಗಣೆ ಸೇರಿ ವ್ಯೂಹಾತ್ಮಕವಾಗಿಯೂ ಪ್ರಾಮುಖ್ಯತೆ ಪಡೆದಿದೆ. ಕಮೆಂಗ್ ಜಿಲ್ಲೆಯ 13,700 ಅಡಿ ಎತ್ತರದಲ್ಲಿ ನಿರ್ಮಿಸಿರುವ ಸುರಂಗಕ್ಕೆ 825 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕೇಂದ್ರ ಸರ್ಕಾರದ ಗಡಿ ರಸ್ತೆ ಸಂಘಟನೆಯು ಸುರಂಗ ನಿರ್ಮಿಸಿದೆ. ಸೆಲಾ ಸುರಂಗ ಯೋಜನೆ ಅಡಿಯಲ್ಲಿ ಎರಡು ಸುರಂಗಗಳನ್ನು ನಿರ್ಮಿಸಲಾಗಿದ್ದು, ಒಂದು ಸುರಂಗವು 980 ಮೀಟರ್ ಉದ್ದವಾಗಿದೆ. ಮತ್ತೊಂದು ಸುರಂಗವು 1,550 ಮೀಟರ್ ಉದ್ದ ಇದೆ. ಇದು ತೇಜ್ಪುರದಿಂದ ತವಾಂಗ್ಗೆ ಸಂಪರ್ಕ ಕಲ್ಪಿಸಲಿದೆ. ಎರಡೂ ಸುರಂಗಗಳ ನಡುವೆ 1,200 ಮೀಟರ್ ಉದ್ದದ ಲಿಂಕ್ ರೋಡ್ ಕೂಡ ಇದೆ. ಅರುಣಾಚಲ ಪ್ರದೇಶದಲ್ಲಿ ಗಡಿ ತಂಟೆ ಮಾಡುವ ಚೀನಾಗೆ ಸೆಲಾ ಸುರಂಗವು ವ್ಯೂಹಾತ್ಮಕವಾಗಿ ಪ್ರಮುಖವಾಗಿದೆ. ಅದರಲ್ಲೂ, ತಮ್ಮ…