Author: Author AIN

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸಿನಿಮಾಗಳ ಜೊತೆಗೆ ಮಾಡೆಲಿಂಗ್ ನಲ್ಲೂ ಸಖತ್ ಬ್ಯುಸಿಯಾಗಿದ್ದಾರೆ. ಸದ್ಯ ರಶ್ಮಿಕಾ ಜಪಾನ್ ನಲ್ಲಿದ್ದು ಅಲ್ಲಿನ ಸುಂದರ ಕ್ಷಣಗಳನ್ನು ಎಂಜಾಯ್ ಮಾಡ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಬಾಲ್ಯದ ಕನಸು ನನಸಾಗಿದೆಯಂತೆ. ಎಷ್ಟೋ ವರ್ಷಗಳ, ಬಾಲ್ಯದಿಂದಲೂ ಆಸೆಪಟ್ಟಂತಹ ಕನಸನ್ನು ನಟಿ ರಶ್ಮಿಕಾ ಮಂದಣ್ಣ ನೆರವೇರಿಸಿಕೊಂಡಿದ್ದು ಆ ಕುರಿತು ರಶ್ಮಿಕಾ ಸಾಮಾಜಿಕ ಜಾಲಾ ತಾಣದಲ್ಲಿ ಬರೆದುಕೊಂಡಿದ್ದಾರೆ. ಹಲವಾರು ವರ್ಷಗಳಿಂದ ನಾನು ಹೋಗಬೇಕೆಂದುಕೊಂಡಿದ್ದ ಸ್ಥಳ ಜಪಾನ್. ನನ್ನ ಬಾಲ್ಯದಿಂದಲೂ ನಾನು ಇದನ್ನು ಆಸೆ ಪಟ್ಟಿದ್ದೆ. ಆದರೆ ಜಪಾನ್​ಗೆ ಹೋಗುವ ನನ್ನ ಕನಸು ನನಸಾಗಬಹುದೆಂದು ಅಂದುಕೊಂಡಿರಲಿಲ್ಲ ಎಂದು ಬರೆದುಕೊಂಡಿದ್ದಾರೆ. ಅವಾರ್ಡ್ ಶೋಗೆ ಒಬ್ಬರೇ ಬಂದಿರುವುದು, ಅವಾರ್ಡ್ ನೀಡುವುದು. ಅಂತೂ ಕನಸು ನನಸಾಗಿದೆ ಎಂದು ಬರೆದುಕೊಂಡಿರುವ ರಶ್ಮಿಕಾ ಹಾರ್ಟ್ ಎಮೋಜಿಗಳ ಜೊತೆ ಭಾವುಕ ಕ್ಯಾಪ್ಶನ್ ಬರೆದಿದ್ದಾರೆ. ನಟಿ ಜಪಾನ್​ನಲ್ಲಿ ಕ್ಲಿಕ್ಕಿಸಿಕೊಂಡಿರುವ ಕೆಲವೊಂದು ಫೋಟೋಗಳನ್ನು ಇನ್​ಸ್ಟಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಎಲ್ಲರನ್ನೂ ಇಲ್ಲಿ ಭೇಟಿಯಾಗುವುದು, ಇಷ್ಟೊಂದು ಪ್ರೀತಿ ಪಡೆಯುವುದು, ವಿಶೇಷವಾದ ಸ್ವಾಗತ ಪಡೆಯುವುದು. ಇಲ್ಲಿನ ಆಹಾರ, ವೆದರ್,…

Read More

ಪಾಕಿಸ್ತಾನದಲ್ಲಿ ಮತ್ತೋರ್ವ ಭಯೋತ್ಪಾದಕ ಉಗ್ರ ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಭಯೋತ್ಪಾದಕರಿಗೆ ಸುರಕ್ಷಿತ ತಾಣವಾಗಿರುವ ಪಾಕಿಸ್ತಾನ ಇತ್ತೀಚಿನ ದಿನಗಳಲ್ಲಿ ಉದ್ವಿಗ್ನ ಸ್ಥಿತಿಯಲ್ಲಿದ್ದು, ಭಯೋತ್ಪಾದಕರು ಒಬ್ಬೊಬ್ಬರಾಗಿ ನಿಗೂಢವಾಗಿ ಸಾಯುತ್ತಿದ್ದಾರೆ ಎಂಬ ಆತಂಕಕಾರಿ ವಿಷಯ ವರದಿಯಾಗಿದೆ. ಪಾಕ್ ನ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶೇಖ್ ಜಮೀಲ್ ಉರ್ ರೆಹಮಾನ್ ನಿಗೂಢವಾಗಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಈತನ ಸಾವಿಗೆ ಕಾರಣ ತಿಳಿದಿಲ್ಲ. ವರದಿಯ ಪ್ರಕಾರ, ಭಯೋತ್ಪಾದಕ ಶೇಖ್ ಜಮೀಲ್ ಉರ್ ರೆಹಮಾನ್ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಶೇಖ್ ಜಮೀಲ್ ಉರ್ ರೆಹಮಾನ್ ಯುನೈಟೆಡ್ ಜಿಹಾದ್ ಕೌನ್ಸಿಲ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಇದಲ್ಲದೆ, ಶೇಖ್ ಜಮೀಲ್ ಉರ್ ರೆಹಮಾನ್ ತೆಹ್ರೀಕ್-ಉಲ್-ಮಜಾಹಿದೀನ್‌ನ ಅಮೀರ್ ಆಗಿದ್ದರು. ಅಕ್ಟೋಬರ್ 2022 ರಲ್ಲಿ, ಭಾರತವು ಶೇಖ್ ಜಮೀಲ್ ಉರ್ ರೆಹಮಾನ್ ಅವರನ್ನು ಭಯೋತ್ಪಾದಕ ಎಂದು ಘೋಷಿಸಿತು. ಕಾಶ್ಮೀರದಲ್ಲಿ ನಡೆದ ಹಲವು ದಾಳಿಗಳಿಗೆ ಭಯೋತ್ಪಾದಕ ಶೇಖ್ ಜಮೀಲ್ ಉರ್ ರೆಹಮಾನ್ ಕಾರಣ ಎಂದು ಹೇಳಲಾಗಿದೆ. ಹಲವು ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ. ಭಯೋತ್ಪಾದಕ ಶೇಖ್…

Read More

ಚೀನಾದತ್ತ ವಾಲುತ್ತಿದ್ದ ಶ್ರೀಲಂಕಾವನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತ ನಡೆಸುತ್ತಿರುವ ಪ್ರಯತ್ನದಲ್ಲಿ ಮೊದಲ ಯಶಸ್ಸು ಲಭಿಸಿದ್ದು, ಚೀನಾ ಪಾಲಾಗಿದ್ದ ಟೆಂಡರ್ ಅನ್ನು ರದ್ದು ಮಾಡಿರುವ ಶ್ರೀಲಂಕಾ ಇದೀಗ ಅದನ್ನು ಭಾರತಕ್ಕೆ ನೀಡಿದೆ. ಚೀನಾಗೆ ನೀಡಿದ್ದ ನಾಲ್ಕು ಇಂಧನ ಯೋಜನೆಗಳನ್ನು ಶ್ರೀಲಂಕಾ ದೇಶವು ಚೀನಾದಿಂದ ವಾಪಸ್ ಪಡೆದು ಭಾರತಕ್ಕೆ ನೀಡಿದೆ. ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಮೂರು ಸೌರ ವಿದ್ಯುತ್‌ ಉತ್ಪಾದನೆ ಘಟಕ ಹಾಗೂ ಒಂದು ಹೈಬ್ರಿಡ್‌ ವಿದ್ಯುತ್‌ ಉತ್ಪಾದನೆ ಘಟಕಗಳ ನಿರ್ಮಾಣದ ಗುತ್ತಿಗೆಯನ್ನು ಭಾರತದ ಕಂಪನಿಗಳಿಗೆ ನೀಡಿದೆ. ಇದು ಭಾರತಕ್ಕೆ ಸಿಕ್ಕ ರಾಜತಾಂತ್ರಿಕ ಮುನ್ನಡೆಯಾಗಿದೆ. ಇದಕ್ಕೂ ಮೊದಲು ಯೋಜನೆಗಳಿಗೆ ಏಷ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಅನುದಾನ ನೀಡಲಾಗಿತ್ತು. ಅಷ್ಟೇ ಅಲ್ಲ, ನಾಲ್ಕೂ ಘಟಕಗಳ ನಿರ್ಮಾಣದ ಗುತ್ತಿಗೆಯನ್ನು ಚೀನಾದ ಕಂಪನಿಗೆ ನೀಡಲಾಗಿತ್ತು. ಈಗ ಚೀನಾ ಕಂಪನಿಯನ್ನು ಬಿಟ್ಟು, ಭಾರತದ ಕಂಪನಿಗೆ ದ್ವೀಪರಾಷ್ಟ್ರವು ಗುತ್ತಿಗೆ ನೀಡಿದೆ. ಒಪ್ಪಂದ ಮಾಡಿಕೊಂಡಿರುವ ಕುರಿತು ಶ್ರೀಲಂಕಾದಲ್ಲಿರುವ ಭಾರತದ ರಾಯಭಾರ ಕಚೇರಿಯು ಫೋಟೊಗಳ ಸಮೇತ ಪೋಸ್ಟ್‌ ಮಾಡಿದ್ದು, ಶ್ರೀಲಂಕಾದಲ್ಲಿರುವ ಭಾರತದ ಹೈಕಮಿಷನರ್‌ ಸಂತೋಷ್ ಝಾ…

Read More

ಸುದೀಪ್ ನಟನೆಯ ಮಾಣಿಕ್ಯ ಸಿನಿಮಾದಲ್ಲಿ ನಟಿಸಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ವರಲಕ್ಷ್ಮೀ ತಮ್ಮ ಬಹುಕಾಲದ ಗೆಳೆಯನ ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಎಂಗೇಜ್‌ಮೆಂಟ್‌ನ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವರಲಕ್ಷ್ಮಿ ಆರ್ಟ್ ಗ್ಯಾಲರಿ ಮಾಲೀಕ ನಿಕೋಲಾಯ್ ಸಚ್‌ದೇವ್ ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಕಳೆದ 14 ವರ್ಷದಿಂದ ನಿಕೋಲಾಯ್ ಜೊತೆ ಡೇಟಿಂಗ್ ನಲ್ಲಿದ್ದ ನಟಿ ಇದೀಗ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಾರ್ಚ್ 1ರಂದು ಮುಂಬೈನ ಖಾಸಗಿ ರೆಸಾರ್ಟ್‌ವೊಂದರಲ್ಲಿ ವರಲಕ್ಷ್ಮಿ ನಿಶ್ಚಿತಾರ್ಥ ಸಮಾರಂಭ ನಡೆದಿದೆ. ತಮಿಳಿನ ಹಿರಿಯ ನಟ ಶರತ್ ಕುಮಾರ್ ಅವರ ಪುತ್ರಿಯಾಗಿರುವ ವರಲಕ್ಷ್ಮೀ ತಮಿಳು, ತೆಲುಗು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ವರ್ಷದ ಅಂತ್ಯದಲ್ಲಿ ವರಲಕ್ಷ್ಮಿ ಮದುವೆ ಸಮಾರಂಭ ನಡೆಯಲಿದೆ.

Read More

ನಟಿ ಹಾಗೂ ಸಂಸದೆ ಸುಮಲತಾ ಟಿಕೆಟ್ ಘೋಷನೆಗೂ ಮುನ್ನ ಆದಿಚುಂಚನಗಿರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದಿದ್ದಾರೆ. ಲೋಕಸಭಾ ಚುನಾವಣೆ ಅಖಾಡ ಕಾವೇರುತ್ತಿದ್ದಂತೆ, ಸುಮಲತಾ ಅವರು ಮಂಡ್ಯ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾಗಲು ಮುಂದಾಗಿದ್ದಾರೆ. ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದು ಪ್ರಚಾರ ಆರಂಭಿಸುವುದಾಗಿ ಈ ಹಿಂದೆ ಸುಮಲತಾ ಹೇಳಿದ್ದರು. ಅದರಂತೆ ಇದೀಗ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿ, ಬಳಿಕ ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಲೋಕಸಭಾ ಚುನಾವಣೆಗೆ ಅಖಾಡ ಸಜ್ಜಾಗಿದೆ. ಮೈತ್ರಿ ಟಿಕೆಟ್ ಜಟಾಪಟಿ ನಡುವೆ ಸುಮಲತಾ ಮತ್ತಷ್ಟು ಆ್ಯಕ್ಟೀವ್ ಆಗಿದ್ದಾರೆ. ಈ ಮೂಲಕ ಜೆಡಿಎಸ್ ನಾಯಕರಿಗೆ ಠಕ್ಕರ್ ಕೊಡಲು ಸುಮಲತಾ ಮುಂದಾಗಿದ್ದಾರೆ. ಲೋಕಸಭೆ ಚುನಾವಣೆಗೆ ಸುಮಲತಾ ಭರ್ಜರಿ ತಯಾರಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Read More

ಇತ್ತೀಚಿನ ದಿನಗಳಲ್ಲಿ ವೈದ್ಯರು ಒಂದಲ್ಲ ಒಂದು ಎಡವಟ್ಟುಗಳನ್ನು ಮಾಡುತ್ತಲೇ ಇರುತ್ತಾರೆ. ಏನೋ ಮಾಡಲು ಹೋಗಿ ಏನೋ ಮಾಡಿ ರೋಗಿಯನ್ನು ಪೇಚಿಗೆ ಸಿಲುಕಿಸಿ ಬಿಡ್ತಾರೆ. ಅಂಥದ್ದೇ ಒಂದು ಘಟನೆ ಅರ್ಜೆಂಟೀನಾದಲ್ಲಿ ನಡೆದಿದೆ. ಪಿತ್ತಕೋಶದ ಅಪರೇಶನ್ ಗೆ ಅಂತ ಹೋಗಿದ್ದ ವ್ಯಕ್ತಿಗೆ ವೈದ್ಯರು ಪಿತ್ತಕೋಶದ ಶಸ್ತ್ರಚಿಕಿತ್ಸೆ ಮಾಡುವ ಬದಲು ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಇದರಿಂದ ವ್ಯಕ್ತಿ ಕಂಗಲಾಗಿದ್ದು ಮುಂದೇನು ಗತಿ ಎನ್ನುವ ಆತಂಕದಲ್ಲಿದ್ದಾನೆ. ಆದರೆ ವೈದ್ಯರು ಮಾತ್ರ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ್ರೂ ಮಕ್ಕಳನ್ನು ಪಡೆಯಬಹುದು ಎಂದು ಸಮಾಧಾನ ಮಾಡಿ ಆತನನ್ನು ಮನೆಗೆ ಕಳುಹಿಸಿದ್ದಾರೆ. 41 ವರ್ಷದ ಜಾರ್ಜ್ ಬಾಸ್ಟೊ ಎಂಬಾತ ಪಿತ್ತಕೋಶದ ಶಸ್ತ್ರಚಿಕಿತ್ಸೆಗಾಗಿ ಅರ್ಜೆಂಟೀನಾದ ಕಾರ್ಡೋಬಾದಲ್ಲಿರುವ ಫ್ಲೋರೆನ್ಸಿಯೊ ಡಯಾಜ್ ಪ್ರಾಂತೀಯ ಆಸ್ಪತ್ರೆಗೆ ದಾಖಲಾಗಿದ್ದ. ಫೆಬ್ರವರಿ 28ರಂದು ಶಸ್ತ್ರಚಿಕಿತ್ಸೆ ಮಾಡೋದಾಗಿ ವೈದ್ಯರು ಹೇಳಿದ್ದರು. ಆದ್ರೆ ಯಾವುದೋ ಕಾರಣಕ್ಕೆ ಅದನ್ನು ಬದಲಿಸಿ 29ಕ್ಕೆ ನಿಗದಿಪಡಿಸಲಾಗಿತ್ತು. ಈ ಬದಲಾವಣೆಯಾ ಆತನನ್ನು ಸಂಕಷ್ಟಕ್ಕೆ ದೂಡಿದೆ. ಜಾರ್ಜ್ ರೂಮಿಗೆ ಬಂದ ಆಸ್ಪತ್ರೆ ಸಿಬ್ಬಂದಿ ಆತನನ್ನು ಸ್ಟ್ರೆಚ್ಚರ್ ನಲ್ಲಿ ಹಾಕಿಕೊಂಡು ಆಪರೇಷನ್…

Read More

ಕೋಟ್ಯಾಧಿಪತಿ ಅಂಬಾನಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಸೆಮಣೆ ಏರಲಿದ್ದಾರೆ. ಈಗಾಗಲೇ ಮದುವೆಯ ಮುನ್ನದ ಕಾರ್ಯಕ್ರಮಗಳು ಆರಂಭವಾಗಿದ್ದು ದೇಶ, ವಿದೇಶದಿಂದ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ಗುಜರಾತ್‌ನ ಜಾಮ್‌ನಗರದಲ್ಲಿ ನಡೆದ ಪ್ರೀ-ವೆಡ್ಡಿಂಗ್ ಸಮಾರಂಭದಲ್ಲಿ ಪುತ್ರ ಅನಂತ್ ಅಂಬಾನಿ ತಮ್ಮ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದಂತೆ ಮುಖೇಶ್ ಅಂಬಾನಿ ಭಾವುಕರಾಗಿದ್ದಾರೆ. ಬಾಲ್ಯದಲ್ಲಿ ಎದುರಾದ ಆರೋಗ್ಯದ ಸಮಸ್ಯೆಗಳ ಬಗ್ಗೆ ಮಾತನಾಡಿದ ಅವರು, ‘ಈ ಮೂಲಕ ನನ್ನ ಕುಟುಂಬವು ನನಗೆ ತುಂಬ ವಿಶೇಷ ಭಾವನೆ ಕೊಟ್ಟಿದೆ. ಆದರೆ ನನ್ನ ಜೀವನವು ಗುಲಾಬಿಗಳ ಹಾಸಿಗೆಯಂತಿಲ್ಲ. ನಾನು ಮುಳ್ಳಿನಿಂದ ಉಂಟಾಗುವಂತ ನೋವನ್ನು ಅನುಭವಿಸಿದ್ದೇನೆ. ನಾನು ಬಾಲ್ಯದಿಂದಲೂ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದೇನೆ, ಆದರೆ ನನ್ನ ತಂದೆ-ತಾಯಿ ಮಾತ್ರ ಎಂದಿಗೂ ನನ್ನ ಕೈ ಬಿಡಲಿಲ್ಲ’ ಎಂದಿದ್ದಾರೆ. ‘ನಾನು ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಅನುಭವಿಸಿದ್ದೇನೆ. ಆಗ ಸದಾ ನನ್ನ ಬೆಂಬಲಕ್ಕೆ ನಿಂತಿದ್ದು ನನ್ನ ಕುಟುಂಬದವರು’ ಎಂದು ಅನಂತ್ ಹೇಳಿದರು. ಈ ಮಾತುಗಳನ್ನು ಕೇಳುತ್ತಿದ್ದಂತೆ ಭಾವೋದ್ವೇಗಕ್ಕೆ ಒಳಗಾದ ಮುಖೇಶ್…

Read More

ಕಳೆದ ಕೆಲವು ದಿನಗಳ ಹಿಂದಷ್ಟೆ ರಾಕಿಂಗ್ ಸ್ಟಾರ್ ಯಶ್ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಬಳ್ಳಾರಿಗೆ ತೆರಳಿದ್ದರು. ಈ ವೇಳೆ ಯಶ್ ಹಿಂಬಾಲಕರ ಕಾರು ಹರಿದು ಯುವಕನೊಬ್ಬ ಗಾಯಗೊಂಡಿದ್ದ. ಇದೀಗ ಗಾಯಗೊಂಡಿದ್ದ ಯುವಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನ್ಯಾಯಕ್ಕೆ ಒತ್ತಾಯಿಸಿದ್ದಾನೆ. ಫೆಬ್ರವರಿ 29 ರಂದು ಅಮೃತೇಶ್ವರ ದೇವಾಲಯ ಉದ್ಘಾಟನೆಗೆ ನಟ ಯಶ್ ಆಗಮಿಸಿದ್ದರು. ಈ ವೇಳೆ ಯಶ್​ರ ಹಿಂಬಾಲಕರ ಕಾರು ಸಿರಗುಪ್ಪ ತಾಲೂಕಿನ‌ ಮುದ್ದೇನೂರು ಗ್ರಾಮದ ಯುವಕ ಉಮೇಶ್ ಎಂಬುವರ ಕಾಲಿನ ಮೇಲೆ ಹರಿದಿದ್ದು, ಇದರಿಂದ ಯುವಕ ಗಾಯಗೊಂಡಿದ್ದ. ಇದೀಗ ಯುವಕ ಉಮೇಶ್ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತಮ್ಮ ಕಾಲ ಮೇಲೆ ಹರಿದ ಕಾರನ್ನು ಚಲಾಯಿಸುತ್ತಿದ್ದ ಚಾಲಕನ ಪತ್ತೆಗೆ ಒತ್ತಾಯಿಸಿದ್ದು, ಚಾಲಕನಿಗೆ ಕಾನೂನು ರೀತಿಯಲ್ಲಿ ಶಿಕ್ಷೆ ನೀಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಫೆಬ್ರವರಿ 29 ರಂದು ಅಮೃತೇಶ್ವರ ದೇವಸ್ಥಾನ ಉದ್ಘಾಟನೆಗೆ ಯಶ್ ಬಳ್ಳಾರಿಗೆ ಆಗಮಿಸಿದ್ದರು. ಯಶ್​ರನ್ನು ನೋಡಲು ಸಾವಿರಾರು ಮಂದಿ ಜನ ಸ್ಥಳದಲ್ಲಿ ಸೇರಿದ್ದರು. ಪ್ರಾಣ ಪ್ರತಿಷ್ಠಾನಪನೆ ಕಾರ್ಯಕ್ರಮ…

Read More

ತಮಿಳು ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಯನತಾರಾ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಒಂದು ಕೇಳಿ ಬಂದಿದೆ. ಪ್ರೀತಿಸಿ ಮದುವೆಯಾಗಿದ್ದ ನಯನತಾರಾ ಹಾಗೂ ವಿಘ್ನೇಶ್ ಮಧ್ಯೆ ಮನಸ್ಥಾಪ ಶುರುವಾಗಿದ್ದು ಈ ಕಾರಣಕ್ಕೆ ಡಿವೋರ್ಸ್ ಪಡೆದುಕೊಳ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ತಮಿಳಿನ ಬೆಸ್ಟ್ ಕಪಲ್ ಅಂತಾನೇ ಫೇಮಸ್ ಆಗಿರುವ ನಯನತಾರಾ ಮತ್ತು ವಿಘ್ನೇಶ್ ಶಿವನ್ ಬಾಳಲ್ಲಿ ಬಿರುಗಾಳಿ ಬೀಸಿದ್ಯಾ ಎಂಬ ಅನುಮಾನ ಶುರುವಾಗಿದೆ. ಇದಕ್ಕೆಲ್ಲ ಕಾರಣ ನಯನತಾರಾ ಪತಿ ವಿಘ್ನೇಶ್‌ರನ್ನು ಅನ್‌ಫಾಲೋ ಮಾಡಿರೋದು.  ಪತ್ನಿಯನ್ನು ವಿಘ್ನೇಶ್ ಫಾಲೋ ಮಾಡ್ತಿದ್ದಾರೆ. ಆದರೆ ನಯನತಾರಾ ಅನ್‌ಫಾಲೋ ಮಾಡಿ ಫುಲ್ ಸೈಲೆಂಟ್ ಆಗಿದ್ದಾರೆ. ಬಳಿಕ ಸೋಷಿಯಲ್ ಮೀಡಿಯಾದಲ್ಲಿ ನಟಿ ಅಳಲು ತೋಡಿಕೊಂಡಿದ್ದಾರೆ. ‘ಕಣ್ಣಲ್ಲಿ ನೀರು ಬರುತ್ತಿದ್ದರೂ ಇದು ನನಗೆ ಸಿಕ್ಕಿತು’ ಎಂದು ಬರೆದುಕೊಂಡಿದ್ದಾರೆ. ಇಬ್ಬರ ನಡುವೆ ಇದೀಗ ಬಿರುಕು ಮೂಡಿದೆ ಎನ್ನಲಾಗುತ್ತಿದೆ. ಡಿವೋರ್ಸ್‌ಗೆ ಈ ಜೋಡಿ ಮುಂದಾಗಿದೆ ಎಂದೇ ಹೇಳಲಾಗುತ್ತಿದೆ. ಆದರೆ ಈ ಸುದ್ದಿ ಅದೆಷ್ಟು ನಿಜ ಅನ್ನೋದನ್ನ ಕಾಲವೇ ಉತ್ತರಿಸಬೇಕಿದೆ.

Read More

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ರಾಜಕೀಯಕ್ಕೆ ಎಂಟ್ರಿಕೊಡ್ಬೇಕು ಅನ್ನೋದು ಅವರ ಲಕ್ಷಾಂತರ ಅಭಿಮಾನಿಗಳ ಆಸೆ. ಆದರೆ ಶಿವಣ್ಣ ಮಾತ್ರ ರಾಜಕೀಯಕ್ಕೆ ಎಂಟ್ರಿಕೊಡದೆ ಸಿನಿಮಾಗಳ ಮೂಲಕ ಮಾತ್ರವೇ ಅಭಿಮಾನಿಗಳ ಹೃದಯಕ್ಕೆ ಹತ್ತಿರವಾಗಿದ್ದಾರೆ. ಆದರೆ ಪತ್ನಿ ರಾಜಕೀಯ ಜೀವನಕ್ಕೆ ಶಿವಣ್ಣ ಸದಾ ಬೆನ್ನುಲುಭಾಗಿ ನಿಂತಿದ್ದಾರೆ. ಸದ್ಯ ಶಿವರಾಜ್ ಕುಮಾರ್ ಪತ್ನಿಯ ರಾಜಕೀಯ ಜೀವನದ ಕುರಿತು ಮಾತನಾಡಿದ್ದು ಪತ್ನಿ ಗೀತಾ ರಾಜಕೀಯವಾಗಿ ಬೆಳೆಯಬೇಕು, ಸಂಸದೆ ಆಗಬೇಕು ಎಂದಿದ್ದಾರೆ. ಸಚಿವ ಮಧು ಬಂಗಾರಪ್ಪ ಹುಟ್ಟುಹಬ್ಬದ ಹಿನ್ನೆಲೆ ಶಿವರಾಜ್‌ಕುಮಾರ್ ದಂಪತಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಹಲವು ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ರಾಜಕೀಯಕ್ಕೆ ಬರುವುದಿಲ್ಲ. ಆದರೆ ನನ್ನ ಪತ್ನಿ ಎಂಪಿ ಆಗಲಿ, ಎಂಎಲ್‌ಎ ಆಗಲಿ ಎಂಬ ಆಸೆಯಿದೆ. ಈ ಮೂಲಕ ಮಹಿಳೆಯರಿಗೆ ಪತ್ನಿ ಗೀತಾ ಮಾದರಿಯಾಗಲಿ ಎಂದಿದ್ದಾರೆ. ಒಬ್ಬ ಗಂಡನಾಗಿ ಗೀತಾಗೆ ಬೆಂಬಲಿಸುತ್ತೇನೆ. ಶಿವಮೊಗ್ಗದಲ್ಲಿ ಗೀತಾ ಸಾಕಷ್ಟು ಕೆಲಸ ಮಾಡಿದ್ದಾರೆ. ಆದರೆ ಪ್ರಚಾರದ ಕಡೆ ಗಮನ ನೀಡಿಲ್ಲ. ಉತ್ತಮ ಕೆಲಸಗಳ ಮೂಲಕ ಜನರೊಂದಿಗೆ ಇದ್ದರೆ…

Read More