Author: Author AIN

ಬಾಲಿವುಡ್ ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಮತ್ತು ಪತಿ ಆದಿಲ್ ಖಾನ್ ದುರಾನಿ ನಡುವಿನ ಸಂಬಂಧ ಸಾಕಷ್ಟು ದಿನಗಳಿಂದ ಸದ್ದು ಮಾಡುತ್ತಿತ್ತು. ಪತಿ ಆದಿಲ್ ಖಾನ್ ಬಗ್ಗೆ ರಾಖಿ ಸಾಕಷ್ಟು ಗಂಭೀರ ಆರೋಪ ಮಾಡಿದ್ದು ಮದುವೆಯಾದ ಕೆಲ ಸಮಯದಲ್ಲೇ ಇಬ್ಬರು ದೂರ ದೂರವಾಗಿದ್ದರು. ಇದೀಗ ಆದಿಲ್ ಜೈಪುರದಲ್ಲಿ ರಹಸ್ಯವಾಗಿ ಮತ್ತೊಂದು ಮದುವೆಯಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಆದಿಲ್ ಮಾರ್ಚ್ 2ರಂದು ಜೈಪುರದಲ್ಲಿ ‘ಬಿಗ್ ಬಾಸ್ ಹಿಂದಿ ಸೀಸನ್ 12′ ಸ್ಪರ್ಧಿ ಸೋಮಿ ಖಾನ್ ಅವರನ್ನು ಮದುವೆ ಆಗಿದ್ದಾರೆ ಎನ್ನಲಾಗುತ್ತಿದೆ. ಈ ಮದುವೆಯಲ್ಲಿ ಆಪ್ತರು ಮಾತ್ರ ಹಾಜರಿದ್ದರು. ಸೋಮಿ ಅವರು ಸಬಾ ಖಾನ್ ಅವರ ಸಹೋದರಿ. ಕಳೆದ ಕೆಲವು ತಿಂಗಳುಗಳಿಂದ ಆದಿಲ್ ಹಾಗೂ ಸೋಮಿ ಇಬ್ಬರೂ ತಮ್ಮ ಸಂಬಂಧವನ್ನು ರಹಸ್ಯವಾಗಿ ಇಟ್ಟಿದ್ದರು ಎನ್ನಲಾಗಿದೆ. ಸಲ್ಮಾನ್ ಖಾನ್ ನಡೆಸಿಕೊಡುವ ‘ಬಿಗ್ ಬಾಸ್ ಹಿಂದಿ ಸೀಸನ್ 12’ರಲ್ಲಿ ಸೋಮಿ ಮತ್ತು ಸಬಾ ಖಾನ್ ಇಬ್ಬರೂ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಈ ಇಬ್ಬರೂ ಸಹೋದರಿಯರು ಜೈಪುರದವರಾಗಿದ್ದು, ಸಿನಿಮಾದಲ್ಲಿ…

Read More

ಉತ್ತರ ಕೊರಿಯಾದ ನಾಯಕ ಇಮ್ ಜಾಂಗ್ ಉನ್ ದೇಶದ ಪಶ್ಚಿಮ ಪ್ರದೇಶದಲ್ಲಿರುವ ಪ್ರಮುಖ ಮಿಲಿಟರಿ ಕಾರ್ಯಾಚರಣೆ ನೆಲೆಗೆ ಭೇಟಿ ಸೈನಿಕರಿಗೆ ಕೆಲವೊಂದು ಸೂಚನೆಗಳನ್ನು ನೀಡಿದ್ದಾರೆ. ಯುದ್ಧಕ್ಕೆ ಹೆಚ್ಚಿನ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಕೆಮ್ ಜಾಂಗ್ ಉನ್ ಹೇಳಿರುವುದಾಗಿ ಕೆಸಿಎನ್‌ಎ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಯುಎಸ್-ದಕ್ಷಿಣ ಕೊರಿಯಾದಲ್ಲಿ ಸೈನ್ಯಕ್ಕೆ ಸೇರುವವರ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ.  ಯಾವುದೇ ಸಂಭವನೀಯತೆಗೆ ಮಿಲಿಟರಿ ಸಂಪೂರ್ಣವಾಗಿ ಸಿದ್ಧವಾಗಬೇಕಾದ ಮತ್ತು ಸೈನ್ಯವು “ಚಾಲ್ತಿಯಲ್ಲಿರುವ ಪರಿಸ್ಥಿತಿಯ ಅವಶ್ಯಕತೆಗಳಿಗೆ ಅನುಗುಣವಾಗಿ ಯುದ್ಧ ಸಿದ್ಧತೆಗಳನ್ನು ತೀವ್ರಗೊಳಿಸುವ ಹೊಸ ಉತ್ತುಂಗವನ್ನು ಕ್ರಿಯಾತ್ಮಕವಾಗಿ ಪ್ರಾರಂಭಿಸಬೇಕು” ಎಂದು ತಮ್ಮ ಭೇಟಿಯ ಸಮಯದಲ್ಲಿ ಕಿಮ್ ಹೇಳಿದ್ದಾರೆ.

Read More

ಭಾರತದಲ್ಲಿ ಸಿಎನ್‌ಜಿ ವಾಹನಗಳು ಭಾರೀ ಇದೆ. ಪೆಟ್ರೋಲ್, ಡೀಸೆಲ್‌ಗೆ ಹೋಲಿಸಿಕೊಂಡಿರೆ ಸಿಎನ್‌ಜಿ ಅಗ್ಗವಾಗಿ ಲಭ್ಯವಾಗುತ್ತಿದ್ದು ಇದರಿಂದ ಬಡವರು ಅರಾಮಾಗಿ ಪ್ರಯಾಣಿಸಬಹುದಾಗಿದೆ. ಕಾರು, ಆಟೋ, ಬೃಹತ್ ವಾಹನಗಳು ಸಿಎನ್‌ಜಿ ಆಯ್ಕೆಯೊಂದಿಗೆ ಬರುತ್ತವೆಯಾದ್ರೂ ಈವೆರೆಗೆ ದ್ವಿಚಕ್ರ ವಾಹನಗಳಿಗೆ ಈ ಆಯ್ಕೆ ನೀಡಿರಲಿಲ್ಲ. ಭಾರತದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪೆನಿಯಾದ ಬಜಾಜ್ ವಿಶ್ವದ ಮೊದಲ ಸಿಎನ್‌ಜಿ ದ್ವಿಚಕ್ರ ವಾಹನವನ್ನು ಶೀಘ್ರದಲ್ಲೇ ಪರಿಚಯಿಸಲಿದೆ. ಈ ಹೊಸ ಸಿಎನ್‌ಜಿ ಬೈಕ್ 2024ರ ದೀಪಾವಳಿ ವೇಳೆಗೆ ಬಿಡುಗಡೆ ಮಾಡಲು ಯೋಜನೆ ರೂಪಿಸಲಾಗಿದೆ. ಈ ಬೈಕ್ ಅನ್ನು ಬಿಡುಗಡೆ ಮಾಡುವ ಬಗ್ಗೆ ರಾಜೀವ್ ಬಜಾಜ್ ಧೃಡಪಡಿಸಿದ್ದಾರೆ. ಈಗಾಗಲೇ ಈ ಬೈಕ್ ಅನ್ನು ರಸ್ತೆಗಳಲ್ಲಿ ಪರೀಕ್ಷಿಸುವಾಗ ಹಲವು ಬಾರಿ ಕಾಣಿಸಿಕೊಂಡಿದೆ. ಈ ಹೊಸ ಬೈಕ್‌ಗೆ ಬಜಾಜ್ ಬ್ರೂಜರ್ ಎಂದು ನಾಮಕರಣ ಮಾಡಿದ್ದು, ಇದು 125 ಸಿಸಿ ಸಿಎನ್‌ಜಿ ಬೈಕ್ ಅನ್ನು ಮುಖ್ಯವಾಗಿ ಅರೆ-ನಗರ ಮತ್ತು ಗ್ರಾಮೀಣ ಭಾಗಗಳಲ್ಲಿನ ಗ್ರಾಹಕರಿಗಾಗಿ ನಿರ್ಮಾಣ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ ಈ ಸಿಎನ್‌ಜಿ ಬೈಕ್ ಅನ್ನು ಅಗ್ಗದ…

Read More

ಕೋಟ್ಯಾಧಿಪತಿ ಉದ್ಯಮಿ ಮುಖೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿಯ ಮುನ್ನ ಕಾರ್ಯಕ್ರಮಗಳು ಗುಜರಾತ್‌ನ ಜಾಮ್‌ನಗರದಲ್ಲಿ ಅದ್ಧೂರಿಯಾಗಿ ನಡೆದಿದೆ. ಈ ವೇಳೆ ಮಾತನಾಡಿದ ಅನಂತ್ ಅಂಬಾನಿ ತಮ್ಮ ಪೋಷಕರಾದ ಮುಖೇಶ್ ಮತ್ತು ನೀತಾ ಅಂಬಾನಿ ಅವರಿಗೆ ಯಾವಾಗಲೂ ಬೆಂಬಲ ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು. ಅಷ್ಟೇ ಅಲ್ಲದೆ ಅವರು ತಮ್ಮ ಅನಾರೋಗ್ಯದ ಬಗ್ಗೆಯೂ ಉಲ್ಲೇಖಿಸಿದ್ದರು.ಅನಂತ್ ಅಂಬಾನಿ ತಮ್ಮ ಯಾವುದೇ ರೋಗವನ್ನು ಉಲ್ಲೇಖಿಸದಿದ್ದರೂ 2017 ರಲ್ಲಿ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ, ನೀತಾ ಅಂಬಾನಿ ಅನಂತ್ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದರು. ಇದರಿಂದಾಗಿ ಒಮ್ಮೆ ತೂಕ ಇಳಿಸಿಕೊಂಡರೂ ಮತ್ತೆ ತೂಕ ಹೆಚ್ಚಿದೆ. ಮಾಧ್ಯಮ ವರದಿಗಳ ಪ್ರಕಾರ, 2016 ರಲ್ಲಿ ಅನಂತ್ ಅಂಬಾನಿ 108 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಆಸ್ತಮಾವು ಶ್ವಾಸಕೋಶದ ದೀರ್ಘಕಾಲದ ಕಾಯಿಲೆಯಾಗಿದ್ದು, ಇದರಿಂದ ಶ್ವಾಸನಾಳದ ಸುತ್ತಲಿನ ಸ್ನಾಯುಗಳಲ್ಲಿ ಊತ ಮತ್ತು ಬಿಗಿತ ಉಂಟಾಗಿ ಉಸಿರಾಟಕ್ಕೆ ತೊಂದರೆಯಾಗುತ್ತದೆ. ಈ ರೋಗವು ಯಾವುದೇ ವಯಸ್ಸಿನ ವ್ಯಕ್ತಿಗೆ ಬರಬಹುದು. ಇದರ ರೋಗಲಕ್ಷಣಗಳನ್ನು ಸ್ಟೀರಾಯ್ಡ್ಗಳ ಸಹಾಯದಿಂದ ನಿಯಂತ್ರಿಸಬಹುದು,…

Read More

ಒಂದು ಕಾಲದ ಖ್ಯಾತ ನಟಿ ವಿಜಯಲಕ್ಷ್ಮೀ ಇತ್ತೀಚೆಗೆ ವಿವಾದದ ಮೂಲಕವೇ ಸಖತ್ ಸದ್ದು ಮಾಡುತ್ತಿದ್ದಾರೆ. ‘ಸೂರ್ಯವಂಶ’, ‘ನಾಗಮಂಡಲ’, ‘ಜೋಡಿ ಹಕ್ಕಿ’ ಅಂತಹ ಹಿಟ್ ಸಿನಿಮಾಗಳನ್ನು ನೀಡಿದ ನಟಿ ಒಂದಷ್ಟು ದಿನಗಳಿಂದ ಸೈಲೆಂಟ್ ಆಗಿದ್ದು ಇದೀಗ ತಮ್ಮ ಹೇಳಿಕೆಯ ಮೂಲಕ ಮತ್ತೆ ವಿವಾದವೊಂದನ್ನು ಹುಟ್ಟುಹಾಕಿದ್ದಾರೆ. ನಾಮ್​ ತಮಿಳರ್​ ಪಾರ್ಟಿಯ ಸೀಮಾನ್ ವಿರುದ್ಧ ನಟಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ. ಇದು ತಮ್ಮ ಕೊನೆಯ ವಿಡಿಯೋ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ. ಫೆಬ್ರವರಿ 29ರಂದು ವಿಜಯಲಕ್ಷ್ಮಿ ಅವರು ತಮ್ಮ ಮನೆಯ ಟೆರೆಸ್​ನಲ್ಲಿ ಒಂದು ವಿಡಿಯೋ ಮಾಡಿದ್ದರು. ‘ದಯವಿಟ್ಟು ಸೀಮಾನ್​ ನನ್ನ ಜೊತೆ ಮಾತನಾಡಬೇಕು’ ಎಂದು ಅವರ ಆ ವಿಡಿಯೋದಲ್ಲಿ ಮನವಿ ಮಾಡಿಕೊಂಡಿದ್ದರು. ಆದರೆ ಸೀಮಾನ್​ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ಈಗ ಮಾರ್ಚ್​ 5ರಂದು ವಿಜಯಲಕ್ಷ್ಮಿ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದು ಅದರಲ್ಲಿ ತಾವು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ. ನಾನು ವಿಡಿಯೋ ಹಂಚಿಕೊಂಡು 5 ದಿನ ಕಳೆದರೂ…

Read More

ಕಿರುತೆರೆ ನಟಿ ಕೌಸ್ತುಭ ಮಣಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ‘ಗೌರಿ ಶಂಕರ’ ಸೀರಿಯಲ್‌ನಿಂದ ಹೊರಬಂದಿರುವ ನಟಿ ಇದೀಗ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ನೀಡಿದ್ದಾರೆ. ‘ನನ್ನರಸಿ ರಾಧೆ’ ಧಾರವಾಹಿ ಮೂಲಕ ಬಣ್ಣದ ಬದುಕಿಗೆ ಎಂಟ್ರಿಕೊಟ್ಟ ನಟಿ ಆ ಬಳಿಕ ಗೌರಿ ಶಂಕರ ಧಾರವಾಹಿಯಲ್ಲಿ ಬಣ್ಣ ಹಚ್ಚಿದ್ದರು. ಆದರೆ ಕೆಲವೇ ದಿನಗಳಲ್ಲಿ ಸೀರಿಯಲ್ ನಿಂದ ಹೊರ ಬಂದಿರುವ ಕೌಸ್ತುಭ ಇದೀಗ ಅದ್ಧೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಸಿದ್ಧಾಂತ್ ಸತೀಶ್ ಎಂಬುವವರ ಜೊತೆ ನಿಶ್ಚಿತಾರ್ಥ ನಡೆದಿದೆ. ಇದೀಗ ಮದುವೆಯಾಗುವ ಹುಡುಗನ ಜೊತೆ ಚೆಂದದ ಫೋಟೋಶೂಟ್ ಶೇರ್ ಮಾಡಿ ಸಂಭ್ರಮಿಸಿದ್ದಾರೆ.

Read More

ಶ್ರೀಲಂಕ ಬೆಡಗಿ, ಬಾಲಿವುಡ್ ಬ್ಯೂಟಿ ನಟಿ ಜಾಕ್ವೆಲಿನ್ ಒಂದಲ್ಲ ಒಂದು ಕಾರಣಕ್ಕೆ ಸಮಸ್ಯೆಗೆ ಒಳಗಾಗುತ್ತಲೆ ಇದ್ದಾರೆ.ಸುಕೇಶ್ ಚಂದ್ರಶೇಖರ್ ಕೇಸ್ ವಿಚಾರಕ್ಕೆ ಕೋರ್ಟ್‌ಗೆ ಅಲೆದಾಡುತ್ತಿರುವ ನಟಿ ಇದೀಗ ಮತ್ತೊಂದು ಅಘಾತಕ್ಕೆ ಒಳಗಾಗಿದ್ದಾರೆ. ನಟಿ ಮನೆಗೆ ಬೆಂಕಿ ಬಿದ್ದಿದೆ. ಸದ್ಯ ಬೆಂಕಿ ಅವಘಡ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಮುಂಬೈನಲ್ಲಿರುವ ಜಾಕ್ವೆಲಿನ್ ಮನೆಗೆ ಬೆಂಕಿ ಬಿದ್ದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಮೂಲಗಳ ಪ್ರಕಾರ, ಜಾಕ್ವೆಲಿನ್ ಉಳಿದುಕೊಂಡಿರುವ ಅಪಾರ್ಟ್‌ಮೆಂಟ್‌ನ 14ನೇ ಮಹಡಿಗೆ ಬೆಂಕಿ ಬಿದ್ದಿದೆ. ಜಾಕ್ವೆಲಿನ್ ಮನೆ 15ನೇ ಮಹಡಿಯಲ್ಲಿದೆ. ಈ ವೇಳೆ, ನಟಿ ಶೂಟಿಂಗ್‌ವೊಂದಕ್ಕಾಗಿ ದುಬೈಗೆ ಹೋಗಿದ್ದಾರೆ ಎನ್ನಲಾಗಿದೆ. ಸದ್ಯ ನಟಿ ಸೇಫ್ ಆಗಿದ್ದು ಯಾವುದೇ ಸಮಸ್ಯೆ ಉಂಟಾಗಿಲ್ಲ ಎನ್ನಲಾಗುತ್ತಿದೆ. ಆದ್ರೆ ಈ ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

Read More

ವಂಚನೆಯ ಜಾಲಕ್ಕೆ ಸಿಲುಕಿ ರಷ್ಯಾದ ವ್ಯಾಗ್ನರ್‌ ಸೇನೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಭಾರತದ ಹೈದರಾಬಾದಿನ ಯುವಕ ಉಕ್ರೇನ್‌ನಲ್ಲಿ ದುರಂತ ಸಾವಿಗೀಡಾಗಿದ್ದಾರೆ ಎಂದು ರಷ್ಯಾದಲ್ಲಿನ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ. ಹೈದರಾಬಾದ್ ಮೂಲಕ ಯುವಕ ಮೊಹಮ್ಮದ್‌ ಅಸ್ಫಾನ್‌ ಮೃತ ಯುವಕ ಎಂದು ಗುರುತಿಸಲಾಗಿದೆ. ಯುವಕನ ಕುಟುಂಬಸ್ಥರು ಪಾರ್ಥೀವ ಶರೀರವನ್ನು ರಷ್ಯಾದಿಂದ ತರಿಸಿಕೊಡುವಂತೆ ಹೈದರಾಬಾದ್‌ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಪಾರ್ಥೀವ ಶರೀರವನ್ನು ಭಾರತಕ್ಕೆ ಕಳುಹಿಸಿಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಸಂಸದರು ಹೇಳಿದ್ದಾರೆ.  ಯುವಕನ ಕುಟುಂಬದೊಂದಿಗೆ ಸಂಪರ್ಕ ನಡೆಸಿರುವ ರಷ್ಯಾದ ಅಧಿಕಾರಿಗಳು, ಭಾರತೀಯ ಪ್ರಜೆ ಮೊಹಮ್ಮದ್ ಅಸ್ಫಾನ್ ಅವರ ದುರಂತ ಸಾವಿನ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಕಳುಹಿಸಲು ಸಕಲ ತಯಾರಿ ನಡೆಸುತ್ತಿದ್ದೇವೆ. ಮೊಹಮ್ಮದ್  ಅವರನ್ನು ಉಕ್ರೇನ್‌ ವಿರುದ್ದದ್ದ ಯುದ್ಧದಲ್ಲಿ ರಷ್ಯಾ ಸೇನೆಯ ಸಹಾಯಕರನ್ನಾಗಿ ನೇಮಿಸಿಕೊಳ್ಳಲಾಗಿತ್ತು. ಇನ್ನುಳಿದ ಭಾರತೀಯ ಪ್ರಜೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಉದ್ಯೋಗ ವಂಚನೆಯ ಜಾಲಕ್ಕೆ ಸಿಲುಕಿದ್ದ ಹೈದರಾಬಾದಿನ…

Read More

ಬಾಲಿವುಡ್ ನಟಿ ದಿವಂಗತ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ನಟನೆಯ ಸಿನಿಮಾಗಳು ಹೇಳಿಕೊಳ್ಳುವ ಮಟ್ಟಿಗೆ ಸದ್ದು ಮಾಡಿಲ್ಲ. ಆದರೂ ಆಕೆಗೆ ಸಿಗ್ತಿರೋ ಆಫರ್ ಗಳು ಮಾತ್ರ ಕೊಂಚವು ಕಮ್ಮಿಯಾಗಿಲ್ಲ. ಬಾಲಿವುಡ್ ನಲ್ಲಿ ಸಖತ್ ಬ್ಯುಸಿಯಾಗಿರುವ ಜಾನ್ವಿ ಇದೀಗ ಸೌತ್‌ನತ್ತ ಮುಖ ಮಾಡಿದ್ದಾರೆ. ಜ್ಯೂ.ಎನ್‌ಟಿಆರ್‌ ನಟನೆಯ ದೇವರ ಸಿನಿಮಾದಲ್ಲಿ ಜಾನ್ವಿ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಈ ಬೆನ್ನಲ್ಲೇ ರಾಮ್ ಚರಣ್- ಶಿವಣ್ಣ ಕಾಂಬಿನೇಷನ್ ಮತ್ತೊಂದು ಸಿನಿಮಾಗೆ ಜಾನ್ವಿ ಕಪೂರ್ ನಾಯಕಿಯಾಗಿದ್ದಾರೆ. ಬುಚ್ಚಿಬಾಬು ಸನಾ ನಿರ್ದೇಶನದ ಹೊಸ ಸಿನಿಮಾದಲ್ಲಿ ರಾಮ್ ಚರಣ್ ಜೊತೆ ಬಹುಮುಖ್ಯ ಪಾತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ಕೂಡ ನಟಿಸುತ್ತಿದ್ದಾರೆ. ರಾಮ್ ಚರಣ್ ಜೋಡಿಯಾಗಿ ಬಾಲಿವುಡ್ ಹಾಟ್ ಬ್ಯೂಟಿ ಜಾನ್ವಿ ಕಪೂರ್ ಕಾಣಿಸಿಕೊಳ್ತಾರೆ. ನಟನೆಗೆ ಹೆಚ್ಚು ಪ್ರಾಮುಖ್ಯತೆ ಇರುವ ಭಿನ್ನ ಪಾತ್ರದಲ್ಲಿ ನಟಿ ಕಾಣಿಸಿಕೊಳ್ತಿದ್ದಾರೆ.  ಕೆಲ ತಿಂಗಳುಗಳ ಹಿಂದೆ ಬುಚ್ಚಿಬಾಬು ಸನಾ ಅವರು ಬೆಂಗಳೂರಿಗೆ ಆಗಮಿಸಿ ಶಿವಣ್ಣಗೆ ಭೇಟಿಯಾಗಿ ಕಥೆ ಹೇಳಿದ್ದರು. ಶಿವಣ್ಣಗೂ ಕಥೆ ಕೇಳಿ ಥ್ರಿಲ್ ಆಗಿ ಈ ಚಿತ್ರದ ಭಾಗವಾಗಲು…

Read More

ಧ್ರುವ ಸರ್ಜಾ ನಟನೆಯ ಮಾರ್ಟಿನ್ ಚಿತ್ರತಂಡ ಇತ್ತೀಚೆಗೆ ಚಿತ್ರದ ಕೊನೆಯ ಹಂತದ ಚಿತ್ರೀಕರಣಕ್ಕಾಗಿ ವಿಮಾನ ಪ್ರಯಾಣ ಬೆಳೆಸಿತ್ತು. ಈ ವೇಳೆ ತಂಡವಿದ್ದ ವಿಮಾನವು ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾಗಿತ್ತು. ಈ ಬಗ್ಗೆ ನಿರ್ದೇಶಕ ಎ.ಪಿ ಅರ್ಜುನ್ ಚಿತ್ರದ ಸುದ್ದಿಗೋಷ್ಠಿಯಲ್ಲಿ ಕಹಿ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಶೂಟಿಂಗ್ ಮುಗಿಸಿಕೊಂಡು ವಿಮಾನದಲ್ಲಿ ಬರುತ್ತಿದ್ದ ‘ಮಾರ್ಟಿನ್’ ಸಿನಿಮಾ ತಂಡದವರಿಗೆ ಶಾಕ್ ಆಗಿತ್ತು. ಕಾರಣಾಂತರಗಳಿಂದ ವಿಮಾನದ ಹಾರಾಟದಲ್ಲಿ ತೊಂದರೆ ಉಂಟಾಗಿತ್ತು. ಇನ್ನೇನು ಚಿತ್ರತಂಡವಿದ್ದ ವಿಮಾನ ಅಪಘಾತ ಆಗುತ್ತದೆ ಎಂದು ಇಡೀ ಚಿತ್ರತಂಡದವರು ಭಯಗೊಂಡಿದ್ದರು. ಆ ಕ್ಷಣ ಹೇಗಿತ್ತು ಎಂಬುದನ್ನು ಎ.ಪಿ. ಅರ್ಜುನ್ ತೆರೆದಿಟ್ಟಿದ್ದಾರೆ. ಅಂದು ನಮ್ಮೆಲ್ಲರ ಕಣ್ಣಲ್ಲಿ ನೀರು ತುಂಬಿತ್ತು. ನನ್ನ ಪಕ್ಕದಲ್ಲಿ ಸ್ವಾಮಿ ಕುಳಿತಿದ್ದರು. ಅವರ ಪಕ್ಕದಲ್ಲಿ ನಾಯಕಿ ವೈಭವಿ ಇದ್ದರು. ಅಂದು ಯಾರೂ ಧೈರ್ಯವಾಗಿ ಇರಲಿಲ್ಲ. ಅಷ್ಟು ಹೊತ್ತಿಗಾಗಲೇ ನಟಿ ವೈಭವಿ ಅವರು ತಂದೆ-ತಾಯಿಗೆ ಮೆಸೇಜ್ ಮಾಡಿದ್ದರು. ನಾವೆಲ್ಲ ಸತ್ತು ಹೋಗುತ್ತಿದ್ದೇವೆ. ನಾವೇನಾದರೂ ತಪ್ಪು ಮಾಡಿದ್ದರೆ ಕ್ಷಮಿಸಿ ಅಂತ ಮೆಸೇಜ್ ಮಾಡಿ ಜೋರಾಗಿ…

Read More