Author: Author AIN

ಬೆಂಗಳೂರು: ಮುಡಾ ತೂಗುಗತ್ತಿಯಿಂದ ಸಿಎಂ ರಿಲೀಫ್​​​ ಪಡೆದಿದ್ದಾರೆ. ಹೌದು ಮುಡಾ ಭೂ ಹಗರಣದ ತನಿಖೆ ಮುಕ್ತಾಯವಾಗಿದ್ದು, ಮೈಸೂರು ಲೋಕಾಯುಕ್ತರು ನ್ಯಾಯಾಲಯಲಕ್ಕೆ ಸಲ್ಲಿಸಲು ಮುಂದಾಗಿದ್ದಾರೆ. ಆದ್ರೆ, ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಕ್ಲೀನ್​ಚಿಟ್ ನೀಡಲಾಗಿದೆ. https://ainlivenews.com/does-armpit-sweat-cause-bad-odor-if-so-heres-the-solution-to-this-problem/ ಈ ಬಗ್ಗೆ ಲೋಕಾಯುಕ್ತವು ದೂರುದಾರ ಸ್ನೇಹಮಯಿ‌ಕೃಷ್ಣಗೆ ನೋಟಿಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎನ್ನುವುದನ್ನು ತಿಳಿಸಿದೆ. ಅಲ್ಲದೇ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್‌ ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ. ನಾಳೆ ಕೇವಲ 4 ಜನರ ವಿರುದ್ಧ ಅಂತಿಮ ವರದಿ ಸಲ್ಲಿಕೆ A1 ಸಿದ್ದರಾಮಯ್ಯ A2 ಪಾರ್ವತಿ A3 ಮಲ್ಲಿಕಾರ್ಜುನ ಸ್ವಾಮಿ A4 ದೇವರಾಜು ಇನ್ನು ಪ್ರಕರಣ ತನಿಖೆ ವರದಿ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್​ ಜಾರಿ ಮಾಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ  ಈ  ಪ್ರಕರಣ ತನಿಖೆಗೆ ಅರ್ಹವಲ್ಲ ಎಂದು ತಿಳಿಸಿದೆ. ತನಿಖಾಧಿಕಾರಿಗಳಿಗೆ ಸಿವಿಲ್ ಸ್ವರೂಪದ್ದೆಂದು ತನಿಖೆ ನಡೆಸಲು ತಕ್ಕುದಲ್ಲವೆಂದು ಸಂಗತಿ ಅಥವಾ ಕಾನೂನಿನ ತಪ್ಪು ತಿಳುವಳಿಕೆಯೆಂದು…

Read More

ಗದಗ : ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಜಮೆ ಆಗದ ಕುರಿತು ಸಂಸದ ಜಗದೀಶ್‌ ಶೆಟ್ಟರ್ ಹೇಳಿಕೆಗೆ ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿರುಗೇಟು ನೀಡಿದ್ದಾರೆ. ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದ್ರೂ ಏನಾದ್ರೂ ಅಂದ್ರೆ ಸುಮ್ಮನಿರಬಹುದು. ಆದರೆ ಬರಗಾಲ ಬಿದ್ದು ಬರಗಾಲ ಪೂರ್ಣ ಹೋಗಿ ನಾವು ಸುಪ್ರೀಂಕೋರ್ಟ್‌ಗೆ ಹೋದಾಗ ಸಹಿತ ಪರಿಹಾರ ನೀಡದೇ ಇರೋರು ಶೆಟ್ಟರ್. ಎರಡು ತಿಂಗಳ ತಡ ಆಗಿದ್ದಕ್ಕೆ ಸರ್ಕಾಕ್ಕೆ ನೀವೇನು ಹಂಗಾತು ಹಿಂಗಾತು ಅನ್ನೋದಕ್ಕೆ ನೈತಿಕ ಹಕ್ಕಿದೆ. ಕರ್ನಾಟಕದ ಜನರ ಬಗ್ಗೆ ನಿಮಗೆ ಕಾಳಜಿ ಇದ್ರೆ ಬಜೆಟ್ ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಯ್ತಲ್ಲ. ಯುಪಿ, ಬಿಹಾರಕ್ಕೆ ಎಷ್ಟು ಬರುತ್ತೆ. ಅದಕ್ಕೆ ದನಿ ಎತ್ತಿ, ಯಾಕೆ ಧ್ವನಿ ಎತ್ತಲು ಆಗ್ತಾ ಇಲ್ಲ..?  ನೀವು ಕರ್ನಾಟಕದ ಹಿತ ಕಾಪಾಡ್ತೀರಾ ಎಂದ್ ಪ್ರಶ್ನಿಸಿದರು. https://www.youtube.com/watch?v=lMg_I8lOA-0 ಸಂಬಳ ಬರುವಂತೆಯೇ ರೆಗ್ಯುಲರ್ ಆಗಿ ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಮುಟ್ಟಿಸಲು ಸರ್ವ ಪ್ರಯತ್ನ ಮಾಡುತ್ತೇವೆ. ಯಾವ ಕಾರಣಕ್ಕೂ ವಿಳಂಬ ಆಗದೇ ಇರೋ ಹಾಗೆ…

Read More

ಬೆಂಗಳೂರು: ಇದೇ ತಿಂಗಳಿಂದ10 ಕೆಜಿ ಅಕ್ಕಿಯನ್ನು ಫಲಾನುಭವಿಗಳಿಗೆ ಕೊಡುತ್ತಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪ  ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳಿಂದ ಅಕ್ಕಿಯನ್ನು ಫಲಾನುಭವಿಗಳಿಗೆ ಕೊಡುತ್ತಿದ್ದೇವೆ. ನಮಗೆ ಬೇಕಾಗಿರುವ 5 ಕೆಜಿ ಅಕ್ಕಿಯನ್ನು ಕೊಡಲು ಕೇಂದ್ರ ಸರ್ಕಾರವು ಒಪ್ಪಿಗೆ ಕೊಟ್ಟಿದೆ. ಪ್ರತಿ ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ ಎಂದು ಹೇಳಿದರು. https://ainlivenews.com/does-armpit-sweat-cause-bad-odor-if-so-heres-the-solution-to-this-problem/ ನಮ್ಮ ಇಲಾಖೆ ಅಧಿಕಾರಿಗಳು ಬರೆದ ಪತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸ್ಪಂದಿಸಿದ್ದಾರೆ. ಈಗ ಕೇಂದ್ರ ಸಚಿವರು ಅಕ್ಕಿ‌ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಹಾಕುತ್ತೇವೆ. ಫೆಬ್ರವರಿಯಿಂದ 10 ಕೆಜಿ ಅಕ್ಕಿ ಕೊಡುವ ತೀರ್ಮಾನ ಮಾಡಿದ್ದೇವೆ. 2013ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ. ನಾವು ನುಡಿದಂತೆ ನಡೆದಿದ್ದೇವೆ. ರಾಜ್ಯದ ಜನರಿಗೆ ಅಕ್ಕಿ,…

Read More

ಚಿಕ್ಕಬಳ್ಳಾಪುರ : ಸಿಎಂ ಸಿದ್ದರಾಮಯ್ಯ ಅವರು 2025ರ ಬಜೆಟ್‌ನಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಹೆಚ್ಚಿನ ಅನುದಾನ ನೀಡಬೇಕೆಂದು ಶಿಡ್ಲಘಟ್ಟ ಶಾಸಕ ಮೇಲೂರು ರವಿಕುಮಾರ್ ಆಗ್ರಹಿಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ವಿಶೇಷವಾಗಿ ನೀರಾವರಿ ಯೋಜನೆಗೆ  ಒತ್ತು ನೀಡಲು ಮನವಿ ಮಾಡಿದ್ದು, ಈ ಭಾಗದ ರೈತರಿಗೆ ನೀರಾವರಿಗೆ ತುಂಬಾ ಸಮಸ್ಯೆ ಇದೆ ಎಂದಿದ್ದಾರೆ. https://www.youtube.com/watch?v=lMg_I8lOA-0 ಶಿಡ್ಲಘಟ್ಟ ನಗರಕ್ಕೆ ಕಂದಾಯ ಭವನ ನಿರ್ಮಾಣ ಮಾಡುವಂತೆ ಕಂದಾಯ ಸಚಿವರಿಗೆ ಮನವಿ ಮಾಡಲಾಗಿದೆ. ಎತ್ತಿನಹೊಳೆ ಯೋಜನೆ ಬಹಳ ಕುಂಟಿತಗೊಂಡಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕು.  ಕ್ಷೇತ್ರದಲ್ಲಿ ಇಂಜಿನೀಯರಿಂಗ್ ಕಾಲೇಜ್ ಹಾಗು ಕುಡಿಯುವ ನೀರಿನ ಡ್ಯಾಂ ನಿರ್ಮಾಣ ಮಾಡುವ ಗುರಿ ಇದೆ. ಮುಂದಿನ ದಿನಗಳಲ್ಲಿ ಆದಷ್ಟು ಅನುದಾನ ತಂದು ಯೋಜನೆ ರೂಪಿಸುತ್ತೇನೆ. 2025ರ ಮೇ ಜೂನ್ ವೇಳೆಗೆ ತಾಲುಕು ಪಂಚಾಯತಿ, ಜಿಲ್ಲಾ ಪಂಚಾಯತ್ ಚುನಾವಣೆ ನಡೆಯುವ ಮುನ್ಸೂಚನೆ ಇದೆ. ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದಿದ್ದಾರೆ.…

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.  ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದು ಮಗು ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ನಡೆದಿದೆ. ಥವನ್ ರೆಡ್ಡಿ (2) ಮೃತಪಟ್ಟ ಮಗುವಾಗಿದ್ದು, ಚಾಲಕ ಜೆಸಿಬಿಯನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಹರಿದಿದೆ. ರಸ್ತೆಯಲ್ಲಿ ಆಟವಾಡುತ್ತಿದ್ದ ಥವನ್ ರೆಡ್ಡಿ ತಲೆಯ ಮೇಲೆ ಜೆಸಿಬಿ ಹರಿದಿದೆ. https://ainlivenews.com/does-armpit-sweat-cause-bad-odor-if-so-heres-the-solution-to-this-problem/ ಕೂಡಲೇ ಮಗುವನ್ನು ವೈದೇಹಿ ಆಸ್ಪತ್ರೆಗೆ ರವಾನಿಸಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಮಾರ್ಗ ಮಧ್ಯದಲ್ಲಿ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದ್ದು, ಮಹಾದೇವಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ: ಮೆಟ್ರೋ ಟಿಕೆಟ್‌ ದರ ಏರಿಕೆ ಬಗ್ಗೆ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಮೆಟ್ರೋ ಟಿಕೆಟ್‌ ದರ ಏರಿಕೆ ಬಗ್ಗೆ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ. ಕರ್ನಾಟಕ ಸರ್ಕಾರ ಶಿಫಾರಸ್ಸಿನ ಮೇರೆಗೆ ದರ ಏರಿಕೆ ಮಾಡಲಾಗಿದೆ. ಮೆಟ್ರೋ ಅಧಿಕಾರಿ ದರ ಹೆಚ್ಚಿಸಲು ಕೇಂದ್ರಕ್ಕೆ ಬರೆದಿದ್ದಾರೆ. ನಿಮ್ಮ ಒತ್ತಡಕ್ಕೆ ಒಳಗಾಗಿ ಕೇಂದ್ರ ಅನುಮತಿ ಕೊಟ್ಟಿದೆ ಎಂದು ದೂರಿದ್ದಾರೆ. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸ ಆಗುತ್ತಿಲ್ಲ, ಕಾನೂನು ಸುವ್ಯವಸ್ಥೆ ಸರಿಯಿಲ್ಲ. ದನದ ಕೆಚ್ಚಲು ಕೊಯ್ದವರನ್ನು ಮಾನಸಿಕ ಅಸ್ವಸ್ಥ ಎನ್ನುತ್ತಾರೆ. ಪೊಲೀಸ್ ಠಾಣೆಗೆ ದಾಳಿ ಮಾಡಲಾಗಿದೆ, ಆಸ್ಪತ್ರೆಯಲ್ಲಿ ಬಾಣಂತಿಯ ಸಾವಾಗುತ್ತಿದೆ, ಎಲ್ಲವನ್ನ ಕೇಂದ್ರ ಸರ್ಕಾರ ಮಾಡೋದಾದ್ರೆ ಸಿದ್ದರಾಮಯ್ಯನವರೇ ನೀವು ಏಕೆ ಅಧಿಕಾರ ನಡೆಸುತ್ತೀರಿ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. https://ainlivenews.com/does-armpit-sweat-cause-bad-odor-if-so-heres-the-solution-to-this-problem/ ಗ್ಯಾರಂಟಿ ಕೊಟ್ಟಿದ್ದರ ಮೂರು ಪಟ್ಟು ವಸ್ತುಗಳ ಬೆಲೆ ಹೆಚ್ಚಳ ಮಾಡಿದ್ದೀರಿ. ಪದೇ ಪದೇ ಕೇಂದ್ರದತ್ತ ಕೈ ತೋರಿಸುವುದನ್ನು ಬಿಡಿ. ನಿಮ್ಮದು ದಿವಾಳಿ ಸರ್ಕಾರ,…

Read More

ಕಂಪ್ಲಿ : ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರಕಾರ ಉಚಿತವಾಗಿ ವಸತಿ ನಿವೇಶನಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿ ಕಂಪ್ಲಿ ಕಟ್ಟಡ ಕಾರ್ಮಿಕರ ಸಂಘದ ನೂರಾರು ಸದಸ್ಯರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಸ್ಥಳೀಯ ಉದ್ಭವ ಗಣಪತಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಬಿಆರ್ ಅಂಬೇಡ್ಕರ್ ಸರ್ಕಲ್ ಪುರಸಭೆ ಮುಂಭಾಗದ ಜಮಾಯಿಸಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. https://ainlivenews.com/collision-between-car-and-two-wheeler-biker-dies/ ಸಿಐಟಿಯು ಕಂಪ್ಲಿ ತಾಲೂಕು ಅಧ್ಯಕ್ಷರಾದ ಹೊನ್ನೂರ್ ಸಾಹೇಬ್ ಅವರು ಮಾತನಾಡಿ, ಕಟ್ಟಡ ನಿರ್ಮಾಣಕ್ಕೆ ಬೇಕಾಗಿರುವ ಪರಿಕರಗಳಲ್ಲಿ ಮುಖ್ಯವಾಗಿ ಮರಳಿನ ದರ ಹೆಚ್ಚಾಗಿರುವುದರಿಂದ ಮಧ್ಯಮ ಹಾಗೂ ಕೆಳ ವರ್ಗದವರಿಗೆ ಮರಳು ದೊರೆಯದಂತಾಗಿದೆ. ಮನೆ ಕಟ್ಟಲು ಸಾಕಷ್ಟು ಜನರು ಹಿಂಜರಿಯುವಂತಾಗಿದೆ. ಇದರಿಂದ ಕಟ್ಟಡ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಪರದಾಡುವಂತಾಗಿದ್ದು ಬೀದಿಗೆ ಬರುವಂತಾಗಿದೆ. ಕಾರ್ಮಿಕರಿಗೆ ಕಟ್ಟಡ ನಿರ್ಮಾಣ ಕಾರ್ಯಬಿಟ್ಟು ಬೇರೆ ಕೆಲಸ ಮಾಡಲುಗೊತ್ತಿಲ್ಲ. ಮರಳು ಉಳ್ಳವರ ಪಾಲಾಗುತ್ತಿದೆ ಎಂದು ದೂರಿದರು. https://www.youtube.com/watch?v=ykrwcXwJseo ರಾಜ್ಯ ಸರ್ಕಾರ ಇತರ ವರ್ಗದ ಜನರ ಸಮಸ್ಯೆಗಳನ್ನು ಬಗೆಹರಿಸಿದಂತೆ ಕಟ್ಟಡ, ಕೂಲಿ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಲು…

Read More

ಕೋಲಾರ – ಕಾರು ಹಾಗೂ ದ್ವಿಚಕ್ರವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. https://ainlivenews.com/a-boy-lost-control-of-his-leg-due-to-the-negligence-of-the-hospital-staff/ ಶ್ರೀನಿವಾಸಪುರ ತಾಲೂಕಿನ ಬಟ್ಟುವಾರಪಲ್ಲಿ ಕ್ರಾಸ್ ನಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿ ಸೊಣ್ಣಕಲ್ಲು ಗ್ರಾಮದ (38) ವರ್ಷದ ನರಸಿಂಹ ಎಂದು ಗುರುತಿಸಲಾಗಿದೆ.  ಅರಣ್ಯ ಇಲಾಖೆಯಲ್ಲಿ ದಿನಕೂಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಕರ್ತವ್ಯಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. https://www.youtube.com/watch?v=lfJJ4pfOjNY

Read More

ತುಮಕೂರು : ಬಾಲಕನ ಎಡಗಾಲಿನ ಸೊಂಟಕ್ಕೆ ನೀಡಬೇಕಿದ್ದ ಚುಚ್ಚುಮದ್ದು ನರಕ್ಕೆ ನೀಡಿದ ಪರಿಣಾಮ 9 ವರ್ಷದ ಬಾಲಕ ತನ್ನ ಕಾಲಿನ ಸ್ವಾಧೀನವನ್ನೇ ಕಳೆದುಕೊಂಡಿದ್ದಾನೆ.  ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ 9 ವರ್ಷದ ಬಾಲಕ ಗಿರೀಶ್ ಸ್ವಾಧೀನ ಕಳೆದುಕೊಂಡಿದ್ದಾನೆ. https://ainlivenews.com/real-estate-businessman-basavaraj-kidnapping-case-as-much-as-belgaum-sp-said/ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣ್ಣದ ರಾಘವೇಂದ್ರ ಆಸ್ಪತ್ರೆಯ ವಿರುದ್ಧ ಪೋಷಕರ ಆರೋಪ ಮಾಡಿದ್ದಾರೆ. ಮಧುಗಿರಿ ತಾಲೂಕಿನ ಕೃಷ್ಣಯ್ಯನಪಾಳ್ಯ ಗ್ರಾಮದ ಗಂಗರಾಜು ಎಂಬುವರ ಮಗನಾದ ಗಿರೀಶ್‌ನನ್ನು ಕಳೆದ ಫೆ.6ರಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಜ್ವರಕ್ಕೆ ಇಂಜೆಕ್ಷನ್ ಬರೆದುಕೊಟ್ಟಿದ್ದರು. ಆದರೆ ಆಸ್ಪತ್ರೆಯ ನರ್ಸ್ ಸರಿಯಾಗಿ ಇಂಜೆಕ್ಷನ್ ‌ನೀಡದೇ ನರದ ಮೇಲೆ ಇಂಜೆಕ್ಷನ್ ಕೊಟ್ಟ ಆರೋಪ ಮಾಡಿದ್ದಾರೆ.  ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಸಿದ್ದಾರ್ಥ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Read More

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿ ಬಸವರಾಜ್ ಕಿಡ್ನ್ಯಾಪ್ ಪ್ರಕರಣ ಸಂಬಂಧ ಬೆಳಗಾವಿ ಎಸ್‌.ಪಿ.ಭೀಮಾಶಂಕರ್‌ ಗುಳೇದ್‌ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿನ್ನೆ ಶೋಭಾ ಅಂಬಿ ಬಂದು ಘಟಪ್ರಭಾ ಠಾಣೆಯಲ್ಲಿ ಕೇಸ್ ಕೊಟ್ಟಿದ್ದಾರೆ. https://ainlivenews.com/argument-between-sri-siddharudh-mutt-management-and-devotees/ ದೂರಿನಲ್ಲಿ ಉಲ್ಲೇಖವಾಗಿರುವ ಅಂಶಗಳ ಮಾತನಾಡುತ್ತಾ, ಫೆ.14 ರಂದು ರಾತ್ರಿ ಸಾಂಗಲಿಯಿಂದ ವಾಪಸ್ ಬರುವಾಗ ನನ್ನೊಂದಿಗೆ ಮಾತನಾಡುತ್ತಾ ಕರೆ‌ ಕಟ್ ಆಯ್ತು. ಫೆ.15ರಂದು ಪತಿ ಬಸವರಾಜ್ ಅಂಬಿ ಕರೆ ಮಾಡಿ ನನ್ನ‌ ಕಿಡ್ನ್ಯಾಪ್ ಆಗಿದ್ದು, 5 ಕೋಟಿ ಹಣವನ್ನ ತೆಗೆದುಕೊಂಡು ನಿಪ್ಪಾಣಿಗೆ ಬರಲು ಹೇಳುತ್ತಾರೆ.  ಆಗ ಶೋಭಾ ತನ್ನ ಪುತ್ರ ಹುಲಿರಾಜಗೆ 10 ಲಕ್ಷ ತೆಗೆದುಕೊಂಡು ನಿಪ್ಪಾಣಿಯ ರತ್ನಾ ಹೊಟೇಲ್ ಹತ್ತಿರ ಬರಲು ಹೇಳ್ತಾರೆ. ಹುಲಿರಾಜ್ ತನ್ನೊಂದಿಗೆ ನಾಲ್ಕೈದು  ಜನರನ್ನ ತೆಗೆದುಕೊಂಡು ಹೋಗಿರುತ್ತಾನೆ. ಆಗ ಅದನ್ನ ಗಮನಿಸಿದ ಆರೋಪಿಗಳು ಅಲ್ಲಿಂದ ಹೊರಟು ಹೋಗ್ತಾರೆ. ಮತ್ತೆ ಫೆ.17 ರಂದು ಮತ್ತೆ ಕರೆ ಮಾಡಿ 5 ಕೋಟಿ ಹಣ ತೆಗೆದುಕೊಂಡು ಒಬ್ಬನೇ ಬರುವಂತೆ ಹೇಳ್ತಾರೆ. ವಿಡಿಯೋ ಕಾಲ್ ಮಾಡಿ ಬಸವರಾಜ್…

Read More